MEIL Products: ಇಂಧನ ಸಪ್ತಾಹ; ಎಂಇಐಎಲ್‌ ಸಂಸ್ಥೆಯಿಂದ ದೇಶದ ಮೊಟ್ಟ ಮೊದಲ ಎಲೆಕ್ಟ್ರಿಕ್ ಟಿಪ್ಪರ್ ಅನಾವರಣ - Vistara News

ಕರ್ನಾಟಕ

MEIL Products: ಇಂಧನ ಸಪ್ತಾಹ; ಎಂಇಐಎಲ್‌ ಸಂಸ್ಥೆಯಿಂದ ದೇಶದ ಮೊಟ್ಟ ಮೊದಲ ಎಲೆಕ್ಟ್ರಿಕ್ ಟಿಪ್ಪರ್ ಅನಾವರಣ

MEIL Products: ಬೆಂಗಳೂರಿನಲ್ಲಿ ಆಯೋಜಿಸಿರುವ ಭಾರತ ಇಂಧನ ಸಪ್ತಾಹ -2023ರಲ್ಲಿ ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ (ಎಂಇಐಎಲ್) ಸಂಸ್ಥೆಯ ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಲಾಯಿತು.

VISTARANEWS.COM


on

MEIL Products
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಭಾರತದ ಜಿ- 20 ಅಧ್ಯಕ್ಷತೆಯ ಮೊದಲ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಭಾರತ ಇಂಧನ ಸಪ್ತಾಹ -2023 (ಇಂಡಿಯಾ ಎನರ್ಜಿ ವೀಕ್)ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದು, ಇದು ಇಂಧನ ಕ್ಷೇತ್ರದಲ್ಲಿನ ದೇಶಿಯ ಸಂಸ್ಥೆಗಳ ಸಾಧನೆಗಳ ಅನಾವರಣಕ್ಕೆ ವೇದಿಕೆ ಸೃಷ್ಟಿಸಿದೆ.

ಸಾರಿಗೆ, ಇಂಧನ, ಉತ್ಪಾದನಾ ಕ್ಷೇತ್ರ ಸೇರಿ ಹಲವು ರಂಗಗಳಲ್ಲಿ ಸಾಧನೆ ಮೆರೆಯುತ್ತಿರುವ ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ (ಎಂಇಐಎಲ್) (MEIL Products), ದೇಶಿಯ ಇಂಧನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ ತನ್ನ ಅಂಗ ಸಂಸ್ಥೆಗಳಾದ ಡ್ರಿಲ್ಮೆಕ್ ಎಸ್‌ಪಿಎ, ಪೆಟ್ರೆವೆನ್ ಎಸ್‌ಪಿಎ, ಮೇಘಾ ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಷನ್ ಪ್ರೈವೇಟ್ ಲಿಮಿಟೆಡ್ (ಎಂಸಿಜಿಡಿಪಿಎಲ್), ಒಲೆಕ್ಟ್ರಾ ಗ್ರೀನ್‍ಟೆಕ್ ಲಿಮಿಟೆಡ್ ಮತ್ತು ಐಕಾಮ್ ಟೆಲಿ ಲಿಮಿಟೆಡ್ ಸಂಸ್ಥೆಗಳು ದೇಶದ ಅಭಿವೃದ್ಧಿಯಲ್ಲಿ ಹೊಂದಿರುವ ಪಾಲುದಾರಿಕೆಯನ್ನು ಮುಂದಿರಿಸಿದೆ.

ಎಂಇಐಎಲ್‍ನ ಈ ಸಂಸ್ಥೆಗಳು ತೈಲ ಮತ್ತು ಅನಿಲ, ನಗರ ಅನಿಲ ವಿತರಣೆ, ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸೇರಿ ವಿವಿಧ ಇಂಧನ ಕ್ಷೇತ್ರಗಳಲ್ಲಿ ಬಲವಾದ ಉಪಸ್ಥಿತಿಯನ್ನು ಹೊಂದಿದ್ದು, ಎಂಇಐಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ವಿ.ಕೃಷ್ಣಾರೆಡ್ಡಿ, ಹೈಡ್ರೋಕಾರ್ಬನ್ ವಿಭಾಗದ ನಿರ್ದೇಶಕ ದೋರಯ್ಯ ಮತ್ತು ಇತರ ಉನ್ನತ ನಿರ್ವಹಣಾ ಸದಸ್ಯರು, ಈ ಭಾರತದ ಮೊದಲ ಇಂಧನ ಪ್ರದರ್ಶನ ಮತ್ತು ಸಮ್ಮೇಳನದಲ್ಲಿ ಭಾಗವಹಿಸಿ ದೇಶ- ವಿದೇಶಗಳ ರಾಯಭಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ದೇಶದ ಮೊಟ್ಟ ಮೊದಲ ಎಲೆಕ್ಟ್ರಿಕ್ ಟಿಪ್ಪರ್

ಒಲೆಕ್ಟ್ರಾ ತನ್ನ ಭಾರತದ ಮೊಟ್ಟ ಮೊದಲ ಎಲೆಕ್ಟ್ರಿಕ್ ಟಿಪ್ಪರ್ ಅನ್ನು ಸಾರ್ವಜನಿಕರಿಗೆ ಪರಿಚಯಿಸಿದೆ. ಈ ಟಿಪ್ಪರ್ ಒಮ್ಮೆ ಚಾರ್ಜ್‌ ಮಾಡಿದರೆ 250 ಕಿ.ಮೀ ವ್ಯಾಪ್ತಿಯನ್ನು ಕ್ರಮಿಸುತ್ತದೆ ಮತ್ತು ಎರಡು ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಆಗುತ್ತದೆ. ಇದು ಸ್ಟ್ಯಾಂಡರ್ಡ್ 16 ಕ್ಯೂಬಿಕ್ ಮೀಟರ್ ಲೋಡ್ ಬಾಡಿ ಹೊಂದಿದ್ದು, ವಿವಿಧ ವಿನ್ಯಾಸಗಳಲ್ಲಿ ಲಭ್ಯವಾಗಲಿದೆ. ಒಟ್ಟು ವಾಹನ ತೂಕ (ಜಿವಿಡಬ್ಲ್ಯೂ) 28,000 ಕೆಜಿ ಆಗಿದ್ದು, ಟಿಪ್ಪಿಂಗ್ ಕೋನ ಗರಿಷ್ಠ 46 ಡಿಗ್ರಿ, ಗರಿಷ್ಠ ಗ್ರೇಡೆಬಿಲಿಟಿ 25%, ಗರಿಷ್ಠ ಟಾರ್ಕ್ 2,400 ಎನ್ಎಂ ಮತ್ತು 6X4 ಆಕ್ಸಲ್ ಕಾನ್ಫಿಗರೇಶನ್ ಹೊಂದಿದೆ. ಇದು ಸಾರಿಗೆ ಉದ್ಯಮದ ಗೇಮ್ ಚೇಂಜರ್ ಆಗಲಿದೆ.

ಈ ಸಂದರ್ಭದಲ್ಲಿ ಎಂಇಐಎಲ್‍ನ ಹೈಡ್ರೋಕಾರ್ಬನ್ ವಿಭಾಗದ ನಿರ್ದೇಶಕ ದೊರಯ್ಯ ಮಾತನಾಡಿ, ಇಂದಿನ ಇಂಧನ ಕ್ಷೇತ್ರವು ಸ್ಪರ್ಧಾತ್ಮಕ ಮತ್ತು ಸವಾಲಿನಿಂದ ಕೂಡಿದೆ. ಇಂದಿನ ಅಗತ್ಯಗಳನ್ನು ಪೂರೈಸಲು ಮತ್ತು 2070ರ ವೇಳೆಗೆ ಇಂಗಾಲ ಹೊರ ಸೂಸುವಿಕೆಯನ್ನು ನಿವ್ವಳ ಶೂನ್ಯಕ್ಕೆ ಇಳಿಸುವ ಪ್ರಧಾನಿ ಮೋದಿಯವರ ಪ್ರತಿಜ್ಞೆ ಮತ್ತು ಅಮೃತ್ ಕಾಲ್ ಅವರ ದೃಷ್ಟಿಕೋನದ ಮೇಲೆ ಕೆಲಸ ಮಾಡಲು ಈ ಸಮ್ಮೇಳನವು ಉತ್ತಮ ವೇದಿಕೆಯಾಗಿದೆ ಎಂದಿದ್ದಾರೆ.

ಸಪ್ತಾಹದ ಪ್ರಮುಖ ಉದ್ದೇಶವಾದ ʼಬೆಳವಣಿಗೆ, ಸಹಯೋಗ, ಪರಿವರ್ತನೆʼಗೆ ಅನುಗುಣವಾಗಿ, ಎಂಇಐಎಲ್‍ ಕಂಪನಿಗಳು ಇಂಗಾಲದ ತೀವ್ರತೆಯನ್ನು ಕಡಿಮೆ ಮಾಡುವತ್ತ ಗಮನ ಹರಿಸಿ ಕಾರ್ಯನಿರ್ವಹಿಸುತ್ತಿವೆ ಮತ್ತು ಭಾರತದ ದೀರ್ಘಕಾಲೀನ ಇಂಧನ ಭದ್ರತೆಯನ್ನು ಸುಸ್ಥಿರವಾಗಿ ಖಚಿತಪಡಿಸುವತ್ತ ತನ್ನ ಜವಾಬ್ದಾರಿ ನಿಭಾಯಿಸುತ್ತಿದೆ. ಭಾರತವು ಇಂಧನ ಪರಿವರ್ತನೆಯ ಶಕ್ತಿ ಕೇಂದ್ರದಲ್ಲಿ ಪ್ರಾಬಲ್ಯ ಮೆರೆಯುತ್ತಿದ್ದು, ಇದಕ್ಕೆ ಎಂಇಐಎಲ್ ತನ್ನ ಅಂಗ ಸಂಸ್ಥೆಗಳಾದ ಡ್ರಿಲ್ಮೆಕ್, ಪೆಟ್ರೆವೆನ್, ಒಲೆಕ್ಟ್ರಾ ಗ್ರೀನ್‍ಟೆಕ್, ಎಂಸಿಜಿಡಿಪಿಎಲ್ ಮತ್ತು ಐಕಾಮ್ ಮೂಲಕ ಕೊಡುಗೆ ನೀಡುತ್ತಿದೆ ಎಂದು ದೊರಯ್ಯ ಪ್ರತಿಪಾದಿಸಿದರು.

ಕಡಿಮೆ ಇಂಗಾಲದ ಆರ್ಥಿಕತೆಯಲ್ಲಿ ಎಂಇಐಎಲ್‌ನ ಪಾತ್ರವು ಹಿರಿದಾಗಿದ್ದು, ಮೇಘಾ ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಷನ್ ಪ್ರೈವೇಟ್ ಲಿಮಿಟೆಡ್ (ಎಂಸಿಜಿಡಿಪಿಎಲ್) ನಗರ ಅನಿಲ ವಿತರಣಾ ವ್ಯವಸ್ಥೆಯ ಮೂಲಕ 80 ಸಿಎನ್‍ಜಿ ಕೇಂದ್ರಗಳನ್ನು ಹೊಂದಿರುವ ಭಾರತದ ಎರಡನೇ ಅತಿದೊಡ್ಡ ಸಿಜಿಡಿ ಕಂಪನಿಯಾಗಿದ್ದು, ದೃಢವಾದ ಮೂಲಸೌಕರ್ಯದ ಮೂಲಕ ಇಂಧನ ಸುರಕ್ಷತೆಯನ್ನು ಖಚಿತಪಡಿಸುತ್ತಿದೆ. ಇದು 22 ಭೌಗೋಳಿಕ ಪ್ರದೇಶಗಳಲ್ಲಿ ಹತ್ತು ಭಾರತೀಯ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದೆ, ಇದು ಭಾರತದ ಸುಮಾರು ಶೇ.10 ಪ್ರದೇಶ ಮತ್ತು ಅದರ ಜನಸಂಖ್ಯೆಯ ಸುಮಾರು ಶೇ.7 ಅನ್ನು ಒಳಗೊಂಡಿದೆ ಎಂಬುದು ಗಮನಾರ್ಹ ಅಂಶವಾಗಿದೆ.

ಇದನ್ನೂ ಓದಿ | PLI Scheme: ಫಲ ನೀಡುತ್ತಿರುವ ಪಿಎಲ್‌ಐ ಯೋಜನೆ, 45,000 ಕೋಟಿ ರೂ. ಹೂಡಿಕೆ, 3 ಲಕ್ಷ ಉದ್ಯೋಗ ಸೃಷ್ಟಿ: ನೀತಿ ಆಯೋಗ

ಒಲೆಕ್ಟ್ರಾ ಗ್ರೀನ್‍ ಟೆಕ್ ಲಿಮಿಟೆಡ್‍ನ ಎಲೆಕ್ಟ್ರಿಕ್ ಬಸ್‌ಗಳ ಸಮೂಹವು ಭಾರತದ 13 ರಾಜ್ಯಗಳಲ್ಲಿ ಸಂಚರಿಸುತ್ತಿದ್ದು, ಭಾರತದಾದ್ಯಂತ 90,000 ಟನ್ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ, ಎಂಇಐಎಲ್ ಗುಜರಾತ್‍ನಲ್ಲಿ ಭಾರತದ ಮೊದಲ ಕಾಲುವೆ ಮೇಲಿನ ಸೌರ ಯೋಜನೆ ಸೇರಿ ಹಲವಾರು ಸೌರ ಯೋಜನೆಗಳನ್ನು ಕಾರ್ಯಗತಗೊಳಿಸಿದೆ. ಇದು ನೀರನ್ನು ಬಾಷ್ಪೀಕರಣದಿಂದ (ಆವಿಯಾಗುವಿಕೆ) ಸಂರಕ್ಷಿಸುವ ವಿಶಿಷ್ಟ ಯೋಜನೆಯಾಗಿದೆ.

ಇಂಧನ ಕ್ಷೇತ್ರದಲ್ಲಿ ಬಲವಾದ ಉಪಸ್ಥಿತಿಯು ದೇಶದ ಇಂಧನ ಬೇಡಿಕೆಗಳನ್ನು ಪೂರೈಸಲು ಅನುವು ಮಾಡಿಕೊಡುವ ಮಹತ್ವದ ಕಂಪನಿಗಳಲ್ಲಿ ಎಂಇಐಎಲ್ ಒಂದಾಗಿದೆ. ಇದು ಭಾರತದಲ್ಲಿ ಶುದ್ಧ ಇಂಧನ ಪರಿವರ್ತನೆಯನ್ನು ತ್ವರಿತಗೊಳಿಸಲು ಉತ್ತಮ ಇಂಧನ ವ್ಯವಸ್ಥೆಯನ್ನು ರಚಿಸುವತ್ತ ಜವಾಬ್ದಾರಿಯುತ ಪಾತ್ರ ನಿರ್ವಹಿಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading
Advertisement
Rakshit Shetty Richard Anthony Produce By Hombale
ದೇಶ5 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ5 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ5 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ1 day ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ1 day ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ1 day ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ1 day ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ1 day ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌