Site icon Vistara News

Man Drowns: ಕೊಮ್ಮಘಟ್ಟ ಕೆರೆಯಲ್ಲಿ ಮುಳುಗಿದ ವ್ಯಕ್ತಿ, ಇನ್ನೂ ಸಿಕ್ಕಿಲ್ಲ ದೇಹ

Man drowns in Kommaghatta lake

Man drowns in Kommaghatta lake

ಬೆಂಗಳೂರು: ನಗರ ಹೊರವಲಯದ ಕೊಮ್ಮಘಟ್ಟ ಕೆರೆಯಲ್ಲಿ ವ್ಯಕ್ತಿಯೊಬ್ಬರು ಮುಳುಗಿರುವ (Man Drowns) ಘಟನೆ ಮಂಗಳವಾರ ನಡೆದಿದೆ. ವ್ಯಕ್ತಿ ಕೆರೆಯಲ್ಲಿ ಬಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರಿಂದ ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಕುಂಬಳಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದಿದ್ದಾರೆ.

ವಿಮಾನದಲ್ಲಿ ಧೂಮಪಾನ ಮಾಡಿದ ಪ್ರಯಾಣಿಕನ ಬಂಧನ

ಬೆಂಗಳೂರು: ಚಲಿಸುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಹಮದಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡಿದ್ದರಿಂದ ಪ್ರವೀಣ್ ಕುಮಾರ್ ಎಂಬಾತನನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ | Cyber Crime: ಮಹಾ ಸೈಬರ್ ವಂಚಕ ಸಿಐಡಿ ಪೊಲೀಸರ ಬಲೆಗೆ, ಐಟಿ ಇಲಾಖೆಗೇ ನಾಮ

ಆಕಾಸ ಏರ್‌ಲೈನ್ಸ್‌ ವಿಮಾನದಲ್ಲಿ ಬರುತ್ತಿದ್ದಾಗ ಪ್ರವೀಣ್ ಕುಮಾರ್ ಧೂಮಪಾನ ಮಾಡುತ್ತಿದ್ದ. ಅದನ್ನು ಗಮನಿಸಿದ ವಿಮಾನ ಸಿಬ್ಬಂದಿ, ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಇಳಿಯುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಪ್ರಯಾಣಿಕನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version