ಕರ್ನಾಟಕ
Video Viral: ಸರ್ಕಾರಿ ಬಸ್ಸಲ್ಲಿ ಮಹಿಳೆಯರ ಪಾರುಪಥ್ಯ; ಸೀಟ್ ಹಿಡಿಯೋಕೆ ಡ್ರೈವರ್ ಸೀಟ್ನಿಂದ ನುಗ್ಗಿದ ಗಂಡಸರು!
Shakti Scheme: ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ನಡುವೆ ಬಸ್ನಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೀಟ್ ಹಿಡಿದು ಕೂರುವುದರಿಂದ ಪುರುಷರಿಗೆ ಸೀಟ್ ಸಿಗುತ್ತಿಲ್ಲ. ದೂರದ ಊರಿಗೆ ನಿಂತು ಹೋಗುವುದು ಕಷ್ಟ ಎಂಬ ನಿಟ್ಟಿನಲ್ಲಿ ಈಗ ಕೆಲವು ಪುರುಷರು ಡ್ರೈವರ್ ಸೀಟಿಂದ ಹತ್ತಿ ಒಳಗೆ ಹೋಗುತ್ತಿದ್ದಾರೆ. ಈ ವಿಡಿಯೊ ಈಗ ವೈರಲ್ ಆಗಿದೆ.
ಹಾವೇರಿ: ಹೆಣ್ಮಕ್ಕಳೇ ಸ್ಟ್ರಾಂಗು ಗುರು! ಎನ್ನುವ ರೀತಿ ಈಗ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ತುಂಬಿ ತುಳುಕುತ್ತಿದ್ದಾರೆ. ಶಕ್ತಿ ಯೋಜನೆಗೆ (Shakti Scheme) ವ್ಯಾಪಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಉಚಿತ ಪ್ರಯಾಣ (Free Bus Service) ಲಭ್ಯವಾಗಿರುವುದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಪ್ರಯಾಣಕ್ಕೆ ಒಲವು ತೋರುತ್ತಿದ್ದಾರೆ. ಈ ಯೋಜನೆಗೆ ಸರ್ಕಾರ ರೂಪಿಸಿರುವ 50:50 ಆಸನದ ಫಾರ್ಮುಲಾ ಇನ್ನೂ ವರ್ಕೌಟ್ ಆಗುತ್ತಿಲ್ಲ. ಸೀಟು ಹಿಡಿಯಲು ನುಗ್ಗುವ ಮಹಿಳೆಯರು ಸಿಕ್ಕ ಸಿಕ್ಕ ಆಸನಗಳಲ್ಲಿ ಕೂರುತ್ತಿದ್ದಾರೆ. ಹೀಗಾಗಿ ಪುರುಷರಿಗೆ ಸೀಟ್ ಸಿಗದಂತೆ ಆಗುತ್ತಿದೆ. ಈಗ ಹಾವೇರಿಯಲ್ಲಿ ಸೀಟ್ ಹಿಡಿಯಲು ಪುರುಷರು ಡ್ರೈವರ್ ಸೀಟ್ನ ಡೋರ್ ಅನ್ನು ಬಳಸಿದ್ದಾರೆ. ಈ ವಿಡಿಯೊ ಈಗ ವೈರಲ್ (Video Viral) ಆಗಿದೆ.
ಬಸ್ನ ಹಿಂಬದಿ ಇರುವ ಮೇನ್ ಡೋರ್ನಿಂದ ಹೋಗಿ ಸೀಟ್ ಹಿಡಿಯೋಣ ಎಂದರೆ ಅಲ್ಲಿ ಬಹುಪಾಲು ಮಹಿಳೆಯರೇ ತುಂಬಿರುತ್ತಾರೆ. ಅವರ ನೂಕುನುಗ್ಗಲು ನಡುವೆ ಸಿಲುಕಿ ಒಳಗೆ ಹೋಗಿ ಸೀಟು ಹಿಡಿದು ಕೂರುವುದು ಅಸಾಧ್ಯ ಎಂಬ ತರ್ಕಕ್ಕೆ ಕೆಲವು ಗಂಡಸರು ಬಂದಂತೆ ಇದೆ. ಈ ಕಾರಣಕ್ಕೆ ಅವರು ವಾಮಮಾರ್ಗವನ್ನು ಅನುಸರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾವೇರಿ ಬಸ್ ನಿಲ್ದಾಣದಲ್ಲಿ ಸೀಟ್ಗಾಗಿ ಪರದಾಡಿದ ಪುರುಷ ಪ್ರಯಾಣಿಕರು ಡ್ರೈವರ್ ಸೀಟ್ ಬಳಿಯ ಡೋರ್ ಅನ್ನು ಹತ್ತಿ ಒಳ ನುಗ್ಗಿದ್ದಾರೆ. ಇದನ್ನು ಸಾರ್ವಜನಿಕರೊಬ್ಬರು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.
ಇದನ್ನೂ ಓದಿ: Weather report: ವೀಕೆಂಡ್ ಅಂತ ಹೊರಗೆ ಹೋಗುವ ಮುನ್ನ ಎಚ್ಚರ; ಇಂದು ಇರಲಿದೆ ಮಳೆ ಅಬ್ಬರ
ಹಾವೇರಿಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಕಡಿಮೆ ಇದೆ ಎನ್ನಲಾಗಿದೆ. ಇದೇ ಈಗ ಪ್ರಯಾಣಿಕರ ಪರದಾಟಕ್ಕೆ ಕಾರಣವಾಗಿದೆ. ಇರುವ ಬಸ್ಗಳಲ್ಲೇ ಹೋಗಬೇಕು. ಆ ಬಸ್ ತಪ್ಪಿಸಿಕೊಂಡರೆ ಮತ್ತೆ ತಕ್ಷಣಕ್ಕೆ ತಾವು ಹೋಗುವ ಮಾರ್ಗಕ್ಕೆ ಬಸ್ ಬರುವುದಿಲ್ಲ. ಕೊನೆಗೆ ಬರುವ ಬಸ್ಗೂ ಇದೇ ರೀತಿ ರಶ್ ಇರುತ್ತದೆ. ಹೀಗಾಗಿ ಸೀಟ್ ಹಿಡಿಯಬೇಕೆಂದರೆ ಯಾವುದಾದರೂ “ದುಸ್ಸಾಹಸ” ಮಾಡಲೇಬೇಕು. ಈ ಹಿನ್ನೆಲೆಯಲ್ಲಿ ಡ್ರೈವರ್ ಸೀಟಿನಿಂದ ಕೆಲವು ಮಹಾಪುರುಷರು ಹತ್ತಿ ಸೀಟ್ ಹಿಡಿದುಕೊಂಡಿದ್ದಾರೆ.
ಹಾವೇರಿಯಿಂದ ಹುಬ್ಬಳ್ಳಿಗೆ ಹೋಗುವ ಬಸ್ ಇದಾಗಿದೆ. ಪ್ರವೇಶ ಬಾಗಿಲಿನಿಂದ ಬಸ್ ಹತ್ತಲಾಗದ ಪುರುಷರು ಡ್ರೈವರ್ ಸೀಟ್ ಅನ್ನು ಬಳಸಿ ಬಸ್ ಹತ್ತಿದ್ದಾರೆ.
ಡ್ರೈವರ್ ಸೀಟ್ನಿಂದಲೇ ಹತ್ತಿದ ನಾರಿಯರು!
ಚಿಕ್ಕಬಳ್ಳಾಪು: ಚಿಂತಾಮಣಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜೂನ್ 21ರಂದು ಮಹಿಳೆಯರು ಡ್ರೈವರ್ ಸೀಟ್ನಿಂದ ಹತ್ತಿ ಸುದ್ದಿಯಾಗಿದ್ದರು. ಚಿಂತಾಮಣಿ ಬಸ್ ನಿಲ್ದಾಣಕ್ಕೆ ಬಸ್ ಬರುತ್ತಿದ್ದಂತೆ ಜನರು ಓಡೋಡಿ ಬಂದಿದ್ದಾರೆ. ಎಲ್ಲರಿಗೂ ಸೀಟು ಹಿಡಿಯುವ ತವಕ. ಹೀಗಾಗಿ ಕೆಲವರು ಕಿಟಕಿ ಒಳಗಿನಿಂದ ಸೀಟ್ ಮೇಲೆ ತಮ್ಮ ಬ್ಯಾಗ್, ಕರ್ಚೀಫ್ಗಳನ್ನು ಒಗೆದರೆ, ಮತ್ತೆ ಕೆಲವರು ಡೋರ್ ಮೂಲಕ ಬೇಗ ಹೋಗಿ ಸೀಟ್ ಹಿಡಿಯುವ ದಾವಂತದಲ್ಲಿದ್ದರು. ಆದರೆ, ಈ ವೇಳೆ ಬುದ್ಧಿ ಉಪಯೋಗಿಸಿದ್ದ ಕೆಲವು ಮಹಿಳೆಯರು ಹೆಚ್ಚಿಗೆ ಸ್ಮಾರ್ಟ್ ಆಗಲು ಹೋಗಿ ಡ್ರೈವರ್ ಸೀಟ್ ಮೂಲಕ ಹತ್ತಿದ್ದರು. ಕೊನೆಗೆ ಸಿಬ್ಬಂದಿಯಿಂದ ಬೈಸಿಕೊಂಡಿದ್ದರು.
ಇನ್ನು ಬಸ್ನ ಮೇನ್ ಡೋರ್ನಿಂದ ಹೋದರೆ ಪ್ರಯೋಜನ ಇಲ್ಲ ಎಂದು ಲೆಕ್ಕ ಹಾಕಿದ ಕೆಲವು ಮಹಿಳೆಯರು ಸೀದಾ ಡ್ರೈವರ್ ಸೀಟ್ ಬಳಿಗೆ ಓಡಿದ್ದಾರೆ. ಅಲ್ಲಿ ಹೋದವರೇ ಡೋರ್ ಓಪನ್ ಮಾಡಿ ಅದರಿಂದ ಹತ್ತಲಾರಂಭಿಸಿದ್ದರು. ಹಾಗೂಹೀಗೂ ನಾಲ್ಕೈದು ಮಹಿಳೆಯರು ಅದರ ಮೂಲಕ ನುಗ್ಗಿಬಿಟ್ಟಿದ್ದರು. ಈ ವಿಚಾರ ತಿಳಿದ ಬಸ್ ನಿರ್ವಾಹಕ ಅಲ್ಲಿಗೆ ಬಂದು ಬೈದಿದ್ದು, ಮತ್ತೆ ಹತ್ತಲು ಮುಂದಾದ ಕೆಲವರನ್ನು ಕೆಳಗೆ ಇಳಿಸಿ ಕಳಿಸಿದ್ದರು.
ಇದನ್ನೂ ಓದಿ: Free Bus Service: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ದಂಡು; ಪ್ರವಾಸೋದ್ಯಮಕ್ಕೆ ಸಿಕ್ಕಿತು ʼಶಕ್ತಿʼ
ಚಿಂತಾಮಣಿಯಿಂದ ಬೆಂಗಳೂರು ಸೇರಿದಂತೆ ಹಲವು ಸ್ಥಳಗಳಿಗೆ ತೆರಳುವ ಬಸ್ಗಳಿಗೆ ಭಾರಿ ಬೇಡಿಕೆ ಬಂದಿದ್ದು, ಸಿಕ್ಕ ಸಿಕ್ಕ ಬಸ್ಗಳನ್ನು ಜನರು ಹತ್ತುತ್ತಿದ್ದಾರೆ. ಹೀಗಾಗಿ ಬಹುತೇಕ ಎಲ್ಲ ಬಸ್ಗಳು ತುಂಬಿ ತುಳುಕುತ್ತಿವೆ. ಇನ್ನು ಪ್ರಯಾಣಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಕರ್ನಾಟಕ
VISTARA TOP 10 NEWS : ಸೆ. 26ಕ್ಕೆ ಬೆಂಗಳೂರು ಬಂದ್ಗೆ ಕರೆ, ಚೈತ್ರಾ ಕುಂದಾಪುರ ಟೀಮ್ ಪರಪ್ಪನ ಅಗ್ರಹಾರದಲ್ಲಿ ಸೆರೆ
VISTARA TOP 10 NEWS : ಕಾವೇರಿ ಹೋರಾಟದ ಕಿಚ್ಚು ಹೊತ್ತಿ ಉರಿಯುತ್ತಿದೆ. ಮಂಡ್ಯ ಬಂದ್ ಯಶಸ್ವಿಯಾಗಿದೆ. ಬೆಂಗಳೂರು ಬಂದ್ ರೆಡಿಯಾಗಿದೆ. ಚೈತ್ರಾ ಕುಂದಾಪುರ ಟೀಮ್ ಪರಪ್ಪನ ಅಗ್ರಹಾರ ತಲುಪಿದೆ. ಹೀಗೆ ದಿನ ವಿಶೇಷ ಬೆಳವಣಿಗೆಗಳ ಸುತ್ತು ನೋಟವೇ ವಿಸ್ತಾರ ಟಾಪ್ 10 ನ್ಯೂಸ್
1.ರಾಜಧಾನಿಯಲ್ಲಿ ತೀವ್ರಗೊಂಡ ಕಾವೇರಿ ಹೋರಾಟ: ಸೆ.26ಕ್ಕೆ ಬೆಂಗಳೂರು ಬಂದ್ಗೆ ಕರೆ
ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್ 26ರಂದು (ಮಂಗಳವಾರ) ಬೆಂಗಳೂರು ಬಂದ್ಗೆ (Bangalore bandh on September 26) ಕರೆ ನೀಡಲಾಗಿದೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಶನಿವಾರ ನಡೆದ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ಸೆ. 26ರಬಂದ್ಗೆ ಭಾರಿ ಬೆಂಬಲ; ಏನಿರುತ್ತೆ? ಏನಿರಲ್ಲ?; ಕರ್ನಾಟಕ ಬಂದ್ಗೂ ಪ್ಲ್ಯಾನಿಂಗ್
2. ರೈತ ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ಬಂದ್ ಸಕ್ಸಸ್: ರಾಜ್ಯಾದ್ಯಂತ ವ್ಯಾಪಿಸಿದ ಜ್ವಾಲೆ
ರಾಜ್ಯದಲ್ಲಿ ಮಳೆ ಇಲ್ಲದೆ ಸಂಕಷ್ಟ ಕಾಲ ಬಂದಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ (Cauvery protest) ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್ (Mandya bandh) ಯಶಸ್ವಿಯಾಯಿತು. ಕಾವೇರಿ ಹೋರಾಟಕ್ಕೆ ರಾಜ್ಯದ ಎಲ್ಲ ಕಡೆಗಳಲ್ಲೂ ಬೆಂಬಲ ವ್ಯಕ್ತವಾಗಿದ್ದು, ಸಂಘಟನೆಗಳು ಪ್ರತಿಭಟನೆ, ಜಾಥಾಗಳನ್ನು ನಡೆಸಿದವು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ನಾನು ಹೇಳಿದ ಹಾಗೆ ಮಾಡ್ತೀರಾ?; ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕುಮಾರಸ್ವಾಮಿ 3 ಸಲಹೆಗಳು
3. ಕಾಂಗ್ರೆಸ್ನಲ್ಲಿ ನಿಲ್ಲದ ಡಿಸಿಎಂ ರಗಳೆ- ಮೂರಲ್ಲ, ಐವರು ಡಿಸಿಎಂ ಬೇಕೆಂದ ರಾಯರೆಡ್ಡಿ
ರಾಜ್ಯದಲ್ಲಿ ಇನ್ನೂ ಮೂರು ಹೊಸ ಡಿಸಿಎಂ ಸ್ಥಾನಗಳನ್ನು ಸೃಷ್ಟಿಸಬೇಕು ಬೇಡಿಕೆಯ ನಡುವೆಯೇ ಶಾಸಕ ಬಸವರಾಜ ರಾಯರೆಡ್ಡಿ (MLA Basavaraja Rayareddy) ಇದನ್ನೂ ಮೀರಿಸಿ ಹೊಸದಾಗಿ ಐದು ಉಪಮುಖ್ಯಮಂತ್ರಿಗಳು ಬೇಕು ಎಂಬ ಅಭಿಪ್ರಾಯ ಮಂಡಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ದೇವೇಗೌಡರ ತುಮಕೂರು ಸ್ಪರ್ಧೆಗೆ ಬಿಜೆಪಿ ಸಂಸದರ ವಿರೋಧ
4. ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ನ ಏಳು ಮಂದಿ ಪರಪ್ಪನ ಅಗ್ರಹಾರ ಜೈಲಿಗೆ, 14 ದಿನ ನ್ಯಾಯಾಂಗ ಸೆರೆ
ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಏಳು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲು ಕೋರ್ಟ್ ಆದೇಶಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ಕೋರ್ಟ್ ತಾತ್ಕಾಲಿಕ ನಿರ್ಬಂಧ
5. ವಿಸ್ತಾರ ಅಂಕಣ: ಮಣ್ಣು ಬರೀ ಮಣ್ಣಲ್ಲ, ಅದು ನಮ್ಮ ಭಾವಕೋಶ, ನಾವು ಮಣ್ಣಿನ ಮಕ್ಕಳು!
ಪ್ರತಿ ಭಾರತೀಯನೂ, ಈ ದೇಶ ನನ್ನದು, ನಾನು ನನ್ನ ಕರ್ತವ್ಯ ನಿರ್ವಹಿಸಿದರೆ ಮಾತ್ರ ದೇಶ ಏಳಿಗೆ ಆಗುತ್ತದೆ ಎಂದು ಭಾವಿಸಬೇಕು. ಆಗ ವಿಶ್ವದ ಯಾವ ಶಕ್ತಿಯೂ ಭಾರತದ ಬೆಳವಣಿಗೆಯನ್ನು ತಡೆಯಲು ಆಗುವುದಿಲ್ಲ ಎನ್ನುತ್ತಾರೆ ವಿಸ್ತಾರ ನ್ಯೂಸ್ನ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ತಮ್ಮ ವಿಸ್ತಾರ ಅಂಕಣದಲ್ಲಿ
ಪೂರ್ಣ ಲೇಖನ ಓದಲು ಈ ಲಿಂಕ್ ಕ್ಲಿಕ್ ಮಾಡಿ
6 ಲೋಕ ಸಮರ ಹೊತ್ತಲ್ಲೇ ವಾರಾಣಸಿಯಲ್ಲಿ ಅಭಿವೃದ್ಧಿ ಪರ್ವ: ಕ್ರಿಕೆಟ್ ಸ್ಟೇಡಿಯಂಗೆ ಮೋದಿ ಶಂಕುಸ್ಥಾಪನೆ
ವಾರಾಣಸಿಯಲ್ಲಿ ನಿರ್ಮಿಸಲಾಗುತ್ತಿರುವ ಶಿವನ ಮಾದರಿಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. 330 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಸ್ಟೇಡಿಯಂ ಶಿವನಿಗೆ ಸಮರ್ಪಣೆ ಎಂದಿದೆ ಬಿಸಿಸಿಐ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ವಾರಾಣಸಿ ಕ್ರಿಕೆಟ್ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ
7. ಭಾರತದ ಬೆನ್ನಿಗೆ ನಿಂತ ಅಮೆರಿಕ: ಆನೆ ಜತೆ ಇರುವೆ ಕಾಳಗಕ್ಕೆ ಇಳಿದಿದೆ ಅಂತ ಕೆನಡಾಗೆ ವ್ಯಂಗ್ಯ
ಭಾರತ ಹಾಗೂ ಕೆನಡಾ ನಡುವಿನ ಬಿಕ್ಕಟ್ಟು (India Canada Row) ದಿನೇದಿನೆ ಉಲ್ಬಣವಾಗುತ್ತಿರುವ ಕಾರಣ ಅಮೆರಿಕ ಮಧ್ಯಪ್ರವೇಶಿಸಲು ಯತ್ನಿಸುತ್ತಿದೆ. ಜತೆಗೆ “ಕೆನಡಾ ಭಾರತದ ಜತೆ ಸಂಘರ್ಷಕ್ಕೆ ಇಳಿದಿದೆ ಎಂದರೆ, ಅದು ಇರುವೆಯೊಂದು ಆನೆಯ ಜತೆ ಕಾಳಗಕ್ಕೆ ಇಳಿದಂತೆ” ಎಂದು ಗೇಲಿ ಮಾಡಿದೆ. ಪೂರ್ಣ ವರದಿಗೆ ಲಿಂಕ್ ಕ್ಲಿಕ್ ಮಾಡಿ
ಪೂರಕ ವರದಿ: ಭಾರತದಿಂದಲೇ G20 ಶೃಂಗಸಭೆ ಯಶಸ್ವಿ ಎಂದ ಬ್ರೆಜಿಲ್; ಕೆನಡಾ ಆರೋಪಕ್ಕೆ ಏನೆಂದಿತು?
8. ಸುಂದರ ಆಟಗಾರ ಶುಭಮನ್ ಗಿಲ್ ಜತೆಗಿನ ಪ್ರೀತಿಗೆ ಕ್ಲ್ಯಾರಿಟಿ ನೀಡಿದ ಸಾರಾ ತೆಂಡೂಲ್ಕರ್
ಮುಂಬಯಿ: ಸಾರಾ ತೆಂಡೂಲ್ಕರ್ ಮತ್ತು ಶುಭಮನ್ ಗಿಲ್ ಇಬ್ಬರು ಕದ್ದು ಮುಚ್ಚಿ ಡೇಟಿಂಗ್(sara tendulkar and shubman gill relationship) ನಡೆಸುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹಲವು ಬಾರಿ ಕೇಳಿಬಂದಿದೆ. ಇದೀಗ ಸಾರಾ ಅವರು ಮಾಡಿರುವ ಟ್ವೀಟ್ ಈ ಜೋಡಿ ನಿಜವಾಗಿಯೂ ಪ್ರೀತಿಸುತ್ತಿರುವುದು ಖಚಿತ ಎಂಬ ಸುಳಿವು ನೀಡಿದಂತಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. ಮಗಳ ವಯಸ್ಸಿನ ನಟಿಯ ಜತೆ ರೊಮ್ಯಾನ್ಸ್ ಮಾಡಲಾರೆ ಎಂದ ವಿಜಯ್ ಸೇತುಪತಿ!
ವಿಜಯ್ ಸೇತುಪತಿ ತಮಿಳು ಮಾತ್ರವಲ್ಲದೆ, ತೆಲುಗು ಮತ್ತು ಮಲಯಾಳಂ ಭಾಷೆಯ ಸಿನಿಮಾಗಳಲ್ಲೂ ಬ್ಯುಸಿ. ಇಷ್ಟೊಂದು ಜನಪ್ರಿಯತೆ ಪಡೆದಿರುವ ವಿಜಯ್ ಸೇತುಪತಿ ಅವರು ನಟಿ ಕೃತಿ ಶೆಟ್ಟಿ (Krithi Shetty) ಜತೆ ನಾಯಕನಾಗಿ ನಟಿಸಲು ನಿರಾಕರಿಸಿದ್ದಾರೆ. ಮಗಳ ಪಾತ್ರ ಮಾಡಿದ ನಟಿ ಜತೆ ರೊಮ್ಯಾನ್ಸ್ ಮಾಡಲಾರೆʼ ಎಂದು ನಟ ಹೇಳಿದ್ದಾರಂತೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. ಸಿಲ್ಕ್ ಸ್ಮಿತಾ ಶವದ ಮೇಲೆ ನಡೆದಿತ್ತಂತೆ ಸಾಮೂಹಿಕ ಅತ್ಯಾಚಾರ: ನಟಿಯ ಪುಣ್ಯತಿಥಿಯಂದೇ ಹೊರಬಿತ್ತು ಸತ್ಯ
ಸಿಲ್ಕ್ ಸ್ಮಿತಾ (Silk Smitha) ಎಂಬ ಅಪ್ಸರೆಯಂಥ ನಟಿ ಬದುಕಿನಲ್ಲಿ ಏನೆಲ್ಲ ಅನುಭವಿಸಿದರು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ, ಅವರು ಮೃತಪಟ್ಟ ಬಳಿಕ ಅವರ ಶವದ ಮೇಲೆ ಅತ್ಯಾಚಾರ ಮಾಡಲಾಗಿತ್ತು ಎನ್ನುವ ಭಯಾನಕ ಸುದ್ದಿ ಮತ್ತೊಮ್ಮೆ ವೈರಲ್ ಆಗಿದೆ. ಏನಿದು ಪೈಶಾಚಿಕ ಕೃತ್ಯ? ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Gangavathi News: ಆನೆಗೊಂದಿ ಜಯತೀರ್ಥ-ರಘುವರ್ಯರ ವೃಂದಾವನ ವಿವಾದ; ರಾಯರ ಮಠದ ಪರ ಹೈಕೋರ್ಟ್ ತೀರ್ಪು
ಹೈಕೋರ್ಟ್ನ ದ್ವಿ ಸದಸ್ಯ ಪೀಠದ ಆದೇಶದಿಂದಾಗಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಅನುಯಾಯಿಗಳಿಗೆ ಆನೆಗೊಂದಿಯ ಜಯತೀರ್ಥರ ವೃಂದಾವನಕ್ಕೆ ಪೂಜೆ ಸಲ್ಲಿಸುವ ಅವಕಾಶ ನೀಡಿದಂತಾಗಿದೆ.
ಗಂಗಾವತಿ (ಕೊಪ್ಪಳ): ಮಾಧ್ವ ಸಂಪ್ರದಾಯದ ಪ್ರಮುಖ ಧಾರ್ಮಿಕ ತಾಣವಾದ ಗಂಗಾವತಿ (Gangavathi News) ತಾಲೂಕಿನ ಆನೆಗೊಂದಿಯ ನವ ವೃಂದಾವನ ಗಡ್ಡೆಯಲ್ಲಿನ ವಿವಾದಿತ ಜಯತೀರ್ಥ-ರಘುವರ್ಯರ ವೃಂದಾವನದ ಪೂಜೆಯ ಸಂಬಂಧ ಈ ಹಿಂದೆ ಧಾರವಾಡದ ಏಕಸದಸ್ಯ ಪೀಠವು ನೀಡಿದ್ದ ಪೂಜೆಯ ನಿರ್ಬಂಧದ ತೀರ್ಪನ್ನು ದ್ವಿ ಸದಸ್ಯ ಪೀಠ ತಳ್ಳಿ ಹಾಕಿದೆ. ಇದರಿಂದ ಮಂತ್ರಾಲಯದ ರಾಘವೇಂದ್ರ ಸ್ವಾಮೀಜಿಗಳ ಮಠದ ಅನುಯಾಯಿಗಳಿಗೆ ಈ ಮೊದಲಿನಂತೆ, ಜಯತೀರ್ಥರ ವೃಂದಾವನಕ್ಕೆ ಪೂಜೆ ಸಲ್ಲಿಸುವ ಅವಕಾಶ ದೊರೆತಂತಾಗಿದೆ.
ಧಾರವಾಡದ ಹೈಕೋರ್ಟ್ನ ಆದೇಶ ಹೊರ ಬೀಳುತ್ತಿದ್ದಂತೆಯೆ ಸಂಭ್ರಮಿಸಿದ ಅನುಯಾಯಿಗಳು, ಆನೆಗೊಂದಿ ರಾಯರಮಠದ ಅರ್ಚಕರ ನೇತೃತ್ವದಲ್ಲಿ ತುಂಗಭದ್ರಾ ನದಿಯ ದಡದಲ್ಲಿರುವ ನವವೃಂದಾವನ ಗಡ್ಡೆಗೆ ತೆರಳಿ ಜಯತೀರ್ಥರ ವೃಂದಾವನಕ್ಕೆ ಶೇಷವಸ್ತ್ರ ಅಲಂಕಾರ ಮಾಡಿ, ವಿಶೇಷ ಪೂಜೆ ಮಾಡಿ ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ | Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್
ಏನಿದು ವಿವಾದ?
ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯ ತುಂಗಭದ್ರಾ ನದಿ ತಟದಲ್ಲಿರುವ ನವವೃಂದಾವನ ಗಡ್ಡೆಯಲ್ಲಿ ಮಾಧ್ವ ಮತ ಪ್ರಚಾರಕರ ಒಂಭತ್ತು ಯತಿಗಳ ಭೌತಿಕ ಸಮಾಧಿಗಳಿವೆ. ಈ ಪೈಕಿ ಒಂದು ಸಮಾಧಿ (ವೃಂದಾವನ) ವಿವಾದದ ಕೇಂದ್ರ ಬಿಂದುವಾಗಿದೆ.
ರಾಯರಮಠದ ಅನುಯಾಯಿಗಳು ಅದನ್ನು ಜಯತೀರ್ಥರದ್ದು ಎಂದು, ಉತ್ತರಾಧಿ ಮಠದ ಅನುಯಾಯಿಗಳು ಅದೇ ವೃಂದಾವನವನ್ನು ರಘುವರ್ಯ ತೀರ್ಥರದ್ದು ಎಂದು ವಾದಿಸುತ್ತಿರುವುದು ವಿವಾದಕ್ಕೆ ಕಾರಣವಾಗಿದ್ದು, ಕಾನೂನು ತೊಡಕಾಗಿ ಪರಿಣಾಮಿಸಿದೆ.
ನ್ಯಾಯಾಲಯದಲ್ಲಿ ಪ್ರಕರಣ
ರಘುವರ್ಯ ತೀರ್ಥರ ವೃಂದಾವನವನ್ನು ರಾಯರಮಠದವರು, ಜಯತೀರ್ಥರದ್ದು ಎಂದು ವಾದಿಸುತ್ತಿದ್ದು ಮತ್ತು ಅದಕ್ಕೆ ಧಾರ್ಮಿಕ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಯತಿ ಪರಂಪರೆಗೆ ಅಪಚಾರ ಮಾಡುತ್ತಿದ್ದಾರೆ. ಇದಕ್ಕೆ ತಡೆ ನೀಡುವಂತೆ ಕೋರಿ ಈ ಸಂಬಂಧ ಉತ್ತರಾಧಿ ಮಠದ ಅನುಯಾಯಿಗಳು ಧಾರವಾಡದ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಮನವಿ ಪುರಸ್ಕರಿಸಿದ್ದ ಧಾರವಾಡದ ಹೈಕೋರ್ಟ್ ಶಂಕರ್ ಮುಗುದುಮ್ ಅವರಿದ್ದ ಏಕಸದಸ್ಯ ಪೀಠ, ವಿವಾದಿತ ವೃಂದಾವನಕ್ಕೆ ಯಾವುದೇ ಪೂಜೆ-ಪುನಸ್ಕಾರ ಮಾಡದಂತೆ ರಾಯರ ಮಠದ ಅನುಯಾಯಿಗಳಿಗೆ ನಿಬಂರ್ಧ ಹೇರಿ ಸೆ.11ರಂದು ಆದೇಶ ನೀಡಿತ್ತು.
ಇದನ್ನು ಪ್ರಶ್ನಿಸಿ ರಾಯರಮಠದ ಪರವಾಗಿ ವಕೀಲರಾದ ಪ್ರಭುಲಿಂಗ ನಾವದಗಿ ಮತ್ತು ಶಿವಪ್ರಸಾದ ಶಾಂತನಗೌಡ ಮೇಲ್ಮನವಿ ಸಲ್ಲಿಸಿದ್ದರು. ಮನವಿ ಆಲಿಸಿದ ಧಾರವಾಡದ ಹೈಕೋರ್ಟ್ನ ನ್ಯಾಯಾಧೀಶರಾದ ಕೃಷ್ಣಕುಮಾರ್ ಹಾಗೂ ಬಸವರಾಜ್ ಅವರಿದ್ದ ದ್ವಿ ಸದಸ್ಯ ನ್ಯಾಯಪೀಠವು, ಈ ಹಿಂದೆ ಮಾಡಿದ್ದ ಆದೇಶವನ್ನು ತಳ್ಳಿ ಹಾಕಿದೆ.
ಇದನ್ನೂ ಓದಿ | Vinay Kulkarni: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗೆ ಮತ್ತೆ ಅನುಮತಿ ನಿರಾಕರಿಸಿದ ಹೈಕೋರ್ಟ್
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆನೆಗೊಂದಿ ರಾಯರಮಠದ ವ್ಯವಸ್ಥಾಪಕ ಈಡಪನೂರು ಸುಮಂತ ಕುಲಕರ್ಣಿ ಅವರು, ನ್ಯಾಯಪೀಠದ ಆದೇಶದಿಂದಾಗಿ ಸತ್ಯಕ್ಕೆ ಜಯ ಸಂಧಂತಾಗಿದೆ. ಜಯತೀರ್ಥರ ಮೂಲಕ ವೃಂದಾವನ ಆನೆಗೊಂದಿಯಲ್ಲಿಯೇ ಇದೆ ಎಂಬುವುದಕ್ಕೆ ಸಾಕ್ಷಿ ಸಿಕ್ಕಂತಾಗಿದ್ದು, ದೈನಿಕ ಧಾರ್ಮಿಕ ಕಾರ್ಯ ನಡೆಯುತ್ತವೆ ಎಂದಿದ್ದಾರೆ.
ಉಡುಪಿ
Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್
Chaitra Kundapura : ವಂಚಕಿ ಚೈತ್ರಾ ಜತೆ ಕುಂದಾಪುರದ ಹೆಸರು ಬಳಸಬಾರದು ಎಂಬ ಅರ್ಜಿದಾರರ ದಾವೆಗೆ ಕೋರ್ಟ್ ತಾತ್ಕಾಲಿಕವಾಗಿ ಓಕೆ ಎಂದಿದೆ. ಮುಂದಿನ ವಿಚಾರಣೆಯ ಬಳಿಕ ಇದಕ್ಕೆ ಸ್ಪಷ್ಟತೆ ಸಿಗಲಿದೆ.
ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ (Bynduru BJP Ticket) ಕೊಡಿಸುವುದಾಗಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಐದು ಕೋಟಿ ರೂ. ವಂಚನೆ ಮಾಡಿರುವ ಕುಂದಾಪುರ ಮೂಲದ ಫೈರ್ ಬ್ರಾಂಡ್ ಭಾಷಣಕಾರ್ತಿ ಚೈತ್ರಾ (Chaitra Kundapura) ಹೆಸರು ಈಗ ಎಲ್ಲೆಡೆ ಫೇಮಸ್. ಆದರೆ, ಈಕೆಯ ಹೆಸರನ್ನು ಪದೇಪದೆ ವಂಚನೆಯ ಹೆಸರಲ್ಲಿ ಬಳಸುತ್ತಿರುವುದು ಕುಂದಾಪುರ (Kundapura Name of a town) ಎಂಬ ಊರಿಗೆ ಅಪಮಾನ ಮಾಡಿದಂತಾಗುತ್ತಿದೆ. ಹೀಗಾಗಿ ಆಕೆಯ ಹೆಸರಿನ ಜತೆಗಿರುವ ʻಕುಂದಾಪುರʼ ಹೆಸರನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಎಂದು ಕುಂದಾಪುರದ ವ್ಯಕ್ತಿಯೊಬ್ಬರು ಕೋರ್ಟ್ ಮೊರೆ ಹೊಕ್ಕಿದ್ದರು. ಈ ಕೋರ್ಟ್ ಈ ಬೇಡಿಕೆಗೆ ತಾತ್ಕಾಲಿಕ ಅಸ್ತು (Court restricts media from using Kundapuara name with Chaitra) ಎಂದಿದೆ.
ವಂಚನೆ ಪ್ರಕರಣವಾಗಿರುವುದರಿಂದ, ಬಿಜೆಪಿ ಟಿಕೆಟ್ ವಂಚನೆಯಾಗಿರುವುದರಿಂದ, ಪ್ರಧಾನ ಆರೋಪಿ ಸಾಕಷ್ಟು ಜನಪ್ರಿಯಳಾಗಿರುವುದರಿಂದ ಆಕೆಯ ಹೆಸರು ಮತ್ತು ಸುದ್ದಿ ಗಮನ ಸೆಳೆದಿತ್ತು. ಹೀಗಾಗಿ ಆಕೆಯೊಂದಿಗೆ ಆಕೆಯ ಊರಿನ ಹೆಸರೂ ಜತೆಯಾಗಿ ಬರುತ್ತಿತ್ತು. ಇದು ಸಹಜವಾಗಿ ಅಲ್ಲಿನ ಜನರಿಗೆ ಬೇಸರ ಉಂಟು ಮಾಡಿದೆ.
ಇದನ್ನು ಗಮನಿಸಿದ ಕುಂದಾಪುರ ಮೂಲದ ಸದ್ಯ ಬೆಂಗಳೂರಿನಲ್ಲಿರುವ ವ್ಯಕ್ತಿಯೊಬ್ಬರು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆಕೆಯ ಹೆಸರಿನ ಜತೆ ಕುಂದಾಪುರದ ಹೆಸರು ತಳುಕು ಹಾಕುವುದು ಬೇಡ ಎಂದು ಕೋರಿದ್ದರು.
ಬೆಂಗಳೂರಿನ ಬಸವನಗುಡಿಯಲ್ಲಿ ಕಾಫಿ ಶಾಪ್ ಹೋಟೆಲ್ ಮಾಲೀಕರು ಆದ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ದಾವೆ ಹೂಡಿದವರು. ನಾನು ಕುಂದಾಪುರ ಮೂಲದವನಾಗಿದ್ದು, ಹೋಟೆಲ್ ನಡೆಸುತ್ತಿದ್ದೇನೆ. ಹೋಟೆಲ್ ಗೆ ಬರುವ ಗ್ರಾಹಕರು ಕುಂದಾಪುರ ಬಗ್ಗೆ ವಿಚಾರಿಸತೊಡಗಿದ್ದಾರೆ. ಇದರಿಂದ ಕುಂದಾಪುರ ದೂಷಣೆಗೆ ಒಳಗಾಗುತ್ತಿದೆ. ಈ ಒಂದು ಘಟನೆಯಿಂದ ಅಲ್ಲಿನ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು ಎಂದು ಅವರು ದಾವೆಯಲ್ಲಿ ಆತಂಕ ವ್ಯಕ್ತಪಡಿಸಿದ್ದರು.
ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದೆ. 10 ಮತ್ತು 11ನೇ ಶತಮಾನದಲ್ಲಿ ಅಲುಪು ರಾಜವಂಶಸ್ಥರಾದ ಕುಂದವರ್ಮ ಅವರು ಕುಂದಾಪುರದಲ್ಲಿ ಆಳ್ವಿಕೆ ನಡೆಸಿದ್ದು. ಐತಿಹಾಸಿಕ ಕುಂದೇಶ್ವರ ದೇವಸ್ಥಾನ ಸಹ ನಿರ್ಮಿಸಿದ್ದಾರೆ. ಕದಂಬರು, ಚಾಲುಕ್ಯ, ಹೊಯ್ಸಳ, ವಿಜಯನಗರ ಅರಸರು ಕುಂದಾಪುರ ಪಟ್ಟಣದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ನಂತರ ಪೋರ್ಚಗೀಸರು, ಜರ್ಮನ್ನರು, ಟಿಪ್ಪುಸುಲ್ತಾನ್, ಬ್ರಿಟಿಷರು ಕುಂದಾಪುರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅನೇಕ ಐತಿಹಾಸಿಕ ದೇವಸ್ಥಾಗಳಿಂದ ಕುಂದಾಪುರ ಖ್ಯಾತಿ ಪಡೆದಿದೆ ಎಂದು ದಾವೆಯಲ್ಲಿ ವಿವರಿಸಲಾಗಿತ್ತು.
ವಂಚನೆ ಆರೋಪದಲ್ಲಿ ಚೈತ್ರಾ ಹಾಗೂ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರ ಸಹ ಕುಂದಾಪುರದ ಮೂಲದವರಾಗಿದ್ದಾರೆ. ಆದರೆ, ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರಾ ಹೆಸರು ಬಳಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಧಕ್ಕೆಯಾಗುತ್ತಿದೆ. ಕುಂದಾಪುರ ಎಂದು ಉಲ್ಲೇಖಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸುವುದು ಅವಹೇಳನಕಾರಿಯಾಗಿದೆ ಎಂದು ದಾವೆಯಲ್ಲಿ ಆಕ್ಷೇಪಿಸಲಾಗಿತ್ತು.
ಇದನ್ನೂ ಓದಿ: Chaitra Kundapura : ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಪರಪ್ಪನ ಅಗ್ರಹಾರಕ್ಕೆ; 14 ದಿನ ನ್ಯಾಯಾಂಗ ಬಂಧನ
ಹೀಗಾಗಿ ಮಾಧ್ಯಮಗಳು ಆಕೆಯ ವಿಚಾರ ಬಂದಾಗ ಕುಂದಾಪುರ ಎಂಬ ಹೆಸರನ್ನು ಉಲ್ಲೇಖಿಸದಂತೆ ಸೂಚನೆ ನೀಡಬೇಕು ಎಂದು ಅವರು ಕೋರಿದ್ದರು. ಜತೆಗೆ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್, ಲಿಂಕ್ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕು ಎಂದು ಕೂಡಾ ಕೇಳಿದ್ದರು.
ಇದೀಗ ಕೋರ್ಟ್ ಅವರ ದಾವೆಯನ್ನು ಸ್ವೀಕರಿಸಿದ್ದು ಮುಂದಿನ ವಿಚಾರಣೆಯ ವರೆಗೆ ಮಾಧ್ಯಮಗಳು ಆಕೆಯ ಹೆಸರಿನ ಜತೆಗೆ ಕುಂದಾಪುರ ಎಂಬ ಹೆಸರನ್ನು ಬಳಸದಂತೆ ತಾತ್ಕಾಲಿಕ ನಿರ್ಬಂಧವನ್ನು ವಿಧಿಸಿದೆ. ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಮುಂದಿನ ವಿಚಾರಣೆಯವರೆಗೆ ಈ ನಿರ್ಬಂಧವನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.
ಕರ್ನಾಟಕ
HD Kumaraswamy : ನಾನು ಹೇಳಿದ ಹಾಗೆ ಮಾಡ್ತೀರಾ?; ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕುಮಾರಸ್ವಾಮಿ ನೀಡಿದ 3 ಸಲಹೆಗಳು
HD Kumaraswamy: ಮಂಡ್ಯದ ಕೆಆರ್ಎಸ್ ಅಣೆಕಟ್ಟಿಗೆ ಹೋಗಿ ನೀರಿನ ಪರಿಸ್ಥಿತಿ ಅವಲೋಕನ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಮೂರು ಸಲಹೆ ಕೊಟ್ಟಿದ್ದಾರೆ.
ಮೈಸೂರು: ಬಿಜೆಪಿ ನಾಯಕರ ಜತೆ ಮೈತ್ರಿ ಮಾತುಕತೆಗಾಗಿ (BJP-JDS Alliance) ದಿಲ್ಲಿಗೆ ತೆರಳಿದ್ದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ(HD Kumaraswamy) ಅವರು ಅಲ್ಲಿಂದ ಮರಳುತ್ತಲೇ ಕಾವೇರಿ ಹೋರಾಟದ ಕಣಕ್ಕೆ (Cauvery dispute) ಧುಮುಕಿದ್ದಾರೆ. ಶನಿವಾರ ದಿಲ್ಲಿಯಿಂದ ಬಂದವರೇ ನೇರವಾಗಿ ಮಂಡ್ಯದ ಕೆಆರ್ಎಸ್ ಅಣೆಕಟ್ಟೆಗೆ (KRS Dam) ಭೇಟಿ ನೀಡಿ ಅಲ್ಲಿನ ನೀರಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಬಳಿಕ ಮಂಡ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ (Protest at Mandya) ಪಾಲ್ಗೊಂಡರು.
ಸರ್ಕಾರಕ್ಕೆ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಮೂರು ಸಲಹೆ
ಕೆಆರ್ಎಸ್ ಅಣೆಕಟ್ಟೆಗೆ ಭೇಟಿ ನೀಡಿದ ಅವರು ಅಲ್ಲಿನ ಪರಿಸ್ಥಿತಿಯನ್ನು ಕಂಡು ಈ ಪರಿಸ್ಥಿತಿಯಲ್ಲಿ ನೀರು ಬಿಡುವುದು ಸಾಧ್ಯವೇ ಎಂದು ಕೇಳಿದರು. ಕೆಆರ್ಎಸ್ ಅಣೆಕಟ್ಟೆಗೆ ಭೇಟಿ ನೀಡಿದ ಜೆಡಿಎಸ್ ನಿಯೋಗದಲ್ಲಿ ಕುಮಾರಸ್ವಾಮಿ ಅವರ ಜತೆ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಸುರೇಶ್ಗೌಡ, ಡಿ.ಸಿ.ತಮ್ಮಣ್ಣ ಸೇರಿದಂತೆ ಪ್ರಮುಖರು ಇದ್ದರು.
ಅಣೆಕಟ್ಟೆ ಅವಲೋಕನ ಮಾಡಿದ ಬಳಿಕ ಮಾತನಾಡಿದ ಅವರು ಮೂರು ಸಲಹೆಗಳನ್ನು ನೀಡಿದರು.
- ಪಾಲಿಸಲಾಗದ ಆದೇಶ ಪಾಲಿಸದೇ ಇದ್ದರೆ ನ್ಯಾಯಾಂಗ ನಿಂಧನೆ ಆಗಲ್ಲ. ಈ ಸಂಬಂಧ 2016ರಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ಇದರ ಆಧಾರದ ಮೇಲೆ ನೀರು ನಿಲ್ಲಿಸಿ ಸುಪ್ರೀಂಕೋರ್ಟ್ನಲ್ಲಿ ಚಾಲೆಂಜ್ ಮಾಡಿ.
- ಮೂವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ರಾಜ್ಯದಲ್ಲಿ ಇದ್ದಾರೆ. 6 ನ್ಯಾಯಾಲಯಗಳು, ಅಕ್ವೋಕೇಟ್ ಜನರಲ್ ಆಗಿದ್ದವರು ಇದ್ದಾರೆ. ಅವರ ಸಭೆ ಮಾಡಿ ಕಾನೂನು ಹೋರಾಟಕ್ಕೆ ಸಲಹೆ ಪಡೆಯಿರಿ.
- ಸಂಕಷ್ಟ ಸೂತ್ರ ರಚಿಸಲು ಇದು ಸಕಾಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮಾರ್ಗಸೂಚಿ ಸಿದ್ಧಪಡಿಸಿ.
ಮಾಜಿ ಪ್ರಧಾನಿ ದೇವೇಗೌಡರು ಕೂಡಾ ಸರಕಾರಕ್ಕೆ ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಸಮರ್ಥರವಾಗಿ ಬಳಸಿಕೊಳ್ಳಬೇಕು. ಇದರಲ್ಲಿ ರಾಜಕೀಯ ಮಾಡಬಾರದು ಎಂದು ಸಲಹೆ ನೀಡಿದರು.
ಪ್ರಾಧಿಕಾರಕ್ಕೆ ಮಾಹಿತಿ ನೀಡುವಲ್ಲಿ ಸರ್ಕಾರ ವಿಫಲ ಎಂದ ಎಚ್ಡಿಕೆ
ಮಂಡ್ಯದಲ್ಲಿ ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಬಂದ್ ಮತ್ತು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದ ಮುಂದೆ ಸೂಕ್ತ ಮಾಹಿತಿ ಕೊಡವಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ʻʻಸರ್ಕಾರ ಆರಂಭಿಕ ದಿನಗಳಲ್ಲಿ ವಿಷಯ ಪ್ರಸ್ತಾಪಿಸುವಾಗ ಲಘುವಾಗಿ ತೆಗೆದುಕೊಂಡಿದ್ದಾರೆ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಮುಂದೆ ಮನವರಿಕೆ ಮಾಡಿಕೊಡುವುದರಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಸಮಸ್ಯೆ ಉದ್ಭವವಾಗಿದೆ ಎಂದರು.
ನಾನು, ಬಸವರಾಜ ಬೊಮ್ಮಾಯಿಯವರು ನೀರು ಬಿಡಬೇಡಿ ಎಂದು ಹೇಳಿದೆವು. ಆದರೂ ಕಾನೂನು ತಜ್ಞರ ಮಾತು ಕೇಳಿ ನೀರು ಬಿಟ್ಟಿದ್ದಾರೆ. ಈಗ ಪರಿಸ್ಥಿತಿ ಹದಗೆಟ್ಟಿದೆ ಎಂದು ಹೇಳಿದರು.
ಇದನ್ನೂ ಓದಿ: Cauvery Protest: ಬೆಂಗಳೂರು ಬಂದ್ ಮಾಡುವುದು ಬೇಡ ಎಂದ ಡಿಕೆಶಿ, ಪ್ರತಿಭಟನೆ ಹಕ್ಕಿಗೆ ವಿರೋಧವಿಲ್ಲ ಎಂದ ಸಿದ್ದರಾಮಯ್ಯ
ʻʻಬಂಗಾರಪ್ಪನವರು ಚಿಟಿಕೆ ಹೊಡೆದಂಗೆ ಸಮಸ್ಯೆ ಬಗೆಹರಿಸಿದ್ರು ಅಂತ ಮಧು ಬಂಗಾರಪ್ಪ ಹೇಳಿದ್ದಾರೆ. ಯಾವ ಸಮಸ್ಯೆ ಪರಿಹರಿಸಿದ್ರು? ಬೆಂಗಳೂರಿನಲ್ಲಿ ಬಂದ್ ಹೆಸರಲ್ಲಿ ಲೂಟಿ ಮಾಡಿಸಿದರು. ಬಂದ್ ಹೆಸರಲ್ಲಿ ಏನೇನಾಯ್ತು ಅಂತ ನಾವು ನೋಡಿದ್ದೇವೆ. ಮುಗ್ಧ ಜನರ ವಿಷಯದಲ್ಲಿ ನಾವು ಆಟ ಆಡಬಾರದು. ಇದರಲ್ಲಿ ತಾಂತ್ರಿಕ ವಿಷಯಗಳಿವೆʼʼ ಎಂದರು.
-
ಸುವಚನ18 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ10 hours ago
Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!
-
ವೈರಲ್ ನ್ಯೂಸ್4 hours ago
Viral Video : ಅಬ್ಬಾ ಏನು ಧೈರ್ಯ; ವೇಗವಾಗಿ ಚಲಿಸುತ್ತಿದ್ದ ಟ್ರಕ್ನ ಚಕ್ರದ ಪಕ್ಕದಲ್ಲಿಯೇ ಗಡದ್ದಾಗಿ ನಿದ್ದೆ ಹೊಡೆದ !
-
ದೇಶ14 hours ago
Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್ ಹಾಸನ್
-
South Cinema6 hours ago
Silk Smitha: ಸಿಲ್ಕ್ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!
-
ಅಂಕಣ17 hours ago
ವಿಸ್ತಾರ ಅಂಕಣ: ಮಣ್ಣು ಬರೀ ಮಣ್ಣಲ್ಲ, ಅದು ನಮ್ಮ ಭಾವಕೋಶ, ನಾವು ಮಣ್ಣಿನ ಮಕ್ಕಳು!
-
ದೇಶ23 hours ago
‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ’! ಡ್ಯಾನಿಶ್ ಅಲಿಯನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
-
ಬಾಲಿವುಡ್10 hours ago
Rashmika Mandanna: ಕತ್ತಿನಲ್ಲಿ ತಾಳಿ, ಕೆಂಪು ಬಾರ್ಡರ್ ಸೀರೆಯುಟ್ಟು ಫಸ್ಟ್ ಲುಕ್ನಲ್ಲೇ ನಾಚಿ ನೀರಾದ ರಶ್ಮಿಕಾ!