Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ Vistara News

South Cinema

Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ

Darshan Thoogudeepa: ನಟ ದರ್ಶನ್ ಅವರ ಬೇಜವಾಬ್ದಾರಿತನದ ಹೇಳಿಕೆ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಆಕ್ರೋಶ ಹೊರ ಹಾಕಿದೆ.

VISTARANEWS.COM


on

actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್‌ 26ರಂದು (ಮಂಗಳವಾರ)‌ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore bandh on September 26) ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಸ್ಯಾಂಡಲ್‌ವುಡ್‌ ಕಲಾವಿದರೂ ಕೂಡ ರೈತರಿಗೆ ಬೆಂಬಲ ನೀಡುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan Thoogudeepa) ಕೂಡ ರೈತರ ಬೆಂಬಲಕ್ಕೆ ನಿಂತಿದ್ದರು. ಈ ವೇಳೆ ಕನ್ನಡ ಸಿನಿಮಾ ಕಲಾವಿದರು ಅದಕ್ಕೆ ಬರಲಿಲ್ಲ, ಇದಕ್ಕೆ ಬರಲಿಲ್ಲ ಎಂದು ಹೇಳುತ್ತೀರಲ್ಲ ಕರ್ನಾಟಕದಲ್ಲಿ ತಮಿಳು ಸಿನಿಮಾವೊಂದು 36 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ತಮಿಳು ನಟರು ಹಾಗೂ ಅವರ ಸಿನಿಮಾಗಳ ಬಗ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದರು. ಇದೀಗ ನಟ ದರ್ಶನ್ ಅವರ ಬೇಜಾವಬ್ದಾರಿತನದ ಹೇಳಿಕೆ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಆಕ್ರೋಶ ಹೊರ ಹಾಕಿದೆ.

ನಟ ದರ್ಶನ್ ವಿರುದ್ಧ ಭುಗಿಲೆದ್ದ ಆಕ್ರೋಶ

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಹೋರಾಟ ನಡೆಸಿದೆ. ಕಾವೇರಿ ವಿಚಾರವಾಗಿ ನಟ ದರ್ಶನ್‌ ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ʻʻನಟ ದರ್ಶನ್ ಅವರು ಕೂಡಲೇ ರೈತರಲ್ಲಿ ಕ್ಷಮೆ ಕೇಳಬೇಕು. ನಾವು ಒಂದು ತಿಂಗಳಿನಿಂದ ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟಕ್ಕೆ ದರ್ಶನ್ ಬಂದರೆ ಬಲ ಸಿಗುತ್ತದೆ ಎಂದು ಭಾವಿಸಿದ್ದೇವು. ಅದಕ್ಕಾಗಿಯೇ ನಾವು ಆಹ್ವಾನಿಸಿದ್ದೇವು. ಕಾವೇರಿ ಕೊಳ್ಳದ ಜಿಲ್ಲೆಯವರಾಗಿ ಹೋರಾಟಗಾರರ ಬಗ್ಗೆ ಕೇವಲವಾಗಿ ಮಾತನಾಡಬಾರದು. ಜವಾಬ್ದಾರಿಯುತ ನಟನಾಗಿ ಹೋರಾಟಕ್ಕೆ ದನಿಗೂಡಿಸಿಬೇಕಿತ್ತುʼʼ ಎಂದು ರೈತರು ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: Darshan Thoogudeepa: ತಮಿಳು ಸಿನಿಮಾ ಯಾಕೆ ನೋಡಿದ್ರಿ? ಕಾವೇರಿ ವಿಚಾರದಲ್ಲಿ ದರ್ಶನ್‌ ಕೆಂಡ

ದರ್ಶನ್‌ ಹೇಳಿದ್ದೇನು?

ಕಾವೇರಿ ಗಲಾಟೆ ಆರಂಭ ಆಗುತ್ತಿದ್ದಂತೆ ಸ್ಯಾಂಡಲ್‌ವುಡ್‌ ನಟರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡ ಚಿತ್ರರಂಗದ ತಾರೆಗಳು ಧ್ವನಿ ಎತ್ತುತ್ತಿಲ್ಲ ಎಂಬಂತಹ ಮಾತುಗಳು ಕೇಳಿ ಬಂದಿದ್ದವು. ಈ ಬಗ್ಗೆ ನಟ ದರ್ಶನ್‌ ಖಾರವಾಗಿಯೇ ಮಾತನಾಡಿದ್ದರು. ʻʻಕರ್ನಾಟಕದಲ್ಲಿ ತಮಿಳು ಸಿನಿಮಾವೊಂದು 36 ಕೋಟಿ ರೂ. ಕಲೆಕ್ಷನ್ ಮಾಡಿದೆ. ದರ್ಶನ್, ಶಿವಣ್ಣ, ಸುದೀಪ್, ಯಶ್ ಮಾತ್ರ ನಿಮಗೆ ಕಾಣುತ್ತಾರಾ? ಅವರು ಯಾರೂ ಕಾಣಿಸೋದಿಲ್ಲವೇ?ʼʼ ಎಂದು ಕನ್ನಡ ಕಲಾವಿದರ ಬಗ್ಗೆ ಟೀಕೆ ಮಾಡಿದವರಿಗೆ ದರ್ಶನ್ ತಿರುಗೇಟು ನೀಡಿದ್ದರು.

ದರ್ಶನ್‌ ವಿಡಿಯೊದಲ್ಲಿ ʻʻನೋಡಿ ಸ್ವಾಮಿ ಮೊನ್ನೆ ಮೊನ್ನೆಯಷ್ಟೇ ಒಂದು ತಮಿಳು ಸಿನಿಮಾ ರಿಲೀಸ್ ಆಯ್ತು. ಒಬ್ಬ ವಿತರಕ 6 ಕೋಟಿಗೆ ಸಿನಿಮಾ ತಗೊಂಡ. 35, 36 ಕೋಟಿ ರೂ. ಮಾಡಿದ. ಆ ಸಿನಿಮಾವನ್ನು ಇಲ್ಲಿ ತಮಿಳಿನವರು ನೋಡಿದ್ರಾ ಸ್ವಾಮಿ? ಎಲ್ಲೋ ಇದ್ದು ಏನೋ ಮಾಡಿದವರಿಗೆ ನೂರಾರು ಕೋಟಿ ಕೊಡ್ತೀರಾ? ಯಾಕೆ ನೀವು ಕನ್ನಡ ಸಿನಿಮಾಗೆ ಕೊಡಲ್ಲ?.” ಎಂದು ಪ್ರಶ್ನೆ ಮಾಡಿದ್ದರು. ನೀವು ಕನ್ನಡ ಸಿನಿಮಾ ನೋಡೋದಿಲ್ಲ, ನಾವೇಕೆ ಬೆಂಬಲ ನೀಡಬೇಕು ಎಂಬರ್ಥದಲ್ಲಿ ಮಾತನಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Ram Charan: ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​!

Ram Charan: ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಅವರು ಸಣ್ಣ ಬ್ರೇಕ್​ ಪಡೆದುಕೊಂಡಿದ್ದರು.

VISTARANEWS.COM


on

am charan visits Chamundeshwari Temple Mysuru
Koo

ಮೈಸೂರು: ಟಾಲಿವುಡ್‌ ನಟ ರಾಮ್‌ಚರಣ್‌ ಅವರು ಡಿಸೆಂಬರ್​ 3ರಂದು ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ‘ಗೇಮ್​ ಚೇಂಜರ್​’ (Ram Charan) ಸಿನಿಮಾದ ಶೂಟಿಂಗ್​ ಸಲುವಾಗಿ ರಾಮ್​ ಚರಣ್​ ಅವರು ಹಲವು ದಿನಗಳಿಂದ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದರು. ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಅವರು ಸಣ್ಣ ಬ್ರೇಕ್​ ಪಡೆದುಕೊಂಡಿದ್ದರು. ನವೆಂಬರ್​ 30ರಂದು ಮತದಾನ ಮಾಡಿದ ಬಳಿಕ ಅವರು ಮೈಸೂರಿಗೆ ವಾಪಸಾಗಿದ್ದರು.

ಇದೀಗ ರಾಮ್‌ಚರಣ್‌ ಅವರು ಚಿತ್ರತಂಡದೊಂದಿಗೆ ದೇವಾಲಯಕ್ಕೆ ಆಗಮಿಸಿ ನಾಡಿನ ಅಧಿದೇವತೆ ದರ್ಶನ ಪಡೆದಿದ್ದಾರೆ. ಮಾರ್ಚ್‌ 27ರ ಬೆಳಗ್ಗೆ RC 15 ಗೇಮ್ ಚೇಂಜರ್‌ ಎಂದು ಶಿರ್ಷಿಕೆ ಅನಾವರಣ ಮಾಡಿತ್ತಿ. ಚಿತ್ರತಂಡ ಟೈಟಲ್‌ ಟೀಸರ್‌ ಕೂಡ ಹಂಚಿಕೊಂಡಿತ್ತು. 2019 ರಲ್ಲಿ ಬಿಡುಗಡೆಯಾದ ವಿನಯ ವಿಧೇಯ ರಾಮ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ.ಈ ಪ್ರಾಜೆಕ್ಟ್ ಅನ್ನು ಪ್ಯಾನ್-ಇಂಡಿಯಾ ಬಿಡುಗಡೆಗಾಗಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Ram Charan: ಈಜುಕೊಳದಲ್ಲಿ ರಾಮ್‌ಚರಣ್‌ ಮಗಳ ಪ್ರತಿಬಿಂಬ; ಇಟಲಿಯಲ್ಲಿದೆ ಮೆಗಾ ಕುಟುಂಬ!

ಬುಚ್ಚಿ ಬಾಬು ಸನಾ ಜತೆ ಕೈ ಜೋಡಿಸಿದ ರಾಮ್‌ಚರಣ್‌

ನಟ ರಾಮ್ ಚರಣ್ (Ram Charan) ಅವರ ಮುಂದಿನ ಚಿತ್ರ ಸೂಪರ್ ಹಿಟ್ ‘ಉಪ್ಪೆನ’ ಸಿನಿಮಾ ನೀಡಿದ್ದ ನಿರ್ದೇಶಕ (Uppena director Buchi Babu Sana) ಬುಚ್ಚಿ ಬಾಬು ಸನಾ(Buchi Babu Sana) ಅವರೊಂದಿಗೆ ಎಂಬುದು ವರದಿಯಾಗಿದೆ. ಮುಂದಿನ ವರ್ಷ ಜನವರಿಯಲ್ಲಿ ಬುಚ್ಚಿ ಬಾಬು ಸನಾ ಮತ್ತು ರಾಮ್ ಚರಣ್ ತಮ್ಮ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಚಿತ್ರದ ತಾರಾಬಳಗಕ್ಕೆ ಸಂಬಂಧಿಸಿದಂತೆ ಇನ್ನಷ್ಟು ರೋಚಕ (Ram Charan and Vijay Sethupathi) ಸುದ್ದಿ ಹೊರಬೀಳುತ್ತಿದೆ. ಚಿತ್ರದಲ್ಲಿ ವಿಜಯ್ ಸೇತುಪತಿ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ವಿಜಯ್ ಸೇತುಪತಿ ಈಗಾಗಲೇ ದೇಶದ ಪ್ರಮುಖ ಸ್ಟಾರ್ ನಟರ ಎದುರು (Ramcharan upcoming project) ಖಳನಾಗಿ ಅಬ್ಬರಿಸಿದ್ದಾರೆ. ದಳಪತಿ ವಿಜಯ್‌ನಿಂದ ಶಾರುಖ್ ಖಾನ್, ಕಮಲ್ ಹಾಸನ್, ರಜನಿಕಾಂತ್ ಈ ಎಲ್ಲಾ ಸೂಪರ್‌ಸ್ಟಾರ್‌ಗಳ ಜತೆಗೆ ಕೆಲಸ ಮಾಡಿದ್ದಾರೆ.

ಟಾಲಿವುಡ್‌ನಲ್ಲಿ ಹರಿದಾಡುತ್ತಿರುವ ವರದಿಗಳ ಪ್ರಕಾರ ನಾಯಕ ಮತ್ತು ಖಳನಾಯಕರಾಗಿ ರಾಮ್ ಚರಣ್ ಮತ್ತು ವಿಜಯ್ ಸೇತುಪತಿ ಅವರನ್ನು ನೋಡುವುದು ಸಕತ್ ಅನುಭವವೆ ಆಗಿದೆ. ಈ ಹೊಸ ಸಿನಿಮಾದ ಮತ್ತೊಂದು ಮಾಹಿತಿ ಎಂದರೆ ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುವ ನಿರೀಕ್ಷೆ ಇದೆ. ಸಿನಿಮಾಗೆ ಘಟಾನುಘಟಿಗಳ ದಂಡು ಒಂದಾಗುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುತ್ತಿದೆ.

Continue Reading

South Cinema

Rashmika Mandanna: ಅನಿಮಲ್‌ನಲ್ಲಿ ಮಿತಿ ಮೀರಿದ ರಶ್ಮಿಕಾ ಬೋಲ್ಡ್‌ನೆಸ್‌; ಡೀಪ್ ಫೇಕ್‌ ಅನ್ನೋದಲ್ಲ ಎಂದು ಟ್ರೋಲ್‌!

Rashmika Mandanna: ರಶ್ಮಿಕಾ ಮಂದಣ್ಣ ಅವರು ಸಖತ್ ಬೋಲ್ಡ್ ಆಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಕೆಲ ಪ್ರಮುಖ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿವೆ. ಅಷ್ಟೇ ಅಲ್ಲ ನಟಿ ಟ್ರೋಲ್‌ಗೆ ಗುರಿಯಾಗಿದ್ದಾರೆ.

VISTARANEWS.COM


on

Rashmika Mandanna On Innerwear Animal Movie Scene
Koo

ಬೆಂಗಳೂರು: ಅನಿಮಲ್ (Rashmika Mandanna) ಡಿಸೆಂಬರ್ 1ರ ಶುಕ್ರವಾರದಂದು ದೇಶಾದ್ಯಂತ ಬಿಡುಗಡೆಯಾಗಿದೆ. ಬಿಡುಗಡೆಯಾದ ಮೊದಲನ ದಿನವೇ ಸಖತ್‌ ಕಲೆಕ್ಷನ್‌ ಮಾಡಿದೆ ಚಿತ್ರತಂಡ. ಆದರೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಚರ್ಚೆಯಲ್ಲಿರುವುದು ರಶ್ಮಿಕಾ ಮಂದಣ್ಣ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸಿನಿಮಾದಲ್ಲಿ ಸಾಕಷ್ಟು ಬೋಲ್ಡ್ ದೃಶ್ಯಗಳು ಇರುತ್ತವೆ. ರಶ್ಮಿಕಾ ಮಂದಣ್ಣ ಅವರು ಸಖತ್ ಬೋಲ್ಡ್ ಆಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಕೆಲ ಪ್ರಮುಖ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿವೆ. ಅಷ್ಟೇ ಅಲ್ಲ ನಟಿ ಟ್ರೋಲ್‌ಗೆ ಗುರಿಯಾಗಿದ್ದಾರೆ.

‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಅವರು ರಣಬಿರ್ ಕಪೂರ್ ಅವರ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಪತಿಯ ಎದುರು ಬಟ್ಟೆ ಬಿಚ್ಚಿ ನಿಂತಿದ್ದಾರೆ. ಈ ವಾರದ ಆರಂಭದಲ್ಲಿ, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ಎ ಪ್ರಮಾಣಪತ್ರವನ್ನು ಸಿನಿಮಾಗೆ ನೀಡಿತ್ತು. ಕೆಲವು ಬದಲಾವಣೆಗಳನ್ನು ಮಾಡಲು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರಿಗೆ ಸೂಚಿಸಿತ್ತು ಎಂದು ವರಿಯಾಗಿದೆ. ಅದರಲ್ಲಿಯೂ ಇಂಟಿಮೇಟ್ ದೃಶ್ಯಗಳನ್ನು ಕಡಿಮೆ ಮಾಡಬೇಕು ಎಂದು ಹೇಳಿತ್ತು ಎನ್ನಲಾಗಿದೆ.

ಸಿನಿಮಾ ಪ್ರೇಕ್ಷಕರಿಂದ ಅಪಾರ ಪ್ರೀತಿಯನ್ನು ಪಡೆಯುತ್ತಿದೆ. ಬಿಡುಗಡೆಯಾದಾಗಿನಿಂದ ಬಾಕ್ಸ್ ಆಫೀಸ್‌ನಲ್ಲಿ ಹಲವು ದಾಖಲೆಗಳನ್ನು ಮುರಿಯುತ್ತಿದೆ. ಅಂದಹಾಗೆ, ಚಿತ್ರ ಬಿಡುಗಡೆಯಾಗುತ್ತಿದ್ದಂತೆ ಸಿನಿಮಾ ಎರಡನೇ ಭಾಗದಲ್ಲಿ ಬರಲಿದೆ ಎಂಬ ವದಂತಿಗಳು ಶುರುವಾಗಿವೆ. ಅಭಿಮಾನಿಗಳು ಈ ಬಗ್ಗೆ ಪೋಸ್ಟ್‌ ಹಾಕಿಕೊಂಡಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ ಆಗಿದೆ.ಸಿನಿಮಾ ಆರಂಭಿಕ ಅಂದಾಜಿನ ಪ್ರಕಾರ ಭಾರತದಲ್ಲಿ ಒಟ್ಟೂ ಎಲ್ಲಾ ಭಾಷೆಗಳಲ್ಲಿ 61 ಕೋಟಿ ರೂಪಾಯಿ ಗಳಿಸಿದೆ. ಹಿಂದಿ ಬೆಲ್ಟ್‌ಗಳಲ್ಲಿ 50.50 ಕೋಟಿ ರೂ. ಕಲೆಕ್ಷನ್ ಮಾಡಿದ್ದರೆ, ಚಿತ್ರದ ತೆಲುಗು ಆವೃತ್ತಿಯೂ 10 ಕೋಟಿ ರೂ. ಗಳಿಸಿದೆ. ಇದರೊಂದಿಗೆ ಅನಿಮಲ್ ಸಿನಿಮಾ ಮೂಲಕ ರಣಬೀರ್ ಕಪೂರ್ ಮತ್ತೊಮ್ಮೆ ದೊಡ್ಡ ಓಪನರ್ ಆಗಿ ಹೊರಹೊಮ್ಮಿದ್ದಾರೆ. ಬ್ರಹ್ಮಾಸ್ತ್ರ ಮೊದಲ ಭಾಗದ ಮೊದಲನೇ ದಿನ ಆರಂಭಿಕ ದಿನದಲ್ಲಿ 36 ಕೋಟಿ ಗಳಿಸಿತ್ತು.

ಇದನ್ನೂ ಓದಿ: Rashmika Mandanna: ರಶ್ಮಿಕಾ- ವಿಜಯ್‌ ಟ್ವಿನ್ನಿಂಗ್‌; ತೆಲಂಗಾಣ ಎಲೆಕ್ಷನ್‌ನಲ್ಲಿ ಸಿಕ್ಕಿಬಿದ್ದ ನಟ!

ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಕೂಡ ನಾಯಕಿಯಾಗಿದ್ದಾರೆ. ಬಾಲಿವುಡ್‌ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ರಣಬೀರ್ ಕಪೂರ್‌ ನಟನೆಯ ಅನಿಮಲ್‌ ಕೂಡ ಒಂದು. ಇತ್ತೀಚೆಗೆ ಈ ಸಿನಿಮಾದ ಟೀಸರ್‌ ಬಿಡುಗಡೆಯಾಗಿ ಭಾರಿ ಸದ್ದು ಮಾಡಿತ್ತು. ಜತೆಗೆ ನಟಿ ರಶ್ಮಿಕಾ ಮಂದಣ್ಣ ಕ್ಯಾರೆಕ್ಟರ್‌ ಪೋಸ್ಟರ್‌ ಕೂಡ ರಿಲೀಸ್‌ ಆಗಿತ್ತು. ತೆಲುಗಿನ ʼಅರ್ಜುನ್‌ ರೆಡ್ಡಿʼ, ಹಿಂದಿಯ ʼಕಬೀರ್‌ ಸಿಂಗ್‌ʼ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ ಗೆದ್ದ ಸಂದೀಪ್‌ ರೆಡ್ಡಿ ನಿರ್ದೇಶನವಿದೆ. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿದೆ.

Continue Reading

South Cinema

Kavya Gowda: ʻಮೀರಾ ಮಾಧವʼ ಧಾರಾವಾಹಿ ಖ್ಯಾತಿಯ ಕಾವ್ಯ ಗೌಡ ಬೇಬಿ ಬಂಪ್‌ ಫೋಟೊಗಳು ವೈರಲ್‌!

Kavya Gowda: 2024ರಲ್ಲಿ ಮಗು ಜನಿಸಲಿದೆ ಎಂದು ಕಾವ್ಯ ಗೌಡ ಅವರು ಹೇಳಿಕೊಂಡಿದ್ದಾರೆ. ಬೇಬಿ ಬಂಪ್‌ ಫೋಟೊಗಳನ್ನು ನಟಿ ಹಂಚಿಕೊಂಡಿದ್ದು, ಅವರ ಫ್ಯಾನ್ಸ್‌ ಶುಭ ಹಾರೈಸುತ್ತಿದ್ದಾರೆ.

VISTARANEWS.COM


on

Kavya Gowda of Meera Madhav serial fame baby bump photos are viral
Koo
Kavya Gowda

ರಾಧಾ ರಮಣ (Radha Ramana), ಮೀರಾ ಮಾಧವ, ಶುಭವಿವಾಹ ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದ ನಟಿ ಕಾವ್ಯ ಗೌಡ ಆ್ಯನಿವರ್ಸರಿ ದಿನವೇ ಅಭಿಮಾನಿಗಳ ಜತೆ ಗುಡ್​ನ್ಯೂಸ್ ಹಂಚಿಕೊಂಡಿದ್ದಾರೆ.

Kavya Gowda

2024ರಲ್ಲಿ ಮಗು ಜನಿಸಲಿದೆ ಎಂದು ಕಾವ್ಯ ಗೌಡ ಅವರು ಹೇಳಿಕೊಂಡಿದ್ದಾರೆ. ಬೇಬಿ ಬಂಪ್‌ ಫೋಟೊಗಳನ್ನು ನಟಿ ಹಂಚಿಕೊಂಡಿದ್ದು, ಅವರ ಫ್ಯಾನ್ಸ್‌ ಶುಭ ಹಾರೈಸುತ್ತಿದ್ದಾರೆ.

Kavya Gowda

ಕಾವ್ಯ ಹಾಗೂ ಸೋಮಶೇಖರ್ ಅವರು 2021ರ ಡಿಸೆಂಬರ್ 2ರಂದು ಮದುವೆ ಆದರು. ಮದುವೆಯ ನಂತರ ನಟನೆಯಿಂದ ಬ್ರೇಕ್ ತೆಗೆದುಕೊಂಡು ಜ್ಯುವೆಲ್ಲರಿ ಡಿಸೈನರ್ ಆಗಿ ಕಾವ್ಯ ಗುರುತಿಸಿಕೊಂಡಿದ್ದಾರೆ.

Kavya Gowda

‘ರಾಧಾ ರಮಣ’ ಧಾರಾವಾಹಿಯಲ್ಲಿ ರಾಧಾ ಆಗಿ ಕಾಣಿಸಿಕೊಂಡರು. ‘ಗಾಂಧಾರಿ’ ಧಾರಾವಾಹಿಯಲ್ಲೂ ಕಾವ್ಯ ಗೌಡ ಬಣ್ಣ ಹಚ್ಚಿದ್ದಾರೆ.ಕಿರುತೆರೆ ಅಲ್ಲದೇ ನಟಿ ʻಬಕಾಸುರʼ ಸಿನಿಮಾದಲ್ಲಿಯೂ ಬಣ್ಣ ಹಚ್ಚಿದ್ದರು. 

Kavya Gowda

ಇದೀಗ ನಟಿಯ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

Continue Reading

South Cinema

Salaar Trailer: ʻಸಲಾರ್ʼ ಟ್ರೈಲರ್‌ ಔಟ್‌ ಆದ್ರೂ ಟ್ರೆಂಡಿಂಗ್‌ನಲ್ಲಿ ಉಗ್ರಂ, ಕೆಜಿಎಫ್‌! ಏನಂತಿದ್ದಾರೆ ನೆಟ್ಟಿಗರು?

Salaar Trailer: ‘ಆದಿಪುರುಷ್’ ಹೀನಾಯ ಸೋಲು ಕಂಡ ಬಳಿಕ ‘ಸಲಾರ್’ ಮೇಲೆ ನಿರೀಕ್ಷೆ ಇಟ್ಟಿಕೊಂಡಿದ್ದವರಿಗೆ ಕೊನೆಗೂ ಟ್ರೈಲರ್ ನೋಡುವುದಕ್ಕೆ ಸಿಕ್ಕಿದೆ. ಜತೆಗೆ ಮಾಲಿವುಡ್‌ ಸ್ಟಾರ್‌ ಪೃಥ್ವಿರಾಜ್‌ ಸುಕುಮಾರನ್‌ ಕೂಡ ಮಿಂಚು ಹರಿಸಿದ್ದಾರೆ.

VISTARANEWS.COM


on

prashanth neel, Prabhas
Koo

ಬೆಂಗಳೂರು: ಈ ವರ್ಷದ ಬಹು ನಿರೀಕ್ಷಿತ ಚಿತ್ರ ಸಲಾರ್: ಭಾಗ 1-ಸೀಸ್‌ಫೈರ್‌ (Salaar: Part 1 – Ceasefire)ನ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಕೆಜಿಎಫ್‌ (KGF) ಸರಣಿ ಚಿತ್ರಗಳ ಮೂಲಕ ದೇಶದ ಗಮನ ಸೆಳೆದ ಪ್ರಶಾಂತ್‌ ನೀಲ್‌ (Prashanth Neel) ನಿರ್ದೇಶನದ ಈ ಪ್ಯಾನ್‌ ಇಂಡಿಯಾ ಚಿತ್ರಕ್ಕಾಗಿ ಕೋಟ್ಯಂತರ ಅಭಿಮಾನಿಗಳು ತುದಿಗಾಲಿನಲ್ಲಿ ಕಾದು ನಿಂತಿದ್ದಾರೆ. ಅದಕ್ಕೆ ತಕ್ಕಂತೆ ಟ್ರೈಲರ್‌ ಮೂಡಿ ಬಂದಿದ್ದು, ನಿರೀಕ್ಷೆ ಹೆಚ್ಚಿಸಿದೆ. ‘ಆದಿಪುರುಷ್’ ಹೀನಾಯ ಸೋಲು ಕಂಡ ಬಳಿಕ ‘ಸಲಾರ್’ ಮೇಲೆ ನಿರೀಕ್ಷೆ ಇಟ್ಟಿಕೊಂಡಿದ್ದವರಿಗೆ ಕೊನೆಗೂ ಟ್ರೈಲರ್ ನೋಡುವುದಕ್ಕೆ ಸಿಕ್ಕಿದೆ.

ʻʻರಕ್ತಸಿಕ್ತವಾಗಿತ್ತು ಟ್ರೈಲರ್‌. ಪ್ರಭಾಸ್ ಈ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಲೈವ್ಲಿಯಾಗಿ, ವಾಸ್ತವಕ್ಕೆ ಹತ್ತಿರವಿದ್ದಂತೆ ಕಾಣುತ್ತಾರೆ. ಪ್ರಶಾಂತ್ ನೀಲ್ ಕಟ್ಟುತ್ತಿರುವ ಪ್ರಪಂಚ ಮತ್ತಷ್ಟು ಕುತೂಹಲಕಾರಿಯಾಗಿದೆʼʼ ಎಂದು ಒಬ್ಬರು ಟ್ವೀಟ್‌ ಮಾಡಿದ್ದಾರೆ.

ಸಲಾರ್‌ ದೃಶ್ಯಗಳು ಹಾಲಿವುಡ್ ಮಾರ್ಕ್‌ನಷ್ಟಿದ್ದವು. ಪ್ರಭಾಸ್ ಅಂತೂ ಸೂಪರ್‌. ಸಿನಿಮಾ ಹಿಟ್ ಆಗಲಿʼʼ ಎಂದು ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Salaar Trailer: ಸಲಾರ್ ಟ್ರೈಲರ್ ಔಟ್, ಹೊಸ ಪ್ರಪಂಚದ ಝಲಕ್‌ ತೆರೆದಿಟ್ಟ ಪ್ರಶಾಂತ್‌ ನೀಲ್‌

ʻʻಪ್ರಶಾಂತ್‌ ನೀಲ್ ಆಕ್ಷನ್ ಹಾಗೂ ನಿರ್ದೇಶನದ ಬಗ್ಗೆ ಯಾರೂ ಏನೂ ಹೇಳುವುದಕ್ಕೆ ಆಗುವುದಿಲ್ಲ. ಫಸ್ಟ್‌ ಡೇ ಫಸ್ಟ್ ಶೋ ಟಿಕೆಟ್ ಬುಕ್ ಮಾಡಿದ್ದೇನೆʼʼ ಎಂದು ಇನ್ನೊಬ್ಬರು ಟ್ವೀಟ್‌ ಮಾಡಿದ್ದಾರೆ.

ಸಲಾರ್ ಟ್ರೇಲರ್ ಡೀಸೆಂಟ್‌ ಆಗಿದೆ .ಪ್ರಶಾಂತ್ ನೀಲ್ ಅವರ ಅಭಿಮಾನಿಯಾಗಿ ಇನ್ನೂ ಹೆಚ್ಚಿನದನ್ನು ನಿರೀಕ್ಷಿಸಿದ್ದೆ. ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರ್ ಚೆನ್ನಾಗಿ ಕಾಣಿಸುತ್ತಾರೆ. ಆದರೆ, ಕೆಜಿಎಫ್ ಹಾಗೂ ರಾಕಿಭಾಯ್ ಹ್ಯಾಂಗೋವರ್‌ನಲ್ಲಿದ್ದಾರೆ ಅನಿಸುತ್ತೆ. ಸಿನಿಮಾದ ಮೇಕಿಂಗ್ ಸ್ಕೇಲ್, ಹಿನ್ನೆಲೆ ಸಂಗೀತ, ಆಕ್ಷನ್ ಪ್ರಿಯರಿಗಾಗಿ ಇರುವ ಸೀಕ್ವೆನ್ಸ್.. ನಾನು ಆಗಲೇ ಹೇಳಿದ ಹಾಗೆ ಎಲ್ಲೋ ನೋಡಿದಂತೆ ಭಾಸವಾಗುತ್ತವೆ ಎಂದು ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

ಟಾಲಿವುಡ್‌ ಸೂಪರ್‌ ಸ್ಟಾರ್‌ ಪ್ರಭಾಸ್‌ ಈ ಚಿತ್ರದಲ್ಲಿ ಅಬ್ಬರಿಸಿರುವುದು ಟ್ರೈಲರ್‌ ಮೂಲಕ ಕಂಡು ಬಂದಿದೆ. ಜತೆಗೆ ಮಾಲಿವುಡ್‌ ಸ್ಟಾರ್‌ ಪೃಥ್ವಿರಾಜ್‌ ಸುಕುಮಾರನ್‌ ಕೂಡ ಮಿಂಚು ಹರಿಸಿದ್ದಾರೆ. ರವಿ ಬಸ್ರೂರ್‌ ಸಂಗೀತ ಮತ್ತೊಮ್ಮೆ ಮ್ಯಾಜಿಕ್‌ ಮಾಡಿದೆ. ಛಾಯಾಗ್ರಾಹಕ ಭವನ್‌ ಗೌಡ್‌ ‘ಸಲಾರ್‌’ನ ಬೇರೆಯದೇ ಪ್ರಪಂಚವನ್ನು ಕಟ್ಟಿಕೊಟ್ಟಿದ್ದಾರೆ. ಖಾನ್‌ಸಾರ್‌ ಸಾಮ್ರಾಜ್ಯದಲ್ಲಿ ಕಥೆ ನಡೆಯಲಿದೆ.

ಇತ್ತೀಚೆಗೆ ಚಿತ್ರದ ಬಗ್ಗೆ ಮಾತನಾಡಿದ್ದ ಪ್ರಶಾಂತ್‌ ನೀಲ್‌ ಸಲಾರ್‌ ಚಿತ್ರದಲ್ಲಿ ಸ್ನೇಹವೇ ಪ್ರಮುಖ ತಿರುಳು ಎಂದಿದ್ದರು. ʼʼಇದು ಸ್ನೇಹಿತರಿಬ್ಬರು ಶತ್ರುಗಳಾಗುವ ಕಥೆಯನ್ನು ಒಳಗೊಂಡಿದೆ. ಸ್ನೇಹವೇ ʼಸಲಾರ್‌ʼನ ಪ್ರಮುಖ ಭಾವನೆ. ಡಿಸೆಂಬರ್‌ 1ರಂದು ಬಿಡುಗಡೆಯಾಗುವ ಟ್ರೈಲರ್‌ನಲ್ಲಿ ʼಸಲಾರ್‌ʼ ಪ್ರಪಂಚದ ಚಿಕ್ಕ ಪರಿಚಯ ನಿಮಗಾಗಲಿದೆʼʼ ಎಂದು ಸುಳಿವು ನೀಡಿ ಕುತೂಹಲ ಹೆಚ್ಚಿಸಿದ್ದರು.

“ಸಲಾರ್‌ನಿಂದ ಪ್ರೇಕ್ಷಕರು ಮತ್ತೊಂದು ʼಕೆಜಿಎಫ್ʼ ಅನ್ನು ನಿರೀಕ್ಷಿಸಬಾರದು. ಯಾಕೆಂದರೆ ʼಸಲಾರ್ʼ ತನ್ನದೇ ಆದ ಜಗತ್ತು, ಅದಕ್ಕೆ ತನ್ನದೇ ಆದ ಭಾವನೆ ಮತ್ತು ಪಾತ್ರಗಳಿವೆ. ʼಸಲಾರ್‌ʼನ ಮೊದಲ ದೃಶ್ಯದಿಂದಲೇ ನಾವು ಬೇರೆಯದೇ ಪ್ರಪಂಚಕ್ಕೆ ಕೊಂಡೊಯ್ಯಲಿದ್ದೇವೆʼʼ ಎಂದು ಪ್ರಶಾಂತ್‌ ನೀಲ್‌ ಈ ಹಿಂದಿನ ಸಂದರ್ಶನದಲ್ಲಿ ತಿಳಿಸಿದ್ದರು. ʼʼಸಲಾರ್‌ʼನ ಕಥೆಯನ್ನು ಸುಮಾರು 6 ಗಂಟೆಗಳ ಚಲನಚಿತ್ರವನ್ನಾಗಿಸಬಹುದು. ಅದಕ್ಕಾಗಿ ಎರಡು ಪಾರ್ಟ್‌ ಮಾಡಿದ್ದೇನೆʼʼ ಎಂದು ಅವರು ಹೇಳಿದ್ದರು.

ʼಕೆಜಿಎಫ್‌ʼ ಸರಣಿ ಚಿತ್ರಗಳನ್ನು ನಿರ್ಮಿಸಿದ್ದ ಫಿಲ್ಮ್ಸ್‌ ನ ವಿಜಯ್‌ ಕಿರಂಗದೂರು ಈ ಚಿತ್ರಕ್ಕೂ ಬಂಡವಾಳ ಹೂಡಿದ್ದಾರೆ. ತೆಲುಗು ಮಾತ್ರವಲ್ಲದೆ ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲೂ ಈ ಚಿತ್ರ ತೆರೆಕಾಣಲಿದೆ. ಶ್ರುತಿ ಹಾಸನ್‌, ಜಗಪತಿ ಬಾಬು ಮತ್ತಿತರರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Salaar Movie: ದೀಪಾವಳಿಗೆ ಡಬಲ್‌ ಗುಡ್‌ನ್ಯೂಸ್‌ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್‌!

2014ರಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ತೆರೆಕಂಡ ಮುರಳಿ-ಹರಿಪ್ರಿಯಾ ಅಭಿನಯದ ʼಉಗ್ರಂʼ ಚಿತ್ರ ನಿರ್ದೇಶನದ ಮೂಲಕ ಪ್ರಶಾಂತ್‌ ನೀಲ್‌ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್‌ ಮಾಡುವ ಜತೆಗೆ ವಿಮರ್ಶಕರ ಮೆಚ್ಚುಗೆಯೂ ಗಳಿಸಿತ್ತು. ಬಳಿಕ ಅವರು ರಾಕಿಂಗ್‌ ಸ್ಟಾರ್‌ ಯಶ್‌ ಜತೆ ʼಕೆಜಿಎಫ್‌ʼ ಚಿತ್ರ ಮಾಡುವ ಮೂಲಕ ತೆರೆ ಮೇಲೆ ಮ್ಯಾಜಿಕ್‌ ಸೃಷ್ಟಿಸಿದ್ದರು. ʼಉಗ್ರಂʼ ಚಿತ್ರ ಕೂಡ ಸ್ನೇಹಿತರಿಬ್ಬರ ಕಥೆಯನ್ನೊಳಗೊಂಡಿತ್ತು. ಇತ್ತ ʼಕೆಜಿಎಫ್‌ʼನಲ್ಲಿ ತಾಯಿ-ಮಗನ ಸೆಂಟಿಮೆಂಟ್‌ ಗಮನ ಸೆಳೆದಿತ್ತು. ʼಸಲಾರ್‌ ಪಾರ್ಟ್‌ 1ʼ ಡಿಸೆಂಬರ್‌ 22ರಂದು ವಿಶ್ವಾದ್ಯಂತ ತೆರೆ ಕಾಣಲಿದ್ದು, ದಾಖಲೆಯ ಕಲೆಕ್ಷನ್‌ ಮಾಡುವ ನಿರೀಕ್ಷೆ ಇದೆ.


Continue Reading
Advertisement
Police call off protest FIR against lawyer who slapped police
ಕರ್ನಾಟಕ11 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ13 mins ago

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Bobby Deol cries after paparazzi praise him as Animal
ಬಾಲಿವುಡ್16 mins ago

Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

R Ashok
ಕರ್ನಾಟಕ29 mins ago

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Snehit Gowda and Namratha Gowda
ಬಿಗ್ ಬಾಸ್43 mins ago

BBK SEASON 10: ನಮ್ರತಾ ಮೇಲೆ ಸ್ಟ್ರಾಂಗ್​ ಫೀಲಿಂಗ್ಸ್ ಇದೆ ಎಂದ ಸ್ನೇಹಿತ್‌!

Narendra Modi
ದೇಶ51 mins ago

Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

DK Shivakumar Telangana congress
ಕರ್ನಾಟಕ1 hour ago

Telangana Results 2023 : ತೆಲಂಗಾಣದಲ್ಲಿ ಗೆದ್ದ‌ ಕೈ ಶಾಸಕರೆಲ್ಲರೂ ಹೈದರಾಬಾದ್‌ಗೆ ಶಿಫ್ಟ್

MLA T.B.Jayachandra spoke at the inauguration program of the new Para Medical College at Shira
ತುಮಕೂರು1 hour ago

Tumkur News: ಪ್ಯಾರಾ ಮೆಡಿಕಲ್ ಓದಿದವರಿಗೆ ವಿಫುಲ ಅವಕಾಶ: ಶಾಸಕ ಟಿ.ಬಿ.ಜಯಚಂದ್ರ

Shivamogga News Arrest of the accused who went missing after raping a young woman at Ripponpet
ಕ್ರೈಂ1 hour ago

Shivamogga News: ರಿಪ್ಪನ್‌ಪೇಟೆ; ಅತ್ಯಾಚಾರ ಎಸಗಿ ನಾಪತ್ತೆಯಾಗಿದ್ದ ಆರೋಪಿ ಬಂಧನ

Tumkur News Students can succeed when they utilize opportunities in the right way says Dr. Suresh D S
ತುಮಕೂರು1 hour ago

Tumkur News: ವಿದ್ಯಾರ್ಥಿಗಳು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು: ಡಾ. ಸುರೇಶ್

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ11 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ7 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ19 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌