Site icon Vistara News

Textbook protest | ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ, ಟ್ರಾಫಿಕ್‌ ಜಾಮ್‌

banglore protest

ಬೆಂಗಳೂರು : ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ಇಂದು (ಶನಿವಾರ) ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​ವರೆಗೂ ಪ್ರತಿಭಟನಾ ಮೆರವಣಿಗೆ (Textbook protest) ನಡೆಸಲಾಗುತ್ತಿದೆ. ವಿಶ್ವ ಮಾನವ ಕಾಂತ್ರಿಕಾರಿ ಕುವೆಂಪು ಹೋರಾಟ ಸಮಿತಿ, ರಾಜ್ಯ ಒಕ್ಕಲಿಗರ ಸಂಘ, ಕರವೇ ಸೇರಿದಂತೆ ಇತರೆ ಸಂಘ ಸಂಸ್ಥೆಗಳಿಂದ ಜಾಥಾ ನಡೆಸಲಾಗುತ್ತಿದ್ದು, ಸಾವಿರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಪರಿಷ್ಕೃತ ಪಠ್ಯ ಕೈ ಬಿಡಬೇಕು ಹಾಗೂ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬೃಹತ್​ ಪ್ರತಿಭಟನೆ ನಡೆಸಲಾಗುತ್ತಿದೆ. ಈಗಾಗಲೇ ಪ್ರತಿಭಟನಾ ರ‍್ಯಾಲಿ ಆರಂಭವಾಗಿದ್ದು, ಸಾವಿರಾರು ಜನರು ಬ್ಯಾನರ್‌, ಭಿತ್ತಿ ಪತ್ರಗಳೊಂದಿಗೆ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಇನ್ನು ಈ ಪ್ರತಿಭಟನೆಗೆ ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಸೇರಿದಂತೆ ಅನೇಕ ನಾಯಕರು ಭಾಗಿಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಇದನ್ನು ಓದಿ| ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧ: ಕವಿಶೈಲದಿಂದ ತೀರ್ಥಹಳ್ಳಿ ಪಾದಯಾತ್ರೆಗೆ ಹಂಸಲೇಖ ಚಾಲನೆ

ಪಠ್ಯ ಪುಸ್ತಕ ಕೇಸರಿಕರಣ ಆಗುತ್ತಿದೆ ಎಂದು ವಿರೋಧಿಸಿ ಅನೇಕ ಯುವಜನತೆ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ಪ್ರತಿಭಟನೆಯಲ್ಲಿ ನಾಡಿನ ಹಲವು ಭಾಗದಿಂದ ಚಿಂತಕರು, ಸಾಹಿತಿಗಳು ಭಾಗಿಯಾಗಿದ್ದು, ಹಲವು ಸಂಘಟನೆಗಳು ಪಠ್ಯ ಪರಿಷ್ಕರಣೆ ವಾಪಾಸ್ ಪಡೆದು ಹಳೆಯ ಪಠ್ಯವನ್ನೇ ಮುಂದುವರಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆ ನಡೆಸುವ ಮೂಲಕ ಆಗ್ರಹ ಮಾಡಿದೆ.

Exit mobile version