Site icon Vistara News

Elephant attack : ನಾಗಮಲೆಯಲ್ಲಿ ಕಾಡಾನೆ ದಾಳಿಗೆ ಒಬ್ಬ ಬಲಿ, ಮತ್ತೊಬ್ಬ ಬಚಾವ್‌

Elephant attacked in Nagamale Chamarajnagar

ಚಾಮರಾಜನಗರ: ಮಲೆಮಹಾದೇಶ್ವರ ಬೆಟ್ಟದಲ್ಲಿ (Male Mahadeshwara hills) ಭಕ್ತರ ಮೇಲೆ ಕಾಡಾನೆ ದಾಳಿ (Elephant attack) ಮಾಡಿದೆ. ದಾಳಿಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದರೆ, ಮತ್ತೊಬ್ಬ ಪ್ರಾಣಾಪಾಯದಿಂದ ಬಚಾವ್‌ ಆಗಿದ್ದಾನೆ.

ಬೆಂಗಳೂರು ಮೂಲದ ಗೋವಿಂದರಾಜು ಮತ್ತು ಆತನ ಗೆಳೆಯ ಲೋಕೇಶ್ ಇಬ್ಬರು ಹನೂರಿನಲ್ಲಿರುವ ಮಲೆಮಹಾದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಪೂಜೆ ಸಲ್ಲಿಸಿ ನಾಗಮಲೆಗೆ ಹೋಗುತ್ತಿದ್ದರು. ತಡರಾತ್ರಿ 11:30 ರ ಸುಮಾರಿಗೆ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ.

ಇಂಡಿಗನತ್ತ ಹತ್ತಿರವಿರುವ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಆನೆ ತುಳಿಕ್ಕೆ ಸಿಲುಕಿ ಗೋವಿಂದರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಸ್ನೇಹಿತ ಲೋಕೇಶ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ರಾತ್ರಿ ವೇಳೆ ನಾಗಮಲೆ‌ ಹಾಗೂ ಬೆಟ್ಟದ ಮಾರ್ಗಮಧ್ಯೆ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಭಕ್ತರು ಎಚ್ಚರಿಕೆಯಿಂದ ಇರುವಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version