Site icon Vistara News

Mandya News: ಡಾ. ಬಾಬು ಜಗಜೀವನರಾಮ್ ಸಮಸಮಾಜದ ನಿರ್ಮಾಣಕ್ಕೆ ಹೋರಾಡಿದ ಮಹಾನ್ ಚೇತನ: ವೆಂಕಟರಮಣೇಗೌಡ

Former Deputy PM Dr Babu Jagajivan Ram 117th Jayanti Celebration

ಮದ್ದೂರು: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರು ದೇಶಕ್ಕೆ ನೀಡಿದ ಕೊಡುಗೆಗಳು ಅಪಾರ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ಸಾಗಬೇಕು. ಅವರ ಚಿಂತನೆಗಳನ್ನು ನಾವೆಲ್ಲಾ ಮೈಗೂಡಿಸಿಕೊಳ್ಳಬೇಕು ಎಂದು ಮಂಡ್ಯ (Mandya News) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ತಿಳಿಸಿದರು.

ಆತಗೂರಿನಲ್ಲಿ ಡಾ. ಬಾಬು ಜಗಜೀವನ ರಾಮ್ ಅವರ 117ನೇ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿ, ಡಾ. ಬಾಬು ಜಗಜೀವನ ರಾಮ್ ಅವರು ಸಮಸಮಾಜದ ನಿರ್ಮಾಣಕ್ಕೆ ಹೋರಾಡಿದ ಮಹಾನ್ ಚೇತನ ಎಂದು ಹೇಳಿದರು.

ಇದನ್ನೂ ಓದಿ: RBI News: ಚಿಲ್ಲರೆ ನೇರ ಹೂಡಿಕೆದಾರರಿಗೆ ಆರ್‌ಬಿಐನಿಂದ ಹೊಸ ಮೊಬೈಲ್‌ ಆ್ಯಪ್

ಮದ್ದೂರಿನಲ್ಲಿ ಮತಪ್ರಚಾರ

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಮದ್ದೂರು ವಿಧಾನಸಭಾ ಕ್ಷೇತ್ರದಾದ್ಯಂತ ಮತಪ್ರಚಾರ ನಡೆಸಿದರು.

ಗೊಲ್ಲರದೊಡ್ಡಿಯ ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದರು. ಮಲ್ಲನಕುಪ್ಪೆ, ಹೂತಗೆರೆ, ಕೆಸ್ತೂರು, ಆತಗೂರು, ಕದಲೂರು ಸೇರಿದಂತೆ ನಾನಾ ಗ್ರಾಮಪಂಚಾಯಿತಿಗಳಲ್ಲಿ ರೋಡ್ ಷೋ ನಡೆಸಿ, ಮತಯಾಚಿಸಿದರು.

ಇದನ್ನೂ ಓದಿ: Fire Accident : ಬೆಂಗಳೂರಿನ ಆರ್‌ಟಿ ನಗರದಲ್ಲಿ ಅಗ್ನಿ ಅವಘಡ; ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ

ಈ ವೇಳೆ ಮದ್ದೂರು ಶಾಸಕ ಉದಯ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಸೇರಿದಂತೆ ಹಲವು ಮುಖಂಡರು ಇದ್ದರು.

Exit mobile version