Site icon Vistara News

Road Accident: ಕಾರು- ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು

Road Accident haveri

ಹಾವೇರಿ: ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ (Road Accident) ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕಿನ ಮೇಡ್ಲೇರಿ-ಅಂಕಸಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಸವಣೂರ ತಾಲೂಕಿನ ಜಲ್ಲಾಪುರ ಗ್ರಾಮದ ಮಾಲತೇಶ ಕುದರಿಹಳ್ಳಿ (29) ಹಾಗೂ ಮಾಲತೇಶ ಗೌಡಗೇರಿ (24) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆರೆಯಲ್ಲಿ ಯುವತಿಯ ಶವ, ಆತ್ಮಹತ್ಯೆ ಶಂಕೆ

ಮಂಡ್ಯ: ಮಂಡ್ಯ ತಾಲೂಕಿನ ಬೂದನೂರು ಗ್ರಾಮದ ಬೂದನೂರು ಗ್ರಾಮದ ಕೆರೆಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತ ಯುವತಿಯನ್ನು ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ (22) ಎಂದು ಗುರುತಿಸಲಾಗಿದೆ. ಕೆರೆಯು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬೂದನೂರು ಗ್ರಾಮದದಲ್ಲಿದೆ. ಯುವತಿಯ ಬ್ಯಾಗು, ಚಪ್ಪಲಿ ಕೆರೆ ದಡದ ಮೇಲೆ ಕಂಡುಬಂದಿವೆ.

ನಿನ್ನೆ ಮಧ್ಯಾಹ್ನ ಯುವಕನೊಬ್ಬನೊಂದಿಗೆ ಯುವತಿ ಬೈಕ್‌ನಲ್ಲಿ ಆಗಮಿಸಿದ್ದು, ಕೆಲಕಾಲ ಕೆರೆಯ ಬಳಿ ಕುಳಿತಿದ್ದುದನ್ನು ಕಂಡಿರುವುದಾಗಿ ಕೆಲವು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆ ಕೆರೆ ದಡದಲ್ಲಿದ್ದ ಬ್ಯಾಗು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಯುವತಿಯ ದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮಂಡ್ಯ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಸಹಜ ಸಾವು ದಾಖಲಿಸಿಕೊಳ್ಳಲಾಗಿದ್ದು, ಹಲವು ಕೋನಗಳಲ್ಲಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Murder Case: ಬಾರ್‌ ಮುಚ್ಚಲು ಸಮಯವಾಯ್ತು ಎಂದಿದ್ದಕ್ಕೆ ಕ್ಯಾಶಿಯರ್‌ನ ಕೊಲೆ, ಪೊಲೀಸರ ಎದುರೇ ಇರಿದರು!

Exit mobile version