Site icon Vistara News

Vijayapura News: ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲಿಂ ರಾಷ್ಟ್ರ ಎಂದು ಸ್ಟೇಟಸ್ ಹಾಕಿದ್ದ ಯುವಕನ ಬಂಧನ

Man arrested for posting pro pak status

Man arrested for posting pro pak status

ವಿಜಯಪುರ: ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲಿಂ ರಾಷ್ಟ್ರ ಎಂದು ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ (Vijayapura News) ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದಲ್ಲಿ ನಡೆದಿದೆ.

ಇಬ್ರಾಹಿಂ ಮುರ್ತುಜಸಾಬ್ ಮುಲ್ಲಾ ಬಂಧಿತ ಆರೋಪಿ. ಈತ ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ ಸ್ಟೇಟಸ್‌ ನೋಡಿ, ಸ್ಥಳೀಯರು ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ತಾಳಿಕೋಟೆ ಪೊಲೀಸರು ಯುವಕನ್ನು ಬಂಧಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ | Murder Case: ಆಸ್ತಿ ಕಲಹ: ಆಸ್ಪತ್ರೆಗೆ ನುಗ್ಗಿ ಅಣ್ಣನಿಗೆ ಚಾಕು ಹಾಕಿದ ತಮ್ಮ; ಇಬ್ಬರು ಆರೋಪಿಗಳ ಬಂಧನ

ಮಾವಿನ ಕಾಯಿ ಕೀಳಲು ಹೋಗಿ ಮರದಿಂದ ಬಿದ್ದು ವ್ಯಕ್ತಿ ಸಾವು

ಮುಂಡಗೋಡ(ಉತ್ತರ ಕನ್ನಡ): ವ್ಯಕ್ತಿಯೊಬ್ಬ ಮಾವಿನಕಾಯಿ ಕೀಳಲು ಹೋಗಿ ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ಮುಂಡಗೋಡ ತಾಲೂಕಿನ ಹಿರೇಹಳ್ಳಿ ಗ್ರಾಮದ ಹತ್ತಿರ ನಡೆದಿದೆ.

ಪಟ್ಟಣದ ಮಾರಿಕಾಂಬಾ ನಗರದ ಶಿವಪುತ್ರಪ್ಪ ಯಲ್ಲಪ್ಪ ಭೋವಿ (37) ಮೃತ ವ್ಯಕ್ತಿ. ಈತನು ಗಾರೆ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಮರಳಿ ಬರುತ್ತಿದ್ದಾಗ ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿಯ ಹಿರೇಹಳ್ಳಿ ಗ್ರಾಮದ ಹತ್ತಿರ ಮಾವಿನ ಕಾಯಿ ಕೀಳಲು ಮುಂದಾಗಿದ್ದಾನೆ. ಆದರೆ, ಮರದಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

Exit mobile version