Site icon Vistara News

ಶಿಕ್ಷಣ ಸುಧಾರಣೆಗಳ ಸಲಹೆಗಾರರಾಗಿ ಎಂ.ಆರ್.ದೊರೆಸ್ವಾಮಿ ನೇಮಕ

ಬೆಂಗಳೂರು: ಪಿಇಎಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರು, ಶಿಕ್ಷಣ ತಜ್ಞರಾದ ಎಂ.ಆರ್. ದೊರೆಸ್ವಾಮಿ ಅವರನ್ನು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರರನ್ನಾಗಿ ನೇಮಿಸಿ ರಾಜ್ಯ ಸಚಿವ ದರ್ಜೆಯ ಸ್ಥಾನಮಾನವನ್ನು ನೀಡಿ ಆದೇಶಿಸಲಾಗಿದೆ.

ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾಗಿರುವ ಇವರು, ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಲಾಗಿದೆ. ಇವರು ಸೋಮವಾರ (ಜುಲೈ ೭) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿಂದೆಯೂ ೨೦೨೦ರಲ್ಲಿ ಇವರನ್ನು ಇದೇ ಹುದ್ದೆಗೆ ನೇಮಿಸಲಾಗಿತ್ತು. ಪ್ರಸ್ತುತ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಪುನಃ ನೇಮಿಸಿ ಆದೇಶವನ್ನು ಹೊರಡಿಸಲಾಗಿದೆ. ಕಳೆದ ಬಾರಿ ಸಲಹೆಗಾರರಾಗಿದ್ದಾಗ ಶಿಕ್ಷಣ ಸುಧಾರಣೆ ಸಂಬಂಧ ಸರ್ಕಾರಕ್ಕೆ ವರದಿ ನೀಡಿದ್ದರು.

ಇದನ್ನೂ ಓದಿ| ಕನ್ನಡ ಸಾಹಿತ್ಯ ಪರಿಷತ್ತಿನ ಹಲವು ನಿಯಮಗಳಿಗೆ ತಿದ್ದುಪಡಿ; ಸರ್ಕಾರದಿಂದ ಒಪ್ಪಿಗೆ

Exit mobile version