Shadakshari Transfer : ಷಡಾಕ್ಷರಿ ವರ್ಗಾವಣೆ ಹಿಂದೆ ಮಧು ಬಂಗಾರಪ್ಪ; ಏನಿದು ಮಣ್ಣು ಸಾಗಾಟ ಆರೋಪ - Vistara News

ಕರ್ನಾಟಕ

Shadakshari Transfer : ಷಡಾಕ್ಷರಿ ವರ್ಗಾವಣೆ ಹಿಂದೆ ಮಧು ಬಂಗಾರಪ್ಪ; ಏನಿದು ಮಣ್ಣು ಸಾಗಾಟ ಆರೋಪ

Shadakshari Transfer : ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರ ವರ್ಗಾವಣೆ ಹಿಂದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬರೆದ ಪತ್ರ ಇದೆಯಾ? ಈ ಪತ್ರದಲ್ಲಿ ಏನಿದೆ? ಇದಕ್ಕೆ ಷಡಾಕ್ಷರಿ ಏನಂತಾರೆ?

VISTARANEWS.COM


on

Madhu Bangarappa letter Shadakhari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವ (President of Karnataka state employees association) ಸಿ.ಎಸ್‌. ಷಡಾಕ್ಷರಿ (CS Shadakshari) ಅವರನ್ನು ಶಿವಮೊಗ್ಗದಿಂದ ಕೋಲಾರ ಜಿಲ್ಲೆಗೆ ವರ್ಗಾವಣೆ (Transfered from Shivamogga to Kolara) ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ನೌಕರರ ವರ್ಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸರ್ಕಾರಕ್ಕೆ ಬರೆದ ಒಂದು ಪತ್ರವನ್ನು ಆಧರಿಸಿ ಈ ಪ್ರಕ್ರಿಯೆ ನಡೆದಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಷಡಾಕ್ಷರಿ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಕ್ಕೆ 71 ಲಕ್ಷ ರೂ. ನಷ್ಟ ಉಂಟು ಮಾಡಿದ್ದಾರೆ ಎಂದು ಮಧು ಬಂಗಾರಪ್ಪ ಅವರು ಪತ್ರದಲ್ಲಿ ಆರೋಪಿಸಿದ್ದರು.

ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ (7th Pay Commission) ಅವಧಿಯನ್ನು ಆರು ತಿಂಗಳ ಕಾಲ ವಿಸ್ತರಿಸಿದ್ದು, ಅದರ ವಿರುದ್ಧ ನೌಕರರ ಆಕ್ರೋಶ ಭುಗಿಲೇಳಬಹುದು ಎಂಬ ಕಾರಣಕ್ಕಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಅಭಿಪ್ರಾಯ ಮೊದಲು ಕೇಳಿಬಂದಿತ್ತು. ಆದರೆ, ಇದಕ್ಕೂ ವರ್ಗಾವಣೆಗೂ ಯಾವುದೇ ಸಂಬಂಧವಿಲ್ಲ. ಇದು ಯಾವುದೋ ಬೇರೆ ಉದ್ದೇಶವನ್ನು ಇಟ್ಟುಕೊಂಡು ಮಾಡಿರುವ ಪ್ರಕ್ರಿಯೆ. ಇದರ ಬಗ್ಗೆ ಸ್ವತಃ ಮುಖ್ಯಮಂತ್ರಿಗಳಿಂದಲೇ ವಿವರಣೆ ಕೇಳುತ್ತೇನೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ವಿಸ್ತಾರ ನ್ಯೂಸ್‌ಗೆ ತಿಳಿಸಿದ್ದಾರೆ.

ಎಸ್‌. ಷಡಾಕ್ಷರಿ ಅವರು ಇದುವರೆಗೆ ಶಿವಮೊಗ್ಗದ ಸ್ಥಳೀಯ ಲೆಕ್ಕ ಪರಿಶೋಧಣಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿಯ ಲೆಕ್ಕಾಧೀಕ್ಷಕರಾಗಿದ್ದರು. ಅವರನ್ನು ಈಗ ಕೋಲಾರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರಾಗಿ ನೇಮಕ ಮಾಡಲಾಗಿದೆ. ಆರ್ಥಿಕ ಇಲಾಖೆಯ ಆಡಳಿತ ಮತ್ತು ಮುಂಗಡಗಳು ವಿಭಾಗದ ಅಧೀನ ಕಾರ್ಯದರ್ಶಿಯಾಗಿರುವ ನೇತ್ರಪ್ರಭಾ ಎಂ. ಧಾಯಪುಲೆ ಅವರು ಆದೇಶ ಹೊರಡಿಸಿದ್ದರು.

ಇತಿಹಾಸದಲ್ಲೇ ಇದು ಮೊದಲು

ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಹಲವಾರು ದಶಕಗಳ ಇತಿಹಾಸವಿದೆ. ಇದರಲ್ಲಿ ಇದುವರೆಗೂ ಅಧ್ಯಕ್ಷರನ್ನು ವರ್ಗಾವಣೆ ಮಾಡಿದ ಉದಾಹರಣೆ ಇಲ್ಲ. ನಿಜವೆಂದರೆ ಅವರನ್ನು ರಾಜ್ಯದ ಯಾವ ಭಾಗಕ್ಕೆ ವರ್ಗಾವಣೆ ಮಾಡಿದರೂ ಅವರ ಸ್ಥಾನಕ್ಕೆ ಯಾವುದೇ ಕುತ್ತು ಕೂಡಾ ಇಲ್ಲ. ಅವರು ಎಲ್ಲೇ ಇದ್ದರೂ ಹುದ್ದೆಯಲ್ಲಿ ಮುಂದುವರಿಯಲು ಅವಕಾಶವಿದೆ. ನಿಜವೆಂದರೆ ಅವರಿಗೆ ಯಾವುದೇ ಪದನಾಮ ತೋರಿಸಿದರೂ ದೈನಂದಿನ ಕೆಲಸಕ್ಕಾಗಿ ಅವರು ಕಚೇರಿಗೆ ಹೋಗಬೇಕಾದ ಅವಶ್ಯಕತೆಗಳು ಇಲ್ಲ. ಅವರು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ.

ಏನಿದು 71 ಲಕ್ಷ ರೂ. ನಷ್ಟ ಉಂಟು ಮಾಡಿದ ಆರೋಪ?

ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯಲ್ಲಿರುವ ಮುದ್ದಣ್ಣನ ಕೆರೆಯಿಂದ ಅಕ್ರಮವಾಗಿ ಮಣ್ಣು ತೆಗೆದು ಖಾಸಗಿ ಲೇಔಟ್‌ಗೆ ಸಾಗಿಸಿರುವ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ 71 ಲಕ್ಷ ರೂ. ರಾಯಲ್ಟಿ ನೀಡಬೇಕಾಗಿತ್ತು. ಆದರೆ, ಅದನ್ನು ನಷ್ಟ ಉಂಟು ಮಾಡಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್‌. ಷಡಾಕ್ಷರಿ ಅವರ ಕುಮ್ಮಕ್ಕಿನ ಮೇರೆಗೆ ಈ ರೀತಿ ಮಾಡಲಾಗಿದೆ. ಹೀಗಾಗಿ ಷಡಾಕ್ಷರಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೆಪ್ಟೆಂಬರ್‌ 21ರಂದು ಪತ್ರ ಬರೆದಿದ್ದರು. ಅದರನ್ವಯ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಹಾಗಿದ್ದರೆ ಮಧು ಬಂಗಾರಪ್ಪ ಅವರು ಬರೆದ ಆ ಪತ್ರದಲ್ಲಿ ಏನಿದೆ?

Madhu Bangarappa letter Shadakhari

-ಶಿವಮೊಗ್ಗ ತಾಲೂಕು, ಅಬ್ಬಲಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬ್ಬಲಗೆರೆ ಗ್ರಾಮದ ಸರ್ವೆ ನಂ.119ರಲ್ಲಿ ಮುದ್ದಣ್ಣನ ಕೆರೆಯಲ್ಲಿ ಅಕ್ರಮವಾಗಿ ಮಣ್ಣನ್ನು ತೆಗೆದು ಖಾಸಗಿ ಲೇಔಟ್ ಗೆ ಸಾಗಿಸಿರುವ ಬಗ್ಗೆ ಸರ್ಕಾರಕ್ಕೆ ಪಾವತಿಸಬೇಕಾಗಿರುವ ಮಣ್ಣಿನ ಒಟ್ಟು ರಾಯಲ್ಟಿ ಮೊತ್ತವನ್ನು ಪಾವತಿಸದೆ ಸರ್ಕಾರದ ಬೊಕ್ಕಸಕ್ಕೆ ರೂ. 71,45,920/-ಗಳನ್ನು ನಷ್ಟ ಉಂಟು ಮಾಡಲಾಗಿದೆ.

-ಈ ಬಗ್ಗೆ ಹಾಗೂ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಬಗ್ಗೆ ಕಾರ್ಯಪಾಲಕ ಇಂಜಿನಿಯರ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಜಿಲ್ಲಾ ಪಂಚಾಯತ್ ಶಿವಮೊಗ್ಗ ಇವರು ವರದಿ ನೀಡಿರುತ್ತಾರೆ.

-ಈ ಪ್ರಕರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್‌. ಷಡಾಕ್ಷರಿ ಅವರ ನಿರ್ದೇಶನದಂತೆ ಗ್ರಾಮ ಪಂಚಾಯತ್ ಮತ್ತು ಗಣಿ ಇಲಾಖೆಯವರು ನಡೆದುಕೊಂಡಿರುವ ಬಗ್ಗೆ ಆಕ್ಷೇಪಣೆಗಳು ವ್ಯಕ್ತವಾಗಿರುತ್ತವೆ.

– ಇದೇ ವೇಳೆ ಸರ್ಕಾರಿ ನೌಕರರ ಸಂಘದ ರಾಜ್ಯ ಸರಿಷತ್ ಸದಸ್ಯರಾದ ಬಿ ಗಂಗಾಧರ ಮತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ ಅವರು ಹಾಗೂ ಜಿಲ್ಲೆಯ ಅನೇಕ ಸಂಘ ಸಂಸ್ಥೆಗಳು ಸದರಿ ಘಟನೆಯ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟವರ ಮೇಲೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿರುತ್ತಾರೆ.

– ಈ ಬಗ್ಗೆ ಪ್ರಧಾನ ನಿರ್ದೇಶಕರು, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ, ಬೆಂಗಳೂರು ಇವರು ಜಂಟಿ ನಿರ್ದೇಶಕರ ಕಛೇರಿ, ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ, ಶಿವಮೊಗ್ಗ ಇಲ್ಲಿ ಲೆಕ್ಕಾಧೀಕ್ಷಕರಾಗಿರುವ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್. ಪಡಕ್ಟರಿ, ಈ ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ಇವರನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆಯಿಂದ ಬೇರೆಡೆಗೆ ವರ್ಗಾಯಿಸುವ ಕುರಿತು ಸರ್ಕಾರದ ಆರ್ಥಿಕ ಇಲಾಖೆಯನ್ನು ಕೋರಿರುತ್ತಾರೆ.

– ಸದರಿಯವರು ಜಿಲ್ಲೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ತಮ್ಮ ಇಚ್ಚೆಯಂತೆ ಕಾರ್ಯನಿರ್ವಹಿಸಲು ಒತ್ತಡ ಹೇರುವುದರಿಂದ ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿಯು ಉಂಟಾಗಿರುವುದಾಗಿ ದಿನಾಂಕ: 16-09-2023ರಲ್ಲಿ ನಡೆದ ಜಿಲ್ಲಾ ಪರಿಶೀಲನಾ ಸಭೆಯ ಚರ್ಚೆಯಲ್ಲಿ ಪ್ರಸ್ತಾಪವಾಗಿರುತ್ತದೆ. ಆದ್ದರಿಂದ ಈ ಬಗ್ಗೆ ಸಂಬಂಧ ಪಟ್ಟವರ ಮೇಲೆ ಕ್ರಮಕೈಗೊಳ್ಳಲು ಕೋರುತ್ತೇನೆ.

ಇದನ್ನೂ ಓದಿ: ಶಿವಮೊಗ್ಗದಿಂದ ಕೋಲಾರ ಜಿಲ್ಲೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ವರ್ಗಾವಣೆ

ಸಿ.ಎಸ್‌ ಷಡಾಕ್ಷರಿ ಹೇಳುವುದೇನು?

ಸಿ.ಎಸ್‌. ಷಡಾಕ್ಷರಿ ಅವರು ಹೇಳುವ ಪ್ರಕಾರ ಶಿವಮೊಗ್ಗದ ಮಣ್ಣು ಸಾಗಾಟ ಪ್ರಕರಣದಲ್ಲಿ ತನಗೆ ಯಾವುದೇ ಪಾಲುದಾರಿಕೆ ಇಲ್ಲ. ಇದನ್ನು ಲೋಕಾಯುಕ್ತ ತನಿಖೆ ನಡೆಸಿ ಕ್ಲೀನ್‌ ಚಿಟ್‌ ನೀಡಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯೂ ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದೆ. ಇಷ್ಟಿದ್ದರೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಯಾಕೆ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸಿಎಂ ಅವರ ಜತೆ ಮಾತನಾಡುತ್ತೇನೆ. ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇನೆ. ಸರ್ಕಾರಿ ನೌಕರರ ಪರವಾಗಿ ನನ್ನ ಹೋರಾಟ ಸದಾ ಜಾರಿಯಲ್ಲಿ ಇದ್ದೇ ಇರುತ್ತದೆ ಎಂದು ಷಡಾಕ್ಷರಿ ಅವರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

Car Catches Fire: ಬಾಗಲಕೋಟೆ ಜಿಲ್ಲೆಯ ಕಮತಗಿ ಸಮೀಪದ ಇಂಗಳಗಿ ರಸ್ತೆಯಲ್ಲಿ ಅವಘಡ ನಡೆದಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕಾರಿನಲ್ಲಿದ್ದ ವ್ಯಕ್ಯಿ ಸಜೀವ ದಹನವಾಗಿದ್ದಾರೆ.

VISTARANEWS.COM


on

car catches fire
Koo

ಬಾಗಲಕೋಟೆ: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿಯೊಬ್ಬ ಸಜೀವ ದಹನವಾಗಿರುವ ಘಟನೆ (Car Catches Fire) ಜಿಲ್ಲೆಯ ಕಮತಗಿ ಸಮೀಪದ ಇಂಗಳಗಿ ರಸ್ತೆಯಲ್ಲಿ ನಡೆದಿದೆ. ಹುನಗುಂದ ತಾಲೂಕಿನ ಚಿಕ್ಕಮಾಗಿ ಗ್ರಾಮದ ಸಂಗನಗೌಡ ಪಾಟೀಲ (ಗೌಡರ) (50) ಮೃತ ವ್ಯಕ್ತಿ. ಕಾರಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬ ಬಗ್ಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ರಸ್ತೆ ಪಕ್ಕ ಕಾರು ಹೊತ್ತಿ ಉರಿದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ದೌಡಾಯಿಸಿ ಪರಿಶೀಲಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಲಾರಿಗೆ ಬೆಂಕಿ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಲಾರಿಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡದ ಕಣಿವಿ ಹೊನ್ನಾಪುರ ಬಳಿ ನಡೆದಿದೆ. ಕೇರಳದಿಂದ ದೆಹಲಿಗೆ ಕಡೆಗೆ ಹೊರಟಿದ್ದ ಲಾರಿ ಪಲ್ಟಿಯಾಗಿದ್ದು, ಈ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಬ್ಯಾಟರಿ, ಟಿವಿ ಸಾಮಗ್ರಿ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ | Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Continue Reading

ಬೆಂಗಳೂರು

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

Child Actor Master OM: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟ ಮಾಸ್ಟರ್ ಓಂ‌, ಇದೀಗ 10ನೇ ತರಗತಿಯ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್)ನಲ್ಲಿ 97% ಅಂಕ ಗಳಿಸುವ ಮೂಲಕ ಬೆಂಗಳೂರಿನ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ.

VISTARANEWS.COM


on

ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಮತ್ತು ಬಾಲ ನಟ ಓಂ
Koo

ಬೆಂಗಳೂರು: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟನಾಗಿದ್ದ (Child Actor Master OM) ಮಾಸ್ಟರ್ ಓಂ, ಇದೀಗ 10ನೇ ತರಗತಿ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್) ಪರೀಕ್ಷೆಯಲ್ಲಿ 97% ಅಂಕ ಗಳಿಸುವ ಮೂಲಕ ಪ್ರತಿಷ್ಠಿತ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ಐಸಿಎಸ್‌ಸಿ ಸಿಲಬಸ್‌ನಲ್ಲಿ ಓದುವವರು ಕನ್ನಡವೆಂದರೇ ಕಬ್ಬಿಣದ ಕಡಲೆ ಎಂದು ಭಾವಿಸುತ್ತಾರೆ. ಆದರೆ, ಓಂ ಕನ್ನಡದಲ್ಲಿ 100 ಕ್ಕೆ 97 ಅಂಕಗಳನ್ನು ಗಳಿಸುವ ಮೂಲಕ ಇದನ್ನು ಸಾಧಿಸಿ ತೋರಿಸಿದ್ದಾನೆ. ಗಣಿತ ಹಾಗೂ ಹಿಸ್ಟರಿಯಲ್ಲಿ 100ಕ್ಕೆ 99 ಮಾರ್ಕ್ಸ್‌ ಗಳಿಸಿದ್ದಾನೆ. ಇನ್ನುಳಿದ ಎಲ್ಲಾ ವಿಷಯಗಳಲ್ಲೂ ಕ್ರಮವಾಗಿ 95, 96, 97 ಹೀಗೆ ಅತ್ಯಧಿಕ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಇದಕ್ಕೆಲ್ಲಾ ಶಾಲೆಯ ಪ್ರಾಂಶುಪಾಲರು, ಟೀಚರ್ಸ್‌ ಹಾಗೂ ಪೋಷಕರ ಸಹಕಾರವೇ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾನೆ.

ಓಂ ಸಿನಿಮಾ, ಫ್ಯಾಷನ್‌ ಜರ್ನಿ

ಮದುವೆಯ ಮಮತೆಯ ಕರೆಯೊಲೆ, ಲೀ, ವೇಷಧಾರಿ, ಪ್ರೇಮಂ, ಸಂತೋಷ-ಸಂಗೀತ, ಕಾಳಿದಾಸ ಕನ್ನಡ ಮೇಷ್ಟ್ರು, ಕಾಫಿ(ತಮಿಳು) ಸೇರಿದಂತೆ 10ಕ್ಕೂ ಹೆಚ್ಚು ಸಿನಿಮಾ, 35ಕ್ಕೂ ಅಧಿಕ ಜಾಹೀರಾತು ಮತ್ತು ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್‌ ಶೋಗಳಲ್ಲಿ ಸೆಲೆಬ್ರೆಟಿ ಶೋ ಸ್ಟಾಪರ್‌ ಆಗಿ ವಾಕ್‌ ಮಾಡಿರುವ ಓಂ ಓದಿನಲ್ಲೂ ಮುಂದಿರುವುದು ಸಿನಿಮಾ ಬಾಲ ನಟ-ನಟಿಯರಿಗೆ ಮಾದರಿಯಾಗುವಂತಿದೆ. ಇವೆಲ್ಲದರ ಜೊತೆಗೆ ಶಾಲೆಯ ಕ್ಯಾಪ್ಟನ್‌ಶಿಪ್‌ ಹಾಗೂ ತೇಜಸ್ವಿ ಸೂರ್ಯರ ಸೌತ್‌ ಸ್ಕೂಲ್‌ ಲೀಡರ್ಸ್‌ ಟೀಮ್‌ನ ಸಾಮಾಜಿಕ ಕಾರ್ಯಾಗಾರಗಳಲ್ಲೂ ಶಾಲೆಯ ಪ್ರತಿನಿಧಿಯಾಗಿ ಪಾಲ್ಗೊಂಡ ಹೆಗ್ಗಳಿಕೆ ಓಂನದು.

ಇದನ್ನೂ ಓದಿ | Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ. ಹಾಗೆಯೇ, ನಟನೆ-ಮಾಡೆಲಿಂಗ್‌ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಬಯಕೆಯನ್ನೂ ವ್ಯಕ್ತಪಡಿಸಿದ್ದಾನೆ.

Continue Reading

ಬೆಂಗಳೂರು

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

LuLu Fashion Week 2024: ಬೆಂಗಳೂರಿನ ಲುಲು ಮಾಲ್‌ನಲ್ಲಿ ಮೇ 10ರಿಂದ 12ರವರೆಗೆ ಮೂರು ದಿನಗಳವರೆಗೆ ಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿ ಆಯೋಜಿಸಲಾಗಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ವಿವಿಧ ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Koo

ಬೆಂಗಳೂರು: ನಗರದ ಲುಲು ಮಾಲ್‌ನಲ್ಲಿ ʼಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿಯ (LuLu Fashion Week 2024) ಭಾಗವಾಗಿ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮವು 2ನೇ ದಿನವೂ ಅದ್ಧೂರಿಯಾಗಿ ನೆರವೇರಿತು. ಕಲರಫುಲ್ ಸಂಜೆಯಲ್ಲಿ ಮೂಡಿಬಂದ ಫ್ಯಾಷನ್ ಶೋ ನೋಡಲು ಸಾವಿರಾರು ಜನರು ಆಗಮಿಸಿದ್ದರು.

ಮೇ 10ರಂದು ಆರಂಭವಾದ ಕಾರ್ಯಕ್ರಮ ಮೇ 12 ಭಾನುವಾರದವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ನುವಾ, ಪೆಪೆ ಜೀನ್ಸ್ ಲಂಡನ್, ಪೀಟರ್ ಇಂಗ್ಲೆಂಡ್, ಅಮೆರಿಕನ್ ಟೂರಿಸ್ಟರ್, ಕ್ರೊಯ್ಡಾನ್ ಸೇರಿದಂತೆ ಹಲವಾರು ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಜೊತೆಗೆ ಬಿಗ್ ಚೋಕೋ ಡೇಸ್ ಲೋಗೋ ಲಾಂಚ್ ಮಾಡಲಾಯಿತು. ನಂತರ ಫ್ಯಾಷನ್ ಫೋರಂನಲ್ಲಿ ಭವಿಷ್ಯದ ಫ್ಯಾಷನ್ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಚಂದನವನದ ನಟ ರಿಷಿ ಭಾಗಿಯಾಗಿದ್ದರು.

ಇನ್ನು ಹಲವಾರು ಕಲೆಗಳಿಗೆ ಕಾರ್ಯಕ್ರಮ ವೇದಿಕೆಯಾಯಿತು. ವಿವಿಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಲುಲು ಮಾಲ್ ಅಂಗಳದಲ್ಲಿ ನಡೆದ ಫ್ಯಾಷನ್ ಶೋನಲ್ಲಿ ವಿಭಿನ್ನವಾದ ಬಟ್ಟೆ ತೊಟ್ಟು ನಾರಿಯರು ಕಂಗೊಳಿಸಿದರು. ವಾರಾಂತ್ಯವಾಗಿದ್ದರಿಂದ ಹೆಚ್ಚಿನ ಜನರು ಆಗಮಿಸಿದ್ದು, ಮಕ್ಕಳು ಸಹ ಖುಷಿಪಟ್ಟರು.

ಇದನ್ನೂ ಓದಿ | Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

ಒಟ್ಟಿನಲ್ಲಿ ಲುಲು ಫ್ಯಾಷನ್ ವೀಕ್ ಬಹು ಜೋರಾಗಿದ್ದು, ಪ್ಯಾಷನ್ ಶೋ ನೋಡಿ ನೆರೆದಿದ್ದ ಜನರು ಫುಲ್ ಫಿದಾ ಆಗಿದ್ದಾರೆ. ಇನ್ನು ಮೇ 12 ಭಾನುವಾರ ಫ್ಯಾಷನ್ ವೀಕ್ ಮುಕ್ತಾಯಗೊಳ್ಳಲಿದೆ.

Continue Reading
Advertisement
Morning Tips
ಲೈಫ್‌ಸ್ಟೈಲ್1 hour ago

Morning Tips: ಬೆಳಗ್ಗೆ 7 ಗಂಟೆಯೊಳಗೆ ನೀವು ಈ 7 ಕೆಲಸಗಳನ್ನು ಮಾಡುತ್ತೀರಾ?

Karnataka Weather Forecast
ಮಳೆ2 hours ago

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Solar
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ ಸಾಧನೆ ಶ್ಲಾಘನೀಯ

Protein Supplements
ಆರೋಗ್ಯ3 hours ago

Protein Supplements: ಪ್ರೊಟಿನ್‌ ಸಪ್ಲಿಮೆಂಟ್‌ನ ಸೈಡ್‌ ಎಫೆಕ್ಟ್‌ ಏನೇನು? ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯ ಸೂಚನೆ ಇಲ್ಲಿದೆ

Shankara Jayanti 2024
ಧಾರ್ಮಿಕ3 hours ago

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

International Nurses’s Day
ಆರೋಗ್ಯ3 hours ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ3 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ7 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ8 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ9 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು17 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌