ಅನ್ನದಾಸೋಹದ ದಿನಸಿಯನ್ನು ಕಾಳಸಂತೆಯಲ್ಲಿ ಮಾರುತ್ತಿದ್ದ ಶಿಕ್ಷಕ ಅಮಾನತು - Vistara News

ಮಂಡ್ಯ

ಅನ್ನದಾಸೋಹದ ದಿನಸಿಯನ್ನು ಕಾಳಸಂತೆಯಲ್ಲಿ ಮಾರುತ್ತಿದ್ದ ಶಿಕ್ಷಕ ಅಮಾನತು

ಮಂಡ್ಯದ ಶಿಕ್ಷಕರೊಬ್ಬರು ಮಕ್ಕಳ ಪಾಲಿಗೆ ದಕ್ಕಬೇಕಾಗಿದ್ದ ತೊಗರಿ ಬೇಳೆಯನ್ನು ಅಕ್ರಮವಾಗಿ ಸಾಗಾಟ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

VISTARANEWS.COM


on

ಶಿಕ್ಷಕ ಕಾಳರಾಜೇಗೌಡ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಮಂಡ್ಯದ ಸರ್ಕಾರಿ ಶಾಲೆಯೊಂದರಲ್ಲಿ ಅನ್ನದಾಸೋಹಕ್ಕೆಂದು ಬಳಸಬೇಕಿದ್ದ ತೊಗರಿಬೇಳೆಯನ್ನು ಶಿಕ್ಷಕನೋರ್ವ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆತನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ಮಳವಳ್ಳಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಕಾಳರಾಜೇಗೌಡ ಇದೀಗ ಅಮಾನತಾಗಿರುವಾತ. ಈ ಶಾಲೆಯಲ್ಲಿ ಮಕ್ಕಳ ಭೋಜನಕ್ಕೆಂದು ತೊಗರಿ ಬೇಳೆಗಳನ್ನು ಸರ್ಕಾರದ ವತಿಯಿಂದ ನೀಡಲಾಗಿತ್ತು. ಆದರೆ, ಕಾಳರಾಜೇಗೌಡ 50ಕೆ.ಜಿ.ಯಷ್ಟು ತೊಗರಿಬೇಳೆ ಇರುವ ಎರಡು ಮೂಟೆಗಳನ್ನು ಅಕ್ರಮವಾಗಿ ಸಾಗಾಟ ಮಾಡಿದ್ದಾನೆ. ಅಲ್ಲದೆ, ಕಾಳಸಂತೆಯಲ್ಲಿ ಇವುಗಳನ್ನು ಮಾರಾಟ ಮಾಡಿದ್ದಾನೆ.

ಗುರುವಾರ (ಜೂನ್‌ 29) ಮೇಲಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೆ, ಕಾಳಸಂತೆಯಲ್ಲಿ ತೊಗರಿಬೇಳೆಯನ್ನು ಮಾರಾಟ ಮಾಡುತ್ತಿದ್ದ ವಿಡಿಯೊ ಲಭ್ಯವಾಗಿದೆ.

ತೊಗರಿ ಬೇಳೆಯನ್ನು ಇಲಾಖೆಯ ಗಮನಕ್ಕೆ ಬಾರದಂತೆ ಶಾಲೆಯಿಂದ ಹೊರಗೆ ಸಾಗಿಸಲಾಗುತ್ತಿದ್ದು, ಇದರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಶಿಕ್ಷಕನನ್ನು ಅಮಾನತು ಮಾಡಲಾಗಿದ್ದು, ಕಾಳರಾಜೇಗೌಡನ ವಿರುದ್ಧ ಹಲಗೂರು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಸಾಲಬಾಧೆ ತಾಳಲಾರದೆ ರೈತನ ಆತ್ಮಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Rain News : ರಾಜ್ಯಾದ್ಯಂತ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆಯು ತತ್ತರಿಸುವಂತೆ ಮಾಡಿದೆ. ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು : ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಯಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಉಳಿದ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 33 ಮತ್ತು 23 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇರಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇಲ್ಲೆಲ್ಲ ಭಯಂಕರ ಮಳೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಕೊಟ್ಟೂರು ಬಸ್ ಸ್ಟ್ಯಾಂಡ್‌ನಲ್ಲಿ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ವಿಜಯನಗರದ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದರು.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿತ್ತು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Karnataka Weather Forecast : ರಾಜ್ಯದ ವಿವಿಧೆಡೆ ಮಳೆಯು ಅಬ್ಬರಿಸುತ್ತಿದೆ. ಭಾರಿ ಮಳೆಗೆ ಕೊಟ್ಟೂರು ಬಸ್ ನಿಲ್ದಾಣವು ಕೆರೆಯಾಗಿ ಪರಿವರ್ತನೆ ಆಗಿತ್ತು. ಬಲಿಗಾಗಿ ಕಾಯುತ್ತಿದ್ದ ದೊಡ್ಡ ಚರಂಡಿಯೊಂದು ಬಾಯ್ತೆರೆದಿತ್ತು. ಸ್ವಲ್ಪ ಯಾಮಾರಿದ್ರೂ ತಾಯಿ-ಮಗ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು.

VISTARANEWS.COM


on

By

Karnataka Weather Forecast
Koo

ವಿಜಯನಗರ/ಚಿಕ್ಕಮಗಳೂರು: ರಾಜ್ಯಾದ್ಯಂತ ಮಳೆಯಾಟ (Karnataka Weather Forecast) ಜೋರಾಗಿದೆ. ನಿನ್ನೆ ಬುಧವಾರ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಅವ್ಯವಸ್ಥೆ ಇದ್ದರೂ ತಿರುಗಿ ನೋಡದ ಅಧಿಕಾರಿಗಳು, ಶಾಸಕರ ವಿರುದ್ಧ ಪ್ರಯಾಣಿಕರು ಕಿಡಿಕಾರಿದರು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಇದನ್ನೂ ಓದಿ: Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

ಹಾವೇರಿಯಲ್ಲಿ ಸಿಡಿಲಿಗೆ ಯುವಕ ಬಲಿ

ಹಾವೇರಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲಿನ ಆರ್ಭಟಕ್ಕೆ ಯುವಕ ಬಲಿಯಾಗಿದ್ದಾನೆ. ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ದಯಾನಂದ (22) ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಭಾರಿ ಮಳೆಯೊಂದಿಗೆ ಗುಡುಗು ಸಿಡಿಲಿನ ಆರ್ಭಟಕ್ಕೆ ದಯಾನಂದ ಮರದ ಕೆಳಗೆ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ದಯಾನಂದ ಮೃತಪಟ್ಟಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲಿ ಮಲ್ಲಿಗೆ ಹೂವಿನಂತೆ ಸುರಿದ ಆಲಿಕಲ್ಲು

ಚಿಕ್ಕಮಗಳೂರಿನಲ್ಲಿ ಗುರುವಾರ ಸಂಜೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮುತ್ತೋಡಿ ಅಭಯಾರಣ್ಯದ ಬಳಿ ಭಾರಿ ಆಲಿಕಲ್ಲು ಮಳೆಯು ಮಲ್ಲಿಗೆ ಹೂವಿನಂತೆ ಕಂಡು ಬಂತು. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಾಗುತ್ತಿದ್ದು, ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮಳೆ ನೀರಿಗಿಂತ ಆಲಿಕಲ್ಲು ಆರ್ಭಟ ಜೋರಾಗಿತ್ತು.

ಚಿಕ್ಕಮಗಳೂರಲ್ಲಿ ಮಳೆಗೆ ಮನೆ ಮೇಲೆ ಮರ ಬಿದ್ದು ಜಖಂ

ಚಿಕ್ಕಮಗಳೂರಿನಲ್ಲಿ ಗುರುವಾರವೂ ಮಳೆಯು ಆರ್ಭಟಿಸಿದೆ. ಭಾರಿ ಮಳೆಗೆ ತೆಂಗಿನ ಮರವೊಂದು ಮನೆಯ ಮೇಲೆ ಬಿದ್ದು ಅವಾಂತರವೇ ಸೃಷ್ಟಿಯಾಗಿತ್ತು. ಮನೆಯಲ್ಲಿದ್ದ ವಸ್ತುಗಳು, ದವಸ ಧಾನ್ಯಗಳು ನಾಶವಾಗಿದ್ದವು. ಗಾಳಿ- ಮಳೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದವು. ಕಳಸ ಪಟ್ಟಣದಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಳಸ-ಕುದುರೆಮುಖ, ಬಾಳೆಹೊನ್ನೂರು-ಕಳಸ ಹೆದ್ದಾರಿಯಲ್ಲಿ ಸುಮಾರು 15 ಹೆಚ್ಚು ಕಡೆ ಮರ ಬಿದ್ದು, ಪ್ರಯಾಣಿಕರು ಪರದಾಟ ಅನುಭವಿಸಿದರು.

ಕಳಸ ತಾಲೂಕಿನ ನೆಲ್ಲಿಕೆರೆ, ಕಲ್ಮಕ್ಕಿ, ಕೈಮರ ಗ್ರಾಮಗಳಲ್ಲಿ ಹಲವು ಮನೆಗಳ ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದಿತ್ತು. ಮನೆಗಳ ಹೆಂಚುಗಳು, ಕೊಟ್ಟಿಗೆಯ ಚಾವಣಿ ಹಾನಿಯಾಗಿತ್ತು. ಇನ್ನೂ ಮರಗಳ ಕೊಂಬೆ ತಂತಿಯ ಮೇಲೆ ಬಿದ್ದು ವಿದ್ಯುತ್ ಸ್ಥಗಿತವಾಗಿತ್ತು. ಧಾರವಾಡದಲ್ಲೂ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಗುರುವಾರ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಇತ್ತು. ನೋಡ ನೋಡುತ್ತಿದ್ದಂತೆ ಮಳೆ ಸುರಿದಿದೆ.

ವಿಜಯನಗರದಲ್ಲಿ ಗಾಳಿ ಮಳೆಯ ಅವಾಂತರ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಗಾಳಿ ಮಳೆಯ ಅವಾಂತರಕ್ಕೆ ಗುರುವಾರ ಸಂಜೆ ಸಾರ್ವಜನಿಕ ಗ್ರಂಥಾಲಯ ಮುಂಭಾಗ ವಿದ್ಯುತ್ ಕಂಬ ಧರೆಗೆ ಉರುಳಿದೆ. ಅದೇ ರೀತಿ ಪಟ್ಟಣದ ಕುಡಿಯುವ ನೀರಿನ ಘಟಕದ ಬಳಿ ಬೃಹತ್ ಮರ ಬಿದ್ದಿದೆ. ಇತ್ತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಳೆ ನೀರು ನುಗ್ಗಿ ಚಿಕಿತ್ಸೆಗೆ ಬಂದಿದ್ದವರು ತೊಂದರೆ ಅನುಭವಿಸಿದರು. ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿತ್ತು.

ಕೆರೆಯಲ್ಲಿ ಮರಿಯಾನೆಯೊಂದಿಗೆ ಮಳೆಯಾಟ

ಮೈಸೂರಿನಲ್ಲೂ ಮಳೆಯಾಗುತ್ತಿದ್ದು, ಹನಿಗಳ ನಡುವೆ ಕೆರೆಯಲ್ಲಿ ಕಾಡಾನೆಗಳ ಜಲಕ್ರೀಡೆ ನೋಡುಗರ ಸೆಳೆದವು. ನಾಗರಹೊಳೆಯ ಕುಟ್ಟ ಬಳಿ ಕೆರೆಯಲ್ಲಿ ಆನೆಯು ಮರಿಯೊಂದಿಗೆ ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಖ್ಯಾತ ವನ್ಯಜೀವಿ ಫೋಟೋಗ್ರಾಫರ್ ರವಿಶಂಕರ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗರನ್ನು ಕೈಬೀಸಿ ಕರೆಯುತ್ತಿದೆ.

ಮೇ 21ರವರೆಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿರುಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಮಂಡ್ಯ, ಹಾಸನದಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ರಭಸವಾಗಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ ಇಳಿಕೆ

ಮುಂದಿನ 5 ದಿನ ಗರಿಷ್ಠ ಉಷ್ಣಾಂಶ 2-3 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ವಾತಾವರಣವು ತಂಪಾಗಿ ಇರಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಂಜೆ ಅಥವಾ ರಾತ್ರಿ ನಂತರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30 ಹಾಗೂ 22 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ಇದನ್ನು ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ ಮತ್ತು ತೃತೀಯ ಸ್ಥಾನ ಪಡೆದ ನವನೀತ್ ಕೆ.ಸಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Result 2024) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ ಮತ್ತು ತೃತೀಯ ಸ್ಥಾನ ಪಡೆದ ನವನೀತ್ ಕೆ.ಸಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತ್ಯೇಕವಾಗಿ ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ್ದಾರೆ. ಇದೇ ವೇಳೆ ಇಬ್ಬರು ವಿದ್ಯಾರ್ಥಿಗಳು ಓದಿದ ಮೊರಾರ್ಜಿ ವಸತಿ ಶಾಲೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು 1.5 ಕೋಟಿ ರೂ. ಅನುದಾನ ನೀಡುವುದಾಗಿ ತಿಳಿಸಿದ್ದಾರೆ.

ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ‌ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಅಂಕಿತಾ ಹಾಗೂ ತೃತೀಯ ರ‍್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು. ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.‌

ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು. ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು.

ಇದನ್ನೂ ಓದಿ | SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯವಾದ ಅರ್ಪಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಹೇಳಿದರು.

ನಿಮ್ಮ ಸಾಧನೆಯೇ ನನಗೆ ಪ್ರೇರಣೆ: ಅಂಕಿತಾ

ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅಂಕಿತಾ, “ಸಾರ್ ನಿಮ್ಮ ಸಾಧನೆಗಳು, ನಿಮ್ಮ ಮಾತುಗಳು ನನ್ನ ಈ ಯಶಸ್ಸಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದವು” ಎಂದು ತಿಳಿಸಿದರು. ಮುಂದೆ ಐಎಎಸ್ ಅಧಿಕಾರಿ ಆಗಬೇಕೆಂಬ ಬಯಕೆಯನ್ನು ಅಂಕಿತಾ ವ್ಯಕ್ತಪಡಿಸಿದರು. ಈ ವೇಳೆ ಪಿಯುಸಿ ದಾಖಲಾತಿ ಸೇರಿದಂತೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವುದಾಗಿ ಸಿಎಂ ಭರವಸೆ ನೀಡಿದರು.

ಅಂಕಿತಾಗೆ 5 ಲಕ್ಷ, ನವನೀತ್‌ಗೆ 2 ಲಕ್ಷ ಪ್ರೋತ್ಸಾಹ ಧನ ನೀಡಿದ ಡಿಸಿಎಂ ಡಿಕೆಶಿ

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಓದಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್‌ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆಯಲ್ಲಿ ಓದಿ 3ನೇ ರ‍್ಯಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು.

ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್‌ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ, ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಮೊನ್ನೆ 10ನೇ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆಯ ಬಸವರಾಜು ಅವರ ಪುತ್ರಿ ಅಂಕಿತಾ 625 ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರ್ಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ.

ಈಕೆಯ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ನನ್ನ ಆಸಕ್ತಿ ರಾಜಕಾರಣವಾದರೂ ನನ್ನ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಗ್ರಾಮೀಣ ಭಾಗದ ಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮಾಡುವುದು ನನ್ನ ಗುರಿ ಎಂದರು.

ಇದನ್ನೂ ಓದಿ | CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ಸರ್ಕಾರದ ಹಣ ಬಳಸದೇ, ಸಿಎಸ್ಆರ್ ನಿಧಿ ಮೂಲಕ ಈ ಶಾಲೆಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಇವುಗಳ ನಿರ್ಮಾಣದ ಸಭೆ ಕರೆಯುತ್ತೇನೆ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಶಾಲೆಗಳ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶ ನಮ್ಮದಾಗಿದೆ ಎಂದರು.

Continue Reading
Advertisement
Prajwal Revanna Case Lawyer Devarajegowda sent to judicial custody End of police custody
ಕ್ರೈಂ32 mins ago

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

RCB vs CSK
ಕ್ರೀಡೆ45 mins ago

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

Kannada New Movie The judgement Trailer Out Kannada
ಸ್ಯಾಂಡಲ್ ವುಡ್47 mins ago

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Crime News
ದೇಶ50 mins ago

ಶಾಲೆ ಸಮೀಪದ ಚರಂಡಿಯಲ್ಲಿ 4 ವರ್ಷದ ಮಗುವಿನ ಮೃತದೇಹ ಪತ್ತೆ; ಭುಗಿಲೆದ್ದ ಹಿಂಸಾಚಾರ

Bal Jeevan Bima
ಮನಿ ಗೈಡ್1 hour ago

Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

road Accident in Bengaluru mysore
ಬೆಂಗಳೂರು1 hour ago

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Swati Maliwal
ದೇಶ1 hour ago

Swati Maliwal: “ಪೀರಿಯೆಡ್ಸ್‌ ಆಗಿದೆ.. ಪ್ಲೀಸ್‌ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ”-ಆಘಾತಕಾರಿ ಸಂಗತಿ ಬಿಚ್ಚಿಟ್ಟ ಸ್ವಾತಿ ಮಲಿವಾಲ್‌

Viral Video
ವೈರಲ್ ನ್ಯೂಸ್1 hour ago

Viral Video: ಅಳುತ್ತಾ ವಿದಾಯ ಹೇಳಿದ್ದೇಕೆ ಪಾಕಿಸ್ತಾನದ ಅತ್ಯಂತ ಕಿರಿಯ ಯೂಟ್ಯೂಬರ್?

1 year of CM Siddaramaiah government BJP prepares chargesheet and Congress gears up for counter
ರಾಜಕೀಯ2 hours ago

CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

RCB vs CSK
ಕ್ರೀಡೆ2 hours ago

RCB vs CSK: ಆರ್​ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌