ಲವ್ವರ್​​ಗೆ ಮೆಸೇಜ್​ ಮಾಡುತ್ತಿದ್ದ ಸ್ನೇಹಿತನಿಗೆ ಚಾಕು ಇರಿತ: ಹಣ ಕೊಡಲು ಒಪ್ಪದ ತಮ್ಮನ ಹತ್ಯೆ - Vistara News

ಕರ್ನಾಟಕ

ಲವ್ವರ್​​ಗೆ ಮೆಸೇಜ್​ ಮಾಡುತ್ತಿದ್ದ ಸ್ನೇಹಿತನಿಗೆ ಚಾಕು ಇರಿತ: ಹಣ ಕೊಡಲು ಒಪ್ಪದ ತಮ್ಮನ ಹತ್ಯೆ

ಕಲಬುರಗಿಯಲ್ಲಿ ಅಣ್ಣನೊಬ್ಬ ತನ್ನ ತಮ್ಮನನ್ನೇ ಕೊಂದು ಹಾಕಿದ್ದಾನೆ. ಕುಡಿಯಲು ಹಣ ಕೊಡುವಂತೆ ಉದ್ಯೋಗಸ್ಥ ತಮ್ಮನ ಬಳಿ ಕೇಳಿದ್ದಾನೆ. ಕೊಡಲೊಪ್ಪದ ಆತನನ್ನು ಹತ್ಯೆಗೈದಿದ್ದಾನೆ.

VISTARANEWS.COM


on

Mysuru Man Stabbed his Friend
ಸ್ನೇಹಿತನಿಗೆ ಚಾಕುವಿನಿಂದ ಇರಿದ ಆರೋಪಿ ಶ್ರೇಯಸ್​​
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ತನ್ನ ಲವ್ವರ್​ಗೆ ಸಂದೇಶ ಕಳಿಸಿದ ಸ್ನೇಹಿತನಿಗೆ ಯುವಕನೊಬ್ಬ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡ ಹುಡುಗನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೇಯಸ್​ ಎಂಬಾತ ಆರೋಪಿ ಯುವಕನಾಗಿದ್ದು, ಈತನಿಂದ ಚಾಕು ಇರಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿದ ಯುವಕ ಶಿವಕುಮಾರ್​.

ಶ್ರೇಯಸ್ ಮತ್ತು ಶಿವಕುಮಾರ್ ಇಬ್ಬರೂ ಮೈಸೂರಿನ ಜನತಾನಗರದಲ್ಲಿ ಒಂದೇ ಬಾಡಿಗೆ ರೂಮ್​​ನಲ್ಲಿ ವಾಸವಾಗಿದ್ದರು. ಶ್ರೇಯಸ್​ ಪ್ರೀತಿಸುತ್ತಿದ್ದ ಯುವತಿಗೆ ಶಿವಕುಮಾರ್​ ಸಂದೇಶ ಕಳಿಸುತ್ತಿದ್ದ. ಆಕೆಯೂ ಪ್ರತಿಯಾಗಿ ಮೆಸೇಜ್ ಮಾಡುತ್ತಿದ್ದಳು. ಈ ವಿಚಾರ ಶ್ರೇಯಸ್​ಗೆ ಗೊತ್ತಾಗಿ ಶಿವಕುಮಾರ್​ ಜತೆ ಜಗಳ ಮಾಡಿದ್ದ. ತಾನು ಪ್ರೀತಿಸುತ್ತಿರುವ ಹುಡುಗಿಗೆ ನೀನ್ಯಾಕೆ ಮೆಸೇಜ್ ಮಾಡೋದು? ಅವಳೊಂದಿಗೆ ಚಾಟ್ ಮಾಡಬೇಡ ಎಂದು ಶಿವಕುಮಾರ್​ಗೆ ತಾಕೀತು ಮಾಡಿದ್ದ. ಹಾಗಿದ್ದಾಗ್ಯೂ ಶಿವಕುಮಾರ್ ಮೆಸೇಜ್ ಮಾಡುವುದನ್ನ ಮುಂದುವರಿಸಿದ್ದ. ನಿನ್ನೆ ಕೂಡ ನಂಜನಗೂಡು ರಸ್ತೆ ಬಳಿ ಶ್ರೇಯಸ್​ ಮತ್ತು ಶಿವಕುಮಾರ್ ಇದೇ ವಿಷಯಕ್ಕೆ ಜಗಳ ಮಾಡಿಕೊಂಡಿದ್ದರು. ಇದೇ ವೇಳೆ ಶಿವಕುಮಾರ್​ಗೆ ಶ್ರೇಯಸ್​ ಚಾಕುವಿನಿಂದ ಇರಿದಿದ್ದಾನೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮೈಸೂರಲ್ಲಿ ಜೈಲಿಂದ ಹೊರಬರುತ್ತಿದ್ದಂತೆ ಹತ್ಯೆಯಾದ ರೌಡಿಶೀಟರ್; ಸಿಸಿಟಿವಿಯಲ್ಲಿ ದೃಶ್ಯ ಸೆರೆ, 8ಮಂದಿ ಶರಣು

ಕಲಬುರಗಿಯಲ್ಲಿ ತಮ್ಮನ ಹತ್ಯೆ ಮಾಡಿದ ಅಣ್ಣ

ಇನ್ನು ಕಲಬುರಗಿಯಲ್ಲಿ ಅಣ್ಣನೊಬ್ಬ ತನ್ನ ತಮ್ಮನನ್ನೇ ಕೊಂದು ಹಾಕಿದ್ದಾನೆ. ಪಾಳಾ ಎಂಬ ಗ್ರಾಮದಲ್ಲಿ ಘಟನೆ ನಡೆದಿದೆ. ಅಣ್ಣ ಭೀಮಾಶಂಕರ್​ ಮದ್ಯವ್ಯಸನಿಯಾಗಿದ್ದ. ಆದರೆ ಕೈಯಲ್ಲಿ ಹಣ ಇರುತ್ತಿರಲಿಲ್ಲ. ತಮ್ಮ ಕಲ್ಯಾಣಿ ಹೆಕ್ಕಿ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ. ಗ್ರಾಮದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾಂಪೌಂಡರ್ ಕೆಲಸ ಮಾಡುತ್ತಿದ್ದ ಕಲ್ಯಾಣಿ ಬಳಿ ಹಣ ಇರುತ್ತದೆ ಎಂದು ಅಣ್ಣ ಭೀಮಾಶಂಕರ್​ಗೆ ಗೊತ್ತಿತ್ತು. ಆದರೆ ಕಲ್ಯಾಣಿ ಮದ್ಯಕ್ಕಾಗಿ ಹಣ ಕೊಡಲು ಹಿಂದೇಟು ಹಾಕಿದ್ದಾನೆ. ಇದೇ ಸಿಟ್ಟಿಗೆ ಭೀಮಾಶಂಕರ್​ ಈ ಕೃತ್ಯ ಎಸಗಿದ್ದಾನೆ. ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Bengaluru Rains: ಬೆಂಗಳೂರು ಸುತ್ತಮುತ್ತ ಗಾಳಿ ಜತೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ದೇವಸ್ಥಾನ ಜೀರ್ಣೋದ್ಧಾರದಲ್ಲಿ ಊಟ ಮಾಡುತ್ತಿದ್ದಾಗ ದಿಢೀರ್‌ ಮಳೆಯಿಂದ ಜನರು ಊಟ ಬಿಟ್ಟು ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಕೆಲವೆಡೆ ಮಳೆ ಅನಾಹುತಗಳು ಸಂಭವಿಸಿವೆ.

VISTARANEWS.COM


on

By

Bengaluru Rains
Koo

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ (Karnataka Rains) ಬಿರುಗಾಳಿ ಸಹಿತ ಮಳೆ ಬಂದು ಹೋಯಿತು. ಆದರೆ ರಾಜಧಾನಿ ಬೆಂಗಳೂರಲ್ಲಿ ಒಂದು ಸಣ್ಣ ಹನಿಯು (Karnataka weather Forecast) ಬೀಳಲಿಲ್ಲ. ಬೆಂಗಳೂರು ಕರಗ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಆದರೂ ಮಳೆ ಬಂದೇ ಬರುತ್ತೆ ಎಂಬ ನಂಬಿಕೆ ಇದೆ. ಆದರೆ ಆಗಲೂ ಮಳೆಯು ಕಾಣಲಿಲ್ಲ. ಇದೀಗ ಬಿಸಿಲ ಧಗೆಯಿಂದ ಸುಸ್ತಾಗಿದ್ದ ಮಂದಿಗೆ ಮಳೆಯು ತನ್ನ ಭರ್ಜರಿ ಪ್ರದರ್ಶನ (Bengaluru Rains) ತೋರಿದೆ.

ಲೇಟ್‌ ಆದರೂ ಲೇಟೆಸ್ಟ್‌ ಆಗಿ ಮಳೆರಾಯ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾನೆ. ಇದರಿಂದಾಗಿ ಸೋಶಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್ ಎಂದು ಬೆಂಗಳೂರಿಗರಿಗೆ ವಿಷ್‌ ಮಾಡಿದ್ದಾರೆ. ಜತೆಗೆ ಟ್ವಿಟರ್‌, ಇನ್ಸ್ಟಾಗ್ರಾಂನಲ್ಲಿ Bengaluru rains ಹ್ಯಾಶ್‌ ಟ್ಯಾಗ್‌ ಹಾಕಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೂ-ಇಂತೂ ಬೆಂಗಳೂರಲ್ಲಿ ಮಳೆ ಬಂತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

Bengaluru Rains

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಇನ್ನೂ ಬೆಂಗಳೂರಿನ ಆರ್‌.ಟಿ‌ ನಗರದಲ್ಲಿ ಮರವು ಉರುಳಿ ಬಿದ್ದಿತ್ತು. ಇನೋವಾ ಹಾಗೂ ಓಮಿನಿ ಕಾರು ಜಖಂಗೊಂಡಿತ್ತು. ರವೀಂದ್ರನಾಥ್ ಠಾಗೋರ್ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿತ್ತು. ಅದೃಷ್ಟವಶಾತ್‌ ಕಾರಿನಲ್ಲಿ ಇದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಿಬಿಎಂಪಿ ಸಿಬ್ಬಂದಿ ದೌಡಾಯಿಸಿದ್ದು, ಮರ ತೆರವು ಮಾಡುತ್ತಿದ್ದಾರೆ. ಇತ್ತ ಕೊತ್ತನೂರು ಬಳಿ ಕಾರಿನ ಮೇಲೆ ವಿದ್ಯುತ್‌ ಕಂಬ ಬಿದ್ದು ಕಾರಿನ ಬ್ಯಾನೆಟ್ ಹಾಳಾಗಿತ್ತು. ವಿದ್ಯುತ್‌ ಕಂಬ ಕಳಚಿ ಬಿದ್ದ ಕಾರಣ ಕರೆಂಟ್‌ ಕಟ್ಟ್‌ ಆಗಿತ್ತು.

Bengaluru Rains

ಟ್ರಾನ್ಸ್ ಫಾರ್ಮರ್ ಸ್ಫೋಟ

ಬೆಂಗಳೂರಿನ ಐಟಿಐ ಲೇಔಟ್‌ನಲ್ಲಿ ಮಳೆಗೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಗಾಳಿ ಮಳೆಗೆ ಮರಗಳ ಎಲೆ ತಾಗಿ ಟ್ರಾನ್ಸ್ ಫಾರ್ಮನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬ್ಲಾಸ್ಟ್‌ ಆಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರಾನ್ಸ್‌ಫಾರ್ಮನರ್‌ ಸ್ಫೋಟದಿಂದಾಗಿ ವಿದ್ಯುತ್‌ ಕಡಿತವಾಗಿದೆ.

ಹೊಸಕೋಟೆಯಲ್ಲೂ ಬಿರುಗಾಳಿ ಮಳೆ

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ. ವರ್ಷದ ಮೊದಲ ಮಳೆ ಕಂಡು ಜನರು ಸಂತಸಗೊಂಡಿದ್ದಾರೆ. ಇನ್ನೂ ಗಾಳಿ ಸಹಿತ ಮಳೆಯಿಂದಾಗಿ ದೇವಸ್ಥಾನ ಜೀರ್ಣೋದ್ಧಾರದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಎಲ್ಲಾ ಚೆಲ್ಲಾಪಿಲ್ಲಿಯಾಗಿದ್ದವು. ಊಟ ಮಾಡುತ್ತಿದ್ದವರೆಲ್ಲೂ ಎಲೆ ಬಿಟ್ಟು, ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಹೊಸಕೋಟೆ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಾಮರಾಜನಗರದಲ್ಲೂ ಮಳೆಯ ಸಿಂಚನ

ಚಾಮರಾಜನಗರದಲ್ಲೂ ವರುಣ ಭೂ ಸ್ಪರ್ಶಿಸಿದ್ದಾನೆ. ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ, ಚೆನ್ನಪ್ಪಪುರ, ಅರಕಲವಾಡಿ ವೆಂಕಟಯ್ಯನ ಛತ್ರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬೇಸಿಗೆಯಿಂದ ಬೇಸತ್ತಿದ್ದ ರೈತರ ಮುಖದಲ್ಲಿ ಕೊಂಚ ಮಂದಹಾಸ ಮೂಡಿದೆ. ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ, ಉಡಿಗಾಲ, ಕೆಂಗಾಕಿ, ಕುಮಚಹಳ್ಳಿ ಗ್ರಾಮದಲ್ಲಿ ಗಾಳಿಯ ಅಬ್ಬರದೊಂದಿಗೆ ಮಳೆಯಾಗಿದೆ.

ರಾಮನಗರದಲ್ಲೂ ತಂಪೆರೆದ ಮಳೆ

ಬರಗಾಲದಿಂದ ಬೇಸತ್ತಿದ್ದ ರೇಷ್ಮೆನಾಡು ರಾಮನಗರ ಜಿಲ್ಲೆಯಲ್ಲೂ ಹಲವೆಡೆ ವರುಣ ದರ್ಶನ ಕೊಟ್ಟಿದ್ದಾನೆ. ಗುಡುಗು ಸಹಿತ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಪೂರ್ವಜರ ನಂಬಿಕೆಯಂತೆ ಭರಣಿ ಮಳೆ ಆಗಮಿಸಿದೆ. ಭರಣಿ ಮಳೆ ಬಂದರೆ ರೈತರ ಕೃಷಿ ಚುಟುವಟಿಕೆ ಆರಂಭಿಸಲು ಯಶಸ್ವಿ ಎಂಬ ನಂಬಿಕೆ ಇದೆ. ಸದ್ಯ ಭರಣಿ ಮಳೆಯ ಸಿಂಚನದಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಟ್‌ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ (ATM) ಕೊಠಡಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

Prajwal Revanna Case: ಹಾಸನದಲ್ಲಿ ಒಕ್ಕಲಿಗ ನಾಯಕತ್ವಕ್ಕೆ ಇಷ್ಟೆಲ್ಲ ಆಗುತ್ತಲಿದೆ. ಮುಂದಿನ ಒಂದು ವಾರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಆಗ ಎಲ್ಲವನ್ನೂ ಪ್ರಕಟಿಸುವವರಿದ್ದಾರೆ. ಯಾರು ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೋ ಆ ಎಲ್ಲವೂ ಒಂದು ವಾರದಲ್ಲಿ ಹೊರಗೆ ಬರತ್ತದೆ. ನನ್ನ ಬಳಿ ಇದ್ದ ಎಲ್ಲ ಸಾಕ್ಷಿಗಳನ್ನು ನೀಡಿದ್ದೇನೆ. ನಿನ್ನೆ ನನ್ನನ್ನು ಸಾಕ್ಷಿಯಾಗಿ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಎಸ್‌ಐಟಿ ಅಧಿಕಾರಿಗಳು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ದೇವರಾಜೇಗೌಡ ಹೇಳಿದ್ದಾರೆ.

VISTARANEWS.COM


on

Prajwal Revanna Case Who leaked the pen drive Devaraje Gowda gives evidence to SIT
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ಮಹತ್ವದ ದಾಖಲೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು ಎಂಬ ಬಗ್ಗೆಯೂ ಹೇಳಿಕೆ ನೀಡಿದ್ದೇನೆ. ಇದನ್ನು ಇಲ್ಲಿ ಹೇಳಲಾಗುವುದಿಲ್ಲ. ಆದರೆ, ಇನ್ನೊಂದು ವಾರದಲ್ಲಿ ಎಲ್ಲವೂ ಹೊರಗೆ ಬರಲಿದೆ ಎಂದು ಹೇಳಿದ್ದಾರೆ.

ಎಸ್‌ಐಟಿ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ದೇವರಾಜೇಗೌಡ, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಗುರುವಾರ ನೋಟಿಸ್‌ ನೀಡಿದ್ದರು. ಅದರಂತೆ ಇಂದು ಹಾಜರಾಗಿ ನಾನು ಎಲ್ಲ ಸಂಗತಿಗಳನ್ನು ಹೇಳಿದ್ದೇನೆ. ಈ ವಿಡಿಯೊಗಳನ್ನು ವೈರಲ್ ಮಾಡಿದವರು ಯಾರು ಎನ್ನುವ ಮಾಹಿತಿ ನನಗೆ ಗೊತ್ತಿದೆ. ಅದನ್ನು ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದೇನೆ. ಯಾರು ಎಂಬುದನ್ನು ನಾನು ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಎಚ್‌ಡಿಕೆಯಿಂದ ಮಹತ್ವದ ನಿರ್ಧಾರ

ಹಾಸನದಲ್ಲಿ ಒಕ್ಕಲಿಗ ನಾಯಕತ್ವಕ್ಕೆ ಇಷ್ಟೆಲ್ಲ ಆಗುತ್ತಲಿದೆ. ಮುಂದಿನ ಒಂದು ವಾರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಆಗ ಎಲ್ಲವನ್ನೂ ಪ್ರಕಟಿಸುವವರಿದ್ದಾರೆ. ಯಾರು ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೋ ಆ ಎಲ್ಲವೂ ಒಂದು ವಾರದಲ್ಲಿ ಹೊರಗೆ ಬರತ್ತದೆ ಎಂದು ದೇವರಾಜೇಗೌಡ ತಿಳಿಸಿದರು.

ನನ್ನ ಬಳಿ ಇದ್ದ ಎಲ್ಲ ಸಾಕ್ಷಿಗಳನ್ನು ನೀಡಿದ್ದೇನೆ. ನಿನ್ನೆ ನನ್ನನ್ನು ಸಾಕ್ಷಿಯಾಗಿ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಎಸ್‌ಐಟಿ ಅಧಿಕಾರಿಗಳು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ದೇವರಾಜೇಗೌಡ ಹೇಳಿದರು.

ರಾಜಕೀಯಕ್ಕಾಗಿಯೇ ಇದೆಲ್ಲ ನಡೆಯುತ್ತಿದೆ

ಈ ಎಲ್ಲ ಬೆಳವಣಿಗೆಗಳು ರಾಜಕೀಯ ಕುತಂತ್ರದಿಂದ ನಡೆದಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ದೇವರಾಜೇಗೌಡ, ಇದೆಲ್ಲ ನಡೆಯುತ್ತಿರುವುದೇ ರಾಜಕೀಯವಾಗಿ. ಎಲ್ಲ ದಿಕ್ಕಿನಲ್ಲಿಯೂ ತನಿಖೆ ನಡೆಸುತ್ತಿರುವುದು ಖುಷಿಯನ್ನು ತಂದಿದೆ. ಯಾರೂ ಈ ತನಿಖೆಯಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ಅನ್ನಿಸುತ್ತಿಲ್ಲ ಎಂದು ಹೇಳಿದರು.

ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌?

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ನೇರವಾಗಿ ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕೊಟ್ಟ ದೂರಿನಲ್ಲಿ ಭಯಾನಕ ಸತ್ಯಗಳು ಹೊರಬಂದಿದ್ದು, ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಈಗ ಕೇಳಿಬಂದಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಜೆಡಿಎಸ್‌ ನಾಯಕಿ, ಸಂತ್ರಸ್ತೆ ದೂರಿನಲ್ಲಿ ತನಗಾದ ಅನ್ಯಾಯವನ್ನು ಹಾಗೂ ಅತ್ಯಾಚಾರದ ಸಂಗತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಮಾತಿಗೆ ಹೋದಾಗ ರೇಪ್‌?

ಜೆಡಿಎಸ್‌ ನಾಯಕಿ ತಮ್ಮ ಮೇಲೆ ಯಾವಾಗ ಅತ್ಯಾಚಾರ ನಡೆದಿದೆ ಎಂಬ ಸಂಗತಿಯನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. 2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಬಗ್ಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಳಿ ಮಾತನಾಡಲು ಹೋದಾಗ ತಮ್ಮ ಮೇಲೆರಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ತಾವು ನಿರಾಕರಣೆ ಮಾಡಿದಾಗ ಗನ್‌ ಹಿಡಿದು ಹೆದರಿಸಿ ಬಲಾತ್ಕಾರ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಹಾಸನದಲ್ಲಿರುವ ಸಂಸದರ ಬಂಗಲೆಯ ಮಹಡಿ ರೂಮ್‌ನಲ್ಲೇ ರೇಪ್ ಮಾಡಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಗಂಡನ ಬಗ್ಗೆ ಬೆದರಿಸಿ ಬಲಾತ್ಕಾರ

ದೈಹಿಕ ಸಂಪರ್ಕ ಬೆಳೆಸಲು ಪ್ರಜ್ವಲ್‌ ಮುಂದಾಗುತ್ತಿದ್ದಂತೆ ನಾನು ನಿರಾಕರಣೆ ಮಾಡಿದೆ. ಆಗ “ನಿನ್ನ ಗಂಡನನ್ನು ನಾನು ಬಿಡಲ್ಲ” ಎಂದು ಹೆದರಿಸಿ ದೌರ್ಜನ್ಯ ನಡೆಸಿದರು ಎಂದು ಎಸ್‌ಐಟಿಗೆ ಸಂತ್ರಸ್ತೆ ನೀಡಿದ್ದ ದೂರು ಆಧಾರದಲ್ಲಿ ಸಿಐಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್‌) ಹಾಗೂ ಐಟಿ ಆ್ಯಕ್ಟ್‌ನಲ್ಲಿ ಎಫ್ಐಆರ್ ಅನ್ನು ದಾಖಲು ಮಾಡಲಾಗಿದೆ. ಹೇಗೆಲ್ಲ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

ರೇಪ್‌ ಮತ್ತು ಚಿತ್ರೀಕರಣ ಆರೋಪ

ತಮ್ಮ ಮೇಲೆ ಬಲಾತ್ಕಾರ ಮಾಡಿದ್ದಲ್ಲದೆ, ಅದನ್ನು ಚಿತ್ರೀಕರಣ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಬಾಯಿ ಬಿಟ್ಟರೆ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನ ವಿಡಿಯೊವನ್ನು ಬಿಡುತ್ತೇನೆ ಎಂಧು ಬೆದರಿಕೆ ಒಡ್ಡಿದ್ದಾರೆ. ನಾನು ಕರೆದಾಗೆಲ್ಲ ನೀನು ಬರಬೇಕು. ಇಲ್ಲದಿದ್ದರೆ ನನ್ನ ಬಳಿ ಇರುವ ವಿಡಿಯೊವನ್ನು ಹರಿಬಿಡುತ್ತೇನೆ ಎಂದು ಬೆದರಿಸಿ ಕಳುಹಿಸಿದ್ದಾರೆ. ಇಷ್ಟೇ ಅಲ್ಲದೆ, ಪದೇ ಪದೆ ವಿಡಿಯೊ ಕಾಲ್‌ ಮಾಡಿ ಬೆತ್ತಲೆಯಾಗು ತಾನು ನೋಡಬೇಕು ಎಂದು ಕಿರುಕುಳ ಕೊಟ್ಟು ನಗ್ನತೆಯನ್ನು ನೋಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ‌ಅಲ್ಲದೆ, ಪದೇ ಪದೆ ತಮಗೆ ಬ್ಲ್ಯಾಕ್‌ಮೇಲ್‌ ಮಾಡಿ ಬಲಾತ್ಕಾರ ಮಾಡುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Continue Reading

ಬೆಂಗಳೂರು

English Alphabet: ಇಂಗ್ಲಿಷ್‌ನಲ್ಲಿ ಹೊಸ ಅಕ್ಷರ ವಿನ್ಯಾಸಕ್ಕಾಗಿ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ಪ್ರಯತ್ನ

English Alphabet: ಬೆಂಗಳೂರಿನ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ನಲ್ಲಿ ಗುರುವಾರ ಮುದ್ರಣಕಲೆ ಮತ್ತು ಉತ್ಪನ್ನ ವಿನ್ಯಾಸದ ಕುರಿತು ಒಂದು ದಿನದ ಕಾರ್ಯಗಾರ ಏರ್ಪಡಿಸಲಾಗಿತ್ತು. ಈ ವೇಳೆ ಬೆಂಗಳೂರು ಹಾಗೂ ಪ್ರಾನ್ಸ್‌ ವಿದ್ಯಾರ್ಥಿಗಳು, ಇಂಗ್ಲಿಷ್‌ ವರ್ಣಮಾಲೆಯ 27ನೇ ಅಕ್ಷರ ವಿನ್ಯಾಸಗೊಳಿಸುವ ಪ್ರಯತ್ನ ಮಾಡಿದ್ದಾರೆ.

VISTARANEWS.COM


on

English Alphabet
Koo

ಬೆಂಗಳೂರು: ಇಂಗ್ಲಿಷ್‌ ವರ್ಣಮಾಲೆಯಲ್ಲಿ (English Alphabet) 26 ಅಕ್ಷರಗಳಿರುವುದು ಗೊತ್ತಿರುವ ಸಂಗತಿ. ಆದರೆ, ನಗರದ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ (LISAA School of Design) ವಿದ್ಯಾರ್ಥಿಗಳು, 27ನೇ ಅಕ್ಷರ ವಿನ್ಯಾಸಗೊಳಿಸುವ ಸವಾಲು ಕೈಗೆತ್ತಿಕೊಂಡಿದ್ದು, ಆ ಮೂಲಕ ಇಂಗ್ಲಿಷ್‌ ಮತ್ತು ಫ್ರೆಂಚ್‌ ಭಾಷೆಯ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ನಗರದ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ನಲ್ಲಿ ಗುರುವಾರ ಮುದ್ರಣಕಲೆ ಮತ್ತು ಉತ್ಪನ್ನ ವಿನ್ಯಾಸದ ಕುರಿತು ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ಬೆಂಗಳೂರಿನ ಲಿಸಾ ಸ್ಕೂಲ್‌ ಆಫ್‌ ಡಿಸೈನ್‌ ಮತ್ತು ಫ್ರಾನ್ಸ್‌ನ ಸ್ಟ್ರಾಸ್‌ಬರ್ಗ್‌ ಲಿಸಾ ಸ್ಕೂಲ್‌ ಆಫ್‌ ಡಿಸೈನ್‌ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಾಗಾರದ ಮುಖ್ಯ ಉದ್ದೇಶ ಹೊಸ ಅಕ್ಷರವನ್ನು ವಿನ್ಯಾಸಗೊಳಿಸುವುದಾಗಿತ್ತು.

ಈ ಕುರಿತು ಬೆಂಗಳೂರಿನ ಲಿಸಾ ಸ್ಕೂಲ್‌ ಆಫ್‌ ಡಿಸೈನ್‌ ಸಂಸ್ಥಾಪಕರು ಮತ್ತು ನಿರ್ದೇಶಕಿ ಅವಿ ಕೆಸ್ವಾನಿ ಅವರು ಮಾತನಾಡಿ, “ಭಾಷೆಯೊಂದು ಸಂವಹನ ಕ್ರಿಯೆಗೆ ನೆರವಾಗುವ ಮಾಧ್ಯಮ. ಅದರಂತೆ ಎಲ್ಲಾ ಅಕ್ಷರಗಳಿಗೂ ಅದರದ್ದೇ ಆದ ಸಾಂಸ್ಕೃತಿಕ ಹಿನ್ನೆಲೆ ಇರುತ್ತದೆ. ನಾವು ವಿನ್ಯಾಸಕಾರರು ಈ ಮೂಲಕ ಹೊಸ ಯೋಚನೆಗಳನ್ನು ಹೊರತರಲು ವೇದಿಕೆಗಳನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತೇವೆ. ನಮ್ಮ ಉದ್ದೇಶ ಈ ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಸವಾಲೊಂದನ್ನು ನೀಡುವುದಾಗಿದೆ. ಮೂಲತಃ ಫ್ರೆಂಚ್‌ ಸ್ಕೂಲ್‌ ಆಫ್‌ ಡಿಸೈನ್‌ ಆಗಿರುವುದರಿಂದ ಇಂಗ್ಲಿಷ್‌ ಮಾತನಾಡುವವರು ಕೆಲ ಫ್ರೆಂಚ್‌ ಉಚ್ಚಾರಣೆ ಮಾಡಲು ಕಷ್ಟಪಡುವುದನ್ನು ಗಮನಿಸಿದ್ದೇವೆ. ಈ ಹಿನ್ನೆಲೆಯಲ್ಲಿ 27ನೇ ಅಕ್ಷರವನ್ನು ವಿನ್ಯಾಸಗೊಳಿಸುವ ಮೂಲಕ ಫ್ರೆಂಚ್‌ ಮತ್ತು ಇಂಗ್ಲಿಷ್‌ ಭಾಷೆಗೆ ಸೇತುವೆ ಕಲ್ಪಿಸುವುದಾಗಿದೆ” ಎಂದು ಹೇಳಿದರು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ಫ್ರಾನ್ಸ್‌ನ ವಿದ್ಯಾರ್ಥಿಗಳಿಗೆ ಕಾರ್ಯಾಗಾರದ ಜೊತೆಗೆ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸಿದ್ದು, ಈ ಮೂಲಕ ನಾಡಿನ ಶ್ರೀಮಂತ ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ವೈಭವವನ್ನು ಪರಿಚಯಿಸುವ ನಿಟ್ಟಿನಲ್ಲಿ ಚನ್ನಪಟ್ಟಣದ ಕರಕುಶಲ ಕೇಂದ್ರ ಮತ್ತು ಮೈಸೂರಿನ ಅರಮನೆಯ ಪರಿಚಯ ಮಾಡಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Continue Reading

ಹಾಸನ

Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

Prajwal Revanna Case‌: ಜೆಡಿಎಸ್‌ ನಾಯಕಿ ತಮ್ಮ ಮೇಲೆ ಯಾವಾಗ ಅತ್ಯಾಚಾರ ನಡೆದಿದೆ ಎಂಬ ಸಂಗತಿಯನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. 2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಬಗ್ಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಳಿ ಮಾತನಾಡಲು ಹೋದಾಗ ತಮ್ಮ ಮೇಲೆರಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ತಾವು ನಿರಾಕರಣೆ ಮಾಡಿದಾಗ ಗನ್‌ ಹಿಡಿದು ಹೆದರಿಸಿ ಬಲಾತ್ಕಾರ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಹಾಸನದಲ್ಲಿರುವ ಸಂಸದರ ಬಂಗಲೆಯ ಮಹಡಿ ರೂಮ್‌ನಲ್ಲೇ ರೇಪ್ ಮಾಡಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

VISTARANEWS.COM


on

Prajwal Revanna Case I was raped at gunpoint JDS women leader files complaint against Prajwal
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ನೇರವಾಗಿ ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕೊಟ್ಟ ದೂರಿನಲ್ಲಿ ಭಯಾನಕ ಸತ್ಯಗಳು ಹೊರಬಂದಿದ್ದು, ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಈಗ ಕೇಳಿಬಂದಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಜೆಡಿಎಸ್‌ ನಾಯಕಿ, ಸಂತ್ರಸ್ತೆ ದೂರಿನಲ್ಲಿ ತನಗಾದ ಅನ್ಯಾಯವನ್ನು ಹಾಗೂ ಅತ್ಯಾಚಾರದ ಸಂಗತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಮಾತಿಗೆ ಹೋದಾಗ ರೇಪ್‌?

ಜೆಡಿಎಸ್‌ ನಾಯಕಿ ತಮ್ಮ ಮೇಲೆ ಯಾವಾಗ ಅತ್ಯಾಚಾರ ನಡೆದಿದೆ ಎಂಬ ಸಂಗತಿಯನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. 2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಬಗ್ಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಳಿ ಮಾತನಾಡಲು ಹೋದಾಗ ತಮ್ಮ ಮೇಲೆರಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ತಾವು ನಿರಾಕರಣೆ ಮಾಡಿದಾಗ ಗನ್‌ ಹಿಡಿದು ಹೆದರಿಸಿ ಬಲಾತ್ಕಾರ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಹಾಸನದಲ್ಲಿರುವ ಸಂಸದರ ಬಂಗಲೆಯ ಮಹಡಿ ರೂಮ್‌ನಲ್ಲೇ ರೇಪ್ ಮಾಡಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಗಂಡನ ಬಗ್ಗೆ ಬೆದರಿಸಿ ಬಲಾತ್ಕಾರ

ದೈಹಿಕ ಸಂಪರ್ಕ ಬೆಳೆಸಲು ಪ್ರಜ್ವಲ್‌ ಮುಂದಾಗುತ್ತಿದ್ದಂತೆ ನಾನು ನಿರಾಕರಣೆ ಮಾಡಿದೆ. ಆಗ “ನಿನ್ನ ಗಂಡನನ್ನು ನಾನು ಬಿಡಲ್ಲ” ಎಂದು ಹೆದರಿಸಿ ದೌರ್ಜನ್ಯ ನಡೆಸಿದರು ಎಂದು ಎಸ್‌ಐಟಿಗೆ ಸಂತ್ರಸ್ತೆ ನೀಡಿದ್ದ ದೂರು ಆಧಾರದಲ್ಲಿ ಸಿಐಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್‌) ಹಾಗೂ ಐಟಿ ಆ್ಯಕ್ಟ್‌ನಲ್ಲಿ ಎಫ್ಐಆರ್ ಅನ್ನು ದಾಖಲು ಮಾಡಲಾಗಿದೆ. ಹೇಗೆಲ್ಲ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

ರೇಪ್‌ ಮತ್ತು ಚಿತ್ರೀಕರಣ ಆರೋಪ

ತಮ್ಮ ಮೇಲೆ ಬಲಾತ್ಕಾರ ಮಾಡಿದ್ದಲ್ಲದೆ, ಅದನ್ನು ಚಿತ್ರೀಕರಣ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಬಾಯಿ ಬಿಟ್ಟರೆ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನ ವಿಡಿಯೊವನ್ನು ಬಿಡುತ್ತೇನೆ ಎಂಧು ಬೆದರಿಕೆ ಒಡ್ಡಿದ್ದಾರೆ. ನಾನು ಕರೆದಾಗೆಲ್ಲ ನೀನು ಬರಬೇಕು. ಇಲ್ಲದಿದ್ದರೆ ನನ್ನ ಬಳಿ ಇರುವ ವಿಡಿಯೊವನ್ನು ಹರಿಬಿಡುತ್ತೇನೆ ಎಂದು ಬೆದರಿಸಿ ಕಳುಹಿಸಿದ್ದಾರೆ. ಇಷ್ಟೇ ಅಲ್ಲದೆ, ಪದೇ ಪದೆ ವಿಡಿಯೊ ಕಾಲ್‌ ಮಾಡಿ ಬೆತ್ತಲೆಯಾಗು ತಾನು ನೋಡಬೇಕು ಎಂದು ಕಿರುಕುಳ ಕೊಟ್ಟು ನಗ್ನತೆಯನ್ನು ನೋಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ‌ಅಲ್ಲದೆ, ಪದೇ ಪದೆ ತಮಗೆ ಬ್ಲ್ಯಾಕ್‌ಮೇಲ್‌ ಮಾಡಿ ಬಲಾತ್ಕಾರ ಮಾಡುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Continue Reading
Advertisement
kareena kapoor out from yash starrer toxic
ಬಾಲಿವುಡ್2 mins ago

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Shrirasthu Shubhamasthu serial will be end
ಕಿರುತೆರೆ3 mins ago

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Stock Market
ದೇಶ7 mins ago

Stock Market: ಷೇರು ಪೇಟೆ ತಲ್ಲಣ; ಏಕಾಏಕಿ 700 ಅಂಕ ಕುಸಿದ ನಿಫ್ಟಿ, ಸಾವಿರಾರು ಕೋಟಿ ರೂ. ನಷ್ಟ

Bengaluru Rains
ಮಳೆ14 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Smrithi Irani
ರಾಜಕೀಯ17 mins ago

Smirthi Irani: ಅಮೇಥಿಯಲ್ಲಿ ಕಾಂಗ್ರೆಸ್‌ ಸೋಲನ್ನು ಒಪ್ಪಿಕೊಂಡಿದೆ; ಸ್ಮೃತಿ ಇರಾನಿ ವ್ಯಂಗ್ಯ

Prajwal Revanna Case Who leaked the pen drive Devaraje Gowda gives evidence to SIT
ಕ್ರೈಂ19 mins ago

Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

RCB vS GT:
ಕ್ರೀಡೆ23 mins ago

RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

English Alphabet
ಬೆಂಗಳೂರು28 mins ago

English Alphabet: ಇಂಗ್ಲಿಷ್‌ನಲ್ಲಿ ಹೊಸ ಅಕ್ಷರ ವಿನ್ಯಾಸಕ್ಕಾಗಿ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ಪ್ರಯತ್ನ

Crime News
ಕ್ರೈಂ30 mins ago

Crime News: ಪತ್ನಿಯ ಪ್ರಿಯಕರನ ದ್ವೇಷಕ್ಕೆ ಬಲಿಯಾಯ್ತು ಎರಡು ಜೀವ; ಪಾರ್ಸಲ್‌ ಬಾಂಬ್‌ ಸ್ಫೋಟಕ್ಕೆ ಅಪ್ಪ-ಮಗಳು ಸಾವು

Viral News
ವೈರಲ್ ನ್ಯೂಸ್53 mins ago

Viral News: 17 ವರ್ಷದ ಯುವತಿ ಎರಡು ಬಾರಿ ಗರ್ಭಿಣಿ; ಪೋಷಕರು ಸೇರಿ 16 ಜನರ ವಿರುದ್ಧ ಕೇಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ14 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ11 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ22 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌