Lokayukta Raid: ಹೂವಿನ ಹಡಗಲಿಯಲ್ಲಿ 65 ಸಾವಿರ ರೂಪಾಯಿ ಲಂಚ ಪಡೆಯುವಾಗ ಎಫ್‌ಡಿಎ ಲೋಕಾಯುಕ್ತ ಬಲೆಗೆ - Vistara News

ಕರ್ನಾಟಕ

Lokayukta Raid: ಹೂವಿನ ಹಡಗಲಿಯಲ್ಲಿ 65 ಸಾವಿರ ರೂಪಾಯಿ ಲಂಚ ಪಡೆಯುವಾಗ ಎಫ್‌ಡಿಎ ಲೋಕಾಯುಕ್ತ ಬಲೆಗೆ

Lokayukta Raid: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಹಸೀಲ್ದಾರ್‌ ಕಚೇರಿಯಲ್ಲಿ ಲಂಚ ಪಡೆಯುವಾಗ ಪ್ರಥಮ ದರ್ಜೆ ಸಹಾಯಕ, ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

VISTARANEWS.COM


on

Lokayukta raid at Huvina Hadagali; FDA caught accepting rs 65,000 bribe
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಹಸೀಲ್ದಾರ್‌ ಕಚೇರಿಯಲ್ಲಿ 65 ಸಾವಿರ ರೂಪಾಯಿ ಲಂಚ ಪಡೆಯುವಾಗ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಲೋಕಾಯುಕ್ತ ಬಲೆಗೆ (Lokayukta Raid) ಬಿದ್ದಿದ್ದಾರೆ,

ಎಫ್‌ಡಿಎ ವೆಂಕಟಸ್ವಾಮಿ ಬಂಧಿತ. ನಾಲ್ಕು ಎಕರೆ ಜಮೀನಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ಕಲಂ 11 ತೆಗೆದು ಹಾಕಲು ಹಗರನೂರು ಗ್ರಾಮದ ನಿವೃತ್ತ ಶಿಕ್ಷಕ ಲಕ್ಕಪ್ಪ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಎಫ್‌ಡಿಎ, 70 ಸಾವಿರ ರೂಪಾಯಿ ಹಣಕ್ಕೆ ಹಣ ಬೇಡಿಕೆ ಇಟ್ಟಿದ್ದಾರೆ. ಈ ಪೈಕಿ 65 ಸಾವಿರ ರೂಪಾಯಿಯನ್ನು ಕಚೇರಿಯಲ್ಲಿ ಸ್ವೀಕರಿಸುತ್ತಿದ್ದಾಗ ಬಳ್ಳಾರಿ ಹಾಗೂ ಹೊಸಪೇಟೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಸಾರಿಗೆ ಬಸ್-ಬೈಕ್ ಡಿಕ್ಕಿಯಾಗಿ ಸವಾರ ಸಾವು

ಕುರುಗೋಡು(ಬಳ್ಳಾರಿ): ಸಾರಿಗೆ ಬಸ್ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ-ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿಯ ವಿ.ಟಿ. ಕ್ಯಾಂಪ್ ಬಳಿ ನಡೆದಿದೆ.

ವಿಜಯನಗರ ಜಿಲ್ಲೆಯ ಗಾದಿಗನೂರು ನಿವಾಸಿ ಕೆ. ಕಲ್ಲಪ್ಪ (41) ಮೃತರು. ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮುಗಿಸಿಕೊಂಡು ಹೆಂಡತಿ ತವರೂರು ಸಿಂದಿಗೇರಿಗೆ ತೆರಳುತ್ತಿರುವಾಗ ಸಿರುಗುಪ್ಪ ಕಡೆಯಿಂದ ಬಂದ ಸಾರಿಗೆ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡು ಕಲ್ಲಪ್ಪ ಮೃತಪಟ್ಟಿದ್ದಾರೆ. ಕುರುಗೋಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder Case : ಕುಡಿಯಲು ಹಣ ಕೊಡಲಿಲ್ಲ ಎಂದು ತಾತನನ್ನೇ ಕೊಲೆಗೈದ ಮೊಮ್ಮಗ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

Karnataka Job Reservation : ಮೀಸಲಾತಿ ಕುರಿತು ಸರ್ಕಾರ ತನ್ನ ಪ್ರಕಟಣೆ ಹೊರಡಿಸಿದೆ. ಬಳಿಕ ಅದಕ್ಕೆ ತಡೆದಿದೆ. ಕರ್ನಾಟಕದಿಂದ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ವಲಯದಿಂದ ಉದ್ಯೋಗ ಮೀಸಲಿಡಬೇಕು ಎಂಬುದರ ಕುರಿತು ಸಿಎಂ ತಮ್ಮ ನಿಲುವು ಪ್ರಕಟಿಸಬೇಕು. ನಿಮ್ಮ ಸರ್ಕಾರದ ಮೇಲೆ ಹಗರಣ ಸುತ್ತಿಕೊಂಡಿದೆ. ಅದಕ್ಕಾಗಿ ಈ ವಿಷಯವನ್ನು ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದಿರು

VISTARANEWS.COM


on

CT Ravi
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡುವ ವಿಚಾರವನ್ನು (Karnataka Job Reservation) ಮುನ್ನೆಲೆಗೆ ತಂದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ವಿಧಾನಸೌಧದ ಪಡಸಾಲೆಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರದ ಮೇಲೆ ಹಗರಣಗಳು ಸುತ್ತಿಕೊಂಡಿವೆ. ಅವುಗಳನ್ನು ವಿಷಯಾಂತರ ಮಾಡುವುದಕ್ಕೆ ಮೀಸಲಾತಿ ವಿಚಾರವನ್ನು ಎತ್ತಿದ್ದಾರೆ ಎಂದು ಹೇಳಿದ್ದಾರೆ.

ಮೀಸಲಾತಿ ಕುರಿತು ಸರ್ಕಾರ ತನ್ನ ಪ್ರಕಟಣೆ ಹೊರಡಿಸಿದೆ. ಬಳಿಕ ಅದಕ್ಕೆ ತಡೆದಿದೆ. ಕರ್ನಾಟಕದಿಂದ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ವಲಯದಿಂದ ಉದ್ಯೋಗ ಮೀಸಲಿಡಬೇಕು ಎಂಬುದರ ಕುರಿತು ಸಿಎಂ ತಮ್ಮ ನಿಲುವು ಪ್ರಕಟಿಸಬೇಕು. ನಿಮ್ಮ ಸರ್ಕಾರದ ಮೇಲೆ ಹಗರಣ ಸುತ್ತಿಕೊಂಡಿದೆ. ಅದಕ್ಕಾಗಿ ಈ ವಿಷಯವನ್ನು ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದಿರು

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಹಣ ವರ್ಗಾವಣೆ ಮಾಡಿ ವಂಚನೆ ಮಾಡಿರೋದು ಸಿಎಂ ಗಮನಕ್ಕೂ ಬಂದಿದೆ. ಇದರಿಂದಾ ನಿಮ್ಮ ಸರ್ಕಾರದ ಘನತೆಗೆ ಚ್ಯುತಿ ತಂದಿದೆ. ಹೀಗಾಗಿ ಜನರನ್ನು ಭಾವನಾತ್ಮಕವಾಗಿ ಬದಲಾಯಿಸಲು ಮೀಸಲಾತಿ ವಿಚಾರವನ್ನು ಎತ್ತಲಾಗಿದೆ ಎಂದು ಸಿಟಿ ರವಿ ಆರೋಪಿಸಿದರು.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಉದ್ದಿಮೆಯಲ್ಲಿ ಎಷ್ಟು ಉದ್ಯೋಗ ಇದೆ. ಕನ್ನಡಿಗರಿಗೆ ಎಷ್ಟು, ಹೊರಗಿನವರಿಗೆ ಎಷ್ಟು ಅಂತ‌ಮಾಹಿತಿ ಪಡೆಯಬೇಕಿತ್ತು. ಯಾವ ಉದ್ಯೋಗಕ್ಕೆ ಕೌಶಲದ ಅವಶ್ಯಕತೆ ಇದೆ ಅಂತ ಮಾಹಿತಿ ಪಡೆಯಬೇಕಿತ್ತು. ಹಾಗಾದರೆ ಮಾತ್ರ ಅದು ಸರ್ಕಾರದ ಬದ್ಧತೆಯಾಗಲಿದೆ.

ಮೀಸಲಾತಿ ವಿಷಯದ ಕುರಿತು ಚರ್ಚಿಸಲು ಎಷ್ಟು ಸಭೆ ನಡೆಸಲಾಗಿದೆ. ಈ ವಿಷಯದಲ್ಲಿ ಮುಖ್ಯಮಂತ್ರಿಗೆ ಬದ್ಧತೆ ಇದೆಯೇ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಬದಲಾಗಿದ್ದಾರೆ. ಈ ಹಗರಣಗಳೇ ಅದಕ್ಕೆ ಸ್ಪಷ್ಟ ಉದಾಹರಣೆ. ಚಾಮುಂಡೇಶ್ವರಿ ಉಪಚುನಾವಣೆ ಬಂದಾಗ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇತ್ತು. ಆಗ ನಾನು ಹೋರಾಟಗಾರರು ಸೋಲಬಾರದು ಎಂದು ಹೇಳಿದ್ದೆ. ಅಹಿಂದ ನಾಯಕರು ಗೆಲ್ಲಬೇಕು ಎಂದಿದ್ದೆ ಎಂದು ಸಿಟಿ ರವಿ ಹೇಳಿದ್ದಾರೆ.

ನಿಗಮದ ಹಣ, ಎಸ್​ಸಿಪಿ ಮತ್ತು ಟಿಎಸ್​​ಪಿ ಹಣ ದುರ್ಬಳಕೆಗೆ ನಿಮ್ಮ ಸರ್ಕಾರವೇ ಹೊಣೆಯಾಗಿದೆ. ಅದರ ಲೂಟಿಯಲ್ಲಿ ಸಿಎಂ ಸಚಿವ ಸಂಪುಟ ಸಹೋದ್ಯೋಗಿ ಭಾಗಿಯಾಗಿದ್ದಾರೆ. ಹಿಂದಿನ ನಾಯಕ ಸಿದ್ದರಾಮಯ್ಯ ಇಂಥದ್ದನ್ನು ಸಹಿಸುತ್ತಿರಲಿಲ್ಲ. ಇದು ಕೇವಲ‌ ಆಷಾಢ ಭೂತಿತನ ಅಷ್ಟೆ ಎಂದು ಸಿಟಿ ರವಿ ಹೇಳಿದ್ದಾರೆ.

ಎಸ್​ಸಿಪಿ- ಟಿಎಸ್​​ಪಿ ಹಣ ದುರ್ಬಳಕೆ ಆಗಿದೆ. ಆ ಹಣ ಅವರಿಗೆ ಮಾತ್ರ ಬಳಕೆ‌ ಆಗಬೇಕು. ಸರ್ಕಾರದ ಗ್ಯಾರಂಟಿ ಉದ್ದೇಶಕ್ಕೆ ಅಲ್ಲ. ಹೀಗಾಗಿ ಹಣ ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ವಾಲ್ಮೀಕಿ ನಿಗಮ, ಮುಡಾ, ಪರಿಶಿಷ್ಟರ ಹಣದ ಬಳಕೆಯ ಹೊಣೆಯನ್ನು ಸಿಎಂ ಹೊರಬೇಕು ಎಂದು ಸಿಟಿ ರವಿ ನುಡಿದಿದ್ದಾರೆ.

ಅರ್ಕಾವತಿ ರೀಡು ಹಗರಣ ಸಿಎಂ ಮೇಲೆ ಬಂದಿತ್ತು. ರಿಯಲ್ ಎಸ್ಟೇಟ್ ಉದ್ಯಮಗಳಿಂದ ಕೋಟ್ಯಂತ ರೂಪಾಯಿ ಪಡೆದಿರೋ ಆರೋಪ ಬಂದಿತ್ತು. ವಿಚಾರಣೆಗೆ ಕೆಂಪಣ್ಣ ಆಯೋಗ ರಚನೆ ಮಾಡಿದ್ದೀರಿ. ಬಳಿಕ ದೇಸಾಯಿ ಆಯೋಗ ರಚನೆ ಮಾಡಿದ್ದೀರಿ. ಸದನದಲ್ಲಿ ಮೊದಲು ಕೆಂಪಣ್ಣ ಆಯೋಗದ ವರದಿ ತಂದು ಬಳಿಕ ಅನ್ನು ಮುಚ್ಚಿಟ್ರಿ. ಬಳಿಕ ಸಾಯಿ ಆಯೋಗ ಸಿದ್ದಪಡಿಸಿದ್ದೀರಿ. ಬಳಿಕ ತಪ್ಪನ್ನು ಮುಚ್ಚಿಟ್ಟಿರಿ ಎಂದು ರವಿ ಅವರು ಆರೋಪಿಸಿದರು.

ಲೋಕಾಯುಕ್ತ ಪವರ್ ಕಡಿಮೆ ಮಾಡಿ, ಎಸಿಬಿ ರಚನೆ ಮಾಡಿದವರು ಸಿಎಂ ಸಿದ್ದರಾಮಯ್ಯ. ಎರಡೂ ಇಲಾಖೆ ದುರ್ಬಳಕೆ ಮಾಡಿಕೊಂಡವರು ನೀವೇ. ತಕ್ಷಣವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸಿಟಿ ರವಿ ಆಗ್ರಹಿಸಿದರು.

Continue Reading

ಹುಬ್ಬಳ್ಳಿ

Student Death : ಎಕ್ಸಾಂನಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ಸೂಸೈಡ್‌

Student Death : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಎಕ್ಸಾಂನಲ್ಲಿ ಫೇಲ್‌ (Failed in Exam) ಆಗಿದ್ದಕ್ಕೆ ಮನನೊಂದು ಕೆರೆಗೆ ಹಾರಿ (Self Harming) ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಶವವನ್ನು ಹೊರತೆಗೆದಿದ್ದಾರೆ.

VISTARANEWS.COM


on

By

Student death
ಸಾಂದರ್ಭಿಕ ಚಿತ್ರ
Koo

ಹುಬ್ಬಳ್ಳಿ: ಪರೀಕ್ಷೆಯಲ್ಲಿ ‌ಫೇಲ್ (Failed in Exam) ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ (Self Harming) ಶರಣಾಗಿದ್ದಾಳೆ. ಹುಬ್ಬಳ್ಳಿಯ ಉಣಕಲ್‌ ಕೆರೆಗೆ ಹಾರಿ ಮೃತಪಟ್ಟಿದ್ದಾಳೆ. ಸವಿತಾ ನರಗುಂದ (22) ಆತ್ಮಹತ್ಯೆ ಮಾಡಿಕೊಂಡವಳು.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೂವಿನಶಿಗ್ಲಿ ಗ್ರಾಮದ ಸವಿತಾ ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಬಿಎಸ್‌ಸಿ 5ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದಳು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೆರೆಯಿಂದ ಶವವನ್ನು ಹೊರೆತೆಗೆದು ಕಿಮ್ಸ್‌ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

ನದಿಗೆ ಹಾರಿದ್ದ ವ್ಯಕ್ತಿ ಶವ ಪತ್ತೆ

ನದಿಗೆ ಹಾರಿ ನಾಪತ್ತೆಯಾಗಿದ್ದ ಹರೀಶ್ ಭೋವಿ ಎಂಬಾತನ ಶವ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನಗಳ್ಳಿಯಲ್ಲಿ ಹೊಳೆಯಲ್ಲಿ ಶವ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಹೊಳೆಗೆ ಹಾರಿ ಹರೀಶ್‌ ನಾಪತ್ತೆಯಾಗಿದ್ದ.

ಹರೀಶ್ ದಂಪತಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ತೆರಳಿದ್ದರು. ಠಾಣೆಯಲ್ಲಿ ಮಾತುಕತೆ ಮುಗಿಸಿ ಮನೆಗೆ ಮರಳುವಾಗ ದಾರಿ ಮಧ್ಯೆ ರಿಕ್ಷಾದಿಂದಲೇ ಹೊಳೆಗೆ ಹಾರಿದ್ದ. ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಹರೀಶ್ ಶವಕ್ಕಾಗಿ ಎರಡು ದಿನ ಶೋಧ ಕಾರ್ಯಚರಣೆ ನಡೆಸಿದ್ದರು. ವಾರಿ ಮಳೆಯಿಂದಾಗಿ ಅಬ್ಬರದಿಂದ ಹರಿಯುತ್ತಿದ್ದ ನದಿಯಿಂದಾಗಿ ಶೋಧ ಕಾರ್ಯಚರಣೆಗೆ ಅಡಚಣೆಯಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆಯಿಂದಲೂ ಶೋಧ ಕಾರ್ಯ ನಡೆದಿತ್ತು. ಗುರುವಾರ ಶವ ಕೊಳೆತ ಪರಿಣಾಮ ಆನೆಗಳ್ಳಿ ಹೊಳೆಯಲ್ಲಿ ಪತ್ತೆಯಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Karnataka Rain : ಭಾರಿ ಮಳೆಗೆ (Heavy Rain Alert) ಉಕ್ಕಿ ಹರಿಯುತ್ತಿದ್ದ ಸೇತುವೆ ಮೇಲೆ ಹೋದ ರಾಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಮತ್ತೊಂದು ಕಡೆ ಮನೆಯೊಂದು ನೆಲಸಮವಾಗಿದೆ. ಮನೆಗಳಿಗೆ ನೀರು ನುಗ್ಗಿದ್ದರೆ, ಮರಗಳು ಧರೆಗುರುಳಿವೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಭಾರಿ ಮಳೆಯು (Karnataka Rain) ಸಾವು-ನೋವಿಗೆ ಕಾರಣವಾಗುತ್ತಿದೆ. ಅಬ್ಬರಿಸುತ್ತಿರುವ ಮಳೆಗೆ ಸೇತುವೆಗಳು ಮುಳುಗಡೆಯಾಗಿವೆ. ಚಿಕ್ಕಮಗಳೂರಿನ ಹೆಬ್ಬಾಳೆ ಸೇತುವೆ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ಹೋಗುವಾಗ ರಾಸುವೊಂದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಹೆಬ್ಬಾಳೆ ಸೇತುವೆ ಮೇಲೆ 2-3 ಅಡಿ ಎತ್ತರದಲ್ಲಿ ನೀರು ಹರಿಯುತ್ತಿದ್ದು, ದಡ ತುಸು ದೂರದಲ್ಲೇ ಇದ್ದಾಗ ನದಿಗೆ ದನವೊಂದು ಬಿದ್ದಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನಿಂದ ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆಯಲ್ಲಿ, ಜನರ ಕಣ್ಣೇದುರೇ ಭದ್ರೆಯ ಒಡಲಲ್ಲಿ ರಾಸು ಕೊಚ್ಚಿ ಹೋಗಿದೆ.

ರಸ್ತೆಗೆ ಬಿದ್ದ ಬೃಹತ್‌ ಮರ

ಪ್ರವಾಸಿಗರ ನಿಷೇಧದಿಂದ ಭಾರೀ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಮುಳ್ಳಯ್ಯನಗಿರಿ ರಸ್ತೆಯ ಮೂರನೇ ತಿರುವಿನಲ್ಲಿ ಘಟನೆ ನಡೆದಿದೆ. ವಾಹನಗಳು ಇಲ್ಲದಿದ್ದರಿಂದ ಅನಾಹುತ ತಪ್ಪಿದೆ. ಗುಡ್ಡದ ಮಣ್ಣಿನ ಸಮೇತ ಮರ ಬಿದ್ದು, ಸ್ಥಳೀಯ ಗ್ರಾಮಸ್ಥರು ಓಡಾಡಲು ಪರದಾಟ ಅನುಭವಿಸಿದರು. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಮರ ತೆರವು ಮಾಡಲಾಯಿತು.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆಯು ಆರ್ಭಟಿಸುತ್ತಿದ್ದು ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿಯ ಉಪ ನದಿಗಳ ನೀರಿನ ಮಟ್ಟ ಏರಿಕೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಭರ್ತಿ‌ಯಾಗಿದೆ. ಭಗಂಡೇಶ್ವರ ಸನ್ನಿದಿಯ ಮೆಟ್ಟಿಲವರೆಗೂ ನೀರು ನಿಂತಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಏರಿಕೆಯಾಗುತ್ತಿದ್ದು, ಭಾಗಮಂಡಲ-ನಾಪೋಕ್ಲು ರಸ್ತೆಯು 3ನೇ ಬಾರಿಗೆ ಬಂದ್ ಆಗುತ್ತಿದೆ.

ಮಂಗಳೂರಲ್ಲಿ 12 ಮನೆಗಳಿಗೆ ನುಗ್ಗಿದ ನೇತ್ರಾವತಿ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬಂಟ್ವಾಳದ ಪಾಣೆಮಂಗಳೂರು ಆಲಡ್ಕದಲ್ಲಿ ಸುಮಾರು 12 ಮನೆಗಳಿಗೆ ನೀರು ನುಗ್ಗಿದೆ. ಅಪಾಯದಲ್ಲಿದ್ದ 12 ಮನೆಗಳ ಜನರನ್ನು ಜಿಲ್ಲಾಡಳಿತ ಸ್ಥಳಾಂತರ ಮಾಡಿದೆ. ಮಂಗಳೂರಲ್ಲಿ ನೇತ್ರಾವತಿ ಅಬ್ಬರ

ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳದಿಂದಾಗಿ ಬೋಳಿಯಾರ್ ಗ್ರಾಮದ ಅಮ್ಮೆಂಬಳದಲ್ಲಿ ಸಂಪರ್ಕ ಕಡಿತಗೊಂಡಿದೆ. ಅಮ್ಮೆಂಬಳ-ಜಾರದಗುಡ್ಡೆ ಸಂಪರ್ಕ ಕಡಿತವಾಗಿದೆ. ನೇತ್ರಾವತಿ ನದಿ ನೀರು ಗದ್ದೆ ಪೂರ್ತಿ ಆವರಿಸಿದೆ. ಸುಮಾರು ನೂರ ಎಪ್ಪತ್ತೈದುಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ನೆರೆ ನೀರು ಆವರಿಸಿದೆ. ಈ ಹಿನ್ನೆಲೆಯಲ್ಲಿ 7 ಕಿ.ಮೀ ಸುತ್ತುಬಳಸಿ ಹೋಗಬೇಕಿದೆ. ರಸ್ತೆ ನಿರ್ಮಾಣ ಮಾಡುವಂತೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಉಡುಪಿಯಲ್ಲಿ ಮನೆ ನೆಲಸಮ, ಸೋಮೇಶ್ವರದಲ್ಲಿ ಗುಡ್ಡ ಕುಸಿತ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕಟ್ಟೆಗುಡ್ಡೆ ಎಂಬಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಕಡೆಕಾರು ಪಂಚಾಯತ್‌ನ ಶಾರದ ಪೂಜಾರ್ತಿ ಎಂಬುವವರ ಮನೆ ನೆಲಸಮವಾಗಿದೆ. ಸುಮಾರು 30 ವರ್ಷ ಹಳೆಯದಾದ ಮನೆಯಲ್ಲಿ ಒಟ್ಟು 10 ಮಂದಿ ವಾಸಿಸುತ್ತಿದ್ದರು. ಮಣ್ಣಿನ ಗಾರೆ ಮಾಡಿ ಮನೆ ನಿರ್ಮಾಣ ಮಾಡಿದ್ದು, ಮನೆ ಕುಸಿಯುವ ಮೊದಲೇ ಓಡಿ ಹೋಗಿದ್ದರಿಂದ ಅಪಾಯ ತಪ್ಪಿದೆ. ಮನೆ ಬೀಳುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉಡುಪಿಯ ಬೈಂದೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಕ್ಕೆ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಬೈಂದೂರು ತಾಲೂಕಿನ ಪಡುವರಿ ಗ್ರಾಮ ಪಂಚಾಯತ್ ಸೋಮೇಶ್ವರ ಗುಡ್ಡ ಕುಸಿಯುತ್ತಿದೆ. ಗುಡ್ಡದ ಮೇಲೆ ಖಾಸಗಿಯವರ ಅನಧೀಕೃತ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡಕ್ಕೆ ಸಂಪರ್ಕ ಕಲ್ಪಿಸಲು ಗುಡ್ಡ ಕೊರೆದು ರಸ್ತೆ ನಿರ್ಮಿಸಿದ್ದಾರೆ. ಯಾವುದೇ ಸ್ಥಳೀಯ ಪರವಾನಿಗೆ ಇಲ್ಲದೆ ಕಟ್ಟಡ ನಿರ್ಮಾಣ ಮಾಡಿರುವ ಆರೋಪವಿದೆ. ನಿರಂತರ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಬಳಿ ಗುಡ್ಡ ಕುಸಿತ ಉಂಟಾಗಿದೆ. ಹೀಗಾಗಿ ಸೋಮೇಶ್ವರ ಬೀಚ್ ರಸ್ತೆ ಬಂದ್ ಮಾಡಿದ್ದಾರೆ. ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದಂತಾಗಿದೆ. ಗುಡ್ಡ ಸಂಪೂರ್ಣ ಕುಸಿದರೆ ಬೈಂದೂರು ಪ್ರಸಿದ್ಧ ಪ್ರವಾಸಿ ತಾಣ ಕಣ್ಮರೆಯಾಗಲಿದೆ.

ಪಶ್ಚಿಮ ಘಟ್ಟದಲ್ಲೂ ಮಳೆ ಅಬ್ಬರ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಖಾನಾಪುರ ತಾಲೂಕಿನ ಹೆಮ್ಮಡಗಾ ಬಳಿ ಅಪಾಯದ ಮಟ್ಟ ಮೀರಿ ಹಾಲತ್ರಿ ಹಳ್ಳ ಹರಿಯುತ್ತಿದೆ. ಸೇತುವೆ ಬಂದ್‌ ಆಗಿದ್ದರಿಂದ ಇಪ್ಪತ್ತೈದು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಸೇತುವೆಗೆ ತಡೆಗೋಡೆ ಇಲ್ಲದೇ ಜೀವ ಕೈಯಲ್ಲಿ ಹಿಡಿದು ಸಾಗುವಂತಾಗಿದೆ. ರಾತ್ರಿ ವೇಳೆ ಸ್ವಲ್ಪ ನೀರು ಸೇತುವೆ ಮೇಲಿದ್ದರೂ ಹಳ್ಳಕ್ಕೆ ಬೀಳುವ ಸಾಧ್ಯತೆ ಇದೆ.

ಸುತ್ತೂರು ಸೇತುವೆ ಮುಳುಗಡೆ

ಮೈಸೂರು – ಸುತ್ತೂರು ಗ್ರಾಮಕ್ಕೆ ಸಂಪರ್ಕ ಕೇಂದ್ರವಾಗಿದ್ದ ಸೇತುವೆ ಮುಳುಗಡೆ ಆಗಿದೆ. ಬೀಚನಹಳ್ಳಿಯ ಕಬಿನಿ ಡ್ಯಾಂ ಭರ್ತಿಯಾದ ಹಿನ್ನೆಲೆಯಲ್ಲಿ 70 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಹೀಗಾಗಿ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸೇತುವೆ ಮುಳುಗಡೆಯಾಗಿ, ಸುತ್ತೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಸ್ಥಗಿತಗೊಂಡಿದೆ. ಸೇತುವೆ ಮೇಲೆ ಕಪಿಲಾ ನದಿ ಉಕ್ಕಿ ಹರಿಯುತ್ತಿದೆ.

ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ

ಶಿವಮೊಗ್ಗದ ಹೊಸನಗರ ತಾಲೂಕಿನ ಅರಸಾಳು ಬಟಾಣಿಜೆಡ್ಡು ಬಳಿ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಭಾರಿ ಮಳೆಗೆ ಬೃಹತ್ ಮರವೊಂದು ರೈಲ್ವೆ ಹಳಿಗಳ ಮೇಲೆ ಬಿದ್ದಿದೆ. ಜತೆಗೆ ವಿದ್ಯುತ್ ತಂತಿಗಳಿಗೂ ಸಹ ಹಾನಿಯಾಗಿದೆ. ಇದರಿಂದಾಗಿ ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಮರಬಿದ್ದ ಕಾರಣ ಅರಸಾಳು ಬಳಿಯ ಬಟಾಣಿಜೆಡ್ಡು ಬಳಿ ನಿಲ್ಲುವಂತಾಯಿತು. 7.15ಕ್ಕೆ ಶಿವಮೊಗ್ಗ ತಲುಪಬೇಕಿದ್ದ ರೈಲು 9 ಗಂಟೆಗೆ ಆಗಮಿಸಿತು. ಸುಮಾರು ಎರಡು ತಾಸು ಕಾದ ಪ್ರಯಾಣಿಕರು ಹೈರಾಣಾದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಯಾದಗಿರಿ

Murder case : ಪತ್ನಿ, ಅತ್ತೆ ಹಾಗೂ ಮಾವನಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಚಾಕುವಿನಿಂದ ಇರಿದು ಕೊಂದ

Murder case : ಹೆಂಡತಿ ದೂರಾಗಿದ್ದಕ್ಕೆ ಸಿಟ್ಟಾದ ದುಷ್ಟನೊಬ್ಬ ರಾಜಿ ಪಂಚಾಯಿತಿ ನೆಪದಲ್ಲಿ ಕರೆಸಿಕೊಂಡು, ಅತ್ತೆ-ಮಾವ ಸೇರಿ ಪತ್ನಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಚಾಕುವಿನಿಂದ ಇರಿದು ಕೊಂದಿದ್ದಾನೆ.

VISTARANEWS.COM


on

By

Koo

ಯಾದಗಿರಿ: ಅತ್ತೆ-ಮಾವ ಹಾಗೂ ಪತ್ನಿಯನ್ನು ಪಾಪಿಯೊಬ್ಬ ಬರ್ಬರವಾಗಿ ಕೊಲೆ (Murder case) ಮಾಡಿದ್ದಾನೆ. ಯಾದಗಿರಿ ತಾಲೂಕಿನ ಸೈದಾಪುರ ಬಳಿ ಘಟನೆ ನಡೆದಿದೆ. ಕೊಲೆಯಾದ ಮೂವರು ದಾವಣಗೆರೆ ಮೂಲದವರಾಗಿದ್ದಾರೆ. ಅನ್ನಪೂರ್ಣ (25), ಕವಿತಾ (45), ಬಸವರಾಜಪ್ಪ (52) ಕೊಲೆಯಾದವರು.

ಯಾದಗಿರಿ ತಾಲೂಕಿನ ಮುನಗಲ್ ಗ್ರಾಮದ ನವೀನ್ (30) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕಳೆದ ಮೂರು ವರ್ಷಗಳ ಹಿಂದೆ ದಾವಣಗೆರೆ ಮೂಲದ ಅನ್ನಪೂರ್ಣಳನನ್ನು ನವೀನ್‌ ಮದುವೆಯಾಗಿದ್ದ. ಈ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇತ್ತು.

ಆದರೆ ಪತಿ ನವೀನ್‌ ಕಿರುಕುಳ ತಾಳಲಾರದೆ ಅನ್ನಪೂರ್ಣ ತವರು ಮನೆಗೆ ವಾಪಸ್‌ ಆಗಿದ್ದಳು. ಕಳೆದ ಒಂದು ವರ್ಷದ ಹಿಂದೆ ಅನ್ನಪೂರ್ಣ ತಂದೆ-ತಾಯಿ ಜತೆಗೆ ಇದ್ದಳು. ನಿನ್ನೆ ಬುಧವಾರ ಮತ್ತೆ ಜತೆಗೆ ಇರೋಣಾ ಬಾ ಎಂದು ಅನ್ನಪೂರ್ಣಳನ್ನು ನವೀನ್ ಕರೆದಿದ್ದ. ನ್ಯಾಯಾ ಪಂಚಾಯತಿ ಬಳಿಕ ಮತ್ತೆ ಈ ದಂಪತಿ ಜೊತೆಗಿರಲು ಮುಂದಾಗಿದ್ದರು.

ಇತ್ತ ಪೋಷಕರು ಮಗಳನ್ನು ಗಂಡನ ಮನೆಗೆ ಬಿಡಲು ಬಂದಿದ್ದರು. ರಾಜೀ ಪಂಚಾಯತಿ ಬಳಿಕ ಅತ್ತೆ- ಮಾವನನ್ನು ಬಸ್ ನಿಲ್ದಾಣಕ್ಕೆ ಕಾರಿನಲ್ಲಿ ಬಿಡಲು ಹೋದಾಗ, ಕಬ್ಬಿಣದ ರಾಡ್ ಹಾಗೂ ಚಾಕುನಿಂದ ಇರಿದು ನವೀನ್‌ ಕೊಲೆ ಮಾಡಿದ್ದಾರೆ. ಕೊಲೆ ಮಾಡಿ ವಡಗೇರಾ ತಾಲೂಕಿನ ಜೋಳದಡಗಿ ಬಳಿ ಶವ ಬಿಸಾಡಿದ್ದಾನೆ. ಸದ್ಯ ಅನ್ನಪೂರ್ಣಳ ಶವ ಪತ್ತೆಯಾಗಿದ್ದು, ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮತ್ತಿಬ್ಬರ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

ತುಮಕೂರು: ಗಂಡ ಮಕ್ಕಳನ್ನು ಬಿಟ್ಟು ಮಹಿಳೆಯೊಬ್ಬಳು ಪರ ಪುರುಷನೊಂದಿಗೆ (Illicit relationship) ಓಡಿ ಹೋಗಿದ್ದಾಳೆ. ಮರ್ಯಾದೆಗೆ ಅಂಜಿದ ಪತಿ ವಿಷ ಕುಡಿದು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ದೇವರಾಜ್ ಮೃತ ದುರ್ದೈವಿ. ತುಮಕೂರು ತಾಲೂಕಿನ ಹೊಸಹಳ್ಳಿಯಲ್ಲಿ ಘಟನೆ ನಡೆದಿದೆ.

ದೇವರಾಜ್‌ ಹಾಗೂ ಮಾಧವಿ ಇಬ್ಬರು ಪ್ರೀತಿಸಿ 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಪರ ಪುರುಷನ ಮೇಲೆ ವ್ಯಾಮೋಹಕ್ಕೆ ಸಿಲುಕಿದ ಮಾಧವಿ, ಹೊಸಹಳ್ಳಿ ಗ್ರಾಮದ ಆನಂದ್ ಕುಮಾರ್ ಎಂಬಾತನೊಟ್ಟಿಗೆ ಪರಾರಿ ಆಗಿದ್ದಾಳೆ.

ಪರ ಪುರುಷನೊಂದಿಗೆ ಪತ್ನಿ ಓಡಿ ಹೋದ ಸುದ್ದಿ ತಿಳಿದ ದೇವರಾಜ್‌ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್‌ನಲ್ಲಿ ಪ್ರಧಾನಿ ಮೋದಿ, ಕುಮಾರಸ್ವಾಮಿ, ಡಿಸಿ-ಎಸ್ಪಿಗೆ ನನ್ನ ಸಾವಿಗೆ ನ್ಯಾಯಕೊಡಿಸಿ ಎಂದು ದೇವರಾಜ್‌ ಮನವಿ ಮಾಡಿದ್ದಾರೆ.

ಮಾಧವಿಯನ್ನು 17 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದೆ. ಹೊಸಹಳ್ಳಿಯಲ್ಲಿ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದೆ. ನಮಗೆ 16 ಹಾಗೂ 12 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹೀಗಿರುವಾಗ ಪ್ರತಿ ನಿತ್ಯ ಅಂಗಡಿಯ ಬಳಿ ಬರುತ್ತಿದ್ದ ಆನಂದ್ ಕುಮಾರ್, ಈ ವೇಳೆ ಮಾಧವಿಯೊಂದಿಗೆ ಸಲುಗೆ ಬೆಳೆಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು ಪರಾರಿ ಆಗಿದ್ದಾನೆ ಎಂದು ಬರೆದಿದ್ದಾರೆ.

ಪತ್ನಿ ಓಡಿ ಹೋಗಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ದೇವರಾಜ್, ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟು, ತನಗೆ ಆನಂದ್‌ನಿಂದ ಜೀವ ಬೆದರಿಕೆ ಹಾಕಿದ್ದ ಎಂದು ಉಲ್ಲೇಖಿಸಿದ್ದಾರೆ. ಇಬ್ಬರಿಗೂ ತಕ್ಕ ಶಿಕ್ಷೆ ಕೊಡಿಸುವಂತೆ ಮನವಿ ಮಾಡಿದ್ದಾರೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಾಧವಿ, ಆನಂದ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ ಆರೋಪ ಮೇಲೆ ದೂರು ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಮಾಧವಿ, ಆನಂದ್ ತಲೆಮರೆಸಿಕೊಂಡಿದ್ದಾರೆ. ಇತ್ತ ತಾಯಿ ಇಲ್ಲದೇ ತಂದೆಯನ್ನು ಕೆಳದುಕೊಂಡ ಇಬ್ಬರು ಹೆಣ್ಮಕ್ಕಳು ತಬ್ಬಲಿಗಳಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
CT Ravi
ಪ್ರಮುಖ ಸುದ್ದಿ15 mins ago

Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

World's Largest Tribe
ವಿದೇಶ16 mins ago

Mashco Piro Tribe: ಮೊದಲ ಬಾರಿ ಹೊರ ಜಗತ್ತಿಗೆ ಕಾಣಿಸಿಕೊಂಡ ಮಾಶ್ಕೊ ಪಿರೋ ಬುಡಕಟ್ಟು ಸಮುದಾಯ!

Sensex Jump
ವಾಣಿಜ್ಯ20 mins ago

Sensex Jump: ಷೇರುಪೇಟೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಸೆನ್ಸೆಕ್ಸ್, 24,000 ಮೀರಿದ ನಿಫ್ಟಿ

Student death
ಹುಬ್ಬಳ್ಳಿ21 mins ago

Student Death : ಎಕ್ಸಾಂನಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ಸೂಸೈಡ್‌

Bajaj Freedom 125 CNG Bike
Latest31 mins ago

Bajaj Freedom 125 CNG Bike: ಬಜಾಜ್ ಸಿಎನ್‌ಜಿ ಬೈಕ್ ಬುಕ್‌ ಮಾಡಿದರೆ 3 ತಿಂಗಳು ಕಾಯಬೇಕು!

Karnataka Rain
ಮಳೆ41 mins ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Virat Kohli
ಕ್ರೀಡೆ43 mins ago

Virat Kohli: ಮೊದಲ ಬಾರಿಗೆ ಮಗ ಅಕಾಯ್ ಜತೆ ಕಾಣಿಸಿಕೊಂಡ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Golden Designer Fashion Wears Trendy Golden Designer Wedding Fashion
ಫ್ಯಾಷನ್48 mins ago

Golden Designer Fashion Wears: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಶೈಲಿಯ ಗೋಲ್ಡನ್‌ ಡಿಸೈನರ್‌ವೇರ್ಸ್!

NEET-UG 2024
ದೇಶ51 mins ago

NEET UG 2024: “ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದೇ ನೀಟ್‌ ಫಲಿತಾಂಶ ಪ್ರಕಟಿಸಿ”-NTAಗೆ ಸುಪ್ರೀಂ ಸೂಚನೆ; ವಿಚಾರಣೆ ಮುಂದೂಡಿಕೆ

Money Guide
ಮನಿ-ಗೈಡ್58 mins ago

Money Guide: ಇಎಂಐ ಮೂಲಕ ಮೊಬೈಲ್‌ ಖರೀದಿಸುವ ಯೋಚನೆಯಲ್ಲಿದ್ದೀರಾ? ಈ ಅಂಶ ನಿಮಗೆ ತಿಳಿದಿರಲೇ ಬೇಕು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ41 mins ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌