Cauvery Protest: ಬೆಂಗಳೂರು ಬಂದ್‌ ಮಾಡುವುದು ಬೇಡ ಎಂದ ಡಿಕೆಶಿ, ಪ್ರತಿಭಟನೆ ಹಕ್ಕಿಗೆ ವಿರೋಧವಿಲ್ಲ ಎಂದ ಸಿದ್ದರಾಮಯ್ಯ Vistara News

ಕರ್ನಾಟಕ

Cauvery Protest: ಬೆಂಗಳೂರು ಬಂದ್‌ ಮಾಡುವುದು ಬೇಡ ಎಂದ ಡಿಕೆಶಿ, ಪ್ರತಿಭಟನೆ ಹಕ್ಕಿಗೆ ವಿರೋಧವಿಲ್ಲ ಎಂದ ಸಿದ್ದರಾಮಯ್ಯ

Cauvery protest: ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

VISTARANEWS.COM


on

Cauvry protest in Bangalore
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಖಾಲಿ ಕೊಡಗಳಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಚಿತ್ರ ಹಾಕಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವುದನ್ನು ಪ್ರತಿಭಟಿಸಿ (Cauvery protest) ರಾಜ್ಯ ಸರ್ಕಾರದ ವಿರುದ್ಧ ನಡೆದ ಮಂಡ್ಯ ಬಂದ್‌ (Mandya bandh), ಸೆ. 26ಕ್ಕೆ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore Bandh) ಸಂಬಂಧಿಸಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ತಣ್ಣಗಿನ ಪ್ರತಿಕ್ರಿಯೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಅವರು ಪ್ರತಿಭಟನೆ ಬಂದ್‌ ಮೂಲಕ ಬೆಂಗಳೂರಿನ ಗೌರವಕ್ಕೆ ಮಸಿ ಬಳಿಯಬೇಡಿ, ಬಂದ್‌ ಬೇಡ ಎಂದು ಹೇಳಿದರೆ ಸಿದ್ದರಾಮಯ್ಯ ಅವರಂತೂ ಪ್ರತಿಭಟನೆಯ ಹಕ್ಕು ಎಲ್ಲರಿಗೂ ಇದೆ, ಅದನ್ನು ನಾವು ತಡೆಯುವುದಿಲ್ಲ ಎಂದಿದ್ದಾರೆ.

ರಾಜ್ಯದ ಹಿತ ಕಾಪಾಡಲು ನಾವೇ ಇದ್ದೇವೆ, ಬಂದ್‌ ಯಾಕೆ?

ʻʻಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಹೋರಾಟ ಮಾಡಬಹುದು. ಅವರವರ ಹೋರಾಟ ಅವರು ಮಾಡ್ತಾರೆ. ಆದರೆ, ಈ ಹೋರಾಟ ಯಾಕಾಗಿ, ಯಾರ ವಿರುದ್ಧ? ಸರ್ಕಾರವೇ ರೈತರ ಪರವಾಗಿ ನಿಂತಿದೆ. ನಾವೇ ಹೋರಾಡುತ್ತಿದ್ದೇವೆʼʼ ಎಂದು ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ʻʻಬೆಂಗಳೂರು ಬಂದ್ ಮಾಡೋದು ಬೇಡ. ಯಾವ ಲಾಭಕ್ಕಾಗಿ ಬಂದ್ ಮಾಡ್ತಾರೆ? ಸರ್ಕಾರವೇ ಹೋರಾಟಕ್ಕೆ ನಿಂತಿದೆ. ಬಂದ್ ಮಾಡೋದ್ರಿಂದ ಯಾವುದೇ ಅನುಕೂಲ ಇಲ್ಲ. ಬೆಂಗಳೂರು ಮರ್ಯಾದೆಯನ್ನ ಹಾಳುಗೆಡವಬೇಡಿ. ಬೆಂಗಳೂರಿನ ಮರ್ಯಾದೆ ಹಾಳು ಮಾಡಿದರೆ ನೀವೇ ಹೃದಯಕ್ಕೆ ಚುಚ್ಚಿಕೊಂಡ ಹಾಗೆ. ಬೆಂಗಳೂರಿನಲ್ಲಿ ಎಲ್ಲಾ ಭಾಷೆ, ಬೇರೆ ಬೇರೆ ರಾಜ್ಯದ ಜನ ವಾಸವಾಗಿದ್ದಾರೆʼʼ ಎಂದು ಹೇಳಿದರು.

ಕಾವೇರಿ ಕುರಿತು ಪ್ರತಿಪಕ್ಷಗಳು ರಾಜಕಾರಣ ನಡೆಸುತ್ತಿವೆ ಎಂದು ಆರೋಪಿಸಿದ ಡಿ.ಕೆ. ಶಿವಕುಮಾರ್‌, ʻʻಒಳಗಡೆ ಬಂದಾಗ ರಾಜ್ಯದ ಹಿತ, ಹೊರಗಡೆ ಹೋದಾಗ ರಾಜಕಾರಣ ನಡೆಯುತ್ತದೆ. ಹೊಸ ಹುರುಪು ಪ್ರತಿಭಟನೆ ಮಾಡ್ತಾ ಇದ್ದಾರೆ ಮಾಡಲಿʼʼ ಎಂದು ಎಚ್‌.ಡಿ ಕುಮಾರಸ್ವಾಮಿ ಅವರ ಹೆಸರು ಹೇಳದೆಯೇ ಹೇಳಿದರು.

ʻʻನೀರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ. ಅಂಕಿ ಅಂಶ ಹೇಳಿದರೆ ರಾಜ್ಯದ ಹಿತಕ್ಕೆ ಧಕ್ಕೆ ಆಗುತ್ತದೆ. ದೇವೇಗೌಡರು ಹಿರಿಯ ಮುಖಂಡರು. ಅವರು ಹಿಂದೆ ಕೊಟ್ಟ ಒಂದು ಇಂಟರ್ ವ್ಯೂ ತೆಗೆದು ನೋಡಲಿ ಗೊತ್ತಾಗುತ್ತದೆʼʼ ಎಂದು ಹೇಳಿದ ಶಿವಕುಮಾರ್‌, ʻʻಕುಮಾರಸ್ವಾಮಿ ಅವರೇನೋ ಮಾತಾಡಿದ್ದಾರೆ ಅಮಿತ್ ಷಾ ಜೊತೆ ಅಂದ್ರಲ್ವಾ? ಸೂಕ್ಷ್ಮ ವಾಗಿ ಮಾತಾಡಿದ್ದೇವೆ ಅಂತ ಹೇಳಿದ್ದಾರಲ್ವಾ? ಅದೇನೇನು ನುಡಿಮುತ್ತು ಆಡಿದಾರೆ ಏನು ಅಂತ ಹೇಳಲಿ. ನಾವು ಮೂರ್ಖರೇʼʼ ಎಂದು ಪ್ರಶ್ನಿಸಿದರು.

ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಲಿ ಅಂತ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿಟಿ ರವಿಯವರಿಗೆ ಸದ್ಯಕ್ಕೆ ಎಲ್ಲೂ ಜಾಗವಿಲ್ಲ ಹಾಗಾಗಿ ಮಂಡ್ಯಕ್ಕೆ ಹೋಗಿದ್ದಾರೆ ಎಂದು ಹೇಳಿದರು. ದೇವೇಗೌಡರೇ ಪ್ರಧಾನಿ ಮಧ್ಯಪ್ರವೇಶ ಮಾಡಲಿ ಎಂದು ಹೇಳಿದ್ದಾರೆ ಎಂದು ನೆನಪಿಸಿದರು.

ಇದನ್ನೂ ಓದಿ: Cauvery protest : ಸೆ. 26ರ ಬೆಂಗಳೂರು ಬಂದ್‌ಗೆ ಭಾರಿ ಬೆಂಬಲ; ಏನಿರುತ್ತೆ? ಏನಿರಲ್ಲ?; ಕರ್ನಾಟಕ ಬಂದ್‌ಗೂ ಪ್ಲ್ಯಾನಿಂಗ್

ಚಳುವಳಿಯನ್ನು ನಿಲ್ಲಿಸುವುದಿಲ್ಲ ಎಂದ ಸಿದ್ದರಾಮಯ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯತ್ತಿರುವುದನ್ನು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಚಳುವಳಿ ಮಾಡಲು ಅವಕಾಶ ಇದೆ. ನಾವು ಅದನ್ನ ನಿಲ್ಲಿಸುವುದಿಲ್ಲ ಎಂದರು. ಮಂಗಳವಾರ ಬೆಂಗಳೂರು ಬಂದ್ ಬಗ್ಗೆ ಸಿಎಂ ಈ ಪ್ರತಿಕ್ರಿಯೆ ನೀಡಿದರು.

ಉಚ್ಚ ನ್ಯಾಯಾಲಯದ ಆದೇಶ ಬರುವ ಮುನ್ನವೇ ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದಾರೆ ಎಂದು ಬಿಜೆಪಿ, ಜೆಡಿಎಸ್ ಪಕ್ಷ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಾಲಯದಲ್ಲಿ ಸುಳ್ಳು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Belagavi Winter Session: ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಇನ್ಮುಂದೆ ವರ್ಷಪೂರ್ತಿ ಲೈಟಿಂಗ್ಸ್

Belagavi Winter Session: ಸದ್ಯ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಮಾತ್ರ ಸುವರ್ಣ ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತಿದೆ. ಆದರೆ, ಅದೇ ವೆಚ್ಚದಲ್ಲಿ ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಗಳಿಂದ ಅಲಂಕರಿಸಲು ನಿರ್ಧಾರ ಮಾಡಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

VISTARANEWS.COM


on

Lighting for Suvarna Vidhana Soudha
Koo

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಇನ್ಮುಂದೆ ವರ್ಷಪೂರ್ತಿ ಲೈಟಿಂಗ್ಸ್ (Lighting for Suvarna Vidhana Soudha) ಅಳವಡಿಸಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ವಿಶೇಷ ಪ್ರಕಟಣೆಯನ್ನು ಹೊರಡಿಸಿದರು.

ಸದ್ಯ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಮಾತ್ರ ಸುವರ್ಣ ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತಿದೆ. ಆದರೆ, ಅದೇ ವೆಚ್ಚದಲ್ಲಿ ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಗಳಿಂದ ಅಲಂಕರಿಸಲು ನಿರ್ಧಾರ ಮಾಡಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ವರ್ಷವಿಡಿ ಲೈಟಿಂಗ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗಿದೆ. ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಗೊಳಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಘೋಷಿಸಿದರು.

ಇದನ್ನೂ ಓದಿ: Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ 18 ಬಿಲ್‌ಗಳು ಮಂಡನೆಯಾಗುವ ಸಾಧ್ಯತೆ (18 bills likely to be introduced) ಇದೆ. ಈಗಾಗಲೇ ಕೆಲವು ವಿಧೇಯಕ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆಯನ್ನು ಪಡೆದುಕೊಳ್ಳಲಾಗಿದೆ.

ಕಳೆದ ಕೆಲವು ಸಚಿವ ಸಂಪುಟದಲ್ಲಿ ಹಲವು ವಿಧೇಯಕ ಸಂಬಂಧ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಲ್ಲಿ ಅನುಮೋದನೆಯನ್ನು ಪಡೆದುಕೊಳ್ಳಲಾಗಿದ್ದು, ಈಗ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪೂರೈಸಿ ಗ್ರಾಮೀಣ ಭಾಗಕ್ಕೆ ಸೇವೆಗೆ ಹಲವು ಯುವ ವೈದ್ಯರು ತೆರಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆಯು ಗಣನೀಯ ಪ್ರಮಾಣದಲ್ಲಿದೆ. ಹೀಗಾಗಿ ಈ ಬಾರಿ ಪ್ರಮುಖವಾಗಿ ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಇದೂ ಅಲ್ಲದೆ, ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರಾತಿ ಮಸೂದೆ, ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ, ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ ಸೇರಿದಂತೆ ಹಲವು ಬಿಲ್‌ಗಳನ್ನು ಮಂಡಿಸಿ ಪಾಸ್‌ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

ಈ 18 ಬಿಲ್‌ ಮಂಡನೆ ಸಾಧ್ಯತೆ

1) ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021
2) ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 2023
3) ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕ
4) ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ
5) ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ
6) ಗದಗ – ಬೆಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ವಿಧೇಯಕ
7) ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರಾತಿ ಮಸೂದೆ
8) ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
9) ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚನೆ ವಿಧೇಯಕ
10) ಕರ್ನಾಟಕ ಅಭಿವೃದ್ಧಿ ಮಂಡಳಿ ಮೈಸೂರು ನಗರ ಅಭಿವೃದ್ಧಿ ವಿಧೇಯಕ
11) ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಾಧಿಕಾರ
12) ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ
13) ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ
14) ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ
15) ಕರ್ನಾಟಕ ಸಿವಿಲ್ ಕೋರ್ಟ್ ತಿದ್ದುಪಡಿ ವಿಧೇಯಕ
16) ಕರ್ನಾಟಕ ಹೈಕೋರ್ಟ್ ತಿದ್ದುಪಡಿ ವಿಧೇಯಕ
17) ಕರ್ನಾಟಕ ವೃತ್ತಿ ಪರ ಸಿವಿಲ್ ಎಂಜಿನಿಯರ್‌ಗಳ ಪರಿಷತ್ ಮಸೂದೆ
18) ಕರ್ನಾಟಕ ಆಡಳಿತಾತ್ಮಕ ಕಾರ್ಯ ವಿಧಾನ ಮಸೂದೆ

Continue Reading

ಕರ್ನಾಟಕ

Murder Case: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಭಾವ ಮಹದೇವಯ್ಯ ಕೊಲೆ!

Murder Case: ಮಹದೇವಯ್ಯ ಪುತ್ರ ಪ್ರಶಾಂತ್ ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ನಾಲ್ಕು ತಂಡಗಳಿಂದ ಸಮಗ್ರವಾಗಿ ತನಿಖೆ ನಡೆಯುತ್ತಲಿದೆ. ಈ ವೇಳೆ ನ.2ರಂದೇ ಮಹದೇವಯ್ಯ ಕೊಲೆಯಾಗಿರುವುದು ಪೊಲೀಸರಿಗೆ ಗೊತ್ತಾಗಿದೆ.

VISTARANEWS.COM


on

CP Yogeshwar brother in law Mahadevaiah
Koo

ಚಾಮರಾಜನಗರ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ (CP Yogeshwar) ಭಾವ ಮಹದೇವಯ್ಯ (Mahadevaiah) ನಾಪತ್ತೆ ಪ್ರಕರಣ ಕೊನೆಗೂ ದುಃಖದಲ್ಲಿ ಅಂತ್ಯವಾಗಿದೆ. ಅವರನ್ನು ಕೊಲೆ ಮಾಡಿರುವ ಸಂಗತಿ ಬಯಲಾಗಿದೆ. ಮಹದೇವಯ್ಯ ಪತ್ತೆಗೆ ಚನ್ನಪಟ್ಟಣ (Channapatna News) ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿತ್ತು. ಆದರೆ, ಈಗ ಅವರು ಕೊಲೆಯಾಗಿರುವುದು (Murder Case) ತನಿಖೆಯಿಂದ ಗೊತ್ತಾಗಿದೆ.

ಮಹದೇವಯ್ಯ ಪುತ್ರ ಪ್ರಶಾಂತ್ ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ನಾಲ್ಕು ತಂಡಗಳಿಂದ ಸಮಗ್ರವಾಗಿ ತನಿಖೆ ನಡೆಯುತ್ತಲಿದೆ. ಈ ವೇಳೆ ನ.2ರಂದೇ ಮಹದೇವಯ್ಯ ಕೊಲೆಯಾಗಿರುವುದು ಪೊಲೀಸರಿಗೆ ಗೊತ್ತಾಗಿದೆ.

ರಸ್ತೆ ಬದಿ ಮೃತದೇಹ ಪತ್ತೆ

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವ ಮಹದೇವಯ್ಯ (58) ಅವರ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಮಾಡಿ ರಸ್ತೆ ಬದಿ ಮೃತದೇಹ ಎಸೆದು ಹೋಗಿದ್ದಾರೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಮಹದೇವಯ್ಯ ಅವರು ಜಿಲ್ಲೆಯ ರಾಮಪುರ ಅರಣ್ಯದ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಇದನ್ನೂ ಓದಿ: Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

ಅಪಹರಣಕಾರರ ಚಲನವಲನ ಪತ್ತೆ

ಈ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ತನಿಖೆ ವೇಳೆ ಕೆಲವು ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲನೆ ನಡೆಸಿದಾಗ ಕೊಲೆ ಬಗ್ಗೆ ಸಿಸಿ ಕ್ಯಾಮರಾ ದೃಶ್ಯಗಳು ಪ್ರಬಲ ಸಾಕ್ಷ್ಯಗಳನ್ನು ಒದಗಿಸಿವೆ. ರಾಮಪುರದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಅಪಹರಣಕಾರರ ಚಲನವಲನ ಗೊತ್ತಾಗಿದೆ. ಕಾರು ನಿಲ್ಲಿಸಿ ನಡೆದುಕೊಂಡು ಹೋಗಿರುವ ಮೂವರು ಈ ಅಪಹರಣ ಮಾಡಿದ್ದಾರೆಂದು ಗೊತ್ತಾಗಿದೆ.

15 ನಿಮಿಷ ಕಾಡಿನ ದಾರಿಯಲ್ಲಿ ಸುತ್ತಾಟ

ನ. 2ರಂದು ಬೆಳಗ್ಗೆ 4.05ಕ್ಕೆ ರಾಮಪುರಕ್ಕೆ ದುಷ್ಕರ್ಮಿಗಳು ಆಗಮಿಸಿದ್ದಾರೆ. 4.20ಕ್ಕೆ ರಾಮಪುರದಿಂದ ಹೊರ ನಡೆದಿದ್ದಾರೆ. ಸುಮಾರು 15 ನಿಮಿಷ ಕಾಡಿನ ದಾರಿಯಲ್ಲಿ ಕಿಡ್ನಾಪರ್‌ಗಳು ಓಡಾಡಿದ್ದಾರೆ.

ಹನೂರು- ನಾಲ್ ರೋಡ್- ಈರೋಡ್ ರಸ್ತೆ ಮಾರ್ಗವಾಗಿ ಸಂಚರಿಸಿದ್ದಾರೆ. ವಾಪಸ್ ಹೋಗುವಾಗ ರಾಮಪುರದಲ್ಲಿ ಕಾರು ನಿಲ್ಲಿಸಿ ಎಸ್ಕೇಪ್ ಆಗಿದ್ದಾರೆ ಎಂದು ಗೊತ್ತಾಗಿದೆ. ಬೇರೆಡೆ ಹೊಡೆದು ಮಾಡಿ ಮಲೆ ಮಹದೇಶ್ವರ ಬೆಟ್ಟಕ್ಕೆ ತಂದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಚಲನವಲನದ ಆಧಾರದ ಮೇಲೆ ಪೊಲೀಸರು, ಅರಣ್ಯ ಇಲಾಖೆಯಿಂದ ಕೂಂಬಿಂಗ್ ಶುರುವಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ರಿಯಲ್‌ ಎಸ್ಟೇಟ್ ಉದ್ಯಮಿಯಾಗಿದ್ದ ಮಹದೇವಯ್ಯ

ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಸಹೋದರಿ ಪುಷ್ಪಾ ಅವರ ಪತಿ ಮಹದೇವಯ್ಯ ರಿಯಲ್‌ ಎಸ್ಟೇಟ್ ಉದ್ಯಮಿಯಾಗಿದ್ದು, ಶುಕ್ರವಾರ ರಾತ್ರಿ ತೋಟದ ಮನೆಯಲ್ಲಿ (Channapatna News) ಇದ್ದವರು ನಾಪತ್ತೆಯಾಗಿದ್ದರು. ಅವರು ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದಲ್ಲಿ ವಾಸವಾಗಿದ್ದರು. ಮಹದೇಶ್ವರ ಬೆಟ್ಟದಲ್ಲಿ ಟವರ್ ಲೊಕೇಶನ್ ಟ್ರೇಸ್ ಆಗಿತ್ತು, ಮನೆಯಲ್ಲಿ ಬೀರು ಓಪನ್ ಆಗಿ, ಬೆಡ್ ರೂಮ್‌ನಲ್ಲಿ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿರುವುದು ಕಂಡುಬಂದಿತ್ತು.

ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬೆಳಗ್ಗೆಯಿಂದ ಮಹದೇವಯ್ಯ ಫೋನ್ ಸ್ವಿಚ್ ಆಫ್ ಆಗಿದ್ದು, ಕಾರು ಕೂಡಾ ನಾಪತ್ತೆಯಾಗಿದೆ. ಹೀಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.

ಇದನ್ನೂ ಓದಿ: Belagavi Winter Session: ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ

ಕಂದಾಯ ಇಲಾಖೆ ಸಂಬಂಧಿಸಿದ ಡಾಕ್ಯುಮೆಂಟ್‌ಗಳನ್ನು ಅವರು ಮಾಡುತ್ತಿದ್ದರು. ಎಲ್ಲ ಫೈಲ್‌ಗಳನ್ನು ಇಲ್ಲಿಯೇ ಇದ್ದು ರೆಡಿ ಮಾಡುತ್ತಿದ್ದರು. ಹಣಕಾಸು, ಚಿನ್ನಾಭರಣ ಯಾವುದೂ ಕಳುವಾಗಿಲ್ಲ. ಇಲ್ಲಿನ ವಾತಾವರಣ ನೋಡಿದರೆ ಬಲವಂತವಾಗಿ ಕರೆದುಕೊಂಡು ಹೋದ ಹಾಗೆ ಇದೆ ಎಂದು ಮಾಜಿ ಸಚಿವ ಯೋಗೇಶ್ವರ್ ಸಹೋದರ ರಾಜೇಶ್ ಶಂಕಿಸಿದ್ದರು.

Continue Reading

ಕರ್ನಾಟಕ

Belagavi Winter Session: ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ

Belagavi Winter Session: ಸಾವಿರಕ್ಕೂ ಹೆಚ್ಚು ಭ್ರೂಣಗಳನ್ನು ಹತ್ಯೆ ಮಾಡಿರುವ ಘೋರ ಕೃತ್ಯದ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂಬ ಆಗ್ರಹಗಳು ಸದನದಲ್ಲಿ ಕೇಳಿಬಂದಿವೆ. ಅಲ್ಲದೆ, ಈ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ, ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಿ ಎಂಬ ಸಲಹೆಗಳೂ ಕೇಳಿಬಂದಿವೆ.

VISTARANEWS.COM


on

Foeticide case and pair of pink bunny figurines
Koo

ಬೆಳಗಾವಿ: ರಾಜ್ಯದಲ್ಲಿ ಈಗಲೂ ಭ್ರೂಣ ಲಿಂಗ ಪತ್ತೆ (Gender Detection) ಮತ್ತು ಭ್ರೂಣ ಹತ್ಯೆಯ (Foeticide Case) ಬೃಹತ್ ಜಾಲ ಇರುವುದರ ಬಗ್ಗೆ ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಕಳವಳವನ್ನು ವ್ಯಕ್ತಪಡಿಸಲಾಗಿದೆ. ಈಗಾಗಲೇ ಸಾವಿರಕ್ಕೂ ಹೆಚ್ಚು ಭ್ರೂಣಗಳನ್ನು ಹತ್ಯೆ ಮಾಡಿರುವ ಘೋರ ಕೃತ್ಯದ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂಬ ಆಗ್ರಹಗಳು ಕೇಳಿಬಂದಿವೆ. ಅಲ್ಲದೆ, ಈ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ, ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಿ ಎಂಬ ಸಲಹೆಗಳೂ ಕೇಳಿಬಂದಿವೆ.

ಈ ಬಗ್ಗೆ ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ರಾಜ್ಯದ ಹಲವು ಕಡೆ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳಿಗೆ ಸಂಬಂಧಪಟ್ಟ ಪ್ರಕರಣದ ಬಗ್ಗೆ ಯು.ಬಿ. ವೆಂಕಟೇಶ್ ಪ್ರಸ್ತಾಪಿಸಿದ್ದು, ಈ ಬಗ್ಗೆ ಗಂಭೀರ ಕಾಯಿದೆಗಳಿವೆ. ಆದರೂ 900ಕ್ಕೂ ಹೆಚ್ಚು ಹೆಣ್ಣು ಭ್ರೂಣವನ್ನು ಹತ್ಯೆಗೈಯಲಾಗಿದೆ. ಇದರ ಬಗ್ಗೆ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಇದರ ಬಗ್ಗೆ ರಾಜ್ಯದಲ್ಲಿ ದೊಡ್ಡ ಸಂಚಲನ ಆಗಿದೆ. ಇದರ ಜಾಲ ವಿಶಾಲವಾಗಿ ವ್ಯಾಪಿಸಿದೆ. ಅಲ್ಲದೆ, ಆರೋಗ್ಯ ಇಲಾಖೆಯಿಂದ ಸೂಕ್ತ ಮಾಹಿತಿಯನ್ನು ತರಿಸಿಕೊಂಡಿದ್ದೇವೆ. ಗೃಹ ಇಲಾಖೆ ಜತೆ ಸಭೆ ಮಾಡಿದ್ದೇವೆ. ಇದನ್ನು ತಡೆಗಟ್ಟಲು ದಿಟ್ಟ ಹೆಜ್ಜೆ ಇಡುತ್ತೇವೆ. ಯಾರೇ ಈ ಕೃತ್ಯದಲ್ಲಿ ತೊಡಗಿದ್ದರೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಉತ್ತರಿಸಿದರು.

ಈಗಾಗಲೇ 10 ಜನ ಅರೆಸ್ಟ್‌

ಭ್ರೂಣ ಹತ್ಯೆ ಪ್ರಕರಣದಲ್ಲಿ ದಿನಕ್ಕೊಂದು ಮಹತ್ತರ ಬೆಳವಣಿಗೆ ನಡೆಯುತ್ತಿದ್ದು, ಪ್ರಮುಖ ಆರೋಪಿಯಲ್ಲೊಬ್ಬನಾಗಿರುವ ಡಾ. ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದ ನರ್ಸ್‌ವೊಬ್ಬಳನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದರು. ಆ ಮೂಲಕ ಈವರೆಗೆ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿಕೆ ಆಗಿದೆ. ಮಂಜುಳಾ ಎಂಬ ನರ್ಸ್‌ಳನ್ನು ಕೊನೆಗೂ ಬಂಧಿಸಲಾಗಿತ್ತು. ಈಕೆಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ. ಆರೋಪಿ ಮಂಜುಳಾ ಮೂಲತಃ ಚಾಮರಾಜನಗರದವಳು ಎಂದು ತಿಳಿದು ಬಂದಿದೆ. ಕಳೆದ ಒಂದು ವರ್ಷದಿಂದ ಡಾ. ಬಲ್ಲಾಳ್ ಜತೆ ಮೈಸೂರಿನ ರಾಜ್ ಕುಮಾರ್ ರಸ್ತೆಯ ಆಯುರ್ವೇದ ಆಸ್ಪತ್ರೆಯಲ್ಲಿ ಕೆಲಸ‌ ಮಾಡುತ್ತಿದ್ದಳು. ಆಸ್ಪತ್ರೆಯಲ್ಲೇ ಉಳಿದುಕೊಂಡು ಭ್ರೂಣ ಹತ್ಯೆ ದಂಧೆ ನಡೆಸುತ್ತಿದ್ದಳು.

ಭ್ರೂಣಗಳನ್ನು ಟಾಯ್ಲೆಟ್‌ನಲ್ಲಿ ಫ್ಲಶ್‌!

ಭ್ರೂಣ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಘಾತಕಾರಿ ಅಂಶಗಳು ಹೊರಬೀಳುತ್ತಿವೆ. ಚಂದನ್ ಬಲ್ಲಾಳ್‌ ಮಾಲೀಕತ್ವದ ಮಾತಾ ಆಸ್ಪತ್ರೆಯಲ್ಲಿ ನರ್ಸ್‌ ಆಗಿದ್ದ ಮಂಜುಳಾ, ತಿಂಗಳಿಗೆ 70ಕ್ಕೂ ಹೆಚ್ಚು ಅಬಾರ್ಷನ್‌ ಮಾಡಿಸುತ್ತಿದ್ದಳು. ಅಬಾರ್ಷನ್‌ ಮಾಡಿಸಿದ ಭ್ರೂಣಗಳನ್ನು ನಾನಾ ರೀತಿಯಲ್ಲಿ ಎಸೆಯುತ್ತಿದ್ದಳು.

ಭ್ರೂಣಗಳನ್ನು ಪೇಪರ್‌ನಲ್ಲಿ ಸುತ್ತಿ ಲ್ಯಾಬ್‌ ಟೆಕ್ನಿಶಿಯನ್‌ ನಿಸಾರ್‌ಗೆ ಕೊಡುತ್ತಿದ್ದಳು. ಆತ ಮಗುವನ್ನು ಕಾವೇರಿ ನದಿಯಲ್ಲಿ ಎಸೆದು ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಮೆಡಿಕಲ್‌ ವೇಸ್ಟ್‌ಗೆ ಹಾಕುತ್ತಿದ್ದವು. ಒಮ್ಮೊಮ್ಮೆ ಭ್ರೂಣಗಳನ್ನು ಟಾಯ್ಲೆಟ್‌ನಲ್ಲಿ ಎಸೆದು ಫ್ಲಶ್‌ ಮಾಡುತ್ತಿದ್ದಾಗಿ ವಿಚಾರಣೆಯಲ್ಲಿ ಹೇಳಿದ್ದಾಳೆ. ಒಂದೆರಡು ಪ್ರಕರಣಗಳಲ್ಲಿ 6 ತಿಂಗಳ ಮಕ್ಕಳನ್ನೂ ಗರ್ಭದಿಂದ ಹೊರತೆಗೆದಿದ್ದೇನೆ. ಆರು ತಿಂಗಳ ಮಗುವಿಗೂ ಜೀವ ಇರುತ್ತಿತ್ತು, ಆದರೆ ಅವುಗಳಿಗೆ ಧ್ವನಿ ಇನ್ನೂ ಬಂದಿರುವುದಿಲ್ಲ. ಆದರೆ ಹೊರ ತೆಗೆದಾಗ ಕೆಲ ಸಮಯದ ನಂತರ ಸಾಯುತ್ತಿದ್ದವು ಎಂದು ಮಂಜುಳಾ ಹೇಳಿದ್ದಾಳೆ.

ಆಪ್ತ ಸಮಾಲೋಚಕಿಯೂ ಆಗಿದ್ದ ನರ್ಸ್‌ ಮಂಜುಳಾ

ಭ್ರೂಣ ಹತ್ಯೆಗೆ ನರ್ಸ್‌ ಮಂಜುಳಾನೇ ಆಪ್ತ ಸಮಾಲೋಚಕಿ ಆಗಿರುತ್ತಿದ್ದಳು. ಪೋಷಕರ ಮನವೊಲಿಸಿ ಪ್ರಚೋದನೆ ನೀಡುತ್ತಿದ್ದಳು. ಮೂರ್ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದ ಮಂಜುಳಾ, ಅದೇ ಸಂಪರ್ಕದ ಆಧಾರದ ಮೇಲೆ ಬೇರೆ ಆಸ್ಪತ್ರೆಗೆ ಬಂದ ಗರ್ಭಿಣಿಯರ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದಳು. ಭ್ರೂಣ ಲಿಂಗ ಪತ್ತೆಯ ಆಫರ್ ನೀಡಿ ಮಾತಾ ಆಸ್ಪತ್ರೆಯಲ್ಲಿ ಅಬಾರ್ಷನ್‌ ಮಾಡಿಸುತ್ತಿದ್ದಳು. ಸದ್ಯ ಮಂಜುಳಾನ್ನು ಸಂಪರ್ಕಿಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡವರನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

ಗಂಭೀರ ಕ್ರಮಕ್ಕೆ ಸದನದಲ್ಲಿ ಒತ್ತಾಯ

ಭ್ರೂಣ ಹತ್ಯೆ ಜಾಲದ ಕರಾಳ ಮುಖಗಳು ಒಂದೊಂದೇ ಬಯಲಾಗುತ್ತಿದೆ. ಈಗಾಗಲೇ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆಯನ್ನು ಕಾನೂನು ಬಾಹಿರ ಎಂದು ಘೋಷಿಸಿ, ಕಠಿಣ ಕ್ರಮಗಳ ಕಾನೂನು ಇದ್ದರೂ ಇದನ್ನು ತಡೆಯಲಾಗದಿರುವ ಬಗ್ಗೆ ಈಗ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮತ್ತೆ ಇಂಥ ಪ್ರಕರಣಗಳು ಆಗದಂತೆ ಕಾನೂನನ್ನು ಮತ್ತಷ್ಟು ಕಠಿಣ ಮಾಡಬೇಕು ಎಂದು ಸದನದಲ್ಲಿ ಒತ್ತಾಯ ಮಾಡಲಾಗಿದೆ.

Continue Reading

ಕರ್ನಾಟಕ

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Foeticide Case : ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ ನಡೆಯುತ್ತಿರುವ ಮಾಹಿತಿ ಪಡೆದಿರುವ ಪೊಲೀಸರು ಅಲ್ಲಿನ ಹೆಡ್‌ ನರ್ಸ್‌ ಉಷಾರಾಣಿಯನ್ನು ಬಂಧಿಸಿದ್ದಾರೆ.

VISTARANEWS.COM


on

Foeticide arrest
Koo

ಮೈಸೂರು: ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ದಂಧೆಯನ್ನು ಪೊಲೀಸರು ಬಯಲಿಗೆಳೆದ ಬೆನ್ನಿಗೇ ಇನ್ನೊಂದು ಆಸ್ಪತ್ರೆಯಲ್ಲೂ ಮಕ್ಕಳನ್ನು ಹುಟ್ಟುವ ಮೊದಲೇ ಸಾಯಿಸುವ ಕರಾಳ ಕೃತ್ಯ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ (Chamundeshwari Hospital) ಭ್ರೂಣ ಹತ್ಯೆ (Foeticide Case) ನಡೆಯುತ್ತಿದ್ದು, ಇದಕ್ಕೆ ಸಂಬಂದಿಸಿ ಅಲ್ಲಿನ ಹೆಡ್‌ ನರ್ಸ್‌ ಉಷಾರಾಣಿ (Nurse Usharani arrested) ಎಂಬಾಕೆಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಬೈಯಪ್ಪನ ಹಳ್ಳಿ ಪೊಲೀಸರು ಮಂಡ್ಯದಲ್ಲಿ ನಡೆಯುತ್ತಿರುವ ಬೃಹತ್‌ ಜಾಲವನ್ನು ಪತ್ತೆ ಹಚ್ಚಿ 10ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ ಬೆನ್ನಿಗೇ ಬೇರೆ ಬೇರೆ ಜಿಲ್ಲೆಗಳಲ್ಲಿ ‌ ನಡೆಯುತ್ತಿರುವ ದಂಧೆಗಳು ಬಯಲಾಗುತ್ತಿವೆ.

ಮೈಸೂರಿನ ಮಾತಾ‌ ಆಸ್ಪತ್ರೆಯಲ್ಲಿ ಅಬಾರ್ಷನ್‌ ನಡೆಯುತ್ತಿರುವ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅಲ್ಲಿನ ವೈದ್ಯ ಚಂದನ ಬಳ್ಳಾಲ್‌ ಮತ್ತು ನರ್ಸ್‌ ಮಂಜುಳಾಳನ್ನು ಬಂಧಿಸಲಾಗಿತ್ತು. ಇದೀಗ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಕೂಡ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದು ಪತ್ತೆಯಾಗಿದ್ದು, ಹೆಡ್ ನರ್ಸ್ ಉಷಾರಾಣಿ ಸೆರೆ ಸಿಕ್ಕಿದ್ದಾಳೆ

ಬ್ರೋಕರ್ ಪುಟ್ಟರಾಜು ಅಣತಿಯಂತೆ ಇಲ್ಲಿ ಮಹಿಳೆಯರಿಗೆ ಅಬಾರ್ಷನ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಪುಟ್ಟರಾಜು ಮಾತಾ ಮತ್ತು ಚಾಮುಂಡೇಶ್ವರಿ ಆಸ್ಪತ್ರೆಗೆ ಗ‌ರ್ಭಿಣಿಯರನ್ನು ಕರೆದುಕೊಂಡು ಹೋಗುತ್ತಿದ್ದ. ಚಾಮುಂಡೇಶ್ವರಿ ಆಸ್ಪತ್ರೆ ನರ್ಸ್ ಉಷಾರಾಣಿ ಗರ್ಭಿಣಿಯರಿಗೆ ಅಬಾರ್ಷನ್ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಚಾಮುಂಡೇಶ್ವರಿ ಆಸ್ಪತ್ರೆಯ ಮಾಲೀಕ ಜಗದೀಶ್‌ಗೆ ನೋಟಿಸ್‌ ನೀಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಚಾಮುಂಡೇಶ್ವರಿ ಆಸ್ಪತ್ರೆಯ ದಾಖಲಾತಿಗಳನ್ನು ಪೊಲೀಸರಿಗೆ ನೀಡುವಂತೆ ನೋಟೀಸ್‌ ನಲ್ಲಿ ತಿಳಿಸಲಾಗಿದೆ.

ಭ್ರೂಣ ಹತ್ಯೆ ಮಾಡಿ ಟಾಯ್ಲೆಟ್‌ ನಲ್ಲಿ ಫ್ಲಸ್‌ ಮಾಡುತ್ತಿದ್ದ ಮಂಜುಳಾ

ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಅಬಾರ್ಷನ್‌ ಮಾಡಿಸುವಲ್ಲಿ ಚಂದನ್ ಬಲ್ಲಾಳ್‌ ಗೆ ಸಹಕಾರ ನೀಡುತ್ತಿದ್ದ ನರ್ಸ್‌ ಮಂಜುಳಾ, ಚಂದನ್‌ ಬಳ್ಳಾಲ್‌ ಬಂಧನದ ಬೆನ್ನಿಗೇ ತಲೆಮರೆಸಿಕೊಂಡಿದ್ದಳು. ಆಕೆ ಮತ್ತೊಂದು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ.

ಭ್ರೂಣ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಘಾತಕಾರಿ ಅಂಶಗಳು ಹೊರಬೀಳುತ್ತಿವೆ. ಚಂದನ್ ಬಲ್ಲಾಳ್‌ ಮಾಲೀಕತ್ವದ ಮಾತಾ ಆಸ್ಪತ್ರೆಯಲ್ಲಿ ನರ್ಸ್‌ ಆಗಿದ್ದ ಮಂಜುಳಾ, ತಿಂಗಳಿಗೆ 70ಕ್ಕೂ ಹೆಚ್ಚು ಅಬಾರ್ಷನ್‌ ಮಾಡಿಸುತ್ತಿದ್ದಳು. ಅಬಾರ್ಷನ್‌ ಮಾಡಿಸಿದ ಭ್ರೂಣಗಳನ್ನು ನಾನಾ ರೀತಿಯಲ್ಲಿ ಎಸೆಯುತ್ತಿದ್ದಳು.

ಭ್ರೂಣಗಳನ್ನು ಪೇಪರ್‌ನಲ್ಲಿ ಸುತ್ತಿ ಲ್ಯಾಬ್‌ ಟೆಕ್ನಿಶಿಯನ್‌ ನಿಸಾರ್‌ಗೆ ಕೊಡುತ್ತಿದ್ದಳು. ಆತ ಮಗುವನ್ನು ಕಾವೇರಿ ನದಿಯಲ್ಲಿ ಎಸೆದು ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಮೆಡಿಕಲ್‌ ವೇಸ್ಟ್‌ಗೆ ಹಾಕುತ್ತಿದ್ದವು. ಒಮ್ಮೊಮ್ಮೆ ಭ್ರೂಣಗಳನ್ನು ಟಾಯ್ಲೆಟ್‌ನಲ್ಲಿ ಎಸೆದು ಫ್ಲಶ್‌ ಮಾಡುತ್ತಿದ್ದಾಗಿ ವಿಚಾರಣೆಯಲ್ಲಿ ಹೇಳಿದ್ದಾಳೆ.

Continue Reading
Advertisement
Lighting for Suvarna Vidhana Soudha
ಕರ್ನಾಟಕ58 seconds ago

Belagavi Winter Session: ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಇನ್ಮುಂದೆ ವರ್ಷಪೂರ್ತಿ ಲೈಟಿಂಗ್ಸ್

Markram
ಕ್ರಿಕೆಟ್3 mins ago

Ind vs SA : ಭಾರತ ವಿರುದ್ಧ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

Kenda teaser kannada
South Cinema29 mins ago

Kannada New Movie: ಟೀಸರ್ ಮೂಲಕ ಕೌತುಕದ ಕಿಡಿ ಹೊತ್ತಿಸಿದ `ಕೆಂಡ’!

CP Yogeshwar brother in law Mahadevaiah
ಕರ್ನಾಟಕ40 mins ago

Murder Case: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಭಾವ ಮಹದೇವಯ್ಯ ಕೊಲೆ!

Foeticide case and pair of pink bunny figurines
ಕರ್ನಾಟಕ1 hour ago

Belagavi Winter Session: ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ

Narendra Modi With Women
EXPLAINER1 hour ago

ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?

Foeticide arrest
ಕರ್ನಾಟಕ1 hour ago

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Tukali imitate sangeetha sringeri
ಬಿಗ್ ಬಾಸ್1 hour ago

BBK SEASON 10: ನಾಯಿಯಾದ ಸಂಗೀತಾ; ಅನುಕರಣೆ ಮಾಡೋದ್ರಲ್ಲಿ ತುಕಾಲಿ ಎತ್ತಿದ ಕೈ!

Revenue Minister Krishna Byre Gowda making coffee
ಕರ್ನಾಟಕ2 hours ago

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Car catches fire after hitting bus
ಕರ್ನಾಟಕ2 hours ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ11 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌