ಕರ್ನಾಟಕ
Mallikarjun Kharge: ಖರ್ಗೆ ಮತ್ತವರ ಹೆಂಡತಿ ಮಕ್ಕಳ ಹತ್ಯೆಗೆ ಮಣಿಕಂಠ ರಾಠೋಡ್ ಸಂಚು; ಆಡಿಯೊ ಬಿಟ್ಟ ಕಾಂಗ್ರೆಸ್
Karnataka Election 2023: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ದ್ವೇಷ ರಾಜಕಾರಣ ಆರಂಭವಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬದವರ ಹತ್ಯೆಗೆ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಸಂಚು ರೂಪಿಸಿದ್ದಾರೆ ಎಂದು ಪತ್ರಿಕಾಗೋಷ್ಠಿ ನಡೆಸಿ ಆರೋಪಿಸಿದ್ದಾರೆ.
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಮತ್ತವರ ಕುಟುಂಬದವರ ಹತ್ಯೆಗೆ ಸಂಚು ರೂಪಿಸಲಾಗಿದ್ದು, ಅವರಿಗೆ ಜೀವ ಬೆದರಿಕೆ ಇದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಹಾಗೂ ಕಾಂಗ್ರೆಸ್ ವಕ್ತಾರ ಪವನ್ ಖೇರಾ (Pawan Khera) ಗಂಭೀರ ಆರೋಪ ಮಾಡಿದ್ದು, ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ (Manikanta Rathod) ಈ ಬಗ್ಗೆ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಶನಿವಾರ (ಮೇ 6) ಜಂಟಿ ಸುದ್ದಿಗೋಷ್ಠಿ ನಡೆಸಿದ ರಣದೀಪ್ ಸಿಂಗ್ ಸುರ್ಜೇವಾಲ, ಪವನ್ ಖೇರಾ, ಮಲ್ಲಿಕಾರ್ಜುನ ಖರ್ಗೆ, ಹೆಂಡತಿ ಮತ್ತು ಮಕ್ಕಳನ್ನು ಸಾಫ್ (ಸರ್ವನಾಶ) ಮಾಡುತ್ತೇನೆ ಎಂದು ಮಣಿಕಂಠ ರಾಠೋಡ್ ಹೇಳಿದ್ದಾನೆ. ಇದು ತುಂಬ ಅಪಾಯಕಾರಿ ನಡೆ. ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಆತಂಕದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಕೊಲೆಗೆ ನಡೆದಿರುವ ಸ್ಕೆಚ್ ಬಗ್ಗೆ ತಿಳಿದಿದ್ದರೂ ಬಿಜೆಪಿ ನಾಯಕರು ಇದನ್ನು ಬಳಸಿಕೊಳ್ಳುತ್ತಿದ್ದಾರೆ. ದಲಿತ ನಾಯಕನ ಹತ್ಯೆಗೆ ಹೊರಟಿದ್ದಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದರು.
ಇದನ್ನೂ ಓದಿ: Tirupati Temple: ತಿರುಪತಿ ತಿರುಮಲ ದರ್ಶನ ಮಾಡಬೇಕೇ?: ಇಲ್ಲಿವೆ ಮಾಹಿತಿ
ಮೋದಿ, ಬೊಮ್ಮಾಯಿ ಮೇಲೆ ಆಕ್ರೋಶ
ಬಿಜೆಪಿ ತನ್ನ ದ್ವೇಷದ ಮೂಲಕ ಕರ್ನಾಟಕದ ಮಣ್ಣಿನ ಮಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲುವ ಸಂಚು ರೂಪಿಸಿ ಪಾಪದ ಕೃತ್ಯ ಎಸಗಿದೆ. ಹತ್ಯೆಗೆ ಸಂಚು ನಡೆದಿದ್ದರೂ ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿಯು ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ಸೇರಿದಂತೆ ಇಡೀ ಕುಟುಂಬವನ್ನೇ ಹತ್ಯೆ ಮಾಡುವ ಸಂಚು ರೂಪಿಸಿದೆ ಎಂದು ಸುರ್ಜೇವಾಲ ಆರೋಪ ಮಾಡಿದರು.
ನರೇಂದ್ರ ಮೋದಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಆತ್ಮೀಯ ನೀಲಿ ಕಂಗಳ ಹುಡುಗ ಹಾಗೂ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಆಡಿಯೊದಲ್ಲಿ ಈ ಸಂಚು ಸ್ಪಷ್ಟವಾಗಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಕನ್ನಡ ನಾಡಿನ ಮಗ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷ ಕಾರುತ್ತಲೇ ಬಂದಿದೆ. ಖರ್ಗೆ ಅವರು ದಲಿತ ಹಾಗೂ ಕಾರ್ಮಿಕ ಕುಟುಂಬದಲ್ಲಿ ಜನಿಸಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೆ ಬೆಳೆದು ಬಂದಿರುವುದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಖರ್ಗೆ ವಿರುದ್ಧ ಸಂಚು ರೂಪಿಸುತ್ತಿದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು.
ಹತ್ಯೆಗೆ ಬಹಿರಂಗ ಸಂಚು
ಫೆ.27, 2023ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಛತ್ರಿ ಕೆಳಗೆ ನಿಂತಿಲ್ಲ ಎಂದು ಹೇಳುವ ಮೂಲಕ ಲೇವಡಿ ಮಾಡಿದ್ದರು. ಬಿಜೆಪಿಯ ದ್ವೇಷಪೂರಿತ ಹೇಳಿಕೆ ಅಲ್ಲಿಗೆ ನಿಲ್ಲಲಿಲ್ಲ. ಇನ್ನು ಬಿಜೆಪಿಯ ರಾಜಸ್ಥಾನದ ಶಾಸಕ ಹಾಗೂ ಪ್ರಧಾನ ಕಾರ್ಯದರ್ಶಿ ಮದನ್ ದಿಲಾವರ್ ಅವರು ಮೇ 02ರಂದು ಮಾತನಾಡುತ್ತಾ, ಖರ್ಗೆ ಅವರಿಗೆ 80 ವರ್ಷ ವಯಸ್ಸಾಗಿದ್ದು, ದೇವರು ಅವರನ್ನು ಯಾವಾಗ ಬೇಕಾದರೂ ಕರೆಸಿಕೊಳ್ಳಬಹುದು ಎಂದು ಖರ್ಗೆ ಅವರ ಸಾವನ್ನು ಬಯಸಿದ್ದರು. ಈಗ ಬಿಜೆಪಿ ನಾಯಕರು ಬಹಿರಂಗವಾಗಿ ಖರ್ಗೆ ಹಾಗೂ ಅವರ ಕುಟುಂಬದ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸುರ್ಜೇವಾಲ ಆರೋಪ ಮಾಡಿದರು.
ಕೆಲ ದಿನಗಳ ಹಿಂದೆ ಬಿಜೆಪಿ ಸಚಿವ ಅಶ್ವತ್ಥನಾರಾಯಣ ಸಿದ್ದರಾಮಯ್ಯ ಅವರ ವಿಚಾರದಲ್ಲೂ ಇದೇ ರೀತಿಯ ಮಾತುಗಳನ್ನಾಡಿದ್ದರು. ಬಿಜೆಪಿಯ ಹತಾಶೆ ಹತ್ಯೆ ಮಾಡುವ ಹಂತಕ್ಕೆ ತಲುಪಿದೆ. ಮೋದಿ ಅವರೇ ನೀವು ರಾಜ್ಯದಲ್ಲಿ ಪ್ರಚಾರ ಮಾಡುತ್ತಿದ್ದೀರಿ, ಇತ್ತ ನಿಮ್ಮ ನಾಯಕರು ಹತ್ಯೆ ಬಗ್ಗೆ ಮಾತನಾಡುತ್ತಿದ್ದಾರೆ. ಬಿಜೆಪಿ ಪ್ರಜಾತಂತ್ರದ ಹತ್ಯೆ ಮಾತ್ರವಲ್ಲ ವಿರೋಧ ಪಕ್ಷಗಳ ನಾಯಕರ ಹತ್ಯೆಯ ಸಂಚು ಈಗ ಬಯಲಾಗುತ್ತಿದೆ. ಇದೆಲ್ಲದರ ಜವಾಬ್ದಾರಿ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳಾದ್ದಾಗಿದ್ದು, ಇವರು ಈ ವಿಚಾರವಾಗಿ ಉತ್ತರ ನೀಡಬೇಕು’ ಎಂದು ತಿಳಿಸಿದರು.
ರಕ್ತದಾಹ ನೀಗುವುದಾದರೆ ಅವರನ್ನು ಹತ್ಯೆ ಮಾಡಿ
ಚುನಾವಣಾ ಆಯೋಗದ ಮೇಲೆ ಭರವಸೆ ಇಟ್ಟು ಆಯೋಗಕ್ಕೆ ಈ ವಿಚಾರವಾಗಿ ದೂರು ನೀಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಣದೀಪ್ ಸಿಂಗ್ ಸುರ್ಜೇವಾಲ, “‘ಚುನಾವಣಾ ಆಯೋಗವು ಕೇವಲ ಕಾಂಗ್ರೆಸ್ ನಾಯಕರಿಗೆ ಮಾತ್ರ ನೋಟಿಸ್ ನೀಡುತ್ತದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಅವರು ಚುನಾವಣಾ ಆಯೋಗ ಹಾಗೂ ದೇಶದ ಕಾನೂನನ್ನು ನಿಯಂತ್ರಿಸುತ್ತಿದ್ದಾರೆ. ಬಿಜೆಪಿ ನಾಯಕರು ನಿರಂತರವಾಗಿ ಕಾನೂನು ಉಲ್ಲಂಘನೆ ಮಾಡುತ್ತಿದ್ದರೂ ಚುನಾವಣಾ ಆಯೋಗ ಯಾವ ಕ್ರಮ ಕೈಗೊಂಡಿದೆ? ಮಲ್ಲಿಕಾರ್ಜುನ ಖರ್ಗೆ ಅವರ ಹತ್ಯೆಗೆ ಸಂಚು ರೂಪಿಸುವಷ್ಟು ನೀಚ ಮಟ್ಟಕ್ಕೆ ಬಿಜೆಪಿ ಇಳಿಯುವುದಾದರೆ, ಅವರ ಹತ್ಯೆ ಮಾಡಲಿ. ಆ ಮೂಲಕವಾದರೂ ಬಿಜೆಪಿ ರಕ್ತದಾಹ ನೀಗುವುದಾದರೆ ಅವರನ್ನು ಹತ್ಯೆ ಮಾಡಿ’ ಎಂದು ಹರಿಹಾಯ್ದರು. ಕೆಪಿಸಿಸಿ ವಕ್ತಾರ ರಮೇಶ್ ಬಾಬು ಸೇರಿದಂತೆ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಕಾಂಗ್ರೆಸ್ ಸುದ್ದಿಗೋಷ್ಠಿಯ ವಿಡಿಯೊ ಇಲ್ಲಿದೆ; ಖರ್ಗೆ ಬಗ್ಗೆ ಮಾತನಾಡಿದ ಆಡಿಯೊದಲ್ಲೇನಿದೆ?
ಏನಿದು ಆಡಿಯೊ?
ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಹಾಗೂ ಬಿಜೆಪಿ ಮುಖಂಡ ರವಿ ಎಂಬುವವರು ಮಾತನಾಡಿದ್ದಾರೆನ್ನಲಾದ ಆಡಿಯೊ ಈಗ ಬಹಿರಂಗಗೊಳಿಸಲಾಗಿದೆ. ಇದರಲ್ಲಿ ನನ್ನ ಮೇಲೆ 44 ಕೇಸ್ ಇವೆ ಎಂದು ಹೇಳಿದವರು ಯಾರು? ಎಂದು ಅವಾಚ್ಯ ಶಬ್ದಗಳನ್ನು ಉಪಯೋಗಿಸಿ ಮಣಿಕಂಠ ಕೇಳುತ್ತಾರೆ. ಅದಕ್ಕೆ ರವಿ, ನಾವು ಯಾರೂ ಈ ರೀತಿ ಆರೋಪ ಮಾಡುವುದಿಲ್ಲ. ಖರ್ಗೆ ಕಡೆಯವರು ಮಾತನಾಡುತ್ತಾರೆ ಎಂದು ಹೇಳುತ್ತಾರೆ. ಅದಕ್ಕೆ ಮಣಿಕಂಠ, ಹಾಗೆ ಮಾತನಾಡುವ ಖರ್ಗೆ ಕಡೆಯವರನ್ನೇ ಕೇಳು ಎಂದು ಹೇಳುತ್ತಾರೆ. ಆಗ ರವಿ, ಅವರ ಫೋನ್ ನಂಬರ್ ಕೊಡಿ, ಅವರ ಯಾರ ಫೋನ್ ನಂಬರ್ ಸಹ ಇಲ್ಲ. ನಾನು ನಿಮ್ಮ ಅಭಿಮಾನಿ ಇದ್ದೇನೆ. ನಮ್ಮ ಅಣ್ಣನ ಬಗ್ಗೆ ಏಕೆ ಹೀಗೆ ಮಾತನಾಡುತ್ತೀರೆಂದು ಅವರಿಗೂ ಕೇಳುತ್ತೇನೆ ಎಂದು ಹೇಳುತ್ತಾರೆ. ಅದಕ್ಕೆ ಮಣಿಕಂಠ, ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರು, ಅವರ ಹೆಂಡತಿ ಮಕ್ಕಳನ್ನು ಸಾಫ್ ಮಾಡುತ್ತೇನೆ. ಅದಕ್ಕೆ ನನ್ನ ಬಳಿ ಅವರ ಫೋನ್ ನಂಬರ್ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: Narendra Modi Road Show: ರಾಜಧಾನಿಯಲ್ಲಿ ಟಾರ್ಗೆಟ್ 20 ತಲುಪಿಸಲಿದ್ದಾರಾ ಪ್ರಧಾನಿ?
ಆಗ ರವಿ, ಯಾರ ಹೆಂಡತಿ, ಮಕ್ಕಳನ್ನು ಸಾಫ್ ಮಾಡುತ್ತೀರಿ ಎಂದು ಮರು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಮಣಿಕಂಠ ರಾಠೋಡ, “ನೀನು ಯಾರ ಹೆಸರನ್ನು ತೆಗೆದುಕೊಂಡಿದ್ದೀಯಾ? ಎಂದು ಕೇಳಿದರು. ಆಗ ರವಿ, ಖರ್ಗೆ ಅವರದ್ದು ಅಣ್ಣಾ ಎಂದು ಉತ್ತರಿಸಿದ್ದಾರೆ. ಅದಕ್ಕೆ ಮಣಿಕಂಠ ರಾಠೋಡ, “ಹಾ ಅವರದ್ದೇ… ಅವರ ನಂಬರ್ ಇದ್ದರೆ ಅವರನ್ನು ಮತ್ತವರ ಕುಟುಂಬದವರನ್ನು ಸಾಫ್ ಮಾಡುತ್ತೇನೆ. ಅದಕ್ಕೇ ಅವರ ನಂಬರ್ ನನ್ನ ಬಳಿ ಇಲ್ಲ. ಖರ್ಗೆ ಅವರ ನಂಬರ್ ಇದ್ದರೆ ನಾನು ಬಾಯಿಗೆ ಬಂದ ಹಾಗೆ ಬಯ್ಯುತ್ತೇನೆ ಅಂತ ನಿನಗೆ ಹೇಳುತ್ತಿದ್ದೇನೆ” ಎಂದು ಉತ್ತರಿಸುತ್ತಾರೆ. ಈಗ ಈ ಆಡಿಯೊವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
ಕರ್ನಾಟಕ
Liquor Consumption: ಬಡವನ ಕುಡಿತದ ವಾರ್ಷಿಕ ಲೆಕ್ಕಾಚಾರ ಇಲ್ಲಿದೆ! ದಿನಕ್ಕೆ ಆತನ ಸರಾಸರಿ ಖರ್ಚೆಷ್ಟು?
liquor price: ರಾಜ್ಯ ಸರ್ಕಾರ ಮದ್ಯದ ಮೇಲಿನ ಸುಂಕವನ್ನು ಏರಿಕೆ ಮಾಡುತ್ತಲೇ ಇದೆ. ಇದು ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ಈ ಕಾರಣದಿಂದಾಗಿ ಮದ್ಯದ ಮೇಲಿನ ಸುಂಕವನ್ನು ಇಳಿಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಡುಕರ ಸಂಘವು ಪತ್ರ ಬರೆದು ಮನವಿ ಮಾಡಿದೆ!
ಬೆಂಗಳೂರು: ಅನೇಕ ಬಜೆಟ್ ಮಂಡನೆ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ಆಯಾ ಸರ್ಕಾರಗಳು ಶಾಕ್ ಕೊಡುತ್ತಲೇ ಬರುತ್ತಿವೆ. ಮದ್ಯದ ದರದ ಮೇಲೆ ಅಬಕಾರಿ ಸುಂಕವನ್ನು ಹೇರುತ್ತಿವೆ. ಈಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಜುಲೈ 7ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಡುವೆ ಅವರಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸವಾಲಿದೆ. ಅದಕ್ಕೆ ಹಣ ಹೊಂದಾಣಿಕೆಯನ್ನು ಮಾಡಬೇಕಿದೆ. ಇದು ಈಗ ಮದ್ಯ ಪ್ರಿಯರಲ್ಲಿ ತಲ್ಲಣವನ್ನು ಹುಟ್ಟಿಸಿದೆ. ಈ ಕಾರಣಕ್ಕೆ ಅವರೆಲ್ಲರೂ “ಎಣ್ಣೆಯ ವಿಷ್ಯ, ಬೇಡವೋ ಶಿಷ್ಯ” ಎಂಬ ಹಾಡನ್ನು ಹಾಡಬೇಕಾಗುತ್ತದೆ ಎಂದು ಆತಂಕದಲ್ಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮದ್ಯ ಪ್ರೇಮಿಗಳ/ಕುಡುಕರ ಸಂಘವು, ಈಗಾಗಲೇ ಮದ್ಯದ (Liquor Consumption) ಸುಂಕವನ್ನು ಹೆಚ್ಚಳ ಮಾಡಿದ್ದು, ಅದನ್ನು ಇಳಿಸಿ ಎಂದು ಮನವಿ ಮಾಡಿದ್ದಾರೆ. ಈ ಪತ್ರ ಈಗ ವೈರಲ್ (Viral News) ಆಗಿದೆ.
ಇದಲ್ಲದೆ, ಅಬಕಾರಿ ಸಚಿವರು, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೂ ಪತ್ರದ ಪ್ರತಿಯನ್ನು ಲಗತ್ತಿಸಿದ್ದು, ದಯಮಾಡಿ ಅಬಕಾರಿ ಸುಂಕವನ್ನು ಇಳಿಸಿ ಸಂಕಷ್ಟದಲ್ಲಿರುವ ಮದ್ಯ ಪ್ರಿಯರ ರಕ್ಷಣೆಗೆ ದಾವಿಸಿ ಎಂದು ಮೊರೆ ಇಟ್ಟಿದ್ದಾರೆ!
ಇದನ್ನೂ ಓದಿ: Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!
ಮನವಿ ಪತ್ರದಲ್ಲೇನಿದೆ?
ಮಾನ್ಯ ಮುಖ್ಯಮಂತ್ರಿ ಮತ್ತು ಮದ್ಯ ಪ್ರಿಯರ ಇಲಾಖೆ ಅಂದರೆ ಅಬಕಾರಿ ಇಲಾಖೆಯ ಸಚಿವರಲ್ಲಿ ವಿನಂತಿಸುವುದೇನೆಂದರೆ, ರಾಜ್ಯದಲ್ಲಿ ಜಾತಿ, ಧರ್ಮ, ಬಡವ ,ಬಲ್ಲಿದ, ರಾಜಕಾರಣಿ, ಡಾಕ್ಟರ್, ಪತ್ರಕರ್ತ, ಸರ್ಕಾರಿ ನೌಕರರು, ವಕೀಲರು ಎಂಬ ತಾರತಮ್ಯ ಇಲ್ಲದೆ ಮದ್ಯ ಸೇವನೆಯನ್ನು ಮಾಡುತ್ತಾರೆ. ಎಲ್ಲ ವರ್ಗದವರು ಮದ್ಯ ಸೇವನೆಯನ್ನು ಮಾಡುತ್ತಿದ್ದು, ಇದು ಆಹಾರ ಸಂಸ್ಕೃತಿಯ ಭಾಗವಾಗಿದೆ. ಮದುವೆ, ಹಬ್ಬ ಹರಿದಿನಗಳಲ್ಲಿ ಆರಾಧನೆ ಪದ್ಧತಿಯಲ್ಲಿ, ಸಂತೋಷ ಕೂಟದಲ್ಲಿ ಮದ್ಯ ಪ್ರಿಯರು ಮದ್ಯ ಸೇವನೆಯನ್ನು ಮಾಡುತ್ತಿದ್ದಾರೆ. ಸುರಪಾನಕ್ಕೆ ಭಾರತೀಯ ಸಂಸ್ಕೃತಿಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ.
ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಇಷ್ಟೆಲ್ಲ ಆದಾಯ ಬರುತ್ತಿದ್ದರೂ ಮದ್ಯ ಪ್ರೇಮಿಗಳ ಬಗ್ಗೆ ಕಾಳಜಿ ವಹಿಸದಿರುವುದು ತುಂಬ ದುಃಖಕರ ವಿಷಯ. ಈಗಾಗಲೇ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆಯನ್ನು ಜಾಸ್ತಿ ಮಾಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ.
ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಏನೆಂದರೆ, ಒಬ್ಬ ಬಿಪಿಎಲ್ ಕಾರ್ಡ್ ಹೊಂದಿದವನ ಆದಾಯ ಅಲ್ಪ ಪ್ರಮಾಣದಲ್ಲಿ ಇರುತ್ತದೆ. ಮದ್ಯ ಪ್ರೇಮಿ ದಿನಗೂಲಿ ನೌಕರ ದಿನವೂ ಸರಾಸರಿ 180 ಎಂ.ಎಲ್. ಕುಡಿದರೂ ಅವನಿಗೆ ದಿನಕ್ಕೆ 200 ರಿಂದ 250 ರೂಪಾಯಿಯಷ್ಟು ಮದ್ಯಕ್ಕೆ ಖರ್ಚು ತಗಲುತ್ತದೆ. ಅಂದರೆ, ತಿಂಗಳಿಗೆ 7500 ರೂಪಾಯಿ ಬೇಕಾಗುತ್ತದೆ. ವಾರ್ಷಿಕ 90,000 ರೂಪಾಯಿ ಒಬ್ಬ ಮದ್ಯ ಪ್ರೇಮಿ ಕುಡುಕನಿಗೆ ಬೇಕಾಗುತ್ತದೆ.
ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
ಇದರಿಂದ ಮದ್ಯಮ ವರ್ಗ ಮತ್ತು ಬಡವರಿಗೆ ಆರ್ಥಿಕವಾಗಿ ಹೊರೆಯಾಗಲಿದೆ. ಆದ್ದರಿಂದ ಮದ್ಯದ ಮೇಲಿನ ಸುಂಕದ ದರ ಹೆಚ್ಚಳ ಬಗ್ಗೆ ಪುನರ್ ಪರಿಶೀಲನೆ ಮಾಡಿ ಸ್ಥಳೀಯ ಬ್ರಾಂಡ್ನ ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್ ಹಾಗೂ ಬಿಯರ್ ಮೇಲಿನ ಸುಂಕವನ್ನು ಕಡಿಮೆ ಮಾಡಬೇಕು ಎಂದು ಎಲ್ಲ ಮದ್ಯ ಪ್ರಿಯ ಬ್ರದರ್ಸ್ & ಸಿಸ್ಟರ್ಸ್ ಪರವಾಗಿ ವಿನಂತಿಸುತ್ತೇವೆ.
ಕರ್ನಾಟಕ
Anganawadi worker: ತಂಗಿಗೆ ನನ್ನ ಕೆಲಸ ಕೊಡಿ ಎಂದು ತನ್ನ ಬದುಕಿಗೆ ದುರಂತ ಅಂತ್ಯ ಹಾಡಿದ ಅಂಗನವಾಡಿ ಕಾರ್ಯಕರ್ತೆ!
ಕೃಷಿ ಹೊಂಡಕ್ಕೆ ಬಿದ್ದು ಅಂಗನವಾಡಿ ಕಾರ್ಯಕರ್ತೆ (Anganawadi worker) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ತನ್ನ ಕೆಲಸವನ್ನು ತಂಗಿಗೆ ಕೊಡಿ ಎಂದು ಡೆತ್ನೋಟ್ (Death note) ಬರೆದಿದ್ದಾರೆ.
ಚಿಕ್ಕಬಳ್ಳಾಪುರ: ಇಲ್ಲಿನ ದಿಬ್ಬೂರು ಗ್ರಾಮದ ಕೃಷಿ ಹೊಂಡಕ್ಕೆ ಬಿದ್ದು ಅಂಗನವಾಡಿ ಕಾರ್ಯಕರ್ತೆ (Anganawadi worker) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಲಾವತಿ (35) ಆತ್ಮಹತ್ಯೆ ಮಾಡಿಕೊಂಡವರು.
ಕಲಾವತಿ ದಿಬ್ಬೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಆದರೆ ಡೆತ್ನೋಟ್ ಬರೆದಿಟ್ಟು ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ನೋಟ್ನಲ್ಲಿ ತನ್ನ ಕೆಲಸವನ್ನು ಮೈದುನ ಪತ್ನಿ ಅಂದರೆ ತನ್ನ ತಂಗಿಗೆ ನೀಡುವಂತೆ ಮನವಿ ಮಾಡಿದ್ದಾರೆ.
ಡೆತ್ನೋಟ್ನಲ್ಲಿ ಏನಿದೆ?
ನನ್ನ ಸಾವಿಗೆ ನಾನೇ ಕಾರಣ, ಯಾರು ಹೊಣೆಯಲ್ಲ. ನನ್ನ ಮೈದುನ ಪತ್ನಿಗೆ (ತಂಗಿ) ನನ್ನ ಕೆಲಸ ಕೊಡಿ. ಆಕೆ ಚೆನ್ನಾಗಿ ಕೆಲಸ ಮಾಡುತ್ತಾಳೆ. ಬಾಲವಿಕಾಸ ಸಮಿತಿಯನ್ನು ಅಧ್ಯಕ್ಷರ ಮತ್ತು ಕಾರ್ಯಕರ್ತೆ ಹೆಸರಲ್ಲಿ ಜಂಟಿ ಖಾತೆ ತೆರಯಬೇಕು. ಜತೆಗೆ ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತಿಗೆ ಮನವಿ ಮಾಡಿದ್ದಾರೆ. ಜತೆಗೆ ತಾನು ಕೊಡಬೇಕಾಗಿರುವ ಸಾಲದ ವಿವರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಕೃಷಿ ಹೊಂಡದಿಂದ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Congress Guarantee: ಪಾರ್ಟ್ ಟೈಂ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!
ಜೂನ್ 10 ಹಾಗೂ 11ರಂದು ಕುಟುಂಬ ಸಮೇತರಾಗಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದರ್ಶನಕ್ಕೆ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ.
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಅದ್ಧೂರಿಯಾಗಿ ಚಾಲನೆ ನೀಡಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೀಗ ವಿನೂತನ ಉಪಾಯವೊಂದನ್ನು ಆಯ್ಕೆ ಮಾಡಿಕೊಂಡಿದೆ. ಸಾರಿಗೆ ಇಲಾಖೆಯ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಲು ಸ್ವತಃ ಸಿಎಂ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ.
ಜೂನ್ 11ರಂದು ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ ಸಿಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಯೋಜನೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಬಳಿ ಯೋಜನೆಗೆ ಚಾಲನೆ ನೀಡಿ ಸಿದ್ದರಾಮಯ್ಯ ಮಾತನಾಡಲಿದ್ದಾರೆ.
ಆದರೆ ಅದಕ್ಕೂ ಮುನ್ನ ಕೆಂಪೇಗೌಡ ಬಸ್ ನಿಲ್ದಾಣದಿಂದ(ಮೆಜೆಸ್ಟಿಕ್) ವಿಧಾನಸೌಧದವರೆಗೆ ಮಾರ್ಗ ಸಂಖ್ಯೆ 43ರಲ್ಲಿ ಸಿದ್ದರಾಮಯ್ಯ ಬಸ್ನಲ್ಲೇ ಚಲಿಸಲಿದ್ದಾರೆ. ಈ ವೇಳೆ ಉಚಿತ ಟಿಕೆಟ್ಗಳನ್ನು ಮಹಿಳೆಯರಿಗೆ ಸಿದ್ದರಾಮಯ್ಯ ನೀಡಲಿದ್ದಾರೆ. ಈ ರೀತಿ ವಿಧಾನಸೌಧದವರೆಗೂ ಕಂಡಕ್ಟರ್ ಆಗಿ ಕೆಲಸ ಮಾಡಲಿದ್ದಾರೆ.
ಡಿ.ಕೆ. ಶಿವಕುಮಾರ್ ಗೈರು
ಚುನಾವಣೆಗೂ ಮುನ್ನ ಕಾಂಗ್ರೆಸ್ನಿಂದ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅದನ್ನು ಪ್ರಚಾರ ಮಾಡಿದ್ದರಿಂದ ಪಕ್ಷ ಅಧಿಕಾರಕ್ಕೆ ಬಂದಿತ್ತು. ಕೆಪಿಸಿಸಿ ಅಧ್ಯಕ್ಷರಾಗಿ ಪ್ರಚಾರದ ನೇತೃತ್ವ ವಹಿಸಿದ್ದ, ಇದೀಗ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಶಕ್ತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ.
ಜೂನ್ 10 ಹಾಗೂ 11ರಂದು ಕುಟುಂಬ ಸಮೇತರಾಗಿ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದರ್ಶನಕ್ಕೆ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. ಸರ್ಕಾರದ ಮಹತ್ವದ ಯೋಜನೆಗೆ ಚಾಲನೆ ನೀಡುವ ವೇಳೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಮೂಲಕ ಗೂರುಹಾಜರಾಗಲಿದ್ದಾರೆ.
ಇದನ್ನೂ ಓದಿ: Congress Guarantee: ʼಗೃಹಲಕ್ಷ್ಮಿʼಗೂ ಮಗನ ಐಟಿಗೂ ಸಂಬಂಧ ಇಲ್ಲ; ಉಲ್ಟಾ ಹೊಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಆರೋಗ್ಯ
Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!
Chamarajanagar oxygen tragedy: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 2021ರಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗಿ ಮೇ 2ರಂದು 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್, ಈ ಪ್ರಕರಣವನ್ನು ತನಿಖೆಗೆ ಆಗ್ರಹಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.
ಬೆಂಗಳೂರು: ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಹಾಗೂ ಕೋವಿಡ್ (Covid 19) ಸಂದರ್ಭದಲ್ಲಿ ನಡೆದ ಕೆಲವು ಸಂಗತಿಗಳ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ 2021ರಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ (Chamarajanagar oxygen tragedy) ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾತನಾಡಿ, ಈ ಘಟನೆಯು ಎರಡು ಇಲಾಖೆಗೆ ಒಳಪಡುತ್ತದೆ. ಹಾಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ (Health Department) ಸಮನ್ವಯತೆ ಇರುವುದರಿಂದ ತನಿಖೆಯನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ, ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಹೊಸ ಸರ್ಕಾರ ಬಂದಿರುವುದರಿಂದ ನಾವು ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ. ಮರು ತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ. ಅದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗಿ 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಈ ಬಗ್ಗೆ ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್, ಈ ಪ್ರಕರಣವನ್ನು ತನಿಖೆಗೆ ಆದೇಶಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.
ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕ ಆಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆಯಾಗಿದೆ. ನಾನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ. ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರೂ ಕೆಲಸ ಮಾಡಬೇಕು. ದಕ್ಷಿಣ ಕನ್ನಡದಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ನೈತಿಕ ಪೊಲೀಸ್ಗಿರಿಗೆ ಕಡಿವಾಣ ಹಾಕಬೇಕಿದೆ. ಅಲ್ಲಿ ಶಾಂತಿ ಸೌಹರ್ದತೆ ನೆಲೆಸಬೇಕಿದೆ. ಅ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಕೋವಿಡ್ ಅವಧಿಯ ಟೆಂಡರ್ಗಳ ಮರು ಪರಿಶೀಲನೆ ಮಾಡಲಾಗುತ್ತದೆ. ಅನುಮಾನ ಬಂದ ಟೆಂಡರ್ಗಳ ತನಿಖೆ ಮಾಡುತ್ತೇವೆ. ಹೆಚ್ಚು ಬಿಡ್ ಮಾಡಿರುವ ಟೆಂಡರ್ಗಳನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಈ ಹಿಂದೆ ಕರೆಯಲಾಗಿದ್ದ 108 ಆಂಬ್ಯುಲೆನ್ಸ್ ಟೆಂಡರ್ ಮತ್ತು ಡಯಾಲಿಸಿಸ್ ಟೆಂಡರ್ ಅನ್ನು ರದ್ದುಪಡಿಸಿದ್ದು, ಮರು ಟೆಂಡರ್ ಕರೆಯುತ್ತೇವೆ. ಜಿವಿಕೆ ಮೇಲೆ ಆರೋಪ ಬಂದಿರುವ ಕಾರಣ ಈ ಕ್ರಮ ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಟೆಂಡರ್ ಕರೆಯುತ್ತೇವೆ ಎಂದು ಹೇಳಿದರು.
ಅಧಿಕಾರಿಗಳಿಗೆ ತರಾಟೆ
ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಗಳ ಜತೆ ಸಭೆ ಮುಂದುವರಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಸಾವಾದರೆ ನಾನು ಸಹಿಸೋದಿಲ್ಲ. ಯಾರದ್ದೇ ತಪ್ಪು ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಈ ವಿಚಾರವಾಗಿ ಯಾವುದೇ ರಾಜಕೀಯ ಒತ್ತಡ ತಂದರೂ ಪ್ರಯೋಜನ ಇಲ್ಲ. ರಾಜಕೀಯ ಒತ್ತಡ ತಂದರೆ ಅದರ ಮುಂದಿನ ಪರಿಣಾಮವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್ ಜಾಸ್ತಿ ಮಾಡ್ಬೇಡಿ; BPL ಕಾರ್ಡ್ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
ಈ ಹಿಂದೆ ಡಯಾಬಿಟಿಕ್ ಸಮೀಕ್ಷೆ ನಡೆಸಲಾಗಿತ್ತು. ಈ ವೇಳೆ ಜಿರೋ ಡಯಾಬಿಟಿಕ್ ಎಂದು ಯಾದಗಿರಿ ಜಿಲ್ಲೆಯಲ್ಲಿ ವರದಿ ನೀಡಲಾಗಿದೆ. ಆದರೆ, ಇಂತಹ ತಪ್ಪು ಮಾಹಿತಿಗಳನ್ನು ಕೊಡಬಾರದು ಎಂದು ಇದೇ ವೇಳೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.
-
ಸುವಚನ13 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ19 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema23 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema23 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ದೇಶ18 hours ago
ಬದುಕುಳಿಯಲಿಲ್ಲ ಬೋರ್ವೆಲ್ಗೆ ಬಿದ್ದ ಕಂದಮ್ಮ; ಸಾವಿನ ವಿರುದ್ಧ 50 ಗಂಟೆ ಹೋರಾಟದಲ್ಲಿ ಗೆದ್ದಿದ್ದು ವಿಧಿ
-
ದೇಶ21 hours ago
ಸಹಕಾರಿ ಬ್ಯಾಂಕ್ಗಳು ಕೂಡ ಸುಸ್ತಿದಾರರ ಜತೆ ರಾಜಿ, ಸಾಲ ರೈಟ್-ಆಫ್ ಮಾಡಬಹುದು; ಆರ್ಬಿಐ ಮಹತ್ವದ ಘೋಷಣೆ
-
ಕರ್ನಾಟಕ22 hours ago
Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!
-
ದೇಶ10 hours ago
Miss World- 2023: 27 ವರ್ಷಗಳ ಬಳಿಕ ಭಾರತಕ್ಕೆ ಬರುತ್ತಿರುವ ʼಮಿಸ್ ವರ್ಲ್ಡ್ʼ