Star Chandru: ರೈತರ ಹಿತ ಕಾಯಲು ಪಂಚ ನ್ಯಾಯ ಜಾರಿಗೆ ಕಾಂಗ್ರೆಸ್‌ ಬದ್ಧ: ಸ್ಟಾರ್ ಚಂದ್ರು - Vistara News

ಮಂಡ್ಯ

Star Chandru: ರೈತರ ಹಿತ ಕಾಯಲು ಪಂಚ ನ್ಯಾಯ ಜಾರಿಗೆ ಕಾಂಗ್ರೆಸ್‌ ಬದ್ಧ: ಸ್ಟಾರ್ ಚಂದ್ರು

Star Chandru: ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ

VISTARANEWS.COM


on

Star Chandru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೇಲುಕೋಟೆ: ರೈತರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಗಂಭೀರವಾಗಿ ಚಿಂತನೆ ನಡೆಸಿದೆ. ಅವರ ಸಂಕಷ್ಟದ ಕರೆಗೆ ಕಿವಿಗೊಟ್ಟು ಪಂಚ ನ್ಯಾಯಗಳನ್ನು ಒಳಗೊಂಡ ʼಕಿಸಾನ್‌ ನ್ಯಾಯʼವನ್ನು ಘೋಷಣೆ ಮಾಡುವ ಮೂಲಕ ರೈತರ ಹಿತ ಕಾಪಾಡಲು ಪಕ್ಷ ಬದ್ಧವಾಗಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹೇಳಿದರು.

ಸರ್ವೋದಯ ಕರ್ನಾಟಕ ಪಕ್ಷದ ಜೊತೆಗೂಡಿ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದ ವೇಳೆ ಮಾತನಾಡಿ, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಅಧಿಕಾರಕ್ಕೇರಿದ ಕೂಡಲೇ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಭರವಸೆ ನೀಡಲಾಗುತ್ತದೆ ಎಂದರು.

ಎಂಎಸ್‌ಪಿಗೆ ಕಾನೂನು ಖಾತರಿ ನೀಡುವುದರಿಂದ ರೈತರಿಗೆ ನ್ಯಾಯಯುತ ಬೆಲೆ ಸಿಗಲಿದ್ದು, ಅವರ ಜೀವನ ಪರಿಸ್ಥಿತಿ ಸುಧಾರಿಸಲಿದೆ. ಇದರ ಜೊತೆಗೆ ರೈತರ ಸಾಲಮನ್ನಾ ಮಾಡುವ ಐತಿಹಾಸಿಕ ಮತ್ತು ಕ್ರಾಂತಿಕಾರಿ ನಡೆಗೆ ಕಾಂಗ್ರೆಸ್ ಮುಂದಾಗಿದ್ದು ಇದಕ್ಕೆ ಜನಾಶೀರ್ವಾದ ಬೇಕಿದೆ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಎಂಎಸ್‌ಪಿ, ಕೃಷಿ ಸಾಲಮನ್ನಾ, ಬೆಳೆ ನಷ್ಟವಾದರೆ 30 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿ ಮಾಡುವ ವಿಮಾ ಯೋಜನೆ, ಹೊಸ ಆಮದು-ರಫ್ತು ನೀತಿ ಹಾಗೂ ಕೃಷಿ ಯಂತ್ರೋಪಕರಣಗಳು, ರಸಗೊಬ್ಬರ, ಬಿತ್ತನೆಬೀಜಗಳ ಮೇಲಿನ ಜಿಎಸ್ ಟಿಯನ್ನು ತೆಗೆದುಹಾಕಲಾಗುತ್ತದೆ ಎಂದರು.

ರೈತರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಪಕ್ಷ ಹತ್ತು ಹಲವು ಯೋಜನೆಗಳನ್ನು ತಂದಿದೆ. ರೈತರು ಈ ದೇಶದ ಬೆನ್ನೆಲುಬು. ರೈತರ ಹಿತ ಕಾಯಲು ಕಾಂಗ್ರೆಸ್ ಬದ್ಧವಾಗಿದೆ. ಈ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಗೆ ಶಕ್ತಿ ತುಂಬಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದು ಕರೆಕೊಟ್ಟರು.

ಇದನ್ನೂ ಓದಿ | Pralhad Joshi: ಬಿಜೆಪಿ ಪ್ರಣಾಳಿಕೆ: ವಿಕಸಿತ ಭಾರತ ನಿರ್ಮಾಣವೇ ಮೋದಿ ಗ್ಯಾರಂಟಿ ಎಂದ ಪ್ರಲ್ಹಾದ್‌ ಜೋಶಿ

ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಾಜಿ ಶಾಸಕ ರಾಮಣ್ಣ, ಎಐಸಿಸಿ ಕಾರ್ಯದರ್ಶಿ ಹಾಗೂ ಕೇರಳದ ಕಾಂಗ್ರೆಸ್ ಶಾಸಕರಾದ ರೋಜಿ ಎಂ. ಜಾನ್ ಸೇರಿದಂತೆ ಸರ್ವೋದಯ ಕರ್ನಾಟಕ ಪಕ್ಷ ಹಾಗೂ ಕಾಂಗ್ರೆಸ್ ನ ಹಲವು ಮುಖಂಡರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಜೂ.23ಕ್ಕೆ ಹೈ ಅಲರ್ಟ್‌! ಇಂದು ವಿಪರೀತ ಮಳೆಯೊಂದಿಗೆ ಬೀಸಲಿದೆ ಬಿರುಗಾಳಿ

Karnataka Weather forecast : ರಾಜ್ಯಾದ್ಯಂತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Rain News) ನೀಡಿದೆ. ಜೂ.23ಕ್ಕೆ ಕರಾವಳಿಗೆ ಹೈ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಜೂ.21ರಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ (Karnataka Weather Forecast) ನೀಡಲಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಸೇರಿ ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

ಬೆಂಗಳೂರಲ್ಲಿ ಚದುರಿದಂತೆ ಮಳೆ

ಬೆಂಗಳೂರಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್‌ 23ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್‌ 22ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಇಂದಿನಿಂದ ಜೂನ್‌ 23ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದೆ. ಬೆಂಗಳೂರು ಸೇರಿದಂತೆ ಚಿಕ್ಕಮಗಳೂರು, ಬಾಗಲಕೋಟೆಯಲ್ಲಿ ಗುರುವಾರ ಮಳೆಯ ಸಿಂಚನವಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳ ಬಿಡುವು ಕೊಟ್ಟಿದ್ದ ವರುಣ (Rain news) ಗುರುವಾರ ಮಧ್ಯಾಹ್ನದ ವೇಳೆಗೆ ಅಬ್ಬರಿಸಿದ್ದ. ಊಟದ ಸಮಯಕ್ಕೆ ಬಂದ ದಿಢೀರ್‌ ಮಳೆಯಿಂದಾಗಿ (Karnataka Weather Forecast) ಹಲವರು ಬಸ್‌ ನಿಲ್ದಾಣ, ಹೋಟೆಲ್‌, ಅಂಗಡಿ ಮುಂಗಟ್ಟುಗಳ ಆಶ್ರಯ ಪಡೆದಿದ್ದರು.

ಬೆಂಗಳೂರಿನ ರಾಜಾಜಿನಗರ, ಮಲ್ಲೇಶ್ವರ, ಶ್ರೀರಾಂಪುರ, ಓಕಳಿಪುರ ಸೇರಿದಂತೆ ವಿಧಾನಸೌಧ, ಶಿವಾಜಿನಗರ, ಮೆಜೆಸ್ಟಿಕ್‌ ಸುತ್ತಮುತ್ತ ಅರ್ಧ ತಾಸಿಗೂ ಹೆಚ್ಚು ಮಳೆಯಾಗಿತ್ತು. ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಆಗುತ್ತಿದ್ದಂತೆ ಮಳೆಯು ಆರ್ಭಟಿಸಿತ್ತು.

ಚಿಕ್ಕಮಗಳೂರಲ್ಲಿ ಗಾಳಿ-ಮಳೆ

ಚಿಕ್ಕಮಗಳೂರಲ್ಲಿ ಗಾಳಿ ಸಹಿತ ಮಳೆಯು ಅಬ್ಬರಿಸಿತ್ತು. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್ ಭಾಗದಲ್ಲಿ ಭಾರೀ ಮಳೆಯಾಗಿದೆ. ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಕೊಟ್ಟಿಗೆಹಾರದಲ್ಲಿ ಸರದಿ ಸಾಲಲ್ಲಿ ವಾಹನಗಳು ನಿಂತಿದ್ದವು.

ಬಾಗಲಕೋಟೆಯಲ್ಲೂ ಕೃಪೆ ತೋರಿದ ವರುಣ

ನಾಲ್ಕೈದು ದಿನಗಳಿಂದ ವಿರಾಮ ನೀಡಿದ್ದ ಮಳೆರಾಯ ಬಾಗಲಕೋಟೆಯಲ್ಲಿ ಮಿಂಚಿದ್ದ. ವಿದ್ಯಾಗಿರಿ, ನವನಗರದ‌ ಸೇರಿ ಜಿಲ್ಲೆಯ ಹಲವೆಡೆ ಮಳೆಯಾಗಿತ್ತು. ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರಲ್ಲಿ ಸಂತಸ ಮೂಡಿತ್ತು. ಹೆಸರು, ಉದ್ದು, ತೊಗರಿ, ಮುಸುಕಿನ ಜೋಳ ಬಿತ್ತನೆ ಮಾಡಿದ್ದ ರೈತರಿಗೆ ಮಳೆಯಿಂದಾಗಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

ಜೂನ್‌ 23ಕ್ಕೆ ಭಯಂಕರ ಮಳೆ!

ಜೂನ್‌ 23ರಂದು ಪ್ರತ್ಯೇಕವಾಗಿ ವಿಪರೀತ ಮಳೆಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಲವಾದ ಗಾಳಿ ಮತ್ತು ಭೂಕುಸಿತದ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಬಲವಾದ ಗಾಳಿಯಿಂದಾಗಿ ಕರಾವಳಿ ಮತ್ತು ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಶುಕ್ರವಾರ ಇಲ್ಲೆಲ್ಲ ಮಳೆ

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ 30-40 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಬೆಂಗಳೂರಲ್ಲಿ ಪ್ರಬಲ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಮಲೆನಾಡಿನಲ್ಲಿ ಭರ್ಜರಿ ಮಳೆ

ನೈರುತ್ಯ ಮುಂಗಾರು ಬುಧವಾರ ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕೊಟ್ಟಿಗೆಹಾರದಲ್ಲಿ 5 ಸೆಂ.ಮೀ, ಕೋಟ, ಕುಂದಾಪುರ, ಗೇರ್ಸೊಪ್ಪ 4 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಆಗುಂಬೆ, ಕಮ್ಮರಡಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.

ಉಳಿದಂತೆ ಕಾರ್ಕಳ, ಕೊಲ್ಲೂರು, ಸಿದ್ದಾಪುರ, ಕಾರವಾರ, ಹೊನ್ನಾವರ, ಬೆಳ್ತಂಗಡಿ, ಮೂಡಿಗೆರೆ, ಶೃಂಗೇರಿ, ಕೃಷ್ಣರಾಜಸಾಗರ ಸೇರಿದಂತೆ, ಭಾಗಮಂಡಲದಲ್ಲಿ 2 ಸೆಂ.ಮೀ ಮಳೆಯಾಗಿದೆ. ತಿಪಟೂರು, ಮಂಕಿ, ಮಂಗಳೂರು , ಅಂಕೋಲಾ, ಪಣಂಬೂರು, ಮಣಿ, ಮೂಲ್ಕಿ, ಉಪ್ಪಿನಂಗಡಿ, ಕೊಪ್ಪ ಹಾಗೂ ಜಯಪುರ, ನಾಪೋಕ್ಲು, ಕಳಸ , ಅಜ್ಜಂಪುರ , ಪೊನ್ನಂಪೇಟೆಯಲ್ಲಿ 1 ಸೆಂ.ಮಿನಷ್ಟು ಮಳೆಯಾಗಿರುವ ವರದಿ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Actor Darshan: ದರ್ಶನ್‌ ಗ್ಯಾಂಗ್‌ನಿಂದ ಪೊಲೀಸ್‌ ಮೇಲೂ ಹಲ್ಲೆ! ಹೊರಬರ್ತಿದೆ ರಾಕ್ಷಸ ಪಡೆಯ ಒಂದೊಂದೇ ಕರಾಳ ಕೃತ್ಯ

Actor Darshan: ಪೊಲೀಸ್‌ ಕಾನ್‌ಸ್ಟೇಬಲ್‌ ನಾಗೇಶ್‌ ಅವರಿಗೆ ಹಲ್ಲೆ ಮಾಡುವುದರೊಂದಿಗೆ, ʼಪೊಲೀಸರು ನಮ್ಮನ್ನೂ ಏನೂ ಮಾಡಲು ಆಗಲ್ಲ, ನಮ್ಮತ್ರ ಏನೂ ಕಿತ್ಕೊಳೋಕೆ ಆಗಲ್ಲʼ ಎಂದು ಧಮಕಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

VISTARANEWS.COM


on

Actor Darshan case Renukaswamy put the dead body first in security guard room
Koo

ಮಂಡ್ಯ: ಬೀಭತ್ಸವಾಗಿ ರೇಣುಕಾಸ್ವಾಮಿ ಕೊಲೆ (Renuka Swamy Murder) ನಡೆಸಿದ ನಟ ದರ್ಶನ್ (Actor Darshan) ಗ್ಯಾಂಗ್‌ ಪೊಲೀಸರನ್ನೂ ಬಿಟ್ಟಿಲ್ಲ. ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಮೇಲೂ ದರ್ಪ ಮೆರೆದಿರುವ ಡಿ ಬಾಸ್‌ ಗ್ಯಾಂಗ್‌, ತೀವ್ರ ಹಲ್ಲೆ (Assault case) ನಡೆಸಿರುವುದು ಬೆಳಕಿಗೆ ಬಂದಿದೆ. ಗಾಯಗೊಂಡ ಪೊಲೀಸ್‌ ಪೇದೆ ಸರ್ಕಾರಿ ಆಸ್ಪತ್ರೆಯಲ್ಲಿ ಇದಕ್ಕಾಗಿ ಚಿಕಿತ್ಸೆ ಪಡೆದ ದಾಖಲೆಯೂ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಇದು ನಡೆದಿರುವುದು ಬೇರೆಲ್ಲೂ ಅಲ್ಲ, ಮದ್ದೂರು ಶಾಸಕರ ಮನೆಯಲ್ಲಿಯೇ ಹಲ್ಲೆ ನಡೆದಿತ್ತು ಎನ್ನಲಾಗಿದೆ. ಶಾಸಕ ಕದಲೂರು ಉದಯ್ ಅವರ ಗನ್ ಮ್ಯಾನ್ ಆಗಿದ್ದ ಡಿಎಆರ್ ಪೇದೆ ನಾಗೇಶ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಮದ್ದೂರಿನಲ್ಲಿ ದರ್ಶನ್‌ ಲೋಕಸಭಾ ಚುನಾವಣೆ ಕಣದ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಮದ್ದೂರು ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ ನಡೆದಿತ್ತು. ಆ ವೇಳೆ ಗನ್ ಮ್ಯಾನ್ ನಾಗೇಶ್ ಜೊತೆ ದರ್ಶನ್ ಪಟಾಲಂ ಗಲಾಟೆ ತೆಗೆದಿದೆ. ಮುಖಂಡರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳುವ ವಿಚಾರದಲ್ಲಿ ಡಿ ಗ್ಯಾಂಗ್‌ಗ ಲಕ್ಷ್ಮಣ್, ನಾಗರಾಜು ಹಾಗೂ ಇತರರು ಜಗಳ ತೆಗೆದಿದ್ದರು. ನಂತರ ಇದೇ ಜಗಳ ಮುಂದುವರೆಸಿ ಕದಲೂರು ಉದಯ್ ಮನೆ ಮುಂದೆ ಪೇದೆ ನಾಗೇಶ್‌ಗೆ ಹಲ್ಲೆ ನಡೆಸಿದ್ದರು.

ಹಲ್ಲೆ ಮಾಡುವುದರೊಂದಿಗೆ, ʼಪೊಲೀಸರು ನಮ್ಮನ್ನೂ ಏನೂ ಮಾಡಲು ಆಗಲ್ಲ, ನಮ್ಮತ್ರ ಏನೂ ಕಿತ್ಕೊಳೋಕೆ ಆಗಲ್ಲʼ ಎಂದು ಧಮಕಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ಪೇದೆ ನಾಗೇಶ್ ಕೆಸ್ತೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ನಂತರ ರಾಜಿ ಸಂಧಾನದ ಮೂಲಕ ನಾಗೇಶರನ್ನು ಶಾಸಕ ಉದಯ್ ಮರಳಿ ಕಳುಹಿಸಿದ್ದರು.

ಇದಾದ ಬಳಿಕ ನೊಂದಿದ್ದ ನಾಗೇಶ್‌, ಶಾಸಕ ಉದಯ್ ಗನ್‌ ಮ್ಯಾನ್ ಕೆಲಸದಿಂದ ಹೊರಬಂದಿದ್ದರು. ಇದೀಗ ಡಿಎಆರ್ ತುಕಡಿಯಲ್ಲಿ ನಾಗೇಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲ್ಲೆ ನಡೆದ ಬಳಿಕ ನಾಗೇಶ್‌ ಮದ್ದೂರಿನ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು.

ದರ್ಶನ್‌ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder Case) ಪ್ರಕರಣಕ್ಕೆ ಸಂಬಂಧಿಸಿ ಎ2 ನಟ ದರ್ಶನ್‌ (Actor Darshan) ಸೇರಿದಂತೆ 9 ಆರೋಪಿಗಳಿಗೆ ಡಿಎನ್‌ಎ ಪರೀಕ್ಷೆ (DNA test) ನಡೆಸಲು ಪೊಲೀಸರು ಮುಂದಾಗಿದ್ದಾರೆ. ಪವಿತ್ರಾ ಗೌಡ (Pavithra Gowda) ಡಿಎನ್‌ಎ ಟೆಸ್ಟ್‌ ಕೂಡ ನಡೆಯಲಿದೆ.

ಇದಕ್ಕಾಗಿ ಆರೋಪಿಗಳ ರಕ್ತ, ಕೂದಲಿನ ಮಾದರಿ ಸಂಗ್ರಹಿಸಲಾಗಿದೆ. ಕೊಲೆ ನಡೆದ ಜಾಗದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗೂ ಇದಕ್ಕೂ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯಲಿದೆ. ಎಫ್ಎಸ್ಎಲ್‌ಗೆ ಈ ಕೂದಲು, ರಕ್ತದ ಮಾದರಿ ಕಳುಹಿಸಿ ತಾಳೆ ನೋಡಲಾಗುತ್ತದೆ. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗಳು ಒಂದೇ ಆದಲ್ಲಿ ಕೊಲೆಗೆ ಮತ್ತಷ್ಟು ಸಾಕ್ಷ್ಯ ಲಭ್ಯವಾಗಲಿದೆ. ಹೀಗಾಗಿ ಆರೋಪಿಗಳ ಡಿಎನ್ಎ ಟೆಸ್ಟ್‌ಗೆ ಪೊಲೀಸರು ತೊಡಗಿದ್ದಾರೆ.

ಹಿಂಸೆಯ ಕರಾಳತೆಗೆ ಬೆಚ್ಚಿದ ಪೊಲೀಸರು

ಪ್ರಕರಣದಲ್ಲಿ ದಿನೇ ‌ದಿನೆ ಹೊರಬರುತ್ತಿರುವ, ರೇಣುಕಾಸ್ವಾಮಿಗೆ ನೀಡಿದ ಚಿತ್ರಹಿಂಸೆಯ ಕರಾಳತೆ ಎಲ್ಲರನ್ನೂ ಬೆಚ್ಚಿಬೀಳಿಸುವಂತಿದೆ. ರೇಣುಕಾಸ್ವಾಮಿ ದೇಹವೆಲ್ಲಾ ಛಿದ್ರಛಿದ್ರವಾಗುವಂತೆ ಹಿಂಸಿಸಲಾಗಿದೆ. ಬಾಸುಂಡೆಗಳು ಎದ್ದು ಕಾಣುವಂತಿದ್ದು, ರಕ್ತ ಮೈಮೇಲೆ ಹೆಪ್ಪುಗಟ್ಟಿತ್ತು. ಆರಂಭದಲ್ಲಿ ಒದ್ದು, ಹೊಡೆದು ಕೊಲ್ಲಲಾಯಿತು ಎಂದಿದ್ದ ಪ್ರಕರಣದಲ್ಲಿ ಮುಂದೆ ಮರ್ಮಾಂಗಕ್ಕೆ ಬಿದ್ದ ಹೊಡೆತ, ದೇಹದಲ್ಲಿ ಹರಿದ ಕರೆಂಟ್‌ನ ಮಾಹಿತಿ ಹೊರಬರುತ್ತಾ ಹೋಯಿತು, ದೊಣ್ಣೆ, ಬೂಟು, ರಿಪೀಸ್ ಪಟ್ಟಿಗಳಿಂದ ರೇಣುಕಾಸ್ವಾಮಿಯ ದೇಹದ ಮೇಲೆ ಬಿದ್ದ ಹೊಡೆತದಿಂದ ಬೆನ್ನಿನ ಮೇಲಿನ ಒಂದಡಿ ಜಾಗದ ಚರ್ಮವೇ ಕಾಣದಂತಾಗಿದೆ. ಸಿಗರೇಟ್‌ನಿಂದ ಸುಟ್ಟಂತಿರುವ ಗಾಯಗಳು, ತಲೆ, ಮುಖ, ಹೊಟ್ಟೆಯ ಭಾಗಗಳಿಗೆ ಬಿದ್ದ ಹೊಡೆತ ಮತ್ತು ಗಾಯದ ಗುರುತುಗಳು ರೇಣುಕಾಸ್ವಾಮಿ ಮೇಲೆ ಆದ ಹಲ್ಲೆಯ ತೀವ್ರತೆಯನ್ನು ಸಾರಿ ಸಾರಿ ಹೇಳಿವೆ.

ಇದನ್ನೂ ಓದಿ: Pavithra Gowda: ಪವಿತ್ರಾ ಗೌಡಳ ಸಮಪಾಲು- ಸಮಬಾಳು ಪಾಲಿಸಿ! ದರ್ಶನ್ ಪತ್ನಿ ಜತೆ ಇರುವುದೆಲ್ಲ ಇವಳಿಗೂ ಬೇಕಿತ್ತು!

Continue Reading

ಪ್ರಮುಖ ಸುದ್ದಿ

Actor Darshan: ʼದರ್ಶನ್‌ ನನ್ನ ಸ್ವಂತ ಮಗʼ ಎಂದಿದ್ದ ಸುಮಲತಾ ಅಂಬರೀಶ್‌ ಏಕೀ ಗಾಢ ಮೌನ?

Actor Darshan: ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲುಪಾಲಾದ ಮೇಲೆ ಸುಮಲತಾ ಫುಲ್ ಸೈಲೆಂಟ್ ಆಗಿದ್ದಾರೆ. ಅತ್ತ ಮಾಧ್ಯಮಗಳಿಗೂ ಯಾವ ಹೇಳಿಕೆಯನ್ನೂ ಕೊಟ್ಟಿಲ್ಲ. ಇತ್ತ ಸೋಷಿಯಲ್ ಮೀಡಿಯಾದಲ್ಲೂ ಗಾಢ ಮೌನಕ್ಕೆ ಜಾರಿದ್ದಾರೆ. ಅಭಿಷೇಕ್ ಅಂಬರೀಶ್ ಕೂಡ ದರ್ಶನ್‌ ವಿಚಾರದಲ್ಲಿ ಅಂತರ ಕಾಪಾಡಿಕೊಂಡಿದ್ದಾರೆ.

VISTARANEWS.COM


on

actor Darshan and Sumalatha Ambareesh
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್‌ (Actor Darshan) ಕುರಿತು ರಮ್ಯ, ರಚಿತಾ, ಸುದೀಪ್‌, ಉಪೇಂದ್ರ ಸೇರಿದಂತೆ ಚಿತ್ರರಂಗದ ಹಲವಾರು ಸ್ಟಾರ್‌ಗಳು ಹಾಗೂ ರಾಜಕಾರಣಿಗಳು ಹೇಳಿಕೆ ನೀಡಿದ್ದಾರೆ. ಆದರೆ ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್‌ (Sumalatha Ambareesh) ಮಾತ್ರ ತುಟಿ ಪಿಟಕ್‌ ಎಂದಿಲ್ಲ. ಒಂದು ಕಾಲದಲ್ಲಿ ʼದರ್ಶನ್‌ ನನ್ನ ಸ್ವಂತ ಮಗʼ ಎಂದಿದ್ದ ಸುಮಲತಾ, ಈ ಪ್ರಕರಣದಲ್ಲಿ ಮೌನ ಕಾಪಾಡಿಕೊಂಡಿರುವುದು ಕುತೂಹಲ ಮೂಡಿಸಿದೆ.

ನಟ ಅಂಬರೀಶ್ ಇದ್ದ ಕಾಲದಿಂದಲೂ, ʼದರ್ಶನ್‌ ನಮ್ಮ ದೊಡ್ಡ ಮಗʼ ಅನ್ನುತ್ತಿದ್ದ ಸುಮಲತಾ, 2019ರಲ್ಲಿ ಮಂಡ್ಯದಲ್ಲಿ ಲೋಕಸಭಾ ಚುನಾವಣೆಗೆ ನಿಂತಾಗ ಪ್ರಚಾರಕ್ಕೆ ದರ್ಶನ್‌ ಬೆಂಬಲ ಪಡೆದಿದ್ದರು. ಇಪ್ಪತ್ತು ದಿನಗಳ ಕಾಲ ಸುಮಲತಾ ಜತೆ ಪ್ರಚಾರ ಮಾಡಿ ಅವರನ್ನು ಗೆಲ್ಲಿಸುವಲ್ಲಿ ದರ್ಶನ್ ಪ್ರಮುಖ ಪಾತ್ರ ವಹಿಸಿದ್ದ.

ಬಳಿಕ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿಯ ಕಾರಣದಿಂದಾಗಿ ಸುಮಲತಾ ಹಿಂದೆ ಸರಿದಾಗಲೂ ತಾಯಿಯ ಜತೆ ಇರ್ತೀನಿ ಎಂದು ದರ್ಶನ್ ಹೇಳಿದ್ದ. ಮಂಡ್ಯದಲ್ಲಿ ಸಭೆ ನಡೆಸಿ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧ ಎಂದಿದ್ದ ದರ್ಶನ್‌. ಅಮ್ಮನ ನಿರ್ಧಾರವೇ ನನ್ನ ನಿರ್ಧಾರ ಎಂದಿದ್ದ.

ʼಇವನು ನಮ್ಮ ದತ್ತು ಮಗ ಅಲ್ಲ ಸ್ವಂತ ಮಗ. ಮಗನ ಜತೆ ಸದಾ ಇರ್ತೀನಿʼ ಎಂದಿದ್ದ ಸುಮಲತಾ, ಇದೀಗ ಕೊಲೆ ಪ್ರಕರಣದಲ್ಲಿ ಆತ ಜೈಲುಪಾಲಾದ ಮೇಲೆ ಫುಲ್ ಸೈಲೆಂಟ್ ಆಗಿದ್ದಾರೆ. ಅವರು ಅತ್ತ ಮಾಧ್ಯಮಗಳಿಗೂ ಯಾವ ಹೇಳಿಕೆಯನ್ನೂ ಕೊಟ್ಟಿಲ್ಲ. ಇತ್ತ ಸೋಷಿಯಲ್ ಮೀಡಿಯಾದಲ್ಲೂ ಗಾಢ ಮೌನಕ್ಕೆ ಜಾರಿದ್ದಾರೆ. ಅಭಿಷೇಕ್ ಅಂಬರೀಶ್ ಕೂಡ ದರ್ಶನ್‌ ವಿಚಾರದಲ್ಲಿ ಅಂತರ ಕಾಪಾಡಿಕೊಂಡಿದ್ದಾರೆ. ಯಾವುದಕ್ಕೂ ಅಭಿಷೇಕ್‌ ಪ್ರತಿಕ್ರಿಯೆ ನೀಡಿಲ್ಲ.

ಸುಮಲತಾ ಮೌನದ ಹಿಂದೆ ಹಲವು ಕಾರಣಗಳನ್ನು ಊಹಿಸಲಾಗಿದೆ. ದರ್ಶನ್‌ ಅಪರಾಧಿ ಅಥವಾ ನಿರಪರಾಧಿ ಎಂದು ಸಾಬೀತಾಗುವವರೆಗೆ ಏನೇ ಆಡಿದರೂ ಆಮೇಲೆ ನಾಲಿಗೆ ಕಚ್ಚಿಕೊಳ್ಳಬೇಕಾಗಬಹುದು ಎಂಬ ಎಚ್ಚರಿಕೆ ಇದರ ಹಿಂದಿದೆ. ಈ ಸಮಯದಲ್ಲಿ ಆರೋಪಿಯನ್ನು ಬೆಂಬಲಿಸಿದರೆ ಅದು ತಮ್ಮ ತಲೆಗೂ ಬರಬಹುದು ಎಂದು ಆತಂಕವೂ ಇದೆ. ಮಂಡ್ಯದಲ್ಲೂ ಕೂಡ ದರ್ಶನ್‌ ರೌಡಿಸಂ ಚಾಳಿಯ ಬಗ್ಗೆ ಜನರಲ್ಲಿ ಸಿಟ್ಟೂ ಇದೆ.

ದರ್ಶನ್‌ ಈ ಪ್ರಕರಣದಿಂದ ತನ್ನನ್ನು ಪಾರು ಮಾಡುವಂತೆ ಹಲವು ಪ್ರಭಾವಿ ರಾಜಕಾರಣಿಗಳ ಬೆನ್ನಿಗೆ ಬಿದ್ದಿದ್ದರು ಎನ್ನಲಾಗಿದೆ. ಆದರೆ ಪ್ರಕರಣದ ಗಂಭೀರತೆ ಅರಿತ ಅವರ್ಯಾರೂ ದರ್ಶನ್‌ ಸಪೋರ್ಟ್‌ಗೆ ಬಂದಿಲ್ಲ. ಸಿಎಂ ಕೂಡ ಈ ಪ್ರಕರಣದಲ್ಲಿ ಎಷ್ಟೇ ಪ್ರಭಾವ ಬಳಸಿದರೂ ಅದಕ್ಕೆ ಒಳಗಾಗಬೇಡಿ, ಯಾರನ್ನೂ ಬಿಡಬೇಡಿ ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ, ಈಗ ದರ್ಶನ್‌ ಕುರಿತ ಆಪ್ತತೆ ಪ್ರದರ್ಶನ ಮಾಡುವುದು ಸರಿಯಲ್ಲ. ಇದು ರಾಜಕೀಯವಾಗಿಯೂ ತಮಗೆ ಮುಳುವಾಗಬಹುದು ಎಂದು ಸುಮಲತಾಗೆ ಅನಿಸಿದ್ದು, ಇದೇ ಅಮ್ಮ- ಮಗನ ಬಾಂಧವ್ಯದಲ್ಲಿ ಬಿರುಕು ಮೂಡಲು ಕಾರಣವಾಗಿದೆ ಎನ್ನಲಾಗಿದೆ.

`ನಾನೇ 30 ಲಕ್ಷ ರೂ. ಕೊಟ್ಟೆ….’ ಕೊಲೆ ಬಗ್ಗೆ ಸ್ವ ಇಚ್ಛೆ ಹೇಳಿಕೆ ನೀಡಿದ ದರ್ಶನ್‌

ರೇಣುಕಾ ಸ್ವಾಮಿ ಹತ್ಯೆ (Renuka Swamy murder case) ಕೇಸ್‌ನ ಆರೋಪಿ, ನಟ ದರ್ಶನ್‌ (Actor Darshan) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸ್ವ ಇಚ್ಛೆ ಹೇಳಿಕೆ ನೀಡಿದ್ದಾನೆ. ಪ್ರಕರಣ ಮುಚ್ಚಿಹಾಕಲು 30 ಲಕ್ಷ ರೂ. ನೀಡಿರುವುದಾಗಿ ತಿಳಿಸಿದ್ದಾನೆ.

ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಅಲಿಯಾಸ್‌ ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ ನೀಡಿದ್ದು, ಅದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೊಲೆಯಾದ ವ್ಯಕ್ತಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಬರಿಸಲು ಪ್ರದೂಶ್‌ಗೆ 30 ಲಕ್ಷ ಹಣ ನೀಡಿರುವುದಾಗಿ ದರ್ಶನ್‌ ಸ್ವ ಇಚ್ಛೆ ಹೇಳಿಕೆ ನೀಡಿದ್ದಾನೆ.

ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಹಲ್ಲೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂದು ದರ್ಶನ್‌ ಒಪ್ಪಿಕೊಂಡಿಲ್ಲ. ಶೆಡ್‌ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು, ಜೂನ್‌ 8ರಂದು ರಾತ್ರಿ ದರ್ಶನ್‌ ತನ್ನ ಜೀಪಿನಲ್ಲಿ ಶೆಡ್‌ ಕಡೆಗೆ ಆಗಮಿಸಿದ್ದನ್ನು ತೋರಿಸಿವೆ. ಹತ್ಯೆಯ ನಂತರ ದರ್ಶನ್‌ ಆರೋಪಿಗಳ ಜೊತೆಗೆ ಪಾರ್ಟಿ ಮಾಡಿದ್ದು ಕೂಡ ಪ್ರತ್ಯಕ್ಷದರ್ಶಿಗಳ ಸಾಕ್ಷಿಯಿಂದ ಗೊತ್ತಾಗಿದೆ. ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ಯಾವುದೇ ಸಿಸಿಟಿವಿ ಸಾಕ್ಷಿಗಳನ್ನು ಆರೋಪಿಗಳು ಉಳಿಸಿಲ್ಲ.

ಇದನ್ನೂ ಓದಿ: Actor Darshan: ನಮ್ಮ ಚಟ, ಚಟ್ಟ ಹತ್ತಿಸುವರೆಗೂ ಇರಬಾರದು ಎಂದು ದರ್ಶನ್‌ಗೆ ತಿರುಗೇಟು ಕೊಟ್ಟ ಉಮಾಪತಿ!

Continue Reading
Advertisement
Engineering Seats
ಶಿಕ್ಷಣ20 mins ago

Engineering Seats: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಈ ಬಾರಿ ಹೆಚ್ಚು ಸೀಟುಗಳು ಲಭ್ಯ!

Pavithra Gowda Number 6024 in parappana jail
ಕ್ರೈಂ21 mins ago

Pavithra Gowda: ಪವಿತ್ರಾ ಗೌಡ ಈಗ ಕೈದಿ ನಂಬರ್ 6024; ಹೈಫೈ ಲೈಫ್ ಲೀಡ್ ಮಾಡಿದ್ದ ನಟಿ ಈಗ ಜೈಲು ಹಕ್ಕಿ!

assault Case
ಕ್ರೈಂ35 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ39 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್42 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest58 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest1 hour ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ1 hour ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ2 hours ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌