Medical negligence | ಆಪರೇಷನ್‌ ಮಾಡಿದ ಕೆಲವೇ ಹೊತ್ತಲ್ಲಿ ಯುವತಿ ಸಾವು; ಆಸ್ಪತ್ರೆಗೆ ಕಲ್ಲು ತೂರಾಟ, ಪ್ರತಿಭಟನೆ - Vistara News

ಆರೋಗ್ಯ

Medical negligence | ಆಪರೇಷನ್‌ ಮಾಡಿದ ಕೆಲವೇ ಹೊತ್ತಲ್ಲಿ ಯುವತಿ ಸಾವು; ಆಸ್ಪತ್ರೆಗೆ ಕಲ್ಲು ತೂರಾಟ, ಪ್ರತಿಭಟನೆ

Medical negligence | ಕಫ ಹಾಗೂ ಮೂಗು ಕಟ್ಟಿರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

VISTARANEWS.COM


on

rajalaxmi rims
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ರಾಯಚೂರು ರಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ (Medical negligence) ಆರೋಪ ಕೇಳಿಬಂದಿದೆ. ಆಪರೇಷನ್ ಮಾಡಿದ ಕೆಲವೇ ಕ್ಷಣಗಳಲ್ಲಿ ಯುವತಿಯೊಬ್ಬಳು ಮೃತಪಟ್ಟಿದ್ದು, ಆಕ್ರೋಶಗೊಂಡ ಸಂಬಂಧಿಕರಿಂದ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆದಿದೆ.

ವೈದ್ಯರ ನಿರ್ಲಕ್ಷ್ಯದಿಂದ ಹೀಗಾಗಿದೆ. ಯುವತಿ ಸಾವಿಗೆ ವೈದ್ಯರೇ ಕಾರಣ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೃತ ಯುವತಿಯ ಕುಟುಂಬಸ್ಥರು ತೀವ್ರ ಆಕ್ರೋಶಗೊಂಡಿದ್ದು, ಪ್ರತಿಭಟನೆ ಮಾಡಿದ್ದಾರೆ. ಈ ಘಟನೆಯನ್ನು ಖಂಡಿಸಿ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ರಾಜೇಶ್ವರಿ (19) ಮೃತ ಯುವತಿ. ಕಫ, ಮೂಗು ಕಟ್ಟಿದೆ ಎಂದು ಇವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕಳೆದ ಮೂರು ದಿನಗಳ ಹಿಂದೆಯೇ ದಾಖಲು ಮಾಡಲಾಗಿತ್ತು. ಈ ವೇಳೆ ರಾಜಶೇಖರ್ ಪಾಟೀಲ್ ಎಂಬ ವೈದ್ಯರು ರಾಜೇಶ್ವರಿಯ ಮೂಗಿನ ಆಪರೇಶನ್ ಮಾಡಿದ್ದರು ಎನ್ನಲಾಗಿದೆ. ಆಪರೇಷನ್ ಆದ ಕೆಲವೇ ಸಮಯದಲ್ಲಿ ರಾಜೇಶ್ವರಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೃತಳ ಕುಟುಂಬಸ್ಥರು ಪ್ರತಿಭಟಿಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದನ್ನೂ ಓದಿ | RBI Bond | ಆರ್‌ಬಿಐ ಬಾಂಡ್‌ ಬಡ್ಡಿ ದರ ಜನವರಿ 1ರಿಂದ 7.35%ಕ್ಕೆ ಏರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

ಭಾರತದಲ್ಲಿ ಸುಮಾರು 90 ಲಕ್ಷಕ್ಕಿಂತ ಹೆಚ್ಚು ಮಂದಿ ವರ್ಟಿಗೊದ ಸಮಸ್ಯೆಯಿಂದ (Vertigo Problem) ನರಳುತ್ತಿದ್ದಾರೆ. 60 ವರ್ಷದ ಮೇಲ್ಪಟ್ಟವರಲ್ಲಿ ಇದು ಕಂಡುಬರುವುದು ಹೆಚ್ಚಾದರೂ, ಕಡಿಮೆ ವಯೋಮಾನದವರನ್ನೂ ಬಾಧಿಸಬಹುದು. ಇದೇನು ಕಾಯಿಲೆಯಲ್ಲ, ವರ್ಟಿಗೊ ಎಂದು ಕರೆಯಲಾಗುವ ಇದು ಹೆಚ್ಚಾಗಿ ಒಳಗಿವಿಯ ತೊಂದರೆಯಿಂದ ಬರುವಂಥದ್ದು. ಆದರೆ ವರ್ಟಿಗೊ ಬರುವುದಕ್ಕೆ ಇದೊಂದೇ ಕಾರಣವಲ್ಲ, ಹಲವಾರಿವೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Vertigo Problem
Koo

ಇದ್ದಕ್ಕಿದ್ದಂತೆ ತಲೆ ಸುತ್ತು ಬಂದು, ಸುತ್ತಲಿನ ಲೋಕವೆಲ್ಲ ಬುಗರಿಯಂತೆ ತಿರುಗುವ ಹಾಗೆ ಭಾಸವಾಗಬಹುದು. ದೇಹದ ಸಮತೋಲನವೇ ತಪ್ಪಿದಂತಾಗಿ ವ್ಯಕ್ತಿ ಬೀಳಬಹುದು. ಜಗತ್ತಿನಲ್ಲಿ ಹತ್ತರಲ್ಲಿ ಒಬ್ಬರಿಗೆ ಬರಬಹುದಾದ ಇದೇನು ಕಾಯಿಲೆಯಲ್ಲ, ವರ್ಟಿಗೊ (Vertigo Problem) ಎಂದು ಕರೆಯಲಾಗುವ ಇದು ಹೆಚ್ಚಾಗಿ ಒಳಗಿವಿಯ ತೊಂದರೆಯಿಂದ ಬರುವಂಥದ್ದು. ಆದರೆ ವರ್ಟಿಗೊ ಬರುವುದಕ್ಕೆ ಇದೊಂದೇ ಕಾರಣವಲ್ಲ, ಹಲವಾರಿವೆ. ಸಿಕ್ಕಾಪಟ್ಟೆ ತಲೆಸುತ್ತುವ ಕಾರಣದಿಂದಲೇ ವ್ಯಕ್ತಿಯ ಜೀವನವನ್ನು ಕಷ್ಟಕ್ಕೆ ದೂಡುವ ಈ ಸಮಸ್ಯೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಭಾರತದಲ್ಲಿ ಸುಮಾರು 90 ಲಕ್ಷಕ್ಕಿಂತ ಹೆಚ್ಚು ಮಂದಿ ವರ್ಟಿಗೊದ ಸಮಸ್ಯೆಯಿಂದ ನರಳುತ್ತಿದ್ದಾರೆ. 60 ವರ್ಷದ ಮೇಲ್ಪಟ್ಟವರಲ್ಲಿ ಇದು ಕಂಡುಬರುವುದು ಹೆಚ್ಚಾದರೂ, ಕಡಿಮೆ ವಯೋಮಾನದವರನ್ನೂ ಬಾಧಿಸಬಹುದು. ಪುರುಷರಿಗಿಂತ ಮಹಿಳೆಯರಿಗೆ ಇದು ಹೆಚ್ಚು ತೊಂದರೆ ಕೊಡುತ್ತದೆ ಎನ್ನುತ್ತವೆ ಅಧ್ಯಯನಗಳು. ಮನೆಗೆಲಸ, ಶಾಪಿಂಗ್‌, ಕಚೇರಿ ಕೆಲಸ, ವಾಹನ ಚಾಲನೆ ಮುಂತಾದ ನಿತ್ಯದ ಕ್ರಿಯೆಗಳಿಗೂ ಇದರಿಂದ ಅಡ್ಡಿಯಾಗಬಹುದು. ಸೂಕ್ತ ಚಿಕಿತ್ಸೆ ನಡೆಯದಿದ್ದರೆ, ಸಾಮಾಜಿಕ ಬದುಕು ಮತ್ತು ಆರ್ಥಿಕ ಅನುಕೂಲಗಳ ಮೇಲೂ ದುಷ್ಪರಿಣಾಮ ಬೀರಬಹುದು.

stressed sad young woman with vertigo

ಏನಾಗುತ್ತದೆ?

ವರ್ಟಿಗೊ ಸಮಸ್ಯೆ ಇದ್ದರೆ ಏನಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಕೂತಲ್ಲಿಂದ ಎದ್ದ ತಕ್ಷಣ ತಲೆ ಸುತ್ತುವುದು, ಸುತ್ತಲಿನ ಜಾಗವೆಲ್ಲ ತಿರುಗಿದ ಅನುಭವ, ತಲೆನೋವು, ಕೆಲವೊಮ್ಮೆ ಪ್ರಜ್ಞೆ ತಪ್ಪುವುದು, ದೇಹದ ಸಮತೋಲನ ತಪ್ಪಿ ಬೀಳಬಹುದು, ಬಿದ್ದಿದ್ದು ತೀವ್ರವಾದರೆ ಗಾಯವಾಗಬಹುದು ಅಥವಾ ಮೂಳೆ ಮುರಿಯಬಹುದು, ಕಿವಿಯಲ್ಲಿ ಜುಂಯ್‌ ಸದ್ದು, ಹೊಟ್ಟೆ ತೊಳೆಸಿದಂತಾಗುವುದು, ಅತಿಯಾಗಿ ಬೆವರುವುದು- ಇತ್ಯಾದಿ ಲಕ್ಷಣಗಳನ್ನು ವರ್ಟಿಗೊ ಬಾಧಿತರು ಅನುಭವಿಸಬಹುದು.

ಇದನ್ನೂ ಓದಿ: Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

ಚಿಕಿತ್ಸೆ ಇಲ್ಲವೇ?

ಖಂಡಿತವಾಗಿಯೂ ಇದೆ. ಒಳಗಿವಿ ಅಥವಾ ಕೇಂದ್ರ ನರಮಂಡಲದ ತೊಂದರೆಯಿಂದಾಗಿ ಉಂಟಾಗುವ ಸಮಸ್ಯೆಯಿದು. ಮುಖ್ಯವಾಗಿ ಯಾವ ಕಾರಣಕ್ಕೆ ಈ ಸಮಸ್ಯೆ ಕಾಣಿಸಿಕೊಂಡಿದೆ ಎಂಬುದನ್ನು ವೈದ್ಯರು ನಿರ್ಣಯಿಸಿದರೆ ಇದಕ್ಕೆ ಚಿಕಿತ್ಸೆ ನೀಡಬಹುದು. ಕೆಲವು ಔಷಧಗಳು, ಆಹಾರದಲ್ಲಿನ ಮತ್ತು ಜೀವನಶೈಲಿಯಲ್ಲಿನ ಬದಲಾವಣೆಯಿಂದ ರೋಗಿಯ ಬದುಕಿನ ತೊಂದರೆಯನ್ನು ತಪ್ಪಿಸಿ, ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವಿದೆ.

Vertigo BPPV Vestibular Disorders

ಪರಿಹಾರವೇನು?

ವೈದ್ಯರು ಹೇಳಿದ ಔಷಧಿಗಳನ್ನು ಮತ್ತು ಸೂಚನೆಗಳನ್ನು ಪಾಲಿಸುವುದು ಕಡ್ಡಾಯ. ಜೊತೆಗೆ, ದೇಹಕ್ಕೆ ನೀರು ಕಡಿಮೆಯಾಗದಂತೆ ಎಚ್ಚರ ವಹಿಸಿ. ಇದರಿಂದ ತಲೆಸುತ್ತು ತೀವ್ರಗೊಳ್ಳುತ್ತದೆ. ಆಹಾರದಲ್ಲಿ ಕೆಲವು ಬದಲಾವಣೆಗಳು ನೆರವಾಗುತ್ತವೆ. ಉದಾ, ಉಪ್ಪು, ಮಸಾಲೆ, ಕೆಫೇನ್‌, ಖಾರದ ತಿನಿಸುಗಳು ಮತ್ತು ಆಲ್ಕೊಹಾಲ್ ಸೇವನೆಯನ್ನು ಕಡಿಮೆ ಮಾಡುವುದು ಸಹಾಯಕ. ದೈನಂದಿನ ವ್ಯಾಯಾಮದ ಬಗ್ಗೆ ವೈದ್ಯರಲ್ಲಿ ಮಾತಾಡಿ. ಕುತ್ತಿಗೆಯ ಕೆಲವು ವ್ಯಾಯಾಮಗಳು ಈ ನಿಟ್ಟಿನಲ್ಲಿ ನೆರವಾಗಬಹುದು. ದೇಹದ ಸಮತೋಲನವನ್ನು ಹೆಚ್ಚಿಸುವ ವ್ಯಾಯಾಮಗಳು ಹೆಚ್ಚಿನ ನೆರವು ನೀಡುತ್ತವೆ. ಕೆಲವು ರೀತಿಯ ವರ್ಟಿಗೊಗೆ ಫಿಸಿಯೊ ಥೆರಪಿ ನೆರವಾಗಬಹುದು. ಈ ಬಗ್ಗೆ ವೈದ್ಯಕೀಯ ಸಲಹೆ ಬೇಕಾಗುತ್ತದೆ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಲೇಬೇಕು. ಇದಕ್ಕಾಗಿ ಧ್ಯಾನ, ಪ್ರಾಣಾಯಾಮಗಳು ಉಪಯುಕ್ತ. ರಕ್ತದೊತ್ತಡ ಇದ್ದರೆ, ಅದನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವುದು ಅಗತ್ಯ. ಮಧುಮೇಹವೂ ಇದ್ದರೆ ಅದನ್ನೂ ನಿಯಂತ್ರಿಸಬೇಕಾಗುತ್ತದೆ. ಇಲ್ಲದಿದ್ದರೆ ವರ್ಟಿಗೊ ಸಮಸ್ಯೆಯೂ ಹೆಚ್ಚಬಹುದು. ನಿತ್ಯವೂ ಎಂಟು ತಾಸು ನಿದ್ದೆ ಮಾಡುವ ಗುರಿಯನ್ನು ಇರಿಸಿಕೊಳ್ಳಿ. ನಿದ್ದೆಗೆಟ್ಟರೆ ವರ್ಟಿಗೊ ನಿಯಂತ್ರಣ ಕಷ್ಟ. ಮಲಗುವಾಗ ಅತಿ ಎತ್ತರದ ತಲೆದಿಂಬು ಬೇಡ. ಇದು ಸಮಸ್ಯೆಯನ್ನು ಹೆಚ್ಚಿಸಬಹುದು. ಕುತ್ತಿಗೆಗೆ ಹಿತ ಎನಿಸುವಷ್ಟೇ ಎತ್ತರದ ದಿಂಬು ಸಾಕು. ಪ್ರಖರ ಬೆಳಕು, ಶಬ್ದ, ಧಿಡೀರ್‌ ಚಲನೆಗಳು ಇದ್ದಕ್ಕಿದ್ದಂತೆ ತಲೆ ಸುತ್ತು ತರಿಸುತ್ತವೆ. ಇವುಗಳಿಗೆ ಅವಕಾಶ ಕೊಡಬೇಡಿ. ಮೈಗ್ರೇನ್‌ ಸಮಸ್ಯೆಯೂ ವರ್ಟಿಗೊಗೆ ದಾರಿ ಮಾಡಬಹುದು. ಮೆಟ್ಟಿಲು ಹತ್ತಿಳಿಯುವಾಗ ರೇಲಿಂಗ್‌ ಹಿಡಿಯುವುದು ಸುರಕ್ಷಿತ. ಈ ಸಮಸ್ಯೆಯಿಂದ ಬಳಲುವವರು ಬಹಳಷ್ಟು ಜನರಿದ್ದಾರೆ, ನೀವೊಬ್ಬರೇ ಅಲ್ಲ. ಸೂಕ್ತ ಚಿಕಿತ್ಸೆಯಿಂದ ಸಾಮಾನ್ಯ ಬದುಕು ಸಾಗಿಸಲು ಖಂಡಿತ ಸಾಧ್ಯವಿದೆ.

Continue Reading

ಆಹಾರ/ಅಡುಗೆ

Food Tips Kannada: ಸಸ್ಯಾಹಾರಿಗಳಿಗೆ ಒಮೇಗಾ 3 ಕೊಬ್ಬಿನಾಮ್ಲ ಯಾವುದರಲ್ಲಿ ದೊರೆಯುತ್ತದೆ?

ಒಮೇಗಾ 3 ಕೊಬ್ಬಿನಾಮ್ಲ ಎನ್ನುತ್ತಿದ್ದಂತೆ ಕೊಬ್ಬಿನ ಮೀನುಗಳು ನೆನಪಾಗುತ್ತವೆ. ಸಾಗರೋತ್ಪನ್ನಗಳಿಂದ ಹೆಚ್ಚಿನ ಪ್ರಮಾಣದ ಒಮೇಗಾ 3 ದೊರೆಯುವುದು ಹೌದು. ಅದರರ್ಥ ಸಸ್ಯಾಹಾರಿಗಳಿಗೆ ಈ ಸತ್ವ ಇಲ್ಲವೆಂದಲ್ಲ. ಹಾಗಾದರೆ ಯಾವೆಲ್ಲ ಸಸ್ಯಜನ್ಯ ವಸ್ತುಗಳಿಂದ ಒಮೇಗಾ 3 ಕೊಬ್ಬಿನಾಮ್ಲವನ್ನು (Food Tips Kannada) ಪಡೆಯಬಹುದು?

VISTARANEWS.COM


on

Food Tips Kannada
Koo

ದೇಹವು ಪೂರ್ಣಾರೋಗ್ಯದಲ್ಲಿ ಇರಬೇಕೆಂದಾದರೆ ಆವಶ್ಯಕ ಪೌಷ್ಟಿಕಾಂಶಗಳೆಲ್ಲ ಪೂರ್ಣ ಪ್ರಮಾಣದಲ್ಲಿ ದೊರೆಯಬೇಕು. ಉದಾ, ಒಮೇಗಾ ೩ ಕೊಬ್ಬಿನಾಮ್ಲ ಹಲವು ಕಾರಣಗಳಿಂದಾಗಿ ದೇಹಕ್ಕೆ ಬೇಕೆಬೇಕು. ಮುಖ್ಯವಾಗಿ ಹೃದಯದ ಆರೋಗ್ಯ ರಕ್ಷಣೆಗೆ ಮತ್ತು ಮೆದುಳಿನ ಸಂರಕ್ಷಣೆಗೆ ಒಮೇಗಾ ೩ ಕೊಬ್ಬಿನಾಮ್ಲ ಅಗತ್ಯವಾಗಿ ಬೇಕು. ಮೀನಿನಲ್ಲಿ ಈ ಅಂಶ ಯಥೇಚ್ಛವಾಗಿ ದೊರೆಯುತ್ತದೆ. ಆದರೆ ಸಸ್ಯಾಹಾರಿಗಳಿಗೆ? ಅವರೇನು ತಿಂದರೆ ಒಮೇಗಾ ೩ ಕೊಬ್ಬಿನಾಮ್ಲವನ್ನು ಸಾಕಷ್ಟು ಪ್ರಮಾಣದಲ್ಲಿ (Food Tips Kannada) ಪಡೆಯುವುದಕ್ಕ್ ಸಾಧ್ಯ?

Flax Seeds with Pottery

ಅಗಸೆ ಬೀಜ

ಸಸ್ಯಾದಿಗಳಲ್ಲಿ ದೊರೆಯುವ ಒಮೇಗಾ 3 ಕೊಬ್ಬಿನಾಮ್ಲದ ಮೂಲಗಳ ಪೈಕಿ ಅಗಸೆ ಬೀಜ ಅತ್ಯಂತ ಹೆಚ್ಚಿನದ್ದು. ಆಲ್ಫಲಿನೊಲೆನಿಕ್‌ ಆಮ್ಲವು ಈ ಸಣ್ಣ ಬೀಜಗಳಲ್ಲಿ ಸಾಂದ್ರವಾಗಿದೆ. ಇದಲ್ಲದೆ, ನಾರು, ಪ್ರೊಟೀನ್‌, ಹಲವು ರೀತಿಯ ವಿಟಮಿನ್‌ಗಳು, ಖನಿಜಗಳು ಇದರಲ್ಲಿ ಹೇರಳವಾಗಿವೆ. ಹಾಗಾಗಿ ಈ ಬೀಜದ ಚಟ್ಣಿಪುಡಿಯಿಂದ ತೊಡಗಿ, ಎಣ್ಣೆಯವರೆಗೆ ಹಲವು ರೀತಿಯಲ್ಲಿ ಇದನ್ನು ನಿತ್ಯವೂ ಆಹಾರದಲ್ಲಿ ಉಪಯೋಗಿಸುವುದು ಶ್ರೇಷ್ಠ.

Chia Different Types of Seeds with Health Benefits

ಚಿಯಾ ಬೀಜ

ಈ ಬೀಜಗಳಂತೂ ಅಗಸೆ ಬೀಜಕ್ಕಿಂತಲೂ ಸಣ್ಣವು. ಆದರೆ ಒಮೇಗಾ 3 ಕೊಬ್ಬಿನಾಮ್ಲದ ವಿಷಯಕ್ಕೆ ಬಂದರೆ ಮಾತ್ರ ಸಣ್ಣವಲ್ಲ. ಇದರಲ್ಲೂ ಆಲ್ಫ ಲಿನೋಲೆನಿಕ್‌ ಆಮ್ಲ ಧಾರಾಳವಾಗಿದೆ. ಇದನ್ನು ಆಹಾರದಲ್ಲಿ ಬಳಸುವುದೂ ಸಹ ಕಷ್ಟವಲ್ಲ. ನಿತ್ಯವೂ ನೀರಿಗೆ ಹಾಕಿ ಕುಡಿದರೂ ಸಾಕಾಗುತ್ತದೆ. ಇದರಿಂದ ಜೀರ್ಣಾಂಗಗಳ ಆರೋಗ್ಯ ವೃದ್ಧಿಸುತ್ತದೆ, ತೂಕ ನಿರ್ವಹಣೆಗೆ ಸಹಾಯವಾಗುತ್ತದೆ, ಹೃದಯದ ಆರೋಗ್ಯ ರಕ್ಷಣೆಗೂ ನೆರವಾಗುತ್ತದೆ.

Hemp seed Different Types of Seeds with Health Benefits

ಹೆಂಪ್‌ ಬೀಜಗಳು

ಭಾರತದಲ್ಲಿ ಅಷ್ಟಾಗಿ ಪ್ರಚಲಿತವಿಲ್ಲದ ಬೀಜಗಳಿವು. ಆದರೆ ಸತ್ವಗಳ ವಿಷಯದಲ್ಲಿ ಕಡಿಮೆಯಿಲ್ಲ. ಇದರಲ್ಲಿಯೂ ಒಮೇಗಾ 3 ಕೊಬ್ಬಿನಾಮ್ಲ ಸಾಂದ್ರವಾಗಿದೆ. ಜೊತೆಗೆ ಹಲವು ರೀತಿಯ ಅಮೈನೊ ಆಮ್ಲಗಳು, ಖನಿಜಗಳು ದೇಹಕ್ಕೆ ದೊರೆಯುತ್ತವೆ. ಇದರ ತೈಲವೂ ಲಭ್ಯವಿದ್ದು, ಅಡುಗೆಗೆ ಬಳಸಲು ಸಾಧ್ಯವಿದೆ. ಗೋಡಂಬಿಯಂತೆಯೇ ಹೆಂಪ್‌ ಬೀಜಗಳನ್ನು ಸಹ ನಾನಾ ಖಾದ್ಯಗಳಿಗೆ ಉಪಯೋಗಿಸಬಹುದು.

Walnuts Dry Fruits For Hair Fall

ವಾಲ್‌ನಟ್‌

ಒಮೇಗಾ 3 ಕೊಬ್ಬಿನಾಮ್ಲವನ್ನು ನೈಸರ್ಗಿಕವಾಗಿಯೇ ಯಥೇಚ್ಛವಾಗಿ ಹೊಂದಿರುವ ಇನ್ನೊಂದು ವಸ್ತುವಿದು. ನೋಡಿದಾಗ ಮೆದುಳನ್ನು ನೆನಪಿಸುವ ವಾಲ್‌ನಟ್‌ನಲ್ಲಿ ಪ್ರೊಟೀನ್‌, ನಾರು ಮತ್ತು ಹಲವು ರೀತಿಯ ಉತ್ಕರ್ಷಣ ನಿರೋಧಕಗಳಿವೆ. ಇವುಗಳನ್ನು ಹಾಗೆಯೇ ಬಾಯಾಡಬಹುದು ಅಥವಾ ಸಲಾಡ್‌ಗಳಿಗೆ, ಬ್ರೆಡ್‌, ಓಟ್‌ಮೀಲ್‌ ಮುಂತಾದ ಹಲವು ತಿನಿಸುಗಳೊಂದಿಗೆ ಇದನ್ನು ಸೇರಿಸಲೂಬಹುದು.

ಕ್ಯಾನೊಲ ಎಣ್ಣೆ

ಅಡುಗೆಗೆ ಬಳಸುವ ಎಣ್ಣೆಯನ್ನು ಉಳಿದೆಲ್ಲದರ ಬದಲಿಗೆ ಕ್ಯಾನೊಲ ಎಣ್ಣೆಯನ್ನು ಬಳಸಬಹುದು. ಇದರಲ್ಲೂ ಒಮೇಗಾ 3 ಕೊಬ್ಬಿನಾಮ್ಲ ಧಾರಾಳವಾಗಿದೆ. ಗಾಣದಲ್ಲಿ ತೆಗೆದ ಅಥವಾ ಕೋಲ್ಡ್‌ ಪ್ರೆಸ್ಡ್‌ ರೀತಿಯಿಂದ ತೆಗೆದ ಕ್ಯಾನೊಲ ಎಣ್ಣೆಯನ್ನು ಬಳಸುವುದು ಸೂಕ್ತ. ಇದನ್ನು ಒಗ್ಗರಣೆಗೆ, ಹುರಿಯಲು, ಕರಿಯಲು ಹಾಗೂ ಉಳಿದ ಎಲ್ಲ ರೀತಿಯಲ್ಲೂ ಬಳಸಬಹುದು.

It provides good protein for vegetarians Soybeans Benefits

ಸೋಯಾ ಉತ್ಪನ್ನಗಳು

ತೋಫು, ಎಡಮೇಮ್‌ ಮುಂತಾದ ಎಲ್ಲ ರೀತಿಯ ಸೋಯಾ ಉತ್ಪನ್ನಗಳಲ್ಲಿ ಒಮೇಗಾ 3 ಕೊಬ್ಬಿನಾಮ್ಲ ದೊರೆಯುತ್ತದೆ. ಸೋಯಾ ಹಾಲನ್ನು ಕೂಡ ಈ ಪಟ್ಟಿಗೆ ಸೇರಿಸಬಹುದು. ಪನೀರ್‌ನಂತೆಯೇ ತೋಫು ಬಳಕೆಗೆ ಬರುತ್ತದೆ. ಉಳಿದೆಲ್ಲ ಕಾಳುಗಳಂತೆ ಎಡಮೇಮ್‌ ಬಳಸಬಹುದು. ಸೋಯಾ ಚಂಕ್‌ಗಳನ್ನು ತರಕಾರಿಗಳ ಜೊತೆಗೆ ಬೇಯಿಸಲು ಸಾಧ್ಯವಿದೆ.

ಇದನ್ನೂ ಓದಿ: Digestion Tips: ಜೀರ್ಣಾಂಗಗಳ ಕ್ಷಮತೆ ಹೆಚ್ಚಿಸುವುದು ಹೇಗೆ?

ಇತರ ಮೂಲಗಳು

ಲಘುವಾದ ಅಡಿಕೆಯಂಥ ಘಮವನ್ನು ಹೊಂದಿರುವ ಸೆಣಬಿನ ಬೀಜಗಳು, ಪಾಚಿಯೊಂದರಿಂದ ಸಿದ್ಧಪಡಿಸುವ ಆಲ್ಗಲ್‌ ಎಣ್ಣೆ, ಬ್ರಸೆಲ್‌ ಸ್ಪ್ರೌಟ್‌ ಮುಂತಾದ ಆಹಾರಗಳಲ್ಲೂ ಒಮೇಗಾ 3 ಕೊಬ್ಬಿನಾಮ್ಲ ಸಾಕಷ್ಟು ಪ್ರಮಾಣದಲ್ಲಿ ಇರುತ್ತದೆ. ಹೀಗೆ ಸಸ್ಯಾಹಾರಿಗಳಿಗೂ ಒಮೇಗಾ ೩ ಕೊಬ್ಬಿನಾಮ್ಲ ದೇಹಕ್ಕೆ ಅಗತ್ಯವಾದಷ್ಟು ದೊರೆಯುವುದಕ್ಕೆ ಸಾಧ್ಯವಿದೆ. ಇದಕ್ಕಾಗಿ ಇದಿಷ್ಟೂ ರೀತಿಯ ಆಹಾರಗಳನ್ನು ನಿಯಮಿತವಾಗಿ ಬಳಕೆ ಮಾಡುವುದು ಆವಶ್ಯಕ.

Continue Reading

ಆರೋಗ್ಯ

Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

ನುಗ್ಗೆ ಸೊಪ್ಪನ್ನು (Moringa Leaves Health Benefits) ಬೇಸಿಗೆಯಲ್ಲೂ ತಿನ್ನುವುದಕ್ಕೆ ಯೋಗ್ಯ. ಆದರೆ ಎಷ್ಟು ತಿನ್ನಬಹುದು? ಇದರಲ್ಲಿ ಏನಿವೆ ಅಂಥ ತಿನ್ನಲೇಬೇಕಾದ ಸತ್ವಗಳು? ಉಳಿದೆಲ್ಲ ಸೊಪ್ಪುಗಳಂತೆ ಅಲ್ಲವೇ ಇದು ಸಹ? ಅಂಥ ಗುಣಗಳು ಏನಿವೆ ಇದರಲ್ಲಿ? ಇದನ್ನೇಕೆ ಸೂಪರ್‌ಫುಡ್‌ ಎಂದು ಕರೆಯಬೇಕು? ಇದನ್ನು ಎಷ್ಟು ತಿಂದರೆ ಒಳ್ಳೆಯದು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Moringa Leaves Health Benefits
Koo

ನುಗ್ಗೆ ಸೊಪ್ಪು (Moringa Leaves Health Benefits) ಎನ್ನುತ್ತಿದ್ದಂತೆ ಅದರ ಪಾಕದ ಘಮಕ್ಕೆ ಮೂಗರಳಿಸುವವರು ಹಲವರಿದ್ದಾರು. ಭಾರತದ ಉದ್ದಗಲಕ್ಕೆ ನುಗ್ಗೆ ಜನಪ್ರಿಯ. ಆದರೆ ಬೇಸಿಗೆಯಲ್ಲಿ ಇದು ದೇಹದ ಉಷ್ಣತೆ ಹೆಚ್ಚಿಸುತ್ತದೆ ಎಂದು ಇದನ್ನು ದೂರ ಮಾಡಿ, ಮಳೆಗಾಲ-ಚಳಿಗಾಲದಲ್ಲಿ ಮಾತ್ರವೇ ಬಳಸುವ ಕ್ರಮ ಹಲವೆಡೆಗಳಲ್ಲಿದೆ. ಆದರೆ ಈ ಎಲೆಗಳಲ್ಲಿ ಸಾಕಷ್ಟು ನೀರಿನಂಶವೂ ಇರುವುದರಿಂದ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸುವಂಥ ಸೂಪರ್‌ ಫುಡ್‌ ಇದು ಎಂಬುದು ಗೊತ್ತೇ? ಉಳಿದೆಲ್ಲ ಸೊಪ್ಪುಗಳಂತೆ ಅಲ್ಲವೇ ಇದು ಸಹ? ಅಂಥ ಗುಣಗಳು ಏನಿವೆ ಇದರಲ್ಲಿ? ಇದನ್ನೇಕೆ ಸೂಪರ್‌ಫುಡ್‌ ಎಂದು ಕರೆಯಬೇಕು? ಇದನ್ನು ಎಷ್ಟು ತಿಂದರೆ ಒಳ್ಳೆಯದು?

Moringa Leaves Medicinal Leaves

ಸತ್ವಗಳೇನಿವೆ?

ಇದರಲ್ಲಿ ಉಳಿದೆಲ್ಲ ಸೊಪ್ಪುಗಳಿಗಿಂತ ಪ್ರೊಟೀನ್‌ ಸಾಂದ್ರವಾಗಿದೆ. 18 ಬಗೆಯ ಅಮೈನೊ ಆಮ್ಲಗಳು ಇದರಲ್ಲಿವೆ. ಇದರಲ್ಲದೆ, ವಿಟಮಿನ್‌ ಎ, ವಿಟಮಿನ್‌ ಸಿ, ಕ್ಯಾಲ್ಸಿಯಂ, ಪೊಟಾಶಿಯಂ ಮತ್ತು ಕಬ್ಬಿಣದ ಅಂಶಗಳು ಇದರಲ್ಲಿ ಹೇರಳವಾಗಿದೆ. ಇವೆಲ್ಲವುಗಳಿಂದ ಸ್ನಾಯುಗಳು ದೃಢಗೊಂಡು, ದೃಷ್ಟಿ ಕ್ಷೇಮವಾಗಿದ್ದು, ಪ್ರತಿರೋಧಕ ಶಕ್ತಿ ಸುಧಾರಿಸಿ, ಮೂಳೆಗಳು ಬಲಗೊಂಡು, ರಕ್ತದಲ್ಲಿನ ಆಮ್ಲಜನಕದ ಮಟ್ಟವೂ ಸುಧಾರಿಸುತ್ತದೆ.

ಉತ್ಕರ್ಷಣ ನಿರೋಧಕಗಳು

ಇದರಲ್ಲಿ ಕ್ವೆರ್ಸೆಟಿನ್‌, ಕ್ಲೊರೊಜೆನಿಕ್‌ ಆಮ್ಲ ಮತ್ತು ಬೀಟಾ ಕ್ಯಾರೊಟಿನ್‌ಗಳು ವಿಫುಲವಾಗಿವೆ. ಈ ಅಂಶಗಳು ದೇಹದಲ್ಲಿ ಅಂಡಲೆಯುವ ಮುಕ್ತಕಣಗಳನ್ನು ಪ್ರತಿಬಂಧಿಸುತ್ತವೆ. ಇದರಿಂದ ಮಾರಕ ರೋಗಗಳು ಬಾರದಂತೆ ತಡೆಯಬಹುದು. ಜೊತೆಗೆ ದೇಹದೆಲ್ಲೆಡೆ ಹೆಚ್ಚುವ ಉರಿಯೂತದ ಕಾಟದಿಂದ ಮುಕ್ತರಾದರೆ ಆರ್ಥರೈಟಿಸ್‌ನಿಂದ ಹಿಡಿದು ಹೃದಯ ರೋಗಗಳವರೆಗೆ ಬಹಳಷ್ಟು ತೊಂದರೆಗಳನ್ನು ದೂರ ಇರಿಸಲು ಸಾಧ್ಯವಿದೆ.

Antioxidants in it keep immunity strong Benefits Of Mandakki

ರೋಗನಿರೋಧಕ ಶಕ್ತಿ ಹೆಚ್ಚಳ

ಇದರಲ್ಲಿ ವಿಟಮಿನ್‌ ಸಿ ಪ್ರಮಾಣ ಹೆಚ್ಚಿದೆ. ಅಂದಾಜಿಗೆ ಹೇಳುವುದಾದರೆ, ಕಿತ್ತಳೆ ಹಣ್ಣುಗಳಲ್ಲಿ ಇರುವ ಪ್ರಮಾಣಕ್ಕಿಂತಲೂ ನುಗ್ಗೆ ಸೊಪ್ಪಿನಲ್ಲಿ ಹೆಚ್ಚು ಸಿ ಜೀವಸತ್ವವಿದೆ. ಹಾಗಾಗಿ ಸೋಂಕುಗಳನ್ನು ದೂರ ಮಾಡಲು, ಒಂದೊಮ್ಮೆ ಋತುಮಾನದ ವೈರಸ್‌ಗಳು ಕಾಡಿದರೂ ಬೇಗ ಚೇತರಿಸಿಕೊಳ್ಳಲು ಇದರ ನಿಯಮಿತ ಸೇವನೆಯಿಂದ ಸಾಧ್ಯವಾಗುತ್ತದೆ.

Weight Loss tension

ತೂಕ ಇಳಿಸಲು ನೆರವು

ಕಡಿಮೆ ಕ್ಯಾಲರಿಯಲ್ಲಿ ಹೆಚ್ಚಿನ ಪೋಷಕಾಂಶಗಳನ್ನು ನೀಡುವಂಥ ಆಹಾರಗಳು ತೂಕ ಇಳಿಸಿಕೊಳ್ಳಲು ಸೂಕ್ತವಾದಂಥವು. ಜೊತೆಗೆ ಹೇರಳವಾದಂಥ ನಾರು ಮತ್ತು ಪ್ರೊಟೀನ್‌ ಅಂಶಗಳಿದ್ದ ಆಹಾರದಿಂದ ಹೊಟ್ಟೆ ತುಂಬುವುದು ಬೇಗ, ಕಳ್ಳ ಹಸಿವಿನ ಕಾಟವೂ ಇಲ್ಲ. ಈ ಎಲ್ಲ ಗುಣಗಳನ್ನು ಹೊಂದಿರುವ ನುಗ್ಗೆ ಸೊಪ್ಪು ತೂಕ ಇಳಿಸಿಕೊಳ್ಳುವವರಿಗೆ ಪ್ರಯೋಜನಕಾರಿ.

Diabetes Diabetes concept Tired of diabetes high sugar disea Spinach Benefits

ಮಧುಮೇಹಿಗಳಿಗೆ ಒಳ್ಳೆಯದು

ನಾರು ಮತ್ತು ಪ್ರೊಟೀನ್‌ ಹೆಚ್ಚಿರುವ ಆಹಾರಗಳು ಮಧುಮೇಹಿಗಳಿಗೆ ಪೂರಕ, ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಸ್ಥಿರವಾಗಿರುತ್ತದೆ ಎನ್ನುವುದನ್ನು ಅಧ‍್ಯಯನಗಳು ತಿಳಿಸುತ್ತವೆ. ಇದರ ಜೊತೆಗೆ, ನುಗ್ಗೆಯಲ್ಲಿರುವ ಐಸೊಥಿಯೊಸಯನೇಟ್‌ ಎಂಬ ನೈಸರ್ಗಿಕ ಉತ್ಕರ್ಷಣ ನಿರೋಧಕಗಳು ರಕ್ತದಲ್ಲಿ ಸಕ್ಕರೆಯಂಶ ಏರಿಳಿತ ಆಗದಂತೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪಾಲಿಫೆನಾಲ್‌ ಅಂಶಗಳೂ ಇದರಲ್ಲಿ ಇರುವುದರಿಂದ ಯಕೃತ್ತಿನ ಆರೋಗ್ಯ ರಕ್ಷಣೆ ಮಾಡುವುದು ಕಷ್ಟವಲ್ಲ.

ಎಷ್ಟು ಸೇವಿಸಬೇಕು?

ಶರೀರಕ್ಕೆ ಯಾವುದಾದರೂ ಸತ್ವ ಅತಿಯಾದರೂ ಜೀರ್ಣಿಸಿಕೊಳ್ಳುವುದು ಕೆಲವೊಮ್ಮೆ ಕಷ್ಟವಾಗಬಹುದು. ಹಾಗಾಗಿ ನುಗ್ಗೆ ಸೊಪ್ಪು ಒಳ್ಳೆಯದು ಎನ್ನುವುದು ನಿಜ. ಆದರೆ ಅದನ್ನು ಎಷ್ಟು ಸೇವಿಸಬೇಕು? ಎಷ್ಟು ತಿಂದರೆ ದೇಹ ತೆಗೆದುಕೊಳ್ಳಬಲ್ಲದು? ನುಗ್ಗೆ ಸೊಪ್ಪಿನ ಪುಡಿಯನ್ನು (ಮೊರಿಂಗ ಪೌಡರ್‌) ಸೇವಿಸುವ ಅ‍ಭ್ಯಾಸವಿದ್ದರೆ ದಿನಕ್ಕೆ ಒಂದು ದೊಡ್ಡ ಚಮಚ ಸಾಕಾಗುತ್ತದೆ. ಇದರಿಂದ, ಅಂದಾಜಿಗೆ ಹೇಳುವುದಾದರೆ, 35 ಕ್ಯಾಲರಿ ಶಕ್ತಿ ದೊರೆಯುತ್ತದೆ. ಅದಿಲ್ಲದಿದ್ದರೆ, ಒಂದು ದೊಡ್ಡ ಮುಷ್ಟಿಯಷ್ಟು ಹಸಿ ಸೊಪ್ಪು ಸೇವನೆಯಿಂದ ಈ ಅಭ್ಯಾಸವನ್ನು ಪ್ರಾರಂಭಿಸಬಹುದು. ಗರ್ಭಿಣಿಯರು ಸ್ವಲ್ಪ ತಿಂದರೆ ತೊಂದರೆಯಿಲ್ಲ, ಆದರೆ ಅತಿಯಾಗಿ ತಿನ್ನುವುದು ಸಮಸ್ಯೆಗಳನ್ನು ತರಬಹುದು.

ಇದನ್ನೂ ಓದಿ: Dates Benefits: ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ದಿನಕ್ಕೊಂದು ಖರ್ಜೂರ ತಿಂದರೆ ಸಾಕು!

ಹೇಗೆಲ್ಲ ತಿನ್ನಬಹುದು?

ಬೆಳಗ್ಗೆ ನುಗ್ಗೆ ಸೊಪ್ಪಿನ ಪುಡಿಯ ಕಷಾಯ ಅಥವಾ ಚಹಾ ಮಾಡಿ ಸೇವಿಸುವವರಿದ್ದಾರೆ. ಈ ಪುಡಿಯನ್ನು ಸ್ಮೂದಿಗಳಿಗೆ ಬಳಸಬಹುದು. ಸ್ಯಾಂಡ್‌ವಿಚ್‌ಗಳಿಗೆ ಇದರ ಪೇಸ್ಟ್‌ ಬಳಸಬಹುದು; ಡಿಪ್‌ ಆಗಿಯೂ ರುಚಿ ಹೆಚ್ಚಿಸುತ್ತದೆ. ಸೂಪ್‌ಗಳಿಗೆ ಬಲು ರುಚಿ. ಪೆಸ್ಟೊ ಪಾಸ್ತ ಮಾಡುವಾಗ ಬೆಸಿಲ್‌ ಬದಲಿಗೆ ನುಗ್ಗೆ ಎಲೆಗಳನ್ನು ಬಳಸಿಕೊಳ್ಳಬಹುದು. ಉಳಿದಂತೆ ಅಪ್ಪಟ ದಕ್ಷಿಣ ಭಾರತೀಯ ಶೈಲಿಯ ಸಾಂಬಾರ್‌, ಪಲ್ಯ, ರೊಟ್ಟಿ, ಗೊಜ್ಜುಗಳಿಗೆ ಇದನ್ನು ಖಂಡಿತವಾಗಿ ಬಳಸಬಹುದು.

Continue Reading

ಆರೋಗ್ಯ

Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಆಹಾರದ ಬದಲಾವಣೆಗಳಿಂದ ಕೊಲೆಸ್ಟ್ರಾಲ್‌ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಎಂಥಾ ಆಹಾರಗಳವು? ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

Overweight man suffering from chest pain, high blood pressure, cholesterol level
Koo
Obese male suffering from chest pain high blood pressure cholesterol level Sesame Benefits
ಕೊಲೆಸ್ಟ್ರಾಲ್‌ ಅಪಾಯಕಾರಿ
ಆಹಾರ ಕ್ರಮದಲ್ಲಿನ ದೋಷ ಮತ್ತು ವ್ಯಾಯಾಮ ಇಲ್ಲದಿರುವಂಥ ಕಾರಣದಿಂದ ದೇಹದಲ್ಲಿ ಜಮೆಯಾಗುವ ಕೊಬ್ಬು ಹೆಚ್ಚುತ್ತಿದೆ. ಅತಿಯಾದ ಕೊಬ್ಬಿನ ಆಹಾರ ಸೇವನೆ, ಸಂಸ್ಕರಿತ ಸಕ್ಕರೆ ಸೇವನೆಯಿಂದಾಗಿ ಶರೀರದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಹೃದಯದ ತೊಂದರೆ ಮತ್ತು ಪಾರ್ಶ್ವವಾಯುವಿನಂಥ ಮಾರಣಾಂತಿಕ ಸಮಸ್ಯೆಗಳು ಎದುರಾಗುತ್ತವೆ.
Skin Care Foods
ಆಹಾರದ ಪಾತ್ರ ಮುಖ್ಯ
ಕೆಲವು ಆಹಾರದ ಬದಲಾವಣೆಗಳಿಂದ ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ. ಬೆಳಗಿನ ಖಾಲಿ ಹೊಟ್ಟೆಯಲ್ಲಿ ನಾವು ದೇಹಕ್ಕೆ ನೀಡುವಂಥ ಆಹಾರಗಳು ಹಲವು ರೀತಿಯಲ್ಲಿ ಮಹತ್ವವನ್ನು ಪಡೆದಿವೆ.
reen Tea Benefits Of Drinking Green Tea
ಗ್ರೀನ್‌ ಟೀ
ಹಲವು ರೀತಿಯ ಉತ್ತಮ ಪಾಲಿಫೆನಾಲ್‌ಗಳನ್ನು ಹೊಂದಿರುವ ಗ್ರೀನ್‌ ಟೀ, ಉತ್ಕರ್ಷಣ ನಿರೋಧಕಗಳ ಖಜಾನೆಯಂತಿದೆ. ಅದರಲ್ಲೂ ಗ್ರೀನ್‌ ಟೀದಲ್ಲಿರುವ ಕೆಟಿಚಿನ್‌ ಅಂಶಗಳು ಕೊಲೆಸ್ಟ್ರಾಲ್‌ಗಳ ಜೊತೆ ಕೆಲಸ ಮಾಡುತ್ತವೆ. ಇದರಿಂದ ಆಹಾರದಲ್ಲಿನ ಕೊಲೆಸ್ಟ್ರಾಲ್‌ ಅಂಶವನ್ನು ದೇಹ ಹೀರಿಕೊಳ್ಳುವುದನ್ನು ಕಡಿಮೆ ಮಾಡಲು ಸಾಧ್ಯವಿದೆ. ಹಾಗಾಗಿ ನಿಯಮಿತವಾಗಿ ಗ್ರೀನ್‌ ಟೀ ಕುಡಿಯುವುದರಿಂದ ದೇಹದಲ್ಲಿ ಎಲ್‌ಡಿಎಲ್‌ ಮತ್ತು ಒಟ್ಟಾರೆ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡಲು ಸಾಧ್ಯವಿದೆ.
Chia seeds and soy milk
ಚಿಯಾ ಬೀಜ ಮತ್ತು ಸೋಯ್‌ ಹಾಲು
ಈ ಮಿಶ್ರಣ ಕೊಲೆಸ್ಟ್ರಾಲ್‌ ನಿರ್ವಹಣೆಯಲ್ಲಿ ದಕ್ಷತೆಯನ್ನು ಪ್ರದರ್ಶಿಸಿದೆ. ನಾರು, ಪ್ರೊಟೀನ್‌ ಮತ್ತು ಒಮೇಗಾ ೩ ಕೊಬ್ಬಿನಾಮ್ಲಗಳ ಜೊತೆಗೆ ಹಲವು ಸೂಕ್ಷ್ಮ ಸತ್ವಗಳು ಇದರಿಂದ ದೇಹ ಸೇರುತ್ತವೆ. ದೇಹದಲ್ಲಿ ಎಚ್‌ಡಿಎಲ್‌ ಅಥವಾ ಉತ್ತಮ ಕೊಬ್ಬನ್ನು ಹೆಚ್ಚಿಸುವ ಸಾಧ್ಯತೆ ಚಿಯಾ ಬೀಜಗಳಿಗಿದೆ. ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಕ್ಷಮತೆ ಸೋಯಾ ಹಾಲಿಗಿದೆ. ಹಾಗಾಗಿ ಈ ಮಿಶ್ರಣವನ್ನೂ ಬೆಳಗಿನ ಪೇಯವಾಗಿ ಉಪಯೋಗಿಸಬಹುದು.
Beetroot and carrot juice
ಬೀಟ್‌ರೂಟ್‌ ಮತ್ತು ಕ್ಯಾರೆಟ್‌ ರಸ
ಹೆಚ್ಚಿನ ನೈಟ್ರೇಟ್‌ ಅಂಶವಿರುವ ಬೀಟ್‌ರೂಟ್‌ ರಸ ಕೊಲೆಸ್ಟ್ರಾಲ್‌ ತಗ್ಗಿಸುವ ಸಾಧ್ಯತೆಯನ್ನು ಹೊಂದಿದೆ. ಇನ್ನು, ಬೀಟಾ ಕ್ಯಾರೋಟಿನ್‌ನಂಥ ಕೆರೋಟಿನಾಯ್ಡ್‌ಗಳನ್ನು ಹೊಂದಿರುವ ಕ್ಯಾರೆಟ್‌ ಸಹ ಕೊಲೆಸ್ಟ್ರಾಲ್‌ ಹೀರಿಕೊಳ್ಳುವುದನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಬಗ್ಗೆ ಹಲವು ಅಧ್ಯಯನಗಳು ನಡೆಯುತ್ತಿದ್ದು, ಪೂರಕ ಪರಿಣಾಮವನ್ನು ದಾಖಲಿಸಿವೆ.
Ginger, lemon juice
ಶುಂಠಿ, ನಿಂಬೆ ರಸ
ಬೆಳಗಿನ ಹೊತ್ತು ಬೆಚ್ಚಗಿನ ನೀರಿಗೆ ಕೆಲವು ಹನಿ ನಿಂಬೆ ರಸ ಮತ್ತು ಅರ್ಧ ಚಮಚ ಶುಂಠಿ ರಸ ಸೇರಿಸಿ ಕುಡಿಯುವುದು ಸಹ ಉತ್ತಮ ಪರಿಣಾಮಗಳನ್ನ ತೋರಿಸಬಲ್ಲದು. ಉತ್ಕರ್ಷಣ ನಿರೋಧಕಗಳನ್ನು ನಿಂಬೆ ರಸ ದೇಹಕ್ಕೆ ನೀಡಿದರೆ, ಟ್ರೈಗ್ಲಸರೈಡ್‌ ಮತ್ತು ಎಲ್‌ಡಿಎಲ್‌ ತಗ್ಗಿಸುವ ಗುಣವನ್ನು ಶುಂಠಿ ಹೊಂದಿದೆ. ಜೊತೆಗೆ, ಬೆಳಗಿನ ಹೊತ್ತು ಚೈತನ್ಯವನ್ನು ನೀಡಿ, ವ್ಯಾಯಾಮ ಮಾಡುವ ಉತ್ಸಾಹವನ್ನೂ ಹೆಚ್ಚಿಸುತ್ತದೆ ಈ ಪೇಯ.
Tomato juice
ಟೊಮೇಟೊ ರಸ
ಟೊಮೆಟೊದ ಕೆಂಪು ಬಣ್ಣಕ್ಕೆ ಕಾರಣವಾಗುವುದು ಅದರಲ್ಲಿರುವ ಲೈಕೊಪೇನ್‌ ಅಂಶ. ಇದು ಎಲ್‌ಡಿಎಲ್‌ ಕಡಿಮೆ ಮಾಡುವ ಗುಣವನ್ನು ಢಾಳಾಗಿ ತೋರಿಸಿದೆ. ಅಧ್ಯಯನಗಳ ಪ್ರಕಾರ, ಅತಿ ಹೆಚ್ಚು ಪ್ರಮಾಣದ ಲೈಕೊಪೇನ್‌ ಅಂಶವು (ದಿನಕ್ಕೆ 25 ಎಂಜಿಗಿಂತ ಹೆಚ್ಚು), ಕಡಿಮೆ ತೀವ್ರತೆಯ ಸ್ಟ್ಯಾಟಿನ್‌ಗಳು (ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಔಷಧಿಗಳು) ಬೀರುವ ಪರಿಣಾಮವನ್ನೇ ತೋರುತ್ತವೆ.
Turmeric and soy milk
ಅರಿಶಿನ ಮತ್ತು ಸೋಯ್‌ ಹಾಲು
ಸೋಯ್‌ ಹಾಲಿನಲ್ಲಿ ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಇನ್ನು ಅರಿಶಿನದಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಎಲ್‌ಡಿಎಲ್‌ ಮತ್ತು ಟ್ರೈಗ್ಲಿಸರೈಡ್‌ಗಳನ್ನು ತಗ್ಗಿಸುವ ಗುಣವನ್ನು ತೋರಿಸಿದೆ. ಹಾಗಾಗಿ ಪ್ರಾಣಿಜನ್ಯ ಹಾಲಿಗೆ ಅರಿಶಿನ ಸೇರಿಸುವ ಬದಲು, ಸೋಯಾ ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು ಕೊಲೆಸ್ಟ್ರಾಲ್‌ ತಗ್ಗಿಸುವುದಕ್ಕೆ ಒಳ್ಳೆಯ ಉಪಾಯ.
Continue Reading
Advertisement
Money Guide
ಮನಿ-ಗೈಡ್7 mins ago

Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

Hebbal Flyover
ಪ್ರಮುಖ ಸುದ್ದಿ16 mins ago

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

DK Shivakumar hits back at HD Kumaraswamy
ರಾಜಕೀಯ35 mins ago

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

theft case
ಬೆಂಗಳೂರು42 mins ago

Theft Case : ಪಕ್ಕದ ಮನೆಗೆ ಕನ್ನ ಹಾಕಿದ ಚೋರ್‌ ದಂಪತಿ; ಕೆಲಸ ಕೊಟ್ಟ ಮಾಲೀಕನನ್ನೇ ದೋಚಿದ

America
ವಿದೇಶ42 mins ago

America: ಶ್ವೇತಭವನದಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ..ವಿಡಿಯೋ ನೋಡಿ

KL Rahul
ಕ್ರೀಡೆ60 mins ago

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

Actor Dhanush
ಸಿನಿಮಾ1 hour ago

Actor Dhanush: ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದ ಖ್ಯಾತ ಗಾಯಕಿ

pm narendra modi nomination 2
ಪ್ರಮುಖ ಸುದ್ದಿ1 hour ago

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

HD Revanna released from jail Revanna Go straight to HD Deve Gowda house
ರಾಜಕೀಯ1 hour ago

HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Patanjali case
ದೇಶ1 hour ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ4 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು5 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ12 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ22 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ22 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ22 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ23 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ23 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌