Milk Price Hike | ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಕೆ?; ಸಿಎಂ ಮುಂದೆ ಪ್ರಸ್ತಾವನೆ! - Vistara News

ಕರ್ನಾಟಕ

Milk Price Hike | ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಕೆ?; ಸಿಎಂ ಮುಂದೆ ಪ್ರಸ್ತಾವನೆ!

ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್‌ (Milk Price Hike) ಮತ್ತೊಮ್ಮೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ದರ ಏರಿಕೆ ಚೆಂಡು ಸರ್ಕಾರದ ಅಂಗಳದಲ್ಲಿದೆ. ಮುಖ್ಯಮಂತ್ರಿಯವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಕಾಯಲಾಗುತ್ತಿದೆ.

VISTARANEWS.COM


on

GST rate hike
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರದಲ್ಲಿ ಏರಿಕೆ ಆಗುವ ಸಾಧ್ಯತೆ ದಟ್ಟವಾಗಿದೆ. ಹಾಲಿನ ದರದಲ್ಲಿ ಏರಿಕೆ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ (Milk Price Hike) ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ರಾಜ್ಯ ಸರ್ಕಾರ ಈ ಬಗ್ಗೆ ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಒಂದು ವೇಳೆ ಬೆಲೆ ಏರಿಕೆ ಮಾಡಿದರೆ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ.

ಈಗಾಗಲೇ ತೈಲ ದರ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ನಿತ್ಯ ಬಳಕೆಯ ಹಾಲಿನ ದರವೂ ಏರಿಕೆ ಸಂಕಷ್ಟ ಎದುರಾಗಲಿದೆ. ಆದರೆ, ಹಾಲಿನ ದರ ಏರಿಕೆಗೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಕೆಎಂಎಫ್‌ ಹತ್ತಾರು ಬಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಾ ಬಂದಿದೆ. ಆದರೆ, ಇಂಧನ, ಬೆಲೆಗಳ ಏರಿಕೆ ಸೇರಿದಂತೆ ನಾನಾ ಕಾರಣಕ್ಕಾಗಿ ರಾಜ್ಯ ಸರ್ಕಾರ ಮುಂದೂಡುತ್ತಾ ಬರುತ್ತಿದೆ.

ಲೀಟರ್‌ ಹಾಲಿಗೆ 3 ರೂಪಾಯಿ ಹೆಚ್ಚಳ?

ಪ್ರಸ್ತುತ ನಂದಿನಿ ಹಾಲು ಕನಿಷ್ಠ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತಿದೆ. ಕರ್ನಾಟಕದಲ್ಲಿ ನಂದಿನಿ ಹಾಲು ಹೊರತುಪಡಿಸಿ ಬೇರೆ ಹಾಲಿನ ದರ ಕನಿಷ್ಠ 3 ರಿಂದ 12 ರೂಪಾಯಿವರೆಗೂ ಹೆಚ್ಚಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಸತೀಶ್‌, ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ದರ ಏರಿಕೆಗೆ ಮನವಿ ಮಾಡಲಾಗಿದೆ. 1 ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚು ಮಾಡುವಂತೆ ಕೋರಿದ್ದೆೇವೆ. ಹಾಲಿನ ದರ ಹೆಚ್ಚಳ ಮಾಡಿದರೆ ಆ ಹಣ ರೈತರಿಗೆ ಸೇರುತ್ತದೆ ಎಂದು ವಿವರಣೆ ನೀಡಿದ್ದೇವೆ ಎಂದು ತಿಳಿಸಿದರು.

ನೆರವು ವಿಳಂಬ

ರೈತರಿಗೆ ನೀಡುವ ನೆರವು ಹಣ ಬಿಡುಗಡೆ ವಿಳಂಬವಾಗುತ್ತಿರುವ ಸಂಬಂಧ ಪ್ರತಿಕ್ರಿಯಿಸಿದ ಸತೀಶ್‌, ಸದ್ಯದಲ್ಲೇ ಮೂರು ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ. 200 ಕೋಟಿ ರೂಪಾಯಿ ಹಣವನ್ನು ಈಗಾಗಲೇ ರೈತರಿಗೆ ನೀಡಲಾಗಿದೆ ಎಂದು ವಿವರಣೆ ನೀಡಿದರು.

ಗ್ರಾಹಕರ ತುಟಿ ಸುಡಲಿದೆ ಟೀ-ಕಾಫಿ

ಒಂದು ವೇಳೆ ನಂದಿನಿ ಹಾಲಿನ ದರ ಏರಿಕೆಯಾದರೆ ಇತ್ತ ಹೋಟೆಲ್‌ ಉದ್ಯಮಗಳು ಟೀ-ಕಾಫಿ ದರವನ್ನು ಏರಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಹೀಗಾದಲ್ಲಿ ಹೋಟೆಲ್‌ಗಳಲ್ಲಿ ಟೀ- ಕಾಫಿ ಕುಡಿಯುವವರ ತುಟಿ ಸುಡಲಿದೆ ಎಂಬ ಮಾತುಗಳೂ ಕೇಳಿಬಂದಿವೆ.

ಇದನ್ನೂ ಓದಿ | KMF product | ಬರಲಿದೆ ಕೆಎಂಎಫ್‌ ನಂದಿನಿ ಪಿಜ್ಜಾ; ಮೈಸೂರು ಜಂಬೂ ಸವಾರಿಯಲ್ಲಿ ಟ್ಯಾಬ್ಲೋ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Lok Sabha Election 2024: ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಹಾಗೂ ಇಂಡಿ ಒಕ್ಕೂಟದ ಸಮಾಜ ಒಡೆಯುವ ಮನಸ್ಥಿತಿ, ಎಸ್ಸಿ ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿಯಾದರೂ ಅವರಿಗೆ ಕೊಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಅವರು ನಿಮ್ಮ ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಹಂಚಿಕೆ ಮಾಡುವ ಅಪಾಯಕಾರಿ ತೀರ್ಮಾನ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಒಟ್ಟಾಗಿ ತಡೆಯಬೇಕಿದೆ ಎಂದು ಕರೆ ಕೊಟ್ಟಿದ್ದಾರೆ.

VISTARANEWS.COM


on

Prime Minister Narendra Modi wrote a letter to former CM Basavaraj Bommai
Koo

ನವ ದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಪತ್ರ ಬರೆದು, ಚುನಾವಣೆಯಲ್ಲಿ (Lok Sabha Election 2024) ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.

ಸುದೀರ್ಘ ಪತ್ರ ಬರೆದಿರುವ ಅವರು, ನೀವು ಮುಖ್ಯಮಂತ್ರಿಯಾಗಿ, ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ, ಕಾನೂನು ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೀರಿ, ನೀವು ಶಿಗ್ಗಾವಿಯಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಮಾಡಿದ್ದೀರಿ, ಕ್ಷೇತ್ರದಲ್ಲಿ ಸಿಮೆಂಟ್ ರಸ್ತೆಗಳು, ಶಿಕ್ಷಣ ಸಂಸ್ಥೆಗಳನ್ನು ನಿರ್ಮಾಣ ಮಾಡಿದ್ದೀರಿ, ಕೋವಿಡ್ ಸಂದರ್ಭದಲ್ಲಿ ನಿಮ್ಮ ಸ್ವಂತ ಮನೆಯನ್ನು ಕೋವಿಡ್ ಕೇಂದ್ರವನ್ನಾಗಿ ಮಾಡಿ ಆಸ್ಪತ್ರೆಗಳ ಮೇಲಿನ ಭಾರ ಕಡಿಮೆ ಮಾಡಿದ್ದೀರಿ. ನೇಕಾರರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ, ಆಧುನಿಕ ತಂತ್ರಜ್ಞಾನ ಬಳಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಿದ್ದೀರಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮಾಡಿದ್ದೀರಿ, ನೀವು ಒಬ್ಬ ಕಾರ್ಯಕರ್ತರಾಗಿ ಪಡೆದ ಅನುಭವ ಜನ ಸೇವಕರಾಗಿ ಮಾಡಿದ ಸೇವೆ ಹಾವೇರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

ಜನರ ಆಶೀರ್ವಾದದಿಂದ ನೀವು ಸಂಸದರಾಗಿ ನಮ್ಮ ತಂಡದ ಸದಸ್ಯರಾಗಿ ಬರುವುದು ನನಗೆ ದೊಡ್ಡ ಆಸ್ತಿ ಸಿಕ್ಕಂತೆ. ನಮ್ಮ ತಂಡ ಹಾವೇರಿ ಕ್ಷೇತ್ರ ಹಾಗೂ ದೇಶದ ಅಭಿವೃದ್ಧಿಗೆ ಶ್ರಮವಹಿಸಲಿದೆ. ನಾನು ಈ ಪತ್ರದ ಮೂಲಕ ಕ್ಷೇತ್ರದ ಜನತೆಗೆ ಹೇಳುವುದೇನೆಂದರೆ, ಇದು ಸಾಮಾನ್ಯ ಚುನಾವಣೆಯಲ್ಲ ಇದು ದೇಶದ ಪ್ರತಿಯೊಂದು ಕುಟುಂಬದ ವಿಶೇಷವಾಗಿ ಹಿರಿಯ ನಾಗರಿಕರು ಕಳೆದು ಐದಾರು ದಶಕದಲ್ಲಿ ಅನುಭವಿಸಿದ ತೊಂದರೆಗಳು ಕಳೆದ ಒಂದು ದಶಕದಲ್ಲಿ ಸಾಕಷ್ಟು ಬೆಳವಣಿಗೆಗಳನ್ನು ಕಂಡಿದ್ದಾರೆ. ಅನೇಕ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಇನ್ನೂ ಸಾಕಷ್ಟು ಸಮಸ್ಯೆಗಳಿವೆ. ಈ ಚುನಾವಣೆ ಜನರ ಜೀವನಮಟ್ಟವನ್ನು ಇನ್ನಷ್ಟು ಸುಧಾರಣೆಗೊಳಿಸಲು ಪ್ರೇರಣೆಯಾಗಲಿದೆ.

ಈ ಚುನಾವಣೆಯಲ್ಲಿ ಬಿಜೆಪಿ ಪಡೆಯುವ ಪ್ರತಿಯೊಂದು ಮತವೂ 2047ಕ್ಕೆ ಅಭಿವೃದ್ಧಿ ಹೊಂದಿದ ಭಾರತ ಮಾಡಲು ಮಹತ್ವದ್ದಾಗಿವೆ. ಮೊದಲ ಎರಡು ಹಂತದ ಮತದಾನದಲ್ಲಿ ಮತದಾರರು ತಮ್ಮ ಮತಗಳ ಮೂಲಕ ದೇಶದ ಅಭಿವೃದ್ಧಿ ಪರ ಇರುವ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಮತದಾರರಿಗೆ ಕಾಂಗ್ರೆಸ್‌ ಹಾಗೂ ಇಂಡಿ ಒಕ್ಕೂಟದ ಸಮಾಜ ಒಡೆಯುವ ಮನಸ್ಥಿತಿ, ಎಸ್ಸಿ ಎಸ್ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿಯಾದರೂ ಅವರಿಗೆ ಕೊಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಅವರು ನಿಮ್ಮ ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ವೋಟ್ ಬ್ಯಾಂಕ್ ಸಮುದಾಯಕ್ಕೆ ಹಂಚಿಕೆ ಮಾಡುವ ಅಪಾಯಕಾರಿ ತೀರ್ಮಾನ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಒಟ್ಟಾಗಿ ತಡೆಯಬೇಕಿದೆ ಎಂದು ತಿಳಿಸಿದ್ದಾರೆ.

ಈಗ ಬೇಸಿಗೆ ಇರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಆದರೆ, ದೇಶದ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಆದಷ್ಟು ಬೆಳಗಿನ ಸಮಯ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಈ ಚುನಾವಣೆ ಸಂದರ್ಭದಲ್ಲಿ ನಮ್ಮ‌ ಕಾರ್ಯಕರ್ತರು ಮತದಾರರನ್ನು ಪ್ರೇರೇಪಿಸಿ ಹೆಚ್ಚಿನ ಮತದಾನವಾಗುವಂತೆ ನೋಡಿಕೊಳ್ಳಬೇಕು. ಈ ಮೂಲಕ ಬೂತ್ ಗೆಲ್ಲುವ‌ ಮೂಲಕ ಲೋಕಸಭಾ ಕ್ಷೇತ್ರ ಗೆಲ್ಲುವಂತೆ ನೋಡಿಕೊಳ್ಳಬೇಕು. ಇದೇ ವೇಳೆ ಕಾರ್ಯಕರ್ತರು ನಿಮ್ಮ ಆರೋಗ್ಯದ ಕಡೆಗೆ ಗಮನ ಕೊಡಿ ಎಂದು ಪತ್ರದ ಮೂಲಕ ಪ್ರಧಾನಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

ನನ್ನ ಪ್ರತಿ ಕ್ಷಣವೂ ದೇಶದ ಜನರ ಶ್ರೇಯೋಭಿವೃದ್ಧಿಗೆ ಮೀಸಲಿದೆ ಎಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಈ ಸಂದೇಶವನ್ನು ಎಲ್ಲ ಮತದಾರರಿಗೆ ತಲುಪಿಸಿ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

Continue Reading

ಕ್ರೈಂ

Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

Hassan Pen Drive Case: ಈ ಪ್ರಕರಣದಲ್ಲಿ ವಿಡಿಯೊದಲ್ಲಿದ್ದ ಯಾವೊಬ್ಬ ಸಂತ್ರಸ್ತೆ ಸಹ ಸರ್ಕಾರದ ಬಳಿ ಬಂದು ದೂರು ಕೊಟ್ಟಿಲ್ಲ. ಮಹಿಳಾ ಆಯೋಗವು ನೀಡಿದ ವಿಡಿಯೊ ಸಾಕ್ಷ್ಯವನ್ನು ಇಟ್ಟುಕೊಂಡು ಕ್ರಮ ಕೈಗೊಂಡಿದೆ. ಇದಕ್ಕಿಂತ ಮೊದಲು ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ ಅವರಿಗೆ ಏಪ್ರಿಲ್‌ 25ರಂದು ಪತ್ರ ಬರೆಯುತ್ತಾರೆ. ಕೊನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಪ್ರಕರಣವನ್ನು ಕೊಡಲಾಗುತ್ತದೆ ಎಂದು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಏಪ್ರಿಲ್‌ 28ರಂದು ಬೆಂಗಳೂರಿನಲ್ಲಿ ಕುಳಿತುಕೊಂಡು ಮಹಿಳೆಯೊಬ್ಬಳಿಂದ ದೂರನ್ನು ಬರೆಸಿಕೊಂಡು ಟೈಪ್‌ ಮಾಡಿಸಿಕೊಂಡು ಆ ಪ್ರಕರಣವನ್ನು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

VISTARANEWS.COM


on

State government conspiracy behind Prajwal Hassan Pen Drive Case says HD Kumaraswamy
Koo

ಹುಬ್ಬಳ್ಳಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದಲೇ ಖೆಡ್ಡಾ ತೋಡಲಾಗಿದೆ. ಇದರ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಇದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ವಿಡಿಯೊದಲ್ಲಿದ್ದ ಯಾವೊಬ್ಬ ಸಂತ್ರಸ್ತೆ ಸಹ ಸರ್ಕಾರದ ಬಳಿ ಬಂದು ದೂರು ಕೊಟ್ಟಿಲ್ಲ. ಮಹಿಳಾ ಆಯೋಗವು ನೀಡಿದ ವಿಡಿಯೊ ಸಾಕ್ಷ್ಯವನ್ನು ಇಟ್ಟುಕೊಂಡು ಕ್ರಮ ಕೈಗೊಂಡಿದೆ. ಇದಕ್ಕಿಂತ ಮೊದಲು ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ ಅವರಿಗೆ ಏಪ್ರಿಲ್‌ 25ರಂದು ಪತ್ರ ಬರೆಯುತ್ತಾರೆ. ಕೊನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಪ್ರಕರಣವನ್ನು ಕೊಡಲಾಗುತ್ತದೆ ಎಂದು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಏಪ್ರಿಲ್‌ 28ರಂದು ಬೆಂಗಳೂರಿನಲ್ಲಿ ಕುಳಿತುಕೊಂಡು ಮಹಿಳೆಯೊಬ್ಬಳಿಂದ ದೂರನ್ನು ಬರೆಸಿಕೊಂಡು ಟೈಪ್‌ ಮಾಡಿಸಿಕೊಂಡು ಆ ಪ್ರಕರಣವನ್ನು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪವನ್ನು ಮಾಡಿದರು.

ಆ ಸಂತ್ರಸ್ತೆಯನ್ನು ಯಾರು ಬೆಂಗಳೂರಿಗೆ ಕರೆದುಕೊಂಡು ಬಂದರು? ಇನ್ನು ದೂರಿನ ಅನ್ವಯ ನೋಡುವುದಾದರೆ ಆ ಹೆಣ್ಣು ಮಗಳು 2012-13 ರಲ್ಲಿ ರೇವಣ್ಣ ಮನೆಯಲ್ಲಿ ಕೆಲಸಕ್ಕೆ ಇದ್ದಳು. ಜತೆಗೆ ಆಕೆ ಸಂಬಂಧಿ ಸಹ ಆಗಿದ್ದಳು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಈ ಘಟನೆ ನಡೆದಿರುವುದು 5 – 6 ವರ್ಷಗಳ ಹಿಂದೆ ನಡೆದಿರುವುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ, ಈ ಐದಾರು ವರ್ಷ ಕಂಪ್ಲೇಂಟ್‌ ಕೊಡದೆ ದೂರುದಾರರು ಏನು ಮಾಡುತ್ತಿದ್ದರು? ಈಗ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ 5 ದಿನ ಬಾಕಿ ಇರುವಾಗ ಬಿಡುಗಡೆ ಮಾಡಿದ್ದರ ಹಿಂದಿನ ಉದ್ದೇಶ ಏನು? ಇದರ ಹಿಂದೆ ಯಾವ ಮಹಾನ್‌ ನಾಯಕರು ಇದ್ದಾರೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಹಾಗಂತ ಈ ಪೆನ್‌‌ ಡ್ರೈವ್ ಬಿಡುಗಡೆಯಾದ ಬಳಿಕ ಯಾರೂ ಎಲ್ಲಿಯೂ ಪ್ರತಿಭಟನೆಯನ್ನು ಮಾಡಿಸಲಿಲ್ಲ. ಬದಲಾಗಿ ನಮ್ಮ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಹಿನ್ನಡೆ ತರಲು ಕಸರತ್ತು ಮಾಡಿದ್ದಾರೆ. ಚುನಾವಣೆ ಮುಗಿದ ಮೇಲೆ ಅಂದರೆ ಏಪ್ರಿಲ್‌ 28ರ ಬಳಿಕ 2012-13ರ ಪ್ರಕರಣದ ಕಂಪ್ಲೇಂಟ್‌ ಪಡೆದು, ಎಫ್‌ಐಆರ್‌ ಮಾಡಿ, ಬಳಿಕ ಎಸ್‌ಐಟಿಗೆ ಈಗ ವರ್ಗಾವಣೆ ಮಾಡಿದ್ದಾರೆ. ವಿಪರ್ಯಾಸವೆಂದರೆ ಸಾರ್ವಜನಿಕರಿಂದ ಯಾವುದೇ ದೂರು ಬರದೇ ಎಸ್‌ಐಟಿಯನ್ನು ರಚನೆ ಮಾಡಿದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ನಮ್ಮ ಕುಟುಂಬದ ತೇಜೋವಧೆಯೇ ಇದರ ಉದ್ದೇಶ!

ಈ ಪ್ರಕರಣವನ್ನು ಗಮನಿಸಿದಾಗ ಸರ್ಕಾರಕ್ಕೆ ನಮ್ಮ ಕುಟುಂಬದ ವರ್ಚಸ್ಸನ್ನು ಸಂಪೂರ್ಣವಾಗಿ ನಾಶ ಮಾಡಬೇಕು ಎಂದಿದೆ ಎಂಬುದು ಗೊತ್ತಾಗುತ್ತದೆ. ಇಲ್ಲಿ ಇವರಿಗೆ ಮಹಿಳೆಯರನ್ನು ರಕ್ಷಣೆ ಮಾಡುವುದು ಬೇಕಾಗಿಲ್ಲ. ಈ ಪ್ರಕರಣವನ್ನು ಬಳಸಿಕೊಂಡು ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಜ್ವಲ್‌ ರೇವಣ್ಣ ಅವರ ಫೋಟೊವನ್ನು ಸೇರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಲಾಗುತ್ತಿದೆ. ಈ ಪ್ರಕರಣ ಸಂಬಂಧ ಮೋದಿ ಅವರು ಉತ್ತರ ಕೊಡಬೇಕು ಎಂದು ಅಭಿಯಾನ ಮಾಡಲಾಗುತ್ತಿದೆ. ಮೋದಿಗೂ ಈ ಕೇಸ್‌ಗೂ ಏನು ಸಂಬಂಧ ಇದೆ? ಅವರ ಪಾತ್ರ ಇದರಲ್ಲೇನಿದೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ; ಇಲ್ಲಿದೆ ಕಂಪ್ಲೀಟ್‌ ವಿಡಿಯೊ!

ಈ ಪ್ರಕರಣ ಹೊರಗೆ ಬಂದಾಗ ಸರ್ಕಾರದ ಭಾಗವಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನನ್ನ ಮೇಲೆ ನಿರಂತರವಾಗಿ ವಾಗ್ದಾಳಿ ಮಾಡುತ್ತಲೇ ಬಂದಿದ್ದಾರೆ. ನಾನು ಈ ಹಿಂದೆ ಹೇಳಿದ್ದ ಪೆನ್‌ಡ್ರೈವ್‌ ಇದೇನಾ ಎಂದು ವ್ಯಂಗ್ಯವಾಗಿ ಕೇಳಿದ್ದಾರೆ. ಆ ಪೆನ್‌ಡ್ರೈವ್‌ ನನ್ನ ಬಳಿ ಇದೆ. ಅದನ್ನು ಯಾವಾಗ ಬಿಡುಗಡೆ ಮಾಡಬೇಕೋ ಆಗ ಮಾಡುತ್ತೇನೆ. ನಾನು ನನ್ನ ಜೀವನದಲ್ಲಿ ಇಂಥ ಪೆನ್‌ಡ್ರೈವ್‌ಗಳನ್ನು ಮಾಡಿಲ್ಲ. ಇಂಥ ಪೆನ್‌ಡ್ರೈವ್‌ಗಳನ್ನು ಮಾಡುವುದು ಅವರ ಸಂಪ್ರದಾಯ. ಅವರು ಈ ಹಿಂದೆ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಹೆಣ್ಣು ಮಕ್ಕಳನ್ನು ಕೂಡಿ ಹಾಕಿಕೊಂಡು ಕೇಸ್‌ ಮಾಡಿದ್ದರಲ್ಲ ಎಂದು ಡಿ.ಕೆ. ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಮನೆಯಲ್ಲಿ ನಡೆದಿದ್ದ ವಿಚಾರವನ್ನು ಹೊರಗಡೆ ತರುತ್ತೇನೆ ಎಂದು ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಸಾವಿನ ಸಂದರ್ಭದಲ್ಲಿ ನಡೆದ ವಿಚಾರವನ್ನು ಎಚ್‌ಡಿಕೆ ಎಳೆದು ತಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ‌ಎಚ್‌.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್‌.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ. ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ. ಎಷ್ಟು ತಿಂಗಳ ಹಿಂದೆ ಆ ಮಹಾನ್‌ ನಾಯಕನಿಗೆ ಗೊತ್ತಿತ್ತು. ಪೆನ್‌ಡ್ರೈವ್‌ ಯಾರು ಸರಬರಾಜು ಮಾಡಿದರು ಎಲ್ಲವೂ ಗೊತ್ತಿದೆ. ಈ ಮಹಾನ್‌ ನಾಯಕನ ನಡವಳಿಕೆಯ ಬಗ್ಗೆಯೂ ಚರ್ಚಿಸೋಣ. ನಿನ್ನೆ ಹಾಸನ ಜಿಲ್ಲಾಧಿಕಾರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಹುನ್ನಾರ ಅಡಗಿದೆ ಎಂದು ಕಿಡಿಕಾರಿದರು.

ಹಲವು ವಿಷಯಗಳಿವೆ, ಎಲ್ಲವನ್ನೂ ಹೇಳುವೆ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಹಲವು ವಿಷಯಗಳಿವೆ. ಅದನ್ನು ನಾನು ಹೇಳುತ್ತೇನೆ. ಮಹಾನ್‌ ನಾಯಕ ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾನೆ. ಇದರ ಬಗ್ಗೆಯೂ ನಾವು ಚರ್ಚೆ ಮಾಡಬೇಕಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಮಾತೃ ಶಕ್ತಿ ಪರ ನಿಲ್ಲುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಿತ್‌ ಶಾ ಅವರು ಪ್ರಜ್ವಲ್‌ ರೇವಣ್ಣ ಬಗ್ಗೆ ಚರ್ಚೆ ಮಾಡಿಲ್ಲ. ಪ್ರಜ್ವಲ್‌ ವಿರುದ್ಧದ ಕ್ರಮ ತೆಗೆದುಕೊಳ್ಳುವ ವಿಷಯವನ್ನು ನಮಗೆ ಬಿಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

ನಿಮ್ಮ ಜತೆ ನಾವಿದ್ದೇವೆ

ತಪ್ಪಾಗಿದ್ದರೆ ಶಿಕ್ಷೆಯಾಗಬೇಕೆಂದು ನಾನೇ ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ಏನಾಗಬೇಕೆಂದು ಚರ್ಚಿಸುತ್ತೇವೆ. ಈ ಬಗ್ಗೆ ಯಾರೂ ಗಾಬರಿಯಾಗಬೇಡಿ, ಆತಂಕ ಬೇಡ. ಯಾವುದೇ ಮಹಿಳೆಯರಿಗೆ ಅನ್ಯಾಯವಾದರೂ ಧ್ವನಿ ಎತ್ತುತ್ತೇವೆ. ನಿಮ್ಮ ಜತೆ ಎಚ್.ಡಿ. ದೇವೇಗೌಡ ಹಾಗೂ ನಾವು ಇದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಅಭಯ ನೀಡಿದರು.

Continue Reading

ಕರ್ನಾಟಕ

Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

Karnataka Weather: ರಾಜ್ಯದಲ್ಲಿ ಮೇ 5ರವರೆಗೆ ರಣ ಬಿಸಿಲು ಮುಂದುವರಿಯಲಿದ್ದು, ಎಲ್ಲ ಜಿಲ್ಲೆಗಳಲ್ಲೂ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ದಿನೇದಿನೆ ತಾಪಮಾನ (Temperature) ಏರಿಕೆಯಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ (Karnataka Weather) ವರದಿಯಾಗುತ್ತಿದ್ದು, ರಾಯಚೂರಿನಲ್ಲಿ ಸೋಮವಾರ, ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ 45.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿರುವುದು ಕಂಡುಬಂದಿದೆ.

ಏ.29ರ ಬೆಳಗ್ಗೆ 8.30 ರಿಂದ ಏ.30 ಬೆಳಗ್ಗೆ 8.30ರವರೆಗೆ ರಾಜ್ಯದ ಜಿಲ್ಲಾವಾರು ಗರಿಷ್ಠ ತಾಪಮಾನ ನೋಡುವುದಾದರೆ, ರಾಯಚೂರಿನಲ್ಲಿ 45.6 ಡಿಗ್ರಿ ಸೆ. ದಾಖಲಾಗಿದೆ. ಕೊಡಗಿನಲ್ಲಿ 38.6 ಡಿಗ್ರಿ ಸೆ. ತಾಪಮಾನ ದಾಖಲಾಗಿದ್ದು, ಇದು ಎಲ್ಲ ಜಿಲ್ಲೆಗಳಿಗಿಂತ ಕಡಿಮೆಯಾಗಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ 39.8 ಡಿಗ್ರಿ ಸೆ. ಹೊರತುಪಡಿಸಿ, ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆ. ಮೀರಿದೆ.

ನಾಳೆ ಚಿಕ್ಕಮಗಳೂರು, ಕೊಡಗು, ಮೈಸೂರು ಸೇರಿ ವಿವಿಧೆಡೆ ಮಳೆ

ಇನ್ನು ಮೇ 1ರಂದು ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಾದ್ಯಂತ ಮೇ 5ರವರೆಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮೇ 6ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮೇ 7ರಂದು ಕೂಡ ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ನಾಲ್ಕು ದಿನ ಶಾಖದ ಅಲೆಯ ಎಚ್ಚರಿಕೆ

ಮೇ 1 ರಿಂದ ಮೇ 4ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳು ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೇ 4 ರವರೆಗೆ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನು ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

ಇನ್ನು ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 24°C ಇರುವ ಸಾಧ್ಯತೆ ಇದೆ.

Continue Reading

ಕ್ರೈಂ

Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

Malpe Beach: ಕುಟುಂಬದೊಂದಿಗೆ ಬಂದಿದ್ದ ಶ್ರೇಯಸ್ ಸಮುದ್ರದಲ್ಲಿ ಆಟವಾಡುತ್ತಿದ್ದ. ಈ ವೇಳೆ ಸಮುದ್ರದ ಅಲೆಗಳು ಹೆಚ್ಚಿದ್ದು, ಶ್ರೇಯಸ್‌ ನಿಯಂತ್ರಣ ತಪ್ಪಿದ್ದಾನೆ. ಹೀಗಾಗಿ ಮುಳುಗಳು ಆರಂಭಿಸಿದ್ದಾನೆ. ಇದನ್ನು ಕಂಡ ಲೈಫ್‌ ಗಾರ್ಡ್‌ಗಳು ಕೂಡಲೇ ಕಾರ್ಯಾಚರಣೆಗಳಿದು ಆತನನ್ನು ರಕ್ಷಣೆ ಮಾಡಿದ್ದಾರೆ. ಶ್ರೇಯಸ್‌ಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಅಲ್ಲಿಂದ ಕುಟುಂಬದವರು ತೆರಳಿದ್ದಾರೆ.

VISTARANEWS.COM


on

Rescue of a boy who drowned at Malpe beach Two boys die after taking bath in Sindagi
Koo

ವಿಜಯಪುರ/ಉಡುಪಿ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಸ್ನಾನಕ್ಕೆಂದು ಬಾವಿಗೆ ಇಳಿದಿದ್ದ ಇಬ್ಬರು ಬಾಲಕರು (Drowned in well) ಮೃತಪಟ್ಟಿದ್ದರೆ, ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ (Malpe Beach) ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲಾಗಿದೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಬಿಸಿಲಿನ ಬೇಗೆಯಿಂದ ಸ್ನಾನಕ್ಕೆಂದು ಬಾವಿಗೆ ಇಳಿದಿದ್ದ ಬಾಲಕರಿಬ್ಬರು ಮೃತಪಟ್ಟಿದ್ದಾರೆ. ಸೋಮಶೇಖರ್ ಆಲಮೇಲ್ (16), ಮಲಿಕ್ ನದಾಫ್ (16) ಮೃತ ಬಾಲಕರು ಎಂದು ಗುರುತಿಸಲಾಗಿದೆ. ಈಜಲು ಬಾರದೆ ಇಬ್ಬರು ಗೆಳೆಯರು ಮೃತಪಟ್ಟಿದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Rescue of a boy who drowned at Malpe beach Two boys die after taking bath in Sindagi
‌ಮೃತ ಸೋಮಶೇಖರ್ ಮತ್ತು ಮಲ್ಲಿಕ್

ಮಲ್ಪೆ ಬೀಚ್‌ನಲ್ಲಿ ಬಾಲಕನ ರಕ್ಷಣೆ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಸಮುದ್ರದಲ್ಲಿ ಆಟವಾಡುತ್ತಾ ನೀರು ಪಾಲಾಗುತ್ತಿದ್ದ ಬಾಲಕನನ್ನು ಲೈಫ್ ಗಾರ್ಡ್‌ಗಳು ಗಮನಿಸಿದ್ದರಿಂದ ರಕ್ಷಣೆ ಸಾಧ್ಯವಾಗಿದೆ.

ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ಬಚಾವಾದ ಬಾಲಕ. ಕುಟುಂಬದೊಂದಿಗೆ ಬಂದಿದ್ದ ಶ್ರೇಯಸ್ ಸಮುದ್ರದಲ್ಲಿ ಆಟವಾಡುತ್ತಿದ್ದ. ಈ ವೇಳೆ ಸಮುದ್ರದ ಅಲೆಗಳು ಹೆಚ್ಚಿದ್ದು, ಶ್ರೇಯಸ್‌ ನಿಯಂತ್ರಣ ತಪ್ಪಿದ್ದಾನೆ. ಹೀಗಾಗಿ ಮುಳುಗಳು ಆರಂಭಿಸಿದ್ದಾನೆ. ಇದನ್ನು ಕಂಡ ಲೈಫ್‌ ಗಾರ್ಡ್‌ಗಳು ಕೂಡಲೇ ಕಾರ್ಯಾಚರಣೆಗಳಿದು ಆತನನ್ನು ರಕ್ಷಣೆ ಮಾಡಿದ್ದಾರೆ. ಶ್ರೇಯಸ್‌ಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಅಲ್ಲಿಂದ ಕುಟುಂಬದವರು ತೆರಳಿದ್ದಾರೆ.

Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

ಇಡುಕ್ಕಿ(ಕೇರಳ): ಮಾನಸಿಕ ಅಸ್ವಸ್ಥ (mentally challenged) 15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ (Physical Abuse) ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ 44 ವರ್ಷದ ವ್ಯಕ್ತಿಯೊಬ್ಬನಿಗೆ ಕೇರಳ (kerala) ನ್ಯಾಯಾಲಯವು ಸೋಮವಾರ ಒಟ್ಟು 106 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ದೇವಿಕುಲಂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (POCSO) ನ್ಯಾಯಾಧೀಶ ಸಿರಾಜುದ್ದೀನ್ ಪಿ.ಎ. ಈ ಮಹತ್ವದ ಆದೇಶವನ್ನು ನೀಡಿದ್ದಾರೆ. ಸಂತ್ರಸ್ತೆಯ ತಾಯಿಯ ಸ್ನೇಹಿತನಾಗಿದ್ದ ವ್ಯಕ್ತಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಹಲವು ಪ್ರಕರಣಗಳಡಿ ಒಟ್ಟು 106 ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸ್ಮಿಜು ಕೆ. ದಾಸ್ ಹೇಳಿದ್ದಾರೆ.

ಇದನ್ನೂ ಓದಿ: Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

ಶಿಕ್ಷೆಯನ್ನು ಏಕಕಾಲದಲ್ಲಿ ಪೂರೈಸಬೇಕಾಗುತ್ತದೆ. ಆದರೆ, ಈ ಅಪರಾಧಿಗೆ ನೀಡಲಾದ ಜೈಲು ಶಿಕ್ಷೆಗಳಲ್ಲಿ ಗರಿಷ್ಠ 22 ವರ್ಷಗಳಾಗಿವೆ. ಅಂದರೆ ಅವರು 22 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಆರೋಪಿಗೆ ನ್ಯಾಯಾಲಯವು 60,000 ರೂ. ದಂಡವನ್ನೂ ವಿಧಿಸಿದೆ. ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ ಅಪರಾಧಿ ಹೆಚ್ಚುವರಿ 22 ತಿಂಗಳ ಕಠಿಣ ಸಜೆ ಅನುಭವಿಸಬೇಕಾಗುತ್ತದೆ.

ಆರೋಪಿಯು ದಂಡವನ್ನು ಪಾವತಿಸಿದರೆ ಇಡುಕ್ಕಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂತ್ರಸ್ತ ಪರಿಹಾರ ಯೋಜನೆಯಿಂದ ಬಾಲಕಿಗೆ ಪರಿಹಾರವಾಗಿ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

2022ರಲ್ಲಿ ನಡೆದ ಘಟನೆ

2022ರಲ್ಲಿ ತ್ರಿಶೂರ್ ಮೂಲದ ಈ ವ್ಯಕ್ತಿಯು ಕೆಲಸದ ನಿಮಿತ್ತ ಅಡಿಮಾಲಿಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಹುಡುಗಿಯ ತಾಯಿಯೊಂದಿಗೆ ಹೋಟೆಲ್‌ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದ ಈತ ಆಕೆಯ ಜತೆ ಸ್ನೇಹ ಬೆಳೆಸಿದ್ದ. ಅನಂತರ ಆಕೆಯ ಮನೆಯಲ್ಲಿಯೇ ಇದ್ದ.

ಆದರೆ, ಬಾಲಕಿಯ ತಾಯಿ ಮತ್ತು ಸಹೋದರರು ಮನೆಯಲ್ಲಿ ಇಲ್ಲದಿದ್ದಾಗ ಆರೋಪಿಯು ಬಾಲಕಿಯನ್ನು ಲೈಂಗಿಕವಾಗಿ ಶೋಷಿಸಲು ಪ್ರಾರಂಭಿಸಿದ್ದಾನೆ. ಈ ಘಟನೆಯನ್ನು ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಆರೋಗ್ಯ ತೊಂದರೆಯಿಂದಾಗಿ ತಾಯಿ ಬಾಲಕಿಯನ್ನು ಆದಿಮಾಲಿ ತಾಲೂಕು ಆಸ್ಪತ್ರೆಗೆ ಕರೆತಂದಾಗ ಬಾಲಕಿ ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ಕುರಿತು ವೈದ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಇಡುಕ್ಕಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬಾಲಕಿಯ ಗರ್ಭಪಾತವಾಗಿದೆ. ಬಳಿಕ ಬಾಲಕಿ ಮತ್ತು ಗರ್ಭಪಾತವಾದ ಭ್ರೂಣದ ವೈದ್ಯಕೀಯ ಮಾದರಿಗಳ ಡಿಎನ್‌ಎ ಪರೀಕ್ಷೆ ನಡೆಸಲಾಗಿದ್ದು, ಇದರಿಂದ ಆರೋಪಿಯನ್ನು ಪತ್ತೆ ಹಚ್ಚಲಾಗಿತ್ತು. ಈ ಪ್ರಕರಣದಲ್ಲೀಗ ಆರೋಪಿಗೆ ಶಿಕ್ಷೆಯಾಗಿದೆ.

Continue Reading
Advertisement
Viral Video
ವೈರಲ್ ನ್ಯೂಸ್7 mins ago

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Prime Minister Narendra Modi wrote a letter to former CM Basavaraj Bommai
ಕರ್ನಾಟಕ12 mins ago

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Labour Day 2024
ದೇಶ14 mins ago

Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

State government conspiracy behind Prajwal Hassan Pen Drive Case says HD Kumaraswamy
ಕ್ರೈಂ16 mins ago

Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

Karnataka Weather
ಕರ್ನಾಟಕ36 mins ago

Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

IPL 2024
ಪ್ರಮುಖ ಸುದ್ದಿ54 mins ago

IPL 2024 : ಗುಜರಾತ್​ ಟೀಮ್​ನಲ್ಲಿ ಬುಮ್ರಾ 2.0; ಕನ್ನಡಿಗನ ಬೌಲಿಂಗ್​ ಶೈಲಿ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​

Rescue of a boy who drowned at Malpe beach Two boys die after taking bath in Sindagi
ಕ್ರೈಂ1 hour ago

Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

Fortis Hospital Launches Deep Brain Stimulation DBS Clinic to Treat Parkinson Disease
ಕರ್ನಾಟಕ1 hour ago

Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

Divorce Celebration
ವೈರಲ್ ನ್ಯೂಸ್1 hour ago

Divorce Celebration: ಗಂಡನ ಬಿಟ್ಟು ಬಂದ ಮಗಳನ್ನು ಅದ್ಧೂರಿ ಮೆರವಣಿಗೆಯಲ್ಲಿ ಕರೆ ತಂದ ಅಪ್ಪ!

RBI Guideline
ವಾಣಿಜ್ಯ1 hour ago

RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ16 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌