Site icon Vistara News

Road Accident : ಕೆಎಸ್‌ಆರ್‌ಟಿಸಿ ಬಸ್‌ ಹಿಂದಿನ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

Accident near Tumkur

accident

ಮಂಡ್ಯ: ಬೆಂಗಳೂರಿನ ಮಹಿಳೆಯೊಬ್ಬರು ಮಂಡ್ಯ ಬಸ್‌ ನಿಲ್ದಾಣದಲ್ಲಿ (Mandya News) ಕೆಎಸ್‌ಆರ್‌ ಟಿಸಿ ಬಸ್‌ನಡಿಗೆ (KSRTC bus) ಸಿಲುಕಿ (Road accident) ಪ್ರಾಣ ಕಳೆದುಕೊಂಡಿದ್ದಾರೆ. ಪೂಜಾ ಭಾರತಿ(40) ಎಂಬವರೇ ಪ್ರಾಣ ಕಳೆದುಕೊಂಡ ಮಹಿಳೆ (Woman dead in accident).

ಬೆಂಗಳೂರಿನ ಅಡವಾಡಿಯ ಪೂಜಾ ಭಾರತಿ ಅವರು ಮಂಡ್ಯ ಬಸ್‌ ನಿಲ್ದಾಣಕ್ಕೆ ಪ್ರವೇಶ ಮಾಡುವಾಗ ಒಮ್ಮಿಂದೊಮ್ಮೆಗೆ ಬಸ್‌ ನುಗ್ಗಿ ಬಂದಿದೆ. ಬಸ್‌ ಏಕಾಏಕಿ ತಿರುಗಿದಾಗ ಅದರ ಹಿಂಬದಿಯ ಚಕ್ರಕ್ಕೆ ಸಿಲುಕಿ ಪೂಜಾ ಪ್ರಾಣ ಕಳೆದುಕೊಂಡಿದ್ದಾರೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲು ಈ ಘಟನೆಯಲ್ಲಿ ಮೃತಪಟ್ಟವರು ಒಬ್ಬ ವಿದ್ಯಾರ್ಥಿನಿ ಎಂದು ಹೇಳಲಾಗಿತ್ತು.

ಪೂಜಾ ಭಾರತಿ ಅವರು ಮಂಡ್ಯದ ಸಂಬಂಧಿಕರ ಮನೆಗೆ ಬಂದವರಾಗಿದ್ದು, ಅಲ್ಲಿಂದ ಮರಳಿ ಬೆಂಗಳೂರಿಗೆ ತೆರಳಲು ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಆದರೆ, ಬಸ್‌ ಅವರ ಜೀವವನ್ನೇ ತೆಗೆದಿದೆ.

ಬಸ್‌ ನಿಲ್ದಾಣಗಳಲ್ಲಿ ಬಸ್‌ಗಳ ಚಾಲಕರು ಅತ್ಯಂತ ನಿರ್ಲಕ್ಷ್ಯದಿಂದ ವರ್ತಿಸುತ್ತಿರುವ ಘಟನೆಗಳು ಅಲ್ಲಲ್ಲಿ ಕಂಡುಬರುತ್ತಿವೆ. ಏಕಾಏಕಿ ನುಗ್ಗಿಸುವುದು, ಬೇಕಾಬಿಟ್ಟಿ ಟರ್ನ್‌ ಮಾಡುವುದು ಹೀಗೆ ಜನರ ಜೀವವನ್ನು ಅಪಾಯಕ್ಕೆ ಸಿಲುಕಿಸುವ ರೀತಿಯಲ್ಲಿ ಚಲಾಯಿಸುತ್ತಾರೆ ಎಂಬ ಆರೋಪವಿದೆ.

ವೃದ್ಧ ದಂಪತಿಯನ್ನು ರಾಡ್‌ ನಿಂದ ಹೊಡೆದು ಕೊಲೆ

ದೇವನಹಳ್ಳಿ: ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ರಾಡ್‌ನಿಂದ ಹೊಡೆದು ಕೊಲೆ (Murder Case) ಮಾಡಿರುವ ಘಟನೆ ಬೆಂ. ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ. ಆಸ್ತಿ ವಿಚಾರಕ್ಕೆ ಮಗನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಸೂಲಿಬೆಲೆಯ ರಾಮಕೃಷ್ಣಪ್ಪ (70) ಮತ್ತು ಮುನಿರಾಮಕ್ಕ (65) ಕೊಲೆಯಾದ ದಂಪತಿ. ರಾಡ್‌ನಿಂದ ಹೊಡೆದು ತಂದೆ-ತಾಯಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದ್ದರಿಂದ ಮಗ ನರಸಿಂಹನನ್ನು ಸೂಲಿಬೆಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮದುವೆಯಾದ ಬಳಿಕ ತಂದೆ-ತಾಯಿ ಬಿಟ್ಟು ಪ್ರತ್ಯೇಕವಾಗಿ ಮಗ ವಾಸವಾಗಿದ್ದ. ಒಬ್ಬನೇ ಮಗನಾಗಿದ್ದರೂ ತಂದೆ ತಾಯಿಯನ್ನು ಹೊರಗಿಟ್ಟಿದ್ದ. ವೃದ್ಧ ದಂಪತಿ ಹೆಣ್ಣು ಮಕ್ಕಳಿಗೆ ಆಸ್ತಿ ಕೊಡಲು ಮುಂದಾಗಿದ್ದಕ್ಕೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version