Site icon Vistara News

Mandya News : ಕಿಟಕಿಗೆ ನೇತು ಹಾಕಿದ ಸ್ಥಿತಿಯಲ್ಲಿ ಗ್ರಾ.ಪಂ ಸದಸ್ಯನ ಶವ ಪತ್ತೆ!

Devarajegowda Gram panchayat member

ಮಂಡ್ಯ: ಅನುಮಾನಾಸ್ಪದ ರೀತಿಯಲ್ಲಿ ಗ್ರಾ.ಪಂ ಸದಸ್ಯನ ಶವ (Dead body Found) ಪತ್ತೆಯಾಗಿದೆ. ದೇವರಾಜೇಗೌಡ (65) ಮೃತ ದುರ್ದೈವಿ. ಮಂಡ್ಯದ (Mandya News) ಕೆ.ಆರ್.ಪೇಟೆ ತಾಲೂಕಿನ ಗಂಜಿಗೆರೆ ಗ್ರಾ.ಪಂ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೇವರಾಜೇಗೌಡರ ಶವ ಪತ್ತೆಯಾಗಿದೆ.

ಗಂಜಿಗೆರೆ ಗ್ರಾಪಂಯಲ್ಲಿರುವ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಬೇರೆಡೆ ಕೊಲೆ ಮಾಡಿ ಶವ ನೇತು ಹಾಕಿರುವ ಅನುಮಾನ ವ್ಯಕ್ತವಾಗಿದೆ. ಬೆಳಗ್ಗೆ ಎಂದಿನಂತೆ ಗ್ರಾಪಂ ಇದ್ದಾಗ ಸಿಬ್ಬಂದಿ ಬಂದಾಗ ವಿಷಯ ತಿಳಿದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸ್ಥಳಕ್ಕೆ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version