Site icon Vistara News

Shivamogga Accident: ಶಿವಮೊಗ್ಗದಲ್ಲಿ ಲಾರಿ-2 ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ದುರ್ಮರಣ

Shivamogga Accident

Lorry And 2 Bike Collided In Shivamogga, 3 People Died On Spot

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ಲಾರಿ ಹಾಗೂ ಎರಡು ಬೈಕ್‌ಗಳು ಡಿಕ್ಕಿಯಾಗಿ (Shivamogga Accident) ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.

ಲಾರಿ ಚಕ್ರದ ಅಡಿಗೆ ಸಿಲುಕಿ ಮೃತಪಟ್ಟ ಮೂವರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಆದರೆ, ಮತ್ತೊಂದು ಬೈಕ್‌ ಚಲಾಯಿಸುತ್ತಿದ್ದ ಯುವಕನನ್ನು ಭದ್ರಾವತಿ ತಾಲೂಕು ಅರದೊಟ್ಟು ಗ್ರಾಮದ ಗಗನ್‌ ಎಂಬುದಾಗಿ ಗುರುತಿಸಲಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ದುರದೃಷ್ಟ ಎಂದರೆ, ಗಗನ್‌ ಎರಡೂ ಕೈಕಾಲು ಕಳೆದುಕೊಂಡಿದ್ದಾನೆ ಎಂಬುದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.

ಛಿದ್ರಗೊಂಡ ದೇಹಗಳು

ಕೈಮರ ಕಡೆಯಿಂದ ಗಗನ್‌ ಕಲ್ಲಿಹಾಳ್‌ ಕಡೆಗೆ ತೆರಳುತ್ತಿದ್ದ. ಇದೇ ವೇಳೆ ಲಾರಿ ಹಾಗೂ ಬೈಕ್‌ ಎದುರಿನಿಂದ ಬರುತ್ತಿದ್ದವು. ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋಗಿ ಮೂವರಿದ್ದ ಬೈಕ್‌ ಗಗನ್‌ ಓಡಿಸುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಆಗ, ಎರಡೂ ಬೈಕ್‌ ಸವಾರರಿಗೆ ನಿಯಂತ್ರಣ ತಪ್ಪಿದ್ದು, ವೇಗವಾಗಿ ಚಲಿಸುತ್ತಿದ್ದ ಲಾರಿಯ ಚಕ್ರದ ಅಡಿಗೆ ಬೈಕ್‌ಗಳು ಸಿಲುಕಿವೆ. ಮೃತಪಟ್ಟ ಮೂವರ ಗುರುತು ಸಿಗದಷ್ಟು ದೇಹಗಳು ಛಿದ್ರಗೊಂಡಿವೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ನೀರುಪಾಲು; ಅಜ್ಜಿ ತಿಥಿ ಕಾರ್ಯದ ವೇಳೆ ನಾಲೆಗೆ ಬಿದ್ದು ದುರಂತ!

ಕೆಲ ದಿನಗಳ ಹಿಂದಷ್ಟೇ ಗದಗ ತಾಲೂಕಿನ ಲಕ್ಕುಂಡಿ‌ ಕ್ರಾಸ್‌ನ ಅಯ್ಯಪ್ಪಸ್ವಾಮಿ‌ ದೇವಸ್ಥಾನದ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರಿನ ನಡುವೆ ಭೀಕರ‌ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತದ ತೀವ್ರತೆಗೆ ಬಸ್‌ ಹೆದ್ದಾರಿಯಲ್ಲೇ ಪಲ್ಟಿಯಾಗಿತ್ತು. ಗದಗದಿಂದ ಕೊಪ್ಪಳ ಕಡೆ ತೆರಳುತ್ತಿದ್ದ KSRTC ಬಸ್ ಮತ್ತು ಹೊಸಪೇಟೆಯಿಂದ ಗದಗ ಮಾರ್ಗವಾಗಿ ಬರುತ್ತಿದ್ದ ಕಾರಿನ ನಡುವೆ ಈ ಅವಘಾತ ಸಂಭವಿಸಿತ್ತು. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

Exit mobile version