Site icon Vistara News

Love Case : ಪ್ರೀತಿಯ ಮೋಸದಾಟಕ್ಕೆ ಮನನೊಂದು ವಿಷ ಸೇವಿಸಿದ ವಿದ್ಯಾರ್ಥಿನಿ ಸಾವು

Asha and manjunath

ಹಾಸನ: ಪ್ರಿಯಕರನ ವಂಚನೆ (Love Case) ಹಾಗೂ ಕೊಲೆ ಬೆದರಿಕೆಗೆ ಹೆದರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ (Hassan News) ಬೇಲೂರು ತಾಲೂಕಿನ ಬೆಳ್ಳೊಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಶಾ (20) ಮೃತ ದುರ್ದೈವಿ.

ಬೇಲೂರು ಪಟ್ಟಣದ ವೈಡಿಡಿ ಕಾಲೇಜಿನಲ್ಲಿ ಆಶಾ ದ್ವಿತೀಯ ಬಿಕಾಂ ಓದುತ್ತಿದ್ದಳು. ಈ ನಡುವೆ ಆಲೂರು ತಾಲೂಕಿನ ಕಾಟೀಹಳ್ಳಿ ಗ್ರಾಮದ ಮಂಜುನಾಥ್‌ ಅದೇ ಕಾಲೇಜಿನ ದ್ವಿತೀಯ ಬಿಎ ಓದುತ್ತಿದ್ದ. ಮಂಜುನಾಥ್‌ ಹೇಗೋ ಆಶಾಳನೊಂದಿಗೆ ಸ್ನೇಹವನ್ನು ಬೆಳಸಿ ಅದು ಪ್ರೀತಿಗೆ ತಿರುಗಿತ್ತು.

ಇದನ್ನೂ ಓದಿ: Belgavi News : ಹನಿಟ್ರ್ಯಾಪ್‌ ಮಾಡಿದಳೆಂದು ಚಪ್ಪಲಿ ಹಾರ ಹಾಕಿ ಮೆರವಣಿಗೆ!

ಆದರೆ ಈ ನಡುವೆ ಮಂಜುನಾಥ್‌ ಬೇರೊಂದು ಹುಡುಗಿಯ ಸಹವಾಸ ಮಾಡಿದ್ದ. ಆಕೆಯೊಂದಿಗೆ ಸುತ್ತಾಡುತ್ತಿದ್ದ. ಇದರಿಂದ ಸಿಟ್ಟಾದ ಆಶಾ, ಮಂಜುನಾಥನ ಬಳಿ ಈ ಬಗ್ಗೆ ಪ್ರಶ್ನಿಸಿದ್ದಾಳೆ. ಈ ವೇಳೆ ಮಂಜುನಾಥ್‌ ನನ್ನೊಂದಿಗೆ ನೀನು ಸುತ್ತಾಡಿರುವ ಫೋಟೊ, ಮೆಸೇಜ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಜತೆಗೆ ಕೊಲೆ ಬೆದರಿಕೆ ಹಾಕಿದ್ದಾನೆ.

ಇದರಿಂದ ಮನನೊಂದ ಆಶಾ ಕಾಲೇಜಿನ ಬಳಿ ಅಕ್ಟೋಬರ್ 6 ರಂದು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಮಂಜುನಾಥ್‌ ಆಶಾಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಆಶಾ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ (ಅ.13) ಮೃತಪಟ್ಟಿದ್ದಾಳೆ.

ಆಶಾ ತಂದೆ ರಾಮಯ್ಯ ಅವರು ಮಂಜುನಾಥನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬೇಲೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version