Site icon Vistara News

Murder Case : ಮಗಳಿಗೆ ಆಸ್ತಿ ಬರೆದಿದ್ದಕ್ಕೆ ಸಿಟ್ಟು; ತಂದೆಯನ್ನು ಅಟ್ಟಾಡಿಸಿ ಕೊಂದ ಪಾಪಿ ಮಗ

Son kills father for property

ಮಂಡ್ಯ : ಆಸ್ತಿ ವಿಚಾರವು ಕೊಲೆಯಲ್ಲಿ ಅಂತ್ಯವಾಗಿದೆ. ಮಗನಿಂದಲೇ ತಂದೆಯ ಬರ್ಬರ ಹತ್ಯೆ (Murder Case) ಆಗಿದೆ. ಪಾಪಿ ಪುತ್ರನೊಬ್ಬ ತಂದೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾನೆ. ಮಂಡ್ಯ ತಾಲೂಕಿನ ಸುಂಡಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ನಂಜಪ್ಪ (65) ಮೃತ ದುರ್ದೈವಿ. ಮಹದೇವ ಎಂಬಾತ ತಂದೆಯನ್ನು ಹತ್ಯೆ ಮಾಡಿದವನು. ನಂಜಪ್ಪ ಇತ್ತೀಚಿಗೆ ಮಗಳ ಹೆಸರಿಗೆ ಎಲ್ಲ ಆಸ್ತಿಯನ್ನು ಬರೆದುಕೊಟ್ಟಿದ್ದರು. ಇತ್ತ ತನ್ನ ಹೆಸರಿಗೆ ಏನು ಮಾಡಲಿಲ್ಲ. ಆಸ್ತಿ ಕೊಡಲಿಲ್ಲವೆಂದು ಸಿಟ್ಟಾದ ಮಹದೇವ ಮಂಗಳವಾರ ಬೆಳಗಿನ ಜಾವ ಈ ವಿಚಾರಕ್ಕೆ ಗಲಾಟೆ ಶುರುವಾಗಿದೆ.

ಮಾತಿಗೆ ಮಾತು ಬೆಳೆದು ತಂದೆ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇವನಿಂದ ತಪ್ಪಿಸಿಕೊಳ್ಳಲು ಹೋದಾಗ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಇನ್ನು ಅಡ್ಡ ಬಂದ ತಾಯಿ ಮಹದೇವಮ್ಮಳಿಗೂ ಗಾಯವಾಗಿದೆ. ತಂದೆಯನ್ನು ಕೊಂದು ಮಹದೇವ ಎಸ್ಕೇಪ್ ಆಗಿದ್ದಾನೆ.

ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಬೈಕ್‌ಗಳ ಮುಖಾಮುಖಿ ಡಿಕ್ಕಿ; ಮದುವೆಗೆ ತೆರಳಿದ್ದ ತಾಯಿ- ಮಗ ಮೃತ್ಯು

ಸಾಲ ತೀರಿಸಲು ವೃದ್ಧೆ ಸುಶೀಲಮ್ಮಳ ಉಸಿರುಗಟ್ಟಿಸಿ ಕೊಂದ

ಬೆಂಗಳೂರು: ಕೆ.ಆರ್.ಪುರಂ ಠಾಣೆ ವ್ಯಾಪ್ತಿಯ ನಿಸರ್ಗ ಲೇಔಟ್‌ನಲ್ಲಿ ನಡೆದ ವೃದ್ಧೆ ಸುಶೀಲಮ್ಮ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ (Murder Case) ದಿನೇಶ್‌ ತಪ್ಪೊಪ್ಪಿಕೊಂಡಿದ್ದಾನೆ. ಸುಶೀಲಮ್ಮಳನ್ನು ಉಸಿರುಗಟ್ಟಿಸಿ ಕೊಂದು, ನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಮಾಡಿ ಡ್ರಮ್‌ಗೆ ತುಂಬಿಸಿ ಪಾಳು ಮನೆ ಬಳಿ ಬೀಸಾಕಿದ್ದ.

ಆರೋಪಿ ದಿನೇಶ್‌ ನಾಲ್ಕು ವರ್ಷಗಳ ಹಿಂದೆ ಚೆನ್ನೈನ ನೇವಿಯಲ್ಲಿ ಮರ್ಚಂಟ್ ಆಗಿ ಕೆಲಸ ಮಾಡಿಕೊಂಡಿದ್ದ. ಸುಮಾರು 30 ಲಕ್ಷ ರೂ.ನಷ್ಟು ಸಾಲ ಮಾಡಿಕೊಂಡಿದ್ದ. ಹೀಗಾಗಿ ಅಲ್ಲಿ ಕೆಲಸ ಬಿಟ್ಟು ಬೆಂಗಳೂರಿನ ಕೆ.ಆರ್‌.ಪುರಂನಲ್ಲಿ ಮನೆ ಮಾಡಿಕೊಂಡಿದ್ದ. ಕೆಲಸ ಇಲ್ಲದೆ ರಾಜಕೀಯದಲ್ಲಿ ಭಾಗಿಯಾಗಲು ಯತ್ನಿಸಿ ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ. ಆಗ ಸುಶೀಲಮ್ಮಳನ್ನು ಪರಿಚಯ ಮಾಡಿಕೊಂಡಿದ್ದ.

ಆರೋಪಿ ದಿನೇಶ್‌ ಹಾಗೂ ಹತ್ಯೆಯಾದ ಸುಶೀಲಮ್ಮ

ಇತ್ತೀಚಿಗೆ ಸಾಲಗಾರರ ಕಾಟ ಜಾಸ್ತಿಯಾಗಿತ್ತು. ಸಾಲ ಕೊಟ್ಟವರು ದಿನೇಶ್‌ ಮನೆ ಬಳಿಯೇ ಬರುತ್ತಿದ್ದ ಕಾರಣಕ್ಕೆ ಬೇಸತ್ತಿದ್ದ. ಈ ನಡುವೆ ಸುಶೀಲಮ್ಮ ಆಸ್ತಿಯನ್ನು ಮಾರಾಟ ಮಾಡಿ, ಕೋಟ್ಯಾಂತರ ರೂ. ಹಣ ಬಂದಿತ್ತು. ಈ ವಿಷಯ ತಿಳಿದಿದ್ದ ದಿನೇಶ್‌ ಹಣದ ಸಹಾಯವನ್ನು ಕೇಳಿದ್ದ. ಆದರೆ ಹಣ ಕೊಡಲು ನಿರಾಕರಿಸಿದ್ದಕ್ಕೆ ಆಕೆಯ ಮೈಮೇಲಿದ್ದ ಚಿನ್ನಾಭರಣದ ಮೇಲೆ ಕಣ್ಣು ಬಿದ್ದಿತ್ತು.

ಹೀಗಾಗಿ ಫೆ.24ರ ಮಧ್ಯಾಹ್ನ ದಿನೇಶ್‌ ವೃದ್ಧೆ ಸುಶೀಲಮ್ಮಳನ್ನು ಮನೆಗೆ ಕರೆಸಿಕೊಂಡಿದ್ದ. ನಂತರ ಉಸಿರುಗಟ್ಟಿಸಿ ಕೊಲೆ ಮಾಡಿ, ಮೈಮೇಲಿದ್ದ ಚಿನ್ನಾಭರಣ ದೋಚಿದ್ದ. ಚಿನ್ನ ಕದ್ದು ಖುಷಿಯಲ್ಲಿದ್ದ ದಿನೇಶ್‌ಗೆ ನಿರಾಸೆಯಾಗಿತ್ತು. ಯಾಕೆಂದರೆ ಕಿವಿಯ ಓಲೆ ಬಿಟ್ಟರೇ ಉಳಿದಿದ್ದೆಲ್ಲವೂ ರೋಲ್ಡ್ ಗೋಲ್ಡ್ ಆಗಿತ್ತು. ಹೀಗಾಗಿ ಅದೇ ಚಿನ್ನದ ಓಲೆಯನ್ನು ಅಡವಿಟ್ಟು, ಆ ಹಣದಲ್ಲೇ ಡ್ರಮ್ ಖರೀದಿ ಮಾಡಿದ್ದ.

ಇದನ್ನೂ ಓದಿ: Namma Metro : ಬಟ್ಟೆ ಕ್ಲೀನ್‌ ಇಲ್ಲ ಎಂದು ರೈತನಿಗೆ ಅಪಮಾನ ಮಾಡಿದ ಮೆಟ್ರೋ ಸಿಬ್ಬಂದಿ ವಜಾ

ತನ್ನದೇ ಮನೆಯಲ್ಲಿ ದಿನೇಶ್‌ ಅಜ್ಜಿಯ ಮೃತದೇಹದೊಂದಿಗೆ ಒಂದು ದಿನ ಕಳೆದಿದ್ದಾನೆ. ಫೆ. 24ರ ರಾತ್ರಿ ಅಜ್ಜಿಯ ಮೃತದೇಹವನ್ನು ಸಾಗಿಸಲು ಆಗಿಲ್ಲ. ಹೀಗಾಗಿ ದೇಹವನ್ನು ತುಂಡು ತುಂಡಾಗಿ ಕಟ್ ಮಾಡಿದ್ದಾನೆ. ನಂತರ ಕೆ.ಆರ್.ಪುರಂ ಬಸ್ ಸ್ಟ್ಯಾಂಡ್ ಬಳಿ ಡ್ರಮ್ ಹಾಗೂ ಡಸ್ಟ್ ಬೀನ್ ಕವರ್ ಖರೀದಿ ಮಾಡಿದ್ದಾನೆ. ಫೆ.25 ರ ಮುಂಜಾನೆ 3:30ಕ್ಕೆ ವೃದ್ಧೆಯ ದೇಹವನ್ನು ತುಂಡು ತುಂಡಾಗಿ ಕಟ್ ಮಾಡಿ ಡ್ರಮ್‌ಗೆ ತುಂಬಿ ಬಿಸಾಡಲು ಪ್ಲಾನ್‌ ಮಾಡಿದ್ದ. ಅದರಂತೆ ಆವಲಹಳ್ಳಿ ಕೆರೆಗೆ ಮೃತದೇಹದ ಕೆಲ ಭಾಗಗಳನ್ನು ಬಿಸಾಡಿ ಬಂದಿದ್ದ.

ಮೃತದೇಹ ಬಿಸಾಡುವ ಮುನ್ನ ಮನೆಯ ಮುಂಭಾಗದ ಬೀದಿ ದೀಪವನ್ನು ಆಫ್‌ ಮಾಡಿದ್ದ. ಆ ನಂತರ ಮೃತದೇಹವಿದ್ದು ಡ್ರಮ್ ತಗೆದುಕೊಂಡು ಹೋಗಿ ಪಾಳು ಮನೆ ಬಳಿ ಬಿಸಾಡಿ ಬಂದಿದ್ದ. ಪೊಲೀಸರು ಸಿಸಿ ಟಿವಿ ಪರಿಶೀಲನೆ ವೇಳೆ ಆರೋಪಿ ಚಹರೆ ಪತ್ತೆಯಾಗಿತ್ತು. ಪೊಲೀಸರು ಆರೋಪಿ ದಿನೇಶ್‌ನನ್ನು ತೀವ್ರ ವಿಚಾರಣೆ ನಡೆಸಿದಾಗ ಎಲ್ಲವನ್ನೂ ಬಾಯ್ಬಿಟ್ಟಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version