Lover and Friend : ಇವನೆಂಥಾ ಪ್ರೇಮಿ! ಗೆಳೆಯ ಕೇಳಿದನೆಂದು ಪ್ರಿಯತಮೆಯನ್ನೇ ಬಿಟ್ಕೊಟ್ಟ! - Vistara News

ಕರ್ನಾಟಕ

Lover and Friend : ಇವನೆಂಥಾ ಪ್ರೇಮಿ! ಗೆಳೆಯ ಕೇಳಿದನೆಂದು ಪ್ರಿಯತಮೆಯನ್ನೇ ಬಿಟ್ಕೊಟ್ಟ!

Love and Friend: ಇನ್ನೊಬ್ಬ ಅಮರ ಪ್ರೇಮಿ ತಾನು ಪ್ರೀತಿಸಿದ ಹುಡುಗಿಯನ್ನೇ ತನ್ನ ಗೆಳೆಯನಿಗೆ ಬಿಟ್ಟುಕೊಟ್ಟಿದ್ದಾನೆ! ಇದು ತ್ಯಾಗ ಅಂತ ನೀವಂದುಕೊಂಡರೆ.. ಅಲ್ವೇ ಅಲ್ಲ. ಆ ಗೆಳೆಯ ಮಾಡಿದ್ದೇನು ಅಂತ ಮೊದಲು ಓದಿ ಆಮೇಲೆ ಇದೆಂಥಾ ಕಥೆ ಅಂತ ನಿಮಗೇ ಗೊತ್ತಾಗುತ್ತದೆ.

VISTARANEWS.COM


on

man leaves his lover for friend
ಎಲ್ಲ ಚಿತ್ರಗಳು ಪ್ರಾತಿನಿಧಿಕ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೀವು ಪುನೀತ್‌ ರಾಜ್‌ ಕುಮಾರ್‌ (Punit Rajkumar) ಅಭಿನಯದ ಅರಸು ಸಿನಿಮಾ (Arasu movie) ನೋಡಿರಬಹುದು. ಅದರಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರು ತನ್ನನ್ನು ತುಂಬ ಪ್ರೀತಿಸುತ್ತಿದ್ದ, ಪ್ರೀತಿಗಾಗಿ ಯಾವ ತ್ಯಾಗವನ್ನೂ ಮಾಡಲು ಸಿದ್ಧರಿದ್ದ ಇಬ್ಬರು ಲವರ್ಸ್‌ ಕಂ ಗೆಳತಿಯರನ್ನು ಬೇರೆಯವರಿಗೆ ಮದುವೆ ಮಾಡಿಕೊಡುವ ಸನ್ನಿವೇಶವಿದೆ. ಇಲ್ಲೊಬ್ಬ ಯುವಕ ಅದೇ ರೀತಿ ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನೇ (Lover and Friend) ಇನ್ನೊಬ್ಬನಿಗೆ ಧಾರೆ ಎರೆಯಲು ಮುಂದಾಗಿದ್ದಾನೆ (Transfering lover to Male friend). ಆದರೆ, ಈ ಇಲ್ಲಿ ನಡೆದಿರುವುದು ಮಾತ್ರ ಪ್ರೀತಿಯಲ್ಲ, ಔದಾರ್ಯವಲ್ಲ.. ಪಕ್ಕಾ ಫೋರ್ ಟ್ವೆಂಟಿ ಕೆಲಸ! ಫುಲ್‌ ಖತರ್ನಾಕ್‌ ಪ್ಲ್ಯಾನ್‌!

Arasu film Love story

ಇದು ರಾಮನಗರದ ಐಜೂರಿನಲ್ಲಿ ನಡೆದ ಘಟನೆ. ಅವನ ಹೆಸರು ಮಂಜು. ವಯಸ್ಸು 21 ವರ್ಷ. ಅದೂ ಇದೂ ಕೆಲಸ ಮಾಡಿಕೊಂಡಿದ್ದ ಮಂಜು ನೋಡೋಕೆ ಚೆನ್ನಾಗಿದ್ದ. ಸ್ಟೈಲಾಗಿ ಡ್ರೆಸ್‌ ಮಾಡಿಕೊಂಡು ಅಟ್ರಾಕ್ಟ್‌ ಮಾಡುತ್ತಿದ್ದ ಆತ ಹುಡುಗಿಯರನ್ನು ಬಲೆಗೆ ಹಾಕಿಕೊಳ್ಳೋದರಲ್ಲೂ ಪಂಟರು.

Love story

ಹಾಗೆ ಅವನ ಬಲೆಗೆ ಬಿದ್ದವಳು ಐಜೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಒಬ್ಬಳು ಯುವತಿ. ಅದು ಹೇಗೆ ಕನೆಕ್ಟ್‌ ಆಯಿತೋ ಗೊತ್ತಿಲ್ಲ. ಪರಿಚಯವಾದ ಕೆಲವೇ ದಿನಗಳಲ್ಲಿ ದೇಹವೆರಡು ಜೀವ ಒಂದು ಎಂಬಷ್ಟು ಹತ್ತಿರವಾದರು! ಹಲವು ಬಾರಿ ಭೇಟಿ ಮಾಡಿದ್ದರು. ಜತೆಗೆ ಫೋಟೊ ತೆಗೆಸಿಕೊಂಡಿದ್ದರು. ಐಸ್‌ ಕ್ರೀಂ, ಫಿಜ್ಜಾ ಅಂತ ಒಂದೇ ತಟ್ಟೆಯಲ್ಲಿ ಹಂಚಿಕೊಂಡಿದ್ದರು.

ಮಂಜುಗೊಬ್ಬ ಸ್ನೇಹಿತ ಇದ್ದ, ಹೆಸರು ರವಿ

ಇಂಥ ಮಂಜುಗೆ ಒಬ್ಬ ಫ್ರೆಂಡ್‌ ಇದ್ದ. ಹಸರು ರವಿ. ವಯಸ್ಸು 33. ಅವರಿಬ್ಬರು ಒಂದೇ ಊರಿನವರು. ಈ ಮಂಜು ಹುಡುಗಿಯರ ಜತೆಗಿನ ತನ್ನ ಸಾಹಸದ ಕಥೆಗಳನ್ನೆಲ್ಲ ರವಿ ಜತೆಗೆ ಹೇಳುತ್ತಿದ್ದ. ಇವತ್ತು ಅವಳನ್ನು ಪಟಾಯಿಸಿದೆ, ಅವಳು ಹಂಗಂದ್ಲು, ಅವಳು ಹಾಗಿದ್ದಾಳೆ ಎಂದೆಲ್ಲ ವಿವರಣೆ ನೀಡುತ್ತಿದ್ದ. ಹಾಗೆ ಈ ಹುಡುಗಿಯ ವಿಚಾರವನ್ನೂ ಹೇಳಿದ್ದ.

Love story1

ಹುಡುಗಿಯ ಜತೆಗೆ ತಾನಿರುವ ಫೋಟೊಗಳು, ಆತ್ಮೀಯ ಕ್ಷಣಗಳ ಚಿತ್ರಗಳನ್ನೆಲ್ಲ ಮಂಜು ರವಿಗೆ ತೋರಿಸಿದ್ದಾನೆ. ರವಿ ಕೂಡಾ ಅವರಿಬ್ಬರು ಜತೆಯಾಗಿ ಓಡಾಡುವುದನ್ನು ನೋಡಿದ್ದ. ಈ ಹೊತ್ತಿನಲ್ಲಿ ರವಿಗೆ ಒಂದು ಯೋಚನೆ ಬಂದಿದೆ. ನೀನು ನಿನ್ನ ಗರ್ಲ್‌ಫ್ರೆಂಡನ್ನು ನನಗೆ ಬಿಟ್ಟುಕೊಡ್ತೀಯಾ ಎಂದು ಕೇಳಿದ್ದಾನೆ. ನಿನಗಾದರೋ ಎಷ್ಟು ಹುಡುಗಿಯರನ್ನು ಬೇಕಾದರು ಪಟಾಯಿಸೋ ತಾಕತ್ತಿದೆ. ಇವಳನ್ನು ಬಿಟ್ಟುಕೊಡು ಅಂದಿದ್ದಾನೆ. ಅದಕ್ಕೆ ಉಬ್ಬಿ ಹೋದ ಮಂಜು ʻತಗೋ ಅವಳನ್ನುʼ ಅಂದಿದ್ದಾನೆ! ರವಿ ಅವಳನ್ನು ಮದುವೆ ಮಾಡಿಕೊಳ್ಳುವುದು ಎಂದು ತೀರ್ಮಾನವಾಗಿದೆ.

ಗೆಳೆಯನಾಗಿ ಗರ್ಲ್‌ಪ್ರೆಂಡನ್ನೇ ತ್ಯಾಗ ಮಾಡುವ ತ್ಯಾಗವೀರನಾಗಿ ಮೆರೆಯುವ ಉದ್ದೇಶದಿಂದ ಮಂಜು ಹುಡುಗಿಯನ್ನು ಬಿಟ್ಟುಕೊಡ್ತೀನಿ ಅಂದಿದ್ದಾನೆ!

ನೀನು ಅವನ ಜತೆ ಹೋಗು ಅಂದ!

ಈ ನಡುವೆ, ಮಂಜು ತನ್ನ ಪ್ರೇಯಸಿಯನ್ನು ಗೆಳೆಯನ ಜತೆ ಕಳುಹಿಸಲು ಪ್ಲ್ಯಾನ್‌ ಮಾಡಿದ್ದಾನೆ. ನಿಜವಾಗಿ ಒಬ್ಬ ಗೆಳತಿಯನ್ನು ಇನ್ನೊಬ್ಬ ಗೆಳೆಯನಾಗಿ ಬಿಟ್ಟು ಕೊಡುವುದೇ ಆದರೂ ಅದೊಂದು ಸ್ಮೂತ್‌ ಟ್ರಾನ್ಸಿಷನ್‌ ಆಗಬೇಕು. ತನ್ನ ಉಪಸ್ಥಿತಿಯಲ್ಲಿ ಅವರಿಬ್ಬರನ್ನು ಭೇಟಿ ಮಾಡಿಸಬೇಕು. ಅವರಿಬ್ಬರಿಗೆ ಮಾತನಾಡಲು ಅವಕಾಶ ಕೊಡಬೇಕು. ನನಗಿಂತಲೂ ನಿನಗೆ ಅವನೇ ಉತ್ತಮ ಲವರ್‌ ಆಗಬಲ್ಲ ಎಂದು ತೋರಿಸಬೇಕು. ಬಳಿಕವಷ್ಟೇ ಪ್ರೀತಿ, ತ್ಯಾಗ ಎಲ್ಲ. ಅದಕ್ಕೆ ಅವಳ ಒಪ್ಪಿಗೆಯಂತೂ ಬೇಕೇಬೇಕು.

ಆದರೆ, ಇಲ್ಲಿ ಈ ಮಂಜು ಮಾಡಿದ್ದೇನೆಂದರೆ, ನೀನು ನನ್ನ ಲವರ್‌ ಅಲ್ವಾ? ನಾನು ಹೇಳಿದಂತೆ ಕೇಳು. ನಾಳೆಯಿಂದ ನೀನು ನನ್ನ ಗೆಳೆಯನ ಲವರ್‌ ಆಗಬೇಕು ಅಂತ ಹೇಳುವಷ್ಟು ಸಲೀಸಾಗಿ, ಒಬ್ಬ ಹುಡುಗಿಯನ್ನು ಅಂಗಡಿಯಲ್ಲಿ ಸಿಗುವ ಗೊಂಬೆಯ ಹಾಗೆ ಹಸ್ತಾಂತರ ಮಾಡಲು ಮುಂದಾಗಿದ್ದಾನೆ!

ಭೇಟಿಯಾಗಬೇಕು ಬಾ ಅಂದ! ಅವನ ಜತೆ ಹೋಗು ಅಂದ!

ಮಂಜು ತನ್ನ ಪ್ರೇಯಸಿಗೆ ಕರೆ ಮಾಡಿ ಸೆಪ್ಟೆಂಬರ್‌ 19ರಂದು ಸಿಗ್ತೀಯಾ ಎಂದು ಕೇಳಿದ್ದಾನೆ. ನಿಜವೆಂದರೆ ಆಗ ಅವಳಿಗೆ ಎಕ್ಸಾಂಗಳು ನಡೆಯುತ್ತಿದ್ದವು. ಸೆ. 19 ಕೊನೆಯ ಎಕ್ಸಾಂ ಇತ್ತು. ಎಕ್ಸಾಂ ಕಾರಣದಿಂದ ಅವರಿಬ್ಬರು ಭೇಟಿಯಾಗಿರಲಿಲ್ಲ. ಹೀಗಾಗಿ ಎಕ್ಸಾಂ ಮುಗಿಸಿ ಭೇಟಿಯಾಗಲು ಆಕೆ ತುದಿಗಾಲಲ್ಲಿ ನಿಂತಿದ್ದಳು.

Girl writing exam

ಆವತ್ತು ಆಕೆಯ ಭೇಟಿಯ ಉತ್ಸಾಹ ಎಷ್ಟಿತ್ತೆಂದರೆ ಎಕ್ಸಾಂನ್ನು ಅರ್ಧದಲ್ಲೇ ಮುಗಿಸಿ ಮಂಜುಗಾಗಿ ಅವನು ಹೇಳಿದ ಜಾಗಕ್ಕೆ (ವಿನಾಯಕ ನಗರದ ಆಂಜನೇಯ ದ್ವಾರ) ಓಡೋಡಿ ಬಂದಳು. ಆದರೆ, ಅಲ್ಲಿ ಮಂಜು ಇರಲಿಲ್ಲ. ಅಷ್ಟು ಹೊತ್ತಿಗೆ ಕರೆ ಮಾಡಿದ ಮಂಜು, ಅಲ್ಲೇ ಪಕ್ಕದಲ್ಲಿ ನನ್ನ ಫ್ರೆಂಡ್‌ ರವಿ ಇದ್ದಾನೆ. ನೀನು ಅವನ ಜತೆ ಹೋಗು ಎಂದ. ಅಷ್ಟು ಹೊತ್ತಿಗೆ ರವಿ ಕಾರಿನಿಂದ ಇಳಿದು ಅವನ ಹತ್ತಿರ ಬಂದು ಹಲೋ ಎಂದ.

ಆದರೆ, ಹುಡುಗಿ ಹಾಗೆಲ್ಲ ಯಾರ್ಯಾರ ಜತೆಗೆ ಹೋಗಲ್ಲ ಎಂದು ಜಗಳ ಮಾಡಿದ್ದಾಳೆ. ಆಗ ಮಂಜು ತನ್ನ ನಿಜ ಬಣ್ಣ ಬಿಚ್ಚಿಟ್ಟಿದ್ದಾನೆ. ಅವನು ನನ್ನ ಫ್ರೆಂಡ್‌. ನೀನು ಅವನ ಜತೆಗೆ ಹೋಗಲೇಬೇಕು ಎಂದು ಆಜ್ಞಾಪಿಸಿದ್ದಾನೆ. ಆಕೆ ಆಗಲ್ಲ ಅಂದಿದ್ದಕ್ಕೆ ʻಗೊತ್ತಲ್ಲ. ನಾನು-ನೀನು ಜತೆಗಿದ್ದಾಗ ತೆಗೆದ ಫೋಟೊಗಳು ನನ್ನ ಹತ್ರ ಇದೆ. ನೀವು ಹೋಗದಿದ್ದರೆ ಅದೆಲ್ಲವೂ ವೈರಲ್‌ ಆಗ್ತವೆʼʼ ಎಂದು ಬೆದರಿಸಿದ್ದಾನೆ.

Love and dokha

ಮಂಜುವಿನ ಬ್ಲ್ಯಾಕ್‌ಮೇಲ್‌ಗೆ ಹೆದರಿದ ಯುವತಿ ಕೊನೆಗೂ ರವಿಯ ಕಾರು ಹತ್ತಿದ್ದಾಳೆ. ಕಾರು ಹತ್ತಿ ಸ್ವಲ್ಪ ದೂರ ಹೋಗುತ್ತಿದ್ದಂತೆಯೇ ಹುಡುಗಿಗೆ ಶಾಕ್‌. ಯಾಕೆಂದರೆ ಆಕೆಯೋ ಇವನ ಜತೆ ಒಂದು ರೌಂಡ್‌ ಹೋಗಿ ವಾಪಸ್‌ ಬರಬಹುದು ಅಂದುಕೊಂಡಿದ್ದರೆ, ರವಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಏನೋ ದಾರವನ್ನು ಆಕೆಯ ಕೊರಳಿಗೆ ಕಟ್ಟಿ ʻಇನ್ನು ನೀನು ನನ್ನ ಹೆಂಡತಿ, ನಾನೇ ಗಂಡʼ ಎಂದಿದ್ದಾನೆ.

ಯುವತಿಗೆ ಏನಾಗುತ್ತಿದೆ ಎಂದು ಗೊತ್ತಾಗುವ ಹೊತ್ತಿಗೆ, ʻನಾವು ಇನ್ನು ಈ ಊರಲ್ಲಿ ಇರುವುದು ಬೇಡ. ಬೇರೆ ಎಲ್ಲಾದರೂ ಹೋಗೋಣ. ಇಲ್ಲಿ ಇದ್ದರೆ ನಿನ್ನ ಮನೆಯವರು ಹಲ್ಲೆ ಮಾಡಬಹುದು..ʼʼ ಎಂದೆಲ್ಲ ಮರುಳು ಮಾತನಾಡಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ.

ಅವರು ಹೋಗಿದ್ದು ಚಾಮರಾಜ ನಗರಕ್ಕೆ. ಅಲ್ಲಿ ಆತನ ಸಂಬಂಧಿಕರ ಮನೆಯಿದೆ. ಅಲ್ಲಿ ಹೋಗಿ ʻನಾನು ಮದುವೆಯಾಗಿ ಬಂದಿದ್ದೇನೆʼ ಎಂದು ಹೇಳಿದ್ದಾನೆ. ಆದರೆ, ಇವರ ವ್ಯವಹಾರ ಏನೂ ಸರಿ ಇದ್ದಂತಿಲ್ಲ ಎಂದು ಅಂದಾಜು ಮಾಡಿದ ಆ ಮನೆಯವರು ರಾತ್ರಿಯೆಲ್ಲ ಬಂದು ನಮ್ಮ ಮನೆಯಲ್ಲಿ ಇರುವುದು ಬೇಡ. ನಾಳೆ ಬೆಳಗ್ಗೆ ಬನ್ನಿ ಎಂದು ಸಾಗಹಾಕಿದ್ದಾರೆ.

Love and Dokha

ಚಾಮರಾಜನಗರದ ಮನೆಯಲ್ಲಿ ಉಳಿಯಲು ಅವಕಾಶ ಸಿಗದೆ ಇದ್ದಾಗ ರವಿ ಕಾರನ್ನು ಓಡಿಸಿಕೊಂಡು ತುಮಕೂರಿಗೆ ಹೋಗಿದ್ದಾನೆ. ಅಲ್ಲಿ ಅವನು ಆತ ಈ ಹಿಂದೆ ಕೆಲಸ ಮಾಡುತ್ತಿದ್ದ ಕಂಪನಿಯ ಮಾಲೀಕರ ಬಳಿಗೆ ಹೋಗಿದ್ದಾನೆ. ನಾನು ಇವಳನ್ನು ಬಹಳ ವರ್ಷದಿಂದ ಪ್ರೀತಿ ಮಾಡುತ್ತಿದ್ದೆ. ಉಳಿದುಕೊಳ್ಳಲು ಅವಕಾಶ ಬೇಕಿತ್ತು ಎಂದು ಹೇಳಿದ್ದಾನೆ. ಅವರು ನಂಬಿ ಆಸರೆ ಕೊಟ್ಟಿದ್ದಾರೆ. ರವಿ ಅವಳನ್ನು ಮನೆಯಲ್ಲಿ ಕೂಡಿ ಹಾಕಿದ್ದ.

ಈ ನಡುವೆ, ಹುಡುಗಿಯ ಮನೆಯವರು ಪೊಲೀಸರಿಗೆ ದೂರು ಕೊಟ್ಟಿದ್ದರು. ಪೊಲೀಸರು ಆಕೆಯ ಮೊಬೈಲ್‌ ಟ್ರ್ಯಾಕ್‌ ಮಾಡಿದಾಗ ಆಕೆ ತುಮಕೂರಿನಲ್ಲಿ ಇರುವುದು ಗೊತ್ತಾಗಿದೆ. ಪೊಲೀಸರು ತಮ್ಮನ್ನು ಹುಡುಕುತ್ತಿರುವ ಸುಳಿವು ತಿಳಿಯದ ರವಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ರವಿ ಮತ್ತು ಯುವತಿಯನ್ನು ಕರೆದುಕೊಂಡು ಬಂದ ಪೊಲೀಸರು ಖದೀಮ ಮಂಜುವನ್ನೂ ಅರೆಸ್ಟ್‌ ಮಾಡಿದ್ದಾರೆ. ಹುಡುಗಿಯರನ್ನು ಮೋಹದ ಬಲೆಗೆ ಬೀಳಿಸಿ ವಂಚಿಸುವ ಮಂಜು ಮತ್ತು ರವಿಗೆ ಪಾಠ ಕಲಿಸಲು ಮುಂದಾಗಿದ್ದಾರೆ. ಐಜೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Love and Dokha

ಇದನ್ನೂ ಓದಿ : Letter to friend : ಹಾಯ್‌ ಪುಟ್ಟಾ.. ಹೇಗಿದಿಯಾ?; ದೇವರ ಹುಂಡಿಯಲ್ಲಿ ಓಡಿ ಹೋದ ಗೆಳತಿಗೊಂದು ಪತ್ರ!

ಇಲ್ಲಿಗೆ ಕಥೆ ಮುಗಿದಿಲ್ಲ! ಈ ರವಿ ಎಂಥಾ ಕಿಲಾಡಿ ಎಂದರೆ!

ಮಂಜುವಿನ ಬಳಿ ಗರ್ಲ್‌ಫ್ರೆಂಡನ್ನು ಬಿಟ್ಟುಕೊಡು ಮದುವೆಯಾಗ್ತೀನಿ ಅಂತ ಹೇಳಿದ್ದ ರವಿ ಎಂಥ ಕಿಲಾಡಿ ಎಂದರೆ ಅವನಿಗೆ ಆಗಲೇ ಮದುವೆಯಾಗಿತ್ತು. ಕಟ್ಟಿಕೊಂಡ ಹೆಂಡತಿ ಇರುವಾಗಲೇ ಇನ್ನೊಂದು ಹುಡುಗಿಗೆ ಆಸೆಪಟ್ಟು, ಆಕೆಯನ್ನು ಮದುವೆ ಮಾಡಿಕೊಳ್ಳುತ್ತೇನೆ, ಬಿಟ್ಟುಕೊಡು ಎಂದಿದ್ದಾನೆ. ಮಂಜುವಿಗೆ ಕೂಡಾ ಆತನ ಹಿನ್ನೆಲೆ ಚೆನ್ನಾಗಿ ಗೊತ್ತಿತ್ತು. ಆದರೂ ಆತ ಪ್ರಾಣದಂತೆ ಪ್ರೀತಿಸುತ್ತಿದ್ದ ಆ ಹುಡುಗಿಯನ್ನು ಈ ಕಟುಕನ ಕೈಗೆ ಕೊಡಲು ಮುಂದಾಗಿದ್ದ.

ಅಂದ ಹಾಗೆ ಅಪರಿಚಿತ ವ್ಯಕ್ತಿಗಳ ಜತೆ ಹಿಂದೆ ಮುಂದೆ ನೋಡದೆ ವ್ಯವಹಾರ ಮಾಡುವ ಹುಡುಗಿಯರಿಗೂ ಇದೊಂದು ಪಾಠವಾಗುವ ಘಟನೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

K Vasantha Bangera: ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬುಧವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

K Vasantha Bangera
Koo

ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ (79) ಅವರು (K Vasantha Bangera) ಬುಧವಾರ ಸಂಜೆ ನಿಧನರಾದರು. ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ ಅವರು, ಬೆಳ್ತಂಗಡಿ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು.

ಇತ್ತೀಚೆಗೆ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂದು ವರ್ಗದವರನ್ನು ಅಗಲಿದ್ದಾರೆ. ಗುರುವಾರ ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದ್ದು, ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಅವರು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿ ವಸಂತ ಬಂಗೇರ ಅವರು 1946ರ ಜನವರಿ 15ರಂದು ಜನಿಸಿದ್ದರು. ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲಿನಲ್ಲಿ ತಮ್ಮ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮುಗಿಸಿದ ಅವರು ಮುಲ್ಕಿ, ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲವು ಸಾಧಿಸಿ ದಾಖಲೆ ಬರೆದಿದ್ದರು. 1983 ಮತ್ತು 1985ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಸೋಲು ಕಂಡಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಗೆದ್ದಿದ್ದರು. ನಂತರ 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿದ ವಂಸತ ಬಂಗೇರ ಅವರನ್ನು ಅವರ ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು. ಆ ನಂತರ 2008ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿದರು. ಇನ್ನು 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ | EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

2013ರಲ್ಲಿ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಂತ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರ್ಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ.

Continue Reading

ಚಿಕ್ಕಮಗಳೂರು

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Prajwal Revanna Case: ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Kumaraswamy King of Blackmail and DK Shivakumar is back
Koo

ಚಿಕ್ಕಮಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಕುಮಾರಸ್ವಾಮಿ ಅವರು “ಕಿಂಗ್ ಆಫ್ ಬ್ಲ್ಯಾಕ್‌ಮೇಲ್” ಎಂದು ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ರೆಸ್ಟ್‌ ಮಾಡಲು ಬಂದಿದ್ದೇನೆ

ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಹೋಗಿ ವಾದ ಮಾಡಲಿ

ಇವರು ವಕೀಲರಾ? ನ್ಯಾಯಾಧೀಶರಾ? ಹೋಗಿ ವಾದ ಮಾಡಲಿ. ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎಂದು ಹೇಳುತ್ತಾರೆ. ಆದರೆ, ಈ ಪ್ರಕರಣದ ಕಥಾ ನಾಯಕ, ಡೈರೆಕ್ಟರ್, ಪ್ರೊಡ್ಯೂಸರ್ ಎಲ್ಲವೂ ಇವರೇ ಆಗಿದ್ದಾರೆ. ಎಲ್ಲವೂ ಗೊತ್ತಿದೆ. ಅವರ ಕಾರ್ಯಕರ್ತರು ಅಂತೆ, ಮರ್ಯಾದೆ ಇದ್ದರೆ ಹೋಗಿ ಧೈರ್ಯ ತುಂಬಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ

ನನ್ನ ಮೇಲೆ ಆರೋಪ ಮಾಡದಿದ್ದರೆ ಎಚ್.ಡಿ. ಕುಮಾರಸ್ವಾಮಿಗೆ ಮಾರ್ಕೆಟ್‌ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ಮಾಧ್ಯಮದಲ್ಲಿ ತೋರಿಸಲಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ಅವರಿಗೆ ನಿದ್ದೆಯೇ ಬರಲ್ಲ. ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ, ಲೆಸ್‌ ಸ್ಟ್ರಾಂಗ್‌ ಲೆಸ್‌ ಎನಿಮಿ ಎಂದು ಡಿ.ಕೆ. ಶಿವಕುಮಾರ್‌ ಮಾರ್ಮಿಕವಾಗಿ ನುಡಿದರು.

Continue Reading

ಕರ್ನಾಟಕ

Hoskote News: ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಆಯ್ಕೆಗೆ ಬಿಜೆಪಿ ಆಕ್ರೋಶ; ಸಿಎಂ ಹೇಳಿದ್ದೇನು?

Hoskote News: ಬಿಜೆಪಿ ಸರ್ಕಾರದ ಅವಧಿಯಲ್ಲೂ ಹೊಸಕೋಟೆಯ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಗಳನ್ನು ನೇಮಿಸಲಾಗಿತ್ತು. ಹೀಗಾಗಿ ಜನರನ್ನು ಬಿಜೆಪಿ ನಾಯಕರು ತಪ್ಪುದಾರಿಗೆಳೆಯುವ ಕೆಲಸ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

VISTARANEWS.COM


on

Hoskote News
Koo

ಹೊಸಕೋಟೆ: ನಗರದ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಹಿಂದು ವಿರೋಧಿ ಸಿಎಂ ಸಿದ್ದರಾಮಯ್ಯ ಈಗ ಹಿಂದುಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪತ್ತನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಿಮ್ಮದೇ ಸರ್ಕಾರ ಇದ್ದಾಗ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ನಾಯಕರೇ… ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳುವಿರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳುತ್ತೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು.

ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಏನು ಹೇಳಿತ್ತು?

ಹೊಸಕೋಟೆಯ ಅವಿಮುಕ್ಷೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ನೇಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ರಾಜ್ಯ ಬಿಜೆಪಿ, ದೇವಸ್ಥಾನದ ಬ್ರಹ್ಮೋತ್ಸವದ ಮೇಲ್ವಿಚಾರಣೆಗೆ ಕಾಂಗ್ರೆಸ್ ‘ನವಾಜ್’ ಅವರನ್ನು ನೇಮಿಸಿದೆ. ನಮ್ಮ ದೇವಸ್ಥಾನಗಳನ್ನು ಲೂಟಿ ಮಾಡಲು ಪ್ರಯತ್ನಿಸಿದ ನಂತರ, ಹಿಂದು ವಿರೋಧಿ ಸಿಎಂ ಸಿದ್ದರಾಮಯ್ಯ ಈಗ ಹಿಂದುಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪನ್ಮೂಲಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿತ್ತು.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಹಿಂದುಗಳ ಹಕ್ಕುಗಳನ್ನು ಕಸಿದುಕೊಳ್ಳುವ, ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುವ ರಾಹುಲ್ ಗಾಂಧಿಯವರ ಭ್ರಮೆಯ ಕಲ್ಪನೆಗಳನ್ನು ಕಾರ್ಯಗತಗೊಳಿಸಲು ಆತುರ ತೋರುತ್ತಿದೆ. ಇಂದು ಇದು ಕರ್ನಾಟಕದಲ್ಲಿ ಕೇವಲ ಒಂದು ದೇವಾಲಯ, ನಾಳೆ ಅದು ಭಾರತದ ಪ್ರತಿಯೊಂದು ದೇವಾಲಯವಾಗಬಹುದು. ಕಾಂಗ್ರೆಸ್ ಬಗ್ಗೆ ಎಚ್ಚರವಿರಲಿ ಎಂದು ಬಿಜೆಪಿ ತಿಳಿಸಿತ್ತು.

Continue Reading

ತುಮಕೂರು

Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

Heavy Rain: ಶಿರಾ ತಾಲೂಕಿನ ಕಳುವರಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಭಾರೀ ಗಾಳಿ-ಮಳೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಗಡಿನ ಶೀಟಿನ ಚಾವಣಿ ಕುಸಿದು ಬಿದ್ದಿರುವ ಘಟನೆ ಜರುಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

Heavy Rain
Koo

ಶಿರಾ: ತಾಲೂಕಿನ ಕಳುವರಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ ಮಳೆಗೆ (Heavy Rain) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಗಡಿನ ಶೀಟಿನ ಚಾವಣಿ ಕುಸಿದು ಬಿದ್ದಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಇದನ್ನೂ ಓದಿ: Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

2022-23ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಶಾಲೆಗೆ ತಗಡಿನ ಚಾವಣಿ ಹಾಕಲಾಗಿತ್ತು. ಆದರೆ ಕಳಪೆ ಕಾಮಗಾರಿಯಿಂದಾಗಿ ಕುಸಿದು ಬಿದ್ದು ಹಾನಿ ಸಂಭವಿಸಿದೆ ಎಂದು ಎಂದು ಗ್ರಾಮಸ್ಥರು ದೂರಿದ್ದಾರೆ. ಭಾರೀ ಗಾಳಿ ಮಿಶ್ರಿತ ಮಳೆಗೆ ತಗಡಿನ ಚಾವಣಿಗಳು ಹಾರಿ ಶಾಲೆಯ ಆವರಣ ಬಿದ್ದಿವೆ. ಶಾಲೆಗೆ ರಜೆ ಇರುವುದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

Continue Reading
Advertisement
K Vasantha Bangera
ಪ್ರಮುಖ ಸುದ್ದಿ4 mins ago

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

T20 World Cup 2024
ಕ್ರೀಡೆ49 mins ago

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

Girls Pleats Skirts Fashion
ಫ್ಯಾಷನ್53 mins ago

Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

Jan Aushadhi
ದೇಶ57 mins ago

Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Prajwal Revanna Case HD Kumaraswamy King of Blackmail and DK Shivakumar is back
ಚಿಕ್ಕಮಗಳೂರು57 mins ago

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Hoskote News
ಕರ್ನಾಟಕ1 hour ago

Hoskote News: ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಆಯ್ಕೆಗೆ ಬಿಜೆಪಿ ಆಕ್ರೋಶ; ಸಿಎಂ ಹೇಳಿದ್ದೇನು?

Heavy Rain
ತುಮಕೂರು1 hour ago

Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

Fried Oil
ಆರೋಗ್ಯ1 hour ago

Fried Oil: ಒಮ್ಮೆ ಕರಿದ ಎಣ್ಣೆಯನ್ನು ಮತ್ತೊಮ್ಮೆ ಬಳಸಬಹುದೆ?

IPL 2024
ಕ್ರೀಡೆ2 hours ago

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

Akshaya Tritiya Jewellery
ಫ್ಯಾಷನ್2 hours ago

Akshaya Tritiya Jewellery: ಅಕ್ಷಯ ತೃತೀಯಕ್ಕೆ ಬಂದಿವೆ ವೈವಿಧ್ಯಮಯ ಫ್ಯಾಷನ್‌ ಜ್ಯುವೆಲರಿಗಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ22 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌