Site icon Vistara News

Murder Case: ನಿರಾಶ್ರಿತ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Murder Case mandya

ಮಂಡ್ಯ: ಮಹಿಳೆಯೊಬ್ಬರನ್ನು ರಾತ್ರಿ ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ (Murder Case) ಮಾಡಲಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ಘಟನೆ ನಡೆದಿದೆ. ತಮಿಳುನಾಡು ಮೂಲದ ಗಂಗಾ(38) ಕೊಲೆಯಾದ ದುರ್ದೈವಿ. ಮಹಿಳೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲ್ಲಲಾಗಿದೆ. ರಾತ್ರಿ ಮಲಗಿರುವಾಗ ಕೊಲೆ ಮಾಡಿರುವ ಶಂಕೆ ಇದೆ.

ಈಕೆ ನದಿಯಲ್ಲಿ ಕಾಸು ಹೆಕ್ಕುವ ಕಾಯಕ ಮಾಡುತ್ತಿದ್ದರು. ಕೊಲೆಯಾದ ಮಹಿಳೆ ಹಾಗೂ ಇವರು ಇರುವ ಗುಂಪಿನ‌ ಸದಸ್ಯರೆಲ್ಲರೂ ನಿರಾಶ್ರಿತರಾಗಿದ್ದು, ಮೈಸೂರು- ಬೆಂಗಳೂರು ರಸ್ತೆಯ ಮೇಲ್ಸೇತುವೆ ಕೆಳಗೆ ತಮ್ಮ ಗುಂಪಿನ ಜೊತೆ ಶೆಡ್‌ಗಳಲ್ಲಿ ವಾಸವಾಗಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ಸುಧಾಕರ್‌ ಸೋಲಿನಿಂದ ನೊಂದ ಅಭಿಮಾನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ತಮ್ಮ ನೆಚ್ಚಿನ ನಾಯಕರು ಚುನಾವಣೆಯಲ್ಲಿ ಸೋತದ್ದರಿಂದ ನೊಂದಿರುವ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬ ಸತ್ತುಹೋಗಿದ್ದಾನೆ. ಇನ್ನೊಬ್ಬ ಬದುಕುಳಿದಿದ್ದಾನೆ.

ಮಾಜಿ ಸಚಿವ, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್‌ಗೆ ಚುನಾವಣೆಯಲ್ಲಿ ಸೋಲಾದ ಹಿನ್ನೆಲೆಯಲ್ಲಿ ನೊಂದ ಅವರ ಕಟ್ಟಾ ಅಭಿಮಾನಿಯಾಗಿದ್ದ ಚಿತ್ತಾರ ವೆಂಕಟೇಶ (46) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ 17ನೇ ವಾರ್ಡಿನ ಕೋಟೆ ನಿವಾಸಿಯಾದ ಈತ ಚಿಕ್ಕಬಳ್ಳಾಪುರ ತಾಲೂಕಿನ ವಡ್ರೆಪಾಳ್ಯ ಬಳಿ ಕೆರೆಯಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಕೆ.ಆರ್‌ ನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸಾ.ರಾ ಮಹೇಶ್ ಅವರು ಸೋಲು ಕಂಡಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೆ.ಆರ್.ನಗರ ತಾಲೂಕಿನ ದಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವೆಂಕಟೇಶ್(47) ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದು, ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಜೆಡಿಎಸ್ ಅಭ್ಯರ್ಥಿ ಸಾ.ರಾ ಮಹೇಶ್ ಸೋಲಿನಿಂದ ಮನನೊಂದಿದ್ದ ವೆಂಕಟೇಶ್, ಗ್ರಾಮದಲ್ಲಿ ಎದುರಾಳಿ ಪಕ್ಷದ ಕಾರ್ಯಕರ್ತರ ಟೀಕೆಯಿಂದ ಹತಾಶರಾಗಿದ್ದರು.‌ ಕೆ.ಆರ್ ನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: Suicide Case: ಅಪ್ರಾಪ್ತ ವಯಸ್ಸಿನ ಪ್ರೇಮಿಗಳ ಶವ ಮರದಲ್ಲಿ ಪತ್ತೆ: ನೇಣು ಬಿಗಿದುಕೊಂಡರೇ, ಕೊಲೆಯೇ?

Exit mobile version