Modi in Karnataka: ದಶಪಥ ಹೆದ್ದಾರಿ ಲೋಕಾರ್ಪಣೆ ಹಿನ್ನೆಲೆಯಲ್ಲಿ ರಸ್ತೆ ಸಂಚಾರದಲ್ಲಿ ಆಗಿರುವ ಬದಲಾವಣೆಗಳೇನು? - Vistara News

ಪ್ರಮುಖ ಸುದ್ದಿ

Modi in Karnataka: ದಶಪಥ ಹೆದ್ದಾರಿ ಲೋಕಾರ್ಪಣೆ ಹಿನ್ನೆಲೆಯಲ್ಲಿ ರಸ್ತೆ ಸಂಚಾರದಲ್ಲಿ ಆಗಿರುವ ಬದಲಾವಣೆಗಳೇನು?

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆಗಳಾಗಿದೆ. (Modi in Karnataka) ಆದ್ದರಿಂದ ಪ್ರಯಾಣಿಕರು ಗಮನಿಸುವುದು ಸೂಕ್ತ. ವಿವರ ಇಲ್ಲಿದೆ.

VISTARANEWS.COM


on

road
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಲೋಕಾರ್ಪಣೆ ಸಲುವಾಗಿ ಪ್ರಧಾನ ಮಂತ್ರಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 7 ಗಂಟೆಯಿಂದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. (Modi in Karnataka) ಅಗತ್ಯಸೇವೆ ಮತ್ತು ಹಾಲಿನ ವಾಹನಗಳಿಗೆ ಮಾತ್ರ ಬೆಳಿಗ್ಗೆ 9 ಗಂಟೆಯವರೆಗೆ ಸರ್ವೀಸ್ ರಸ್ತೆಯಲ್ಲಿ ತೆರಳಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹಳೆ ಬೆಂಗಳೂರು – ಮೈಸೂರು ಹೆದ್ದಾರಿಯನ್ನು ಪೊಲೀಸರು ಐಬಿ ಸರ್ಕಲ್ ಬಳಿ ಬ್ಯಾರಿಕೇಡ್ ಹಾಕಿ ಬಂದ್‌ ಮಾಡಿದ್ದಾರೆ. ಐಬಿ ಸರ್ಕಲ್ ಮೂಲಕ ಮಂಡ್ಯ ನಗರಕ್ಕೆ ಮೋದಿಯವರು ಪ್ರವೇಶಿಸಲಿದ್ದಾರೆ. ಸ್ಥಳದಲ್ಲಿ ಎಸ್ಪಿಪಿಜಿ ಅಧಿಕಾರಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯ ಎರಡು ಕಡೆ ಮರ , ಕಾಂಪೌಂಡ್ , ಮನೆಗಳ ಸಾರ್ವಜನಿಕರು ನಿಲ್ಲಲು ಅವಕಾಶ ಇರುವುದಿಲ್ಲ.

ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಕಾಲೋನಿಯ ಬಳಿ ನಡೆಯುವ ಮಾನ್ಯ ಪ್ರದಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ ಈ ಕೆಳಕಂಡಂತೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಮಳವಳ್ಳಿ ಕಡೆಯಿಂದ ಬರುವ ವಾಹನಗಳು ಕೆ.ಎಂ.ದೊಡ್ಡಿ-ಹುಣ್ಣನದೊಡ್ಡಿ, ಬೋರಾಪರ ಗೇಟ್ ಮಾರ್ಗವಾಗಿ ಮದ್ದೂರಿಗೆ 04 ಕಿಲೋ ಮೀಟರ್ ಹಿಂದಕ್ಕೆ ಎಡಗಡೆ ಕುದುರುಗುಂಡಿ ಕಾಲೋನಿಗೆ ಹೋಗುವ ಮಾರ್ಗದಲ್ಲಿ ಹೋಗಿ ಪಾರ್ಕಿಂಗ್ ಸ್ಥಳಕ್ಕೆ ತೆರಳುವುದು.

ಮದ್ದೂರು ಮತ್ತು ಸುತ್ತಮುತ್ತಲ ಕಡೆಯಿಂದ ತೆರಳುವ ವಾಹನಗಳು, ಮದ್ದೂರು- ಐ.ಬಿ.ವೃತ್ತ- ಮಳವಳ್ಳಿ
ರಸ್ತೆಯಿಂದ ಸುಮಾರು 04 ಕಿ.ಮೀ ಮುಂದಕ್ಕೆ ಹೋಗಿ ಬಲಗಡೆಗೆ ಕುದುರುಗುಂಡಿ ಕಾಲೋನಿಗೆ ಹೋಗುವ ಮಾರ್ಗದಲ್ಲಿ ಹೋಗಿ ಪಾರ್ಕಿಂಗ್ ಸ್ಥಳಕ್ಕೆ ತೆರಳುವುದು.

ಗೆಜ್ಜಲಗೆರೆ ಸುತ್ತಮುತ್ತಲ ಗ್ರಾಮಗಳಿಂದ ತೆರಳುವವರು ಗೆಜ್ಜಲಗೆರೆ ಅಂಡರ್‍ಪಾಸ್‍ನಿಂದ ಕುದುರುಗುಂಡಿ ಗ್ರಾಮ, ಸಾದೋಳಲು ಕುದುರುಗುಂಡಿ ಕಾಲೋನಿ ಮಾರ್ಗವಾಗಿ ಪಾರ್ಕಿಂಗ್ ಜಾಗಕ್ಕೆ ತೆರಳುವುದು

ಮಂಡ್ಯ ಕಡೆಯಿಂದ ಬರುವ ವಾಹನಗಳು ಹನಕೆರೆ ಸರ್ವೀಸ್ ರೋಡ್‍ನಿಂದ ಗೆಜ್ಜಲಗೆರೆ ಗ್ರಾಮದ ಬಳಿಬಂದು ಗೆಜ್ಜಲಗೆರೆ ಅಂಡರ್‍ಪಾಸ್‍ನಿಂದ ಕುದುರುಗುಂಡಿ ಗ್ರಾಮ, ಸಾದೋಳಲು ಕುದುರುಗುಂಡಿ ಕಾಲೋನಿ ಮಾರ್ಗವಾಗಿ ಪಾರ್ಕಿಂಗ್ ಜಾಗಕ್ಕೆ ತೆರಳುವುದು. ಸಾರ್ವಜನಿಕರು ಸಹಕರಿಸಬೇಕೆಂದು ಮಂಡ್ಯ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Bismah Maroof : ಹೆಣ್ಣು ಮಗುವಿನ ಸಮೇತ ಆಡಲು ಹೋಗುತ್ತಿದ್ದ ಪಾಕಿಸ್ತಾನದ ಮಹಿಳಾ ಕ್ರಿಕೆಟರ್ ನಿವೃತ್ತಿ

Bismah Maroof : ಬಿಸ್ಮಾ 136 ಏಕದಿನ ಪಂದ್ಯಗಳಲ್ಲಿ 29.55 ಸರಾಸರಿಯಲ್ಲಿ 3369 ರನ್ ಗಳಿಸಿದ್ದಾರೆ, 21 ಅರ್ಧಶತಕಗಳು ಮತ್ತು 99 ಗರಿಷ್ಠ ಸ್ಕೋರ್. 140 ಟಿ20 ಪಂದ್ಯಗಳಲ್ಲಿ 27.55ರ ಸರಾಸರಿಯಲ್ಲಿ 12 ಅರ್ಧಶತಕಗಳು ಸೇರಿದಂತೆ 2893 ರನ್ ಗಳಿಸಿದ್ದಾರೆ. ಅವರು 96 ಪಂದ್ಯಗಳು, 62 ಟಿ 20 ಮತ್ತು 34 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು 32 ಏಕದಿನ ಪಂದ್ಯಗಳಲ್ಲಿ 16 ಗೆಲುವು ಮತ್ತು 27 ಟಿ 20 ಐ ಗೆಲುವುಗಳಿಗೆ ತಂಡವನ್ನು ಮುನ್ನಡೆಸಿದ್ದಾರೆ.

VISTARANEWS.COM


on

Bismah Maroof
Koo

ಇಸ್ಲಾಮಾಬಾದ್​​: ಪಾಕಿಸ್ತಾನ ಮಹಿಳಾ ಕ್ರಿಕೆಟ್​​ ತಂಡದ ಅತ್ಯಂತ ಪ್ರತಿಭಾವಂತರಲ್ಲಿ ಒಬ್ಬರಾಗಿದ್ದ ಬಿಸ್ಮಾ ಮರೂಫ್ 17 ವರ್ಷಗಳ ವೃತ್ತಿಜೀವನದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಏಕದಿನ ಮತ್ತು ಟಿ 20 ಪಂದ್ಯಗಳಲ್ಲಿ ಪಾಕಿಸ್ತಾನದ ಪ್ರಮುಖ ರನ್ ಸ್ಕೋರರ್ ಆಗಿ ಮರೂಫ್ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ. ಮದುವೆಯಾಗಿ ಪುಟಾಣಿ ಮಗು ಇದ್ದ ಹೊರತಾಗಿಯೂ ಕ್ರಿಕೆಟ್​ ಆಟವನ್ನು ಮುಂದುವರಿಸಿದ್ದ ಅವರು ಪ್ರಶಂಸೆಗೆ ಪಾತ್ರರಾಗಿದ್ದರು. ಮಗುವಿನ ಸಮೇತವೇ ಅವರು ವಿದೇಶಗಳಿಗೆ ಆಡಲು ಹೋಗುವ ಮೂಲಕ ಜನಪ್ರಿಯತೆ ಗಳಿಸಿಕೊಂಡಿದ್ದರು.

ಮರೂಫ್ ಅವರ ಕ್ರಿಕೆಟ್ ಪ್ರಯಾಣವು 2006ರಲ್ಲಿ ಪ್ರಾರಂಭವಾಗಿದೆ. ಜೈಪುರದಲ್ಲಿ ಅವರು ಭಾರತ ತಂಡದ ವಿರುದ್ಧ ಪಾದಾರ್ಪಣೆ ಮಾಡಿದ್ದರು. ಅಂದಿನಿಂದ, ಅವರು ಕ್ರಿಕೆಟ್​ ಇತಿಹಾಸದ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಬಿಸ್ಮಾ 136 ಏಕದಿನ ಪಂದ್ಯಗಳಲ್ಲಿ 29.55 ಸರಾಸರಿಯಲ್ಲಿ 3369 ರನ್ ಗಳಿಸಿದ್ದಾರೆ, 21 ಅರ್ಧಶತಕಗಳು ಮತ್ತು 99 ಗರಿಷ್ಠ ಸ್ಕೋರ್. 140 ಟಿ20 ಪಂದ್ಯಗಳಲ್ಲಿ 27.55ರ ಸರಾಸರಿಯಲ್ಲಿ 12 ಅರ್ಧಶತಕಗಳು ಸೇರಿದಂತೆ 2893 ರನ್ ಗಳಿಸಿದ್ದಾರೆ. ಅವರು 96 ಪಂದ್ಯಗಳು, 62 ಟಿ 20 ಮತ್ತು 34 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು 32 ಏಕದಿನ ಪಂದ್ಯಗಳಲ್ಲಿ 16 ಗೆಲುವು ಮತ್ತು 27 ಟಿ 20 ಐ ಗೆಲುವುಗಳಿಗೆ ತಂಡವನ್ನು ಮುನ್ನಡೆಸಿದ್ದಾರೆ.

“ನಾನು ಹೆಚ್ಚು ಪ್ರೀತಿಸುವ ಆಟದಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಇದು ಸವಾಲುಗಳು, ಗೆಲುವುಗಳು ಮತ್ತು ಮರೆಯಲಾಗದ ನೆನಪುಗಳಿಂದ ತುಂಬಿದ ನಂಬಲಾಗದ ಪ್ರಯಾಣವಾಗಿದೆ. ಆರಂಭದಿಂದ ಇಂದಿನವರೆಗೆ ನನ್ನ ಕ್ರಿಕೆಟ್ ಪ್ರಯಾಣದುದ್ದಕ್ಕೂ ನನ್ನನ್ನು ಬೆಂಬಲಿಸಿದ ನನ್ನ ಕುಟುಂಬಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ, “ಎಂದು ಅವರು ಏಪ್ರಿಲ್ 26 ರಂದು ಪಿಸಿಬಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: IPL 2024 : ಸಾಯಿ ಕಿಶೋರ್ ನಿಂದನೆ; ರಸಿಕ್ ಸಲಾಂಗೆ ಪಾಠ ಕಲಿಸಿದ ಜಯ್​ ಶಾ

ತನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಮತ್ತು ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಪಿಸಿಬಿಗೆ ಧನ್ಯವಾದ ಅರ್ಪಿಸಿದ್ದಾರೆ. “ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಮತ್ತು ನನ್ನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನನ್ನ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ. ಪಿಸಿಬಿಯ ಬೆಂಬಲವು ಅಮೂಲ್ಯವಾಗಿದೆ, ವಿಶೇಷವಾಗಿ ನನಗಾಗಿ ಮೊದಲ ಪೋಷಕರ ನೀತಿಯನ್ನು ಜಾರಿಗೆ ತರುವಲ್ಲಿ, ಇದು ತಾಯಿಯಾಗಿರುವಾಗ ನನ್ನ ದೇಶವನ್ನು ಅತ್ಯುನ್ನತ ಮಟ್ಟದಲ್ಲಿ ಪ್ರತಿನಿಧಿಸಲು ನನಗೆ ಅನುವು ಮಾಡಿಕೊಟ್ಟಿತು.

“ಕೊನೆಯದಾಗಿ, ನನಗೆ ಕುಟುಂಬದಂತೆ ಆಗಿರುವ ನನ್ನ ಸಹ ಆಟಗಾರರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಮೈದಾನದ ಒಳಗೆ ಮತ್ತು ಹೊರಗೆ ನಾವು ಹಂಚಿಕೊಂಡ ಸ್ನೇಹವನ್ನು ನಾನು ಎಂದೆಂದಿಗೂ ನೆನಪಿಸಿಕೊಳ್ಳುತ್ತೇನೆ, “ಎಂದು ಅವರು ಹೇಳಿದರು.

ತವರಿನಲ್ಲಿ ವೆಸ್ಟ್ ಇಂಡೀಸ್ ಮಹಿಳಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅವರು ಕೊನೆಯ ಬಾರಿಗೆ ಕಾಣಿಸಿಕೊಂಡರು. ಆತಿಥೇಯ ಪಾಕಿಸ್ತಾನವು ಸರಣಿಯನ್ನು 0-3 ರಿಂದ ಕಳೆದುಕೊಂಡಿತು ಮತ್ತು ಮರೂಫ್ 91 ರನ್ ಗಳಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿದ್ದರು. ಏಪ್ರಿಲ್ 26 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಸರಣಿಗಾಗಿ ವೆಸ್ಟ್ ಇಂಡೀಸ್ ಮಹಿಳೆಯರ ವಿರುದ್ಧದ ಟಿ 20 ಐ ತಂಡದ ಭಾಗವಾಗಿದ್ದಾರೆ. ಆದರೆ ಅವರ ಇತ್ತೀಚಿನ ಪ್ರಕಟಣೆಯೊಂದಿಗೆ, ಅವರ ಲಭ್ಯತೆ ಪ್ರಶ್ನಾರ್ಹವಾಗಿದೆ.

Continue Reading

ಕರ್ನಾಟಕ

Lok Sabha Election: ನಾಳೆ ಮೊದಲ ಹಂತದ ಮತದಾನ; ಬೆಂಗಳೂರಿನಲ್ಲಿ ಏನಿರತ್ತೆ? ಏನಿರಲ್ಲ?

Lok Sabha Election: ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಿದ್ಧತೆ ಮಾಡಿಕೊಂಡಿದೆ. ಮತದಾನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಲ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ ಶುಕ್ರವಾರ (ಏಪ್ರಿಲ್‌ 26) ಮತದಾನ ನಡೆಯಲಿದೆ. ಆ ಮೂಲಕ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಅಬ್ಬರವು ಮತ್ತೊಂದು ಹಂತ ತಲುಪಲಿದೆ. ಶುಕ್ರವಾರ ಬೆಳಗ್ಗೆಯಿಂದಲೇ ಮತದಾನ ಆರಂಭವಾಗಲಿದ್ದು, ಚುನಾವಣೆ ಆಯೋಗವು ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಇನ್ನು, ಮತದಾನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ಕೆಲ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

ಶಾಲೆ-ಕಾಲೇಜುಗಳಿಗೆ ರಜೆ

ಮತದಾನದ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆ-ಕಾಲೇಜುಗಳು ಸೇರಿ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಅನಿವಾರ್ಯವಲ್ಲದ ಸರ್ಕಾರಿ ಸೇವೆಗಳಿಗೂ ರಜೆ ಘೋಷಿಸಲಾಗಿದೆ. ಇನ್ನು ಕಾರ್ಪೊರೇಟ್‌ ಕಚೇರಿಗಳು ಕೂಡ ಉದ್ಯೋಗಿಗಳಿಗೆ ಕಡ್ಡಾಯವಾಗಿ ರಜೆ ಘೋಷಿಸಬೇಕು ಎಂದು ಸೂಚಿಸಲಾಗಿದೆ. ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಜನ ಭಾಗವಹಿಸಲು ಉತ್ತೇಜನ ನೀಡುವ ದಿಸೆಯಲ್ಲಿ ರಜೆ ಘೋಷಿಸಲು ಸೂಚಿಸಲಾಗಿದೆ. ಕರ್ನಾಟಕ ಹೈಕೋರ್ಟ್‌ ಕೂಡ ರಜೆ ಘೋಷಣೆ ಮಾಡಿದೆ.

Voters' Pledge

ಮತದಾನದ ಹಿನ್ನೆಲೆಯಲ್ಲಿ ಬುಧವಾರ (ಏಪ್ರಿಲ್‌ 24) ಸಂಜೆಯಿಂದಲೇ ಮದ್ಯ ಮಾರಾಟ ನಿಷೇಧಗೊಳಿಸಲಾಗಿದೆ. ಏಪ್ರಿಲ್‌ 26ರ ಮದ್ಯರಾತ್ರಿವರೆಗೆ ಮದ್ಯ ಸಿಗುವುದಿಲ್ಲ. ಹಾಗೆಯೇ, ಸಿಆರ್‌ಪಿಎಸಿ ಸೆಕ್ಷನ್‌ 144 ಜಾರಿಯಲ್ಲಿರುವ ಕಾರಣ ಐದಕ್ಕೂ ಅಧಿಕ ಜನ ಸೇರುವಂತಿಲ್ಲ. ರಾಜಕೀಯ ಘೋಷಣೆ ಕೂಗುವಂತಿಲ್ಲ ಹಾಗೂ ಪ್ರಚೋದನಕಾರಿ ಭಾಷಣಗಳನ್ನು ಮಾಡುವಂತಿಲ್ಲ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಮತದಾನ?

ಕೋಲಾರ, ಮಂಡ್ಯ, ಉಡುಪಿ-ಚಿಕ್ಕಮಗಳೂರು, ಹಾಸನ, ಮೈಸೂರು, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರ ಕೇಂದ್ರ, ಬೆಂಗಳೂರು ಉತ್ತರ, ದಕ್ಷಿಣ ಕನ್ನಡ, ಚಾಮರಾಜನಗರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮತಗಟ್ಟೆಗಳಲ್ಲಿ ಹೆಚ್ಚಿನ ಜನರ ಸರತಿ ಸಾಲು ಇದ್ದರೆ ಮತದಾನದ ಸಮಯವನ್ನು ಒಂದು ಗಂಟೆವರೆಗೆ ವಿಸ್ತರಣೆ ಮಾಡಲಾಗುತ್ತದೆ.

ಯಾವ ರಾಜ್ಯದ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಕೇರಳದ ಎಲ್ಲ 20, ಕರ್ನಾಟಕ 14, ರಾಜಸ್ಥಾನ 13, ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದ ತಲಾ 8, ಮಧ್ಯಪ್ರದೇಶ 6, ಬಿಹಾರ ಹಾಗೂ ಅಸ್ಸಾಂನ ತಲಾ 5, ಛತ್ತೀಸ್‌ಗಢ ಹಾಗೂ ಪಶ್ಚಿಮ ಬಂಗಾಳದ ತಲಾ 3, ತ್ರಿಪುರ, ಜಮ್ಮು-ಕಾಶ್ಮೀರ ಹಾಗೂ ಮಣಿಪುರದ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 7 ಹಂತಗಳಲ್ಲಿ ನಡೆಯುವ ಚುನಾವಣೆಯು ಜೂನ್‌ 1ರಂದು ಮುಕ್ತಾಯವಾಗಲಿದೆ. ಜೂನ್‌ 4ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Continue Reading

ಕ್ರೀಡೆ

IPL 2024 : ಸಾಯಿ ಕಿಶೋರ್ ನಿಂದನೆ; ರಸಿಕ್ ಸಲಾಂಗೆ ಪಾಠ ಕಲಿಸಿದ ಜಯ್​ ಶಾ

IPL 2024: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕ್ಯಾಪಿಟಲ್ಸ್ ನಾಲ್ಕು ರನ್ ಗಳ ಜಯ ಸಾಧಿಸುವಲ್ಲಿ ರಸಿಕ್ ಸಲಾಮ್ ದಾರ್ ನಿರ್ಣಾಯಕ ಪಾತ್ರ ವಹಿಸಿದ್ದರು. ಬಲಗೈ ವೇಗಿ ನಾಲ್ಕು ಓವರ್ ಗಳಲ್ಲಿ 44 ರನ್ ನೀಡಿ ಮೂರು ವಿಕೆಟ್ ಪಡೆದಿದ್ದರು. ಸಾಯಿ ಸುದರ್ಶನ್, ಶಾರುಖ್ ಖಾನ್ ಮತ್ತು ಆರ್ ಸಾಯಿ ಕಿಶೋರ್ ಅವರನ್ನು ಅವರು ಬೌಲಿಂಗ್​ ಸ್ಪೆಲ್​ ಅವಧಿಯಲ್ಲಿ ಔಟ್ ಮಾಡಿದರು.

VISTARANEWS.COM


on

IPL 2024
Koo

ನವದೆಹಲಿ: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ವೇಳೆ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಬೌಲರ್ ರಸಿಕ್ ಸಲಾಮ್ ದಾರ್ ಗೆ ದಂಡ ವಿಧಿಸಲಾಗಿದೆ. ಇತ್ತೀಚೆಗೆ ನಡೆದ ಐಪಿಎಲ್ 2024 ಪಂದ್ಯದಲ್ಲಿ ವಿಕೆಟ್ ಪಡೆದ ನಂತರ ಆಕ್ರಮಣಕಾರಿ ಸಂಭ್ರಮಾಚರಣೆಗಾಗಿ ರಸಿಕ್ ಸಲಾಮ್ ದಾರ್ ಅವರಿಗೆ ದಂಡ ವಿಧಿಸಲಾಗಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ (ಏಪ್ರಿಲ್ 24) ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕ್ಯಾಪಿಟಲ್ಸ್ ನಾಲ್ಕು ರನ್ ಗಳ ಜಯ ಸಾಧಿಸುವಲ್ಲಿ ರಸಿಕ್ ಸಲಾಮ್ ದಾರ್ ನಿರ್ಣಾಯಕ ಪಾತ್ರ ವಹಿಸಿದ್ದರು. ಬಲಗೈ ವೇಗಿ ನಾಲ್ಕು ಓವರ್ ಗಳಲ್ಲಿ 44 ರನ್ ನೀಡಿ ಮೂರು ವಿಕೆಟ್ ಪಡೆದಿದ್ದರು. ಸಾಯಿ ಸುದರ್ಶನ್, ಶಾರುಖ್ ಖಾನ್ ಮತ್ತು ಆರ್ ಸಾಯಿ ಕಿಶೋರ್ ಅವರನ್ನು ಅವರು ಬೌಲಿಂಗ್​ ಸ್ಪೆಲ್​ ಅವಧಿಯಲ್ಲಿ ಔಟ್ ಮಾಡಿದರು.

ರಸಿಕ್ ಸಲಾಮ್ ದಾರ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.5 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಮಾಡಿದ್ದಾರೆ. 24 ವರ್ಷದ ಆಟಗಾರ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಮ್ಯಾಚ್ ರೆಫರಿ ಶಿಕ್ಷೆ ಒಪ್ಪಿಕೊಂಡಿದ್ದಾರೆ. “ಐಪಿಎಲ್​ನ ನೀತಿ ಸಂಹಿತೆಯ ಆರ್ಟಿಕಲ್ 2.5 ರ ಅಡಿಯಲ್ಲಿ ದಾರ್ ಲೆವೆಲ್ 1 ಅಪರಾಧ ಮಾಡಿದ್ದಾರೆ. ಅವರು ಅಪರಾಧ ಒಪ್ಪಿಕೊಂಡಿದ್ದಾರೆ ಮ್ಯಾಚ್ ರೆಫರಿಯ ಅನುಮತಿ ಸ್ವೀಕರಿಸಿದ್ದಾರೆ. ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಮ್ಯಾಚ್ ರೆಫರಿ ನಿರ್ಧಾರವು ಅಂತಿಮ ಮತ್ತು ಬದ್ಧವಾಗಿರುತ್ತದೆ” ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಐಪಿಎಲ್​​ನ ನೀತಿ ಸಂಹಿತೆಯ ಆರ್ಟಿಕಲ್ 2.5 ರ ಪ್ರಕಾರ ಇನ್ನೊಬ್ಬ ಆಟಗಾರನಿಂದ ಆಕ್ರಮಣಕಾರಿ ಪ್ರತಿಕ್ರಿಯೆ ಪ್ರಚೋದಿಸುವ ಭಾಷೆ, ಕ್ರಿಯೆಗಳು ಅಥವಾ ಸನ್ನೆಗಳನ್ನು ಬಳಸುವುದಾಗಿದೆ.

ಇದನ್ನೂ ಓದಿ: Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

ನಿರ್ಣಾಯಕ ಬೌಲಿಂಗ್​

ಗುಜರಾತ್ ಟೈಟಾನ್ಸ್ ಗೆಲುವಿಗೆ 12 ಎಸೆತಗಳಲ್ಲಿ 37 ರನ್​ಗಳ ಅಗತ್ಯವಿದ್ದಾಗ ಜಮ್ಮು ಮತ್ತು ಕಾಶ್ಮೀರ ಮೂಲದ ಕ್ರಿಕೆಟಿಗನಿಗೆ 19 ನೇ ಓವರ್ ಎಸೆಯುವ ನಿರ್ಣಾಯಕ ಜವಾಬ್ದಾರಿ ನೀಡಲಾಗಿತ್ತು. ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಸಾಯಿ ಕಿಶೋರ್ ಅವರನ್ನು ತಮ್ಮ ಯಾರ್ಕರ್​ ಬೌಲಿಂಗ್​ ಮೂಲಕ ಔಟ್ ಮಾಡಿದ್ದರು. ಅದಕ್ಕಿಂತ ಮೊದಲು ಯುವ ವೇಗಿ ಎರಡು ಸಿಕ್ಸರ್​ಗಳನ್ನು ಬಿಟ್ಟುಕೊಟ್ಟರು.

ಡೆಲ್ಲಿ ಪರ ಕುಲ್ದೀಪ್ ಯಾದವ್ 29 ರನ್ ನೀಡಿ 2 ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಡಿಸಿ ತಂಡ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿತು. ಏತನ್ಮಧ್ಯೆ, ಶುಭ್​ಮನ್​ ಗಿಲ್ ನೇತೃತ್ವದ ತಂಡವು ಕಡಿಮೆ ನೆಟ್ ರನ್ ರೇಟ್ ( ನೊಂದಿಗೆ ಏಳನೇ ಸ್ಥಾನದಲ್ಲಿದೆ.

ನೋರ್ಜೆಗೆ ಕಠಿಣ ಸಮಯ: ರಿಷಭ್ ಪಂತ್

ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ನಿರ್ಣಾಯಕ 19 ನೇ ಓವರ್​​ಗೆ ಅನ್ನು ನೋರ್ಜೆ ಬದಲಿಗೆ ರಸಿಕ್​ಗೆ ಬೌಲಿಂಗ್ ನೀಡುವ ನಿರ್ಧಾರವನ್ನು ಬಹಿರಂಗಪಡಿಸಿದ್ದರು. ಫಾರ್ಮ್ ನಲ್ಲಿರುವ ಬೌಲರ್ ಅನ್ನು ಅವಲಂಬಿಸುವ ಮಹತ್ವವನ್ನು ಅವರು ಒತ್ತಿ ಹೇಳಿದರು.

ನೋರ್ಜೆ ಕಠಿಣ ಸಮಯ ಎದುರಿಸುತ್ತಿದ್ದರು. ಟಿ20 ಒಂದು ತಮಾಷೆಯ ಆಟ, 14-15 ಓವರ್​ಗಳ ನಂತರ ಚೆಂಡು ಚೆನ್ನಾಗಿ ಬ್ಯಾಟರ್​ಗಳಿಗೆ ಸಿಗುತ್ತದೆ. ಆದ್ದರಿಂದ ನಾವು ರಸಿಕ್ ಅವರನ್ನು ನಂಬಲು ಬಯಸಿದೆವು. ಆಟದಲ್ಲಿ ಉತ್ತಮವಾಗಿ ಬೌಲಿಂಗ್ ಮಾಡುತ್ತಿರುವ ಯಾರನ್ನಾದರೂ ಯಾವಾಗಲೂ ನಂಬಲೇಬೇಕು. ಇದು ನಾಯಕ ನಿರ್ಧಾರ ಎಂದು ನಾನು ಭಾವಿಸುತ್ತೇನೆ. ಅದು ಕೆಲವೊಮ್ಮೆ ಫಲಿತಾಂಶ ಕೊಡುತ್ತದೆ,”ಎಂದು ರಿಷಭ್ ಪಂತ್ ಹೇಳಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಕ್ಯಾಪಿಟಲ್ಸ್ ಪವರ್ ಪ್ಲೇನಲ್ಲಿ 44 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು. ರಿಷಭ್ ಪಂತ್ ಹಾಗೂ ಅಕ್ಷರ್ ಪಟೇಲ್ ನಾಲ್ಕನೇ ವಿಕೆಟ್​ಗೆ 113 ರನ್​ಗಳ ಜೊತೆಯಾಟ ನೀಡಿದರು. ಅಕ್ಷರ್ 43 ಎಸೆತಗಳಲ್ಲಿ 66 ರನ್ ಗಳಿಸಿದರೆ, ಪಂತ್ 43 ಎಸೆತಗಳಲ್ಲಿ 88 ರನ್ ಗಳಿಸಿದರು. ಅಂತಿಮವಾಗಿ ಭಾರತ 20 ಓವರ್​ಗೆ 4 ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತು.

ರಿಷಭ್ ಪಂತ್ ನೇತೃತ್ವದ ಭಾರತ ತಂಡ ಏಪ್ರಿಲ್ 27 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ತನ್ನ ಮುಂದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ (ಎಂಐ) ತಂಡವನ್ನು ಎದುರಿಸಲಿದೆ.

Continue Reading

ವಿದೇಶ

Lashkar-e-Islam: ಮತ್ತೊಬ್ಬ ಭಾರತ ವಿರೋಧಿ ಉಗ್ರ ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಖತಂ

Lashkar-e-Islam: ಕೆಲವು ದಿನಗಳಿಂದ ಪಾಕಿಸ್ತಾನದಲ್ಲಿ ತಮ್ಮ ಅಡಗು ತಾಣ ಮಾಡಿಕೊಂಡಿರುವ ಉಗ್ರರು ಅಪರಿಚಿತ ವ್ಯಕ್ತಿಗಳ ಗುಂಡಿಗೆ ಬಲಿಯಾಗುತ್ತಿದ್ದಾರೆ. ಇದಕ್ಕೆ ಮತ್ತೊಂದು ಸೇರ್ಪಡೆ ಹಾಜಿ ಅಕ್ಬರ್ ಅಫ್ರಿದಿಯ ಹತ್ಯೆ. ಕುಖ್ಯಾತ ಲಷ್ಕರ್-ಇ-ಇಸ್ಲಾಂ (Lashkar-e-Islam) ಗುಂಪಿನ ಕಮಾಂಡರ್ ಎಂದು ಗುರುತಿಸ್ಪಡುತ್ತಿದ್ದ ಹಾಜಿ ಅಕ್ಬರ್ ಅಫ್ರಿದಿಯನ್ನು ಪಾಕಿಸ್ತಾನದ ಖೈಬರ್ ಜಿಲ್ಲೆಯ ಬಾರಾದಲ್ಲಿ ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Haji Akbar Afridi
Koo

ಇಸ್ಲಾಮಾಬಾದ್‌: ಕೆಲವು ದಿನಗಳಿಂದ ಭಾರತ ವಿರೋಧಿ ಭಯೋತ್ಪಾದಕರು ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಡಿಗೆ ಬಲಿಯಾಗುತ್ತಿದ್ದಾರೆ. ಈ ಪಟ್ಟಿಗೆ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಕುಖ್ಯಾತ ಲಷ್ಕರ್-ಇ-ಇಸ್ಲಾಂ (Lashkar-e-Islam) ಗುಂಪಿನ ಕಮಾಂಡರ್ ಎಂದು ಗುರುತಿಸ್ಪಡುತ್ತಿದ್ದ ಹಾಜಿ ಅಕ್ಬರ್ ಅಫ್ರಿದಿ (Haji Akbar Afridi)ಯನ್ನು ಪಾಕಿಸ್ತಾನದ ಖೈಬರ್ ಜಿಲ್ಲೆಯ ಬಾರಾದಲ್ಲಿ ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಗ್ರಗಾಮಿ ಚಟುವಟಿಕೆಗಳು ಮತ್ತು ಉಗ್ರಗಾಮಿ ಸಿದ್ಧಾಂತಕ್ಕೆ ಹೆಸರುವಾಸಿಯಾದ ಲಷ್ಕರ್-ಇ-ಇಸ್ಲಾಂ ಸಂಘಟನೆ ಕರಾಳ ಇತಿಹಾಸವನ್ನು ಹೊಂದಿದೆ. ಈ ಹಿಂದೆ ಈ ಗುಂಪು ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು, ಕಾಶ್ಮೀರದಿಂದ ಪಲಾಯನ ಮಾಡುವಂತೆ ಎಚ್ಚರಿಕೆ ನೀಡಿತ್ತು. ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸುವಂತೆ ಬೆದರಿಕೆ ಹಾಕಿತ್ತು. ಇದಲ್ಲದೆ 2014ರಿಂದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನೊಂದಿಗೆ ಅಕ್ಬರ್ ಸಂಪರ್ಕ ಹೊಂದಿದ್ದ ಎಂದು ವರದಿ ತಿಳಿಸಿದೆ.

ಕಾಶ್ಮೀರಿ ಪಂಡಿತರಿಗೆ ಬೆದರಿಕೆ

ಕಾಶ್ಮೀರಿ ಪಂಡಿತರು ವಾಸಿಸುತ್ತಿರುವ ಕಾಶ್ಮೀರದ ಬಾರಾಮುಲ್ಲಾದ ವೀರ್ವಾನ್‌ ಕಾಲೋನಿಗೆ ಉಗ್ರ ಸಂಘಟನೆ ಲಷ್ಕರ್-ಇ-ಇಸ್ಲಾಂ 2022ರಲ್ಲಿ ಬೆದರಿಕೆ ಪತ್ರ ರವಾನಿಸಿತ್ತು. ʼʼಪಂಡಿತರು ಮತ್ತು ಮುಸ್ಲಿಮರಲ್ಲದವರು (ಕಾಫಿರರು) ಇಸ್ಲಾಂಗೆ ಮತಾಂತರ ಆಗಬೇಕು. ಇಲ್ಲವೇ ಕಾಶ್ಮೀರ ಕಣಿವೆ ಬಿಡಬೇಕು. ಇಲ್ಲದೇ ಹೋದರೆ ಸಾವಿಗೆ ಸಿದ್ಧರಾಗಬೇಕು. ಕಾಶ್ಮೀರ ಇರುವುದು ಕೇವಲ ಅಲ್ಲಾನ ಅನುಯಾಯಿಗಳಿಗೆ ಮಾತ್ರ’ʼ ಎಂಬ ಬೆದರಿಕೆ ಒಡ್ಡಲಾಗಿತ್ತು.

ರಕ್ಷಣಾ ಪಡೆಗಳಿಗೆ ಈ ಪತ್ರ ಮೊದಲು ಪೋಸ್ಟ್‌ ಮೂಲಕ ಬಂದಿದ್ದು, ಅದನ್ನು ಅವರು ವೀರ್ವಾನ್‌ನಲ್ಲಿರುವ ಪಂಡಿತರ ಕಾಲೋನಿಯ ಅಧ್ಯಕ್ಷರಿಗೆ ನೀಡಿದ್ದರು. ಬಳಿಕ ಈ ಕುರಿತಾಗಿ ಬಾರಾಮುಲ್ಲಾದ ಎಸ್‌ಎಸ್‌ಪಿ ಅವರಿಗೆ ದೂರು ನೀಡಲಾಗಿತ್ತು. ಈ ಪಂಡಿತರ ಕಾಲೋನಿಯಲ್ಲಿ ಸುಮಾರು 350 ಪಂಡಿತರು ವಾಸವಾಗಿದ್ದಾರೆ. ಲಷ್ಕರ್‌-ಇ-ಇಸ್ಲಾಂ ಸಂಘಟನೆಯನ್ನು 2015ರಲ್ಲೇ ನಿರ್ನಾಮ ಮಾಡಲಾಗಿದೆ.

ಪಾಕ್‌ ಜೈಲಿನಲ್ಲಿ ಸರಬ್ಜಿತ್ ಸಿಂಗ್ ಹತ್ಯೆ ಮಾಡಿದ್ದ ವ್ಯಕ್ತಿ ಅಪರಿಚಿತರಿಂದ ಖತಂ!

ಬೇಹುಗಾರಿಕೆ ಆರೋಪ ಹೊತ್ತು ಪಾಕಿಸ್ತಾನದ ಜೈಲಿನಲ್ಲಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ (Sarabjit Singh) ಅವರನ್ನು ಹತ್ಯೆ ಮಾಡಿದ್ದ ಅಮೀರ್ ಸರ್ಫರಾಜ್ (Amir Sarfaraz) ಅಲಿಯಾಸ್ ತಾಂಬಾ (Tamba) ಎಂಬಾತನನ್ನು ಕೆಲವು ದಿನಗಳ ಹಿಂದೆ ಲಾಹೋರ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು. ಏಪ್ರಿಲ್‌ 14ರಂದು ಘಟನೆ ನಡೆದಿತ್ತು.

ಇದನ್ನೂ ಓದಿ: Amir Sarfaraz: ಪಾಕ್ ಜೈಲಿನಲ್ಲಿದ್ದ ಸರಬ್ಜಿತ್ ಸಿಂಗ್ ಕೊಂದವನ ಹತ್ಯೆ; ಇದು ಯಾರ ಕೈವಾಡ?

ಲಾಹೋರ್‌ನ ಇಸ್ಲಾಂಪುರ ಪ್ರದೇಶದಲ್ಲಿ ಈ ದಾಳಿ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅಮೀರ್ ಸರ್ಫರಾಜ್ ನನ್ನು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ತ್ವರಿತವಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದ. ಗುಪ್ತಚರ ಆರೋಪದ ಮೇಲೆ ಬಂಧಿಯಾಗಿದ್ದ ಸರಬ್ಜಿತ್ ಸಿಂಗ್ ಅವರನ್ನು ಕೊಲೆ ಮಾಡಲಾಗಿದೆ ಎಂದು ಈ ಹಿಂದೆ ಭಾರತ ಧ್ವನಿ ಎತ್ತಿದ್ದರೂ ಪಾಕಿಸ್ತಾನ ಇದಕ್ಕೆ ಸೊಪ್ಪು ಹಾಕಿರಲಿಲ್ಲ. ಇದೀಗ ಸುಮಾರು 11 ವರ್ಷಗಳ ಬಳಿಕ ಅಂಡರ್‌ವರ್ಲ್ಡ್ ಡಾನ್ ಅಮೀರ್ ಸರ್ಫರಾಜ್‌ನನ್ನು ಅಪರಿಚಿತ ವ್ಯಕ್ತಿಯೊಬ್ಬ ಹತ್ಯೆ ಮಾಡಿರುವುದು ಕುತೂಹಲ ಮೂಡಿಸಿದೆ. ಸದ್ಯ ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಅಂದು ಅಮೀರ್ ಸರ್ಫರಾಜ್ ಐಎಸ್‌ಐ ಸೂಚನೆಯ ಮೇರೆಗೆ ಸರಬ್ಜಿತ್ ಸಿಂಗ್ ಅವರನ್ನು ಕೊಲೆ ಮಾಡಿದ್ದ ಎನ್ನಲಾಗಿದೆ.

Continue Reading
Advertisement
Fire Tragedy
ದೇಶ18 mins ago

Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

World Malaria Day April 25
ಆರೋಗ್ಯ22 mins ago

World Malaria Day: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಿಕೊಳ್ಳುವುದು ಹೇಗೆ?

Bismah Maroof
ಕ್ರೀಡೆ24 mins ago

Bismah Maroof : ಹೆಣ್ಣು ಮಗುವಿನ ಸಮೇತ ಆಡಲು ಹೋಗುತ್ತಿದ್ದ ಪಾಕಿಸ್ತಾನದ ಮಹಿಳಾ ಕ್ರಿಕೆಟರ್ ನಿವೃತ್ತಿ

Modi in Karnataka Pm Modi to visit Karnataka on April 28 and 29 Raichur conference maybe cancelled
Lok Sabha Election 202432 mins ago

Modi in Karnataka: ಏಪ್ರಿಲ್‌ 28 – 29ರಂದು ರಾಜ್ಯಕ್ಕೆ ಮೋದಿ; ರಾಯಚೂರು ಸಮಾವೇಶ ರದ್ದು?

Lok Sabha Election
ಕರ್ನಾಟಕ34 mins ago

Lok Sabha Election: ನಾಳೆ ಮೊದಲ ಹಂತದ ಮತದಾನ; ಬೆಂಗಳೂರಿನಲ್ಲಿ ಏನಿರತ್ತೆ? ಏನಿರಲ್ಲ?

KKR vs PBKS
ಕ್ರೀಡೆ45 mins ago

KKR vs PBKS: ಪಂಜಾಬ್​ಗೆ ಮಸ್ಟ್​ ವಿನ್​ ಗೇಮ್; ಕೆಕೆಆರ್​ ಎದುರಾಳಿ

IPL 2024
ಕ್ರೀಡೆ48 mins ago

IPL 2024 : ಸಾಯಿ ಕಿಶೋರ್ ನಿಂದನೆ; ರಸಿಕ್ ಸಲಾಂಗೆ ಪಾಠ ಕಲಿಸಿದ ಜಯ್​ ಶಾ

Haji Akbar Afridi
ವಿದೇಶ50 mins ago

Lashkar-e-Islam: ಮತ್ತೊಬ್ಬ ಭಾರತ ವಿರೋಧಿ ಉಗ್ರ ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಖತಂ

Tata Motors gets approval for 333 patents
ದೇಶ56 mins ago

Tata Motors: ಟಾಟಾ ಮೋಟಾರ್ಸ್‌ನಿಂದ ಹೊಸ ಮೈಲುಗಲ್ಲು; 333 ಪೇಟೆಂಟ್‌ಗಳಿಗೆ ಅನುಮೋದನೆ

Neha Murder Case in hubblli
ಹುಬ್ಬಳ್ಳಿ1 hour ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ1 hour ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 hour ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ4 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20246 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌