Medical Negligence : ಮೂರ್ಮೂರು ಬಾರಿ ಅನಸ್ತೇಷಿಯಾ ಕೊಟ್ಟ ವೈದ್ಯರು; ಕೋಮಾಗೆ ಜಾರಿದವ ಮೃತ್ಯು - Vistara News

ಆರೋಗ್ಯ

Medical Negligence : ಮೂರ್ಮೂರು ಬಾರಿ ಅನಸ್ತೇಷಿಯಾ ಕೊಟ್ಟ ವೈದ್ಯರು; ಕೋಮಾಗೆ ಜಾರಿದವ ಮೃತ್ಯು

Medical Negligence : ಚಿಕಿತ್ಸೆಗೆಂದು ದಾಖಲಾದ ಯುವಕನಿಗೆ ಮೂರ್ಮೂರು ಬಾರಿ ಅನಸ್ತೇಷಿಯಾ ಕೊಟ್ಟು, ಕೋಮಾಗೆ ಹೋಗುವಂತೆ ವೈದ್ಯರು ಮಾಡಿದ್ದರು. ಇದೀಗ ನರಕ ಯಾತನೆ ಅನುಭವಿಸಿ 6 ವರ್ಷಗಳ ನಂತರ ಪ್ರಾಣ ಬಿಟ್ಟಿದ್ದಾನೆ.

VISTARANEWS.COM


on

vignesh Medical Negligence
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯರ ಯಡವಟ್ಟಿಗೆ ಯುವಕನೊಬ್ಬ (Medical Negligence) ನರಳಿ ನರಳಿ ಪ್ರಾಣ ಬಿಟ್ಟಿದ್ದಾನೆ. ನಿರಂತರ 6 ವರ್ಷ ಕೋಮಾದಲ್ಲಿದ್ದು ನರಕ ಯಾತನೆ ಅನುಭವಿಸಿ ಈಗ ಪ್ರಾಣ ಬಿಟ್ಟಿದ್ದಾನೆ. ವಿಘ್ನೇಶ್ (20) ಮೃತ ದುರ್ದೈವಿ.

ವಿಘ್ನೇಶ್‌ ಹರ್ನಿಯಾ ಚಿಕಿತ್ಸೆಗೆಂದು ಸುಬ್ರಹ್ಮಣ್ಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ತೆರಳಿದ್ದ. 2017ರ ಏಪ್ರಿಲ್ 4ರಂದು ವಿಘ್ನೇಶ್‌ ಆಸ್ಪತ್ರೆಗೆ ದಾಖಲಾಗಿದ್ದ. ಈ ವೇಳೆ ವೈದ್ಯರು ಶಸ್ತ್ರಚಿಕಿತ್ಸೆ ಸಮಯದಲ್ಲಿ ಮೂರು ಬಾರಿ ಅನಸ್ತೇಷಿಯ ನೀಡಿದ್ದಾರೆ. ಅನಸ್ತೇಷಿಯ ನೀಡಿದಾಗಿನಿಂದ ವಿಘ್ನೇಶ್‌ ಪ್ರಜ್ಞೆಯನ್ನೇ ಕಳೆದುಕೊಂಡಿದ್ದ. ಅದೇ ಕ್ಷಣದಿಂದ ಕೋಮಾಗೆ ಜಾರಿದ್ದ.

ಕುಟುಂಬಸ್ಥರು ಘಟನೆ ಸಂಬಂಧ ಬನಶಂಕರಿ ಪೊಲೀಸರಿಗೆ ದೂರನ್ನು ನೀಡಿದ್ದರು. ಈ ವೇಳೆ ಚಿಕಿತ್ಸೆ ವೆಚ್ಚ ಭರಿಸುವುದಾಗಿ ವೈದ್ಯರು ಹೇಳಿದ್ದರು. ಕುಟುಂಬಸ್ಥರು ಚಿಕಿತ್ಸೆಗೆಂದು‌ 19 ಲಕ್ಷ ರೂ. ಖರ್ಚು ಮಾಡಿದ್ದರು. ಆದರೆ ಆಸ್ಪತ್ರೆ ಆಡಳಿತ ಮಂಡಳಿ ಐದು ಲಕ್ಷ ರೂ. ನೀಡಿ ಕೈತೊಳೆದುಕೊಂಡಿದೆ. ಉಳಿದ ಚಿಕಿತ್ಸಾ ವೆಚ್ಚ ಕೂಡ ನೀಡದೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

6 ವರ್ಷಗಳ ಕೋಮಾದಲ್ಲಿದ್ದ ವಿಘ್ನೇಶ್‌ 2024 ಜನವರಿ 3ರಂದು ಮೃತಪಟ್ಟಿದ್ದಾನೆ. ಆಸ್ಪತ್ರೆ ವೈದ್ಯರ ಯಡವಟ್ಟು ಸಂಬಂಧ ಪೋಷಕರು ಮತ್ತೆ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ದೂರು ದಾಖಲಿಸಿಕೊಂಡಿರುವ ಬನಶಂಕರಿ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Udupi News : ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದು ಬಾವಿಗೆ ಬಿದ್ದ ಭಕ್ತ!

ಆರೋಗ್ಯ ವಿಮೆ ಯಾವಾಗ ಖರೀದಿಸಬೇಕು?

ಪ್ರತಿಯೊಬ್ಬರೂ ಸೂಕ್ತ ಜೀವ ವಿಮೆ ಪಾಲಿಸಿಯನ್ನು ಹೊಂದಿರಬೇಕು. ಇದು ಕುಟುಂಬದ ಆಧಾರ ಸ್ತಂಭದಂತೆ ಇರುವ ಸದಸ್ಯರ ಅಗಲಿಕೆಯ ಸಂದರ್ಭ, ಸಂಸಾರದ ಆರ್ಥಿಕ ಭದ್ರತೆಯನ್ನು ನೋಡಿಕೊಳ್ಳುತ್ತದೆ. ಆದರೆ ಅಷ್ಟೇ ಮಹತ್ವದ ಮತ್ತೊಂದು ವಿಮೆಯೂ ಅಗತ್ಯ. ಅದು ಯಾವುದು ಎಂದರೆ ಆರೋಗ್ಯ ವಿಮೆ. (Medical Insurance) ಕುಟುಂಬದ ಸದಸ್ಯರು ಅನಾರೋಗ್ಯಕ್ಕೀಡಾದಾಗ ಆಸ್ಪತ್ರೆಯ ಖರ್ಚು ವೆಚ್ಚಗಳು ದೊಡ್ಡ ಬಿಲ್‌ ಆಗಬಹುದು. ಅಂಥ ಸಂದರ್ಭ ಆರೋಗ್ಯ ವಿಮೆ ಇದ್ದರೆ ನಿಶ್ಚಿಂತೆಯಿಂದ ಇರಬಹುದು.

ಆರೋಗ್ಯದ ಸಮಸ್ಯೆಗಳು ಯಾವುದೇ ಪೂರ್ವ ಸೂಚನೆಯೂ ಇಲ್ಲದೆ ಬರುತ್ತವೆ. ಒಂದು ವೇಳೆ ಗಂಭೀರ ಖಾಯಿಲೆಗಳು ಬಂದರೆ, ಇಡೀ ಜೀವಮಾನದ ಉಳಿತಾಯ ಖರ್ಚಾಗಬಹುದು. ಅಥವಾ ಹಣದ ಕೊರತೆ ತೀವ್ರವಾಗಿ ಕಾಡಬಹುದು. ಹೀಗಾಗಿ ಪರ್ಸನಲ್‌ ಫೈನಾನ್ಸ್‌ ವಿಚಾರಗಳಲ್ಲಿ ಆರೋಗ್ಯ ವಿಮೆ ಅತ್ಯಂತ ಮಹತ್ವದ್ದು.

ನೀವು ನಿಮ್ಮ ಕುಟುಂಬದ ಸದಸ್ಯರ ಆರೋಗ್ಯವನ್ನು ಸಂರಕ್ಷಿಸಲು ಮತ್ತು ನಿಮ್ಮ ಉಳಿತಾಯದ ಹಣವನ್ನು ರಕ್ಷಿಸಲು, ಉತ್ತಮ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಇಡೀ ಕುಟುಂಬಕ್ಕೆ ಆರೋಗ್ಯ ವಿಮೆಯ ಕವರೇಜ್‌ ಅಗತ್ಯ. ಕುಟುಂಬದ ಪ್ರತಿ ಸದಸ್ಯರಿಗೂ ಸಮಗ್ರ ಆರೋಗ್ಯ ವಿಮೆ ಮಾಡಿಸಿಕೊಳ್ಳುವುದು ಮುಖ್ಯ. ವೈದ್ಯಕೀಯ ಸೌಲಭ್ಯಗಳು ಹೆಚ್ಚಾದಂತೆ ಹೆಲ್ತ್‌ ಕೇರ್‌ ಕುರಿತ ವೆಚ್ಚಗಳೂ ಹೆಚ್ಚುತ್ತವೆ. ಅಂಥ ಸಂದರ್ಭದಲ್ಲಿ ಹೆಲ್ತ್‌ ಇನ್ಷೂರೆನ್ಸ್‌ ಕೈ ಹಿಡಿಯುತ್ತದೆ. ಆರೋಗ್ಯ ವಿಮೆ ಹೊಂದಿರುವವರು ನಿಯಮಿತವಾಗಿ ವೈದ್ಯಕೀಯ ಸೇವೆಯನ್ನು ಪಡೆಯಬಹುದು. ಇವತ್ತಿನ ದಿನಗಳಲ್ಲಿ ಹೆಚ್ಚೆಚ್ಚು ಜನ ಆರೋಗ್ಯ ವಿಮೆಗಳನ್ನು ಪಡೆಯುತ್ತಿದ್ದಾರೆ. ಹೀಗಿದ್ದರೂ ನಮ್ಮ ಜನಸಂಖ್ಯೆಯನ್ನು ಹೋಲಿಸಿದರೆ, ಆರೋಗ್ಯ ವಿಮೆಯನ್ನು ಪಡೆಯದವರು ಹೆಚ್ಚು. ಮುಖ್ಯವಾಗಿ ಬಡವರು ಇದರಿಂದ ವಂಚಿತರಾಗಿದ್ದಾರೆ. ಸರ್ಕಾರದ ಮಟ್ಟದಲ್ಲಿ ಇರುವ ಆರೋಗ್ಯ ವಿಮೆ ಯೋಜನೆಗಳ ಬಗ್ಗೆ ಜನ ಜಾಗೃತಿಯೂ ಕಡಿಮೆ. ಆದ್ದರಿಂದ ಮೆಡಿಕಲ್‌ ಇನ್ಷೂರೆನ್ಸ್‌ಗಳ ಬಗ್ಗೆ ಹಾಗೂ ಅಫರ್ಡಬಲ್‌ ಹೆಲ್ತ್‌ ಇನ್ಷೂರೆನ್ಸ್‌ಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ.

ಆರೋಗ್ಯ ವಿಮೆಯನ್ನು ಖರೀದಿಸಲು ಬಯಸುವವರು ಮೊದಲ ಹೆಜ್ಜೆಯಾಗಿ ತಮ್ಮ ಅಗತ್ಯಗಳನ್ನು ಅರಿತುಕೊಳ್ಳಬೇಕು. ಆರೋಗ್ಯ ವಿಮೆ ಬಗ್ಗೆ ಒಂದು ಸೂಕ್ತವಾದ ಪ್ಲಾನ್‌ ಮಾಡಿಕೊಳ್ಳಬೇಕು. ವ್ಯಕ್ತಿಗತವಾಗಿ ನಿಮಗೊಬ್ಬರಿಗೆ ಅಗತ್ಯವಿದೆಯೇ, ಇಡೀ ಕುಟುಂಬಕ್ಕೆ ಅಗತ್ಯ ಇದೆಯೇ ಎಂಬುದನ್ನು ತಿಳಿದುಕೊಳ್ಳಬೇಕು. ಹಾಗೂ ಎರಡೂ ಪರಿಸ್ಥಿತಿಗಳಲ್ಲಿ ಅದಕ್ಕೆ ತಗಲುವ ವೆಚ್ಚ, ನಿಯಮಗಳು ಮತ್ತು ಷರತ್ತುಗಳನ್ನು ತಿಳಿದುಕೊಳ್ಳಬೇಕು.

ಈ ಎಲ್ಲ ಮಾಹಿತಿಗಳನ್ನು ಪಡೆಯಲು ಒಂದು ಸರಳ ವಿಧಾನ ಇದೆ. ನಿಮ್ಮ ಆಯ್ಕೆಯ ವಿಮೆ ಸಂಸ್ಥೆಯ ವೆಬ್‌ ಸೈಟ್‌ನಲ್ಲಿ ಈ ಕುರಿತ ವಿವರಗಳನ್ನು ಸರ್ಚ್‌ ಮಾಡಬಹುದು. ಎಲ್ಲ ಪ್ರಮುಖ ವಿಮೆ ಕಂಪನಿಗಳೂ ಆನ್‌ಲೈನ್‌ನಲ್ಲಿ ಅಸ್ತಿತ್ವದಲ್ಲಿದ್ದು, ಮಾಹಿತಿ ಪಡೆಯುವುದು ಈಗ ಸುಲಭ. ನೀವು ವೇತನದಾರರಾಗಿದ್ದರೆ ನಿಮ್ಮ ಕಂಪನಿಯೇ ಹೆಲ್ತ್‌ ಇನ್ಷೂರೆನ್ಸ್‌ ಪ್ರೊಟೆಕ್ಷನ್‌ ನೀಡಬಹುದು. ಅದು ಸಾಕಾಗದಿದ್ದರೆ ಪ್ರತ್ಯೇಕವಾಗಿ ಹೆಲ್ತ್‌ ಇನ್ಷೂರೆನ್ಸ್‌ ಖರೀದಿಸುವುದು ಸೂಕ್ತ.

ವೈದ್ಯಕೀಯ ವೆಚ್ಚಗಳು ಪ್ರತಿ ವರ್ಷ ಹೆಚ್ಚುತ್ತಿರುವುದರಿಂದ ಆದಷ್ಟು ಬೇಗ ಆರೋಗ್ಯ ವಿಮೆ ಖರೀದಿಸುವುದು ಸೂಕ್ತ. ಎಳೆಯ ವಯಸ್ಸಿನಲ್ಲಿ ಆರೋಗ್ಯ ವಿಮೆ ಮಾಡಿದರೆ ಪ್ರಯೋಜನವೂ ಹೆಚ್ಚು. ಏಕೆಂದರೆ ಒಟ್ಟಾರೆಯಾಗಿ ವಿಮೆಯ ಖರ್ಚು ವೆಚ್ಚ ಕಡಿಮೆಯಾಗುತ್ತದೆ. ಹೆಲ್ತ್‌ ಇನ್ಷೂರೆನ್ಸ್‌ ಪ್ರೀಮಿಯಂ ವೆಚ್ಚಗಳು ವ್ಯಕ್ತಿಯ ವಯಸ್ಸನ್ನು ಆಧರಿಸಿವೆ. ವಯಸ್ಸು ಹೆಚ್ಚಾದಷ್ಟೂ ಪ್ರೀಮಿಯಂ ದುಬಾರಿಯಾಗುತ್ತದೆ. ಆದ್ದರಿಂದ ಸಣ್ಣ ವಯಸ್ಸಿನಲ್ಲಿ ಖರೀದಿಸಿದರೆ ಪ್ರೀಮಿಯಂ ಖರ್ಚು ಕೂಡ ಕಡಿಮೆಯಾಗಿರುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Health Tips Kannada: ಕೂತಲ್ಲೇ ತೂಕಡಿಸುತ್ತೀರಾ? ಇದು ಒಳ್ಳೆಯದು!

ಇದ್ದಲ್ಲೇ ನಿದ್ದೆ ಮಾಡುವವರಿಗೆ (Health Tips Kannada) ಸುಖ ಹೆಚ್ಚು, ಚಿಂತೆ ಇಲ್ಲ ಎಂದೆಲ್ಲ ಹೇಳುವುದು ಸಾಮಾನ್ಯ. ಆದರೆ ಹೀಗೆ ಕೋಳಿಗಳಂತೆ ಕೂತಲ್ಲೇ ಚುಟುಕು ನಿದ್ದೆ ಮಾಡುವುದು ಒಳ್ಳೆಯದು ಎಂಬುದು ಗೊತ್ತೇ? ಎಲ್ಲೆಂದರಲ್ಲಿ ನಿದ್ದೆ ತೆಗೆಯುವವರನ್ನು ಕಂಡು ʻಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆʼ ಎಂದೆಲ್ಲಾ ಗಾದೆ ಸೃಷ್ಟಿಯಾಗಿರುವುದುಂಟು. ಹಾಗೆ ಕೂತಲ್ಲಿ ತೂಕಡಿಸುವವರೆಲ್ಲರೂ ಸುಖವಾಗಿದ್ದಾರೆ ಎಂದು ಅರ್ಥವೇ? ಚಿಂತೆ ಇಲ್ಲದವರೆಂದು ತಿಳಿಯಬಹುದೇ? ಸುಸ್ತಾದಾಗಲೂ ಸಣ್ಣದೊಂದು ನಿದ್ದೆ ಮಾಡಿದರೆ ಆರಾಮ ಎನಿಸುತ್ತದಲ್ಲ, ಏನಿದರ ಮರ್ಮ? ಇಲ್ಲಿದೆ ವಿವರ.

VISTARANEWS.COM


on

Health Tips Kannada sleepy is good
Koo

ಕೂತಲ್ಲೇ (Health Tips Kannada) ತೂಕಡಿಸುವವರು, ಬಸ್ಸಲ್ಲಿ, ರೈಲಲ್ಲಿ ಓಡಾಡುವಾಗ ಗೊರಕೆ ಹೊಡೆಯುವವರು, ಕಾರಲ್ಲಿ ಹಿಂದೆ ಕೂತಾಗ ನಿದ್ದೆ ಮಾಡುವವರು…ಹೀಗೆ ಎಲ್ಲೆಂದರಲ್ಲಿ ನಿದ್ದೆ ತೆಗೆಯುವವರನ್ನು ಕಂಡು ʻಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆʼ ಎಂದೆಲ್ಲಾ ಗಾದೆ ಸೃಷ್ಟಿಯಾಗಿರುವುದುಂಟು. ಹಾಗೆ ಕೂತಲ್ಲಿ ತೂಕಡಿಸುವವರೆಲ್ಲರೂ ಸುಖವಾಗಿದ್ದಾರೆ ಎಂದು ಅರ್ಥವೇ? ಚಿಂತೆ ಇಲ್ಲದವರೆಂದು ತಿಳಿಯಬಹುದೇ? ಸುಸ್ತಾದಾಗಲೂ ಸಣ್ಣದೊಂದು ನಿದ್ದೆ ಮಾಡಿದರೆ ಆರಾಮ ಎನಿಸುತ್ತದಲ್ಲ, ಏನಿದರ ಮರ್ಮ? ಹಾಗೆ ಹಗಲಿನಲ್ಲಿ ನಿದ್ದೆ ಮಾಡಿದರೆ ರಾತ್ರಿಯ ನಿದ್ದೆಗೆ ತೊಂದರೆ ಆಗುವುದಿಲ್ಲವೇ? ಇಂಥ ಹಲವು ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಚುಟುಕು ನಿದ್ದೆ

ಈ ಹೆಸರಿನಲ್ಲೇ ಸಾಮಾನ್ಯವಾಗಿ ಕರೆಸಿಕೊಳ್ಳುವ ಹಗಲಿನ ನಿದ್ದೆ ದೀರ್ಘವಾದರೆ ʻಪವರ್‌ ನ್ಯಾಪ್‌ʼ ಎನಿಸಿಕೊಳ್ಳುವುದಿಲ್ಲ. ತೀರಾ ಆಯಾಸವಾದಾಗ 20 ನಿಮಿಷ ನಿದ್ದೆ ಮಾಡಿದರೆ, ಎಚ್ಚರಾದಮೇಲೆ ದೇಹದ ಚೈತನ್ಯ ಹೆಚ್ಚಿದಂತೆ ಭಾಸವಾಗುತ್ತದೆ. ಇದು ಹೌದೇ ಎಂಬುದನ್ನು ತಿಳಿಯಲು ಯೂನಿವರ್ಸಿಟಿ ಕಾಲೇಜ್‌ ಲಂಡನ್‌ನ ವಿಜ್ಞಾನಿಗಳು ಅಧ್ಯಯನವೊಂದನ್ನು ನಡೆಸಿದ್ದರು. ಇದಕ್ಕಾಗಿ 40ರಿಂದ 69 ವರ್ಷ ವಯಸ್ಸಿನ ನಡುವಿನ ಸುಮಾರು ೩೫ ಸಾವಿರ ಮಂದಿಯನ್ನ್ ಅ‍ಧ್ಯಯನಕ್ಕೆ ಒಳಪಡಿಸಿದ್ದರು. ಇದರಲ್ಲಿ ಗಮನಿಸಿದಾಗ, ನಿಯಮಿತವಾಗಿ ಹಗಲಿಗೆ ಚುಟುಕು ನಿದ್ದೆ ಮಾಡುವವರ ಮೆದುಳು, ಪವರ್‌ ನ್ಯಾಪ್‌ ಮಾಡದವರ ಮೆದುಳಿಗಿಂತ ದೊಡ್ಡದಾಗಿತ್ತು. ಏನಿದರರ್ಥ?
ಮೆದುಳಿನ ಗಾತ್ರ ಕಿರಿದಾಗುವುದಕ್ಕೂ ಮೆದುಳಿಗೆ ವಯಸ್ಸಾಗುವುದಕ್ಕೂ ಸಂಬಂಧವಿದೆ. ಹಾಗಾಗಿ ನಿಯಮಿತವಾಗಿ ಚುಟುಕು ನಿದ್ದೆ ಮಾಡುವವರಲ್ಲಿ ಮೆದುಳು ಕುಗ್ಗಿಲ್ಲ ಎಂದರೆ, ಮೆದುಳಿಗೆ ಬೇಗ ವಯಸ್ಸಾಗುವುದನ್ನು ಪವರ್‌ ನ್ಯಾಪ್‌ ಮುಂದೂಡುತ್ತದೆ ಎನ್ನುತ್ತಾರೆ ಅಧ್ಯಯನಕಾರರು. ಅಂದರೆ, ಅಲ್‌ಜೈಮರ್ಸ್‌ನಂಥ ಮೆದುಳು ಸಂಬಂಧಿ ರೋಗಗಳು, ಹೃದಯದ ತೊಂದರೆಗಳನ್ನು ಮುಂತಾದವು ಬರುವುದನ್ನು ಮುಂದೂಡಲು ಸಾಧ್ಯವಾಗಬಹುದು ಎಂಬುದು ಅವರ ಅನಿಸಿಕೆ.

ಇದನ್ನೂ ಓದಿ: Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಕೋಳಿ ನಿದ್ದೆಯ ಮ್ಯಾಜಿಕ್!

ಇಷ್ಟು ಮಾತ್ರವಲ್ಲ, 5ರಿಂದ 20 ನಿಮಿಷಗಳವರೆಗಿನ ಕೋಳಿ ನಿದ್ದೆಯಿಂದ ತಕ್ಷಣಕ್ಕೆ ಮೆದುಳಿನ ಕ್ಷಮತೆಯನ್ನು ಹೆಚ್ಚಿಸಬಹುದು. ತೀರಾ ಆಯಾಸವಾಗಿ ಕೆಲಸ ಮಾಡಲೇ ಆಗುತ್ತಿಲ್ಲ, ಓದಿದರೆ ತಲೆಗೇ ಹೋಗುತ್ತಿಲ್ಲ ಎಂಬಂಥ ಸಂದರ್ಭದಲ್ಲಿ, ಹತ್ತಿಪ್ಪತ್ತು ನಿಮಿಷಗಳ ಕೋಳಿ ನಿದ್ದೆ ನಿಜಕ್ಕೂ ಮ್ಯಾಜಿಕ್‌ ಮಾಡಬಲ್ಲದು. ನಿದ್ದೆ ಮುಗಿಸಿ ಎದ್ದ ಸುಮಾರು ಮೂರು ತಾಸುಗಳವರೆಗೆ ದೇಹ-ಮನಸ್ಸುಗಳು ಚೈತನ್ಯಪೂರ್ಣವಾಗಿ ಇರುತ್ತವೆ ಎಂಬುದು ಖಚಿತವಾಗಿದೆ. ಕ್ರೀಡಾಳುಗಳ ಸಹ ತಮ್ಮ ತರಬೇತಿಯ ನಡುವಿನಲ್ಲಿ ಚುಟುಕು ನಿದ್ದೆಗಾಗಿಯೇ ಸಮಯ ನಿಗದಿ ಮಾಡಿಕೊಂಡಿದ್ದರೆ, ದೇಹ ಬಳಲುವುದನ್ನು ತಪ್ಪಿಸಬಹುದು. ಹಲವು ಅಥ್ಲೀಟ್‌ಗಳು ಇದನ್ನು ತಮ್ಮ ಕ್ರೀಡಾ ಜೀವನದ ಭಾಗವೆಂದೇ ಭಾವಿಸುತ್ತಾರೆ.

ಇನ್ನಷ್ಟು ಲಾಭಗಳು

ದೇಹ-ಮನಸ್ಸು ಚೈತನ್ಯಪೂರ್ಣ ಆಗುವುದು ಮಾತ್ರವೇ ಅಲ್ಲದೆ ಹೆಚ್ಚಿನ ಲಾಭಗಳಿವೆ ಇದರಿಂದ. ಮೂಡ್‌ ಸುಧಾರಿಸಿ, ಮನಸ್ಸಿನ ಉಲ್ಲಾಸ ಹೆಚ್ಚಿಸುತ್ತದೆ. ನೆನಪಿನ ಶಕ್ತಿ ವೃದ್ಧಿಸುತ್ತದೆ, ಸೃಜನಶೀಲತೆ ವರ್ಧಿಸುತ್ತದೆ. ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವಾಗ ಇಂಥ ನಿದ್ದೆಗಳು ದೇಹದ ದುರಸ್ತಿಗೆ ಗಣನೀಯ ಕೊಡುಗೆ ನೀಡುತ್ತವೆ.

ರಾತ್ರಿ ನಿದ್ದೆಗೆ ಬದಲಲ್ಲ

ಇದಕ್ಕಾಗಿ ರಾತ್ರಿಯೆಲ್ಲ ನಿದ್ದೆಗೆಟ್ಟು ಮೊಬೈಲು ಗೀರುತ್ತಾ, ಸಿನೆಮ ನೋಡುತ್ತಾ ಕೂತು, ಹಗಲಿಗೆ ನಿದ್ದೆ ಮಾಡಿ, ಮೆದುಳನ್ನು ಚುರುಕಾಗಿ ಇಟ್ಟುಕೊಳ್ಳುತ್ತೇವೆ ಎಂದು ಬೀಗುವುದಲ್ಲ. ಮಾತ್ರವಲ್ಲ, ಹಗಲಿನ ನಿದ್ದೆ ಚುಟುಕಾಗದೆ ತೀರಾ ದೀರ್ಘವಾದರೆ, ರಾತ್ರಿಯ ಪಾಲಿಗೆ ಕುಟುಕು ನಿದ್ದೆಯಾಗಬಹುದು. ಹಾಗಾಗಿ ಹಗಲಿಗೆ ಮಾಡುವ ನಿದ್ದೆಯಿಂದ ರಾತ್ರಿಯ ನಿದ್ದೆಯ ಗುಣಮಟ್ಟದಲ್ಲಿ ವ್ಯತ್ಯಾಸವಾಗುತ್ತಿದೆ ಎಂದಾದರೆ, ಹಗಲಿನ ನಿದ್ದೆಯ ಪ್ರಮಾಣವನ್ನು ಕಡಿಮೆ ಮಾಡಬೇಕು. ರಾತ್ರಿಯ ನಿದ್ರಾಹೀನತೆಗೆ ಚುಟುಕು ನಿದ್ದೆ ಮದ್ದೂ ಅಲ್ಲ. ರಾತ್ರಿಗೆ 7-8 ತಾಸಿನ ನಿದ್ದೆಯ ಅವಧಿಯಲ್ಲಿ ತೊಂದರೆಯಾದರೆ, ಅದನ್ನು ಪ್ರತ್ಯೇಕವಾಗಿಯೇ ಸರಿ ಪಡಿಸಿಕೊಳ್ಳುವುದು ಸೂಕ್ತ. ಹಗಲಿನ ಸುಸ್ತು, ಒತ್ತಡ, ಆಯಾಸಗಳ ನಡುವೆ ಕೆಲಸ ಮಾಡುವುದಕ್ಕೆ ತೊಂದರೆಯಾಗದಂತೆ ಮಾತ್ರವೇ ಕೋಳಿ ನಿದ್ದೆಯನ್ನು ಉಪಯೋಗಿಸಿಕೊಳ್ಳುವುದು ಜಾಣತನ.

ಎಷ್ಟು ಹೊತ್ತು?

ಮಧ್ಯಾಹ್ನದ 1 ಗಂಟೆಯಿಂದ 4 ಗಂಟೆಯ ನಡುವೆ, 20 ನಿಮಿಷಕ್ಕಿಂತ ಕಡಿಮೆ ಸಮಯದ ನಿದ್ದೆ ಎಲ್ಲ ರೀತಿಯಲ್ಲೂ ಒಳ್ಳೆಯ ಪರಿಣಾಮವನ್ನು ನೀಡುತ್ತದೆ. ಇನ್ನೂ ದೀರ್ಘ ಕಾಲ ನಿದ್ದೆ ಮಾಡಿದರೆ, ಎದ್ದಾಗ ಮಂಕು ಕವಿದಂತೆ, ದೇಹವೆಲ್ಲ ಜಡವಾದಂತೆ ಭಾಸವಾಗುತ್ತದೆ. ಇದಕ್ಕೆ ಕಾರಣ, ಗಾಢ ನಿದ್ದೆಯ ಆವರ್ತನವನ್ನು ದೇಹ ಪ್ರವೇಶಿಸುವುದು. ವ್ಯಾಯಾಮ ಅಥವಾ ಕ್ರೀಡಾ ಚಟುವಟಿಕೆಗಳಿಂದ ದೇಹಕ್ಕೆ ತೀವ್ರ ಆಯಾಸವಾದಾಗಲೂ ನಿದ್ದೆಯ ಅವಧಿ 30 ನಿಮಿಷ ಮೀರದಿದ್ದರೆ ಒಳ್ಳೆಯದು.

Continue Reading

ಆರೋಗ್ಯ

Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

Ambulance Booking: ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ.

VISTARANEWS.COM


on

ambulance-booking
Koo

ಬೆಂಗಳೂರು: ತಂತ್ರಜ್ಞಾನ ಆಧಾರಿತ ವಿಮಾ ಸಂಸ್ಥೆಯಾದ ಆಕ್ಕೊ (ACKO), ತನ್ನ ಅನೇಕ ಕೊಡುಗೆಗಳ ಪೋರ್ಟ್‌ಫೋಲಿಯೋಗೆ ತನ್ನ ಮೊಬೈಲ್ ಆ್ಯಪ್‌ನಲ್ಲಿ ಆಂಬುಲೆನ್ಸ್ ಬುಕ್ ಮಾಡುವ ಹೊಸ ಸೇವೆಯೊಂದನ್ನು ಸೇರಿಸಿದೆ. ತನ್ನ ಸೇವೆಗಳನ್ನು ವಿಮಾ ಪರಿಹಾರಗಳಾಚೆ ವಿಸ್ತರಿಸುವ ಮೂಲಕ ಎಲ್ಲಾ ಆರೋಗ್ಯ ಸುರಕ್ಷತಾ ಅಗತ್ಯಗಳಿಗೆ ಒಂದೇ ಸೂರಿನಡಿ ಸೇವೆ ಸಲ್ಲಿಸುವ ದೂರದೃಷ್ಟಿಯನ್ನು ಹೊಂದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಲಭ್ಯವಿರುವ ಸೇವೆಯು ಮುಂಬರುವ ವಾರಗಳಲ್ಲಿ ಚೆನ್ನೈ, ಮುಂಬೈ, ಹೈದರಾಬಾದ್, ದೆಹಲಿ ಮತ್ತು ಕೋಲ್ಕತ್ತಾದಲ್ಲೂ ಸಿಗಲಿದೆ ಎಂದು ಕಂಪನಿ ಹೇಳಿದೆ.

ದೇಶದ ಮುಂಚೂಣಿ ತುರ್ತು ಸೇವಾ ಸಂಸ್ಥೆಗಳ ಪೈಕಿ ಒಂದಾದ Red.Healthನ ಸಹಭಾಗಿತ್ವದೊಂದಿಗೆ ಈ ಸೇವೆಯನ್ನು ಆರಂಭಿಸಲಾಗಿದ್ದು ವೈದ್ಯಕೀಯ ತುರ್ತುಸ್ಥಿತಿಗಳಲ್ಲಿ ಎಲ್ಲರಿಗೂ ನೆರವು ಒದಗಿಸುವ ಗುರಿ ಹೊಂದಿದೆ. ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ. ಗ್ರಾಹಕರು ಆಂಬುಲೆನ್ಸ್‌ನ ನಿಖರ ಲೊಕೇಶನ್‌ಅನ್ನು ಮ್ಯಾಪ್ ಮೇಲೆ ನೋಡಿ ಅದರ ಆಗಮನದ ಅಂದಾಜು ಸಮಯವನ್ನು ಲೆಕ್ಕ ಹಾಕಬಹುದು. ಆತಂಕದ ಸಮಯದಲ್ಲಿ ಅವರಿಗೆ ಅದು ನೆಮ್ಮದಿ ಒದಗಿಸಬಹುದು. ತಮ್ಮ ಪ್ರೀತಿಪಾತ್ರರ ಯೋಗಕ್ಷೇಮದ ಮೇಲೆ ಗಮನ ಕೇಂದ್ರೀಕರಿಸಬಹುದಾಗಿದೆ. ಈ ಆವಿಷ್ಕಾರವು ತುರ್ತುಸ್ಥಿತಿಗಳಲ್ಲಿ ತಡೆಯಿಲ್ಲದ ಮತ್ತು ತೊಂದರೆಯಿಲ್ಲದ ಅನುಭವ ಒದಗಿಸುತ್ತದೆ.

ಆಕ್ಕೊದ ಸಮಗ್ರ ವೇದಿಕೆಯ ಮೇಲಿರುವ ಆಂಬುಲೆನ್ಸ್ ಬುಕಿಂಗ್ ಆರೋಗ್ಯ ಸೇವಾ ಪರಿಹಾರಗಳನ್ನು ಒದಗಿಸುವ ಮೂಲಕ ಬಳಕೆದಾರ-ಸುರಕ್ಷತೆ ಹಾಗೂ ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸುತ್ತದೆ. ಈ ಕ್ರಮವು, ಹೊಸ ಯುಗದಲ್ಲಿ ತುರ್ತುಸ್ಥಿತಿ ಆರೋಗ್ಯ ಶುಶ್ರೂಷೆಯನ್ನು ಪರಿವರ್ತಿಸುವ ಗುರಿ ಹೊಂದಿದೆ.

ಆಕ್ಕೊದ ಆಂಬುಲೆನ್ಸ್ ಬುಕಿಂಗ್ ಸೇವೆಯ ವಿಶೇಷತೆಗಳು

● ವ್ಯಾಪಕ ಕಾರ್ಯಜಾಲ: ಈ ಯೋಜನೆಯಡಿ ಐದು ನಗರಗಳಾದ್ಯಂತ 3000 ಆಂಬುಲೆನ್ಸ್‌ಗಳು ಲಭ್ಯವಿರುತ್ತವೆ.
● ತಡೆರಹಿತ ಬುಕಿಂಗ್: ACKO ಆಪ್ ಮೂಲಕ ಫೋನ್‌ನಲ್ಲಿ ಕೆಲವೇ ಕ್ಲಿಕ್‌ಗಳೊಂದಿಗೆ ಆಂಬುಲೆನ್ಸ್ ಪಡೆದುಕೊಳ್ಳಬಹುದು
● ನೈಜ -ಸಮಯ ಟ್ರ್ಯಾಕಿಂಗ್: ಗಂಭೀರ ಪರಿಸ್ಥಿತಿಗಳಲ್ಲಿ ನೆಮ್ಮದಿನೀಡುವಂಥ ಆಂಬುಲೆನ್ಸ್‌ನ ಆಗಮನದ ನೈಜ ಸಮಯವನ್ನು ಟ್ರ್ಯಾಕ್ ಮಾಡಬಹುದು.
● ಬಳಕೆದಾರ-ಕೇಂದ್ರಿತ ವಿನ್ಯಾಸ: ಸುಲಭವಾಗಿ ಬಳಸುವುದಕ್ಕಾಗಿಯೇ ಆಕ್ಕೊ ಆಪ್ ವಿನ್ಯಾಸಗೊಂಡಿದೆ.

ಇದನ್ನೂ ಓದಿ: Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

ವೈದ್ಯಕೀಯ ತುರ್ತುಸ್ಥಿತಿಗಳು ತಕ್ಷಣ ಪ್ರತಿಕ್ರಿಯೆಯನ್ನು ಬೇಡುತ್ತದೆ. ಆದರೆ ಅದು ಎಲ್ಲರಿಗೂ ಪೂರಕವಾಗಿಲ್ಲ ಎಲ್ಲಕ್ಕಿಂತ ಮಿಗಿಲಾಗಿ, ಆಂಬುಲೆನ್ಸ್ ಸೇವೆಗಳು, ನಿರ್ಲಕ್ಷಿತ ಕ್ಷೇತ್ರವಾಗಿಯೇ ಉಳಿದು ಪರಿಸ್ಥಿತಿಗಳನ್ನು ಮೀರಲು ಜನರು ಬಹಳ ಕಷ್ಟಪಡಬೇಕಾಗುತ್ತದೆ. ತುರ್ತುಸ್ಥಿತಿಗಳಲ್ಲಿ ಗಂಭೀರ ನೆರವು ಒದಗಿಸಲು ತಂತ್ರಜ್ಞಾನವನ್ನು ವರ್ಧಿಸುವ ಮೂಲಕ ಆಕ್ಕೊ, ಬಳಕೆದಾರ ಸುರಕ್ಷತೆ ಹಾಗೂ ಸಂತೃಪ್ತಿಗೆ ತನ್ನ ಅಚಲ ಬದ್ಧತೆಯನ್ನು ಪ್ರದರ್ಶಿಸಿದೆ.

ಆಂಬುಲೆನ್ಸ್-ಬುಕಿಂಗ್ ಅಂಶವು, ನಿಜಜೀವನದ ಸಮಸ್ಯೆಗಳಿಗೆ ವಾಸ್ತವ ಪರಿಹಾರ ಒದಗಿಸುತ್ತದೆ.

Continue Reading

ವಿಜಯನಗರ

Vijayanagara News: ಹೊಸಪೇಟೆಯಲ್ಲಿ ಡೆಂಗ್ಯು ಜಾಗೃತಿ ಜಾಥಾ

Vijayanagara News: ರಾಷ್ಟ್ರೀಯ ಡೆಂಗ್ಯು ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಹಯೋಗದಲ್ಲಿ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಹೊಸಪೇಟೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

VISTARANEWS.COM


on

Dengue awareness rally in Hosapete
Koo

ಹೊಸಪೇಟೆ: ರಾಷ್ಟ್ರೀಯ ಡೆಂಗ್ಯು (Dengue) ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಹಯೋಗದಲ್ಲಿ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ (Vijayanagara News) ಜರುಗಿತು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಡೆಂಗ್ಯು ಜ್ವರವನ್ನು ಜನರು ನಿರ್ಲಕ್ಷಿಸದೆ ಸೂಕ್ತವಾದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಡೆಂಗ್ಯು ಜ್ವರದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು. ಮುಂಗಾರು ಪೂರ್ವ, ಮುಂಗಾರು ಮತ್ತು ಮುಂಗಾರಿನ ನಂತರದ ಸಮಯದಲ್ಲಿ ಡೆಂಗ್ಯು ಸೊಳ್ಳೆಗಳ ಸಂತತಿಯು ತೀವ್ರ ಪ್ರಮಾಣದಲ್ಲಿದ್ದು, ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಶಂಕರನಾಯ್ಕ ಮಾತನಾಡಿ, ರೋಗಗಳು ಬಂದ ಮೇಲೆ ಚಿಕಿತ್ಸೆ ನೀಡುವ ಬದಲಿಗೆ ಬರುವ ಮುಂಚೆ ಅದರ ಮುಂಜಾಗ್ರತೆ ವಹಿಸುವುದು ಸೂಕ್ತ. ಜನರು ಮನೆಯಲ್ಲಿ ಶೇಖರಿಸಿದ ನೀರನ್ನು ಆಗಾಗ ಬದಲಾಯಿಸುತ್ತಿರಬೇಕು. ಈ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು ಹಾಗೂ ಡೆಂಗ್ಯು ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ ದೊಡ್ಡಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ, ಬೆಳಗಾವಿಯ ಡಾ. ಸಿದ್ದಲಿಂಗಯ್ಯ, ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದನ್ನೂ ಓದಿ: Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

ಕರಪತ್ರ ವಿತರಣೆ

ಈಡೀಸ್ ಈಜಿಪ್ಟೆ ಸೊಳ್ಳೆಯ ಕಚ್ಚುವಿಕೆಯಿಂದ ಡೆಂಗ್ಯು ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಚ ನೀರಿನಲ್ಲಿ ಸಂತಾನಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ತಕ್ಷಣವೇ ಆಶಾ, ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಿರಿ ಎನ್ನುವ ಮಾಹಿತಿಯ ಕರಪತ್ರಗಳನ್ನು ಇದೇ ವೇಳೆ ಸಾರ್ವಜನಿಕರಿಗೆ ವಿತರಿಸಲಾಯಿತು.

Continue Reading

ವಿದೇಶ

MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳನ್ನು ನೇಪಾಳ ನಿಷೇಧಿಸಿದೆ. ʼʼಈ ಮಸಲಾ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದನ್ನು ನಿಷೇಧಿಸಲಾಗಿದೆ. ಜತೆಗೆ ನಾವು ಮಾರುಕಟ್ಟೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹರ್ಜನ್ ತಿಳಿಸಿದ್ದಾರೆ.

VISTARANEWS.COM


on

MDH, Everest Spices
Koo

ಕಾಠ್ಮಂಡುಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳನ್ನು ನೇಪಾಳ ನಿಷೇಧಿಸಿದೆ. ಈ ಹಿಂದೆ ಇದೇ ಕಾರಣಕ್ಕೆ ಈ ಉತ್ಪನ್ನಗಳನ್ನು ಸಿಂಗಾಪುರ, ಹಾಂಕಾಂಗ್‌ ಮುಂತಾದೆಡೆ ಬ್ಯಾನ್‌ ಮಾಡಲಾಗಿತ್ತು. ಕ್ಯಾನ್ಸರ್‌ಗೆ ಕಾರಣವಾಗಬಹುದಾದ ಎಥಿಲೀನ್ ಆಕ್ಸೈಡ್ (Ethylene Oxide) ಅಂಶ ಇದೆ ಎನ್ನುವ ದೂರು ಕೇಳಿ ಬಂದ ಕಾರಣಕ್ಕೆ ಈ ಉತ್ಪನ್ನಗಳ ಆಮದು, ಮಾರಾಟ ಮತ್ತು ಬಳಕೆಯನ್ನು ನೇಪಾಳದಲ್ಲಿ ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಎರಡು ನಿರ್ದಿಷ್ಟ ಬ್ರ್ಯಾಂಡ್‌ಗಳ ಮಸಾಲೆಗಳಲ್ಲಿನ ರಾಸಾಯನಿಕಗಳ ಬಗ್ಗೆ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ʼʼಈ ಮಸಲಾ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದನ್ನು ನಿಷೇಧಿಸಲಾಗಿದೆ. ಜತೆಗೆ ನಾವು ಮಾರುಕಟ್ಟೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹರ್ಜನ್ ತಿಳಿಸಿದ್ದಾರೆ.

“ಹಾಂಗ್‌ಕಾಂಗ್ ಮತ್ತು ಸಿಂಗಾಪುರ್ ಈಗಾಗಲೇ ಈ ಉತ್ಪನ್ನಗಳಿಗೆ ನಿಷೇಧ ಹೇರಿವೆ. ಅಮೆರಿಕ ಹಾಗೂ ಆಸ್ಟ್ರೇಲಿಯಾ ಕೂಡ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾವು ಕೂಡ ಪರೀಕ್ಷೆ ನಡೆಸಲು ಮುಂದಾಗಿದ್ದೇವೆʼʼ ಎಂದು ಅವರು ವಿವರಿಸಿದ್ದಾರೆ. ಈ ಮಧ್ಯೆ ರಫ್ತಾಗುವ ಭಾರತೀಯ ಮಸಾಲೆಗಳ ಸುರಕ್ಷತೆ ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಸ್ಪೈಸ್ ಮಂಡಳಿ ಕ್ರಮ ಕೈಗೊಂಡಿದೆ. ಮಂಡಳಿ ಟೆಕ್ನೋ-ಸೈಂಟಿಫಿಕ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತಂದಿದೆ. ಜತೆಗೆ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿದೆ.

ಅಖಿಲ ಭಾರತ ಸಾಂಬಾರ ಪದಾರ್ಥಗಳ ರಫ್ತುದಾರರ ವೇದಿಕೆ ಮತ್ತು ಭಾರತೀಯ ಮಸಾಲೆ ಮತ್ತು ಆಹಾರ ಪದಾರ್ಥ ರಫ್ತುದಾರರ ಸಂಘದಂತಹ 130ಕ್ಕೂ ಹೆಚ್ಚು ಸಂಘಗಳೊಂದಿಗೆ ಭಾರತೀಯ ಸ್ಪೈಸ್ ಮಂಡಳಿ ಸಮಾಲೋಚನೆಯನ್ನೂ ನಡೆಸಿದೆ. ಮಂಡಳಿಯು ಎಲ್ಲ ರಫ್ತುದಾರರಿಗೆ ಎಥಿಲೀನ್ ಆಕ್ಸೈಡ್ ಬಳಕೆ ಬಗ್ಗೆ ಎಚ್ಚರಿಕೆ ನೀಡಿದೆ.

ಕೆಲವು ದಿನಗಳ ಹಿಂದೆ ಎಂಡಿಎಚ್‌, ಎವರೆಸ್ಟ್‌ ಮಸಾಲೆ ಸೇರಿದಂತೆ ಭಾರತದ ಒಟ್ಟು 527 ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದರು. ಹೀಗಾಗಿ 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ.

ಇನ್ನು ಅಪಾಯಕಾರಿ ರಾಸಾಯನಿಕಗಳು ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಕಂಡು ಬಂದಿವೆ. ಇನ್ನು ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸ ಬಳಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರು ಸಾಧ್ಯತೆ ಅತಿ ಹೆಚ್ಚಿದೆ.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಗುಣಮಟ್ಟ ತಪಾಸಣೆಗೆ ಸೂಚನೆ

Continue Reading
Advertisement
ipl 2024
ಪ್ರಮುಖ ಸುದ್ದಿ39 mins ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ1 hour ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Kanhaiya Kumar
ದೇಶ2 hours ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು2 hours ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ2 hours ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ2 hours ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Road Accident
ಪ್ರಮುಖ ಸುದ್ದಿ2 hours ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Virat Kohli
ಕ್ರೀಡೆ3 hours ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ3 hours ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ5 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ19 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌