ಮಂಡ್ಯ| ಶ್ರೀರಂಗಪಟ್ಟಣದಲ್ಲಿ ಅಪ್ಪು ಅಭಿಮಾನಿ ಆತ್ಮಹತ್ಯೆ: ನಮ್ಮ ಮನೆಗೇ ಇದು ಕೊನೆಯಾಗಲಿ ಎಂದ ಮಾವ - Vistara News

ಕ್ರೈಂ

ಮಂಡ್ಯ| ಶ್ರೀರಂಗಪಟ್ಟಣದಲ್ಲಿ ಅಪ್ಪು ಅಭಿಮಾನಿ ಆತ್ಮಹತ್ಯೆ: ನಮ್ಮ ಮನೆಗೇ ಇದು ಕೊನೆಯಾಗಲಿ ಎಂದ ಮಾವ

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅಪ್ಪು ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿರಣ್‌ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

appu fan kiran
ಪುನೀತ್‌ ರಾಜ್‌ ಕುಮಾರ್‌ ಜತೆ ಫೊಟೊ ತೆಗೆಸಿಕೊಂಡಿದ್ದ ಅಭಿಮಾನಿ ಕಿರಣ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಅಪ್ಪು ಪುಣ್ಯಸ್ಮರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಅಪ್ಪು ಅಭಿಮಾನಿಯೊಬ್ಬರು, ಬಳಿಕ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ಕಿರಣ್(22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪ್ಪು ಇಲ್ಲದ ಜೀವನ ಬೇಡವೆಂದು ನೊಂದುಕೊಂಡಿದ್ದ ಅವರು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದಲ್ಲಿ ಶನಿವಾರ ನಡೆದ ಅಪ್ಪು ಸ್ಮರಣೆಯಲ್ಲಿ ಕಿರಣ್ ಪಾಲ್ಗೊಂಡಿದ್ದರು. ಅಪ್ಪುಗೆ ಪೂಜೆ ಸಲ್ಲಿಸಿದ್ದರು. ಅನ್ನಸಂತರ್ಪಣೆಯನ್ನೂ ನಡೆಸಿದ್ದರು. ಈ ಕಾರ್ಯಕ್ರಮದ ಬಳಿಕ ಮನೆಗೆ ಹಿಂತಿರುಗಿದ್ದ ಕಿರಣ್‌, ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಪುನೀತ್‌ ರಾಜ್‌ ಕುಮಾರ್‌ ಅವರ ಅಕಾಲಿಕ ಅಗಲಿಕೆಯ ಬಳಿಕ ಕಿರಣ್‌ ಸಾಕಷ್ಟು ನೊಂದುಕೊಂಡಿದ್ದರು ಎನ್ನಲಾಗಿದೆ. ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಿರಣ್‌ ಮಾವ ರವಿಚಂದ್ರ, ಅಭಿಮಾನವೇ ಬೇರೆ, ಮೊದಲು ತಂದೆ ತಾಯಿಗಳನ್ನು ನೋಡಿಕೊಳ್ಳಿ. ಅವನು ಪುನೀತ್ ಅವರ ಪ್ರತಿ ಸಿನಿಮಾ ಶೂಟಿಂಗ್ ಅಟೆಂಡ್ ಮಾಡುತ್ತಿದ್ದ. ಶನಿವಾರ ಸ್ನೇಹಿತರ ಜತೆ ಸೇರಿ ಅನ್ನ ಸಂತರ್ಪಣೆ ಮಾಡಿದ್ದ. ಎಲ್ಲರ ಜತೆ ಸೇರಿ ಗಂಧದಗುಡಿ ಸಿನಿಮಾ ನೋಡಿಕೊಂಡು ಬಂದಿದ್ದ.

ಅಪ್ಪು ಇಲ್ಲ ಎನ್ನುವುದನ್ನು ಅರಗಿಸಿಕೊಳ್ಳಲು ಆಗಿಲ್ಲ. ಹೀಗಾಗಿ ಈ ರೀತಿ ಮಾಡಿಕೊಂಡಿರಬಹುದು. ಆದರೆ ಈಗ ವಯಸ್ಸಾದ ತಂದೆ ತಾಯಿ ನೋಡಿಕೊಳ್ಳುವವರು ಯಾರು? ಪಾರ್ವತಮ್ಮ ರಾಜ್‍ಕುಮಾರ್ ಆಸ್ಪತ್ರೆ ಸೇರಿದ್ದಾಗ ಅಪ್ಪು ಯಾವ ರೀತಿ ನೋಡಿಕೊಂಡಿದ್ದರು. ವೈದ್ಯರು ಎಲ್ಲ ಸರಿಯಾಗಿದೆ ಎಂದರೂ ಇನ್ನೂ 15 ದಿನ ವೆಂಟಿಲೇಟರ್‌ನಲ್ಲಿ ಇರಲಿ ಎಂದಿದ್ದರು. ಇಂತಹ ಸಾವು ನಮ್ಮ ಮನೆಗೇ ಕೊನೆಯಾಗಲಿ. ಅಭಿಮಾನದಿಂದ ಯಾರೂ ಈ ರೀತಿ ಮಾಡಿಕೊಳ್ಳಬೇಡಿ. ಆ ಮೂಲಕ ತಂದೆ ತಾಯಿಗೆ ನೋವು ಕೊಡಬೇಡಿ ಎಂದು ನೋವಿನಿಂದ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Appu Namana | ಪುನೀತ್‌ ಸಮಾಧಿ ದರ್ಶನ ಪಡೆದ 1.30 ಲಕ್ಷ ಮಂದಿ; ಇನ್ನೂ ಕರಗದ ಸರತಿ ಸಾಲು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಾಜಕೀಯ

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ವಿಕ್ಟೋರಿಯಾದಲ್ಲಿ ಅಡ್ಮಿಟ್‌

Prajwal Revanna Case: ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಆರೋಗ್ಯ ಸುಧಾರಿಸಿದೆ ಎಂದು ಆರಂಭದಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ಕರೆದುಕೊಂಡು ಹೋಗಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದರು. ಆದರೆ, ರೇವಣ್ಣ ತೀವ್ರ ಬಳಲಿದಂತೆ ಕಂಡ ಹಿನ್ನೆಲೆಯಲ್ಲಿ ಅವರಿಗೆ ಡ್ರಿಪ್‌ (ಸಲೈನ್) ಹಾಕಲಾಗಿದೆ.

VISTARANEWS.COM


on

Prajwal Revanna Case HD Revanna has severe chest pain Admission in Victoria
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಕೇಸ್‌ ಅಡಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೆ ಹೊಟ್ಟೆನೋವು ಹಾಗೂ ಎದೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿಕೊಳ್ಳಲಾಗಿದೆ.

ಸಂಜೆ ವೇಳೆಗೆ ಎಚ್.ಡಿ. ರೇವಣ್ಣ ಅವರು ಹೊಟ್ಟೆ ನೋವು ಹಾಗೂ ಎದೆ ಉರಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮೊದಲು ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಲಾಗಿತ್ತು. ಅಲ್ಲಿ ಮೊದಲು ಬಿಪಿ, ಶುಗರ್ ಹಾಗೂ ಇಸಿಜಿ ತಪಾಸಣೆಯನ್ನು ನಡೆಸಲಾಗಿದೆ. ಇವು ನಾರ್ಮಲ್‌ ಇದ್ದ ಕಾರಣದಿಂದ ಅಲ್ಲಿಂದ ಹೆಚ್ಚಿನ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ.

ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಆರೋಗ್ಯ ಸುಧಾರಿಸಿದೆ ಎಂದು ಆರಂಭದಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ಕರೆದುಕೊಂಡು ಹೋಗಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದರು. ಆದರೆ, ರೇವಣ್ಣ ತೀವ್ರ ಬಳಲಿದಂತೆ ಕಂಡ ಹಿನ್ನೆಲೆಯಲ್ಲಿ ಅವರಿಗೆ ಡ್ರಿಪ್‌ (ಸಲೈನ್) ಹಾಕಲಾಗಿದೆ.

ಆದರೆ, ಎಚ್.ಡಿ. ರೇವಣ್ಣ ಅವರಿಗೆ ಎದೆ ನೋವು ಹಾಗೂ ಹೊಟ್ಟೆ ಉರಿ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಅಡ್ಮಿಟ್ ಮಾಡುವುದು ಸೂಕ್ತ ಎಂದು ವೈದ್ಯರು ಸೂಚನೆ ನೀಡಿದ್ದಾರೆ. ಹೀಗಾಗಿ ವೈದ್ಯರ ಸೂಚನೆ ಬೆನ್ನಲ್ಲೇ ಅಡ್ಮಿಟ್ ಮಾಡಲು ಎಸ್‌ಐಟಿ ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ. ಇದಕ್ಕೂ ಮೊದಲು ಡ್ರಿಪ್‌ ಮುಗಿದ ಬಳಿಕ ಅವರನ್ನು ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದರು.

ರೇವಣ್ಣ ಮೇಲೂ ಲುಕೌಟ್‌ ನೋಟೀಸ್‌

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading

ಕ್ರೈಂ

Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Prajwal Revanna Case: ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರೇವಣ್ಣ ಅವರಿಗೆ ಜೈಲಾಗುತ್ತದೆಯೋ? ಅಥವಾ ಜಾಮೀನು ಸಿಗುತ್ತದೆಯೋ ಎಂಬ ಪ್ರಶ್ನೆ ಎದುರಾಗಿದೆ.

VISTARANEWS.COM


on

Prajwal Revanna Case HD Revanna bail plea to be heard tomorrow Jail or Bela
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ನಾಳೆ (ಬುಧವಾರ – ಮೇ 8) ವಿಚಾರಣೆಗೆ ಬರಲಿದೆ.

ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ.

ಇನ್ನು ಜಾಮೀನು ಅರ್ಜಿ ವಿಚಾರಣೆ ಸಂಬಂಧ ನ್ಯಾಯಾಲಯ ಸಹ ಒಂದು ಪ್ರಶ್ನೆ ಎತ್ತಿದೆ. ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಮಂಗಳವಾರ ನಡೆದ ವಿಚಾರಣೆ ವೇಳೆ ಪ್ರಶ್ನೆ ಮಾಡಿದೆ. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈ ವೇಳೆ ರೇವಣ್ಣ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಜಾಮೀನು ಸಿಕ್ಕಿಲ್ಲವಾದರೆ, ಪುನಃ ಕಸ್ಟಡಿಗೆ ನೀಡಲಾಗುತ್ತದೆಯೋ? ಅಥವಾ ನ್ಯಾಯಾಂಗ ಬಂಧನಕ್ಕೊಳಪಟ್ಟು ಪರಪ್ಪನ ಅಗ್ರಹಾರ ಸೇರಲಿದ್ದಾರೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟೀಸ್‌

ಎಚ್‌.ಡಿ. ರೇವಣ್ಣ ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading

ಕ್ರೈಂ

Prajwal Revanna Case: ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ ಜತೆ ಮುಖಾಮುಖಿ ವಿಚಾರಣೆಗೆ ಒಪ್ಪದ ರೇವಣ್ಣ!

Prajwal Revanna Case: ಕಿಡ್ನ್ಯಾಪ್ ಕೇಸಲ್ಲಿ ಬಂಧಿತರಾಗಿ ಎಸ್ಐಟಿ‌ ಕಸ್ಟಡಿಯಲ್ಲಿರುವ ಮಾಜಿ‌ ಸಚಿವ ಎಚ್.ಡಿ. ರೇವಣ್ಣ ಮೂರನೇ ದಿನವೂ ಎಸ್ಐಟಿ‌ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದ್ದಾರೆ. ಎರಡು‌ ದಿನಗಳಿಂದ ಸಹ ರೇವಣ್ಣ ಒಂದೇ ಮಾತನ್ನು ಹೇಳುತ್ತಿದ್ದಾರೆ ಎನ್ನಲಾಗಿದೆ. ಅಪಹರಣ ಬಗ್ಗೆ ನನಗೇನೂ ಗೊತ್ತಿಲ್ಲ, ನಾನು ಕಿಡ್ನ್ಯಾಪ್ ಮಾಡಿಸಿಲ್ಲ ಎಂಬ ಹೇಳಿಕೆಯನ್ನಷ್ಟೇ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಮಂಗಳವಾರ ಎರಡನೇ ಆರೋಪಿ‌ಯಾದ ಸತೀಶ್ ಬಾಬುವನ್ನು ರೇವಣ್ಣ ಎದುರು ಹಾಜರುಪಡಿಸಿ ಮುಖಾಮುಖಿ ವಿಚಾರಣೆ ನಡೆಸಲು ಎಸ್ಐಟಿ ಅಧಿಕಾರಿಗಳು ತೀರ್ಮಾನ ಮಾಡಿದ್ದರು.

VISTARANEWS.COM


on

Prajwal Revanna Case HD Revanna refuses to face to face with 2nd accused in kidnapping case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ಸಂತ್ರಸ್ತೆಯನ್ನು ಕಿಡ್ನ್ಯಾಪ್‌ ಮಾಡಿರುವ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಮೂರನೇ ದಿನವೂ ಎಸ್ಐಟಿ‌ ವಿಚಾರಣೆಯನ್ನು ಎದುರಿಸಿದ್ದಾರೆ. ಅಪಹರಣ ಪ್ರಕರಣದಲ್ಲಿ ಎರಡನೇ ಆರೋಪಿಯೊಂದಿಗೆ ಮುಖಾಮುಖಿಯಾಗಿ ವಿಚಾರಣೆ ಎದುರಿಸಲು ಇಂದು (ಮಂಗಳವಾರ – ಮೇ 7) ಎಸ್ಐಟಿ ಪ್ಲ್ಯಾನ್ ಮಾಡಿತ್ತು. ಆದರೆ, ಇದಕ್ಕೆ ಎಚ್‌.ಡಿ. ರೇವಣ್ಣ ನಿರಾಕರಣೆ ಮಾಡಿದ್ದಾರೆನ್ನಲಾಗಿದೆ.

ಮುಖಾಮುಖಿ ವಿಚಾರಣೆಗೆ ಎಚ್.ಡಿ. ರೇವಣ್ಣ ಅವರು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಎರಡನೇ ಆರೋಪಿ ಸತೀಶ್‌ ಬಾಬುವನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ.

ಮೂರನೇ ದಿನವೂ ರೇವಣ್ಣಗೆ ಡ್ರಿಲ್

ಕಿಡ್ನ್ಯಾಪ್ ಕೇಸಲ್ಲಿ ಬಂಧಿತರಾಗಿ ಎಸ್ಐಟಿ‌ ಕಸ್ಟಡಿಯಲ್ಲಿರುವ ಮಾಜಿ‌ ಸಚಿವ ಎಚ್.ಡಿ. ರೇವಣ್ಣ ಮೂರನೇ ದಿನವೂ ಎಸ್ಐಟಿ‌ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದ್ದಾರೆ. ಎರಡು‌ ದಿನಗಳಿಂದ ಸಹ ರೇವಣ್ಣ ಒಂದೇ ಮಾತನ್ನು ಹೇಳುತ್ತಿದ್ದಾರೆ ಎನ್ನಲಾಗಿದೆ. ಅಪಹರಣ ಬಗ್ಗೆ ನನಗೇನೂ ಗೊತ್ತಿಲ್ಲ, ನಾನು ಕಿಡ್ನ್ಯಾಪ್ ಮಾಡಿಸಿಲ್ಲ ಎಂಬ ಹೇಳಿಕೆಯನ್ನಷ್ಟೇ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಮಂಗಳವಾರ ಎರಡನೇ ಆರೋಪಿ‌ಯಾದ ಸತೀಶ್ ಬಾಬುವನ್ನು ರೇವಣ್ಣ ಎದುರು ಹಾಜರುಪಡಿಸಿ ಮುಖಾಮುಖಿ ವಿಚಾರಣೆ ನಡೆಸಲು ಎಸ್ಐಟಿ ಅಧಿಕಾರಿಗಳು ತೀರ್ಮಾನ ಮಾಡಿದ್ದರು.

ಆದರೆ, ಎರಡನೇ ಆರೋಪಿಯ ಮುಂದೆ ಮುಖಾಮುಖಿ ವಿಚಾರಣೆಗೆ A1 ಆರೋಪಿಯಾದ ಎಚ್.ಡಿ. ರೇವಣ್ಣ ಅವರು ಒಪ್ಪಲೇ ಇಲ್ಲ ಎನ್ನಲಾಗಿದೆ. ಹೀಗಾಗಿ ಎರಡನೇ ಆರೋಪಿಯನ್ನು ಮಾತ್ರ ವಿಚಾರಣೆ ನಡೆಸಲಾಗಿದೆ. ಈ ವೇಳೆ ಎಸ್ಐಟಿ ಹಲವು ಪ್ರಶ್ನೆಗಳನ್ನು ಸತೀಶ್‌ ಮುಂದಿಟ್ಟಿದೆ. ಸಂತ್ರಸ್ತ ಮಹಿಳೆಯನ್ನು ಯಾರ ಸೂಚನೆ ಮೇರೆಗೆ ಕರೆದುಕೊಂಡು ಹೋಗಿದ್ದಿರಿ? ಕಿಡ್ನ್ಯಾಪ್‌ ಮಾಡುವ ಉದ್ದೇಶದಿಂದಲೇ ಸಂತ್ರಸ್ತೆಯನ್ನು ಕರೆದೊಯ್ದಿದ್ದಾ? ಕಿಡ್ನ್ಯಾಪ್ ಮಾಡಿ ಕಾಳೇನಹಳ್ಳಿಯ ತೋಟದ‌ ಮನೆಯಲ್ಲಿಡಲು ಯಾರು ಸೂಚನೆ ನೀಡಿದ್ದರು? ಹೀಗೆ ಹಲವು ಪ್ರಶ್ನೆಗಳನ್ನು ಸತೀಶ್ ಬಾಬುಗೆ ಎಸ್ಐಟಿ ಅಧಿಕಾರಿಗಳು ಕೇಳಿದ್ದಾರೆ. ಈ ವೇಳೆ ಆರೋಪಿ ನೀಡಿದ ಹೇಳಿಕೆಯನ್ನು ಲಿಖಿತ ರೂಪದಲ್ಲಿ ಹಾಗೂ ವಿಡಿಯೋಗ್ರಫಿ ಮೂಲಕ ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸತೀಶ್‌ ಹೇಳಿಕೆ ಮೇಲೆ ರೇವಣ್ಣ ವಿಚಾರಣೆ

ಈಗ ಸತೀಶ್‌ ಬಾಬು ನೀಡುವ ಹೇಳಿಕೆಯನ್ನು ಆಧರಿಸಿ ಎಚ್‌.ಡಿ. ರೇವಣ್ಣ ಅವರನ್ನು ವಿಚಾರಣೆ ನಡೆಸಲು ಎಸ್‌ಐಟಿ ತೀರ್ಮಾನ ಮಾಡಿದೆ. ಸತೀಶ್‌ ಬಾಬು ನಿಮ್ಮ ವಿರುದ್ಧವಾಗಿ ಇಂಥ ಹೇಳಿಕೆಯನ್ನು ಕೊಟ್ಟಿದ್ದಾನೆ. ಈ ಪ್ರಕರಣದ ಬಗ್ಗೆ ಏನೆಲ್ಲ ಹೇಳಿದ್ದಾನೆ ಎಂಬುದಾಗಿ ಪ್ರಶ್ನೆಗಳನ್ನು ಸಿದ್ಧಪಡಿಸಿ ರೇವಣ್ಣ ಅವರಿಗೆ ಕೇಳುವ ಸಾಧ್ಯತೆ ಇದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

ರೇವಣ್ಣಗೆ ಹರ್ನಿಯಾ?

ಇದರ ಮಧ್ಯೆ ಎದೆ ಉರಿ ಹಾಗೂ ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ಬಳಲುತ್ತಿರುವ ಎಚ್‌.ಡಿ. ರೇವಣ್ಣ ಅವರನ್ನು ಮೊದಲಿಗೆಬೌರಿಂಗ್‌ ಆಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಿ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ರೇವಣ್ಣ ಅವರಲ್ಲಿ ಮೊದಲು ಹರ್ನಿಯಾ ಲಕ್ಷಣ ಕಂಡುಬಂದಿತ್ತು ಎನ್ನಲಾಗಿದ್ದು, ಈ ಬಗ್ಗೆಯೂ ತಪಾಸಣೆಯನ್ನು ನಡೆಸಲಾಗಿದೆ. ಅಲ್ಲಿಯೂ ಸಹ ವೈದ್ಯರು ತಪಾಸಣೆ ನಡೆಸಿ ರೇವಣ್ಣ ಆರೋಗ್ಯವಂತರಾಗಿದ್ದಾರೆ ಎಂದು ಹೇಳಿದ್ದಾರೆ. ರೇವಣ್ಣರನ್ನ ಮೆಡಿಕಲ್‌ಟೆಸ್ಟ್ ಗೆ ಒಳಪಡಿಸಿದ್ದು, ವೈದ್ಯಕೀಯ ತಪಾಸಣೆ ವೇಳೆ ಹಾರ್ನಿಯ ಲಕ್ಷಣ ಪತ್ತೆಯಾಗಿದ್ದು, ರೇವಣ್ಣ ಎದೆ ನೋವು ಇದೆ ಎಂದು ಹೇಳಿದ ಹಿನ್ನೆಲೆ ಬೌರಿಂಗ್ ಆಸ್ಪತ್ರೆ ವೈದ್ಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲು‌ಶಿಫಾರಸ್ಸು ಮಾಡಿದ್ದಾರೆ. ಹೀಗಾಗಿ ಎಸ್ಐಟಿ‌ಅಧಿಕಾರಿಗಳು ರೇವಣ್ಣನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

Continue Reading

ರಾಜಕೀಯ

Prajwal Revanna Case: ಎಚ್.ಡಿ. ರೇವಣ್ಣಗೆ ಎದೆ ಉರಿ, ಗ್ಯಾಸ್ಟ್ರಿಕ್‌ ತೊಂದರೆ; ಆಸ್ಪತ್ರೆಗೆ ಶಿಫ್ಟ್

Prajwal Revanna Case: ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಅಡ್ಮಿಟ್ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ಸೂಚಿಸಿದರೆ ಆ ಬಗ್ಗೆ ಎಸ್‌ಐಟಿ ಅಧಿಕಾರಿಗಳು ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Prajwal Revanna Case HD Revanna suffers heartburn and gastric problems Shift to hospital
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಕೇಸ್‌ ಅಡಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಜತೆಗೆ ಎದೆ ಉರಿಯೂ ಇದೆ ಎನ್ನಲಾಗಿದ್ದು, ಗ್ಯಾಸ್ಟ್ರಿಕ್‌ ಸಮಸ್ಯೆ ಕಾಡುತ್ತಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಎಸ್‌ಐಟಿ ವಶದಲ್ಲಿರುವ ಎಚ್.ಡಿ. ರೇವಣ್ಣ ಅವರು ತಮಗೆ ಅತೀವ ಹೊಟ್ಟೆ ನೋವಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಎದೆ ಉರಿ ಸಹ ಇದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಬೌರಿಂಗ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಅಲ್ಲಿ ಮೊದಲು ಬಿಪಿ, ಶುಗರ್ ಹಾಗೂ ಇಸಿಜಿ ತಪಾಸಣೆಯನ್ನು ನಡೆಸಲಾಗಿದೆ. ಇವು ನಾರ್ಮಲ್‌ ಇದ್ದ ಕಾರಣದಿಂದ ಅಲ್ಲಿಂದ ಹೆಚ್ಚಿನ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ.

ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಅಡ್ಮಿಟ್ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ಸೂಚಿಸಿದರೆ ಆ ಬಗ್ಗೆ ಎಸ್‌ಐಟಿ ಅಧಿಕಾರಿಗಳು ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ! ತೋಟದ ಮನೆಯಲ್ಲಲ್ಲ; ಸಾ.ರಾ. ಮಹೇಶ್‌

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಅಪಹರಣ ಕೇಸ್‌ಗೆ ಟ್ವಿಸ್ಟ್‌ ಸಿಕ್ಕಿದೆ. ಸಂತ್ರಸ್ತ ಮಹಿಳೆ ಸಿಕ್ಕಿದ್ದು ತೋಟದ ಮನೆಯಲ್ಲಿ ಅಲ್ಲ. ಹುಣಸೂರಿನ ಸಂಬಂಧಿಕರ ಮನೆಯಲ್ಲಿ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ. ಈ ಮೂಲಕ ತನಿಖೆಯ ಸತ್ಯಾಂಶದ ಬಗ್ಗೆ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಹಾಗೂ ಎಚ್‌.ಡಿ. ರೇವಣ್ಣ ಕಿಡ್ನ್ಯಾಪ್‌ ಕೇಸ್‌ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಾ.ರಾ. ಮಹೇಶ್‌, ಕೇಸ್ ರಿಜಿಸ್ಟರ್ ಆಗುವುದಕ್ಕೂ ಮುಂಚೆಯೇ ನ್ಯಾಷನಲ್ ಮೀಡಿಯಾದಲ್ಲಿ ಸುದ್ದಿ ಬರುತ್ತದೆ. ಹಾಗಾದರೆ ಇದರ ರೂವಾರಿ ಯಾರು? ರಾಜಗೋಪಾಲ್ ಅವರು ತೋಟದಲ್ಲಿ ಇದ್ದ ಬಗ್ಗೆ ವಿಡಿಯೊ ಯಾಕೆ ಆಚೆ ಬಂದಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ.

ಹುಣಸೂರಿನ ಕರಿಗೌಡ ರಸ್ತೆಯಲ್ಲಿ ಪವಿತ್ರಾ ಹರೀಶ್ ಎಂಬುವವರ ಮನೆಯಿಂದ ಕಿಡ್ನ್ಯಾಪ್ ಆಗಿದ್ದಾಳೆ ಎನ್ನಲಾದ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಹರೀಶ್ ಸಂತ್ರಸ್ತ ಮಹಿಳೆಯ ಸಂಬಂಧಿಯಾಗಿದ್ದಾರೆ. ಯಾರು ಕರೆದುಕೊಂಡು ಹೋದರು? ಯಾವ ಅಧಿಕಾರಿಯ ಲೊಕೇಷನ್ ಇತ್ತು? ಎಲ್ಲದಕ್ಕೂ ದಾಖಲೆಗಳನ್ನು ತೆಗೆಯಿರಿ. ಎಸ್‌ಐಟಿಗೆ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ಎಸ್‌ಐಟಿಯಲ್ಲಿರುವ ಕೆಲ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ.

ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಚ್‌ಡಿಕೆ ಪ್ರಶ್ನೆ

ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಸೂತ್ರಧಾರಿ ಕಾರ್ತಿಕ್‌ ಗೌಡ ಕಥೆ ಏನು? ಆತ ಎಲ್ಲಿದ್ದಾನೆ? ಆತನ ಹಿಂದೆ ಯಾರಿದ್ದಾರೆ? ನಿಮ್ಮ ಈ ತನಿಖೆಯ ವಿಸ್ತಾರ ಎಷ್ಟು? ಕೇವಲ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ಅಷ್ಟೇ ನಿಮ್ಮ ತನಿಖೆಯೇ? ಇಲ್ಲವೇ ಆಯೋಗ ಹೇಳಿದಂತೆ ಎಲ್ಲ ರಾಜಕಾರಣಿಗಳ ವಿರುದ್ಧ ತನಿಖೆ ಮಾಡುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಈ ವೇಳೆ ಪ್ರಜ್ವಲ್‌ ಪೆನ್‌ಡ್ರೈವ್‌ ವಿಷಯವಾಗಿ ಹಾಸನದ ನವೀನ್ ಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ಲೇ ಮಾಡಿದರು. ಅಲ್ಲದೆ, ನವೀನ್ ಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಇರುವ ಹಾಗೂ ಸಚಿವ ಜಮೀರ್ ಅಹಮದ್ ಜತೆ ಇರುವ ಫೋಟೊವನ್ನು ಬಿಡುಗಡೆ ಮಾಡಿದರು. ನವೀನ್‌ ಗೌಡನ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ದಿಢೀರ್‌ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಆಗ್ರಹಿಸಿದರು.

ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ

ನಾನು ಪ್ರಜ್ವಲ್ ರೇವಣ್ಣ ಅವರನ್ನು ವಹಿಸಿಕೊಂಡು ಮಾತನಾಡುವುದಿಲ್ಲ. ಎಫ್ಐಆರ್ ದಾಖಲು ಮಾಡಿದಾಗ ಜಾಮೀನು ಸಹಿತ ಪ್ರಕರಣವನ್ನು ದಾಖಲು ಮಾಡಿದೆವು. ಎರಡನೇ ದಿನ ಮತ್ತೆ ಇನ್ನೊಂದು ಪ್ರಕರಣವನ್ನು ದಾಖಲು ಮಾಡಿದೆವು. ಗನ್ ಪಾಯಿಂಟ್‌ ಅಡಿ ಬೆದರಿಕೆಯೊಡ್ಡಿ ಅತ್ಯಾಚಾರ ಆಗಿದೆ ಅಂತ ದೂರು ಕೊಟ್ಟರು. ಮಾಧ್ಯಮಗಳ ಮುಂದೆ ಕಥೆ ಕಟ್ಟಿದವರು ಯಾರು? ಸುಪ್ರೀಂ ಕೋರ್ಟ್ ಏನು ಹೇಳಿದೆ? ಇಂಥ ಪ್ರಕರಣದಲ್ಲಿ ಗೌಪ್ಯತೆಯನ್ನು ಉಳಿಸಿಕೊಂಡಿರಾ? ಕೆಲವರ ತೇಜೋವಧೆಗೆ ಈ ಪ್ರಕರಣವನ್ನು ಬಳಸಿಕೊಂಡಿರಿ. ಇದು ಆಘಾತಕಾರಿ ಪ್ರಕರಣವಾಗಿದೆ. 2022ರಲ್ಲಿ ಈ ಘಟನೆ ಆಗಿದೆ ಎಂದು ಹೇಳಿದ್ದೀರಿ. ಮತ್ಯಾಕೆ ಸುಮ್ಮನಿದ್ದಿರಿ? ಎಂದು ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಆಕೆಯ ಹಿಂದೆ ಯಾರಿದ್ದಾರೆ?

22ನೇ ತಾರೀಖು ಪ್ರಜ್ವಲ್ ಪಕ್ಕಾ ಕೂತಿದ್ದ ಹೆಣ್ಣು ಮಗಳು ಯಾರು? ಮೊದಲ ವಿಡಿಯೊದಲ್ಲಿ ಬಂದ ಹೆಣ್ಣು ಮಗಳು 22ನೇ ತಾರೀಖು ಪ್ರಜ್ವಲ್ ಜತೆ ವೇದಿಕೆ ಹಂಚಿಕೆ ಮಾಡಿಕೊಂಡಿದ್ದಾರೆ. ಆಕೆಯ ಹಿಂದೆ ಯಾರಿದ್ದಾರೆ? ಸಿಎಂ ಸಿದ್ದರಾಮಯ್ಯ ಅವರೇ, ಡಿ.ಕೆ. ಶಿವಕುಮಾರ್ ಅವರೇ ಏನಿದು? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಮಹಿಳೆಯ ಕಿಡ್ನ್ಯಾಪ್‌ ಕೇಸ್‌ ಕತೆ ಏನು?

ರೇವಣ್ಣ ವಿರುದ್ಧ ಇಂದಿಗೂ ಸಹ ಯಾರೂ ದೂರು ಕೊಟ್ಟಿಲ್ಲ. ಬಳಿಕ ಕಿಡ್ನ್ಯಾಪ್ ಕೇಸ್ ದಾಖಲು ಮಾಡಿಕೊಂಡಿರಿ. ಆ ಹೆಣ್ಣು ಮಗಳು ಬದುಕಿದ್ದಾಳೋ, ಮೃತಪಟ್ಟಿದ್ದಾಳೋ ಗೊತ್ತಿಲ್ಲ ಎಂದು ನಿಮ್ಮ ವಕೀಲರು ನ್ಯಾಯಾಧೀಶರ ಮುಂದೆ ಹೇಳುತ್ತಾರೆ. ಆ ಮೇಲೆ ಆಕೆಯನ್ನು ಕರೆದುಕೊಂಡು ಬಂದಿರಿ. ಎಲ್ಲಿಂದ ಕರೆದುಕೊಂಡು ಬಂದಿರಿ? ಏನು ಮಹಜರು ಮಾಡಿದಿರಿ? ಈ ದಿನದವರೆಗೂ ಜಡ್ಜ್ ಮುಂದೆ ಆ ಹೆಣ್ಣು ಮಗಳನ್ನು ಏಕೆ ಹಾಜರುಪಡಿಸಲಿಲ್ಲ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಎಚ್.ಡಿ. ರೇವಣ್ಣ ಅವರು ತನಿಖೆಗೆ ಸಹಕಾರ ಕೊಡುತ್ತಿಲ್ಲ ಎಂದು ಹೇಳಿದ್ದೀರಿ. ನೀವು ಹೇಳಿದಂತೆ ಮಾಜಿ‌ ಮಂತ್ರಿ ಹೇಳಿಕೆ ಕೊಡಬೇಕಾ? ಇದು ಯಾವ ಇನ್ವೆಸ್ಟಿಗೇಷನ್ ಎಂದು ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

Continue Reading
Advertisement
Prajwal Revanna Case HD Revanna has severe chest pain Admission in Victoria
ರಾಜಕೀಯ2 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ವಿಕ್ಟೋರಿಯಾದಲ್ಲಿ ಅಡ್ಮಿಟ್‌

Air Purifier
ಆಟೋಮೊಬೈಲ್14 mins ago

Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

Prajwal Revanna Case HD Revanna bail plea to be heard tomorrow Jail or Bela
ಕ್ರೈಂ16 mins ago

Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Ujjivan Small Finance Bank
ವಾಣಿಜ್ಯ26 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

Lok Sabha Election 2024
ಕರ್ನಾಟಕ26 mins ago

Lok Sabha Election 2024: ಜಿ.ಎಂ.ಸಿದ್ದೇಶ್ವರ್‌ ಮಹಾ ಎಡವಟ್ಟು, ಪತ್ನಿ ಮತವನ್ನೂ ತಾವೇ ಹಾಕಿದ ಸಂಸದ

Nirav modi
ದೇಶ45 mins ago

Nirav Modi: ನೀರವ್‌ ಮೋದಿಗೆ ಲಂಡನ್‌ ಜೈಲೇ ಗತಿ; 5ನೇ ಬಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Yallapura MLA Shivaram Hebbar voting in Arabail village
ರಾಜಕೀಯ56 mins ago

Lok Sabha Election 2024: ಅಭಿವೃದ್ಧಿ ಕಾರ್ಯಕ್ಕಾಗಿ ನೀತಿ ಸಂಹಿತೆ ಸಡಿಲಿಸಲು ಶಿವರಾಮ ಹೆಬ್ಬಾರ್ ಮನವಿ

Haryana Government
ಪ್ರಮುಖ ಸುದ್ದಿ1 hour ago

Haryana Government : ಹರಿಯಾಣದ ಬಿಜೆಪಿ ಸರ್ಕಾರ ಪತನ ಸಾಧ್ಯತೆ; 3 ಪಕ್ಷೇತರರು ಕಾಂಗ್ರೆಸ್ ಕಡೆಗೆ

Prajwal Revanna Case HD Revanna refuses to face to face with 2nd accused in kidnapping case
ಕ್ರೈಂ1 hour ago

Prajwal Revanna Case: ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ ಜತೆ ಮುಖಾಮುಖಿ ವಿಚಾರಣೆಗೆ ಒಪ್ಪದ ರೇವಣ್ಣ!

Shrikhshetra Siddrabetta Balehonnur Khasa Shakha Math 18th year Anniversary on June 9 says sri veerabhadra shivacharya swamiji
ತುಮಕೂರು1 hour ago

Tumkur News: ಜೂ. 9ಕ್ಕೆ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ವಾರ್ಷಿಕೋತ್ಸವ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna has severe chest pain Admission in Victoria
ರಾಜಕೀಯ2 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ವಿಕ್ಟೋರಿಯಾದಲ್ಲಿ ಅಡ್ಮಿಟ್‌

Karnataka Weather Forecast
ಮಳೆ3 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ5 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌