Best Places to Visit in Coorg : ಕೊಡಗಿನಲ್ಲಿ ಮೈಮರೆಸುವ ಈ ತಾಣಗಳನ್ನು ನೀವು ನೋಡಲೇಬೇಕು… - Vistara News

ಕರ್ನಾಟಕ

Best Places to Visit in Coorg : ಕೊಡಗಿನಲ್ಲಿ ಮೈಮರೆಸುವ ಈ ತಾಣಗಳನ್ನು ನೀವು ನೋಡಲೇಬೇಕು…

ಈ ಮಳೆಗಾಲದಲ್ಲಿ ಮಡಿಕೇರಿ ಕಡೆ ಪ್ರಯಾಣ (Best Places to Visit in Coorg) ಮಾಡೋಣ ಎಂದು ನೀವು ಆಲೋಚನೆ ಮಾಡಿರಬಹುದು. ಅದಕ್ಕೆಂದೇ ಅಲ್ಲಿನ ಪ್ರವಾಸಿ ತಾಣಗಳ ವಿವರವನ್ನು ನಾವಿಲ್ಲಿ ಕೊಟ್ಟಿದ್ದೇವೆ.

VISTARANEWS.COM


on

madikere trip
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಡಗು- ಕರ್ನಾಟಕದ ಅತ್ಯಂತ ಸುಂದರ ಜಿಲ್ಲೆಗಳಲ್ಲಿ ಒಂದು. ಪಶ್ಚಿಮ ಘಟ್ಟದ ಬೆಟ್ಟಗಳ ಸಾಲು, ಅಲ್ಲಲ್ಲಿ ಹರಿವ ಜಲಪಾತಗಳು, ಮಂಜಿನಿಂದ ಆವರಿಸಿಕೊಂಡ ಪರ್ವತಗಳು, ಚಹಾ ಮತ್ತ ಕಾಫಿ ತೋಟಗಳು ಎಲ್ಲವೂ ಸೇರಿಕೊಂಡು ಕೊಡಗನ್ನು ನಿಸರ್ಗ ತಾಯಿಯ ಮಡಿಲಿನಂತೆ ಮಾಡಿವೆ. ಈ ಜಿಲ್ಲೆ ನಿಸರ್ಗ ಪ್ರೇಮಿಗಳಿಗೆ ಸ್ವರ್ಗವೇ ಸರಿ. ಅತ್ಯದ್ಭುತ ಪ್ರವಾಸಿ ತಾಣಗಳನ್ನು ಹೊಂದಿರುವ ಕೊಡಗಿನ ಮಡಿಕೇರಿಯ ಕೆಲವು ಪ್ರವಾಸಿ ತಾಣಗಳ (Madikeri Trip) ಬಗ್ಗೆ ಇಲ್ಲಿದೆ ಉಪಯುಕ್ತ ವಿವರ.

ಅಬ್ಬೆ ಜಲಪಾತ


ಅಬ್ಬೆ ಜಲಪಾತವನ್ನು ಅಬ್ಬಿ ಜಲಪಾತ ಎಂದೂ ಕರೆಯಲಾಗುತ್ತದೆ. ಇದು ಮಡಿಕೇರಿ ಪಟ್ಟಣದಿಂದ ಕೇವಲ 1 ಕಿ.ಮೀ ದೂರದಲ್ಲಿದೆ. ಇದನ್ನು ಕೆಲವು ವರ್ಷಗಳ ಹಿಂದೆ ಜೆಸ್ಸಿ ಫಾಲ್ಸ್‌ ಎಂದೂ ಕರೆಯುತ್ತಿದ್ದರು. ಕಾಫಿ ತೋಟಗಳ ನಡುವೆ ಮೂಡಿರುವ ಈ ಜಲಪಾತ ಅತ್ಯಂತ ಸುಂದರವಾದ ಜಲಪಾತವೆಂದೂ ಕರೆಸಿಕೊಂಡಿದೆ. ಮಳೆಗಾಲದ ಸಮಯದಲ್ಲಿ ಇಲ್ಲಿ ಹೆಚ್ಚಿನ ನೀರಿನ ಹರಿವು ಇರುತ್ತದೆ. ಬೇಸಿಗೆಯ ಸಮಯದಲ್ಲೂ ಸಣ್ಣ ಪ್ರಮಾಣದಲ್ಲಿ ನೀರು ಹರಿಯುತ್ತದೆ. ಇಲ್ಲಿ ತೂಗು ಸೇತುವೆಯೂ ಇದೆ. ಮಳೆಗಾಲದಲ್ಲಿ ಮಳೆ ಕಡಿಮೆ ಇರುವ ಸಮಯ ಮತ್ತು ಚಳಿಗಾಲದ ಸಮಯವು ಇಲ್ಲಿಗೆ ಭೇಟಿ ನೀಡಲು ಸೂಕ್ತ ಸಮಯವಾಗಿದೆ.

ಚಿಕ್ಲಿಹೊಳೆ ಜಲಾಶಯ


ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಲಿಹೊಳೆ ಜಲಾಶಯವೂ ಒಂದಾಗಿದೆ. ಇದು ಮಡಿಕೇರಿ ಮತ್ತು ಕುಶಾಲನಗರ ಪಟ್ಟಣದ ನಡುವೆ ಇರುವ ನಂಜರಾಯಪಟ್ಟಣಕ್ಕೆ ಸಮೀಪದಲ್ಲಿ ಇದೆ. ಎರಡೂ ನಗರಗಳಿಂದ ಈ ಜಲಾಶಯಕ್ಕೆ 15 ಕಿ.ಮೀ ಅಂತರವಿದೆ. ಇಲ್ಲಿ ದಟ್ಟವಾದ ಅರಣ್ಯದ ಸೌಂದರ್ಯವನ್ನೂ ನೀವು ಸವಿಯಬಹುದು. ಇಲ್ಲಿಂದ ಸೂರ್ಯಾಸ್ತಮಾನದ ವಿಹಂಗಮ ನೋಟವನ್ನೂ ಕಾಣಬಹುದಾಗಿದೆ. ಈ ಜಲಾಶಯದಲ್ಲಿ ಯಾವುದೇ ಅಂಗಡಿಗಳಿಲ್ಲವಾದ್ದರಿಂದ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವಾಗ ನಿಮಗೆ ಬೇಕಾದ ಎಲ್ಲ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗುವುದು ಒಳಿತು. ಇಲ್ಲಿಗೆ ಭೇಟಿ ನೀಡಲು ಜೂನ್‌ನಿಂದ ಮಾರ್ಚ್‌ ತಿಂಗಳವರೆಗೆ ಸೂಕ್ತ ಸಮಯವಾಗಿದೆ.

ದುಬಾರೆ ಆನೆ ಶಿಬಿರ


ದುಬಾರೆ ಆನೆ ಶಿಬಿರ ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿಯ ದಡದಲ್ಲಿಯೇ ಇರುವ ಆನೆ ಶಿಬಿರವಾಗಿದೆ. ಇದು ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ಮತ್ತು ಜಂಗಲ್‌ ಲಾಡ್ಜ್‌ಗಳು, ರೆಸಾರ್ಟ್‌ಗಳ ಸಹಯೋಗದಲ್ಲಿ ಕೈಗೊಂಡಿರುವ ಯೋಜನೆಗಳಲ್ಲಿ ಒಂದಾಗಿದೆ. ಇಲ್ಲಿ ಈ ಹಿಂದೆ ಮೈಸೂರು ದಸರಾಕ್ಕೆ ಆನೆಗಳಿಗೆ ತರಬೇತಿ ನೀಡಲಾಗುತ್ತಿತ್ತು. ಆದರೆ ಈಗ ಆನೆಗಳನ್ನು ಜಂಗಲ್‌ ರೈಡ್‌ ಮಾಡಲು ಹಾಗೂ ಇತರೆ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಇಲ್ಲಿ ಆನೆಗಳ ಮೇಲೆ ಸವಾರಿ ಮಾಡುವುದಷ್ಟೇ ಅಲ್ಲದೆ ಅವುಗಳಿಗೆ ಆಹಾರ ನೀಡಬಹುದು. ಹಾಗೆಯೇ ಅವುಗಳ ಜತೆ ಹಲವು ರೀತಿಯ ಮನರಂಜನೆಯ ಚಟುವಟಿಕೆ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಹಾರಂಗಿ ಅಣೆಕಟ್ಟು


ಕುಶಾಲನಗರದ ಸಮೀಪದ ಹುದ್ಗೂರು ಗ್ರಾಮದಲ್ಲಿ ನೀವು ಹಾರಂಗಿ ಅಣೆಕಟ್ಟನ್ನು ಕಾಣಬಹುದು. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾದ ಮೊದಲನೇ ಅಣೆಕಟ್ಟು ಇದಾಗಿದೆ. ಇದು 47 ಮೀಟರ್‌ ಎತ್ತರ ಮತ್ತು 846 ಮೀಟರ್‌ ಉದ್ದವಿದೆ. ಮಡಿಕೇರಿಯಿಂದ ಸುಮಾರು 36 ಕಿ.ಮೀ ದೂರದಲ್ಲಿರುವ ಈ ಅಣೆಕಟ್ಟಿಗೆ ನೀವು ನಿಮ್ಮ ಕುಟುಂಬದೊಂದಿಗೆ ಪ್ರವಾಸ ಕೈಗೊಳ್ಳಬಹುದು. ನೀವು ಇಲ್ಲಿ ಏಕಾಂತದ ಸಮಯವನ್ನೂ ಕಳೆಯಬಹುದು. ಇಲ್ಲಿ ವಸತಿಗೆಂದು ಗೆಸ್ಟ್‌ ಹೌಸ್‌ಗಳನ್ನೂ ನಿರ್ಮಿಸಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಗೆಸ್ಟ್‌ ಹೌಸ್‌ನಲ್ಲಿ ಬುಕ್ಕಿಂಗ್‌ ಮಾಡಿಕೊಳ್ಳಬಹುದು.

ಹೊನ್ನಮ್ಮನ ಕೆರೆ


ಕೊಡಗಿನಲ್ಲಿ ಪ್ರಸಿದ್ಧವಾಗಿರುವ ಕೆರೆಯೆಂದರೆ ಅದು ಹೊನ್ನಮ್ಮನ ಕೆರೆ. ಪೂರ್ತಿ ಕೊಡಗು ಪ್ರದೇಶದಲ್ಲಿ ಇದೇ ದೊಡ್ಡ ಕೆರೆಯಾಗಿದೆ. ಸೋಮವಾರಪೇಟೆ ಪಟ್ಟಣದಿಂದ 6 ಕಿ.ಮೀ ದೂರದಲ್ಲಿರುವ ಸುಲಿಮಲ್ತೆ ಗ್ರಾಮದ ಸಮೀಪದ ದಡ್ಡಮಲ್ತೆಯಲ್ಲಿ ಈ ಕೆರೆಯಿದೆ. ಹೊನ್ನಮ್ಮ ದೇವಿಗೆ ಸಮರ್ಪಿತವಾದ ದೇವಾಲಯವೂ ಕೆರೆಯ ಸಮೀಪದಲ್ಲೇ ಇದೆ. ‌ಹೊನ್ನಮ್ಮ ದೇವಿ ಜನರ ಯೋಗಕ್ಷೇಮಕ್ಕಾಗಿ ತನ್ನ ಜೀವನವನ್ನು ತ್ಯಾಗ ಮಾಡಿದವಳು ಎಂದು ನಂಬಲಾಗುತ್ತದೆ. ಹಾಗಾಗಿ ಇಲ್ಲಿಗೆ ಪ್ರಕೃತಿ ಪ್ರಿಯರು ಮಾತ್ರವಲ್ಲದೆ ಧಾರ್ಮಿಕ ಪ್ರವಾಸಿಗರೂ ಬರುತ್ತಾರೆ. ಇಲ್ಲಿ ಬೋಟಿಂಗ್‌ ಮಾಡಬಹುದು ಹಾಗೂ ಮೀನುಗಾರಿಕೆಯನ್ನೂ ಮಾಡಬಹುದಾಗಿದೆ.

ಓಂಕಾರೇಶ್ವರ ದೇಗುಲ


ಮಡಿಕೇರಿಯ ಪ್ರಸಿದ್ಧ ಶಿವ ದೇವಾಲಯವೆಂದರೆ ಅದು ಓಂಕಾರೇಶ್ವರ ದೇವಾಲಯ. ಈ ದೇವಸ್ಥಾನವನ್ನು ಲಿಂಗ ರಾಜೇಂದ್ರನು 1820ರಲ್ಲಿ ನಿರ್ಮಿಸಿದ ಎನ್ನಲಾಗುತ್ತದೆ. ಮಡಿಕೇರಿ ನಗರದಿಂದ ಕೇವಲ ಒಂದು ಕಿ.ಮೀ ದೂರದಲ್ಲಿ ಈ ದೇವಾಲಯವಿದೆ. ದೇವಾಲಯವು ಇಸ್ಲಾಮಿಕ್‌ ಮತ್ತು ಗೋಥಿಕ್‌ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದೆ. ದೇವಾಲಯದ ಮುಂಭಾಗದಲ್ಲಿ ಕೊಳವಿದೆ. ಸುತ್ತಲೂ ನಾಲ್ಕು ಮಿನಾರ್‌ಗಳು ಮತ್ತು ದೇವಾಲಯದ ಮಧ್ಯದಲ್ಲಿ ಗುಮ್ಮಟವಿದೆ.

ಕೋಟೆಬೆಟ್ಟ


ಕೊಡಗಿನಲ್ಲಿ ಟ್ರೆಕ್ಕಿಂಗ್‌ಗೆ ಪ್ರಸಿದ್ಧವಾಗಿರುವ ತಾಣಗಳಲ್ಲಿ ಒಂದು ಕೋಟೆ ಬೆಟ್ಟ. ಕೊಡಗು ಪ್ರದೇಶದಲ್ಲಿ ತಡಿಯಂಡಮೋಲ್‌ ಮತ್ತು ಬ್ರಹ್ಮಗಿರಿಯ ನಂತರ ಮೂರನೇ ಅತಿ ಎತ್ತರದ ಬೆಟ್ಟ ಇದಾಗಿದೆ. ಇದು ಸಮುದ್ರ ಮಟ್ಟದಿಂದ ಸುಮಾರು 1620 ಮೀಟರ್‌ ಎತ್ತರದಲ್ಲಿದೆ. ಈ ಬೆಟ್ಟವು ಸೋಮವಾರಪೇಟೆ ಮತ್ತು ಮಡಿಕೇರಿಯ ನಡುವೆ ಇರುವ ಮಾದಾಪುರದಲ್ಲಿದೆ. ಬೆಟ್ಟದ ತುದಿಯಲ್ಲಿ ಶಿವನ ದೇವಾಲಯವೊಂದಿದೆ. ಹಟ್ಟಿಹೊಳೆ ಪ್ರದೇಶದಿಂದ ಸುಮಾರು 10 ಕಿ.ಮೀ ಟ್ರೆಕ್ಕಿಂಗ್‌ ಮಾಡಿದರೆ ಈ ಬೆಟ್ಟದ ತುದಿ ತಲುಪಬಹುದು. ಟ್ರೆಕ್ಕಿಂಗ್‌ ಮಾಡುವಾಗ ಹಚ್ಚ ಹಸಿರಿನ ನಿಸರ್ಗವನ್ನು ನೋಡುತ್ತಾ ಸಾಗುವುದರಿಂದ ನಿಮಗೆ ಹೆಚ್ಚಿನ ಆಯಾಸವೂ ಎನಿಸುವುದಿಲ್ಲ. ಇಲ್ಲಿ ಟ್ರೆಕ್ಕಿಂಗ್‌ ಮಾಡುವುದಕ್ಕೆ ಅನುಮತಿಯ ಅವಶ್ಯಕತೆಯಿಲ್ಲ.

ಮಡಿಕೇರಿ ಕೋಟೆ


ಮಡಿಕೇರಿ ಕೋಟೆಯನ್ನು 17ನೇ ಶತಮಾನದ ಕೊನೆಯಲ್ಲಿ ಮುದ್ದುರಾಜರು ನಿರ್ಮಿಸಿದರು. ನಂತರ ಟಿಪ್ಪು ಸುಲ್ತಾನನ ಆಳ್ವಿಕೆಯಲ್ಲಿ ಕೋಟೆಯನ್ನು ನವೀಕರಣ ಮಾಡಲಾಯಿತು. ಈ ಕೋಟೆ ಶ್ರೀಮಂತ ಇತಿಹಾಸವನ್ನು ಹೊಂದಿದೆ. ರಾಜರ ಆಳ್ವಿಕೆ ಜತೆ ಬ್ರಿಟಿಷರ ಆಳ್ವಿಕೆಯನ್ನೂ ಕಂಡಿರುವ ಈ ಕಟ್ಟಡವನ್ನು ಇದೀಗ ಜಿಲ್ಲಾಧಿಕಾರಿ ಕಚೇರಿಯಾಗಿ ಬಳಸಿಕೊಳ್ಳಲಾಗುತ್ತಿದೆ. ಈ ಕೋಟೆಯೊಳಗೆ ವೀರಭದ್ರ ದೇವರಿಗೆ ಸಮರ್ಪಿತವಾದ ದೇವಾಲಯವಿತ್ತು. 1855ರಲ್ಲಿ ಬ್ರಿಟಿಷರು ಆ ದೇವಾಲಯವನ್ನು ತೆಗೆದು ಹಾಕಿದರು. ಆ ಜಾಗದಲ್ಲಿ ಚರ್ಚ್‌ ಅನ್ನು ನಿರ್ಮಿಸಿದರು. ಚರ್ಚ್‌ ಗೋಥಿಕ್‌ ಶೈಲಿಯ ವಾಸ್ತುಶಿಲ್ಪ ಹೊಂದಿದೆ. ಈ ಚರ್ಚ್‌ ಸದ್ಯ ರಾಜ್ಯ ಪುರಾತತ್ವ ಇಲಾಖೆಯ ನಿಯಂತ್ರಣದಲ್ಲಿದೆ. ಕೋಟೆಯಲ್ಲಿ ಮಹಾತ್ಮಾ ಗಾಂಧಿ ಸಾರ್ವಜನಿಕ ಗ್ರಂಥಾಲಯ, ಕೋಟೆ ಮಹಾಗಣಪತಿ ದೇವಾಲಯ, ಜಿಲ್ಲಾ ಕಾರಾಗೃಹ ಸೇರಿ ಅನೇಕ ಕಟ್ಟಡಗಳು ಇವೆ.

ಮಲ್ಲಳ್ಳಿ ಜಲಪಾತ


ಪುಷ್ಪಗಿರಿ ಬೆಟ್ಟಗಳ ಶ್ರೇಣಿಯಲ್ಲಿ ನಿಮಗೆ ಮಲ್ಲಳ್ಳಿ ಜಲಪಾತ ಕಾಣಲು ಸಿಗುತ್ತದೆ. ಸೋಮವಾರಪೇಟೆಯ ಬೆಟ್ಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಪಾತವಿದೆ. ಇಲ್ಲಿ ಸುಮಾರು 200 ಅಡಿ ಎತ್ತರದಿಂದ ಕುಮಾರಧಾರಾ ನದಿ ಧುಮ್ಮಿಕ್ಕುತ್ತದೆ. ಇದು ಟ್ರೆಕ್ಕಿಂಗ್‌ ತಾಣ ಕೂಡ ಹೌದು. ಈ ಜಲಪಾತವು ಸೋಮವಾರಪೇಟೆಯಿಂದ 25 ಕಿಲೋಮೀಟರ್ ದೂರದಲ್ಲಿದೆ ಮತ್ತು ಕುಶಾಲನಗರದಿಂದ 42 ಕಿಮೀ ದೂರದಲ್ಲಿದೆ. ಮಳೆಗಾಲದಲ್ಲಿ ಜಲಪಾತದಲ್ಲಿ ಹೆಚ್ಚು ನೀರು ಇರುವುದರಿಂದ ಅದು ಹೆಚ್ಚು ಸುಂದರವಾಗಿ ಕಾಣುತ್ತದೆ.

ಮಾಂದಲಪಟ್ಟಿ


ಅಬ್ಬೆ ಜಲಪಾತಕ್ಕೆ ಹೋಗುವ ದಾರಿಯಲ್ಲೇ ಈ ಟ್ರೆಕ್ಕಿಂಗ್‌ ಸ್ಥಳ ನಿಮಗೆ ಸಿಗುತ್ತದೆ. ಮಡಿಕೇರಿಯಿಂದ ಸುಮಾರು 25 ಕಿ.ಮೀ ದೂರದಲ್ಲಿ ಮಾಂದಲಪಟ್ಟಿಯಿದೆ. ಇಲ್ಲಿ ಹೆಚ್ಚಿನ ಪ್ರವಾಸಿಗರೇನು ಇರುವುದಿಲ್ಲವಾದ್ದರಿಂದ ನೀವು ಅರಾಮವಾಗಿ ಟ್ರೆಕ್ಕಿಂಗ್‌ ಮಾಡಬಹುದು. ಇಲ್ಲಿ ಟ್ರೆಕ್ಕಿಂಗ್‌ ಮಾಡುವುದಕ್ಕೂ ಮೊದಲು ಅಧಿಕಾರಿಗಳಿಂದ ಪ್ರವೇಶ ಟಿಕೆಟ್‌ ತೆಗೆದುಕೊಳ್ಳಬೇಕು. ಇಲ್ಲಿಗೆ ಯಾವುದೇ ಬಸ್ಸುಗಳ ಸಂಪರ್ಕ ಇಲ್ಲವಾದ್ದರಿಂದ ನೀವು ಬಾಡಿಗೆ ವಾಹನಗಳನ್ನು ಮಾಡಿಸಿಕೊಂಡು ಮಾಂದಲಪಟ್ಟಿಗೆ ಹೋಗಬಹುದು.

ನಾಲ್ಕನಾಡ್‌ ಅರಮನೆ


ನಾಲ್ಕನಾಡ್‌ ಅರಮನೆಯು ಯುವಕಪಾಡಿ ಹೆಸರಿನ ಹಳ್ಳಿಯ ಸಮೀಪದಲ್ಲಿದೆ. ಇದು ಮಡಿಕೇರಿಯಿಂದ 45 ಕಿ.ಮೀ ದೂರದಲ್ಲಿದೆ. ಇದನ್ನು 1792ರಲ್ಲಿ ಹಾಲೇರಿ ದೊರೆ ದೊಡ್ಡ ವೀರರಾಜೇಂದ್ರ ನಿರ್ಮಿಸಿದರು. ನಂತರ 1796ರಲ್ಲಿ, ದೊಡ್ಡ ವೀರರಾಜೇಂದ್ರ ಇಲ್ಲಿ ಮಹಾದೇವ ಅಮ್ಮಾಜಿಯನ್ನು ವಿವಾಹವಾದರು. ಟಿಪ್ಪು ಸುಲ್ತಾನನ ಸೈನ್ಯದಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಈ ಅರಮನೆ ನಿರ್ಮಿಸಲಾಗಿತ್ತು. ಈ ಅರಮನೆಯಿಂದ ಮಡಿಕೇರಿಯವರೆಗೆ ಸುರಂಗ ಮಾರ್ಗವನ್ನೂ ಮಾಡಿಕೊಳ್ಳಲಾಗಿತ್ತು. ಕೊಡಗು ಜಿಲ್ಲೆಯ ಮೇಲೆ ಬ್ರಿಟಿಷರ ಆಕ್ರಮಣದ ಸಮಯದಲ್ಲಿ ಹಾಲೇರಿ ಕುಟುಂಬದ ಕೊನೆಯ ಚಕ್ರವರ್ತಿ ಚಿಕ್ಕವೀರ ರಾಜೇಂದ್ರ ಕೂಡ ಈ ಅರಮನೆಯಲ್ಲಿ ಆಶ್ರಯ ಪಡೆದಿದ್ದರು. ಅರಮನೆಯ ಚಾವಣಿಗಳು ಮತ್ತು ಗೋಡೆಗಳು ಅನೇಕ ಪ್ರಾಚೀನ ವರ್ಣಚಿತ್ರಗಳು ಮತ್ತು ಕೆತ್ತನೆಗಳಿಂದ ಅಲಂಕರಿಸಲ್ಪಟ್ಟಿವೆ. ಅರಮನೆಯೊಳಗೆ ಕಲ್ಯಾಣ ಮಂಟಪವನ್ನು ಕಾಣಬಹುದಾಗಿದೆ. ಇಲ್ಲಿ ಭವ್ಯವಾದ ದರ್ಬಾರ್ ಕೂಡ ಇದೆ. ಹಾಗೆಯೇ ನೆಲಮಾಳಿಗೆಯಲ್ಲಿ ರಾಜ ಅಡಗುವುದಕ್ಕೆಂದು ಮಾಡಿಕೊಂಡಿದ್ದ ಎರಡು ಕಪ್ಪು ಕೋಣೆಗಳಿವೆ.

ನೆಹರು ಮಂಟಪ


ಪ್ರಕೃತಿ ಪ್ರಿಯರಿಗೆ ಏಕಾಂತವಾಗಿ ಕಾಲ ಕಳೆಯಬೇಕೆಂದರೆ ಅವರು ನೆಹರು ಮಂಟಪಕ್ಕೆ ಭೇಟಿ ನೀಡಬೇಕು. ಮಡಿಕೇರಿ ಆಕಾಶವಾಣಿ ಕೇಂದ್ರ ಹಿಂಭಾಗದಲ್ಲಿರುವ ಬೆಟ್ಟದ ತುದಿಯಲ್ಲಿ ಈ ಸ್ಥಳವಿದೆ. ಇಲ್ಲಿಗೆ ತಲುಪಲು ಪ್ರವಾಸಿಗರು 25-30 ಮೆಟ್ಟಿಲುಗಳನ್ನು ಹತ್ತಬೇಕಾಗುತ್ತದೆ. ಇಲ್ಲಿಂದ ಸುತ್ತಲೂ ತುಂಬಿಕೊಂಡಿರುವ ಹಸಿರನ್ನು ನೀವು ಕಣ್ತುಂಬಿಸಿಕೊಳ್ಳಬಹುದು.

ಪಾಡಿ ಇಗ್ಗುತಪ್ಪ ದೇಗುಲ


ಈ ದೇವಸ್ಥಾನವು ಕಕ್ಕಬೆ ಪಟ್ಟಣದಲ್ಲಿದೆ. 1810ರಲ್ಲಿ ಲಿಂಗರಾಜೇಂದ್ರರಿಂದ ನಿರ್ಮಿಸಲ್ಪಟ್ಟ. ಇದು ಅತ್ಯಂತ ಪುರಾತನವಾದ ದೇವಾಲಯಗಳಲ್ಲಿ ಒಂದಾಗಿದೆ ಮತ್ತು ಕೊಡವರಲ್ಲಿ ಅತ್ಯಂತ ಮಹತ್ವದ್ದಾಗಿದೆ. ದೇಗುಲವು ಮಡಿಕೇರಿ ನಗರದಿಂದ ವಿರಾಜಪೇಟೆಯ ಕಡೆಗೆ 45 ಕಿ.ಮೀ ದೂರದಲ್ಲಿದೆ. ಸುಬ್ರಹ್ಮಣ್ಯ ದೇವರ ಇನ್ನೊಂದು ಹೆಸರಾದ ಇಗ್ಗುತಪ್ಪ ದೇವರಿಗೆ ಈ ದೇವಾಲಯ ಸಮರ್ಪಿತವಾಗಿದೆ. ಈ ದೇಗುಲವು ಕೊಡವರ ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಆಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿ ವರ್ಷ ಮಾರ್ಚ್‌ ತಿಂಗಳಲ್ಲಿ ಈ ದೇಗುಲದ ಉತ್ಸವವನ್ನು ನಡೆಸಲಾಗುತ್ತದೆ.

ರಾಜಾ ಸೀಟ್‌


ಮಡಿಕೇರಿ ಪಟ್ಟಣದಲ್ಲಿರುವ ರಾಜಾ ಸೀಟ್‌ ಆಗಿನ ಕಾಲದ ಕೂರ್ಗ್‌ ರಾಜರ ನೆಚ್ಚಿನ ಸ್ಥಳವಾಗಿತ್ತು. ಇಲ್ಲಿಂದ ನೋಡಿದರೆ ನಿಮಗೆ ಸುತ್ತಲಿನ ಕಣಿವೆ ಪ್ರದೇಶವು ನಿಮಗೆ ಅತ್ಯದ್ಭುತವಾಗಿ ಕಾಣಿಸುತ್ತದೆ. ಬಿಸಿಲಿನ ಸಮಯದಲ್ಲಿ ಹೋಗದೆ ಬೆಳಗಿನ ಸಮಯದಲ್ಲಿ ಹಾಗೂ ಸಂಜೆಯ ಸಮಯದಲ್ಲಿ ಇಲ್ಲಿಗೆ ಹೋದರೆ ನಿಮಗೆ ತಂಪಾದ ನಿಸರ್ಗ ಕಾಣಸಿಗುತ್ತದೆ. ಉದ್ಯಾನವನದ ಎಡಭಾಗದಲ್ಲಿ, ಮಹಾತ್ಮ ಗಾಂಧಿಯವರ ಅವಶೇಷಗಳನ್ನು ಇರಿಸಲಾಗಿರುವ ಗಾಂಧಿ ಮಂಟಪವಿದೆ. ಉದ್ಯಾನವಾಗಿರುವ ಇಲ್ಲಿ ಮಕ್ಕಳ ಮನೋರಂಜನೆಗೆಂದು ಆಟದ ಸಾಮಾಗ್ರಿಗಳನ್ನೂ ಇರಿಸಲಾಗಿದೆ. ಇಲ್ಲಿ ಆಟಿಕೆ ರೈಲೂ ಇದ್ದು, ಮಕ್ಕಳಿಗೆ ಹೆಚ್ಚು ಇಷ್ಟವಾಗುತ್ತದೆ. ಉದ್ಯಾನ ಪ್ರವೇಶಿಸಲು ಒಬ್ಬರಿಗೆ 5 ರೂ. ಶುಲ್ಕ ವಿಧಿಸಲಾಗುತ್ತದೆ.

ಸುಂಟಿಕೊಪ್ಪ


ಮಡಿಕೇರಿಯಿಂದ 15 ಕಿ.ಮೀ ದೂರದಲ್ಲಿ ನಿಮಗೆ ಸುಂಟಿಕೊಪ್ಪ ಸಿಗುತ್ತದೆ. ಇಲ್ಲಿ ಕಾಫಿ ತೋಟ ಹೆಚ್ಚಾಗಿದ್ದು, ಕಣ್ಣು ತಿರುಗಿಸಿದಲ್ಲೆಲ್ಲ ಹಸಿರೇ ಕಾಣಸಿಗುತ್ತದೆ. ಪ್ರಕೃತಿ ಪ್ರಿಯರಿಗೆ ಇದು ಹೇಳಿ ಮಾಡಿಸಿರುವ ಸ್ಥಳ ಎನ್ನಬಹುದು. ಇಲ್ಲಿ ನೀವು ಅನೇಕ ರೀತಿಯ ವಲಸೆ ಪಕ್ಷಿಗಳು ಮತ್ತು ನಿವಾಸಿ ಪಕ್ಷಿಗಳನ್ನೂ ಕಾಣಬಹುದು. ಹಾಗಾಗಿ ಪಕ್ಷಿ ಪ್ರಿಯರಿಗೂ ಈ ಸ್ಥಳ ಇಷ್ಟವಾಗುತ್ತದೆ. ಇಲ್ಲಿ ಅಯ್ಯಪ್ಪ ದೇವಾಲಯವೂ ಇದ್ದು, ಧಾರ್ಮಿಕ ಪ್ರವಾಸಿಗರಿಗೂ ಇದು ಸೂಕ್ತ ಸ್ಥಳವಾಗಿದೆ. ಇಲ್ಲಿ ಅನೇಕ ಕಾಟೇಜ್‌ಗಳು, ಹೋಮ್‌ ಸ್ಟೇಗಳು, ಹೋಟೆಲ್‌ಗಳು ಇರುವುದರಿಂದ ವಾಸ ಹೂಡುವುದಕ್ಕೂ ಸಮಸ್ಯೆಯಿರುವುದಿಲ್ಲ.

ತಡಿಯಂಡಮೋಲ್ ಟ್ರೆಕ್ಕಿಂಗ್‌


ಟ್ರೆಕ್ಕಿಂಗ್‌ ಪ್ರಿಯರಿಗೆ ಕೊಡಗಿನಾದ್ಯಂತ ಹಲವಾರು ಸ್ಥಳಗಳಿವೆ. ಅವುಗಳಲ್ಲಿ ಒಂದು ತಡಿಯಂಡಮೋಲ್‌ ಟ್ರೆಕ್ಕಿಂಗ್‌ ಸ್ಥಳ. ಈ ಸ್ಥಳ ಸಮುದ್ರ ಮಟ್ಟದಿಂದ 1746 ಮೀಟರ್‌ ಎತ್ತರದಲ್ಲಿದೆ. ಇದು ಕಕ್ಕಬೆ ಪಟ್ಟಣದಿಂದ 8 ಕಿ.ಮೀ ಹಾಗೂ ಮಡಿಕೇರಿಯಿಂದ 35 ಕಿ.ಮೀ ದೂರದಲ್ಲಿದೆ. ಚಳಿಗಾಲದ ಆರಂಭದ ಅವಧಿಯಲ್ಲಿ ಇಲ್ಲಿ ಟ್ರೆಕ್ಕಿಂಗ್‌ ಮಾಡುವುದು ಸೂಕ್ತ. ಇಲ್ಲಿಗೆ ಜೀಪ್‌ನಂತಹ ವಾಹನದಲ್ಲಿ ಮೂರನೇ ಒಂದು ಭಾಗವನ್ನು ಕ್ರಮಿಸಬಹುದು. ಇನ್ನು ಬೆಟ್ಟದ ತುದಿ ತಲುಪುವುದಕ್ಕೆ ಕಡಿದಾದ ದಾದಿಯಲ್ಲಿ ಚಾರಣ ಮಾಡಬೇಕಾಗುತ್ತದೆ. ಚಾರಣದ ಮಧ್ಯೆ ನಾಲ್ಕನಾಡ್‌ ಅರಮನೆಯಲ್ಲಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಬಹುದು. ತಡಿಯಂಡಮೋಲ್‌ನಿಂದ ಪಾಡಿ ಇಗ್ಗುತಪ್ಪ ದೇವಸ್ಥಾನಕ್ಕೂ ಭೇಟಿ ನೀಡಬಹುದು. ಕೊಡವರ ಪ್ರಮುಖ ದೇವಾಲಯಗಳಲ್ಲಿ ಒಂದಾದ ಇದು ಕೆಲವೇ ಕಿಲೋಮೀಟರ್ ದೂರದಲ್ಲಿದೆ.

ತಲಕಾವೇರಿ


ಬ್ರಹ್ಮಗಿರಿ ಬೆಟ್ಟದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ತಲಕಾವೇರಿ. ಇದು ಭಾಗಮಂಡಲದಿಂದ 8 ಕಿ.ಮೀ ಹಾಗೂ ಮಡಿಕೇರಿಯಿಂದ 48 ಕಿ.ಮೀ ದೂರದಲ್ಲಿದೆ. ಸಮುದ್ರ ಮಟ್ಟದಿಂದ 1276 ಮೀಟರ್‌ ಎತ್ತರದಲ್ಲಿರುವ ಈ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆ ಅಥವಾ ಬ್ರಹ್ಮ ಕುಂಡಿಕೆ ಎಂದು ಕರೆಯಲ್ಪಡುವ ನೀರಿನ ಬುಗ್ಗೆ ಇದೆ. ಇದು ಕಾವೇರಿ ನದಿಯ ಮೂಲ ಎಂದು ಹೇಳಲಾಗುತ್ತದೆ. ಈ ಬ್ರಹ್ಮ ಕುಂಡಿಕೆ ಸಮೀಪದಲ್ಲಿಯೇ ದೇಗುಲವಿದೆ. ಅದರಲ್ಲಿ ನೀರಿನ ಪುಷ್ಕರಣಿಯಿದ್ದು, ಅಲ್ಲಿ ಭಕ್ತಾದಿಗಳು ಸ್ನಾನ ಮಾಡಬಹುದು. ಇಲ್ಲಿ ಒಂದು ಶಿವನ ದೇವಾಲಯವಿದ್ದರೆ ಇನ್ನೊಂದು ಗಣೇಶ ದೇಗುಲವಿದೆ. ತಲಕಾವೇರಿಯಿಂದ ಬ್ರಹ್ಮಗಿರಿ ಶಿಖರಕ್ಕೆ ಹೋಗಬಹುದು. ಪುರಾಣಗಳ ಪ್ರಕಾರ ಈ ಗಿರಿಯಲ್ಲಿ ಸಪ್ರ ಮಹರ್ಷಿಗಳು ವಿಶೇಷ ಯಜ್ಞವನ್ನು ಮಾಡಿದರು ಎಂದು ನಂಬಲಾಗುತ್ತದೆ.

ಯೆಮ್ಮೆಮಾಡುವಿನ ದರ್ಗಾ ಶರೀಫ್‌


ಕೊಡಗಿನ ಮುಸ್ಲಿಂ ಧರ್ಮೀಯರ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದು ಯೆಮ್ಮೆಮಾಡುವಿನ ದರ್ಗಾ ಶರೀಫ್‌. ಇದು ನಾಪೋಕ್ಲು ಪಟ್ಟಣದ ಬಳಿಯಿದೆ. ಹಜರತ್ ಸೂಫಿ ಶಹೀದ್ ಮತ್ತು ಸಯ್ಯದ್ ಹಸನ್ ಸಕಾಫ್ ಹಲ್ರಮಿರ್ ಅವರ ನೆನಪಿಗಾಗಿ ಈ ಸಮಾಧಿಯನ್ನು ನಿರ್ಮಿಸಲಾಗಿದೆ. ಈ ಇಬ್ಬರೂ ಸೂಫಿ ಸಂತರು ಸುಮಾರು 366 ವರ್ಷಗಳ ಹಿಂದೆ ಪರ್ಷಿಯಾದಿಂದ ಆಗಮಿಸಿದ್ದರು. ಅವರು ಜನರಿಗೆ ಧಾರ್ಮಿಕ ಪ್ರವಚನಗಳನ್ನು ನೀಡಿದರು ಮತ್ತು ಬಡವರ ಒಳಿತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಇಲ್ಲಿ ವಾರ್ಷಿಕ ಹಬ್ಬವನ್ನು 8 ದಿನಗಳ ಕಾಲ ಆಚರಿಸಲಾಗುತ್ತದೆ. ಈ ಆಚರಣೆಗೆ ಉರುಸ್‌ ಎಂದು ಕರೆಯಲಾಗುತ್ತದೆ. ಪ್ರತಿ ವರ್ಷ ಈ ಕಾರ್ಯಕ್ರಮಕ್ಕೆ ಎರಡರಿಂದ ಮೂರು ಲಕ್ಷ ಜನರು ಆಗಮಿಸುತ್ತಾರೆ.. ಮಹಿಳಾ ಯಾತ್ರಿಗಳಿಗೆ ದರ್ಗಾದೊಳಗೆ ಪ್ರವೇಶವಿಲ್ಲ. ಅವರಿಗೆಂದೇ ಪ್ರತ್ಯೇಕ ವ್ಯವಸ್ಥೆಯನ್ನು ಇಲ್ಲಿ ಮಾಡಲಾಗಿದೆ.

ಕರಡಾ ಗ್ರಾಮ


ಕಕ್ಕಬೆ ಪಟ್ಟಣದ ಸಮೀದಲ್ಲಿ ಕರಡಾ ಹೆಸರಿನ ಗ್ರಾಮವಿದೆ. ಇದು ವಿರಾಜಪೇಟೆಯಿಂದ 18 ಕಿ.ಮೀ ಮತ್ತು ಮಡಿಕೇರಿಯಿಂದ ಸರಿಸುಮಾರು 30 ಕಿ.ಮೀ ದೂರದಲ್ಲಿದೆ. ಈ ಸ್ಥಳವು ಕೂರ್ಗ್‌ನ ಕೆಲವು ಶ್ರೀಮಂತ ಪೂರ್ವಜರ ಮನೆಗಳನ್ನು ಹೊಂದಿದೆ. ಕೆಲವು ಪೂರ್ವಜರ ಮನೆಗಳು 200-300 ವರ್ಷಗಳಷ್ಟು ಹಳೆಯದಾಗಿದ್ದು, ಪ್ರವಾಸಿಗರಿಗೆ ಇತಿಹಾಸ ಮತ್ತು ಪುರಾತನ ಜೀವನದ ಸ್ಪರ್ಶವನ್ನು ನೀಡುತ್ತವೆ. ಈ ಮನೆಗಳ ಸುತ್ತಲೂ ಕಾಫಿ ತೋಟ ಆವರಿಸಿಕೊಂಡಿರುವುದರಿಂದ ನಿಮಗೆ ಮನಸ್ಸಿಗೆ ಮುದ ಸಿಕ್ಕಂತಾಗುತ್ತದೆ. ಹಲವು ಮನೆಗಳು ಪ್ರವಾಸಿಗರಿಗೆ ಗೆಸ್ಟ್‌ ಹೌಸ್‌ ರೀತಿಯಲ್ಲಿ ವ್ಯವಸ್ಥೆಯನ್ನೂ ಕಲ್ಪಿಸಿಕೊಡುತ್ತಿವೆ. ಹಾಗಾಗಿ ನೀವು ಅಲ್ಲಿ ವಾಸವಿದ್ದು, ಕೊಡಗಿನ ಸೌಂದರ್ಯದ ಜತೆ ಊಟವನ್ನು ಸವಿದು ಬರಬಹುದು.

ಗದ್ದಿಗೆ


ರಾಜ ವೀರರಾಜೇಂದ್ರ, ಲಿಂಗ ರಾಜೇಂದ್ರ ಮತ್ತು ಅವರ ಆಸ್ಥಾನದ ಪುರೋಹಿತರನ್ನು ಸಮಾಧಿ ಮಾಡಿದ ಸ್ಥಳವಿದು. ಇದೇ ಪ್ರದೇಶದಲ್ಲಿ ಅವರ ಕೆಚ್ಚೆದೆಯ ಮತ್ತು ನಿಷ್ಠಾವಂತ ಸೈನಿಕರಿಗೆ ಸೇರಿದ ಎರಡು ಸಣ್ಣ ಸಮಾಧಿಗಳಿವೆ. ಮೂರು ಮುಖ್ಯ ಸಮಾಧಿಗಳು ಪ್ರತ್ಯೇಕವಾಗಿ ನಿರ್ಮಿಸಲಾಗಿದೆ. ಸಮಾಧಿಯ ನಾಲ್ಕೂ ತುದಿಗಳಲ್ಲಿ ಗೋಪುರ ಹಾಗೂ ಮಧ್ಯದಲ್ಲಿ ಗುಮ್ಮಟವನ್ನು ನಿರ್ಮಿಸಲಾಗಿದೆ. ಇದು ನೋಡುವುದಕ್ಕೆ ಮುಸ್ಲಿಂ ದರ್ಗಾದಂತೆ ಕಾಣುತ್ತದೆ. ಇದನ್ನು 18ನೇ ಶತಮಾನದಲ್ಲಿ ನಿರ್ಮಿಸಲಾದ ದಾಖಲೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

HSRP Number Plate : ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

VISTARANEWS.COM


on

HSRP Number plate
Koo

ಬೆಂಗಳೂರು: 2019ಕ್ಕಿಂತ ಹಿಂದೆ ಮಾರುಕಟ್ಟೆಗೆ ಇಳಿದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಸಂಖ್ಯೆ ಫಲಕ (HSRP Number Plate) ಕಡ್ಡಾಯವಾಗಿ ಅಳವಡಿಸಬೇಕೆಂಬ ಗಡುವು ಜುಲೈ 4ರವರೆಗೆ ವಿಸ್ತರಣೆಯಾಗಿದೆ. ಹೀಗಾಗಿ ನಾನಾ ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ನಂಬರ್​ಪ್ಲೇಟ್​ ಅಳವಡಿಸದ ವಾಹನಗಳ ಮಾಲೀಕರಿಗೆ ನೆಮ್ಮದಿ ಸಿಕ್ಕಿದೆ. ಹೊಸ ನಂಬರ್​ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಹೈಕೋರ್ಟ್‌ ಮೇ 21ರಂದು ಹೊರಡಿಸಿದ್ದ ಆದೇಶ ಜುಲೈ 4ರವರೆಗೆ ವಿಸ್ತರಣೆಯಾಗಿರುವುದರಿಂದ ವಾಹನ ಮಾಲೀಕರಿಗೆ ತೊಂದರೆ ತಪ್ಪಿದೆ.

ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

ಪ್ರಕರಣದಲ್ಲಿ ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ, ಅವರೂ ಸರ್ಕಾರದ ನಿಲುವನ್ನು ಇದೇ ವೇಳೆ ವ್ಯಕ್ತಪಡಿಸಿದ್ದಾರೆ. “ಎಚ್‌ಎಸ್‌ಆರ್‌ಪಿ ಫಲಕಗಳ ಅಳವಡಿಕೆ ಅವಧಿಯನ್ನು ರಾಜ್ಯ ಸರಕಾರ 2024ರ ಆಗಸ್ಟ್‌ ಇಲ್ಲವೇ ಸೆಪ್ಟೆಂಬರ್‌ವರೆಗೂ ವಿಸ್ತರಿಸುವ ಚಿಂತನೆ ನಡೆಸಿದೆ. ಹೈಕೋರ್ಟ್‌ ಅನುಮತಿ ನೀಡಿದಲ್ಲಿ ಸರಕಾರ ಈ ಸಂಬಂಧ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಿದೆ,” ಎಂದು ಮನವರಿಕೆ ಮಾಡಿದರು. ಈ ವೇಳೆ ನ್ಯಾಯಪೀಠ, ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಅವಧಿಯನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲು ಸರಕಾರ ಸ್ವತಂತ್ರ,” ಎಂದು ಹೇಳಿತು.

ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುನ್ನ ನೋಂದಣಿಯಾದ ಎಲ್ಲ ಮಾದರಿಯ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ, ವಿತರಣೆ, ಅಳವಡಿಕೆ ಸೇರಿದಂತೆ ನಾನಾ ಸಮಸ್ಯೆಗಳಿಂದ ಈ ಯೋಜನೆಗೆ ಸಮಸ್ಯೆಯಾಗುತ್ತಿದೆ. ಸುರಕ್ಷಿತ ನಂಬರ್​ ಪ್ಲೇಟ್ ಅಳವಡಿಸಲು ಸುಮಾರು ಅರ್ಧದಷ್ಟು ವಾಹನ ಮಾಲೀಕರಿಗೆ ಇನ್ನೂ ಆಗಿಲ್ಲ. ಹೀಗಾಗಿ ಗಡುವು ವಿಸ್ತರಣೆ ಆಗುತ್ತಲೇ ಇದೆ. ಇದೀಗ ಕೋರ್ಟ್​ ಆದೇಶದ ಮೂಲಕ ಮತ್ತಷ್ಟು ವಿಸ್ತರಣೆಯಾಗಿದೆ. ಸರ್ಕಾರವೂ ಇದನ್ನು ಇನ್ನಷ್ಟು ಮುಂದುವರಿಸುವ ಯೋಜನೆ ಹೊಂದಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಕೆಲವು ಸಂಸ್ಥೆಗಳನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಆಕ್ಷೇಪಿಸಿ ಹೈ ಸೆಕ್ಯುರಿಟಿ ರೆಜಿಸ್ಪ್ರೇಷನ್‌ ಪ್ಲೇಟ್‌ ಮ್ಯಾನುಫ್ಯಾಕ್ಚರರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಸೇರಿ ಅವಕಾಶ ವಂಚಿತ ಕೆಲ ಸಂಸ್ಥೆಗಳು ನ್ಯಾಯಾಲಯದ ಮೊರೆ ಹೋಗಿವೆ. ಆ ಅರ್ಜಿ ಜತೆಗೆ ಮಧ್ಯಂತರ ಅರ್ಜಿ ಹೂಡಿರುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಧಿಸಿರುವ ಗಡುವು ವಿಸ್ತರಿಸಲು ಕೋರಿದೆ.

Continue Reading

ಕರ್ನಾಟಕ

Karnataka Weather: ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಭಾರಿ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

Rain News
ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಭಾರೀ ಮಳೆ ಸುರಿದಿದ್ದು, ಕಿನ್ನಾಳ ರಸ್ತೆಯಲ್ಲಿ ದೊಡ್ಡ ಪ್ರಮಾಣದಲ್ಲಿ ರಾಜಕಾಲುವೆ ನೀರು ರಸ್ತೆ ಮೇಲೆ ಹರಿದಿದ್ದರಿಂದ ವಾಹನ ಸವಾರರು ಪರದಾಡಿದರು.
Koo

ಬೆಂಗಳೂರು: ಕರ್ನಾಟಕದ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹತ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಜೂನ್‌ 14ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಜೂನ್‌ 16ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ

ಚಂಡಮಾರುತದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ: ಮೂಲ್ಕಿಯಿಂದ ಮಂಗಳೂರಿನವರೆಗೆ ದಕ್ಷಿಣ ಕನ್ನಡ, ಕರ್ನಾಟಕ ಕರಾವಳಿಗೆ ಹೈ ವೇವ್ ಅಲರ್ಟ್‌ ಇದೆ. . ಜೂನ್ 12‌ರಿಂದ 13ರ ಬೆಳಗ್ಗೆ 11:30 ಗಂಟೆಗಳವರೆಗೆ 1.9 – 2.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉಡುಪಿ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ ಹೈ ವೇವ್ ಅಲರ್ಟ್‌ ಇದೆ. ಜೂನ್‌ 12ರಿಂದ 13ರ ಬೆಳಗ್ಗೆ 11:30ರವರೆಗೆ 1.9- 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉತ್ತರ ಕನ್ನಡ: ಉತ್ತರ ಕನ್ನಡ, ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಹೈ ವೇವ್ ಅಲರ್ಟ್‌ ನೀಡಲಾಗಿದೆ. ಜೂನ್‌ 12ರಿಂದ 13ರ ರಾತ್ರಿ 11.30ರವರೆ 2.0 – 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ಸಲಹೆ ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ. ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29ನೇC ಮತ್ತು 21c ಆಗಿರಬಹುದು.

Continue Reading

ಪ್ರಮುಖ ಸುದ್ದಿ

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರವು ಮತ್ತೊಂದು ಶಾಕ್‌ ನೀಡಲು ಸಜ್ಜಾದಂತಿದೆ. ಒಂದು ವರ್ಷದಲ್ಲಿಯೇ ಎರಡು ಬಾರಿ ಮದ್ಯದ ಬೆಲೆಯೇರಿಕೆ ಮಾಡಿದ್ದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಮೂರನೇ ಬಾರಿ ಬೆಲೆಯೇರಿಕೆ ಮಾಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಅಬಕಾರಿ ಇಲಾಖೆಯು ವರ್ಷದಲ್ಲಿ ಒಮ್ಮೆ ಬೆಲೆ ಪರಿಷ್ಕರಣೆ ಮಾಡುತ್ತದೆ. ಆದರೆ, ಸಂಪನ್ಮೂಲ ಕ್ರೋಡೀಕರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಬೆಲೆಯೇರಿಕೆ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Alcohal
Koo

ಬೆಂಗಳೂರು: ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು (Guarantee Schemes) ಜಾರಿಗೆ ತಂದು, ಹಲವು ಉಚಿತ ಕೊಡುಗೆಗಳನ್ನು ನೀಡುತ್ತಿರುವ ರಾಜ್ಯ ಸರ್ಕಾರವು (Karnataka Government), ವರ್ಷಕ್ಕೆ ಇವುಗಳಿಗೆಂದೇ ಸುಮಾರು 59 ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿಯೇ ಸಂಪನ್ಮೂಲ ಕ್ರೋಡೀಕರಿಸಲು ರಾಜ್ಯ ಸರ್ಕಾರವು ಹಲವು ರೀತಿಯ ಬೆಲೆಯೇರಿಕೆಯ ಅಸ್ತ್ರ ಬಳಸುತ್ತಿದೆ. ಅದರಲ್ಲೂ, ಕಳೆದ ಒಂದು ವರ್ಷದಲ್ಲಿಯೇ ಎರಡು ಬಾರಿ ಮದ್ಯದ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರವು ಈಗ ವರ್ಷದೊಳಗೇ ಮೂರನೇ ಬಾರಿ ಬೆಲೆಯೇರಿಕೆ (Liquor Price Hike ) ಮಾಡುವ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಇದು ಮದ್ಯಪ್ರಿಯರಿಗೆ ಶಾಕಿಂಗ್‌ ಎನಿಸಿದೆ.

ಹೌದು, ಅಬಕಾರಿ ಇಲಾಖೆಯು ಮದ್ಯದ ಬೆಲೆಯೇರಿಕೆ ಮಾಡುವ ಕುರಿತು ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ಹಾಗೊಂದು ವೇಳೆ ರಾಜ್ಯ ಸರ್ಕಾರವು ಬೆಲೆಯೇರಿಕೆ ಮಾಡಿದರೆ ಓಲ್ಡ್‌ ಮಾಂಕ್‌, ಎಂಸಿ ರಮ್‌, ಬಿಪಿ, ಒಟಿ ಹಾಗೂ 8 ಪಿಎಂ ಬ್ರ್ಯಾಂಡ್‌ನ ಮದ್ಯದ ಬಾಟಲಿಗಳ ಬೆಲೆಯೇರಿಕೆ ಆಗಲಿದೆ. ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದೆ. ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರವು ಸಂಪನ್ಮೂಲ ಕ್ರೋಡೀಕರಣ ಮಾಡಲು ಮದ್ಯದ ಬೆಲೆಯೇರಿಕೆ ಪ್ರಮುಖ ಅಸ್ತ್ರವಾಗಲಿದೆ. ಹಾಗಾಗಿ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಬೆಲೆಯೇರಿಕೆ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

Constables

2023ರ ಜೂನ್‌ ತಿಂಗಳಲ್ಲಿ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಮದ್ಯದ ದರದಲ್ಲಿ ಪ್ರತಿ ಬಾಟಲ್‌ಗೆ 10 ರೂ.ನಿಂದ 20 ರೂ.ವರೆಗೆ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿತ್ತು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಗಳ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಬಡ್ ವೈಸರ್ ಬಿಯರ್ ದರ 198 ರೂ.ನಿಂದ 220 ರೂ.ಗೆ ಏರಿಕೆ ಮಾಡಲಾಗಿತ್ತು. ಕಿಂಗ್‌ಫಿಶರ್ ಬಿಯರ್ ದರವನ್ನು 160 ರೂ.ನಿಂದ 170 ರೂ.ಗೆ ಏರಿಕೆ ಮಾಡಲಾಗಿತ್ತು. ಯುಬಿ ಪ್ರೀಮಿಯಂ ದರವನ್ನು 125 ರೂ.ನಿಂದ 130-135 ರೂ.ಗೆ ಏರಿಕೆಸಲಾಗಿತ್ತು.

ಇದಾದ ಕೆಲವೇ ತಿಂಗಳಲ್ಲಿ ಮತ್ತೆ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಬಿಯರ್‌ ಮೇಲಿನ ದರವನ್ನು ಹೆಚ್ಚಳ ಮಾಡಲು ಅಬಕಾರಿ ಇಲಾಖೆ 2024ರ ಜನವರಿಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿತ್ತು. ಅದರಂತೆ, ಒಂದು ಬಿಯರ್‌ ಮೇಲೆ 8ರಿಂದ 10 ರೂಪಾಯಿ ಹೆಚ್ಚಳ ಮಾಡಲು ಸರ್ಕಾರಕ್ಕೆ ಮನವಿ ಮಾಡಿತ್ತು. ಅದರಂತೆ, ಫೆಬ್ರವರಿಯಲ್ಲಿ ಬಜೆಟ್‌ ಮಂಡಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯದ ಬೆಲೆಯೇರಿಕೆ ಕುರಿತು ಘೋಷಣೆ ಮಾಡಿದ್ದರು. ಈಗ ಮೂರನೇ ಬಾರಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 500 ಕೋಟಿ ರೂ. ಸೇರಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Continue Reading

ಕರ್ನಾಟಕ

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Koppala News: ಗಂಗಾವತಿ ತಾಲೂಕಿನ ಹಣವಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಉಪಾಧ್ಯಕ್ಷೆಯೊಬ್ಬರ ತಲೆದಂಡವಾಗಿದ್ದು, ಉಪಾಧ್ಯಕ್ಷೆಯ ಸ್ಥಾನದಿಂದ ತೆಗೆದು ಹಾಕಿ, ಸದಸ್ಯತ್ವ ಸ್ಥಾನವನ್ನು ರದ್ದುಗೊಳಿಸಿ ಹಾಗೂ ಮುಂದಿನ 6 ವರ್ಷಕಾಲ ಯಾವುದೇ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.

VISTARANEWS.COM


on

disqualification for hanawala Gram Panchayat Vice President and Cancellation of membership ordered
Koo

ಗಂಗಾವತಿ: ಹಣವಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಉಪಾಧ್ಯಕ್ಷೆಯೊಬ್ಬರ ತಲೆದಂಡವಾಗಿದ್ದು, ಉಪಾಧ್ಯಕ್ಷೆಯ ಸ್ಥಾನದಿಂದ ತೆಗೆದು ಹಾಕಿ ಸದಸ್ಯತ್ವ ರದ್ದು ಮಾಡಿ, ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ (Koppala News) ಹೊರಡಿಸಿದ್ದಾರೆ.

ಗಂಗಾವತಿ ತಾಲೂಕಿನ ಹಣವಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಂದಿನಿ ವೆಂಕಟೇಶ ಭೋವಿ ಅವರನ್ನು ಉಪಾಧ್ಯಕ್ಷೆಯ ಸ್ಥಾನದಿಂದ ತೆಗೆದು ಹಾಕಿ, ಸದಸ್ಯತ್ವ ರದ್ದು ಮಾಡಿ, ಮುಂದಿನ ಆರು ವರ್ಷಕಾಲ ಯಾವುದೇ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ: Bengaluru News: ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ: ಶರಣಪ್ರಕಾಶ್‌ ಪಾಟೀಲ್‌

ಸರ್ಕಾರದ ಮತ್ತು ಇಲಾಖೆಯ ನಿಯಮಗಳನ್ನು ಮೀರಿ ಹಣಕಾಸು ಅವ್ಯವಹಾರಕ್ಕೆ ಸಾಥ್ ನೀಡಿರುವ ಈ ಪ್ರಕರಣದ ಪ್ರಮುಖ ರೂವಾರಿ ಎನ್ನಲಾಗುತ್ತಿರುವ ನಿರ್ಗಮಿತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯು. ಮಲ್ಲಿಕಾರ್ಜುನ ವಿರುದ್ಧ ಶಿಸ್ತುಕ್ರಮ ಕೈಗೊಂಡಿರುವ ಇಲಾಖೆ, ದುರುಪಯೋಗವಾಗಿರುವ ಹಣದ ಅರ್ಧ ಮೊತ್ತ ವಸೂಲಿ ಮಾಡುವಂತೆ ಸೂಚಿಸಲಾಗಿದೆ.

ಹಣವಾಳ ಗ್ರಾಮ ಪಂಚಾಯಿತಿಯ ಹಾಲಿ ಅಧ್ಯಕ್ಷೆ ಯಂಕಮ್ಮ ಈರಣ್ಣ ಕುರಿ ಎಂಬುವವರು ಸಲ್ಲಿಸಿದ ದೂರಿನ ಮೇರೆಗೆ ವಿಚಾರಣೆ ಕೈಗೊಂಡ ಇಲಾಖೆಯ ಅಧಿಕಾರಿಗಳಿಗೆ ಹಣಕಾಸು ಅಕ್ರಮ ನಡೆದಿರುವುದು ಗೋಚರಿಸಿದ ಹಿನ್ನೆಲೆಯಲ್ಲಿ ಪಿಡಿಒ ಯು. ಮಲ್ಲಿಕಾರ್ಜುನ ಮತ್ತು ಉಪಾಧ್ಯಕ್ಷೆ ನಂದಿನಿ ವೆಂಕಟೇಶ ಭೋವಿ ಅವರ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆ ಇದೀಗ ಕ್ರಮವಾಗಿದೆ.

ಹಣವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ 2021-22 ಹಾಗೂ 2022-23ನೇ ಸಾಲಿನಲ್ಲಿ ಖಾಸಗಿ ಸಂಸ್ಥೆಗಳ ಹೆಸರು ಸೂಚಿಸಿ ಆಗಿನ ಅಧ್ಯಕ್ಷೆಯಾಗಿದ್ದ ನಂದಿನಿ, ತಮ್ಮ ಸಂಬಂಧಿಕರ ಖಾತೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ಸರ್ಕಾರದ ಅನುದಾನ ಹೊರತು ಪಡಿಸಿ ಕರವಸೂಲಿಯಲ್ಲಿ ಈ ಕಾಮಗಾರಿಗಳಿಗೆ ಹಣ ಸಂದಾಯ ಮಾಡಲು ಅವಕಾಶವಿಲ್ಲದ್ದರ ಮಧ್ಯೆಯೂ ನಿಯಮಬಾಹಿರವಾಗಿ ಪಿಡಿಒ ಮಲ್ಲಿಕಾರ್ಜುನ ಅವರ ಜತೆ ಶಾಮೀಲಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಯಂಕಮ್ಮ ದೂರು ದಾಖಲಿಸಿದ್ದರು.

ಇದನ್ನೂ ಓದಿ: Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

ಅಧಿಕಾರಿಗಳು ಸಲ್ಲಿಸಿದ ಹಣಕಾಸು ಅಕ್ರಮದ ವರದಿ ಶಿಫಾರಸ್ಸಿನ ಮೇರೆಗೆ ಹಣವಾಳ ಗ್ರಾಮ ಪಂಚಾಯಿತಿಯ ಆಗಿನ ಅಧ್ಯಕ್ಷೆ, ಹಾಲಿ ಉಪಾಧ್ಯಕ್ಷೆ ನಂದಿನಿ ಅವರನ್ನು ಹುದ್ದೆಯಿಂದ ಅನರ್ಹತೆ ಮಾಡಿ ಹಾಗೂ ಸದಸ್ಯತ್ವ ಸ್ಥಾನವನ್ನು ರದ್ದುಗೊಳಿಸಿ ಹಾಗೂ ಮುಂದಿನ ಆರು ವರ್ಷ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ, ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.

Continue Reading
Advertisement
HSRP Number plate
ಪ್ರಮುಖ ಸುದ್ದಿ5 mins ago

HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

Rain News
ಕರ್ನಾಟಕ25 mins ago

Karnataka Weather: ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

Tips For Rainy Season
ಆರೋಗ್ಯ55 mins ago

Tips For Rainy Season: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

Alcohal
ಪ್ರಮುಖ ಸುದ್ದಿ2 hours ago

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya: ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ!

Hassan Ali
ದೇಶ7 hours ago

Hassan Ali: ರಿಯಾಸಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ; ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದಿದ್ದೇಕೆ?

IND vs USA
ಪ್ರಮುಖ ಸುದ್ದಿ7 hours ago

IND vs USA: ಅರ್ಶದೀಪ್​ ಮಾರಕ ದಾಳಿಗೆ ಪತರುಗುಟ್ಟಿದ ಅಮೆರಿಕ; ಟೀಮ್​ ಇಂಡಿಯಾ ಸೂಪರ್​-8 ಪ್ರವೇಶ

disqualification for hanawala Gram Panchayat Vice President and Cancellation of membership ordered
ಕರ್ನಾಟಕ8 hours ago

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Court Order
ದೇಶ8 hours ago

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

Virat Kohli
ಕ್ರೀಡೆ8 hours ago

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌