Site icon Vistara News

ಮಂಡ್ಯದ ಕಲ್ಲಹಳ್ಳಿ ಬಳಿ ಭೀಕರ ಅಪಘಾತ: ಬೈಕ್‌ಗೆ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

Mandya accident

ಮಂಡ್ಯ: ಮಂಡ್ಯ ಕಲ್ಲಹಳ್ಳಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ದುರಂತದಲ್ಲಿ ಯುವಕರೊಬ್ಬರು ಮೃತಪಟ್ಟಿದ್ದಾರೆ. ಲಾರಿ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಕಲ್ಲಹಳ್ಳಿಯ ಪ್ರಶಾಂತ್‌ (೨೫) ಪ್ರಾಣ ಕಳೆದುಕೊಂಡಿದ್ದಾರೆ.

ಪ್ರಶಾಂತ್‌ ಅವರು ಬೆಳಗ್ಗೆ ತಮ್ಮ ಬೈಕ್‌ನಲ್ಲಿ ಮನೆಯಿಂದ ಕೆಲಸಕ್ಕೆಂದು ಹೋಗುತ್ತಿದ್ದಾಗ ವೇಗವಾಗಿ ಧಾವಿಸಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನೆಲಕ್ಕೆ ಉರುಳಿದ ಪ್ರಶಾಂತ್‌ ಸ್ಥಳದಲ್ಲೇ ಅಸು ನೀಗಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಜನರು ಸ್ಥಳದಲ್ಲಿ ಜಮಾಯಿಸಿದರು. ಆಗ ಲಾರಿ ಚಾಲಕ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಘಟನೆಯಿಂದಾಗಿ ಕೆಲ ಹೊತ್ತು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿತ್ತು. ಬಳಿಕ ಪೊಲೀಸರು ಟ್ರಾಫಿಕ್‌ ಜಾಮ್‌ನ್ನು ಕ್ಲಿಯರ್‌ ಮಾಡಿದರು. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ| ಅಥಣಿಯಲ್ಲಿ ಕಾಲೇಜು ಬಸ್-‌ ಲಾರಿ ಡಿಕ್ಕಿ, ಇಬ್ಬರ ಸಾವು

Exit mobile version