Site icon Vistara News

ಬೆಂಗಳೂರು- ಮಂಗಳೂರು ಹೆದ್ದಾರಿಯಲ್ಲಿ ಲಾರಿಗೆ ಖಾಸಗಿ ಬಸ್‌ ಡಿಕ್ಕಿ, ಒಬ್ಬನ ಸಾವು

accident news

ಮಂಡ್ಯ: ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಒಬ್ಬ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಗಮಂಗಲ ತಾಲೂಕಿನ ಗೊಂದಿಹಳ್ಳಿ ಸಮೀಪ ದುರ್ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರಿಗೆ ಅಪಘಾತ ಸಂಭವಿಸಿದೆ. ನಂದಿನಿ ಟ್ರಾವೆಲ್‌ಗೆ ಸೇರಿದ KA-20, C-4097 ನೊಂದಣಿಯ ಬಸ್ ಅಪಘಾತಕ್ಕೊಳಗಾಗಿದೆ. ಬಸ್ಸು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿತ್ತು. ಗೊಂದಿಹಳ್ಳಿ ಸಮೀಪ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಎಳನೀರು ತುಂಬಿದ್ದ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಮೃತ ದುರ್ದೈವಿಯನ್ನು ಬೆಳ್ತಂಗಡಿ ಮೂಲದ ಅಕ್ಷಯ್ (30) ಎಂದು ಗುರುತಿಸಲಾಗಿದೆ. 3 ಮಂದಿಗೆ ಗಂಭೀರ ಗಾಯಗಳಾಗಿದ್ದು, 15ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Accident | ಟ್ರಕ್‌- ಆಟೋ ಮುಖಾಮುಖಿ ಡಿಕ್ಕಿಯಾಗಿ ಐವರ ಸಾವು; ಆರು ಮಂದಿಗೆ ಗಂಭೀರ ಗಾಯ

Exit mobile version