Lok Sabha Election 2024: ಪ್ರಲ್ಹಾದ್‌ ಜೋಶಿ ಬದಲಿಸಲ್ಲ: ವೀರಶೈವ ಸ್ವಾಮೀಜಿಗಳಿಗೆ ಬಿಎಸ್‌ವೈ ಸ್ಪಷ್ಟ ಸಂದೇಶ - Vistara News

ಕರ್ನಾಟಕ

Lok Sabha Election 2024: ಪ್ರಲ್ಹಾದ್‌ ಜೋಶಿ ಬದಲಿಸಲ್ಲ: ವೀರಶೈವ ಸ್ವಾಮೀಜಿಗಳಿಗೆ ಬಿಎಸ್‌ವೈ ಸ್ಪಷ್ಟ ಸಂದೇಶ

Lok Sabha Election 2024: ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವಲ್ಲಿ ಪ್ರಲ್ಹಾದ್‌ ಜೋಶಿ ಪಾತ್ರವಿಲ್ಲ. ದಿಂಗಾಲೇಶ್ವರ ಸ್ವಾಮೀಜಿ ಅವರು ಜೋಶಿ ಬಗ್ಗೆ ತಪ್ಪು ಗ್ರಹಿಸಿದ್ದಾರೆ, ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

VISTARANEWS.COM


on

BS yediyurappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ (Lok Sabha Election 2024) ಯಾವುದೇ ಕಾರಣಕ್ಕೂ ಪ್ರಲ್ದಾದ್‌ ಜೋಶಿ (Pralhad Joshi) ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ವೀರಶೈವ-ಲಿಂಗಾಯತ ಸ್ವಾಮೀಜಿಗಳಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ನಗರದಲ್ಲಿ ಬುಧವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಸಚಿವ ಪ್ರಲ್ಹಾದ್‌ ಜೋಶಿ ಬಗ್ಗೆ ದಿಂಗಾಲೇಶ್ವರ ಸ್ವಾಮೀಜಿ ತಪ್ಪು ಗ್ರಹಿಸಿದ್ದಾರೆ. ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಯಾವುದೇ ಕಾರಣಕ್ಕೂ ಜೋಶಿ ಅವರನ್ನು ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದರ ಹಿಂದೆ ಪ್ರಲ್ಹಾದ್‌ ಜೋಶಿ ಅವರ ಪಾತ್ರವಿಲ್ಲ. ದಿಂಗಾಲೇಶ್ವರ ಸ್ವಾಮೀಜಿ ಅವರಿಂದ ತಪ್ಪು ಗ್ರಹಿಕೆಯಾಗಿದೆ. ಅವರೊಂದಿಗೆ ಖುದ್ದು ನಾನೇ ಮಾತನಾಡಿ ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬಿಎಸ್‌ವೈ ಹೇಳಿದರು.

ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ 150ಕ್ಕೂ ಹೆಚ್ಚು ಶ್ರೀಗಳು ಜೋಶಿ ಅವರನ್ನು ಬದಲಿಸುವಂತೆ ಗಡುವು ನೀಡಿದ್ದಾರಲ್ಲ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ಎಲ್ಲಾ ಸ್ವಾಮೀಜಿಗಳ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | Lok Sabha Election 2024: ಡಿ.ಕೆ. ಶಿವಕುಮಾರ್, ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹೆಚ್ಚು ಅಂತರದಲ್ಲಿ ಜೋಶಿ ಗೆಲ್ತಾರೆ

ಪ್ರಲ್ಹಾದ್‌ಜೋಶಿ ಅವರು ಪಕ್ಷದ ಹಿರಿಯ ನಾಯಕರು. ಸಂಸದರಾಗಿ, ಕೇಂದ್ರ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಎಲ್ಲಾ ಸ್ವಾಮೀಜಿಗಳು ಮತ್ತು ಜನಾಂಗದವರು ಬಿಜೆಪಿ ಪರ ಇದ್ದಾರೆ. ಹಾಗಾಗಿ ಜೋಶಿ ಅವರು ಹಿಂದಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಬಿಎಸ್‌ವೈ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಚಿವ ಪ್ರಲ್ಹಾದ್‌ ಜೋಶಿ, ಶಾಸಕರಾದ ಮಹೇಶ್ ಟೆಂಗಿನಕಾಯಿ ಮತ್ತಿತರರು ಮುಖಂಡರಿದ್ದರು.

ಚಿತ್ರದುರ್ಗದಲ್ಲಿ ಕೇಂದ್ರ ಸಚಿವ ನಾರಾಯಣ ಸ್ವಾಮಿಗೆ ಟಿಕೆಟ್‌ ಮಿಸ್‌; ಕಾರಜೋಳ ಬಿಜೆಪಿ ಅಭ್ಯರ್ಥಿ

Govind Karjol gets BJP ticket from Chitradurga

ನವ ದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕರ್ನಾಟಕದಿಂದ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು (BJP Candidates List) ಬಿಡುಗಡೆ ಮಾಡಲಾಗಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಡಿಸಿಎಂ ಗೋವಿಂದ ಕಾರಜೋಳ (Govinda Karajola) ಅವರಿಗೆ ಟಿಕೆಟ್‌ ನೀಡಲಾಗಿದೆ. ಬಿಜೆಪಿ ಈ ನಿರ್ಧಾರ ಅಚ್ಚರಿ ಮೂಡಿಸಿದೆ. ಅಲ್ಲದೆ, ಕೇಂದ್ರ ಸಚಿವ ನಾರಾಯಣ ಸ್ವಾಮಿ (Narayana Swamy) ಅವರಿಗೆ ಟಿಕೆಟ್‌ ಮಿಸ್‌ ಆಗಿದೆ.

ಮಾರ್ಚ್‌ 4 ರಂದು ಬಿಡುಗಡೆ ಮಾಡಲಾಗಿದ್ದ ಪಟ್ಟಿಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರವೊಂದನ್ನು ಬಿಟ್ಟು ಉಳಿದ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಹಾಗೂ ಬೆಳಗಾವಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಚಿತ್ರದುರ್ಗದಲ್ಲಿ ಮಾಜಿ ಸಚಿವ ಜನಾರ್ದನ ಸ್ವಾಮಿ ಹಾಗೂ ಎಂ.ಸಿ. ರಘು ಚಂದನ್‌ ನಡುವೆ ತೀವ್ರ ಪೈಪೋಟಿ ಇತ್ತು. ಈ ನಡುವೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರ ಹೆಸರು ಸಹ ಕೇಳಿಬಂದಿತ್ತು. ಅಲ್ಲದೆ, ಮಾದಾರಾ ಚನ್ನಯ ಶ್ರೀಗಳು ಸಹ ಇಲ್ಲಿ ಬಿಜೆಪಿಯ ಟಿಕೆಟ್‌ ರೇಸ್‌ನಲ್ಲಿದ್ದರು.

Lok Sabha Election 2024 V Narayanasamy loses ticket from Chitradurga and Karjol BJP candidate

ಚಿತ್ರದುರ್ಗ ಎಸ್‌ಸಿ ಮೀಸಲು ಕ್ಷೇತ್ರ; ಹೀಗಾಗಿ ಕಾರಜೋಳಗೆ ಲಕ್‌

ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಎಸ್‌ಸಿ ಮೀಸಲು ಆಗಿದ್ದರಿಂದ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ. ಕಾರಜೋಳ ಎಡಗೈ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಭಾಗದಲ್ಲಿ ಸಹ ಉತ್ತಮ ಜನಪ್ರಿಯತೆಯನ್ನು ಹೊಂದಿದ್ದಾರೆ. ಇವರು ಬಾಗಲಕೋಟೆಯವರಾದರೂ ಕೆಲವು ರಾಜಕೀಯ ಸಮೀಕರಣ ಹಾಗೂ ಲೆಕ್ಕಾಚಾರಗಳನ್ನು ಹಾಕಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಬಿಜೆಪಿಯ ಎಲ್ಲ ಪಟ್ಟಿ ಫೈನಲ್‌; ಜೆಡಿಎಸ್‌ ಮಾತ್ರವೇ ಬಾಕಿ!

ಈ ಮೂಲಕ ಬಿಜೆಪಿ ಪಾಲಿನ 25 ಲೋಕಸಭಾ ಕ್ಷೇತ್ರಗಳಿಗೂ ಟಿಕೆಟ್‌ ಘೋಷಣೆ ಮಾಡಿದಂತೆ ಆಗಿದೆ. ಮೈತ್ರಿ ಒಪ್ಪಂದದಂತೆ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಡಲಾಗಿದೆ. ಇಲ್ಲಿ ಹಾಸನಕ್ಕೆ ಪ್ರಜ್ವಲ್‌ ರೇವಣ್ಣ ಅಭ್ಯರ್ಥಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ (ಮಾ. 13) ಘೋಷಣೆ ಮಾಡಿದ್ದರು. ಮಂಡ್ಯದಿಂದ ಸ್ವತಃ ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಇನ್ನು ಕೋಲಾರದಲ್ಲಿ ಮಲ್ಲೇಶ್‌ ಬಾಬು ಹೆಸರು ಕೇಳಿಬರುತ್ತಿದೆ. ಆದರೆ, ಅಲ್ಲಿನ ಕಾಂಗ್ರೆಸ್‌ ಬೆಳವಣಿಗೆಯನ್ನು ನೋಡಿಕೊಂಡು ಮುಂದಿನ ಹೆಜ್ಜೆ ಇಡುವುದಾಗಿ ಎಚ್‌ಡಿಕೆ ಹೇಳಿದ್ದಾರೆ.

2ನೇ ಪಟ್ಟಿಯಲ್ಲಿ ಟಿಕೆಟ್‌ ಪಡೆದವರು ಇವರು

ಚಿಕ್ಕಬಳ್ಳಾಪುರ – ಡಾ.ಕೆ. ಸುಧಾಕರ್
ಉತ್ತರ ಕನ್ನಡ – ವಿಶ್ವೇಶ್ವರ ಹೆಗಡೆ ಕಾಗೇರಿ
ರಾಯಚೂರು – ಅಮರೇಶ್ವರ ನಾಯಕ್‌
ಬೆಳಗಾವಿ – ಜಗದೀಶ್ ಶೆಟ್ಟರ್

BJP Candidates List : ಮಾರ್ಚ್‌ 13ರ ಮೊದಲ ಪಟ್ಟಯಲ್ಲಿ ಟಿಕೆಟ್ ಪಡೆದ 20 ಅಭ್ಯರ್ಥಿಗಳು

  • ಚಿಕ್ಕೋಡಿ: ಅಣ್ಣಾ ಸಾಹೇಬ್‌ ಜೊಲ್ಲೆ
  • ಬಾಗಲಕೋಟೆ: ಪಿ.ಸಿ. ಗದ್ದಿಗೌಡರ್‌
  • ವಿಜಯಪುರ: ರಮೇಶ್‌ ಜಿಗಜಿಣಗಿ
  • ಕಲಬುರಗಿ: ಡಾ. ಉಮೇಶ್‌ ಜಾಧವ್‌
  • ಬೀದರ್‌: ಭಗವಂತ್‌ ಖೂಬಾ
  • ಕೊಪ್ಪಳ: ಡಾ. ಬಸವರಾಜ ಕ್ಯಾವತೂರು
  • ಬಳ್ಳಾರಿ: ಬಿ. ಶ್ರೀರಾಮುಲು
  • ಹಾವೇರಿ: ಬಸವರಾಜ ಬೊಮ್ಮಾಯಿ
  • ಧಾರವಾಡ: ಪ್ರಹ್ಲಾದ್‌ ಜೋಶಿ
  • ದಾವಣಗೆರೆ: ಗಾಯತ್ರಿ ಸಿದ್ದೇಶ್ವರ್‌
  • ಶಿವಮೊಗ್ಗ: ಬಿವೈ ರಾಘವೇಂದ್ರ
  • ಉಡುಪಿ ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ
  • ದಕ್ಷಿಣ ಕನ್ನಡ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ
  • ತುಮಕೂರು: ವಿ ಸೋಮಣ್ಣ
  • ಮೈಸೂರು: ಯದುವೀರ್‌ ಕೃಷ್ಣ ದತ್ತ ಒಡೆಯರ್‌
  • ಚಾಮರಾಜನಗರ: ಎಸ್‌. ಬಾಲರಾಜ್‌
  • ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್‌. ಮಂಜುನಾಥ್‌
  • ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ
  • ಬೆಂಗಳೂರು ಸೆಂಟ್ರಲ್‌: ಪಿ.ಸಿ. ಮೋಹನ್‌
  • ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ
  • ಇದನ್ನೂ ಓದಿ: Lok Sabha Election 2024: ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ್‌ ಹೆಗ್ಡೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

Assault Case : ಚಿಪ್ಸ್ ಕೊಡಿಸುವ ನೆಪದಲ್ಲಿ ಮಗುವಿನ ಕತ್ತು ಕೊಯ್ದ ಕಿರಾತಕ

Assault Case : ಕುಡಿದ ಮತ್ತಿನಲ್ಲಿ ಕಿರಾತಕನೊಬ್ಬ ಬಾಲಕಿಗೆ ತಿಂಡಿ ಕೊಡಿಸುವುದಾಗಿ ಆಸೆ ಹುಟ್ಟಿಸಿ, ನಂತರ ಆಕೆ ಕತ್ತು ಕೊಯ್ದು ಹಲ್ಲೆ ನಡೆಸಿದ್ದಾನೆ. ಅದೃಷ್ಟವಶಾತ್‌ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

VISTARANEWS.COM


on

By

Assault Case
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಹಾಗೂ ಆರೋಪಿ ಹನುಮಂತ
Koo

ಚಿತ್ರದುರ್ಗ: ಕಿರಾತಕನೊಬ್ಬ ಪರಿಚಿತ ಮಗುವಿಗೆ ಚಿಪ್ಸ್ ಕೊಡಿಸುವ ನೆಪದಲ್ಲಿ ಕತ್ತು ಕೊಯ್ದು ಹಲ್ಲೆ (Assault Case ) ನಡೆಸಿದ್ದಾನೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಮಲಸಿಂಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲಸಿಂಗನಹಳ್ಳಿ ಗ್ರಾಮದ ಹನುಮಂತ (36) ಎಂಬಾತ ಬಾಲಕಿ ಮೇಲೆ ಹಲ್ಲೆ‌ ನಡೆಸಿದವನು.

ಹನುಮಂತ ಕಂಠಪೂರ್ತಿ ಕುಡಿದು ಬಂದವನೇ 5 ವರ್ಷದ ಬಾಲಕಿಗೆ ಚಿಪ್ಸ್‌ ಕೊಡಿಸುವುದಾಗಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಚಾಕುವಿನಿಂದ ಮಗುವಿನ ಕತ್ತಿಗೆ ಇರಿದಿದ್ದಾನೆ. ಹಲ್ಲೆ ನಡೆಸಿ ಬಾಲಕಿಯನ್ನು ಜಮೀನಿನಲ್ಲಿ ಬಿಸಾಡಿ ಹೋಗಿದ್ದಾನೆ.

Assault Case

ಕೂಡಲೇ ಬಾಲಕಿಯ ಅಳು ಕೇಳಿ ಅಕ್ಕ-ಪಕ್ಕದ ಜಮೀನಿನಲ್ಲಿದ್ದವರು ಬಂದು ನೋಡಿದ್ದಾರೆ. ಈ ವೇಳೆ ಮಗು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತ್ವರಿತ ಚಿಕಿತ್ಸೆಯಿಂದ ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಮುಂದುವರಿದಿದೆ.

ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ‌ ಪಡೆದಿದ್ದಾರೆ. ಚಿತ್ರಹಳ್ಳಿ ಗೇಟ್ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು ಬಾಲಕಿ

ವಿಜಯನಗರ: ತಾಯಿಯ ಕೈತುತ್ತು ತಿಂದು ಆ ಬಾಲಕಿ ಖುಷಿ ಖುಷಿಯಿಂದ ಬ್ಯಾಗ್‌ ಏರಿಸಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ್ದಳು. ಆದರೆ ಕ್ರೂರ ವಿಧಿಗೆ ಪ್ರಪಂಚ ನೋಡಬೇಕಾದ ಬಾಲಕಿ ಉಸಿರು ಚೆಲ್ಲಿದ್ದಾಳೆ. ಮುಂಜಾನೆ ಶಾಲೆಗೆ ಹೋದವಳು ಮನೆಗೆ ಹೆಣವಾಗಿ ಬಂದಿದ್ದಾಳೆ. ವಿದ್ಯುತ್ ಸ್ಪರ್ಶಿಸಿ (Electric shock) ಬಾಲಕಿ ದಾರುಣ ಅಂತ್ಯ ಕಂಡಿದ್ದಾಳೆ.

ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ತುಳಸಿ ಎಂಬಾಕೆ ಕರೆಂಟ್‌ ಶಾಕ್‌ನಿಂದ ಮೃತಪಟ್ಟವಳಿ. ತುಳಸಿ ಅದೇ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು.

ಬಾಲಕಿ ತುಳಸಿ ಕರೆಂಟ್‌ ಶಾಕ್‌ನಿಂದ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಮಡುಗಟ್ಟಿದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೂಡ್ಲಿಗಿ ಪಿಎಸ್‌ಐ ಎರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

Electric shock : ಕರೆಂಟ್‌ ಶಾಕ್‌ನಿಂದ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ. ಶಾಲೆಗೆಂದು ಹೋದವಳು ಮಸಣ ಸೇರಿದ್ದಾಳೆ. ಬಾಲಕಿಯ ಅಗಲಿಕೆಗೆ ಇಡೀ ಊರಿಗೆ ಊರೇ ದುಃಖದಲ್ಲಿದೆ.

VISTARANEWS.COM


on

By

Electric shock in vijayanagara
Koo

ವಿಜಯನಗರ: ತಾಯಿಯ ಕೈತುತ್ತು ತಿಂದು ಆ ಬಾಲಕಿ ಖುಷಿ ಖುಷಿಯಿಂದ ಬ್ಯಾಗ್‌ ಏರಿಸಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ್ದಳು. ಆದರೆ ಕ್ರೂರ ವಿಧಿಗೆ ಪ್ರಪಂಚ ನೋಡಬೇಕಾದ ಬಾಲಕಿ ಉಸಿರು ಚೆಲ್ಲಿದ್ದಾಳೆ. ಮುಂಜಾನೆ ಶಾಲೆಗೆ ಹೋದವಳು ಮನೆಗೆ ಹೆಣವಾಗಿ ಬಂದಿದ್ದಾಳೆ. ವಿದ್ಯುತ್ ಸ್ಪರ್ಶಿಸಿ (Electric shock) ಬಾಲಕಿ ದಾರುಣ ಅಂತ್ಯ ಕಂಡಿದ್ದಾಳೆ.

ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ತುಳಸಿ ಎಂಬಾಕೆ ಕರೆಂಟ್‌ ಶಾಕ್‌ನಿಂದ ಮೃತಪಟ್ಟವಳಿ. ತುಳಸಿ ಅದೇ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು.

Electric shock in vijayanagara Class II girl dies of electrocution

ಬಾಲಕಿ ತುಳಸಿ ಕರೆಂಟ್‌ ಶಾಕ್‌ನಿಂದ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಮಡುಗಟ್ಟಿದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೂಡ್ಲಿಗಿ ಪಿಎಸ್‌ಐ ಎರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

ರಷ್ಯಾದಲ್ಲಿ ಘೋರ ದುರಂತ; ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳ ಸಾವು

ಮಾಸ್ಕೋ: ರಷ್ಯಾದಲ್ಲಿ ಘೋರ ದುರಂತವೊಂದು ನಡೆದಿದ್ದು, ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ (Drown In River). ಓರ್ವ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೈಂಟ್‌ ಪೀಟರ್ಸ್‌ಬರ್ಗ್‌ (St. Petersburg) ಬಳಿ ನದಿಯಲ್ಲಿ ಈ ಅವಘಡ ಸಂಭವಿಸಿದೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ದೃಢಪಡಿಸಿದೆ. ಶವಗಳನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಲು ರಷ್ಯಾದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದೆ.

ʼʼಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯ ಮೃತಪಟ್ಟಿದ್ದು, ಇವರ ವಯಸ್ಸು ಅಂದಾಜು 18-20 ವರ್ಷ. ಇವರು ವೆಲಿಕಿ ನೊವ್ಗೊರೊಡ್ ನಗರದ ಸಮೀಪದಲ್ಲಿರುವ ನೊವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿ(Novgorod State University)ಯಲ್ಲಿ ಅಧ್ಯಯನ ಮಾಡುತ್ತಿದ್ದರುʼʼ ಎಂದು ಮೂಲಗಳು ವರದಿ ಮಾಡಿವೆ.

ದುರಂತ ನಡೆದಿದ್ದು ಹೇಗೆ?

ವೋಲ್ಖೋವ್ ನದಿಗೆ ಬಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಲು ಆಕೆಯ ನಾಲ್ವರು ಸ್ನೇಹಿತರು ಯತ್ನಿಸಿದ ವೇಳೆ ಈ ದುರಂತ ನಡೆದಿದೆ. ಈ ಪೈಕಿ ಓರ್ವನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಷ್ಯಾದ ಮಾಧ್ಯಮಗಳು ಹೇಳಿವೆ. “ಸಾಧ್ಯವಾದಷ್ಟು ಬೇಗ ಶವಗಳನ್ನು ಸಂಬಂಧಿಕರಿಗೆ ಕಳುಹಿಸಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಅಪಾಯದಿಂದ ಪಾರಾದ ವಿದ್ಯಾರ್ಥಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಾಸ್ಕೋದಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಅಮೆರಿಕದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು

ಕೆಲವು ದಿನಗಳ ಹಿಂದೆ ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಜಾರ್ಜಿಯಾದ ಆಲ್ಫಾರೆಟ್ಟಾ ಬಳಿ ನಡೆದ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು.

ಆರ್ಯನ್‌ ಜೋಷಿ, ಶ್ರಿಯಾ ಅವಸರಲ ಮತ್ತು ಅನ್ವಿ ಶರ್ಮಾ ಮೃತ ವಿದ್ಯಾರ್ಥಿಗಳು. ಈ ಪೈಕಿ ಆರ್ಯನ್‌ ಜೋಷಿ, ಶ್ರೀಯಾ ಅವಸರಳ ಸ್ಥಳದಲ್ಲೇ ಅಸುನೀಗಿದ್ದರೆ, ಅನ್ವಿ ಶರ್ಮಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಗಾಯಯೊಂಡವರನ್ನು ಋತ್ವಿಕ್‌ ಸೋಮೆಪಳ್ಳಿ ಹಾಗೂ ಮೊಹಮ್ಮದ್‌ ಲಿಯಾಕತ್‌ ಎಂದು ಗುರುತಿಸಲಾಗಿತ್ತು.

ಈ ಐವರು ಆಲ್ಫಾರೆಟ್ಟಾ ಹೈಸ್ಕೂಲ್‌ ಮತ್ತು ಜಾರ್ಜಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು. ಇವರಿದ್ದ ಕಾರು ಅತಿ ವೇಗದಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದರು. ಚಾಲಕನ ನಿಯಂತ್ರಣಕ್ಕೆ ಸಿಗದೆ ಮೇ 14ರಂದು ಕಾರು ಆಲ್ಫಾರೆಟ್ಟಾ ಬಳಿ ಅಪಘಾತಕ್ಕೀಡಾಗಿತ್ತು. ʼʼಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ತಲೆಕೆಳಗಾಗಿ ನಿಂತಿತ್ತುʼʼ ಎಂದಯ ಪ್ರತ್ಯಕ್ಷದರ್ಶಿಯೊಬ್ಬರು ಘಟನೆಯ ತೀವ್ರತೆಯನ್ನು ವಿವರಿಸಿದ್ದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳು

ಇವರೆಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿದ್ದರು. ಶ್ರೀಯಾ ಅವಸರಳ ಯುಜಿಎ ಶಿಕಾರಿ (UGA Shikaari) ಡ್ಯಾನ್ಸ್‌ ತಂಡದ ಸದಸ್ಯೆಯಾಗಿದ್ದರು. ಇನ್ನು ಅನ್ವಿ ಶರ್ಮಾ ಯುಜಿಎ ಕಲಾಕಾರ್‌ (UGA Kalakaar) ಮತ್ತು ಕ್ಯಾಪೆಲ್ಲ ಗ್ರೂಪ್‌ (Capella Group)ನ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ನೀವೊಮ್ಮ ಅದ್ಭುತ ಡ್ಯಾನ್ಸರ್‌. ನಿಮ್ಮ ಕಣ್ಮರೆಯ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲʼʼ ಎಂದು ಶಿಕಾರಿ ತಂಡ ಆಘಾತ ಸೂಚಿಸಿತ್ತು. ಕಲಾಕಾರ್‌ ಗ್ರೂಪ್‌ ಕೂಡ ಅನ್ವಿ ಶರ್ಮಾಗೆ ಶ್ರದ್ಧಾಂಜಲಿ ಸಲ್ಲಿಸಿತ್ತು.

ಆರ್ಯನ್‌ ಜೋಷಿ ಪದವಿ ಪಡೆಯಲು ಸಿದ್ಧತೆ ನಡೆಸಿಕೊಂಡಿದ್ದರು. ಆಲ್ಫಾರೆಟ್ಟಾ ಹೈ ಕ್ರಿಕೆಟ್‌ ಟೀಮ್‌ (Alpharetta High cricket team) ತನ್ನ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಆರ್ಯನ್‌ ಜೋಷಿ ನಿಧನಕ್ಕೆ ನೋವು ತೋಡಿಕೊಂಡು, ʼʼಆರ್ಯನ್‌ ಜೋಷಿ ನಮ್ಮ ಬಹು ದೊಡ್ಡ ಬೆಂಬಲಿಗರಾಗಿದ್ದರು ಮತ್ತು ತಮ್ಮ ತಂಡದ ಬೆನ್ನೆಲುಬಾಗಿದ್ದರು. ನಮ್ಮ ತಂಡದ ಗೆಲುವಿನಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದು. ಅವರ ಅಗಲಿಕೆ ನಮ್ಮ ಪಾಲಿಗೆ ತುಂಬಲಾರದ ನಷ್ಟʼʼ ಎಂದು ಬರೆದುಕೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Bhavani Revanna: ಭವಾನಿ ರೇವಣ್ಣಗೆ ಒಂದು ವಾರ ಮಧ್ಯಂತರ ಜಾಮೀನು, ಇಂದು 1 ಗಂಟೆಗೆ ವಿಚಾರಣೆಗೆ ಬರಲೇಬೇಕು!

Bhavani Revanna: ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

VISTARANEWS.COM


on

bhavani revanna Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಸಂತ್ರಸ್ತೆಯ ಕಿಡ್ನಾಪ್‌ ಪ್ರಕರಣದಲ್ಲಿ (Kidnap Case) ಆರೋಪಿಯಾಗಿರುವ, ಸದ್ಯಕ್ಕೆ ತಲೆ ಮರೆಸಿಕೊಂಡಿರುವ ಭವಾನಿ ರೇವಣ್ಣ (Bhavani Revanna) ಅವರಿಗೆ ಕೋರ್ಟ್‌ ಮಧ್ಯಂತರ ಜಾಮೀನು (Interim Bail) ನೀಡಿದೆ. ಇದರಿಂದ ಭವಾನಿ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಇದರಲ್ಲಿ ಇಂದು ಟ್ವಿಸ್ಟ್‌ ಇದೆ. ಅದೇನೆಂದರೆ, ಇಂದು ಮಧ್ಯಾಹ್ನ 1 ಗಂಟೆಗೆ ಅವರು ಎಸ್‌ಐಟಿ (SIT) ಮುಂದೆ ಹಾಜರಾಗಬೇಕಿದೆ.

ಕೆ.ಆರ್. ನಗರ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಬೇಕಾಗಿದ್ದು, ತನಿಖೆಗೆ ಸಹಕರಿಸಿದೆ ತಲೆ ಮರೆಸಿಕೊಂಡಿರುವ ಭವಾನಿ ಅವರಿಗೆ ಮುಂದಿನ ಶುಕ್ರವಾರದವರೆಗೆ ಮಧ್ಯಂತರ ಜಾಮೀನು ನೀಡಿ ಕೋರ್ಟ್‌ ಆದೇಶ ನೀಡಿದೆ. ಆದರೆ ಇಂದು ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ತನಿಖೆಗೆ ಹಾಜರಾಗಬೇಕು ಎಂದಿದೆ. ಒಂದು ಗಂಟೆಯಿಂದ ಐದು ಗಂಟೆಯವರೆಗೆ ತನಿಖೆ ನಡೆಸಬಹುದು. ಐದು ಗಂಟೆಯ ನಂತರ ಅವರನ್ನು ಎಸ್‌ಐಟಿ ಕಚೇರಿಯಲ್ಲಿ ಇಟ್ಟುಕೊಳ್ಳಬಾರದು ಎಂದು ಕೋರ್ಟ್‌ ಸೂಚನೆ ನೀಡಿದೆ.

ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು 11 ಕಾರಣಗಳಿವೆ ಎಂದು ಭವಾನಿ ಪರ ಹಿರಿಯ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿದರು. ಈ ವಾದಗಳನ್ನು ಕೋರ್ಟ್‌ ಮಾನ್ಯ ಮಾಡಿತು. ಆದರೆ ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

ಭವಾನಿ ಅವರಿಗೆ ಕೋರ್ಟ್‌ ಕೆಲವು ಸೂಚನೆಗಳನ್ನು ನೀಡಿದೆ. ಅದರಂತೆ ಅವರು ನಡೆದುಕೊಳ್ಳಬೇಕಿದೆ. ಅವುಗಳು ಹೀಗಿವೆ:
1) ಭವಾನಿ ಅವರು ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಬೇಕು.
2) ವಿಚಾರಣೆಯ ನಂತರ ಐದು ಗಂಟೆಯ ಬಳಿಕ ಅವರನ್ನು ಇಟ್ಟುಕೊಳ್ಳಬಾರದು.
3) ಕೆ.ಆರ್‌ ನಗರ ತಾಲ್ಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಬಾರದು.
4) ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು.

ಇದೀಗ ಕುತೂಹಲದ ಅಂಶವೆಂದರೆ ಇಂದು 1 ಗಂಟೆಗೆ ಅವರು ಎಸ್‌ಐಟಿ ಮುಂದೆ ಹಾಜರಾಗ್ತಾರಾ ಎಂಬುದು. ಬೆಂಗಳೂರಿನಲ್ಲೇ ಇದ್ದರೆ ಅವರು ಎಸ್‌ಐಟಿ ಮುಂದೆ ಹಾಜರಾಗಬಹುದು. ಆದರೆ ಬೆಂಗಳೂರಿನಿಂದ ದೂರ ಎಲ್ಲಾದರೂ ಅಥವಾ ಹೊರರಾಜ್ಯದಲ್ಲಿ ಇದ್ದರೆ ಒಂದು ಗಂಟೆ ವೇಳೆಗೆ ಆಗಮಿಸುವುದು ಕಷ್ಟವಾಗಲಿದೆ. ಅಷ್ಟು ಹೊತ್ತಿಗೆ ಬರದಿದ್ದರೆ ಅದೇ ಕಾರಣ ನೀಡಿ ಅವರನ್ನು ಎಸ್‌ಐಟಿ ಬಂಧಿಸಬಹುದಾಗಿದೆ.

ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ಭವಾನಿಯನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಆದರೆ, ತಾವು ಹೊಳೆನರಸೀಪುರದ ಮನೆಯಲ್ಲಿ ಸಿಗುವುದಾಗಿ ಭವಾನಿ ತಿಳಿಸಿದ್ದರು. ಇದಕ್ಕಾಗಿ ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ, ಭವಾನಿ ಅಲ್ಲಿರದೆ ಕಣ್ಮರೆಯಾಗಿದ್ದರು. ಹೀಗಾಗಿ ಭವಾನಿ ಬಂಧನಕ್ಕಾಗಿ ಆರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗಿತ್ತು. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆದಿತ್ತು. ಅವರ ಮೊಬೈಲ್ ಲೊಕೇಶನ್‌ ಟವರ್ ಡಂಪ್, ಸಿಡಿಆರ್ ಪರಿಶೀಲನೆ ನಡೆಸಲಾಗಿತ್ತು.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದ ಕೋರ್ಟ್

Continue Reading

ಮೈಸೂರು

Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

Tragedy Case : ತೆಂಗಿರ ಮರದಿಂದ ಬಿದ್ದು ಯುವಕನೊರ್ವ ದಾರುಣ ಅಂತ್ಯ ಕಂಡಿದ್ದಾನೆ. ಮರವೇರಿ ಎಳೆನೀರು ಕೀಳುವಾಗ ಕಾಲು ಜಾರಿದೆ. ನಿಯಂತ್ರಣ ಸಿಗದೇ ಕೆಳಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

VISTARANEWS.COM


on

By

Mysuru Tragedy
Koo

ಮೈಸೂರು: ತೆಂಗಿನ ಮರದಿಂದ ಬಿದ್ದು ಯುವಕನೊರ್ವ ಮೃತಪಟ್ಟಿದ್ದಾನೆ. ಎಳನೀರು ಕೀಳುವಾಗ ಅವಘಡ (Mysuru tragedy) ಸಂಭವಿಸಿದೆ. ಮೈಸೂರಿನ ಕೆಆರ್ ನಗರದ ಮುಂಜನಹಳ್ಳಿಯಲ್ಲಿ ಘಟನೆ (Tragedy Case) ನಡೆದಿದೆ. ಚೇತನ್ (27) ಮೃತ ದುರ್ದೈವಿ.

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಚೇತನ್ ಜಮೀನಿಗೆ ಹೋಗಿದ್ದ. ಮರವೇರಿ ಎಳನೀರು ಕೀಳುವಾಗ ಕಾಲು ಜಾರಿದೆ. ಈ ವೇಳೆ ಮರದ ಮೇಲಿಂದ ಬಿದ್ದ ರಭಸಕ್ಕೆ ಚೇತನ್ ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಗೊಂಡಿದ್ದ ಚೇತನ್‌ನನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕೆಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಆರ್‌ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Assault Case
ಚಿತ್ರದುರ್ಗ19 mins ago

Assault Case : ಚಿಪ್ಸ್ ಕೊಡಿಸುವ ನೆಪದಲ್ಲಿ ಮಗುವಿನ ಕತ್ತು ಕೊಯ್ದ ಕಿರಾತಕ

Posani Krishna Murali End of Career In Tollywood
ಟಾಲಿವುಡ್48 mins ago

Posani Krishna Murali: ಟಾಲಿವುಡ್‌ನಲ್ಲಿ ಪೋಸಾನಿ ಕೃಷ್ಣ ಮುರಳಿ ವೃತ್ತಿಜೀವನ ಅಂತ್ಯ?

Electric shock in vijayanagara
ವಿಜಯನಗರ52 mins ago

Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

bhavani revanna Prajwal Revanna Case
ಪ್ರಮುಖ ಸುದ್ದಿ1 hour ago

Bhavani Revanna: ಭವಾನಿ ರೇವಣ್ಣಗೆ ಒಂದು ವಾರ ಮಧ್ಯಂತರ ಜಾಮೀನು, ಇಂದು 1 ಗಂಟೆಗೆ ವಿಚಾರಣೆಗೆ ಬರಲೇಬೇಕು!

Mysuru Tragedy
ಮೈಸೂರು1 hour ago

Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

Drown In Rive
ವಿದೇಶ1 hour ago

Drown In River: ರಷ್ಯಾದಲ್ಲಿ ಘೋರ ದುರಂತ; ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳ ಸಾವು

defamation case rahul gandhi
ಪ್ರಮುಖ ಸುದ್ದಿ1 hour ago

Rahul Gandhi: ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು; ‌75 ಲಕ್ಷದ ಶ್ಯೂರಿಟಿ ನೀಡಿದ ಡಿಕೆ ಸುರೇಶ್

Write a story for a new movie one lakh rupees Win a prize kishore megalamane movie
ಸ್ಯಾಂಡಲ್ ವುಡ್1 hour ago

Kannada New Movie: ಹೊಸ ಸಿನಿಮಾಗೆ ಕಥೆ ಬರೆಯಿರಿ: 1 ಲಕ್ಷ ರೂ. ಬಹುಮಾನ ಗೆಲ್ಲಿರಿ!

Bajrangi Bhaijaan 2 Kabir Khan Says Sequel Of Salman Khan
ಬಾಲಿವುಡ್2 hours ago

Bajrangi Bhaijaan 2: `ಬಜರಂಗಿ ಭಾಯಿಜಾನ್ 2ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್‌ಡೇಟ್‌!

road Accident in vijayanagar
ವಿಜಯನಗರ2 hours ago

Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌