ಮಂಡ್ಯದಲ್ಲಿ ಸಾಲಬಾಧೆ ತಾಳಲಾರದೆ ರೈತನ ಆತ್ಮಹತ್ಯೆ - Vistara News

ಮಂಡ್ಯ

ಮಂಡ್ಯದಲ್ಲಿ ಸಾಲಬಾಧೆ ತಾಳಲಾರದೆ ರೈತನ ಆತ್ಮಹತ್ಯೆ

ಯಳವೇಗೌಡ ಅವರ ಪುತ್ರ ಕೆ.ಬೆಟ್ಟಹಳ್ಳಿ ಕುಮಾರ್ (48) ಆತ್ಮಹತ್ಯೆಗೆ ಶರಣಾಗಿರುವ ರೈತ. ಮೃತ ರೈತ 1.10 ಎಕರೆ ಖುಷ್ಕಿ ಜಮೀನು ಹೊಂದಿದ್ದು, ತರಕಾರಿ ಬೆಳೆದಿದ್ದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಜಿಲ್ಲೆ ಪಾಂಡವಪುರ ತಾಲೂಕಿನ ಕೆ‌.ಬೆಟ್ಟಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ಕೆ.ಬೆಟ್ಟಹಳ್ಳಿ ಕುಮಾರ್‌(48) ಆತ್ಮಹತ್ಯೆ ಮಾಡಕೊಂಡಿದ್ದಾರೆ. ತಮ್ಮ ಜಮೀನಿನಲ್ಲಿದ್ದ ಹಿಪ್ಪೆ ಮರಕ್ಕೆ ನೇಣು ಬಿಗಿದು ರೈತನ ಆತ್ಮಹತ್ಯೆ ಮಾಡಕೊಂಡಿದ್ದಾರೆ. ಯಳವೇಗೌಡ ಅವರ ಪುತ್ರ ಕೆ.ಬೆಟ್ಟಹಳ್ಳಿ ಕುಮಾರ್ (48) 1.10 ಎಕರೆ ಖುಷ್ಕಿ ಜಮೀನು ಹೊಂದಿದ್ದು, ತರಕಾರಿ ಬೆಳೆದಿದ್ದರು. ಕೆ.ಬೆಟ್ಟಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹50 ಸಾವಿರ, ಕೆ.ಬೆಟ್ಟಹಳ್ಳಿ ಡಿಸಿಸಿ ಬ್ಯಾಂಕ್ ನಲ್ಲಿ ಚಿನ್ನಾಭರಣಗಳನ್ನು ಅಡಮಾನವಿಟ್ಟು ₹1.25ಲಕ್ಷ ಸಾಲ, ಸ್ವಸಹಾಯ ಸಂಘ ಸಂಸ್ಥೆಗಳಿಂದ ₹25 ಸಾವಿರ ಸಾಲ ಸೇರಿದಂತೆ ಒಟ್ಟು ₹2 ಲಕ್ಷ ಸಾಲ ಮಾಡಿದ್ದರು. ಮೃತ ರೈತನಿಗೆ ತಾಯಿ, ಪತ್ನಿ, ಓರ್ವ ಪುತ್ರಿ ಇದ್ದಾರೆ.

ಇದನ್ನೂ ಓದಿ | ಹುಡುಗಿ ಪೋಟೋ ತೋರಿಸಿ ಹತ್ಯೆ: ಬಿಜೆಪಿ ಕಾರ್ಯಕರ್ತನ ಸಾವಿನ ರಹಸ್ಯ ಬಯಲು

ಮೃತ ರೈತನ ಶವವನ್ನು ಪಾಂಡವಪುರ ಉಪವಿಭಾಗೀಯ ಆಸ್ಪತ್ರೆ ಶವಗಾರದಲ್ಲಿರಿಸಲಾಗಿದ್ದು, ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ | ಸಚಿವ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ; ಉಡುಪಿಯಲ್ಲಿ ಸಂತೋಷ್‌ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Rain News: ಬೆಂಗಳೂರಿನಲ್ಲಿ ಮಳೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಹವಾಮಾನ ಇಲಾಖೆಯಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಹಲವೆಡೆ ವಾರಾಂತ್ಯದಲ್ಲಿ ಗುಡುಗು ಸಹಿತ ಗಾಳಿ, ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವಾರಾಂತ್ಯದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡದಲ್ಲೂ ವರುಣನ ಸಿಂಚನವಾಗಲಿದೆ.

ಇದನ್ನೂ ಓದಿ: Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನೂ ಮಳೆಯಿಲ್ಲದೇ ಕಂಗೆಟ್ಟಿರುವ ರಾಜಧಾನಿ ಬೆಂಗಳೂರಿಗೂ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ಸೂಚನೆ

ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Actor Darshan: ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದಾಗ ಅವಘಡ ನಡೆದಿದೆ.

VISTARANEWS.COM


on

Actor Darshan
Koo

ಮಂಡ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ನಟ ದರ್ಶನ್ (Actor Darshan) ಅವರು ಶುಕ್ರವಾರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಆದರೆ, ಪ್ರಚಾರದ ವೇಳೆ ನಟ ದರ್ಶನ್ ಇದ್ದ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿರುವುದು ಕಂಡುಬಂದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದರು. ಪ್ರಚಾರದ ವಾಹನ ವೇಗವಾಗಿ ಮುಂದೆ ಸಾಗುತ್ತಿದ್ದಾಗ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ. ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ ಕೂಡಲೇ ತುಂಡಾಗಿ ಬಿದ್ದಿದ್ದರಿಂದ ಅನಾಹುತ ತಪ್ಪಿದೆ.

ಈ ಘಟನೆಯಲ್ಲಿ ನಟ ದರ್ಶನ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣವಿತ್ತು. ಈ ಘಟನೆಯ ಬಳಿಕ ನಟ ದರ್ಶನ್ ಅವರು ಚುನಾವಣಾ ಪ್ರಚಾರ ಮೊಟಕುಗೊಳಿಸಿ, ಬೆಂಗಳೂರಿಗೆ ತೆರಳಿದರು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ | letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Fraud Case in Bengaluru

ಬೆಂಗಳೂರು: ಆ ನಯವಂಚಕರು ದೊಡ್ಡ ದೊಡ್ಡ ಉದ್ಯಮಿಗಳನ್ನೇ (Fraud Case) ಟಾರ್ಗೆಟ್‌ ಮಾಡುತ್ತಿದ್ದರು. ಅದರಲ್ಲೂ ದೇವರು, ಆಧ್ಯಾತ್ಮದ ನಂಬಿಕೆ ಇತ್ತು ಅಂದರೆ ಮುಗಿತು ವಂಚನೆಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು. ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರನ್ನು ವಂಚಿಸಲು ಮುಂದಾಗಿದ್ದ ಗ್ಯಾಂಗ್ ಜಯನಗರ ಪೊಲೀಸರ ಅತಿಥಿಗಳಾಗಿದ್ದಾರೆ.

ಅದೃಷ್ಟದ ಚೆಂಬಿನ ಹಿಂದೆ ಬಿದ್ದ ಉದ್ಯಮಿಯೊಬ್ಬ ಲಕ್ಷ ಲಕ್ಷ ಕಳೆದುಕೊಂಡಿದ್ದ. ಆದರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಕಳೆದುಕೊಂಡ ಹಣ ವಾಪಸ್‌ ಸಿಕ್ಕಿದ್ದು, ಅಂತರರಾಜ್ಯ ವಂಚಕ ಶಿವಶಂಕರ್, ಅಬ್ದುಲ್ ಸುಕ್ಕುರ್ ಹಾಗೂ ಸನ್ನಿ ಗಿಲ್ ಎಂಬುವವರು ಸಿಕ್ಕಿಬಿದ್ದಿದ್ದಾರೆ.

Fraud Case in bengaluru

ಈ ಮೂವರು ತಮ್ಮ ಬಳಿ ಅದೃಷ್ಟ ಖುಲಾಯಿಸುವ ಚಮತ್ಕಾರಿ ಪಾತ್ರೆ ಇದೆ. ಅದನ್ನೂ ಮನೆಯಲ್ಲಿ ಇಟ್ಟರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ. ಇದಕ್ಕೆ ವಿದೇಶಿ ಮಾರ್ಕೆಟ್‌ನಲ್ಲಿ ಕೋಟಿ ಕೋಟಿ ಬೆಲೆ ಇದೆ ಎಂದು ಬಣ್ಣ ಬಣ್ಣದ ಮಾತುಗಳನ್ನು ಹೇಳಿ ನಂಬಿಸುತ್ತಿದ್ದರು. ಅದೇ ರೀತಿ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಟಾರ್ಗೆಟ್ ಮಾಡಿ, ಒಂದೂವರೆ ಕೋಟಿ ಕೊಟ್ಟರೆ ಈ ಅದೃಷ್ಟದ ಪಾತ್ರೆ ಕೊಡುವುದಾಗಿ ನಂಬಿಸಿದ್ದಾರೆ. ಕೊನೆಗೆ 70 ಲಕ್ಷ ರೂಪಾಯಿಗೆ ಡೀಲ್ ಮುಗಿಸಿದ್ದರು.

ವಿಡಿಯೊದಲ್ಲಿ ತೋರಿಸಿದ್ದ ಅದೃಷ್ಟ ಚೆಂಬನ್ನು ಕೊಡುತ್ತೇವೆ ದುಡ್ಡು ರೆಡಿ ಮಾಡಿಕೊಳ್ಳಿ ಎಂದಿದ್ದರು. ತಾಮ್ರದ ಪಾತ್ರೆ ತೆಗೆದುಕೊಂಡು ಯಡಿಯೂರು ಕೆರೆ ಬಳಿ ಬಂದು ಹಣ ತೆಗೆದುಕೊಳ್ಳಲು ವ್ಯವಹಾರ ನಡೆಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಜಯನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಉದ್ಯಮಿಗೆ ವಂಚಿಸಿ ಪಡೆದಿದ್ದ 70 ಲಕ್ಷ ರೂ. ಹಣವನ್ನು ಸೀಜ್ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬೆಂಗಳೂರಿನಲ್ಲಿರುವ ಸುಮಾರು 20 ಉದ್ಯಮಿಗಳನ್ನು ಟಾರ್ಗೆಟ್ ಮಾಡಿಕೊಂಡು ವಂಚಿಸುವುದಕ್ಕೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಆದರೆ ಅದಕ್ಕೂ ಮೊದಲೇ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ನಕಲಿ ದಾಖಲೆ ಕೊಟ್ಟು 22 ಬ್ಯಾಂಕ್‌ಗಳಿಗೆ ವಂಚನೆ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್‌ಗಳಿಗೆ ವಂಚಿಸಿದ್ದ ಖತರ್ನಾಕ್‌ ಫ್ಯಾಮಿಲಿಯ ಬಂಧನವಾಗಿದೆ. ಒಂದೇ ಕುಟುಂಬದ ಐವರು ಆರೋಪಿಗಳು ‌ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುಮಾರು 22 ಬ್ಯಾಂಕ್‌ಗಳಿಗೆ ವಂಚಿಸಿ, ಬರೋಬ್ಬರಿ 10 ಕೋಟಿ ರೂ. ಸಾಲ ಪಡೆದಿದ್ದರು.

Fraud Case in Bengaluru

ನಾಗೇಶ್‌, ಸತೀಶ್‌, ವೇದ, ಶೋಭಾ, ಸುಮ, ಶೇಷಗಿರಿ ಬಂಧಿತ ಆರೋಪಿಗಳಾಗಿದ್ದಾರೆ. ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯುತ್ತಿದ್ದರು. ನಕಲಿ ದಾಖಲೆಗಳನ್ನು ಡೀಡ್ ಮಾಡಿಸಿ, ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಮಾಡಿಸುತ್ತಿದ್ದರು. ಬಳಿಕ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್‌ಗಳಲ್ಲಿ ಕಂತು ಸಾಲ ಹಾಗೂ ಯಂತ್ರೋಪಕರಣ ಸಾಲ ಪಡೆಯುತ್ತಿದ್ದರು. ಹೀಗೆ ಒಟ್ಟು 22 ಬ್ಯಾಂಕ್‌ಗಳಲ್ಲಿ ಹತ್ತು ಕೋಟಿ ರೂ.ಗೂ ಅಧಿಕ ಸಾಲ‌ ಪಡೆದು ವಂಚನೆ ಮಾಡಿದ್ದಾರೆ. ಸದ್ಯ ಪತಿ, ಪತ್ನಿ ಹಾಗೂ ಈಕೆ ಸೋದರಿ, ಭಾವ ಹಾಗೂ ಅವರ ಸ್ನೇಹಿತೆ ಬಂಧಿತರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ತು ದಿನ ಕಸ್ಟಡಿಗೆ ಪಡೆದು ಜಯನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಂಡ್ಯ

Lok Sabha Election 2024: ರೈತನ ಮಗ ಸ್ಟಾರ್ ಚಂದ್ರು ಗೆಲ್ಲಿಸಿ, ಜಿಲ್ಲೆಯ ಸ್ವಾಭಿಮಾನ ಉಳಿಸಿ: ಶಾಸಕ ನರೇಂದ್ರಸ್ವಾಮಿ

Lok Sabha Election 2024: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಶಾಸಕ ನರೇಂದ್ರಸ್ವಾಮಿ ಮತಯಾಚನೆ ನಡೆಸಿದರು.

VISTARANEWS.COM


on

MLA Narendraswamy Election campaign in various places at Malavalli Assembly Constituency
Koo

ಮಳವಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಇದೇ ಜಿಲ್ಲೆಯ ರೈತನ ಮಗ. ಹಳ್ಳಿಗಾಡಿನಲ್ಲಿ ಓದಿ, ನಗರದಲ್ಲಿ ಉದ್ಯಮಿಯಾಗಿ ಬೆಳೆದು ಈಗ ಹುಟ್ಟೂರಿನ ಋಣ ತೀರಿಸಲು ರಾಜಕೀಯಕ್ಕೆ ಬಂದಿದ್ದಾರೆ. ರೈತನ ಮಗನಾದ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸಿ, ಜಿಲ್ಲೆಯ ಸ್ವಾಭಿಮಾನ ಉಳಿಸಬೇಕು ಎಂದು ಶಾಸಕ ನರೇಂದ್ರಸ್ವಾಮಿ ಮತದಾರರಲ್ಲಿ ಮನವಿ (Lok Sabha Election 2024) ಮಾಡಿದರು.

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರವಾಗಿ ಮತಯಾಚಿಸಿ ಮಾತನಾಡಿದರು.

ಇದನ್ನೂ ಓದಿ: Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

ಮೋದಿ ಶ್ರೀಮಂತರ ಸಾಲಮನ್ನಾ ಮಾಡ್ತಾರೆ, ರೈತರ ಸಾಲಮನ್ನಾ ಮಾಡಲ್ಲ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಾಲಮನ್ನಾ ಮಾಡುತ್ತದೆ. ಉದ್ಯೋಗದ ಭದ್ರತೆ ನಾವು ಕೊಡುತ್ತೇವೆ. ಜನರ ಬದುಕನ್ನು ಹಸನು ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ ಎಂದರು.

ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ನೀಡಿದ ಪರಿಣಾಮ ಬರಗಾಲದಲ್ಲಿ ಬಡವರಿಗೆ ಕಾಂಗ್ರೆಸ್ ನೆರವಾಗಿದೆ ಎಂದ ಅವರು, ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ, ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

ವಿಧಾನಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

Continue Reading

ಮಳೆ

Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

Rain News : ಹಲವೆಡೆ ಸುರಿಯುತ್ತಿರುವ ಬಿರುಗಾಳಿ ಮಳೆಯು ನಾನಾ ಅನಾಹುತಗಳನ್ನು ಸೃಷ್ಟಿ ಮಾಡಿದೆ. ಗಾಳಿ ಮಳೆಗೆ ಮನೆಯ ಚಾವಣಿ ಹಾರಿ ಹೋಗಿದೆ. ಮತ್ತೊಂದು ಕಡೆಗೆ ಸಿಡಿಲಿಗೆ ಜಾನುವಾರು ಹಾಗೂ ತೆಂಗಿನ ಮರ ಸುಟ್ಟು ಕರಕಲಾಗಿದೆ. ಮುಂದಿನ 3 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆ ಮಳೆ (Rain News) ಅಬ್ಬರ ಜೋರಾಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹಾಗೂ ಯಲಹಂಕದಲ್ಲಿ ವರ್ಷದ ಮೊದಲ ಮಳೆಯಾಗಿದೆ. ಕಾದ ಕೆಂಡದಂತಾಗಿದ್ದ ಧರೆಗೆ ಶುಕ್ರವಾರ ಮಧ್ಯಾಹ್ನ ಕೆಲಕಾಲ ಸುರಿದ ಮಳೆಯು ಜನರಲ್ಲಿ ಸಂತಸ (Karnataka weather Forecast) ಮೂಡಿಸಿತ್ತು.

ಶುಕ್ರವಾರ ಸಂಜೆ ನಂತರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಬೀದರ್‌, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.

ಇನ್ನೂ ತುಮಕೂರಿನ ಕುಣಿಗಲ್ ತಾಲೂಕು ಡಿ.ಹೊಸಹಳ್ಳಿ, ರಾಜೇಂದ್ರಪುರ ಭಾಗದಲ್ಲಿ ಗಾಳಿ- ಮಳೆಯ ಅಬ್ಬರಕ್ಕೆ ಮನೆಯ ಮೇಲ್ಛಾವಣಿಗಳು ಹಾರಿಹೋಗಿದ್ದವು. ಜತೆಗೆ ಮರಗಳೆಲ್ಲವೂ ಧರೆಗುರುಳಿದ್ದವು. ಕುಣಿಗಲ್ ತಾಲೂಕಿನ ಹಲವೆಡೆ ನಿನ್ನೆ ತುಂತುರು ಮಳೆಯೊಂದಿಗೆ ಬಿರುಗಾಳಿ ಬೀಸಿದೆ. ಬಿರುಗಾಳಿಯ ರಭಸಕ್ಕೆ 30ಕ್ಕೂ ಹೆಚ್ಚು ಮರಗಳು ನೆಲಸಮವಾಗಿತ್ತು. ಡಿ.ಹೊಸಹಳ್ಳಿಯಲ್ಲಿ ಶಾಲಾ ಕಟ್ಟಡದ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿತ್ತು. ಇನ್ನು ರಾಜೇಂದ್ರಪುರ ಗ್ರಾಮದಲ್ಲಿ ಕಲ್ಲೂರಯ್ಯ, ಬರಿಯಯ್ಯ, ಚಿಕ್ಕಕೂರಲಯ್ಯ ಎಂಬುವವರ ಮನೆಗಳ ಮೇಲ್ಛಾವಣಿಯೇ ಹಾರಿಹೋಗಿತ್ತು. ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

ಸಿಡಿಲು ಬಿಡಿದು ಹೊತ್ತಿ ಉರಿದ ತೆಂಗಿನ ಮರ

ಚಿಕ್ಕಮಗಳೂರಿನ ಬಾಳೆಹೊನ್ನುರು-ಕೊಪ್ಪ ರಸ್ತೆಯಲ್ಲಿ ಮಧ್ಯರಾತ್ರಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿತ್ತು. ಕೊಪ್ಪ ರಸ್ತೆಯ ಇಸಾಕ್ ಎಂಬುವರ ಮನೆಯ ತೆಂಗಿನ ಮರ ಹೊತ್ತಿ ಉರಿದಿತ್ತು. ಸಿಡಿಲು ಬಡಿದು ಸಂಪೂರ್ಣ ಸುಟ್ಟುಹೋಗಿತ್ತು. ಕಳೆದ ರಾತ್ರಿ ಬಾಳೆಹೊನ್ನೂರು ಸುತ್ತಮುತ್ತ ಗಾಳಿ-ಮಳೆ ಸುರಿದಿತ್ತು.

karnataka weather Forecast

ಸಿಡಿಲಿಗೆ ಮುರಿದು ಬಿದ್ದ ದೇವಾಲಯದ ಗರುಡುಗಂಬ

ಸಿಡಿಲು ಬಡಿದು ದೇವಾಲಯದ ಗರುಡುಗಂಬ ಮುರಿದು ಬಿದ್ದಿತ್ತು. ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಹಗರನೂರಿನಲ್ಲಿ ಘಟನೆ ನಡೆದಿತ್ತು. ನಿನ್ನೆ ತಡರಾತ್ರಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿತ್ತು. ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಗರಡುಗಂಬಕ್ಕೆ ಸಿಡಿಲು ಬಡಿದ ಪರಿಣಾಮ ಮುರಿದು ಬಿದ್ದಿತ್ತು. ಅಲ್ಲದೆ ಹಿರೇಹಡಗಲಿಯಲ್ಲಿ ರೈತ ಬಂದ್ರಕಳ್ಳಿ ಲಂಕೆಪ್ಪ ಎಂಬವರ ಹಸುವು ಸಿಡಿಲಿಗೆ ಬಲಿಯಾಗಿತ್ತು. ಹಿರೇಕೊಳಚಿ, ಚಿಕ್ಕಕೊಳಚಿ, ನಾಗತಿಬಸಾಪುರ ಹಿರೇಹಡಗಲಿ ಸೇರಿ ಹತ್ತಾರು ಗ್ರಾಮಗಳಲ್ಲಿ ಮಳೆಯಾಗಿದೆ. ಹಗರನೂರು ಗ್ರಾಮದ ರಸ್ತೆ ಮೇಲೆ ಮರಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಾಸದ ಮನೆ, ದನದ ಕೊಟ್ಟಿಗೆ ಮೇಲೆ ಹಾಕಲಾಗಿದ್ದ ತಗಡುಗಳು ಬಿರುಗಾಳಿಗೆ ಹಾರಿಹೋಗಿದ್ದವು.

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ

ಗುರುವಾರದಂದು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಅಥಣಿ ಹಾಗೂ ನಿಪ್ಪಾಣಿಯಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ. ಮಹಾಲಿಂಗಪುರ 4, ಹೊನ್ನಾವರ, ಲೋಕಾಪುರ, ಗದಗ, ಚಿಕ್ಕೋಡಿ, ಸೇಡಬಾಳ, ಟಿಕ್ಕೋಟ, ಹುಂಚದಕಟ್ಟೆ, ಬೇಲೂರು, ತ್ಯಾಗರ್ತಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮುಂಡಗೋಡು, ಹಾವೇರಿ, ಹಾವೇರಿ ಎಪಿಎಂಸಿ , ರಬಕವಿ , ಕುಂದಗೋಳ , ಸಂಕೇಶ್ವರ, ಕಲಘಟಗಿ , ಯಡವಾಡ, ಪೊನ್ನಂಪೇಟೆ, ಕೊಡಗು, ಹರಪನಹಳ್ಳಿಯಲ್ಲಿ ತಲಾ 2 ಸೆಂ.ಮೀ ಹಾಗೂ ಹಳಿಯಾಳ, ಸಿದ್ದಾಪುರ, ಗೋಕಾಕ್‌ , ರಾಣೆಬೆನ್ನೂರು, ಧಾರವಾಡ, ಮಂಡ್ಯದಲ್ಲಿ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.4 ಡಿ.ಸೆ ಕಲಬುರಗಿ ಮತ್ತು ರಾಯಚೂರಿನಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
ವೈರಲ್ ನ್ಯೂಸ್3 mins ago

Viral Video: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವೈರಲ್ ಆದ ವಿಡಿಯೊ

Case of bringing gun to CM Siddaramaiah Four policemen suspended
Lok Sabha Election 202410 mins ago

‌CM Siddaramaiah: ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

Elon Musk
ವಿದೇಶ18 mins ago

Elon Musk: ಮೋದಿ ಭೇಟಿಗಾಗಿ ಈ ತಿಂಗಳು ಭಾರತಕ್ಕೆ ಬರಲ್ಲ ಎಲಾನ್‌ ಮಸ್ಕ್;‌ ಕೊಟ್ಟ ಕಾರಣ ಇದು

IPL 2024
ಕ್ರೀಡೆ28 mins ago

IPL 2024 : ಡಿಆರ್​ಎಸ್ ಅಕ್ರಮ; ಟಿಮ್ ಡೇವಿಡ್, ಕೀರನ್ ಪೊಲಾರ್ಡ್​ಗೆ ದಂಡ

KKR vs RCB
ಕ್ರಿಕೆಟ್41 mins ago

KKR vs RCB: ತವರಿನ ಸೋಲಿಗೆ ಸೇಡು ತೀರಿಸೀತೇ ಆರ್​ಸಿಬಿ?

Surabhi Jain
ಪ್ರಮುಖ ಸುದ್ದಿ1 hour ago

Surabhi Jain : 30 ವರ್ಷಕ್ಕೆ ಮೃತಪಟ್ಟ ಫ್ಯಾಷನ್ ಐಕಾನ್​ ಸುರಭಿ ಜೈನ್

RCB vs KKR
ಕ್ರೀಡೆ2 hours ago

RCB vS KKR: ಗ್ರೀನ್​ ಜೆರ್ಸಿಯಲ್ಲಿ ಆರ್​ಸಿಬಿ ಅದೃಷ್ಟ ಹೇಗಿದೆ; ಎಷ್ಟು ಗೆಲುವು ಎಷ್ಟು ಸೋಲು?

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Modi in Karnataka today Cm Siddaramaiah asks 11 questions to PM Modi
Lok Sabha Election 20242 hours ago

Modi in Karnataka: ಇಂದು ಕರ್ನಾಟಕಕ್ಕೆ ಮೋದಿ; ಪ್ರಧಾನಿಗೆ 11 ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ

Uttarakaanda Movie bande kaaka rangayana Raghu
ಸ್ಯಾಂಡಲ್ ವುಡ್2 hours ago

Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ3 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ4 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

ಟ್ರೆಂಡಿಂಗ್‌