Shivaraj Kumar: ಡಿ.ಕರಡೀಗೌಡರ 10ನೇ ಪುಣ್ಯ ಸ್ಮರಣೆ; ರಾಜಕೀಯ ಬೇಡ, ಸಿನಿಮಾ ರಂಗವೇ ಸಾಕು ಎಂದ ಶಿವಣ್ಣ! Vistara News

ಮಂಡ್ಯ

Shivaraj Kumar: ಡಿ.ಕರಡೀಗೌಡರ 10ನೇ ಪುಣ್ಯ ಸ್ಮರಣೆ; ರಾಜಕೀಯ ಬೇಡ, ಸಿನಿಮಾ ರಂಗವೇ ಸಾಕು ಎಂದ ಶಿವಣ್ಣ!

ಈ ಕಾರ್ಯಕ್ರಮದಲ್ಲಿ ನಟ ಡಾ.ಶಿವರಾಜ್ ಕುಮಾರ್ (Shivaraj Kumar), ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ,ಉಚ್ಚನ್ಯಾಯಾಲಯದ ನ್ಯಾಯಾಧೀಶರಾದ ಟಿ.ಜಿ.ಶಿವಶಂಕರೇಗೌಡ ಭಾಗಿಯಾಗಿದ್ದರು.

VISTARANEWS.COM


on

10th Anniversary of D. Karadeegowda shivarajkumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಸ್ವಾತಂತ್ರ್ಯ ಹೋರಾಟಗಾರ ಡಿ.ಕರಡೀಗೌಡರ 10ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ 10ನೇ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ ವಳಗೆರೆಹಳ್ಳಿ ಗ್ರಾಮದ ಎಸ್.ಡಿ.ಜಯರಾಮ್ ಕ್ರೀಡಾಂಗಣದಲ್ಲಿ ನಡೆಯಿತು. ಡಿ.ಕರಡೀಗೌಡ ಪ್ರತಿಷ್ಠಾನದ ವತಿಯಿಂದ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ನಟ ಡಾ.ಶಿವರಾಜ್ ಕುಮಾರ್ (Shivaraj Kumar), ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ , ಉಚ್ಚನ್ಯಾಯಾಲಯದ ನ್ಯಾಯಾಧೀಶರಾದ ಟಿ.ಜಿ. ಶಿವಶಂಕರೇಗೌಡ ಭಾಗಿಯಾಗಿದ್ದರು.

ಪೂರ್ಣ ಕುಂಭದೊಂದಿಗೆ ಬೆಳ್ಳಿರಥದ ಮೂಲಕ ನಟ ಶಿವರಾಜ್ ಕುಮಾರ್ ಅವರಿಗೆ ಸ್ವಾಗತಿಸಿ ವೇದಿಕೆರೆ ಗ್ರಾಮಸ್ಥರು ಕರೆ ತಂದರು. ಈ ವೇಳೆ ಶಿವಣ್ಣ ಮಾತನಾಡಿ ʻʻಸ್ವಾತಂತ್ರ್ಯ ಹೋರಾಟಗಾರ ಹೆಸರಲ್ಲಿ ನನಗೆ ಪ್ರಶಸ್ತಿ ಬಂದಿರುವುದು ಸಂತೋಷ. ಬಹಳ ಸಂತೋಷದಿಂದ ನಾನು ಪ್ರಶಸ್ತಿ ಸ್ವೀಕರಿಸಿದ್ದೇನೆ. ಘೋಸ್ಟ್ ಸಿನಿಮಾ ಬಿಡುಗಡೆಯಾಗಿದೆ ಉತ್ತಮ ರೆಸ್ಪಾನ್ಸ್ ಸಿಕ್ತಿದೆ. ವಿಭಿನ್ನ ರೀತಿಯ ಚಿತ್ರ. ಜನರ ಪ್ರೋತ್ಸಾಹ ಸಿಕ್ಕಿದ್ರೆ ಸಿನಿಮಾ ಮಾಡಲು ಸಾಧ್ಯ. ಮಾಮೂಲಿ ಸಿನಿಮಾ ಮಾಡೋದು ಬೇರೆ ಈ ಸಿನಿಮಾ ಬೇರೆ. ನಮಗೆ ಜನರಿಂದ ಪ್ರೊತ್ಸಾಹ ಸಿಕ್ಕಿದೆ. ಹೊರ ರಾಜ್ಯದಲ್ಲೂ ರೆಸ್ಪಾನ್ಸ್ ಸಿಕ್ತಿದೆ. ಕೆಜಿಎಫ್ ಬಳಿಕ ಕಾಂತಾರ,ವೇದಾ ಎಲ್ಲಾ ಸಿನಿಮಾ ಬೇರೆ ಮಟ್ಟಕ್ಕೆ ಹೋಗಿದೆ. ಘೋಸ್ಟ್ ಕೂಡ ದೊಡ್ಡ ಮಟ್ಟಕ್ಕೆ ಹೋಗುತ್ತಿದೆʼʼಎಂದರು.

ಕಾವೇರಿ ಹೋರಾಟ

ಕಾವೇರಿಗಾಗಿ ರೈತರ ಹೋರಾಟದ ವಿಚಾರ ಬಗ್ಗೆಶಿವಣ್ಣ ಮಾತನಾಡಿ ʻʻಸರ್ಕಾರಕ್ಕೆ ನಾವು ಒತ್ತಡ ತರಬೇಕು. ಯಾವ ರೀತಿ ತರಬೇಕು ಎನ್ನುವುದನ್ನು ಎಲ್ಲರೂ ತೀರ್ಮಾನ ಮಾಡಿದರೆ ಮಾಡಬಹುದು. ಇಬ್ಬರು ಸರ್ಕಾರ ಸೇರಿ ಮಾಡಿದ್ರೆ ಸಮಸ್ಯೆ ಬಗೆಹರಿಯುತ್ತೆ. ಇದಕ್ಕೆ ಕೇಂದ್ರ ಸರ್ಕಾರ ಕೂಡ ಭಾಗಿಯಾಗಬೇಕು. ಕೇಂದ್ರ ಮಧ್ಯೆ ಪ್ರವೇಶ ಮಾಡಿದ್ರೆ ಮಾತ್ರ ಸಮಸ್ಯೆ ಇತ್ಯರ್ಥವಾಗುತ್ತದೆ. ಖಂಡಿತವಾಗಿಯೂ ನಾವು ರೈತರ ಜತೆ ಇರುತ್ತೇವೆ ನಮ್ಮ ಹೋರಾಟ ದೊಡ್ಡದಾಗಿರಬೇಕು ಬರಿ ಪ್ರತಿಮೆಗಳಿಗೆ ಬೆಂಕಿ ಹಚ್ಚುವುದಲ್ಲ. ನಮಗೆ ಕಿಚ್ಚು ಇರುತ್ತೆ ತಾಳ್ಮೆಯಿಂದ ಹೋರಾಟ ಮಾಡಬೇಕು. ನಾನು ಒಬ್ಬ ಕಲಾವಿದ ದೊಡ್ಡವರು ಸಹ ಕುಳಿತು ರೈತರ ಸಮಸ್ಯೆಗೆ ಪರಿಹಾರ ಹುಡುಕಬೇಕುʼʼಎಂದರು.

ಇದನ್ನೂ ಓದಿ: Shivaraj kumar: ಚಿತ್ರರಂಗಕ್ಕೆ ಬಂದು 37 ವರ್ಷ: ಅಭಿಮಾನಿಗಳಿಗೆ ಪತ್ರ ಬರೆದ ಶಿವಣ್ಣ

10th Anniversary of D. Karadeegowda No need for politics, cinema is enough says by shivarajkumar

ಸಿನಿಮಾ ರಂಗವೇ ಸಾಕು

ʻʻನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬರುವುದಿಲ್ಲ. ಸಿನಿಮಾ ರಂಗವೇ ನಮಗೆ ಸಾಕು. ಗೀತಾ ಶಿವರಾಜ್ ಕುಮಾರ್ ರಾಜಕೀಯಕ್ಕೆ ಬರುತ್ತಾರೆ. ಅವರು ಯಾವ ಕ್ಷೇತ್ರದಲ್ಲಿ ಸ್ವರ್ಧೆ ಮಾಡುತ್ತಾರೋ ಗೊತ್ತಿಲ್ಲ. ಖಂಡಿತವಾಗಿಯೂ ಸ್ಪರ್ಧೆ ಮಾಡ್ತಾರೆ. ಅವರ ಜತೆ ನಾನು ಇದ್ದೆ ಇರುತ್ತೇನೆʼʼಎಂದರು.

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮಾತನಾಡಿ ʻʻಸಮಾಜಕ್ಕೆ ಒಳ್ಳೆಯ ಕೆಲಸ ಮಾಡಿ ತೋರಿಸಿದ ವ್ಯಕ್ತಿಗಳನ್ನ ಗುರುತಿಸಿ ಸನ್ಮಾನ ಮಾಡುವುದು ಅರ್ಥಪೂರ್ಣ. ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮ ಒಳ್ಳೆಯದು. ಡಾ.ಶಿವರಾಜ್ ಕುಮಾರ್ ಅವರು ಉತ್ತಮ ಸಾಧಕ. ಅವರ ಮೇಲೆ ಜನರು ಸಾಕಷ್ಟು ಪ್ರೀತಿ ಇಟ್ಟಿದ್ದಾರೆ.
ಕರ್ನಾಟಕ ಸೇರಿ ಹಲವು ಭಾಗದಲ್ಲಿ ಒಳ್ಳೆಯ ಪ್ರೀತಿಗಳಿಸಿದ್ದಾರೆ. ಕರ್ನಾಟಕ ಲೊಕಾಯುಕ್ತಕ್ಕೆ ಬಂದ ಮೇಲೆ ಸಮಾಜದ ಬಗ್ಗೆ ತಿಳಿಯಿತು.ಸಮಾಜ ತಪ್ಪು ಮಾಡಿದವರನ್ನ ಶಿಕ್ಷಿಸುತ್ತಿತ್ತು. ಜೈಲಿಗೆ ಹೋದವರ ಜತೆ ಹೋಗಬೇಡ ಅಂತಿದ್ದರು. ಇವತ್ತು ಶ್ರೀಮಂತಿಕೆ ಗೌರವಿಸುವ ಕೆಲಸ ಆಗುತ್ತಿದೆ. ಶ್ರೀಮಂತ ನಾಗುವುದು ತಪ್ಪಿಲ್ಲ, ಇನ್ನೊಬ್ಬರ ಜೇಬಿಗೆ ಕೈ ಹಾಗಬಾರದು. ಸಮಾಜ ಬದಲಾವಣೆಯಾಗಬೇಕು. ತೃಪ್ತಿ ಇದ್ದರೆ ಯಾವ ರೋಗ ಬರುವುದಿಲ್ಲ. ಮಾನವೀಯತೆ ನಮ್ಮ ಹಿರಿಯರು ಕಟ್ಟಿದ ಮೌಲ್ಯ.. ಮೊದಲು ಮಾನವನಾಗಬೇಕು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಬರಲಿʼʼಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Gender Detection: ಭ್ರೂಣ ಹತ್ಯೆ 900 ಅಲ್ಲ, 1500ಕ್ಕೂ ಹೆಚ್ಚು! ಹಲವು ಜಿಲ್ಲೆಗಳಲ್ಲಿ ದಂಧೆ

Gender Detection : ಬೆಂಗಳೂರಿನಲ್ಲಿ ಪತ್ತೆಯಾದ ಭ್ರೂಣ ಹತ್ಯೆ ಪ್ರಕರಣದಲ್ಲಿ ನಡೆದದ್ದು 900 ಭ್ರೂಣಗಳ ಹತ್ಯೆಯಲ್ಲ, 1500ಕ್ಕೂ ಹೆಚ್ಚು ಎಂಬ ಸಂಗತಿ ಬಯಲಾಗಿದೆ.

VISTARANEWS.COM


on

Feticide in Bangalore
ಭ್ರೂಣ ಹತ್ಯೆ ಪ್ರಕರಣದಲ್ಲಿ ಬಂಧಿತರು ಇವರು
Koo

ಬೆಂಗಳೂರು: ರಾಜ್ಯದಲ್ಲಿ ಪತ್ತೆಯಾದ ಭ್ರೂಣ ಹತ್ಯೆ ದಂಧೆಯ (Feticide scam) ಹಿಂದಿನ ಕರಾಳ ಸತ್ಯಗಳು ಒಂದರ ಹಿಂದೊಂದರಂತೆ ಬಯಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಹೊರಬೀಳುತ್ತಿರುವ ಅಂಕಿ ಅಂಶಗಳನ್ನು ಕಂಡು ತಾವೇ ಶಾಕ್‌ ಆಗಿದ್ದಾರೆ. ಆರಂಭದಲ್ಲಿ 900 ಭ್ರೂಣಗಳ ಹತ್ಯೆ ನಡೆದಿರಬಹುದು ಎಂದು ಹೇಳಲಾಗಿತ್ತು. ಆದರೆ, ಈಗ ಅದು 1500ಕ್ಕೂ ಹೆಚ್ಚು ಅಂಶ ಬಯಲಾಗಿದೆ (Gender Detection). ಜತೆಗೆ ಇದೊಂದು ಕೋಟ್ಯಂತರ ರೂ. ದಂಧೆ ಎಂದು ಹೇಳಲಾಗುತ್ತಿದೆ.

ಭ್ರೂಣ ಹತ್ಯೆ ಕೇಸಲ್ಲಿ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಇಬ್ಬರು ವೈದ್ಯರು, ಮೂವರು ಲ್ಯಾಬ್ ಟೆಕ್ನಿಷಿಯನ್‌ಗಳು, ಮಧ್ಯವರ್ತಿಗಳು ಸೇರಿ ಒಟ್ಟು 9 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಈ ಆರೋಪಿಗಳು ಕಳೆದ ಎರಡು ವರ್ಷದಿಂದ ಈ ಕೃತ್ಯವೆಸಗುತ್ತಿರುವುದಾಗಿ ಬಾಯಿ ಬಿಟ್ಟಿದ್ದರು. ಆ ಮಾಹಿತಿ ಅಧಾರದ ಮೇಲೆ ಸುಮಾರು 900 ಭ್ರೂಣ ಹತ್ಯೆ ಮಾಡಿರಬಹುದು ಎನ್ನಲಾಗಿತ್ತು.. ಆದ್ರೆ ತನಿಖೆ ಮುಂದುವರೆಸಿದಂತೆ ಕಳೆದ ಮೂರು ತಿಂಗಳಲ್ಲೇ 242 ಭ್ರೂಣ ಹತ್ಯೆ ಮಾಡಿರೋದು ಪತ್ತೆಯಾಗಿದೆ. ಇದನ್ನು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಅವರು ದೃಢಪಡಿಸಿದ್ದಾರೆ.

ಆ ಲೆಕ್ಕದಲ್ಲಿ ನೋಡಿದ್ರೆ ಎರಡು ವರ್ಷದಲ್ಲಿ ವರ್ಷಕ್ಕೆ ಕನಿಷ್ಠ ಒಂದು ಸಾವಿರ ಅಂದ್ರೂ ಕೂಡ ಎರಡು ಸಾವಿರದಷ್ಟು ಭ್ರೂಣ ಹತ್ಯೆ ಮಾಡಿರೋದು ಗೊತ್ತಾಗಿದೆ.. ಭ್ರೂಣ ಪತ್ತೆಗೆ 20 ಸಾವಿರ ರೂ. ಚಾರ್ಜ್‌ ಮಾಡುತ್ತಿರುವ ದಂಧೆಕೋರರು ಅದು ಹೆಣ್ಣು ಭ್ರೂಣ ಎಂದು ತಿಳಿದ ಮೇಲೆ ಅದರ ಹತ್ಯೆಗೆ ಹೆಚ್ಚುವರಿಯಾಗಿ ಮೂವತ್ತು ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ.

ಈ ನಡುವೆ ದಂಧೆಯಲ್ಲಿ ಭಾಗಿಯಾಗಿದ್ದು ತಲೆ ಮರೆಸಿಕೊಂಡಿರುವ ಮತ್ತಿಬ್ಬರು ಮಧ್ಯವರ್ತಿಗಳ ಪತ್ತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ದಂಧೆಗೆ ಸಹಕಾರ ನೀಡುತ್ತಿರುವ ವೈದ್ಯರು ಹಾಗೂ ಹತ್ಯೆ ಮಾಡಿಸಿದ ಪೋಷಕರನ್ನು ಕೂಡಾ ಪತ್ತೆ ಹಚ್ಚುವ ಕೆಲಸವೂ ಸಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಂಧೆಕೋರರು ಬೆಂಗಳೂರು ಮಾತ್ರವಲ್ಲದೆ ಮೈಸೂರು ಮತ್ತು ಮಂಡ್ಯದಲ್ಲೂ ಭ್ರೂಣ ಹತ್ಯೆ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬಯ್ಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿರುವ ಕುರಿತ ಎಫ್‌ಐಆರ್‌ನ್ನು ಜಿಲ್ಲಾಡಳಿತಕ್ಕೆ ಕಳುಹಿಸಿಕೊಡಲಾಗಿತ್ತು.

ಇದನ್ನೂ ಓದಿ: Child Trade : ಒಂದು ಮಗು ಹೆತ್ತು ಕೊಟ್ರೆ ತಾಯಿಗೆ 3 ಲಕ್ಷ, ಏಜೆಂಟ್‌ಗೆ 5 ಲಕ್ಷ ರೂ.!

ಬಯ್ಯಪ್ಪನ ಹಳ್ಳಿಯಲ್ಲಿ ದಾಖಲಾದ ಎಫ್‌ಐಆರ್‌ಗಳ ಮಾಹಿತಿಗಳನ್ನು ಪಡೆದುಕೊಂಡಿದ್ದೇವೆ. ಮಂಡ್ಯದಲ್ಲೂ ಮೂರು ಪ್ರಕರಣಗಳು ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಇಂಥ ಪ್ರಕರಣಗಳು ನಡೆಯುತ್ತಿರುವುದು ವಿಷಾದನೀಯ ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌ ತಿಳಿಸಿದರು.

ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಅನಧಿಕೃತವಾಗಿ ಹೆಣ್ಣು ಭ್ರೂಣ ಪತ್ತೆ ಮಾಡುವ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆ, ಸಿಇಓ ಜೊತೆ ಸಭೆ ಮಾಡಿದ್ದೇನೆ. ಭ್ರೂಣ ಹತ್ಯೆ ಬಗ್ಗೆ ಒಂದು ಆಂದೋಲನದ ಮೂಲಕ ಅರಿವು ಮೂಡಿಸಲಾಗುವುದು ಎಂದು ಹೇಳಿದರು. ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಕೂಡಾ ಇದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಬಂಧಿತ ಆರೋಪಿಗಳು ಯಾರೆಲ್ಲ?

ಭ್ರೂಣ ಹತ್ಯೆ ಪ್ರಕರಣದಲ್ಲಿ ಮೊದಲು ಬಂಧಿತರಾಗಿದ್ದವರು ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್. ಇವರನ್ನು ವಿಚಾರಣೆಗೆ ಒಳಪಡಿಸಿದಾಗ ವೈದ್ಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗಳ ಸಂಚು ಬಯಲಾಗಿತ್ತು. ಚನ್ನೈ ಮೂಲದ ಡಾ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ, ಡಾ.ಚಂದನ್ ಬಲ್ಲಾಳ್ ಮತ್ತು ಪತ್ನಿ ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್ ಅವರನ್ನು ಬಂಧಿಸಲಾಯಿತು. ಹೀಗೆ ಒಟ್ಟಾರೆ ಬಂಧಿತರ ಸಂಖ್ಯೆ 9.

Continue Reading

ಉಡುಪಿ

Karnataka Weather : ನಾಳೆ ಭಾರಿ ಮಳೆ ಎಚ್ಚರಿಕೆ; ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌!

Karnataka Weather Forecast : ತಿಂಗಳಾಂತ್ಯದವರೆಗೆ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather forecast Heavy rain alert
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮೈಸೂರು ಮತ್ತು ತುಮಕೂರಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇತ್ತ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.

ಇದನ್ನೂ ಓದಿ: Viral News: ಪತ್ನಿಯ ಬರ್ತ್‌ಡೇ, ಪತಿಗೆ ಡೆತ್‌ಡೇ: ದುಬೈಗೆ ಕರೆದೊಯ್ಯದ್ದಕ್ಕೆ ಮೂಗಿಗೆ ಗುದ್ದಿ ಗಂಡನ ಪ್ರಾಣ ತೆಗೆದ ಹೆಂಡತಿ

ಆಗೊಮ್ಮೆ ಈಗೊಮ್ಮೆ ದರ್ಶನ ಕೊಡುವ ಸೂರ್ಯ

ನ.29ರಂದು ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು. ಕಡಿಮೆ ಉಷ್ಣಾಂಶ 17.3 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ಕರ್ನಾಟಕದಲ್ಲಿ ಇಂದಿನಿಂದ ಡಿಸೆಂಬರ್‌ 3ರವರೆಗೆ ಮಳೆ ಸಾಧ್ಯತೆ!

Karnataka Weather Forecast : ಇಂದಿನಿಂದ (ನ.28) ಡಿ.3ರ ವರೆಗೂ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

Girl plying in Rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ (Karnataka Weather Forecast) ಆಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 17.2 ಡಿ.ಸೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಮುಂದಿನ ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.

ಒಳನಾಡು ಹಾಗೂ ಕರಾವಳಿ, ಮಲೆನಾಡಿನ ಕೆಲವು ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವೊಮ್ಮೆ ಸಾಧಾರಣದಿಂದ ಜೋರು ಮಳೆ ಸುರಿಯಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 19 ಡಿ.ಸೆ ಇರಲಿದೆ.

ನ.28 ರಿಂದ ಡಿ.3 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Child trade : ಮಕ್ಕಳ ಮಾರಾಟದ ಬೃಹತ್‌ ಜಾಲ ಪತ್ತೆ;‌ ಹೊಟ್ಟೆಯಲ್ಲಿ ಇರುವಾಗಲೇ ಬುಕಿಂಗ್!

ಒಣ ಹವೆ ಮುಂದುವರಿಕೆ

ಬೀದರ್‌, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ಚಾಮರಾಜನಗರ, ಹಾಸನ, ಮೈಸೂರಿಗೆ ಯಾವುದೇ ಮಳೆಯ ಸೂಚನೆ ಇಲ್ಲ. ಬದಲಿಗೆ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 19ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 30 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕ್ರೈಂ

Murder Case: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಯುವಕನ ಕೊಚ್ಚಿ ಕೊಲೆ

ಯುವಕನೂ ಭಾಗಿಯಾಗಿರುವ ಅನೈತಿಕ ಸಂಬಂಧವೊಂದರ (Illicit relationship) ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂಬ ಶಂಕೆಯಿದ್ದು, ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

mandya murder case
Koo

ಮಂಡ್ಯ: ಕುತ್ತಿಗೆಗೆ ಹಗ್ಗದಿಂದ ಬಿಗಿದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಕೊಲೆ (Murder Case) ಮಾಡಲಾಗಿದೆ. ಮಂಡ್ಯ ಜಿಲ್ಲೆ (Mandya news) ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಶಿವಾನಂದ (19) ಮೃತ ಯುವಕ. ಆತನ ಮನೆಯಲ್ಲಿಯೇ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಎಳನೀರು ವ್ಯಾಪಾರ ಮಾಡುತ್ತಿದ್ದ ಯುವಕನ ಮನೆಯಲ್ಲೇ ತಡರಾತ್ರಿ ಹತ್ಯೆ ನಡೆದಿದೆ. ಯುವಕನೂ ಭಾಗಿಯಾಗಿರುವ ಅನೈತಿಕ ಸಂಬಂಧವೊಂದರ (Illicit relationship) ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂಬ ಶಂಕೆಯಿದ್ದು, ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಂಗಭದ್ರಾ ನದಿಯಲ್ಲಿ ಯುವಕ ನಾಪತ್ತೆ

ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ಕೊಪ್ಪಳ ತಾಲೂಕಿನ ಹುಲಿಗಿ ಬಳಿ ತುಂಗಭದ್ರಾ ನದಿಯಲ್ಲಿ ಘಟನೆ ನಡೆದಿದೆ.

ಯಲಬುರ್ಗಾ ತಾಲೂಕಿನ ಕುದ್ರಿಕೋಟಗಿಯ ಯುವಕ ಕನಕಪ್ಪ (17) ನಾಪತ್ತೆಯಾದ ವ್ಯಕ್ತಿ. ನಿನ್ನೆ ಸಂಜೆ ನಡೆದ ಘಟನೆಯಿದು. ಗೌರಿಹುಣ್ಣಿಮೆ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಹುಲಿಗಿಗೆ ಬಂದಿದ್ದ ಯುವಕ ಸಂಜೆ ನದಿಯ ನೀರು ಕುಡಿಯಲು ಹೋಗಿ ನಾಪತ್ತೆಯಾಗಿದ್ದಾನೆ. ಯುವಕನ ಹುಡುಕುವ ಪ್ರಯತ್ನವನ್ನು ಪೊಲೀಸರು ಮಾಡುತ್ತಿಲ್ಲ ಎಂದು ಯುವಕನ ಸಂಬಂಧಿಗಳು ಆರೋಪಿಸಿದ್ದಾರೆ.

ಅನ್ಯಕೋಮಿನ ಜೋಡಿಗೆ ಬಜರಂಗ ದಳ ತರಾಟೆ

ಮಂಗಳೂರು: ಮಂಗಳೂರಿನಲ್ಲಿ ಸ್ಕೂಟರ್‌ನಲ್ಲಿ ಸುತ್ತಾಡುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಬೆನ್ನಟ್ಟಿ ಹೋದ ಬಜರಂಗದಳ (Bhajarang Dal) ಕಾರ್ಯಕರ್ತರು, ಅವರನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ‌ ಘಟನೆ ನಡೆದಿದೆ. ಮಂಗಳೂರಿನ ಮಂಕಿ ಸ್ಟಾಂಡ್ ನಿವಾಸಿ, ಅನ್ಯಕೋಮಿನ ಯುವಕನೊಂದಿಗೆ‌ ಚಿಕ್ಕಮಗಳೂರಿನ‌ ಯುವತಿ ಸುತ್ತಾಡುತ್ತಿದ್ದುದನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಗಮನಿಸಿ ಬೆನ್ನಟ್ಟಿದ್ದರು.

ಮಂಕಿ ಸ್ಟಾಂಡ್‌ನ ಮಳಿಗೆಯೊಂದರಲ್ಲಿ ಈ ಜೋಡಿ ಉದ್ಯೋಗದಲ್ಲಿದೆ. ಸ್ಕೂಟರ್‌ನಲ್ಲಿ ಜೋಡಿಯ ಸುತ್ತಾಟ ಗಮನಿಸಿ ಬೈಕ್‌ಗಳಲ್ಲಿ ಬೆನ್ನಟ್ಟಿದ ಬಜರಂಗದಳ ಕಾರ್ಯಕರ್ತರು, ಮಂಕಿಸ್ಟಾಂಡ್ ಬಳಿ ಸ್ಕೂಟರ್ ಅಡ್ಡ ಹಾಕಿ ಜೋಡಿಯನ್ನು ತರಾಟೆಗೆ ತೆಗೆದುಕೊಂಡರು.

ಕೂಡಲೇ ಇನ್ನೊಂದು ಕೋಮಿನ ಯುವಕರ ತಂಡವೂ ಸ್ಥಳದಲ್ಲಿ ಜಮಾಯಿಸಿದೆ. ಎರಡೂ ಕೋಮುಗಳ ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪಾಂಡೇಶ್ವರ ಠಾಣೆಯ ಪೊಲೀಸರು ಮಧ್ಯ ಪ್ರವೇಶಿಸಿ, ಗುಂಪನ್ನು ಚದುರಿಸಿದರು. ಜೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ‌ ನಡೆಸುತ್ತಿದ್ದಾರೆ. ‌ಗುಂಪಿನ ಇಬ್ಬರು ಆರೋಪಿಗಳನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಒಂದು ತಿಂಗಳ ಹಿಂದೆ ಶೃಂಗೇರಿ ದೇವಸ್ಥಾನದಿಂದ (Shringeri Temple) ಮರಳುತ್ತಿದ್ದ, ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ವೈದ್ಯರಾಗಿದ್ದವರ ಕಾರೊಂದನ್ನು ಅಡ್ಡಗಟ್ಟಿದ ಐವರ ತಂಡ ಅದರಲ್ಲಿದ್ದವರ ಮೇಲೆ ಹಲ್ಲೆ ಮಾಡಿತ್ತು. ಇನ್ನೊಂದು ಪ್ರಕರಣದಲ್ಲಿ ವೈದ್ಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಲಾಗಿತ್ತು.

ಇದನ್ನೂ ಓದಿ: Attack on youth: ನಾದಿನಿ ಜತೆ ಅಶ್ಲೀಲ ವರ್ತನೆ ಪ್ರಶ್ನಿಸಿದ್ದಕ್ಕೆ ಯದ್ವಾತದ್ವಾ ಹಲ್ಲೆ, ಮುಖಕ್ಕೆ ಮೂತ್ರ ಮಾಡಿ ವಿಕೃತಿ

Continue Reading
Advertisement
Fashion Show
ದೇಶ14 mins ago

Fashion Show : ಏಕತೆಗೆ ಧಕ್ಕೆ; ಫ್ಯಾಶನ್​ ಶೋದಲ್ಲಿ ಬುರ್ಖಾ ಹಾಕಿದ್ದಕ್ಕೆ ಮುಸ್ಲಿಂ ನಾಯಕನ ಆಕ್ಷೇಪ!

kalpamrutha cold pressed oil production unit inaugurated
ಕರ್ನಾಟಕ15 mins ago

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕಕ್ಕೆ ಚಾಲನೆ

Gadaga accident two bike riders dead
ಕರ್ನಾಟಕ15 mins ago

Road Accident : ಸೋದರನ ನಿಶ್ಚಿತಾರ್ಥ ಮುಗಿಸಿ ಹೊರಟ ಇಬ್ಬರು ಅಪಘಾತದಲ್ಲಿ ಮೃತ್ಯು

Anju who went to Pakistan for to marry her lover, returns to India
ದೇಶ17 mins ago

Anju Love Story: ಪಾಕ್‌ಗೆ ಹೋಗಿ ಪ್ರಿಯಕರನ ಮದ್ವೆಯಾಗಿದ್ದ ಅಂಜು ಭಾರತಕ್ಕೆ ವಾಪಸ್!

vijaypura accident
ಕರ್ನಾಟಕ31 mins ago

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Task force committee meeting at Kottur
ವಿಜಯನಗರ42 mins ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ46 mins ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್58 mins ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ1 hour ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ1 hour ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ16 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌