Love affair : ಪ್ರಿಯಕರ ಪೊಲೀಸನನ್ನು ಬೆಂಕಿ ಹಚ್ಚಿ ಕೊಂದ ಹೋಂ ಗಾರ್ಡ್‌ ರಾಣಿ; ಹಿಂದಿದೆ 2ನೇ ಲವ್‌ ಸ್ಟೋರಿ! - Vistara News

ಕರ್ನಾಟಕ

Love affair : ಪ್ರಿಯಕರ ಪೊಲೀಸನನ್ನು ಬೆಂಕಿ ಹಚ್ಚಿ ಕೊಂದ ಹೋಂ ಗಾರ್ಡ್‌ ರಾಣಿ; ಹಿಂದಿದೆ 2ನೇ ಲವ್‌ ಸ್ಟೋರಿ!

Love affair : ಹೋಮ್‌ ಗಾರ್ಡ್‌ ಮಹಿಳೆಯೊಬ್ಬಳು ತಾನು ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ನನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ನಡೆದಿದೆ. ಇದರ ಹಿಂದಿದೆ ಇನ್ನೊಂದು ಲವ್‌ ಸ್ಟೋರಿ!

VISTARANEWS.COM


on

Police murder Case sanjay and Rani
ಕೊಲೆಯಾದ ಪೊಲೀಸ್‌ ಸಂಜಯ್‌ ಮತ್ತು ಹೋಮ್‌ ಗಾರ್ಡ್‌ ರಾಣಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇದು ಅವಿವಾಹಿತ ಪೊಲೀಸ್‌ ಕಾನ್ಸ್‌ಟೇಬಲ್‌ (police Constable) ಮತ್ತು ವಿವಾಹಿತ ಹೋಮ್‌ ಗಾರ್ಡ್‌ ಮಹಿಳೆ (Home guard woman) ನಡುವಿನ ಲವ್‌ ಕಂ ಹೇಟ್‌ ಸ್ಟೋರಿ (Love affair). ಮದುವೆಯಾಗಿದ್ದರೂ ಎರಡೆರಡು ಪ್ರೇಮಿಗಳನ್ನು ಮೆಂಟೇನ್‌ ಮಾಡುತ್ತಿದ್ದ ಆಕೆ ಒಬ್ಬರಿಗೆ ಗೊತ್ತಾಗದಂತೆ ಇನ್ನೊಬ್ಬನ ಜತೆ ಚಕ್ಕಂದ ಆಡುತ್ತಿದ್ದಳು. ಇದು ಪೊಲೀಸ್‌ ಕಾನ್ಸ್‌ಟೇಬಲ್‌ಗೆ ಗೊತ್ತಾಯಿತು. ಆತ ಅದನ್ನು ಪ್ರಶ್ನಿಸಿದ್ದೇ ತಡ, ಆಕೆ ಪೆಟ್ರೋಲನ್ನು ಅವನ ಮೇಲೆ ಸುರಿದು ಬೆಂಕಿ ಹಚ್ಚೇ ಬಿಟ್ಟಳು! ಮುಂದೇನಾಯಿತು?

ಅವರಿಬ್ಬರೂ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ಜತೆಯಾಗಿ ಕೆಲಸ ಮಾಡುತ್ತಿದ್ದರು. ಅವನು ಪೊಲೀಸ್‌ ಕಾನ್ಸ್‌ ಟೇಬಲ್‌ ಸಂಜಯ್‌. ಅವಳು ಹೋಮ್‌ ಗಾರ್ಡ್‌ ರಾಣಿ. ಅವರಿಬ್ಬರು ಠಾಣೆಯಲ್ಲಿ ಕೆಲಸ ಮಾಡಿದ್ದಕ್ಕಿಂತ ಲವ್ವಿಡವ್ವಿ ಮಾಡ್ಕೊಂಡು ಚಕ್ಕಂದ ಆಡಿದ್ದೇ ಹೆಚ್ಚು!

ಹಾಗಂತ ಅವಳೇನೂ ಇನ್ನೂ ಎಳೆ ಯುವತಿಯಲ್ಲ. ಮದುವೆಯಾಗಿ ಗಂಡ ಇದ್ದಾನೆ, ಮಕ್ಕಳೂ ಇದ್ದಾರೆ. ಆದರೆ, ಪ್ರೇಮದ ಆಕರ್ಷಣೆಯನ್ನು ಬಿಡಲಾಗದೆ ಆಕೆ ಕಾನ್ಸ್‌ಟೇಬಲ್‌ನನ್ನು ಆವರಿಸಿಕೊಂಡಿದ್ದಳು. 2021ರಿಂದಲೇ ಅವರು ಸ್ವಚ್ಛಂದ ಹಕ್ಕಿಗಳಂತೆ ಹಾರಾಡುತ್ತಿದ್ದರು.

ಆದರೆ, ಇತ್ತೀಚೆಗೆ ಯಾಕೋ ಹೋಮ್‌ ಗಾರ್ಡ್‌ ಲವ್ವರ್‌ ಪೊಲೀಸ್‌ ಕಾನ್ಸ್‌ಟೇಬಲ್‌ ನನ್ನು ದೂರ ಮಾಡಲು ಶುರು ಮಾಡಿದ್ದಳು. ಇದು ಅಷ್ಟು ದಿನ ಆಕೆಯ ಜತೆ ಓಡಾಡಿ ಮಜಾ ಮಾಡಿದ್ದ ಕಾನ್‌ಸ್ಟೇಬಲ್‌ಗೆ ಸಹಿಸಲು ಸಾಧ್ಯವಾಗಲಿಲ್ಲ. ಏನಾಗಿದೆ ಎಂದು ಹೇಳು ಎಂದು ಆಕೆಯನ್ನು ಪದೇಪದೇ ಕೇಳಿದ್ದ. ಆದರೆ, ಆಕೆ ಏನೂ ಹೇಳಿರಲಿಲ್ಲ. ಬಹುಶಃ ಗಂಡ, ಮಕ್ಕಳು ಎನ್ನುವ ಕಾರಣ ಹೇಳಿರಬೇಕು.

Police murder Case Sanjay and Rani

ಅದೇನೇ ಹೇಳಿದರೂ ಪೊಲೀಸ್‌ ತಡೆದುಕೊಳ್ಳಲು ಆಗಲೇ ಇಲ್ಲ. ಕಳೆದ ಡಿಸೆಂಬರ್‌ 6ರಂದು ಸಂಜೆ ರಾಣಿ ಸಂಜಯ್‌ಗೆ ಕರೆ ಮಾಡಿ ಇವತ್ತು ಸಿಗೋಣ ಎಂದಿದ್ದಳು. ಅವನು ಕೂಡಲೇ ಆಕೆಯ ಮನೆಗೆ ಓಡಿದ. ಅವರಿಬ್ಬರೂ ತಮ್ಮ ಎಂದಿನ ದಿನಚರಿಯಂತೆ ಪರಸ್ಪರ ಖುಷಿಯಿಂದ ಸೇರಿದರು. ಅಷ್ಟು ಹೊತ್ತಿಗೆ ಒಂದು ಬಾಂಬ್‌ ಬಿತ್ತು!

ಅವರಿಬ್ಬರೂ ಖುಷಿಯಲ್ಲಿ ತೇಲುತ್ತಿರುವ ಹೊತ್ತಿನಲ್ಲೇ ಒಂದು ಫೋನ್‌ ಬಂತು. ಅದರಲ್ಲಿದ್ದ ಹೆಸರು ಸುಚೇತನ್‌ (ಹೆಸರು ಬದಲಿಸಲಾಗಿದೆ). ಆ ಹೆಸರು ನೋಡಿದವನೇ ಅವನು ಯಾರು ಎಂದು ಕಾನ್‌ಸ್ಟೇಬಲ್‌ ಪ್ರಶ್ನೆ ಮಾಡಿದ್ದಾನೆ. ಆಕೆ ಸರಿಯಾಗಿ ಉತ್ತರಿಸಲಿಲ್ಲ.

ಸಂಜಯ್‌ ಕೂಡಲೇ ಆಕೆಯ ಮೊಬೈಲ್‌ ಕಿತ್ತುಕೊಂಡು ಚೆಕ್‌ ಮಾಡಿದಾಗ ಅವಳ ಇನ್ನೊಂದು ಲವ್‌ ಸ್ಟೋರಿ ಬೆಳಕಿಗೆ ಬಂದಿದೆ. ಈ ಹೋಮ್‌ ಗಾರ್ಡ್‌ ಸುಚೇತನ್‌ ಜತೆಗೂ ಲವ್ವಿ ಡವ್ವಿ ಆಡುತ್ತಿದ್ದಳು. ನನ್ನ ಜತೆಗಿದ್ದ ಆಕೆ ಬೇರೆಯವರ ಜತೆ ಚಕ್ಕಂದ ಆಡುತ್ತಿರುವುದು, ಸಲಿಗೆಯಿಂದ ಇರುವುದು ನೋಡಿ ಕಾನ್‌ಸ್ಟೇಬಲ್‌ಗೆ ಸಹಿಸಲಾಗಲಿಲ್ಲ.

ಅವರಿಬ್ಬರ ಮಧ್ಯೆ ಜಗಳ ತಾರಕಕ್ಕೇರಿದೆ. ಆಗ ರಾಣಿ ಕೂಡಾ ಬಿಡಲಿಲ್ಲ. ನನ್ನ ಬಗ್ಗೆ ಪ್ರಶ್ನೆ ಮಾಡಿದರೆ ನಿನ್ನನ್ನು ಜೀವಂತ ಬಿಡಲ್ಲ, ಪೆಟ್ರೋಲ್‌ ಹಾಕಿ ಸುಟ್ಟು ಹಾಕುತ್ತೇನೆ ಎಂದಿದ್ದಾಳೆ. ಅವರಿಬ್ಬರ ಮಧ್ಯ ಪಂಥಾಹ್ವಾನ ನಡೆದಿದೆ.

Police murder Case Sanjay and Rani1.webp

ಈ ನಡುವೆ, ಕಾನ್ಸ್‌ಟೇಬಲ್‌ ಸಂಜಯ್‌ ಪೆಟ್ರೋಲ್‌ ಪಂಪ್‌ಗೆ ಹೋದವನೇ ಒಂದು ಲೀಟರ್‌ ಪೆಟ್ರೋಲ್‌ ಹಿಡಿದುಕೊಂಡುಬಂದಿದ್ದಾನೆ. ಅದನ್ನು ಆಕೆಯ ಮುಂದೆ ಇಟ್ಟು ತಾಕತ್ತಿದ್ದರೆ ಬೆಂಕಿ ಹಚ್ಚು ನೋಡೋಣ ಎಂದಿದ್ದಾನೆ. ಇದನ್ನೇ ಸವಾಲಾಗಿ ಸ್ವೀಕರಿಸಿದ ರಾಣಿ ಪೆಟ್ರೋಲನ್ನು ಸಂಜಯ್‌ ಬೆನ್ನಿಗೆ ಸುರಿದು ಬೆಂಕಿ ಹಚ್ಚೇಬಿಟ್ಟಿದ್ದಾಳೆ.

ಅಷ್ಟು ಹೊತ್ತಿಗೆ ಆಕೆಗೆ ಜ್ಞಾನೋದಯ ಆಗಿದೆ. ಕೂಡಲೇ ಆಕೆ ನೀರು ಹಾಕಿ ಬೆಂಕಿ ನಂದಿಸಿ ತನ್ನ ವಾಹನದಲ್ಲಿ ಸಂಜಯ್‌ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾಳೆ. ಅಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂಬ ನಾಟಕ ಆಡಿದ್ದಾಳೆ. ಪೊಲೀಸರ ತನಿಖೆ ವೇಳೆ ಈಕೆ ಹೋಮ್‌ ಗಾರ್ಡ್‌ ಮತ್ತು ಅವನು ಪೊಲೀಸ್‌ ಎನ್ನುವುದು ಹಾಗೂ ಅವರಿಬ್ಬರ ಲವ್‌ ಸ್ಟೋರಿ ಬಯಲಾಗಿದೆ.

ಇದನ್ನೂ ಓದಿ: Murder Case : ಅನೈತಿಕ ಸಂಬಂಧದ ಸಂಶಯ; ಪತಿಯ ಎದೆಗೇ ಚೂರಿ ಹಾಕಿ ಕೊಂದ ಪತ್ನಿ

ಪ್ರಾಣವನ್ನೇ ಕಳೆದುಕೊಂಡ ಸಂಜಯ್‌

ಈ ನಡುವೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿಯ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಸಂಜಯ್‌ ಈಗ ಚಿಕಿತ್ಸೆ ಫಲಕಾರಿಯಾಗದೆ ಪ್ರಾಣ ಬಿಟ್ಟಿದ್ದಾನೆ. ಕಾಮದ ಬೆನ್ನು ಹತ್ತಿ ಹೋಗಿ, ಬಳಿಕ ವಿಪರೀತ ಪೊಸೆಸಿವ್‌ನೆಸ್‌ನಿಂದಾಗಿ ಒಂದು ಜೀವವೇ ಹೋಗಿದೆ. ಇದೀಗ ಪೊಲೀಸರು ರಾಣಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗಿದೆ.

ಒಬ್ಬನೇ ಮಗನನ್ನು ಕಳೆದುಕೊಂಡ ಹೆತ್ತವರು

ಸಂಜಯ್‌ ತಂದೆ ರಾಜಣ್ಣ ಮತ್ತು ಶಿವರತ್ನಮ್ಮ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದು, ಮಗನನ್ನು ಕಳೆದುಕೊಂಡ ದುಖದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಚೆನ್ನರಾಯಪಟ್ಟಣದ ಈ ದಂಪತಿಗೆ ಸಂಜಯ್‌ ಒಬ್ಬನೇ ಮಗ. ಉಳಿದ ಮೂರು ಜನ ಹೆಣ್ಣು ಮಕ್ಕಳು. ಆತ ಪೊಲೀಸ್‌ ಇಲಾಖೆಗೆ ಸೇರಿ ಆರು ವರ್ಷವಾಗಿದೆ. ಈಗ ಕುಟುಂಬ ತನಗೆ ಆಸರೆಯಾದ ಮಗನನ್ನು ಕಳೆದುಕೊಂಡಿದೆ. ಸಂಜಯ್‌ ಕಳೆದ ಮೂರು ತಿಂಗಳಿನಿಂದ ವಿಶೇಷ ಕರ್ತವ್ಯದಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದ.

ರಾಣಿ ಮೂಲತಃ ಮಂಡ್ಯದವಳು. ಹೋಮ್‌ ಗಾರ್ಡ್‌ ಆಗಿದ್ದು ಸದ್ಯ ಬೆಂಗಳೂರಿನ ಅಷ್ಟಲಕ್ಷ್ಮಿ ಲೇಔಟ್‌ನಲ್ಲಿ ವಾಸವಾಗಿದ್ದಾಳೆ. ಆಕೆ ಬೆಳಂದೂರಿನ ಎಸ್‌ಐಎಸ್‌ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿದ್ದಾಳೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!

Black Magic : ಬೆಳ್ತಂಗಡಿ ಸಮೀಪದಲ್ಲಿ ಭಯಂಕರವಾಗಿ ವಾಮಾಚಾರ ಪ್ರಯೋಗ ಮಾಡಲಾಗಿದೆ. ಬರೋಬ್ಬರಿ 25 ಆಡುಗಳ ರುಂಡ ಕತ್ತರಿಸಿ ಬಳಿಕ ಮೊಳೆ ಹೊಡೆದು ವ್ಯಕ್ತಿಗಳ ಫೋಟೋ ಹಾಕಿದ್ದಾರೆ.

VISTARANEWS.COM


on

By

black magic
Koo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ವಾಮಾಚಾರ ಪ್ರಕರಣವೊಂದು (Black Magic ) ನಡೆದಿದೆ. 25 ಸತ್ತ ಆಡಿನ ತಲೆಯೊಂದಿಗೆ ವ್ಯಕ್ತಿಗಳ ಭಾವ ಚಿತ್ರ ಬಳಸಿ ಕೃಷಿ ತೋಟದ ಗೇಟ್ ಮುಂಭಾಗ ವಾಮಾಚಾರ ನಡೆಸಲಾಗಿದೆ.

ದಕ್ಷಿಣ ಕನ್ನಡದ ಬೆಳ್ತಂಗಡಿಯ ಗರ್ಡಾಡಿಯ ಬೋಳಿಯಾರ್‌ನಲ್ಲಿ ವಾಮಾಚಾರ ನಡೆಸಲಾಗಿದೆ. ಜಾಗದ ತಕರಾರು ಹಿನ್ನೆಲೆಯಲ್ಲಿ ವಾಮಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಕೃಷಿ ತೋಟ ಮುಂಭಾಗ ಸತ್ತ ಆಡಿನ ತಲೆಗಳು ಹಾಗು ವ್ಯಕ್ತಿಗಳ ಭಾವಚಿತ್ರ ಪತ್ತೆಯಾಗಿದೆ.

ಆಡಿನ ತಲೆಗೆ ಹಲವು ಜನರ ಭಾವಚಿತ್ರವನ್ನು ಮೊಳೆ ಹೊಡೆದು ಮಾಟ ಮಂತ್ರ ಮಾಡಲಾಗಿದೆ. ಸಮಾಜದ ಕೆಲ ಗಣ್ಯ ವ್ಯಕ್ತಿಗಳ ಫೋಟೋ ಕೂಡ ಬಳಕೆ ಮಾಡಲಾಗಿದೆ. ಜಾಗದ ಮಾಲೀಕರಾದ ಗೋಪು ಕುಮಾರ್ ಹಾಗು ಸುಮೇಶ್ ವಿರುದ್ಧ ವಾಮಾಚಾರ ನಡೆದಿದೆ. ಮಂಗಳೂರಿನ ರಾಜೇಶ್ ಪ್ರಭು ಎಂಬಾತನೇ ಇದನ್ನಲ್ಲೆ ಮಾಡಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ರಾಜೇಶ್ ಪ್ರಭು ಹಾಗು ಗೋಪು ಕುಮಾರ್ ನಡುವೆ ಜಾಗದ ತಕರಾರು ಇತ್ತು. ರಾಜೇಶ್ ಪ್ರಭು ವಿರುದ್ಧ ಕಾನೂನು ಹೋರಾಟಕ್ಕೆ ಗೋಪು ಕುಮಾರ್ ಹಾಗು ಸಂಗಡಿಗರು ಮುಂದಾಗಿದ್ದರು. ಇದೆ ಕಾರಣಕ್ಕೆ ಗೋಪು ಕುಮಾರ್ ಸಹಿತ ಬೆಂಬಲಿಸಿದವರ ವಿರುದ್ಧವು ವಾಮಾಚಾರ ಪ್ರಯೋಗ ಮಾಡಲಾಗಿದೆ.

ಸ್ಥಳದಲ್ಲಿ 25 ಆಡಿನ ತಲೆಗಳು, ಮೊಟ್ಟೆ, ಮರದ ಪ್ರತಿಕೃತಿ, ಭಾವಚಿತ್ರ, ಹೂವು ಪತ್ತೆಯಾಗಿದೆ. ತೋಟದ ಬಳಿ ಆಗಮಿಸುವ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಕೃತ್ಯ ನಡೆಸಿದವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Actor Darshan: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

Actor Darshan
ಹತ ರೇಣುಕಾಸ್ವಾಮಿ ಹಾಗೂ ದರ್ಶನ್.
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ‌(ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು) ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಆರೋಪದಲ್ಲಿ ರೇಣುಕಾಸ್ವಾಮಿ (28) ಎಂಬ ಯುವಕನನ್ನು ಹತ್ಯೆಗೈದ ಆರೋಪದಲ್ಲಿ ದರ್ಶನ್‌ (Actor Darshan Arrested) ಅವರನ್ನು ಬಂಧಿಸಲಾಗಿದೆ. ಮೈಸೂರಿನಲ್ಲಿರುವ ನಟನ ಫಾರ್ಮ್‌ಹೌಸ್‌ನಲ್ಲಿ ದರ್ಶನ್‌ ಅವರನ್ನು ಬಂಧಿಸಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ದರ್ಶನ್‌ ಅವರನ್ನು ವಶಪಡಿಸಿಕೊಂಡಿರುವ ಕುರಿತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಅವರು ಮಾಹಿತಿ ನೀಡಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಪ್ರಕರಣ ಭೇದಿಸಿದ್ದು ಹೇಗೆ?

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

Continue Reading

ಸಿನಿಮಾ

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ ಇದೆ ಎಂದು ಪತ್ನಿ ಶ್ರೀದೇವಿ ಆರೋಪ ಮಾಡಿದ್ದರು. ಇದೀಗ ಶ್ರೀದೇವಿ ವಿರುದ್ಧ ತಿರುಗಿ ಬಿದ್ದಿರುವ ಸಪ್ತಮಿ ಗೌಡ ಕುಟುಂಬಸ್ಥರು ಮಾನಹಾನಿ ಕೇಸ್‌ ದಾಖಲಿಸಲು ಮುಂದಾಗಿದ್ದಾರೆ.

VISTARANEWS.COM


on

By

Saptami Gowda
Koo

ಬೆಂಗಳೂರು: ನಟ ಯುವ ರಾಜ್‌ಕುಮಾರ್‌ (Yuva Rajkumar) ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು. ಇದರ ಬೆನ್ನಲ್ಲೇ ಶ್ರೀದೇವಿ ವಿರುದ್ಧ ಕಾನೂನು ಹೋರಾಟಕ್ಕೆ ಸಪ್ತಮಿ ಗೌಡ ಕುಟುಂಬ ನಿರ್ಧರಿಸಿದೆ.

ಯುವ ರಾಜ್‌ಕುಮಾರ್ ಪರ ವಕೀಲ ನೀಡಿದ ನೋಟೀಸ್‌ಗೆ ತಿರುಗೇಟು ನೀಡಿದ ಶ್ರೀದೇವಿ, ಯುವ ರಾಜಕುಮಾರ್ ಹಾಗೂ ಸಪ್ತಮಿ ಗೌಡ ರೂಮ್‌ನಲ್ಲಿ ಇದ್ದರು ಎಂದು ಉಲ್ಲೇಖಿಸಿದ್ದರು. ಹೀಗಾಗಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್ ದಾಖಲಿಸುವ ಬಗ್ಗೆ ಸಪ್ತಮಿ ಗೌಡ ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸಪ್ತಮಿ ಗೌಡ ತಂದೆ ಎಸ್‌ಕೆ ಉಮೇಶ್‌ ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ನೋಟಿಸ್‌ನಲ್ಲಿ ಸುಳ್ಳು ಆರೋಪ- ಶ್ರೀದೇವಿ ಪರ ವಕೀಲ

ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂದು ಯುವ ಪರ ವಕೀಲ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೆ ಶ್ರೀದೇವಿ ಕ್ಯಾರೆಕ್ಟರ್ ಬಗ್ಗೆ ಏನೇನೋ ಆರೋಪ ಮಾಡಿದ್ದಾರೆ ಆದರೆ ಅದೆಲ್ಲವೂ ಸುಳ್ಳು ಎಂದು ಶ್ರೀದೇವಿ ಪರ ವಕೀಲ ಪಿ.ಭಾಸ್ಕರ್ ರಾವ್ ಪ್ರತಿಕ್ರಿಯಿಸಿದ್ದಾರೆ.

ಯುವ ರಾಜ್‌ಕುಮಾರ್ ನೋಟಿಸ್‌ಗೆ ಉತ್ತರ ಕೊಡಬೇಕಿತ್ತು. ಆದರೆ ಶ್ರೀದೇವಿ ಮೈಸೂರಿಗೆ ಬಂದ ಮೇಲೆ ಮಾತನಾಡಿ ರಿಪ್ಲೈ ಮಾಡುತ್ತೇನೆ. ನೋಟಿಸ್‌ನಲ್ಲಿ ಸುಳ್ಳು ಆರೋಪ ಮಾಡಿದ್ದಾರೆ. ಅದೆಲ್ಲವನ್ನೂ ಸುಳ್ಳು ಎಂದು ಸಾಬೀತು ಮಾಡಲು ಅವಕಾಶವಿದೆ. ಹಣಕಾಸಿನ ವಹಿವಾಟು ಬೇರೆ, ದಾಂಪತ್ಯ ಬೇರೆ, ಇದೊಂದು ವೈಯುಕ್ತಿಕವಾದ ಪ್ರಕರಣವಾಗಿದೆ. ಯುವ ರಾಜ್ ಕುಮಾರ್ ವಕೀಲರು ಬಹಿರಂಗವಾಗಿ ಮಾತನಾಡಬಾರದಿತ್ತು ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ?

ಬೆಂಗಳೂರು: ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದಾರೆ. ಆ ಮೂಲಕ ಡಿವೋರ್ಸ್‌ ಪ್ರಕರಣವೀಗ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಹೌದು, ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಭೈರಪ್ಪ ಮರುತ್ತರ ನೀಡಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಇದೇ ವರ್ಷದ ಮೇ 30ರಂದು ಶ್ರೀದೇವಿ ಭೈರಪ್ಪ ಅವರು ರಿಪ್ಲೈ ನೋಟಿಸ್‌ ನೀಡಿದ್ದಾರೆ. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದಾರೆ.

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದಾರೆ.

ಲೀಗಲ್‌ ನೋಟಿಸ್‌ಗೆ ಶ್ರೀದೇವಿ ರಿಪ್ಲೈ

ಯುವ ಪರ ವಕೀಲರು ಹೇಳಿದ್ದೇನು?

ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Actor Darshan: ದರ್ಶನ್‌ ಅವರಿಗೆ ಆತ್ಮೀಯರಾಗಿರುವ ನಟಿ ಪವಿತ್ರಾ ಗೌಡ ಅವರ ಫೋಟೊಗಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಕೆಲವು ದಿನಗಳ ಹಿಂದೆ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್‌ ಮಾಡಲಾಗಿದೆ. ಹಾಗಾದರೆ ಯಾರು ಈ ಪವಿತ್ರಾ ಗೌಡ? ಇಲ್ಲಿದೆ ಉತ್ತರ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪೊಲೀಸರು ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಅವರನ್ನು ಬಂಧಿಸಿದ್ದಾರೆ. ದರ್ಶನ್‌ ಅವರಿಗೆ ಆತ್ಮೀಯರಾಗಿರುವ ನಟಿ ಪವಿತ್ರಾ ಗೌಡ ಅವರ ಫೋಟೊಗಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಕೆಲವು ದಿನಗಳ ಹಿಂದೆ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಹಾಗಾದರೆ ಪವಿತ್ರಾ ಗೌಡ ಯಾರು?

ಫ್ಯಾಷನ್‌ ಡಿಸೈನರ್‌ ಎಂದೆನಿಸಿಕೊಂಡಿರುವ ಪವಿತ್ರಗೌಡ ಅವರು ದರ್ಶನ್‌ ಜತೆ ಆತ್ಮೀಯರಾಗಿದ್ದಾರೆ. ಇವರು ಬೆಂಗಳೂರಿನ ಆರ್.ಆರ್. ನಗರದಲ್ಲಿ ʼರೆಡ್ ಕಾರ್ಪೆಟ್ʼ ಹೆಸರಿನಲ್ಲಿ ಬೋಟಿಕ್ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ದರ್ಶನ್ ಜತೆ ಸ್ನೇಹ ಸಂಬಂಧದಲ್ಲಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಅವರು ದರ್ಶನ್‌ ಜತೆ ಇರುವ ಹಲವು ಫೋಟೊಗಳ ರೀಲ್ಸ್‌ ಹಂಚಿಕೊಂಡು ʻನಮ್ಮ ಸಂಬಂಧಕ್ಕೆ 10 ವರ್ಷಗಳಾಗಿವೆʼ ಎಂದು ಕ್ಯಾಪ್ಷನ್‌ ಕೊಟ್ಟು ಶೇರ್‌ ಮಾಡಿಕೊಂಡಿದ್ದರು. ಇದಾದ ಬಳಿಕ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದರು. ಈ ವಿಚಾರ ಭಾರೀ ಸದ್ದು ಮಾಡಿತ್ತು.

ನಟಿಯೂ ಹೌದು

ಪವಿತ್ರಾ ಗೌಡ ಅವರು ಮಾಡೆಲ್‌ ಹಾಗೂ ನಟಿಯೂ ಹೌದು. ʼಅಗಮ್ಯಾʼ, ʼಛತ್ರಿಗಳು ಸಾರ್ ಛತ್ರಿಗಳುʼ, ʼಸಾಗುವ ದಾರಿʼ, ʼಪ್ರೀತಿ ಕಿತಾಬುʼ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಮುಂಚೆ ಪವಿತ್ರಾ ಅವರು ದರ್ಶನ್‌ ಅವರ ತಾಯಿ ಹಾಗೂ ಸಹೋದರಿ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದ್ದವು. ಇದಾದ ಮೇಲೆ ದರ್ಶನ್‌ ಸಿನಿಮಾ ಸೆಟ್‌ಗಳಲ್ಲಿ ಪವಿತ್ರಾ ಅವರು ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದೂ ಇದೆ. ಕಳೆದ ವರ್ಷ ದರ್ಶನ್‌ ಅವರ ಜನುಮದಿನ ನಟಿ ಮೇಘಾ ಶೆಟ್ಟಿ ಹಂಚಿಕೊಂಡಿದ್ದ ಚಿತ್ರದಲ್ಲಿ ದರ್ಶನ್ ಜತೆಗೆ ಪವಿತ್ರಾ ಕೂಡ ಇದ್ದರು. ಈ ವೇಳೆ ಮೊದಲ ಬಾರಿಗೆ ಇದರ ವಿರುದ್ಧ ಬಹಿರಂಗವಾಗಿ ಧ್ವನಿ ಎತ್ತಿದ್ದ ದರ್ಶನ್​ ಅವರ ಪತ್ನಿ ವಿಜಯಲಕ್ಷ್ಮೀ ಅವರು ಮೇಘಾ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಇದಾದ ಬಳಿಕ ಮೇಘಾ ಶೆಟ್ಟಿ ಫೋಟೊ ಡಿಲಿಟ್‌ ಮಾಡಿದ್ದರು.

ಪವಿತ್ರಾ ಗೌಡ ಅವರಿಗೆ ಖುಷಿ ಎಂಬ ಮಗಳಿದ್ದಾಳೆ. ಕೆಲ ತಿಂಗಳ ಹಿಂದಷ್ಟೆ ಪುತ್ರಿ ಜತೆ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ವಿಡಿಯೋ ಹಂಚಿಕೊಂಡಿದ್ದರು.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

ಯಾರು ಈ ರೇಣುಕಾಸ್ವಾಮಿ?

ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು. ಇದರಿಂದ ಕುಪಿತಗೊಂಡಿದ್ದ ದರ್ಶನ್‌ ಅವರು ಹಲವರೊಂದಿಗೆ ತೆರಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿತ್ತು. ಕೊಲೆ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ತಿಂಗಳ ಹಿಂದೆ ಹತ್ಯೆ ಮಾಡಲಾಗಿತ್ತು.

Continue Reading
Advertisement
black magic
ದಕ್ಷಿಣ ಕನ್ನಡ22 seconds ago

Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!

Kamran Akmal
ಕ್ರಿಕೆಟ್7 mins ago

Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್

Actor Darshan
ಕರ್ನಾಟಕ12 mins ago

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Saptami Gowda
ಸಿನಿಮಾ28 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Actor Darshan
ಸಿನಿಮಾ37 mins ago

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Actor Darshan
ಪ್ರಮುಖ ಸುದ್ದಿ59 mins ago

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

All Eyes on Raesi
ದೇಶ1 hour ago

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

IND vs PAK
ಕ್ರೀಡೆ1 hour ago

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

Gold Rate Today
ಪ್ರಮುಖ ಸುದ್ದಿ1 hour ago

Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

Virat Kohli
ಕ್ರೀಡೆ2 hours ago

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Saptami Gowda
ಸಿನಿಮಾ28 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಟ್ರೆಂಡಿಂಗ್‌