Site icon Vistara News

Murder Case: ಹಬ್ಬದ ದಿನವೇ ಮಾರಾಕಾಸ್ತ್ರದಿಂದ ಕೊಚ್ಚಿ ಪತ್ನಿಯನ್ನು ಕೊಂದ ಕಿರಾತಕ

Man kills wife with machete in Shidlaghatta taluk

Man kills wife with machete in Shidlaghatta taluk

ಚಿಕ್ಕಬಳ್ಳಾಪುರ‌: ಯುಗಾದಿ ಹಬ್ಬದ ದಿನವೇ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ಪತ್ನಿಯನ್ನು ಕೊಚ್ಚಿ ಬರ್ಬರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕ ದಿಬ್ಬೂರಹಳ್ಳಿಯಲ್ಲಿ ಬುಧವಾರ ನಡೆದಿದೆ. ಪತ್ನಿಯ ಮೇಲೆ ಅನುಮಾನದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕ ದಿಬ್ಬೂರಹಳ್ಳಿಯ ಗಾಯತ್ರಿ (35) ಕೊಲೆಯಾದ ಮಹಿಳೆ. ಪತಿ ಅಶ್ವತ್ಥಪ್ಪ (42) ಕೊಲೆ ಆರೋಪಿಯಾಗಿದ್ದಾನೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ದಿಬ್ಬೂರಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತ ಸಂಬಂಧಿಕರು ದೂರು ದಾಖಲಿಸಿದ್ದಾರೆ. ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕಾರು ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಬೆಟ್ಕುಳಿ ಸಮೀಪ ಕಾರು ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಟ್ಕುಳಿ ಗ್ರಾಮದ ನಿವಾಸಿ ವಿಠ್ಠಲ ಪಟಗಾರ (45) ಮೃತರು.

ಪಾದಚಾರಿ ಕುಮಟಾ ಕಡೆಯಿಂದ ಅಂಕೋಲಾ ಕಡೆ ತೆರಳುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ. ಅಪಘಾತದ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ಬಳಿಕ ಹಿರೇಗುತ್ತಿ ಪೊಲೀಸ್ ಚೆಕ್‌‌ಪೊಸ್ಟ್ ಬಳಿ ಕಾರು ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Bike Accident: ಚಿಕ್ಕಮಗಳೂರಿನಲ್ಲಿ ಬೈಕ್-ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

ಟ್ರಕ್ ಡಿಕ್ಕಿ; ದ್ವಿಚಕ್ರ ವಾಹನ ಸವಾರ ಸಾವು

ವಿಜಯನಗರ: ಹೊಸಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ಟ್ರಕ್ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ರಾಮಪ್ಪ ಇಂಗಳಿಗಿ (57) ಮೃತರು. ಟಿವಿಎಸ್‌ ಎಕ್ಸ್‌ಎಲ್‌ನಲ್ಲಿ ರಾಮಪ್ಪ ತೆರಳುತ್ತಿದ್ದಾಗ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದಿದೆ. ಇದರಿಂದ ರಾಮಪ್ಪ ಮೃತಪಟ್ಟಿದ್ದು, ಹೊಸಪೇಟೆಯ ಗ್ರಾಮೀಣ ಪಿಐ ದೀಪಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version