Site icon Vistara News

Lok Sabha Election 2024: ಪ್ರಲ್ಹಾದ್‌ ಜೋಶಿ ಬದಲಿಸಲ್ಲ: ವೀರಶೈವ ಸ್ವಾಮೀಜಿಗಳಿಗೆ ಬಿಎಸ್‌ವೈ ಸ್ಪಷ್ಟ ಸಂದೇಶ

BS yediyurappa

ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ (Lok Sabha Election 2024) ಯಾವುದೇ ಕಾರಣಕ್ಕೂ ಪ್ರಲ್ದಾದ್‌ ಜೋಶಿ (Pralhad Joshi) ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ವೀರಶೈವ-ಲಿಂಗಾಯತ ಸ್ವಾಮೀಜಿಗಳಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ನಗರದಲ್ಲಿ ಬುಧವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಸಚಿವ ಪ್ರಲ್ಹಾದ್‌ ಜೋಶಿ ಬಗ್ಗೆ ದಿಂಗಾಲೇಶ್ವರ ಸ್ವಾಮೀಜಿ ತಪ್ಪು ಗ್ರಹಿಸಿದ್ದಾರೆ. ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಯಾವುದೇ ಕಾರಣಕ್ಕೂ ಜೋಶಿ ಅವರನ್ನು ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದರ ಹಿಂದೆ ಪ್ರಲ್ಹಾದ್‌ ಜೋಶಿ ಅವರ ಪಾತ್ರವಿಲ್ಲ. ದಿಂಗಾಲೇಶ್ವರ ಸ್ವಾಮೀಜಿ ಅವರಿಂದ ತಪ್ಪು ಗ್ರಹಿಕೆಯಾಗಿದೆ. ಅವರೊಂದಿಗೆ ಖುದ್ದು ನಾನೇ ಮಾತನಾಡಿ ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬಿಎಸ್‌ವೈ ಹೇಳಿದರು.

ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ 150ಕ್ಕೂ ಹೆಚ್ಚು ಶ್ರೀಗಳು ಜೋಶಿ ಅವರನ್ನು ಬದಲಿಸುವಂತೆ ಗಡುವು ನೀಡಿದ್ದಾರಲ್ಲ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ಎಲ್ಲಾ ಸ್ವಾಮೀಜಿಗಳ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | Lok Sabha Election 2024: ಡಿ.ಕೆ. ಶಿವಕುಮಾರ್, ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹೆಚ್ಚು ಅಂತರದಲ್ಲಿ ಜೋಶಿ ಗೆಲ್ತಾರೆ

ಪ್ರಲ್ಹಾದ್‌ಜೋಶಿ ಅವರು ಪಕ್ಷದ ಹಿರಿಯ ನಾಯಕರು. ಸಂಸದರಾಗಿ, ಕೇಂದ್ರ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಎಲ್ಲಾ ಸ್ವಾಮೀಜಿಗಳು ಮತ್ತು ಜನಾಂಗದವರು ಬಿಜೆಪಿ ಪರ ಇದ್ದಾರೆ. ಹಾಗಾಗಿ ಜೋಶಿ ಅವರು ಹಿಂದಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಬಿಎಸ್‌ವೈ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಚಿವ ಪ್ರಲ್ಹಾದ್‌ ಜೋಶಿ, ಶಾಸಕರಾದ ಮಹೇಶ್ ಟೆಂಗಿನಕಾಯಿ ಮತ್ತಿತರರು ಮುಖಂಡರಿದ್ದರು.

ಚಿತ್ರದುರ್ಗದಲ್ಲಿ ಕೇಂದ್ರ ಸಚಿವ ನಾರಾಯಣ ಸ್ವಾಮಿಗೆ ಟಿಕೆಟ್‌ ಮಿಸ್‌; ಕಾರಜೋಳ ಬಿಜೆಪಿ ಅಭ್ಯರ್ಥಿ

ನವ ದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕರ್ನಾಟಕದಿಂದ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು (BJP Candidates List) ಬಿಡುಗಡೆ ಮಾಡಲಾಗಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಡಿಸಿಎಂ ಗೋವಿಂದ ಕಾರಜೋಳ (Govinda Karajola) ಅವರಿಗೆ ಟಿಕೆಟ್‌ ನೀಡಲಾಗಿದೆ. ಬಿಜೆಪಿ ಈ ನಿರ್ಧಾರ ಅಚ್ಚರಿ ಮೂಡಿಸಿದೆ. ಅಲ್ಲದೆ, ಕೇಂದ್ರ ಸಚಿವ ನಾರಾಯಣ ಸ್ವಾಮಿ (Narayana Swamy) ಅವರಿಗೆ ಟಿಕೆಟ್‌ ಮಿಸ್‌ ಆಗಿದೆ.

ಮಾರ್ಚ್‌ 4 ರಂದು ಬಿಡುಗಡೆ ಮಾಡಲಾಗಿದ್ದ ಪಟ್ಟಿಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರವೊಂದನ್ನು ಬಿಟ್ಟು ಉಳಿದ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಹಾಗೂ ಬೆಳಗಾವಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಚಿತ್ರದುರ್ಗದಲ್ಲಿ ಮಾಜಿ ಸಚಿವ ಜನಾರ್ದನ ಸ್ವಾಮಿ ಹಾಗೂ ಎಂ.ಸಿ. ರಘು ಚಂದನ್‌ ನಡುವೆ ತೀವ್ರ ಪೈಪೋಟಿ ಇತ್ತು. ಈ ನಡುವೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರ ಹೆಸರು ಸಹ ಕೇಳಿಬಂದಿತ್ತು. ಅಲ್ಲದೆ, ಮಾದಾರಾ ಚನ್ನಯ ಶ್ರೀಗಳು ಸಹ ಇಲ್ಲಿ ಬಿಜೆಪಿಯ ಟಿಕೆಟ್‌ ರೇಸ್‌ನಲ್ಲಿದ್ದರು.

ಚಿತ್ರದುರ್ಗ ಎಸ್‌ಸಿ ಮೀಸಲು ಕ್ಷೇತ್ರ; ಹೀಗಾಗಿ ಕಾರಜೋಳಗೆ ಲಕ್‌

ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಎಸ್‌ಸಿ ಮೀಸಲು ಆಗಿದ್ದರಿಂದ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ. ಕಾರಜೋಳ ಎಡಗೈ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಭಾಗದಲ್ಲಿ ಸಹ ಉತ್ತಮ ಜನಪ್ರಿಯತೆಯನ್ನು ಹೊಂದಿದ್ದಾರೆ. ಇವರು ಬಾಗಲಕೋಟೆಯವರಾದರೂ ಕೆಲವು ರಾಜಕೀಯ ಸಮೀಕರಣ ಹಾಗೂ ಲೆಕ್ಕಾಚಾರಗಳನ್ನು ಹಾಕಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಬಿಜೆಪಿಯ ಎಲ್ಲ ಪಟ್ಟಿ ಫೈನಲ್‌; ಜೆಡಿಎಸ್‌ ಮಾತ್ರವೇ ಬಾಕಿ!

ಈ ಮೂಲಕ ಬಿಜೆಪಿ ಪಾಲಿನ 25 ಲೋಕಸಭಾ ಕ್ಷೇತ್ರಗಳಿಗೂ ಟಿಕೆಟ್‌ ಘೋಷಣೆ ಮಾಡಿದಂತೆ ಆಗಿದೆ. ಮೈತ್ರಿ ಒಪ್ಪಂದದಂತೆ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಡಲಾಗಿದೆ. ಇಲ್ಲಿ ಹಾಸನಕ್ಕೆ ಪ್ರಜ್ವಲ್‌ ರೇವಣ್ಣ ಅಭ್ಯರ್ಥಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ (ಮಾ. 13) ಘೋಷಣೆ ಮಾಡಿದ್ದರು. ಮಂಡ್ಯದಿಂದ ಸ್ವತಃ ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಇನ್ನು ಕೋಲಾರದಲ್ಲಿ ಮಲ್ಲೇಶ್‌ ಬಾಬು ಹೆಸರು ಕೇಳಿಬರುತ್ತಿದೆ. ಆದರೆ, ಅಲ್ಲಿನ ಕಾಂಗ್ರೆಸ್‌ ಬೆಳವಣಿಗೆಯನ್ನು ನೋಡಿಕೊಂಡು ಮುಂದಿನ ಹೆಜ್ಜೆ ಇಡುವುದಾಗಿ ಎಚ್‌ಡಿಕೆ ಹೇಳಿದ್ದಾರೆ.

2ನೇ ಪಟ್ಟಿಯಲ್ಲಿ ಟಿಕೆಟ್‌ ಪಡೆದವರು ಇವರು

ಚಿಕ್ಕಬಳ್ಳಾಪುರ – ಡಾ.ಕೆ. ಸುಧಾಕರ್
ಉತ್ತರ ಕನ್ನಡ – ವಿಶ್ವೇಶ್ವರ ಹೆಗಡೆ ಕಾಗೇರಿ
ರಾಯಚೂರು – ಅಮರೇಶ್ವರ ನಾಯಕ್‌
ಬೆಳಗಾವಿ – ಜಗದೀಶ್ ಶೆಟ್ಟರ್

BJP Candidates List : ಮಾರ್ಚ್‌ 13ರ ಮೊದಲ ಪಟ್ಟಯಲ್ಲಿ ಟಿಕೆಟ್ ಪಡೆದ 20 ಅಭ್ಯರ್ಥಿಗಳು

Exit mobile version