Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು - Vistara News

ಮಂಡ್ಯ

Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

Nagamangala Case : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಶುರುವಾದ ಗಲಭೆಯಿಂದಾಗಿ ಕೆಲವರ ಬದುಕನ್ನೇ ಕಳೆದುಕೊಳ್ಳುವಂತೆ ಮಾಡಿದೆ.

VISTARANEWS.COM


on

Nagamangala case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ನಾಗಮಂಗಲದಲ್ಲಿ (Nagamangala Case) ನಡೆದಿದ್ದ ಕೋಮು ದಳ್ಳುರಿ ಬಾರಿ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿರುವ ಈ ಗಲಭೆಯಿಂದಾಗಿ ಯಾರಿಗೆ ಅನುಕೂಲ ಆಗಿದೆಯೊ ಬಿಟ್ಟಿದೆಯೊ ಆದರೆ ಗಲಭೆ ಮಾತ್ರ ಕೆಲವರ ಬದುಕನ್ನೇ ಕಳೆದುಕೊಳ್ಳುವಂತೆ ಮಾಡಿದೆ.

ಶಾಂತಿಯ ತೋಟವಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಎನ್ನುವಂತೆ ಕೋಮು ದಳ್ಳುರಿ ಎಂಬುದು ದೊಡ್ಡದಾಗಿ ಸದ್ದು ಮಾಡಿದೆ. ರಾಜ್ಯದ ಘಟಾನುಗಟಿಗಳು, ರಾಜಕೀಯ ನಾಯಕರು ಇಲ್ಲಿಗೆ ಬಂದು ತಮಗೆ ಅನ್ನಿಸಿದ್ದನ್ನು ಹೇಳಿ ಹೊರಟಿದ್ದಾರೆ. ಆದರೆ ಕೆಲವು ಕುಟುಂಬಗಳು ಮಾತ್ರ ತಮ್ಮ ಬದುಕಿನ ಜೀವನೋಪಾಯಕ್ಕೆ ಆಧಾರವಾಗಿದ್ದ ಅಂಗಡಿಯನ್ನೇ ಕಳೆದುಕೊಂಡು ಬೀದಿಗೆ ಬಂದಿವೆ. ಇದ್ದದ್ದನ್ನು ಕಳೆದುಕೊಂಡಿರುವ ನಾವು ಮುಂದೇನು ಮಾಡಬೇಕು ಎಂದು ಕಣ್ಣೀರು ಹಾಕುತ್ತಿದ್ದಾರೆ.

ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಎದುರಿನಲ್ಲೇ ಪಾತ್ರೆ ವ್ಯಾಪಾರಿಯೊಬ್ಬರು ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಗಲಭೆ ಆರಂಭವಾಗುತ್ತಿದ್ದಂತೆ ಗಲಭೆಕೋರರು ಸ್ಟವ್ ಮತ್ತು ಪಾತ್ರೆ ಅಂಗಡಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಅಂಗಡಿಯಲ್ಲಿನ ಒಂದೇ ಒಂದು ಪಾತ್ರೆಯೂ ಉಳಿಯದಂತೆ ಬೆಂಕಿಗೆ ಆಹುತಿ ಆಗಿರುವುದು ಗಲಭೆಯ ತೀವ್ರತೆಗೆ ಸಾಕ್ಷಿಯಾಗಿದೆ. ಇನ್ನು ಗೌರಿ-ಗಣೇಶ ಹಬ್ಬ ಇದೆ ವ್ಯಾಪಾರ ಚೆನ್ನಾಗಿ ನಡೆಯಲಿದೆ ಎಂಬ ಕಾರಣಕ್ಕೆ ಬಳೆ ಮತ್ತು ಮಹಿಳೆಯರ ಅಲಂಕಾರಿಕ ವಸ್ತುಗಳನ್ನಿಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ಕುಟುಂಬವು ಬೀದಿಗೆ ಬಂದಿದೆ. ಯಾಕಂದ್ರೆ ದುಷ್ಕರ್ಮಿಗಳು ಬಳೆ ಅಂಗಡಿಯನ್ನೂ ಸುಟ್ಟುಹಾಕಿದ್ದಾರೆ. ಈ ಸಂಬಂಧ ಮಾತನಾಡಿದ ಅಂಗಡಿಯ ಮಾಲೀಕರು ತಮ್ಮ ಬದುಕಿಗೆ ಆಸೆಯಾಗಿದ್ದ ಅಂಗಡಿಯ ದುಸ್ಥಿತಿಯನ್ನ ಕಂಡು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Nagamangala Case: ನಾಗಮಂಗಲ ಗಲಭೆಯು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ; ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸಂಚು- ಎಚ್‌ಡಿ ಕುಮಾರಸ್ವಾಮಿ

ಬಳೆ ಮತ್ತು ಪಾತ್ರೆ ಅಂಗಡಿಗಳು ಮಾತ್ರವಲ್ಲ ಟೈಲರ್ ಸೇರಿದಂತೆ ಹಲವು ರೀತಿಯಲ್ಲಿ ಸಣ್ಣ ಪುಟ್ಟ ಅಂಗಡಿಯನ್ನಿಟ್ಟುಕೊಂಡು ಬದುಕು ಸಾಗಿಸುತ್ತಿದ್ದ ಹಲವರು ಬದುಕಿನ ಬಂಡಿಯೇ ಬೆಂಕಿಯ ಜ್ವಾಲೆಯಲ್ಲಿ ಬೆಂದು ಹೋಗಿವೆ. ನಾಗಮಂಗಲದ ಮೈಸೂರು ರಸ್ತೆಯಲ್ಲಿ ಟೈಯರ್ ಮಾರಾಟದ ಅಂಗಡಿಯನ್ನಿಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ರಿಯಾಜ್ ಕುಟುಂಬವು ತತ್ತರಿಸಿ ಹೋಗಿದೆ. ಯಾಕಂದರೆ 20 ಲಕ್ಷ ರೂ. ಬಂಡವಾಳ ಹಾಕಿಕೊಂಡು ನಾಲ್ಕು ಜನರಿಗೆ ಕೆಲಸ ಕೊಟ್ಟಿದ್ದ ರಿಜ್ವಾನ್ ಈಗ ತಾನೇ ಇನ್ನೊಬ್ಬರ ಬಳಿ ಕೆಲಸಕ್ಕೆ ಹೋಗಬೇಕಾದ ಸಂದರ್ಭ ಎದುರಾಗಿದೆ. ಗಲಭೆ ನಡೆದಿರುವ ಜಾಗಕ್ಕೂ ತಮ್ಮ ಟಯರ್ ಅಂಗಡಿ ಇರುವ ಜಾಗಕ್ಕೂ ತುಂಬಾ ದೂರ ಇದೆ. ಆದರೂ ಗಲಭೆಯಲ್ಲಿ ಟಾರ್ಗೆಟ್ ಮಾಡಿರುವ ರೀತಿಯಲ್ಲಿ ತಮ್ಮ ಟೈಯರ್ ಅಂಗಡಿಗೆ ಬೆಂಕಿ ಬಿದ್ದು, ಎಲ್ಲವೂ ನಾಶವಾಗಿದೆ. ಬದರಿಕೊಪ್ಪಲಿನ ‌ನಿವಾಸಿಗಳು ಈ ಮಾರ್ಗವಾಗಿ ಗಣೇಶ ಮೂರ್ತಿಯ ಮೆರವಣಿಗೆಯನ್ನು ತಾರದೆ ಇದ್ದರೂ ಗಲಭೆ ಆಗಿದೆ ಎಂದರು. ಇದು ರಿಜ್ವಾನ್ ಮತ್ತು ಶಾಹಿನ್ ತಾಜ್ ಅವರ ಕುಟುಂಬಕ್ಕೆ ಸೀಮಿತವಾಗಿಲ್ಲ, ಈ ಎರಡು ಕುಟುಂಬಗಳಂತೆ ಇನ್ನೂ ಹಲವು ಕುಟುಂಬಗಳು ಬದುಕಿನ‌ ಆಸರೆಯನ್ನೇ ಕಳೆದುಕೊಂಡಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

Nagamangala Case: ನಾಗಮಂಗಲ ಗಲಭೆಯು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ; ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸಂಚು- ಎಚ್‌ಡಿ ಕುಮಾರಸ್ವಾಮಿ

Nagamangala Case: ನಾಗಮಂಗಲ ಗಲಭೆಯು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ.. ಸಿಎಂ ಕುರ್ಚಿಯಿಂದ ಕೆಳಗೆ ಇಳಿಸಲು ಕಾಂಗ್ರೆಸ್‌ನವರಿಂದಲೇ ನಡೆದಿರುವ ಸಂಚು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

VISTARANEWS.COM


on

By

Nagamangala Case
Koo

ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದ ಗಲಭೆ (Nagamangala Case) ವಿಚಾರಕ್ಕೆ ಸಂಬಂಧಿಸಿಂತೆ ಶುಕ್ರವಾರ ಕೇಂದ್ರ ಸಚಿವ ಎಚ್‌ಡಿ‌ ಕುಮಾರಸ್ವಾಮಿ (HD kumaraswamy) ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಗಮಂಗಲದ ಇಡೀ ಘಟನೆ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ. 1990ರಲ್ಲಿ ವಿರೇಂದ್ರ ಪಾಟೀಲರನ್ನು ಸಿಎಂ ಕುರ್ಚಿಯಿಂದ ಕೆಳಗೆ ಇಳಿಸಲು ಗಲಭೆ ನಡೆಸಿದಂತೆ ಸಿದ್ದರಾಮಯ್ಯರನ್ನ ಸಿಎಂ ಕುರ್ಚಿಯಿಂದ‌ ಕೆಳಗೆ ಇಳಿಸಲು ಕಾಂಗ್ರೆಸ್‌ನಲ್ಲೇ ನಡೆಸಿರುವ ಸಂಚು ಎಂದು ಹೊಸ ಬಾಂಬ್ ಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗದಲ್ಲಿ ನಡೆದಿರುವ ಕೋಮು ದಳ್ಳೂರಿ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಗುರುವಾರವಷ್ಟೆ ಬಿಜೆಪಿ ನಿಯೋಗ ಭೇಟಿ ನೀಡಿ ಹೋಗಿತ್ತು. ಆ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದ ಬಿಜೆಪಿ ನಾಯಕರು ನಾಗಮಂಗಲದ ಗಲಭೆಯನ್ನ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಗುಡುಗಿದ್ದರು.

ಶುಕ್ರವಾರ ನಾಗಮಂಗಲಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್‌ಡಿ‌ ಕುಮಾರಸ್ವಾಮಿ ಗಲಭೆಯಲ್ಲಿ ಹಾನಿಗೊಳಗಾಗಿರುವ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ತಮ್ಮ ತಮ್ಮ ಅಂಗಡಿ ಮುಂಗ್ಗಟ್ಟುಗಳನ್ನು ಕಳೆದುಕೊಂಡಿದ್ದ ಜನರು ಕುಮಾರಸ್ವಾಮಿ ಬಳಿ ತಮ್ಮ ನೋವನ್ನು ತೊಡಿಕೊಂಡರು. ನಾಗಮಂಗಲದ ಕೋಮು ದಳ್ಳುರಿಯನ್ನು ಕಣ್ಣಾರೆ ಕಂಡ ಕುಮಾರಸ್ವಾಮಿ ಇಡೀ ಗಲಭೆ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮ ಎಂದು ನೇರವಾಗಿ ಆರೋಪ ಮಾಡಿದರು. 1990 ರಲ್ಲಿ ವೀರೇಂದ್ರ ಪಾಟೀಲರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಗಲಭೆ ನಡೆಸಿದಂತೆ ಸಿದ್ದರಾಮಯ್ಯರನ್ನು ಕೆಳಗೆ ಇಳಿಸಲು ಕಾಂಗ್ರೆಸ್ ಪಕ್ಷವೇ ನಡೆಸಿರೊ ಷಡ್ಯಂತ್ರ ಇದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವ ತನಿಖೆಯನ್ನಾದರು ಮಾಡಲಿ ಎಂದು ಗುಡುಗಿದರು.

ಇದನ್ನೂ ಓದಿ: Physical Abuse : ಅತ್ಯಾಚಾರ ಎಸಗಿದ ಕಾಮುಕನ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ!

ಫೂರ್ವ ನಿಯೋಜಿತ ಕೃತ್ಯವಷ್ಟೇ

ನಾಗಮಂಗಲದ ಗಲಭೆಯಲ್ಲಿ ಹಾನಿಗೊಳಗಾಗಿರುವ ಬಹುತೇಕ ಎಲ್ಲಾ ಅಂಗಡಿಗಳಿಗೂ ತೆರಳಿ ಪರಿಶೀಲಿಸಿದ ಕುಮಾರಸ್ವಾಮಿ, ಗಲಭೆಗೆ ಸಂಬಂಧಿಸಿದಂತೆ ಹಾಕಲಾಗಿರುವ ಎಫ್‌ಐಆರ್ ಬಗೆಗೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಗೂ ಮುನ್ನಾ ಎಫ್ ಐ ಆರ್ ಪ್ರತಿಯನ್ನು ಪರಿಶೀಲಿಸಿದ ಕುಮಾರಸ್ವಾಮಿ, ಇಲ್ಲಿ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದವರೇ ಮೊದಲ ಆರೋಪಿ ಆಗಿದ್ದಾರೆ. ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಮತ್ತು ಇಂತಹ ದಿನ ವಿಸರ್ಜನೆ ಮಾಡಲಾಗುವುದು ಎಂದು ಪೊಲೀಸರಲ್ಲಿ ಅನುಮತಿಯನ್ನು ಪಡೆಯಲಾಗಿತ್ತು ಅನ್ನೋದು ಎಫ್ ಐ ಆರ್ ನಲ್ಲೇ ನಮೂದಾಗಿದೆ.

ಅಂದ್ಮೇಲೆ ಘಟನೆ ನಡೆದ ದಿನ ಗಣೇಶ ಮೂರ್ತಿ ವಿಸರ್ಜನೆ ಇದೆ ಅನ್ನೋದು ಪೊಲೀಸರಿಗೂ ಗೊತ್ತಿತ್ತು. ಆದರೆ ಅವರು ಹೆಚ್ಚಿನ ಜನರನ್ನು ನಿಯೋಜನೆ ಮಾಡಲಿಲ್ಲ. ಬದಲಾಗಿ ಭದ್ರತೆಗಾಗಿ ನಿಯೋಜಿಸಿದ್ದ ಡಿಎಆರ್ ಪೊಲೀಸರನ್ನು ಅಲ್ಲಿಂದ ಕಳುಹಿಸಲಾಗಿತ್ತು. ಹೀಗೆ ಪೊಲೀಸರು ಅಲ್ಲಿಂದ ತೆರಳಲು ಸೂಚನೆ ಕೊಟ್ಟವರು ಯಾರು? ದೂರು ನೀಡಿರುವ ರವಿ ಎಂಬ ಪೊಲೀಸ್ ಅಧಿಕಾರಿ ಅಷ್ಟು ಜನರ ಹೆಸರನ್ನು ಹೇಗೆ ನೆನಪಿಟ್ಟುಕೊಳ್ಳುತ್ತಾರೆ? ಅಂದು ನಡೆದ ಘಟನೆಯಲ್ಲಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಲ್ಲಾ ಇತ್ತು ಎನ್ನುವುದಾದರೆ ಇದೆಲ್ಲವು ಏಕಾಏಕಿ ಬರುವುದಿಲ್ಲ. ಇದನ್ನು ಗಮನಿಸಿದಾಗ ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂಬುದು ಗೊತ್ತಾಗುತ್ತೆ‌‌. ಆದರೆ ಗೃಹಮಂತ್ರಿಗೆ ಇದು ಸಣ್ಣ ಘಟನೆ ಅಂತೆ, ಅವರು ಇಲ್ಲಿಗೆ ಬರಬೇಕು ಅಂದರೆ ಹೆಣ ಬೀಳಬೇಕಾ ಎಂದು ಪ್ರಶ್ನಿಸಿದ ಎಚ್‌ಡಿಕೆ ಅವರನ್ನು ಯಾರ್‌ರೀ ಗೃಹ ಮಂತ್ರಿ ಅಂತಾರೆ ಎಂದೂ ಗುಡುಗಿದರು.

ಗಲಭೆಗೆ ಸಂಬಂಧಿಸಿದಂತೆ ಹಾನಿಗೊಳಗಾಗಿರುವ ಜನರಿಗೆ ಸದ್ಯಕ್ಕೆ ಅವರ ಜೀವನೋಪಾಯಕ್ಕೆ ಅನುಕೂಲವಾಗಲಿ ಎಂಬ ಕಾರಣದಿಂದ ವೈಯಕ್ತಿಕವಾಗಿ ಒಂದಷ್ಟು ನೆರವು ನೀಡಿದ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯುತ್ತಲೇ ಎರಡೂ ಕೋಮಿನ‌ ಜನರು ಈ ರೀತಿಯ ಗಲಭೆಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿಕೊಂಡರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ; ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ

Karnataka Weather Forecast : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather Forecast Cloudy weather in Bengaluru Moderate rainfall in coastal and Malnad regions
Koo

ಬೆಂಗಳೂರು: ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ (Karnataka Weather Forecast) ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಶುಕ್ರವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲೂ ಸಾಧಾರಣವಾಗಿರಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಒಣ ಹವಾಮಾನ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಲಿದೆ.

Continue Reading

ಮಳೆ

Karnataka Weather : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

Karnataka Weather Forecast : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ (Rain News) ಸಾಧಾರಣವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ಸೆ.11ರಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ವೇಗದಲ್ಲಿ ಸಂಭವಿಸುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಹಲವೆಡೆ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಘಳಿಗೆಗೊಂದು ವಾತಾವರಣ ಇರಲಿದೆ. ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಭಾರಿ ಮಳೆ ಎಚ್ಚರಿಕೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಸಿಂಚನ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

Karnataka Weather : ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಸಿಂಚನವಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (RainNews) ಸಾಮಾನ್ಯವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿಯ ಉಡುಪಿ, ಉತ್ತರ ಕನ್ನಡ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Continue Reading
Advertisement
Actor darshan
ಬೆಂಗಳೂರು1 min ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ಸೆ.17ರವರೆಗೆ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ

Nagamangala case
ಮಂಡ್ಯ24 mins ago

Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

Nagamangala Case
ಮಂಡ್ಯ1 hour ago

Nagamangala Case: ನಾಗಮಂಗಲ ಗಲಭೆಯು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ; ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸಂಚು- ಎಚ್‌ಡಿ ಕುಮಾರಸ್ವಾಮಿ

Road Accident
ಬಾಗಲಕೋಟೆ2 hours ago

Road Accident : ಸ್ಕೂಟಿಗೆ ಗುದ್ದಿ ಬೈಕ್‌ನಿಂದ ಹಾರಿ ಬಿದ್ದ ಸವಾರರು; ಸ್ಥಳದಲ್ಲೇ ಓರ್ವ ಸಾವು, ಮತ್ತಿಬ್ಬರು ಗಾಯ

theft case
ಬೆಂಗಳೂರು2 hours ago

Theft case : ಬೆಂಗಳೂರಿನಲ್ಲಿ ದೇವರನ್ನೇ ಕದ್ದ ಖದೀಮರು! ಸಿಸಿ ಕ್ಯಾಮೆರಾದಲ್ಲಿ ಸೆರೆ

theft case
ಬೆಂಗಳೂರು4 hours ago

Theft case : ಆನ್‌ಲೈನ್‌ ಬೆಟ್ಟಿಂಗ್‌ ಗೀಳು; ಅಣ್ಣನ ಮದುವೆಗೆ ತಂದಿದ್ದ ಚಿನ್ನ ಕದ್ದು ಸಿಕ್ಕಿಬಿದ್ದ ತಮ್ಮ!

Physical Abuse
ಯಾದಗಿರಿ4 hours ago

Physical Abuse : ಅತ್ಯಾಚಾರ ಎಸಗಿದ ಕಾಮುಕನ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ!

accident case
ಉತ್ತರ ಕನ್ನಡ5 hours ago

Accident Case : ಪ್ರವಾಸಕ್ಕೆ ಬಂದವನು ಸಮುದ್ರದಲ್ಲಿ ಶವವಾಗಿ ತೇಲಿ ಬಂದ!

Fire Accident
ಬೆಂಗಳೂರು6 hours ago

Fire Accident : ಅಂಗಡಿ ಉಳಿಸಿಕೊಳ್ಳಲು ಸಿಲಿಂಡರ್ ಹೊರಗೆಸೆದ ಕಬಾಬ್ ಮಾಲೀಕ; ಆಟೋ ಸೇರಿ 5 ಬೈಕ್‌ಗಳು ಬೆಂಕಿಗಾಹುತಿ

Karnataka Weather Forecast Cloudy weather in Bengaluru Moderate rainfall in coastal and Malnad regions
ಮಳೆ12 hours ago

Karnataka Weather : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ; ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 year ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌