Site icon Vistara News

Murder in Mandya : ಎರಡು ಕುಟುಂಬಗಳ ಜಗಳ ಬಿಡಿಸಲು ತೆರಳಿದ್ದ ವ್ಯಕ್ತಿಯ ಹತ್ಯೆ

ruckus over financial issues, Son-in-law's gruesome murder by father-in-law in yadgiri

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದು ಒಬ್ಬ ವ್ಯಕ್ತಿಯ ಸಾವಿನಲ್ಲಿ ಅಂತ್ಯವಾಗಿದೆ. ಮತ್ತೊಬ್ಬನ ಮೇಲೆ ತೀವ್ರ ಹಲ್ಲೆಯೂ ಆಗಿದೆ. ಮಂಡ್ಯ ಜಿಲ್ಲೆಯ ( Murder in Mandya) ಮಳವಳ್ಳಿ ತಾಲೂಕಿನ ಮಂಚನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಘಟನೆಯಲ್ಲಿ ಜಗಳ ಬಿಡಿಸಲು ಬಂದ ಚಿಕ್ಕಮಾದಯ್ಯನ ತಲೆಗೆ ಪೆಟ್ಟುಬಿದ್ದು ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ.
ಮೃತ ಚಿಕ್ಕಮಾದಯ್ಯನ ಮಗ ಸೋಮಶೇಖರನ ಮೇಲೆ ಕೊಡಲಿಯಿಂದ ಹಲ್ಲೆ ನಡೆದಿದೆ. ಹಲ್ಲೆಗೆ ಒಳಗಾದ ಸೋಮಶೇಖರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version