MB Patil: ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ; ಎಂ‌.ಬಿ. ಪಾಟೀಲ ಆರೋಪ - Vistara News

ಕರ್ನಾಟಕ

MB Patil: ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ; ಎಂ‌.ಬಿ. ಪಾಟೀಲ ಆರೋಪ

MB Patil: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಏನೇನೂ ಇಲ್ಲ. ಸ್ವತಃ ಮುಡಾ ತನ್ನ ತಪ್ಪನ್ನು ಒಪ್ಪಿಕೊಂಡು, ಮುಖ್ಯಮಂತ್ರಿಗಳ ಪತ್ನಿಗೆ ಬದಲಿ ನಿವೇಶನಗಳನ್ನು ಕೊಟ್ಟಿದೆ. ಇದೆಲ್ಲ ನಡೆದಿರುವುದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗ ಮುಡಾದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಾಯಕರಾದ ಸಾ.ರಾ. ಮಹೇಶ್, ಜಿ.ಟಿ. ದೇವೇಗೌಡ ಮತ್ತು ರಾಮದಾಸ್ ಅವರೇ ಇದ್ದರು ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಆರೋಪಿಸಿದ್ದಾರೆ.

VISTARANEWS.COM


on

Minister MB Patil statement in janandolana programme by congress party at ramanagara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರ ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ರೂಪಿಸಿವೆ. ಇದರ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಷಾ ಇದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ (MB Patil) ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ವಿರುದ್ಧ ಕಾಂಗ್ರೆಸ್ ಪಕ್ಷವು ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಏನೇನೂ ಇಲ್ಲ. ಸ್ವತಃ ಮುಡಾ ತನ್ನ ತಪ್ಪನ್ನು ಒಪ್ಪಿಕೊಂಡು, ಮುಖ್ಯಮಂತ್ರಿಗಳ ಪತ್ನಿಗೆ ಬದಲಿ ನಿವೇಶನಗಳನ್ನು ಕೊಟ್ಟಿದೆ. ಇದೆಲ್ಲ ನಡೆದಿರುವುದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗ ಮುಡಾದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಾಯಕರಾದ ಸಾ.ರಾ. ಮಹೇಶ್, ಜಿ.ಟಿ. ದೇವೇಗೌಡ ಮತ್ತು ರಾಮದಾಸ್ ಅವರೇ ಇದ್ದರು ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಈಗ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಂದು ಖಾಸಗಿ ದೂರಿನ ಮೇಲೆ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಈ ಮೂಲಕ ಅವರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಆದರೆ ನಾವು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಅವ್ಯವಹಾರಗಳನ್ನು ಬಯಲಿಗೆ ಎಳೆಯಲಿದ್ದೇವೆ ಎಂದು ಸಚಿವರು ತಿಳಿಸಿದರು.

ಯಡಿಯೂರಪ್ಪನವರು ಮಾರಿಷಸ್‌ನಲ್ಲಿ ಹತ್ತು ಸಾವಿರ ಕೋಟಿ ರೂಪಾಯಿ ಇಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರೇ ಆರೋಪಿಸಿದ್ದಾರೆ. ಮೋದಿ ಸರ್ಕಾರವು ನಮಗೆ ಬರ ಪರಿಹಾರ, ಬಜೆಟ್ ಹಂಚಿಕೆ, ತೆರಿಗೆ ವಿತರಣೆ ಎಲ್ಲದರಲ್ಲೂ ಅನ್ಯಾಯ ಮಾಡುತ್ತಿದೆ. ಈಗ ಚುನಾಯಿತ ಸರ್ಕಾರವನ್ನು ಉರುಳಿಸುವ ದುಸ್ಸಾಹಸಕ್ಕೆ ಬಿಜೆಪಿ ಮತ್ತು ಜೆಡಿಎಸ್ ಇಳಿದಿವೆ ಎಂದು ಆರೋಪಿಸಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಯಾವ ಸಿದ್ಧಾಂತವೂ ಇಲ್ಲ. ಹೇಗಾದರೂ ಮಾಡಿ ಅಧಿಕಾರ ಹಿಡಿಯುವುದೇ ಅವರ ಸೂತ್ರ. ಹಿಂದೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಆದರು. ಈಗ ಬಿಜೆಪಿಯನ್ನು ಹಿಡಿದುಕೊಂಡು ಹೋಗಿದ್ದಾರೆ. ಹಿಂದುಳಿದವರು ಮತ್ತು ದಮನಿತರ ಪರವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ವಿರುದ್ಧ ಈಗ ಅವರು ಕಾಲು‌ ಕೆರೆಯುತ್ತಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ಟೀಕಿಸಿದರು.

ಇದನ್ನೂ ಓದಿ: Ginger Benefits: ಮಳೆಗಾಲದ ಸೋಂಕುಗಳಿಗೆ ಬೇಕು ಶುಂಠಿಯೆಂಬ ಮದ್ದು!

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ ಡಾ.ಎಂ.ಸಿ.ಸುಧಾಕರ, ಜಮೀರ್ ಅಹಮದ್, ಕೆ.ಎಚ್. ಮುನಿಯಪ್ಪ, ಡಾ. ಶರಣು ಪ್ರಕಾಶ ಪಾಟೀಲ್, ಶಾಸಕ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ. ಸುರೇಶ್‌ ಹಾಗೂ ಇತರರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Wayanad Landslide: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ರಾಜ್ಯ ಸರ್ಕಾರದ 100 ಮನೆಗಳ ನಿರ್ಮಾಣದ ನೆರವಿನ ಜತೆಗೆ ಕರುನಾಡಿನ ನೂರಾರು ಸಂಘ-ಸಂಸ್ಥೆಗಳು ಕೂಡ ಹಲವು ರೀತಿಯಲ್ಲಿ ಕೇರಳ ಜನರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಮೆರೆದಿವೆ.

VISTARANEWS.COM


on

Wayanad Landslide
Koo

ಬೆಂಗಳೂರು: ಕೇರಳದ ವಯನಾಡಿನಲ್ಲಿ ಭೂಕುಸಿತ (Wayanad Landslide) ಸಂಭವಿಸುತ್ತಲೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕರ್ನಾಟಕ (Karnataka) ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಭರವಸೆ ನೀಡಿದ್ದಾರೆ. ಇದರೊಂದಿಗೆ ರಾಜ್ಯದ ಕೈಗಾರಿಕೋದ್ಯಮಿಗಳು, ಖಾಸಗಿ ಸಂಘ ಸಂಸ್ಥೆಗಳೂ ಕೂಡ ವಿವಿಧ ರೂಪದಲ್ಲಿ ನೆರವಾಗಲು ಮುಂದಾಗಿವೆ.

ಮೈಸೂರು ಜಿಲ್ಲಾಡಳಿತವು ವೈದ್ಯರ ತಂಡದೊಂದಿಗೆ 15 ಫ್ರೀಜರ್‌ ಬಾಕ್ಸ್‌ಗಳು, ನಾಲ್ಕು ಟ್ರಾಕ್ಟರ್‌ ಮೌಂಟೆಡ್‌ ಕಂಪ್ರೆಸರ್‌ ಮತ್ತು ಜಾಕ್‌ ಹ್ಯಾಮರ್‌, 500 ಬಾಡಿ ಬ್ಯಾಗ್‌ಗಳು, ತುರ್ತು ಸಂದರ್ಭಗಳಲ್ಲಿ ಬಳಸುವ 15 ದೀಪಗಳ ವ್ಯವಸ್ಥೆ, 40 ಸ್ಟ್ರೆಚರ್‌ಗಳು, 288 ಗಮ್‌ಬೂಟ್‌ಗಳು, 5 ಸ್ಟೀಲ್‌ ಕಟ್ಟರ್‌ಗಳು, 10 ಗ್ಯಾಸ್‌ ಕಟ್ಟರ್‌ಗಳು, 2040 ನ್ಯಾಪ್‌ಕಿನ್‌ಗಳು, 1000 ಗ್ಲೋವ್‌ಗಳು, 2050 ಮಾಸ್ಕ್‌ಗಳು, 1000 ಬಾಟಲ್‌ ಸ್ಯಾನಿಟೈಸರ್‌ಗಳು ಹಾಗೂ ಆರೋಗ್ಯ ಇಲಾಖೆಯ ಔಷಧಗಳನ್ನು ಒದಗಿಸಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (KIAL) ವತಿಯಿಂದ 250 ಎಂ.ಎಲ್‌. ನ 1008 ನೀರಿನ ಬಾಟಲ್‌ಗಳು, 100 ರೇನ್‌ಕೋಟ್‌ಗಳು, 500 ಬಾಟಲ್‌ ಸ್ಯಾನಿಟೈಸರ್‌ಗಳು, 15 ಟೆಂಟ್‌ಗಳು, 1000 ಪಿಪಿಇ ಕಿಟ್‌ಗಳು, 5000 ಗ್ಲೋವ್‌ಗಳು, 3೦೦೦ 3- ಪ್ಲೈ ಮಾಸ್ಕ್‌ಗಳು ಹಾಗೂ 8000 N-95 ಮಾಸ್ಕ್‌ಗಳನ್ನು ಕಳುಹಿಸಲಾಗಿದೆ.

ವೋಲ್ವೋ ಸಂಸ್ಥೆಯಿಂದ 2000 ಪ್ಯಾಕ್‌ ಸ್ಯಾನಿಟರಿ ಪ್ಯಾಡ್‌ಗಳು, 100 PPE ಕಿಟ್‌ಗಳು ಹಾಗೂ ಎರಡು ಟ್ರಕ್‌ಗಳನ್ನು ಒದಗಿಸಲಾಗಿದೆ. ಎಲೆಕ್ಟ್ರಾನಿಕ್‌ ಸಿಟಿ ಕೈಗಾರಿಕಾ ಸಂಘ(ELCIA) ದ ಸದಸ್ಯ ಸಂಸ್ಥೆಗಳು ಮತ್ತು ಪ್ರಣವ್‌ ಫೌಂಡೇಷನ್‌ ವತಿಯಿಂದ 40 ಸ್ಟ್ರೆಚರ್‌ಗಳು, 250 ಬಾಡಿ ಬ್ಯಾಗ್‌ಗಳು, 1000 N-95 ಮಾಸ್ಕ್‌ಗಳು, 500 ಬಾಟಲ್‌ ಸ್ಯಾನಿಟೈಸರ್‌ಗಳು, 1000 ಗ್ಲೋವ್‌ಗಳನ್ನು ಒದಗಿಸಲಾಗಿದೆ.

ಹಲವು ಸಂಸ್ಥೆಗಳಿಂದಲೂ ನೆರವು

ಬಯೋಕಾನ್‌ ಮತ್ತು ಭಾಗೀದಾರ ಸಂಸ್ಥೆಗಳಾದ ನಾರಾಯಣ ಹೆಲ್ತ್‌ ಮತ್ತು ಸಿಂಜೀನ್‌ ಸಂಸ್ಥೆಗಳಿಂದ 2,200 ಮಾಸ್ಕ್‌ಗಳು, 100 ಗುಣಮಟ್ಟದ ರೇನ್‌ ಕೋಟ್‌ಗಳು, 400 ಲೀಟರ್‌ ಸ್ಯಾನಿಟೈಸರ್‌, 5 ಕಾರ್ಟನ್‌ಗಳಷ್ಟು ಬೆಡ್‌ಶೀಟ್‌ ಮತ್ತು ಬಟ್ಟೆ ಹಾಗೂ 250 ಪಿಪಿಇ ಕಿಟ್‌ಗಳನ್ನು ಕಳುಹಿಸಲಾಗಿದೆ.

ಆಶಯ ಟ್ರಸ್ಟ್ ಹಾಗೂ ಉತ್ತಿಷ್ಠ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ 1,000 ಬ್ಲಾಂಕೆಟ್‌ ಮತ್ತು ಟಾರ್ಪಾಲಿನ್‌ಗಳು ಹಾಗೂ ಎರಡು ಆಂಬುಲೆನ್ಸ್‌ಗಳನ್ನು ಒದಗಿಸಲಾಗಿದೆ. ಅವರು 25 ಲಕ್ಷ ರೂ. ಆರ್ಥಿಕ ನೆರವು ಒದಗಿಸಿದ್ದಾರೆ. ವಯನಾಡಿಗೆ ಪರಿಹಾರ ಸಾಮಗ್ರಿಗಳು, ವೈದ್ಯಕೀಯ ಸಲಕರಣೆಗಳು ಮತ್ತಿತರ ನೆರವು ಒದಗಿಸಿ ಮಾನವೀಯತೆ ಮೆರೆದ ಎಲ್ಲ ಸಂಸ್ಥೆಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Continue Reading

ಕರ್ನಾಟಕ

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Best Teacher Award: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರು ಆಗಸ್ಟ್ 3ರಿಂದ‌ 16ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ. ಕಾವೇರಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

VISTARANEWS.COM


on

Best Teacher Award
Koo

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ (Best Teacher Award) ಶಿಕ್ಷಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಶಿಕ್ಷಕರು ಆಗಸ್ಟ್ 3ರಿಂದ‌ 16ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಶಿಕ್ಷಕರಿಗೆ ಸೆ.5ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ. ಕಾವೇರಿ ಅವರು ಸುತ್ತೋಲೆ ಹೊರಡಿಸಿದ್ದಾರೆ. ತರಗತಿ ಕೋಣೆಯಲ್ಲಿ ವಿಷಯ ಪಾಂಡಿತ್ಯದ ಜತೆಗೆ ಪೂರಕ ಪರಿಕರಗಳೊಂದಿಗೆ ಬೋಧನಾ ಚಟುವಟಿಕೆಗಳನ್ನು ಸಾದರಪಡಿಸಿ ಮಕ್ಕಳಲ್ಲಿ ಶಾಶ್ವತ ಮತ್ತು ಸಂತಸದಾಯಕ ಕಲಿಕೆಯನ್ನುಂಟು ಮಾಡುವ ಬಹುಮುಖ ವ್ಯಕ್ತಿತ್ವದ ಶಿಕ್ಷಕರನ್ನು, ಉಪನ್ಯಾಸಕರನ್ನು, ಮುಖ್ಯ ಶಿಕ್ಷಕರನ್ನು ಹಾಗೂ ಪ್ರಾಂಶುಪಾಲರನ್ನು ಗುರ್ತಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ವರ್ಷ ಸೆಪ್ಟೆಂಬರ್-05 ರಂದು ಕ್ರಮವಾಗಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡುವುದರ ಮೂಲಕ ಗೌರವಿಸುತ್ತಿವೆ.

ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅಹರ್ನಿಶಿ ತೊಡಗಿಸಿಕೊಳ್ಳುವ ಹಲವು ಅತ್ಯುತ್ತಮ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಲೆ ಮರೆಯ ಕಾಯಿಯಂತೆ ಇದ್ದು, ಅಂತಹ ತೆರೆಮರೆಯ ಸಾಧಕರನ್ನು ಸ್ವಯಂಪ್ರೇರಿತವಾಗಿ ಗುರುತಿಸಿ ಸದರಿ ಪ್ರಶಸ್ತಿಗಳನ್ನು ಪ್ರದಾನ ಮಾಡಬೇಕೆನ್ನುವುದು ಸರ್ಕಾರದ ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಶಯವಾಗಿರುತ್ತದೆ. ಇದರಿಂದಾಗಿ ರಾಜ್ಯದ ಶಿಕ್ಷಕ ವೃಂದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮತ್ತಷ್ಟು ಹುರುಪಿನಿಂದ ತೊಡಗಿಸಿಕೊಳ್ಳಲು ಪ್ರೇರೇಪಣೆಯನ್ನು ಮತ್ತು ಉತ್ತೇಜನವನ್ನು ಒದಗಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಸಕಾಲಿಕ ಕ್ರಮಗಳನ್ನು ವಹಿಸಬೇಕಾಗಿರುವುದು ಸಂಬಂಧಿಸಿದ ಇಲಾಖಾಧಿಕಾರಿಗಳ ಆದ್ಯ ಕರ್ತವ್ಯ ಹಾಗೂ ಪ್ರಮುಖ ಹೊಣೆಗಾರಿಕೆಯಾಗಿರುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯದ ಮಾದರಿಯಲ್ಲೇ ರಾಜ್ಯದಲ್ಲಿಯೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರನ್ನು, ವಿಶೇಷ ಶಿಕ್ಷಕರನ್ನು ಹಾಗೂ ಮುಖ್ಯ ಶಿಕ್ಷಕರನ್ನು ಆಯ್ಕೆ ಮಾಡಲು ಆನ್-ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಿ, ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್-ಲೈನ್ ಮೂಲಕವೇ ನಿರ್ವಹಿಸಲು ಮುಂದಾಗಿದೆ. ಅದರಂತೆ, 2024-25 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಅರ್ಹ ಶಿಕ್ಷಕರು. ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಆನ್-ಲೈನ್ ಪೋರ್ಟಲ್ http://www.schooleducation.kar.nic.in ಮೂಲಕ ಅರ್ಜಿಯನ್ನು ಸಲ್ಲಿಸದಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ| Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

Continue Reading

ಕರ್ನಾಟಕ

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

BJP-JDS Padayatra: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತೆತ್ತಿದರೆ ತಮ್ಮ ಜೀವನ ತೆರೆದ ಪುಸ್ತಕ, ತಾವು ಶುದ್ಧ ಹಸ್ತದ ರಾಜಕಾರಣ ಎನ್ನುತ್ತಾರೆ ಆದರೆ, 2013-18 ರವರೆಗೆ ರಿಡು ಮಾಡಿದ್ಯಾರು? 80 ಲಕ್ಷ ರೂ. ವಾಚ್ ಕಟ್ಟಿ ವಿವಾದವಾಗುತ್ತಲೇ ವಾಪಸ್ ಕೊಟ್ಟಿದ್ಯಾರು ಎಂದು ಪ್ರಶ್ನಿಸಿದ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Union Minister Pralhad Joshi latest statement at Mysore Chalo Padayatra
Koo

ಬೆಂಗಳೂರು: ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಹ ಶೇರ್ ಹೋಲ್ಡರ್ಸ್ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (BJP-JDS Padayatra) ನೇರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಇಂದು ಎನ್‌ಡಿಎ ಮೈತ್ರಿಕೂಟದ ನೇತೃತ್ವದಲ್ಲಿ ನಡೆಸಿದ ಮೈಸೂರು ಚಲೋ ಪಾದಯಾತ್ರೆ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಸಚಿವರು, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಈ ಹಗರಣಗಳಲ್ಲಿ ಪಾಲುದಾರರು. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಧೈರ್ಯ ಅವರಿಗಿಲ್ಲವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Pralhad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್‌‌ನಿಂದ ರಾಜಕೀಯ; ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್ ಹೈಕಮಾಂಡ್‌ನ ಈ ಇಬ್ಬರೂ ನಾಯಕರು ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಪಡೆದು ಹೊರಗಿದ್ದಾರೆ. ಈಗ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣದಲ್ಲಿ ಜೈಲಿಗೆ ಹೋಗುವವರನ್ನು ತಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಎಂ ಮನೆಗೆ ಹೋಗೋ ಕಾಲ ಬಂದಿದೆ

ವಾಲ್ಮೀಕಿ ನಿಗಮ ಮತ್ತು ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಹಾಗಾಗಿ ಇದರ ವಿರುದ್ಧ ಕಾನೂನು ಮತ್ತು ರಾಜಕೀಯವಾಗಿ ಹೋರಾಟ ಮಾಡಿ ಈ ಭ್ರಷ್ಟಾಚಾರ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡುತ್ತೇವೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದರು.

ರಿಡು- 80 ಲಕ್ಷ ವಾಚ್ ರೂವಾರಿ ಯಾರು?

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತೆತ್ತಿದರೆ ತಮ್ಮ ಜೀವನ ತೆರೆದ ಪುಸ್ತಕ, ತಾವು ಶುದ್ಧ ಹಸ್ತದ ರಾಜಕಾರಣ ಎನ್ನುತ್ತಾರೆ ಆದರೆ, 2013-18 ರವರೆಗೆ ರಿಡು ಮಾಡಿದ್ಯಾರು? 80 ಲಕ್ಷ ರು. ವಾಚ್ ಕಟ್ಟಿ ವಿವಾದವಾಗುತ್ತಲೇ ವಾಪಸ್ ಕೊಟ್ಟಿದ್ಯಾರು? ಎಂದು ಪ್ರಶ್ನಿಸಿದ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿಯೇ ಎಂದು ಆರೋಪಿಸಿದರು.

ಇದನ್ನೂ ಓದಿ: National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

ಭ್ರಷ್ಟ ಕಾಂಗ್ರೆಸ್ ಕಿತ್ತೊಗೆಯಿರಿ

ದೇಶದಲ್ಲೇ ಆಗಲಿ, ರಾಜ್ಯದಲ್ಲೇ ಆಗಲಿ ಕಾಂಗ್ರೆಸ್ ಆಡಳಿತ ಇದ್ದಾಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟಾಚಾರ ಕಾಂಗ್ರೆಸ್ಸಿಗರಿಗೆ ರಕ್ತಗತವಾಗಿ ಬಂದಿದ್ದು, ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕಿತ್ತೆಸೆಯಿರಿ ಎಂದು ಸಚಿವರು ತಿಳಿಸಿದರು.

Continue Reading

ಉತ್ತರ ಕನ್ನಡ

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

Farmer Death: ರೈತನೊಬ್ಬ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಅಂಕೋಲಾ ತಾಲೂಕಿನ ಮೊರಳ್ಳಿ ಮಾಣಿಗುಡ್ಡ ಬಳಿ ನಡೆದಿದೆ. ಮೊಗಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಳ್ಳಿ ಮಾಣಿಗುಡ್ಡ ನಿವಾಸಿ ನಾಗರಾಜ ತಿಮ್ಮಪ್ಪ ಗೌಡ (37) ಮೃತಪಟ್ಟ ರೈತ ಎಂದು ತಿಳಿದುಬಂದಿದೆ.

VISTARANEWS.COM


on

Farmer dies after falling under power tiller wheel in Moralli village
Koo

ಅಂಕೋಲಾ: ರೈತನೊಬ್ಬ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಗಾಯಗೊಂಡು ಸಾವನ್ನಪ್ಪಿದ ಘಟನೆ (Farmer Death) ತಾಲೂಕಿನ ಮೊರಳ್ಳಿ ಮಾಣಿಗುಡ್ಡ ಬಳಿ ನಡೆದಿದೆ. ಮೊಗಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಳ್ಳಿ ಮಾಣಿಗುಡ್ಡ ನಿವಾಸಿ ನಾಗರಾಜ ತಿಮ್ಮಪ್ಪ ಗೌಡ (37) ಮೃತ ದುರ್ದೈವಿಯಾಗಿದ್ದಾನೆ.

ಇದನ್ನೂ ಓದಿ: Accident: ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ; ಮಹಿಳೆ ಬಲಿ; ಭೀಕರ ದೃಶ್ಯ ವೈರಲ್‌

ರೈತ ನಾಗರಾಜ ಶುಕ್ರವಾರ ಬೆಳಗ್ಗೆ ಮೊರಳ್ಳಿಯಲ್ಲಿರುವ ಸುರೇಶ ನಾಯಕ ಎಂಬುವವರ ಗದ್ದೆಯಲ್ಲಿ ಉಳುಮೆ ಮಾಡಲು ತೆರಳಿದ್ದ. ಈ ವೇಳೆ ವಿಪರೀತ ಮಳೆ ಬರುತ್ತಿದ್ದ ಹಿನ್ನಲೆ ವಾಪಸ್ಸಾಗಿದ್ದು, ಮದ್ಯಾಹ್ನದ ನಂತರ ಮಳೆ ಕಡಿಮೆಯಾದ ಬಳಿಕ ಮತ್ತೆ ಗದ್ದೆಗೆ ತೆರಳಿದ್ದ. ಪವರ್ ಟಿಲ್ಲರ್ ಮೂಲಕ ಉಳುಮೆ ಮಾಡುತ್ತಿದ್ದ ವೇಳೆ ಚಕ್ರಕ್ಕೆ ಕಾಲು ಸಿಲುಕಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿದ್ದು, ಗದ್ದೆಯಲ್ಲೇ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

ಸ್ಥಳಕ್ಕೆ ಅಂಕೋಲಾ ಠಾಣೆಯ ಪಿಎಸ್‌ಐ ಉದ್ದಪ್ಪ ಧರೆಪ್ಪನವರ್ ತೆರಳಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Wayanad Landslide
ಕರ್ನಾಟಕ18 mins ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Kavya Maran
ಕ್ರಿಕೆಟ್51 mins ago

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Champions Trophy 2025
ಪ್ರಮುಖ ಸುದ್ದಿ1 hour ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್1 hour ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ1 hour ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ2 hours ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ2 hours ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

KHIR City project Launch on August 23 at bengaluru says Minister MB Patil
ಕರ್ನಾಟಕ2 hours ago

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

IND vs SL ODI
ಪ್ರಮುಖ ಸುದ್ದಿ2 hours ago

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

Indian Organ Donation Day program inauguration by Minister Dinesh Gundurao at Belagavi
ಕರ್ನಾಟಕ2 hours ago

Belagavi News: ಸ್ವಾತಂತ್ರ್ಯ ದಿ‌ನಾಚರಣೆಯಂದು ಅಂಗಾಂಗ ದಾನಿಗಳ ಕುಟುಂಬಗಳಿಗೆ ಗೌರವ; ದಿ‌ನೇಶ್ ಗುಂಡೂರಾವ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ10 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌