Site icon Vistara News

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

Maddur MLA Uday election campaign in various places of Maddur taluk

ಮದ್ದೂರು: ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರವು (State Congress Government) ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದ್ದು ಎಲ್ಲರಿಗೂ ತಲುಪುತ್ತಿವೆ, ಈ ಬಾರಿ ಚುನಾವಣೆಯಲ್ಲಿ (Lok Sabha Election 2024) ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಿಸಿ, ಕಾಂಗ್ರೆಸ್ ಶಕ್ತಿ ಹೆಚ್ಚಿಸಿ ಎಂದು ಮದ್ದೂರು ಶಾಸಕ ಉದಯ್ ತಿಳಿಸಿದರು.

ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ನಿಮಗೆ ಜಿಲ್ಲೆಯ ಮಗ ಬೇಕಾ? ಅಥವಾ ಹೊರಗಿನಿಂದ ಬಂದವರು ಬೇಕಾ? ಸಿಎಂ ಆಗಿ ಅಧಿಕಾರದಲ್ಲಿದ್ದಾಗಲೇ ಜಿಲ್ಲೆಗೆ ಏನು ಕೊಡುಗೆ ನೀಡಿಲ್ಲ. ಅನುಕಂಪ ಗಿಟ್ಟಿಸಿಕೊಳ್ಳಲು ಭಾವನಾತ್ಮಕ ಮಾತಿಗೆ ಜಿಲ್ಲೆಯ ಜನ ಮರುಳಾಗಬಾರದು ಎಂದು ತಿಳಿಸಿದರು.

ಇದನ್ನೂ ಓದಿ: IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ನಾವು ರೈತರ ಮಕ್ಕಳು ಅಂತಾರೆ, ಆದರೆ ಒಂದು ನಾಲೆಯನ್ನೂ ಅಭಿವೃದ್ಧಿ ಮಾಡಿಲ್ಲ, ಕಾವೇರಿಗೆ ನ್ಯಾಯ ಕೊಡಿಸಲಿಲ್ಲ. ಅವರು ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡುವುದಿಲ್ಲ ಎಂದು ಆರೋಪಿಸಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ರಾಜಕೀಯ ಮಾಡಲು ಬಂದಿಲ್ಲ, ಜನಸೇವೆ ಮಾಡಲು ಬಂದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ಗ್ಯಾರಂಟಿ ಜಾರಿ ಮಾಡಲಾಗಿದ್ದು ಎಲ್ಲರಿಗೂ ತಲುಪುತ್ತಿದೆ. ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಕಾಂಗ್ರೆಸ್ ಶಕ್ತಿ ಹೆಚ್ಚಿಸಿ ಎಂದು ಕರೆಕೊಟ್ಟರು.

Exit mobile version