Site icon Vistara News

Murder Case: ವರದಕ್ಷಿಣೆ ಕಿರುಕುಳ ದೂರು ನೀಡಿದಳೆಂದು ಹೆಂಡತಿಯನ್ನೇ ಕೊಂದ ಪಾಪಿ ಗಂಡ

Murder case

ಕೋಲಾರ: ವರದಕ್ಷಿಣೆ ಕಿರುಕುಳ ದೂರು ನೀಡಿದ್ದಕ್ಕೆ ಚೂರಿಯಿಂದ ಇರಿದು ಹೆಂಡತಿಯನ್ನೇ ಪತಿ ಕೊಲೆ (Murder Case) ಮಾಡಿರುವ ಘಟನೆ ಜಿಲ್ಲೆಯ ಕೆಜಿಎಫ್‌ ಕೋರಮಂಡಲ್‌ನಲ್ಲಿ ನಡೆದಿದೆ.

ಸಂಜಯಗಾಂಧಿನಗರ ನಿವಾಸಿ ಪವಿತ್ರ ಕೊಲೆಯಾದವರು. ಬುಧವಾರ ಸಂಜೆ ಗಾರ್ಮೆಂಟ್ ಕೆಲಸ ಮುಗಿಸಿಕೊಂಡು ಬರುತ್ತಿರುವಾಗ ಹೆಂಡತಿಯನ್ನು ಗಂಡ ಲೋಕೇಶ್‌ ಕೊಲೆ ಮಾಡಿದ್ದಾನೆ. ಚೂರಿಯಿಂದ ಹಲವು ಬಾರಿ ಇರಿದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಆಕೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾಳೆ.

ದಂಪತಿಗೆ ಒಂದು ಗಂಡು ಮತ್ತು ಹೆಣ್ಣು ಮಗುವಿದೆ. ಮೃತಳು ಗಂಡನ ಮೇಲೆ ಇತ್ತೀಚೆಗೆ ಊರಿಗಾಂ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪಿಸಿ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಊರಿಗಾಂ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Car Accident: ಡಿವೈಡರ್‌ ಹಾರಿ ಮತ್ತೊಂದು ಕಾರಿಗೆ ಡಿಕ್ಕಿಯಾದ ಕಾರು; ಚಾಲಕ ಸಾವು, ಮೂವರ ಸ್ಥಿತಿ ಗಂಭೀರ

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೇಬಲ್

ದಾವಣಗೆರೆ: ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ (Self Harming) ಯತ್ನಿಸಿದ ಘಟನೆ ನಗರದ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಮ್ ಬಳಿ ನಡೆದಿದೆ. ಗುಂಡು ಹಾರಿಸಿಕೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪೊಲೀಸ್ ಪೇದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ನಿವಾಸಿ ಗುರುಮೂರ್ತಿ (34) ಆತ್ಮಹತ್ಯೆಗೆ ಯತ್ನಿಸಿದ ಪೇದೆ. ಕಳೆದ ಕೆಲ ದಿನಗಳಿಂದ ಇವಿಎಂ ಮಷಿನ್ ಕಾವಲು‌ ಸೇವೆಯಲ್ಲಿ ಗುರುಮೂರ್ತಿ ಇದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.

Exit mobile version