Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ; ಓವರ್‌ ಸ್ಪೀಡ್‌ ಯಡವಟ್ಟು, ಪ್ರಾಣಕ್ಕೆ ತಂತು ಕುತ್ತು - Vistara News

ಮಂಡ್ಯ

Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ; ಓವರ್‌ ಸ್ಪೀಡ್‌ ಯಡವಟ್ಟು, ಪ್ರಾಣಕ್ಕೆ ತಂತು ಕುತ್ತು

Road Accident : ಮಂಡ್ಯ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಸಂಭವಿಸಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರಿ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಎರಡು ಕಾರುಗಳಿಗೆ ಗುದ್ದಿದ್ದಾನೆ.

VISTARANEWS.COM


on

road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಕೆಎಸ್‌ಆರ್‌ಟಿಸಿ ಹಾಗೂ ಕಾರಿನ ನಡುವೆ (Road Accident) ಡಿಕ್ಕಿಯಾಗಿದ್ದು, ಐವರು ಗಾಯಗೊಂಡಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮಂಡ್ಯದ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.

ಓವರ್‌ ಟೇಕ್‌ ಮಾಡುವ ವೇಳೆ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸಿಪ್ಟ್ ಕಾರಿಗೆ ಹಿಂಬದಿಯಿಂದ ಬಂದ ಬಸ್‌ ಡಿಕ್ಕಿ ಹೊಡೆದಿದೆ. ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಗ್ರಾಮದ ಕುಟುಂಬವೊಂದು ಬೆಂಗಳೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಐದು ಜನರಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳನ್ನು ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಬೆಂಗಳೂರಿನಲ್ಲಿ ಕಾರುಗಳ ಅಪಘಾತ

ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ ಪರಿಣಾಮ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಸರ್ಕಾರಿ ವಾಹನದಲ್ಲಿ ಬಂದ ಚಾಲಕ ಎರಡು ವಾಹನಗಳಿಗೆ ಗುದ್ದಿದ್ದಾನೆ. ಬೆಂಗಳೂರಿನ ಸಹಕಾರ ನಗರ ಬಳಿಯ ಕೊಡಿಗೇಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.

ಬೆಂ-ಮೈ ಬಳಿ ಭೀಕರ ಅಪಘಾತ

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಭಾರಿ ಅನಾಹುತ ತಪ್ಪಿದೆ. ಓರ್ವ ಮಹಿಳೆ ಸೇರಿದಂತೆ ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಬೆಂ-ಮೈ ಹೆದ್ದಾರಿಯ ಕೆಂಗಲ್ ಬಳಿ ಘಟನೆ ನಡೆದಿದೆ.

ಮಾರುತಿ ಫ್ರಾಂಕ್ಸ್ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರಿನ ವಿಜಯನಗರದ ನಿವಾಸಿಗಳು ಬೆಂಗಳೂರಿನಿಂದ ಮಂಡ್ಯದ ಉಕ್ಕಡ ಮಾರಮ್ಮ ದೇವಾಲಯಕ್ಕೆ ಹೋಗುತ್ತಿದ್ದರು. ಈ ವೇಳೆ ಓವರ್ ಸ್ಪೀಡ್‌ ಆಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಪಕ್ಕದ ರಸ್ತೆಗೆ ಹೋಗಿ ಕಾರು ಬಿದ್ದಿದೆ. ಗಾಯಾಳುಗಳನ್ನು ಚನ್ನಪಟ್ಟಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Wild Animals Attack: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

Wild Animals Attack: ರಾಜ್ಯದ ವಿವಿಧ ಭಾಗಗಳಲ್ಲಿ ಕಾಡಾನೆ ದಾಳಿ ಹೆಚ್ಚಾಗಿದ್ದು, ಇದೀಗ ಶಿವಮೊಗ್ಗದಲ್ಲಿ ರೈತರೊಬ್ಬರು ಬಲಿಯಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಆಲದೇವರಹೊಸೂರು ಗ್ರಾಮದ ಹನುಮಂತಪ್ಪ (40) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಅಡಿಕೆ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ.

VISTARANEWS.COM


on

Wild Animals Attack
ಸಾಂದರ್ಭಿಕ ಚಿತ್ರ
Koo

ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಕಾಡಾನೆ ದಾಳಿ ಹೆಚ್ಚಾಗಿದ್ದು, ಇದೀಗ ಶಿವಮೊಗ್ಗದಲ್ಲಿ ರೈತರೊಬ್ಬರು ಬಲಿಯಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಆಲದೇವರಹೊಸೂರು ಗ್ರಾಮದ ಹನುಮಂತಪ್ಪ (40) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ (Wild Animals Attack).

ಅಡಿಕೆ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಈ ವೇಳೆ ಹನುಮಂತಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶೆಟ್ಟಿಹಳ್ಳಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಟ್ಯಾಂಕರ್-ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

ಕೊಡಗು: ಟ್ಯಾಂಕರ್ ಹಾಗೂ ಲಾರಿ ನಡುವೆ ಶನಿವಾರ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾರೆ. ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿ ಅಪಘಾತ ಸಂಭವಿಸಿದ್ದು, ಲಾರಿಯಲ್ಲಿದ್ದ ಸುಂಟಿಕೊಪ್ಪ ನಿವಾಸಿ ಲೋಡರ್ ರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯಲ್ಲಿದ್ದ ಮತ್ತೋರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಕುಶಾಲನಗರ ಕಡೆಯಿಂದ ಸುಂಟಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಮತ್ತು ಮಡಿಕೇರಿ ಕಡೆಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಪರಸ್ಪರ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಲಾರಿ ಚಾಲಕ 7ನೇ ಹೊಸಕೋಟೆಯ ಜಬ್ಬಾರ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇವರನ್ನು ಕುಶಾಲನಗರ ಸರ್ಕಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ, ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿನಲ್ಲಿ ಈ ಅಪಘಾತ ನಡೆದಿದೆ.

ಸರಗಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ

ಮಂಡ್ಯ: ಹಾಡಹಗಲೇ ಸರಗಳ್ಳತನಕ್ಕೆ ಯತ್ನಿಸಿ ಸರಗಳ್ಳನೊಬ್ಬ ಸಿಕ್ಕಿಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಕೆ‌.ಆರ್‌.ಪೇಟೆ ಪಟ್ಟಣದಲ್ಲಿ ನಡೆದಿದೆ. ಕೃಷ್ಣಾಪುರ ಗ್ರಾಮದ ಶ್ರೀನಿವಾಸ ಸಿಕ್ಕಿ ಬಿದ್ದ ಸರಗಳ್ಳ‌. ಅಂಗಡಿಗೆ ಸಿಗರೇಟ್ ಕೊಳ್ಳುವ ನೆಪದಲ್ಲಿ ಬಂದಿದ್ದ ಶ್ರೀನಿವಾಸ ಸರಗಳ್ಳತನಕ್ಕೆ ಯತ್ನಿಸಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಅಂಗಡಿಯಲ್ಲಿದ್ದ ಮಹಿಳೆ ಕತ್ತಿನಿಂದ ಸರ ಕದ್ದ ಶ್ರೀನಿವಾಸ ಪರಾರಿಗೆ ಯತ್ನಿಸಿದ್ದ. ಈ ವೇಳೆ ಮಹಿಳೆಯ ಚೀರಾಟ ಕೇಳಿ ಸ್ಥಳದಲ್ಲಿದ್ದ ಜನರು ಸಹಾಯಕ್ಕೆ ಧಾವಿಸಿದರು. ಬಳಿಕ ಪರಾರಿಗೆ ಯತ್ನಿಸುತ್ತಿದ್ದ ಕಳ್ಳನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಸಿಕ್ಕಿಬಿದ್ದ ಸರಗಳ್ಳನಿಗೆ ಗೂಸಾ ಕೊಟ್ಟು ಪೊಲೀಸರ ವಶಕ್ಕೆ ನೀಡಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಡಿಕೇರಿಯಲ್ಲಿ ಕಾರು-ಬಸ್‌ ಡಿಕ್ಕಿ

ಕೊಡಗು: ಮಡಿಕೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ 275ರ ಬೋಯಿಕೇರಿಯಲ್ಲಿ ಅಪಘಾತ (Road Accident) ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು‌ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ ಮಗುವಿಗೆ ಗಾಯವಾಗಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣಿಕರನ್ನು ಹೊತ್ತು ಮೈಸೂರಿನಿಂದ ಮಡಿಕೇರಿಗೆ ಬರುತ್ತಿತ್ತು. ಇತ್ತ ಕಾರಿನಲ್ಲಿ ಒಟ್ಟು ಆರು ಮಂದಿ ಕೇರಳದಿಂದ ಊಟಿಗೆ ತೆರಳುತ್ತಿದ್ದರು. ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿದ್ದು, ಕಾರು ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: Wild Animals Attack : ಅತ್ತೆ ಮನೆಗೆ ಬಂದ ಅಳಿಯನ ಅಟ್ಟಾಡಿಸಿದ ಕಾಡಾನೆ! ಮುಂದೇನಾಯ್ತು

Continue Reading

ಮಳೆ

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Karnataka Rain : ಕರಾವಳಿಯಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಹುಡ್ಗಿ ವಿಷ್ಯಕ್ಕೆ ರೂಮ್‌ನಲ್ಲಿ ಕೂಡಿ ಹಾಕಿ ಯುವಕನಿಗೆ ರಕ್ತ ಬರುವಂತೆ ಥಳಿತ; ವಿಡಿಯೊ ವೈರಲ್‌

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ. ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇವೆ.

ಕರಾವಳಿಗೂ ಮಳೆ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಆಗಸ್ಟ್‌ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

Karnataka Rain news : ಒಂದು ಸಣ್ಣ ಮಳೆ ಬಂದರೂ ಅವಾಂತರವೇ (Karnataka Weather forecast) ಸೃಷ್ಟಿಯಾಗುತ್ತದೆ. ವಿಜಯನಗರದಲ್ಲಿ ಸ್ಮಶಾನಕ್ಕೆ ಮೃತದೇಹವನ್ನು ಸಾಗಿಸಲು ಗ್ರಾಮಸ್ಥರು ಪರದಾಡಿದರೆ ಇತ್ತ ಚಿಕ್ಕಮಗಳೂರಿನಲ್ಲಿ ಕಂದಕ ಸೃಷ್ಟಿಯಾಗಿದ್ದು, ಅಡಿಕೆ ತೋಟಗಳು ಭೂಮಿ ಪಾಲಾಗುತ್ತಿದೆ.

VISTARANEWS.COM


on

By

Koo

ವಿಜಯನಗರ: ವಿಜಯನಗರ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ( karnataka Rain news) ಮಳೆಯಿಂದಾಗಿ (Karnataka Weather Forecast) ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊಸಪೇಟೆ ತಾಲೂಕಿನ ಜಿ.ನಾಗಲಾಪೂರ ಗ್ರಾಮದಲ್ಲಿ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಹೆಣ ಹೂಳಲು ಸಹ ಹೆಣಗಾಡಬೇಕಾಯಿತು.

ಗ್ರಾಮಕ್ಕೆ ಮೀಸಲಿಟ್ಟ ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ. ಅಕ್ಕ – ಪಕ್ಕದವರ ಜಮೀನಿನ ಪಕ್ಕದಲ್ಲಿ ಹೋದರೆ ಕಿರಿಕಿರಿ ಮಾಡುತ್ತಾರೆ. ಹೀಗಾಗಿ ಹರಿಯುವ ಹಳ್ಳದಲ್ಲೇ ಹೆಣ ಹೊತ್ತು ಗ್ರಾಮಸ್ಥರು ಸಾಗಿದ್ದರು. ಹೆಣ ಹೊತ್ತು ಸಾಗುವ ವೇಳೆ ನೀರಿನ ರಭಸ ಹೆಚ್ಚಾದರೆ ಹೆಣ ಸಮೇತ ಕೊಚ್ಚಿಹೋಗುವ ಆತಂಕ ಇದೆ.

ಹೆಣ ಹೂಳುವ ಜಾಗ ಗ್ರಾಮದಿಂದ ಒಂದೂವರೆ ಕಿ.ಮೀ ದೂರದಲ್ಲಿದೆ. ಶವ ಸಂಸ್ಕಾರಕ್ಕೆ ಹೋಗಲು ಸೂಕ್ತ ರಸ್ತೆ ಮಾಡಿಕೊಡದೇ ಜಿಲ್ಲಾಡಳಿತ, ಕಂದಾಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಕೆಲವು ದಿನಗಳ ಹಿಂದೆ ಐತಿಹಾಸಿಕ ಒಪ್ಪತ್ತೇಶ್ವರ ರಥೋತ್ಸವ ಇದೇ ಹಳ್ಳದಲ್ಲಿ ಸಾಗಿತ್ತು. ಸ್ಮಶಾನಕ್ಕೆ, ಜಮೀನುಗಳಿಗೆ ಹೋಗಲು ಸೇತುವೆ ನಿರ್ಮಿಸಿ ಕೊಡಲು ಹತ್ತಾರು ಬಾರಿ ಮನವಿ ಮಾಡಿದ್ದಾರೆ. ಆದರೂ ಗ್ರಾಮಸ್ಥರ ಮನವಿಗೆ ಕ್ಯಾರೇ ಎನ್ನದೇ ಶಾಸಕರು, ಸಚಿವರು, ಅಧಿಕಾರಿಗಳ ಧೋರಣೆಗೆ ಕಿಡಿಕಾರಿದ್ದಾರೆ.

ಭಾರಿ ಮಳೆಗೆ ಅಡಿಕೆ ತೋಟದಲ್ಲಿ ಕಂದಕ ಸೃಷ್ಟಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ಇದ್ದಕ್ಕಿದ್ದ ಹಾಗೆ ಸ್ವಲ್ಪ ಸ್ವಲ್ಪವೇ ಅಡಿಕೆ ತೋಟ ಕುಸಿಯುತ್ತಿದೆ. ತೋಟದಲ್ಲಿ 10-15 ಅಡಿ ಕಂದಕ ಸೃಷ್ಟಿಯಾಗಿದೆ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ದೂಪದ ಖಾನ್ ಗ್ರಾಮದಲ್ಲಿ ಘಟನೆ ನಡೆದಿದೆ.

ಭೂಮಿ ಕುಸಿತದಿಂದ ನೂರಾರು ಅಡಿಕೆ ಮರಗಳು ನೆಲಕ್ಕುರುಳಿದೆ. ಗ್ರಾಮದ ಆಶಾ ಕೃಷ್ಣ ಎಂಬುವರಿಗೆ ಸೇರಿದ ಅಡಿಕೆ ತೋಟ ನಾಶವಾಗಿದೆ. ಜೀವನಕ್ಕೆ ಆಧಾರವಾಗಿದ್ದ ತೋಟ ನಾಶವಾಗುತ್ತಿರುವುದರಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಮಳೆ ಬೀಳುತ್ತಿದ್ದಂತೆ ಮತ್ತೆ ಮತ್ತೆ ತೋಟ ಕುಸಿಯುತ್ತಿದೆ.

ಇದನ್ನೂ ಓದಿ: KEA : ಕೆಯುಡಬ್ಲ್ಯೂಎಸ್‌ಡಿಬಿ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟ; ಆ.27ರವರೆಗೆ ಆಕ್ಷೇಪಣೆಗೆ ಅವಕಾಶ

ವಿಕೆಂಡ್‌ ಮಸ್ತಿಗೆ ಮಳೆ ಅಡ್ಡಿ

ನೈರುತ್ಯ ಮಾನ್ಸೂನ್‌ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದ್ದರೆ, ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕಲಬುರಗಿಯ ಚಿಂಚೋಳಿಯಲ್ಲಿ 7 ಸೆಂ.ಮೀ ಮಳೆಯಾಗಿದೆ. ನಾಳೆ ಭಾನುವಾರ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಕೆಲವೊಮ್ಮೆ ಗುಡುಗು ಇರಲಿದೆ. ನಿರಂತರ ಗಾಳಿ ಗಂಟೆಗೆ 40-50 ಕಿ.ಮೀ ತಲುಪಲಿದೆ. ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಗಂಟೆಗೆ 40-50 ಕಿ.ಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ; ಮೀನುಗಾರರಿಗೆ ಎಚ್ಚರಿಕೆ

Karnataka Weather Forecast : ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ರಭಸವಾಗಿ ಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ (karnataka Weather Forecast) ಗುಡುಗು ಸಹಿತ ಸಾಧಾರಣ ಮಳೆಯಾದರೆ, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ರಾಯಚೂರಿನಲ್ಲಿ ಸಣ್ಣ ಮಳೆ ಬರಬಹುದು.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ಆಗಸ್ಟ್ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೇಲೆ ತಿಳಿಸಿದ ಅವಧಿಯಲ್ಲಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

ಟೀನೇಜ್‌ ಹುಡುಗಿಯರ ಮಾನ್ಸೂನ್‌ ಸ್ಟೈಲಿಂಗ್‌‌‌ಗೆ ಸಾಥ್‌ ನೀಡುತ್ತಿರುವ 3 ಫ್ಯಾಷನ್‌ ವೇರ್ಸ್

ಮಳೆಗಾಲದಲ್ಲಿ (Monsoon Fashion) ಟೀನೇಜ್‌ ಹುಡುಗಿಯರ ಸ್ಟೈಲಿಂಗ್‌ ಬದಲಾಗಿದೆ. ಡಿಫರೆಂಟ್‌ ಲುಕ್‌ಗಳ ಪ್ರಯೋಗಾತ್ಮಕ ಸ್ಟೈಲಿಂಗ್‌ಗೆ 3 ಶೈಲಿಯ ಮಾನ್ಸೂನ್‌ ಫ್ಯಾಷನ್‌ವೇರ್‌ಗಳು ಸಾಥ್‌ ನೀಡುತ್ತಿವೆ. “ಈ ಜನರೇಷನ್‌ನ ಟೀನೇಜ್‌ ಹುಡುಗಿಯರ ಫ್ಯಾಷನ್‌ ಕಂಪ್ಲೀಟ್‌ ಡಿಫರೆಂಟ್‌. ಪ್ರತಿಯೊಂದರಲ್ಲೂ ನಯಾ ಲುಕ್‌ ಎದ್ದು ಕಾಣಿಸುತ್ತದೆ. ಮೊದಲೇ ಯಂಗ್‌ ಆಗಿರುವ ಇವರನ್ನು ಮತ್ತಷ್ಟು ಫಂಕಿಯಾಗಿ ಬಿಂಬಿಸುತ್ತವೆ. ಇನ್ನು ಮಾನ್ಸೂನ್‌ ಸೀಸನ್‌ಗೆ ತಕ್ಕಂತೆ ನಾನಾ ಫ್ಯಾಷನ್‌ವೇರ್‌ಗಳು ಆಗಮಿಸಿದ್ದರೂ, ಪ್ರಯೋಗಾತ್ಮಕ ಸ್ಟೈಲಿಂಗ್‌ಗೆ ಇದೀಗ ಹೆಚ್ಚು ಮಾನ್ಯತೆ ದೊರಕಿದೆ. ಹುಡುಗಿರಲ್ಲಿ ಒಬ್ಬೊಬ್ಬರದ್ದು ಒಂದೊಂದು ಬಗೆಯ ಸ್ಟೈಲಿಂಗ್‌! ಆಯಾ ಔಟ್‌ಫಿಟ್‌ಗೆ ತಕ್ಕಂತೆ ಕೊಂಚ ಬದಲಾವಣೆ ಕಾಣಬಹುದಷ್ಟೇ!” ಎನ್ನುತ್ತಾರೆ ಸ್ಟೈಲಿಸ್ಟ್ ಜಯ್‌ ಹಾಗೂ ರಾಣಾ. ಅವರ ಪ್ರಕಾರ, ಪ್ರತಿ ಹುಡುಗಿಯ ಫ್ಯಾಷನ್‌ ಅವರ ಪ್ರತಿ ದಿನಚರಿಯ ಮೇಲೆ ಹಾಗೂ ಅವರ ಪರಿಸರದ ಮೇಲೆ ನಿರ್ಧರಿತವಾಗಿರುತ್ತದೆ ಎನ್ನುತ್ತಾರೆ. ಸದ್ಯ ಟೀನೇಜ್‌ ಹುಡುಗಿಯರ ಕ್ರೇಝಿ ಲಿಸ್ಟ್‌ನಲ್ಲಿರುವ 3 ಫ್ಯಾಷನ್‌ವೇರ್‌ಗಳ ಬಗ್ಗೆ ತಿಳಿಸಿದ್ದಾರೆ.

Monsoon Fashion

ಕಲರ್‌ಫುಲ್‌ ಫಂಕಿ ಲೇಯರ್‌ ಲುಕ್‌

ಈ ಫ್ಯಾಷನ್‌ ಈ ಜನರೇಷನ್‌ನ ಟೀನೇಜ್‌ ಹುಡುಗಿಯರ ವ್ಯಕ್ತಿತ್ವ ಹಾಗೂ ಅವರ ಪ್ರತಿನಿತ್ಯದ ಪರಿಸರಕ್ಕೆ ತಕ್ಕಂತೆ ಹಾಗೂ ಅಭಿರುಚಿಗೆ ತಕ್ಕಂತೆ ಬದಲಾಗುತ್ತಿದೆ. ಉದಾಹರಣೆಗೆ., ಪ್ಯಾಂಟ್‌ ಪ್ರಿಂಟ್ಸ್‌ನದ್ದಾದಲ್ಲಿ, ಇದಕ್ಕೆ ಧರಿಸುವ ಟಾಪ್‌ ಒಂದು ಬಣ್ಣದ್ದು, ಇನ್ನು ಅದರ ಮೇಲೆ ಧರಿಸುವ ಕಾರ್ಡಿಗಾನ್‌, ಜಾಕೆಟ್‌ ಅಥವಾ ಕೇಪ್‌ ಮತ್ತೊಂದು ವರ್ಣದ್ದು. ಹೀಗೆ ಒಂದಕ್ಕೊಂದು ಯಾವುದು ಮ್ಯಾಚ್‌ ಆಗುವುದಿಲ್ಲ! ಬದಲಿಗೆ ಎಲ್ಲವೂ ಮಿಸ್‌ ಮ್ಯಾಚ್‌ ಆಗಿ ಎದ್ದು ಕಾಣುತ್ತವೆ. ಇವು ಈ ಬಾರಿ ಟೀನೇಜ್‌ ಹುಡುಗಿಯರ ಫಂಕಿ ಲುಕ್‌ಗೆ ಸಾಥ್‌ ನೀಡಿವೆ.

ಫುಲ್‌ ಸ್ಲೀವ್‌ ಕಟೌಟ್‌ ಕ್ರಾಪ್‌ ಟಾಪ್‌ ಸ್ಟೈಲಿಂಗ್‌

ಪ್ಯಾಂಟ್‌ಗೆ ಸೊಂಟ ಕಾಣಿಸುವಂತಹ ಕ್ರಾಪ್‌ ಟಾಪ್‌, ಅಲ್ಲಲ್ಲಿ ಕಟೌಟ್‌ ಆದ ಫುಲ್‌ ಸ್ಲೀವ್‌ ಟಾಪ್‌, ಹೆಸರಿಗೆ ಮಾತ್ರ ಈ ಔಟ್‌ಫಿಟ್‌ ಫುಲ್‌ ಸ್ಲೀವ್‌. ಈ ಟಾಪ್‌ ಈ ಮಾನ್ಸೂನ್‌ ಸೀಸನ್‌ನಲ್ಲಿ ಟೀನೇಜ್‌ ಹುಡುಗಿಯರ ಸ್ಟೈಲಿಂಗ್‌ಗೆ ಸಾಥ್‌ ನೀಡುತ್ತಿದೆ.

ಬಿಲೋ ವೇಸ್ಟ್ ಟೊರ್ನ್‌ ಪ್ಯಾಂಟ್‌ ಸ್ಟೈಲಿಂಗ್‌

ಇದುವರೆಗೂ ಹೈ ವೇಸ್ಟ್ ಫ್ಯಾಷನ್‌ನಲ್ಲಿದ್ದ ಟೋರ್ನ್‌ ಪ್ಯಾಂಟ್‌ ಇದೀಗ ಸೊಂಟದ ಕೆಳಗೆ ಕೂರುವಂತಹ ಡಿಸೈನ್‌ನಲ್ಲಿ ಈ ಮಾನ್ಸೂನ್‌ ಫ್ಯಾಷನ್‌ಗೆ ಎಂಟ್ರಿ ನೀಡಿವೆ. ಟೀನೇಜ್‌ ಹುಡುಗಿಯರ ಬಿಂದಾಸ್‌ ಸ್ಟೈಲಿಂಗ್‌ಗೆ ಸಾಥ್‌ ನೀಡುತ್ತಿವೆ. ಪ್ರಯೋಗಾತ್ಮಕ ಸ್ಟೈಲಿಂಗ್‌ನಲ್ಲಿ ಮಿಕ್ಸ್ ಮ್ಯಾಚ್‌ ಆಗುತ್ತಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಕರ್ನಾಟಕ24 mins ago

KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

Nissan Magnite EZ
ಆಟೋಮೊಬೈಲ್27 mins ago

Nissan Magnite : ನಿಸ್ಸಾನ್‌ ಮ್ಯಾಗ್ನೈಟ್‌ ಇಜಡ್‌- ಶಿಫ್ಟ್‌ ಕಾರು ಹೇಗಿದೆ?; ಪವರ್‌, ಫೀಚರ್‌ಗಳು ಹೇಗಿವೆ? ಇಲ್ಲಿದೆ ವಿವರ

Narendra Modi
ದೇಶ28 mins ago

Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು

Unified Pension Scheme
ವಾಣಿಜ್ಯ32 mins ago

Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು

Actor Darshan Bindass in jail smoking cigarettes with rowdy-sheeters
ಸ್ಯಾಂಡಲ್ ವುಡ್33 mins ago

Actor Darshan : ರೌಡಿಶೀಟರ್‌ಗಳ ಜತೆಗೆ ಸಿಗರೇಟ್‌ ಸೇದುತ್ತಾ ಜೈಲಿನಲ್ಲಿ ನಟ ದರ್ಶನ್‌ ಬಿಂದಾಸ್‌ ಲೈಫ್!‌ ವೈರಲ್‌ ಆಯ್ತು ಫೋಟೊ

PAK vs BNG
ಕ್ರೀಡೆ50 mins ago

PAK vs BNG: ಪಾಕ್​ಗೆ ತವರಿನಲ್ಲೇ 10 ವಿಕೆಟ್​ ಹೀನಾಯ ಸೋಲು; ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾ

ಕರ್ನಾಟಕ1 hour ago

Price Support Scheme: ರೈತರಿಗೆ ಕೇಂದ್ರದಿಂದ ಗುಡ್‌ ನ್ಯೂಸ್; ಬೆಂಬಲ ಬೆಲೆಯಲ್ಲಿ ಹೆಸರು, ಸೂರ್ಯಕಾಂತಿ ಖರೀದಿಸಲು ರಾಜ್ಯಕ್ಕೆ ಸೂಚನೆ

Physical Abuse
ಕಲಬುರಗಿ1 hour ago

Physical Abuse : ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್; ಆತ್ಮಹತ್ಯೆಗೆ ಯತ್ನಿಸಿದ ಯುವತಿ

Viral News
ವೈರಲ್ ನ್ಯೂಸ್1 hour ago

ಸೋಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಬೆಂಗಳೂರು ಮೂಲದ ಯುವತಿಯ ಬೈಸೆಪ್ಸ್ ಫೋಟೊ; ಜಾತೀಯತೆಯ ಚರ್ಚೆಗೆ ಕಾರಣವೇನು?

Shakib Al Hasan
ಕ್ರೀಡೆ1 hour ago

Shakib Al Hasan: ಚೆಂಡೆಸೆದು ಪಾಕ್​ ಆಟಗಾರ ರಿಜ್ವಾನ್​ ಕೆಣಕಿದ ಶಕಿಬ್​ ಅಲ್​ ಹಸನ್; ವಿಡಿಯೊ ವೈರಲ್​

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌