Site icon Vistara News

ಮಂಡ್ಯದಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ, ಮೂವರು ಸಾವು

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ.
ನಾಗಮಂಗಲದ ಮೈಸೂರು ರಸ್ತೆಯ ಹೊಸೂರು ಗೇಟ್ ಬಳಿ‌ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದರೆ, ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ. ದೇವರಾಜು, ಮಂಜುನಾಥ್ ಹಾಗೂ ಮತ್ತೋರ್ವ ಸಾವಿಗೀಡಾದವರು.
ದೇವರಾಜು ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದ ನಿವಾಸಿ. ಮಂಜುನಾಥ್ ಕೆನ್ನಾಳು ಗ್ರಾಮ ಪಂಚಾಯಿತಿ ಸಹಾಯಕ ಆಗಿದ್ದರು. ಮೃತ ದೇವರಾಜು ಜಮೀನು ಕೆಲಸದ ನಿಮಿತ್ತ ಸ್ನೇಹಿತರೊಂದಿಗೆ ತೆರಳಿದ್ದರು.
ವಾಪಸ್ಸು ಬರುವ ವೇಳೆ ಅವಘಡ ಸಂಭವಿಸಿದೆ.
ಮೈಸೂರಿನಿಂದ ಬೆಳಗಾವಿ ಕಡೆಗೆ ಲಾರಿ ಹೋಗುತ್ತಿತ್ತು. ಗಾಯಾಳುವಿಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version