Site icon Vistara News

Pothole | ರಸ್ತೆ ಗುಂಡಿ ತಪ್ಪಿಸಲು ಹೋಗಿ ಪ್ರಾಣ ತೆತ್ತ ನಿವೃತ್ತ ಯೋಧ

soldier death

ಮಂಡ್ಯ: ನಿವೃತ್ತ ಸೇನಾಯೋಧರೊಬ್ಬರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಪ್ರಾಣ ತೆತ್ತ ದುರ್ಘಟನೆ ಮಂಡ್ಯದ ಸಾತನೂರು ರಸ್ತೆಯಲ್ಲಿ ನಡೆದಿದೆ.

ಸಾತನೂರಿನ ಕುಮಾರ್ (37) ಸಾವಿಗೀಡಾದ ನಿವೃತ್ತ ಯೋಧ. ಕುಮಾರ್‌ ತಮ್ಮ ತಂದೆಯ ಜೊತೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಂಡ್ಯದ ಹೊರ ವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಯತ್ನಿಸಿದರು. ನಿಯಂತ್ರಣ ತಪ್ಪಿ ಬೈಕ್‌ನಿಂದ ಕೆಳಕ್ಕೆ ಬಿದ್ದ ಯೋಧನ ಮೇಲೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಹರಿದಿದೆ. ಪರಿಣಾಮ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಮಾರ್‌ ಪರೀಕ್ಷೆಯೊಂದನ್ನು ಬರೆಯುವ ಸಲುವಾಗಿ ಊರಿಗೆ ವಾಪಸ್ಸಾಗಿದ್ದರು. ನಿನ್ನೆ ಸಂಜೆ ತಂದೆಯೊಂದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Pothole | ಯಮಸ್ವರೂಪಿ ರಸ್ತೆ ಗುಂಡಿಯಿಂದಾಗಿ ಕೋಮಾಗೆ ಹೋದ ಬೈಕ್‌ ಸವಾರ

Exit mobile version