Site icon Vistara News

Murder at Bhadravati : ಹಣಕಾಸಿನ ವಿಚಾರದಲ್ಲಿ ಗಲಾಟೆ ; ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ

murder

#image_title

ಶಿವಮೊಗ್ಗ: ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್‌ ಎಂಬವರ ಕೊಲೆಯಾಗಿದೆ.

ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ ಮತ್ತು ಪ್ರೇಮ ಎಂಬವರು ತನ್ನ ಗಂಡನ ಮೇಲೆ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎಂದು ಮೃತನ ಪತ್ನಿ ನಾಗರತ್ನ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಗಾಯಾಳು ವೆಂಕಟೇಶ್(36) ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಹೇಳಲಾಗಿದೆ. ಭದ್ರಾವತಿ ಗ್ರಾಮಾಂತರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಡಿಯಲ್ಲಿ ಅಪಘಾತ: ಒಬ್ಬರು ಮೃತ್ಯು

ವಿಜಯಪುರ: ತಡರಾತ್ರಿ ಇಂಡಿ ಪಟ್ಟಣದ ಕೆ.ಇ.ಬಿ ತಾಂಡಾ ಎದುರಿಗಿರುವ ಸೇವಾಲಾಲ್ ವೃತ್ತಕ್ಕೆ ವೇಗವಾಗಿ ಬಂದ ಕ್ಯಾಂಟರ್‌ ವಾಹನವೊಂದು (Road Accident) ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲಿ ಒಬ್ಬ ಮೃತಪಟ್ಟಿದ್ದರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಚಾಲಕ ಭಾಗಣ್ಣ ಕಾರಜೋಳ ಅಲಿಯಾಸ್‌ ಪಿಂಟು ಕಾರಜೋಳ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ಪಕ್ಕದಲ್ಲಿದ್ದ ಮಲಕು ಮಾನೆ (36) ಎಂಬಾತ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರೂ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Road accident : ಆಯಿಲ್‌ ಟ್ಯಾಂಕರ್‌, ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಗೆಳೆಯರ ದುರ್ಮರಣ

ಇಟ್ಟಂಗಿ ಇಳಿಸಿ ವಾಪಾಸಾಗುತ್ತಿತ್ತು. ಕ್ಯಾಂಟರ್‌ ಡಿಕ್ಕಿಯಿಂದಾಗಿ ಇಂಡಿ-ವಿಜಯಪುರ ರಸ್ತೆಯಲ್ಲಿರುವ ಸೇವಾಲಾಲ್ ವೃತ್ತ ಸಂಪೂರ್ಣ ಹಾನಿ ಆಗಿದೆ. ಚಾಲಕನ ಅತಿವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version