Site icon Vistara News

Murder Case: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಯುವಕನ ಕೊಚ್ಚಿ ಕೊಲೆ

mandya murder case

ಮಂಡ್ಯ: ಕುತ್ತಿಗೆಗೆ ಹಗ್ಗದಿಂದ ಬಿಗಿದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಕೊಲೆ (Murder Case) ಮಾಡಲಾಗಿದೆ. ಮಂಡ್ಯ ಜಿಲ್ಲೆ (Mandya news) ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಶಿವಾನಂದ (19) ಮೃತ ಯುವಕ. ಆತನ ಮನೆಯಲ್ಲಿಯೇ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಎಳನೀರು ವ್ಯಾಪಾರ ಮಾಡುತ್ತಿದ್ದ ಯುವಕನ ಮನೆಯಲ್ಲೇ ತಡರಾತ್ರಿ ಹತ್ಯೆ ನಡೆದಿದೆ. ಯುವಕನೂ ಭಾಗಿಯಾಗಿರುವ ಅನೈತಿಕ ಸಂಬಂಧವೊಂದರ (Illicit relationship) ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂಬ ಶಂಕೆಯಿದ್ದು, ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಂಗಭದ್ರಾ ನದಿಯಲ್ಲಿ ಯುವಕ ನಾಪತ್ತೆ

ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ಕೊಪ್ಪಳ ತಾಲೂಕಿನ ಹುಲಿಗಿ ಬಳಿ ತುಂಗಭದ್ರಾ ನದಿಯಲ್ಲಿ ಘಟನೆ ನಡೆದಿದೆ.

ಯಲಬುರ್ಗಾ ತಾಲೂಕಿನ ಕುದ್ರಿಕೋಟಗಿಯ ಯುವಕ ಕನಕಪ್ಪ (17) ನಾಪತ್ತೆಯಾದ ವ್ಯಕ್ತಿ. ನಿನ್ನೆ ಸಂಜೆ ನಡೆದ ಘಟನೆಯಿದು. ಗೌರಿಹುಣ್ಣಿಮೆ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಹುಲಿಗಿಗೆ ಬಂದಿದ್ದ ಯುವಕ ಸಂಜೆ ನದಿಯ ನೀರು ಕುಡಿಯಲು ಹೋಗಿ ನಾಪತ್ತೆಯಾಗಿದ್ದಾನೆ. ಯುವಕನ ಹುಡುಕುವ ಪ್ರಯತ್ನವನ್ನು ಪೊಲೀಸರು ಮಾಡುತ್ತಿಲ್ಲ ಎಂದು ಯುವಕನ ಸಂಬಂಧಿಗಳು ಆರೋಪಿಸಿದ್ದಾರೆ.

ಅನ್ಯಕೋಮಿನ ಜೋಡಿಗೆ ಬಜರಂಗ ದಳ ತರಾಟೆ

ಮಂಗಳೂರು: ಮಂಗಳೂರಿನಲ್ಲಿ ಸ್ಕೂಟರ್‌ನಲ್ಲಿ ಸುತ್ತಾಡುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಬೆನ್ನಟ್ಟಿ ಹೋದ ಬಜರಂಗದಳ (Bhajarang Dal) ಕಾರ್ಯಕರ್ತರು, ಅವರನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ‌ ಘಟನೆ ನಡೆದಿದೆ. ಮಂಗಳೂರಿನ ಮಂಕಿ ಸ್ಟಾಂಡ್ ನಿವಾಸಿ, ಅನ್ಯಕೋಮಿನ ಯುವಕನೊಂದಿಗೆ‌ ಚಿಕ್ಕಮಗಳೂರಿನ‌ ಯುವತಿ ಸುತ್ತಾಡುತ್ತಿದ್ದುದನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಗಮನಿಸಿ ಬೆನ್ನಟ್ಟಿದ್ದರು.

ಮಂಕಿ ಸ್ಟಾಂಡ್‌ನ ಮಳಿಗೆಯೊಂದರಲ್ಲಿ ಈ ಜೋಡಿ ಉದ್ಯೋಗದಲ್ಲಿದೆ. ಸ್ಕೂಟರ್‌ನಲ್ಲಿ ಜೋಡಿಯ ಸುತ್ತಾಟ ಗಮನಿಸಿ ಬೈಕ್‌ಗಳಲ್ಲಿ ಬೆನ್ನಟ್ಟಿದ ಬಜರಂಗದಳ ಕಾರ್ಯಕರ್ತರು, ಮಂಕಿಸ್ಟಾಂಡ್ ಬಳಿ ಸ್ಕೂಟರ್ ಅಡ್ಡ ಹಾಕಿ ಜೋಡಿಯನ್ನು ತರಾಟೆಗೆ ತೆಗೆದುಕೊಂಡರು.

ಕೂಡಲೇ ಇನ್ನೊಂದು ಕೋಮಿನ ಯುವಕರ ತಂಡವೂ ಸ್ಥಳದಲ್ಲಿ ಜಮಾಯಿಸಿದೆ. ಎರಡೂ ಕೋಮುಗಳ ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪಾಂಡೇಶ್ವರ ಠಾಣೆಯ ಪೊಲೀಸರು ಮಧ್ಯ ಪ್ರವೇಶಿಸಿ, ಗುಂಪನ್ನು ಚದುರಿಸಿದರು. ಜೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ‌ ನಡೆಸುತ್ತಿದ್ದಾರೆ. ‌ಗುಂಪಿನ ಇಬ್ಬರು ಆರೋಪಿಗಳನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಒಂದು ತಿಂಗಳ ಹಿಂದೆ ಶೃಂಗೇರಿ ದೇವಸ್ಥಾನದಿಂದ (Shringeri Temple) ಮರಳುತ್ತಿದ್ದ, ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ವೈದ್ಯರಾಗಿದ್ದವರ ಕಾರೊಂದನ್ನು ಅಡ್ಡಗಟ್ಟಿದ ಐವರ ತಂಡ ಅದರಲ್ಲಿದ್ದವರ ಮೇಲೆ ಹಲ್ಲೆ ಮಾಡಿತ್ತು. ಇನ್ನೊಂದು ಪ್ರಕರಣದಲ್ಲಿ ವೈದ್ಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಲಾಗಿತ್ತು.

ಇದನ್ನೂ ಓದಿ: Attack on youth: ನಾದಿನಿ ಜತೆ ಅಶ್ಲೀಲ ವರ್ತನೆ ಪ್ರಶ್ನಿಸಿದ್ದಕ್ಕೆ ಯದ್ವಾತದ್ವಾ ಹಲ್ಲೆ, ಮುಖಕ್ಕೆ ಮೂತ್ರ ಮಾಡಿ ವಿಕೃತಿ

Exit mobile version