Grama Vastavya: ವೇದಿಕೆ ನೆಲದಲ್ಲೇ ಕುಳಿತು ವೃದ್ಧನಿಗೆ ಕೃತಕ ಕಾಲು ಜೋಡಿಸಿದ ಸಚಿವ ಆರ್.‌ ಅಶೋಕ್ - Vistara News

ಕರ್ನಾಟಕ

Grama Vastavya: ವೇದಿಕೆ ನೆಲದಲ್ಲೇ ಕುಳಿತು ವೃದ್ಧನಿಗೆ ಕೃತಕ ಕಾಲು ಜೋಡಿಸಿದ ಸಚಿವ ಆರ್.‌ ಅಶೋಕ್

Grama Vastavya: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕಲಾದಗಿ ಗ್ರಾಮದಲ್ಲಿ ಕಂದಾಯ ಸಚಿವ ಆರ್.‌ ಅಶೋಕ್‌ (R Ashok) ತಮ್ಮ ಅಧಿಕಾರಾವಧಿಯ ಕೊನೆಯ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ, ಇದರ ಭಾಗವಾಗಿ ಕಲಾದಗಿಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು.‌ ವೇಳೆ ವೃದ್ಧರೊಬ್ಬರಿಗೆ ಕೃತಕ ಕಾಲನ್ನು ಜೋಡಿಸಿದರು.

VISTARANEWS.COM


on

Minister RAshok sat under the dais and fitted an artificial leg to an elderly man Grama Vastavya updates
ವೇದಿಕೆ ನೆಲದಲ್ಲಿಯೇ ಕುಳಿತು ಕಾಲು ಇಲ್ಲದ ವೃದ್ಧರೊಬ್ಬರಿಗೆ ಕೃತಕ ಕಾಲನ್ನು ಜೋಡಿಸಿದ ಸಚಿವ ಆರ್.‌ ಅಶೋಕ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಕಲಾದಗಿಯಲ್ಲಿ ಶನಿವಾರ (ಫೆ.೨೫) ಏರ್ಪಡಿಸಿದ್ದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮವನ್ನು ಕಂದಾಯ ಸಚಿವ ಆರ್. ಅಶೋಕ್ (R Ashok) ಉದ್ಘಾಟಿಸಿದರು. ಈ ವೇಳೆ ಕಾಲು ಇಲ್ಲದ ವಯೋವೃದ್ಧರೊಬ್ಬರಿಗೆ ಸಚಿವರೇ ಸ್ವತಃ ಕೃತಕ ಕಾಲನ್ನು ಜೋಡಿಸುವ ಮೂಲಕ ಸಭಿಕರ ಮೆಚ್ಚುಗೆಗೆ ಪಾತ್ರರಾದರು. ರಾತ್ರಿ ಕಲಾದಗಿಯಲ್ಲಿಯೇ ಸಚಿವರು ಗ್ರಾಮ ವಾಸ್ತವ್ಯ (Grama Vastavya) ಹೂಡಲಿದ್ದಾರೆ.

ವೇದಿಕೆಯಲ್ಲಿ ಕಾಲು ಜೋಡಿಸುವ ಪ್ರಕ್ರಿಯೆಗೆ ಚಾಲನೆ ನೀಡುವ ವೇಳೆ ಸಚಿವ ಆರ್.‌ ಅಶೋಕ್‌ ಅವರು, ವೃದ್ಧನ ಕಾಲನ್ನು ಸ್ಪರ್ಶಿಸಿದರು. ಆಗ ಆ ವೃದ್ಧರಿಗೆ ಸಚಿವರು ಕಾಲು ಮುಟ್ಟುತ್ತಿದ್ದಾರೆಂದು ಸಂಕೋಚವಾಗಿ ನಯವಾಗಿ ಸಚಿವರ ಕೈಯನ್ನು ಮೇಲೆತ್ತಿದರು. ಆದರೆ, ಸಚಿವ ಅಶೋಕ್‌ ಅಷ್ಟಕ್ಕೆ ಸುಮ್ಮನಾಗದೆ, ವೃದ್ಧನ ಎದುರು ವೇದಿಕೆಯ ಮೇಲೆಯೇ ಕುಳಿತುಕೊಂಡು ಕೃತಕ ಕಾಲನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ನಿರತರಾದರು. ಅವರಿಗೆ ಕಾಲು ಜೋಡಿಸಿದ ಬಳಿಕ ಅಲ್ಲಿಂದ ಮೇಲೆದ್ದರು. ಬಳಿಕ ಆ ವೃದ್ಧರನ್ನು ಕುಳಿತಲ್ಲಿಂದ ನಿಲ್ಲಿಸಿ ಕೃತಕ ಕಾಲಿನ ಜೋಡಣೆಯನ್ನು ಖಾತ್ರಿಪಡಿಸಿಕೊಳ್ಳಲಾಯಿತು.

Minister RAshok sat under the dais and fitted an artificial leg to an elderly man Grama Vastavya updates
ವೀಲ್‌ಚೇರ್‌ನಲ್ಲಿ ವಯೋವೃದ್ಧರನ್ನು ವೇದಿಕೆಯಲ್ಲಿಯೇ ತಳ್ಳಿಕೊಂಡು ಹೋದ ಸಚಿವ ಅಶೋಕ್‌.

ಕಾರ್ಯಕ್ರಮದ ಪೂರ್ವದಲ್ಲಿ ಸಾಂಪ್ರದಾಯಿಕವಾಗಿ ಧಾನ್ಯ ಬೀರುವ ಮೂಲಕ ನಾಡಿನ ರೈತರಿಗೆ ಗೌರವ ಸಲ್ಲಿಸಲಾಯಿತು.

ಸಚಿವರಿಗೆ ಅದ್ಧೂರಿ ಸ್ವಾಗತ

ಕಂದಾಯ ಸಚಿವ ಆರ್.ಅಶೋಕ್ ಅವರು ಕಲಾದಗಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆಗೆ ಆಗಮಿಸಿದ್ದು, ಮಾರ್ಗಮಧ್ಯೆ ತುಳಸಿಗೇರಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ದರ್ಶನ ಪಡೆದು, ಅಲ್ಲಿಂದ ನೇರವಾಗಿ ಕಲಾದಗಿ ಗ್ರಾಮಕ್ಕೆ ಆಗಮಿಸಿದರು. ಈ ವೇಳೆ ಕಂದಾಯ ಸಚಿವರಿಗೆ, ಕುಂಬ ಹೊತ್ತ ಮಹಿಳೆಯರಿಂದ ಅದ್ಧೂರಿ ಸ್ವಾಗತ ದೊರೆಯಿತು.

ಇದನ್ನೂ ಓದಿ: Grama Vastavya: ಗ್ರಾಮ ವಾಸ್ತವ್ಯಗಳು ನನಗೆ ಪಾಠ ಶಾಲೆ ಇದ್ದಂತೆ, ಕಾಡಿನ ಜನರ ಜೀವನ ನೋಡಿದರೆ ಕಣ್ಣೀರು ಬರುತ್ತೆ: ಆರ್.‌ ಅಶೋಕ್‌

ಅಲ್ಲದೆ, ಆರ್.ಅಶೋಕ್ ಟ್ರ್ಯಾಕ್ಟರ್ ಮೂಲಕ ಮುಖ್ಯ ರಸ್ತೆಯಿಂದ ಕಲಾದಗಿ ಗ್ರಾಮದ ಒಳಗೆ ಮೆರವಣಿಗೆ ಮೂಲಕ ಸಾಗಿದರು. ಈ ವೇಳೆ ಡೊಳ್ಳು ಕುಣಿತ, ಪೂರ್ಣ ಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಆಕರ್ಷಣೆಯ ಕೇಂದ್ರಬಿಂದುವಾಗಿದ್ದರು. ಸಚಿವರಿಗೆ ಜೆಸಿಬಿ ಮೂಲಕ ಹೂಮಳೆ ಸುರಿಯಲಾಯಿತು. ಸಚಿವ ಸಚಿವ ಮುರಗೇಶ್ ನಿರಾಣಿ, ಸಂಸದ ಪಿ.ಸಿ. ಗದ್ದಿಗೌಡರ್, ಪರಿಷತ್ ಸದಸ್ಯ ಪಿ.ಎಚ್. ಪೂಜಾರ್ ಸೇರಿದಂತೆ ಜಿಲ್ಲೆಯ ಮುಖಂಡರು ಸಾಥ್ ನೀಡಿದರು.‌

Minister RAshok sat under the dais and fitted an artificial leg to an elderly man Grama Vastavya updates

ನನಗೆ ಗ್ರಾಮ ವಾಸ್ತವ್ಯ ಪಾಠ ಶಾಲೆ: ಅಶೋಕ್

ಎಲ್ಲ ಗ್ರಾಮ ವಾಸ್ತವ್ಯಗಳು ನನಗೆ ಪಾಠ ಶಾಲೆಯಾಗಿವೆ. ಕಾಡಿನ ಜನರ ಜೀವನ ನೋಡಿದಾಗ ಕಣ್ಣೀರು ಬರುತ್ತದೆ. ಎಲ್ಲ ಗ್ರಾಮ ವಾಸ್ತವ್ಯವೂ ನನಗೆ ತೃಪ್ತಿ ಕೊಟ್ಟಿದೆ. ನಾನು ಕಾಡಿನ ಅಂಚಿನಲ್ಲೂ ಗ್ರಾಮ ವಾಸ್ತವ್ಯ ಮಾಡಿದ್ದೇನೆ. ಅದೇ ರೀತಿ ಉತ್ತರ ಕರ್ನಾಟಕದಲ್ಲೂ ವಾಸ್ತವ್ಯ ಹೂಡಿದ್ದೇನೆ. ನನ್ನ ಗ್ರಾಮ ವಾಸ್ತವ್ಯಗಳ ಪೈಕಿ ಹೆಚ್ಚಿನ ವಾಸ್ತವ್ಯ ಉತ್ತರ ಕರ್ನಾಟಕದಲ್ಲಿಯೇ ಆಗಿದೆ. ಹಳೇ ಮೈಸೂರು ಭಾಗದಲ್ಲಿ ಮೂರ್ನಾಲ್ಕು ವಾಸ್ತವ್ಯ ಆಗಿರಬಹುದು. ಉತ್ತರ ಕರ್ನಾಟಕದ ಜನ ನನಗೆ ಸಾಕಷ್ಟು ಪ್ರೀತಿ ತೋರಿಸಿದ್ದಾರೆ, ನನಗೆ ಆಶೀರ್ವಾದ ಮಾಡಿದ್ದಾರೆ. ಅದಕ್ಕಾಗಿ ಎಲ್ಲ ಗ್ರಾಮ ವಾಸ್ತವ್ಯಗಳು ನನಗೆ ಪಾಠ ಶಾಲೆ ಇದ್ದಂತೆ ಎಂದು ಕಲಾದಗಿ ಗ್ರಾಮದಲ್ಲಿ ಸಚಿವ ಆರ್.ಅಶೋಕ್ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

Minister RAshok sat under the dais and fitted an artificial leg to an elderly man Grama Vastavya updates

ಇದನ್ನೂ ಓದಿ: Old Pension: ಹಳೇ ಪಿಂಚಣಿಗಾಗಿ ನಿವೃತ್ತ ಶಿಕ್ಷಕ ಆತ್ಮಹತ್ಯೆ, ಬಾದಾಮಿಯಲ್ಲಿ ಶವವಿಟ್ಟು ಪ್ರತಿಭಟನೆ; ಸರ್ಕಾರಿ ಕೊಲೆ ಎಂದ ಸಿದ್ದರಾಮಯ್ಯ

ಕಾಡು ಪ್ರದೇಶದಲ್ಲಿ ವಾಸ್ತವ್ಯ ಮಾಡಿದ್ದೇನೆ. ಅಲ್ಲಿನ ಜನರು ಮತ್ತು ಅವರ ಬದುಕನ್ನು ನೋಡಿದಾಗ ಕಣ್ಣೀರು ಬರುತ್ತದೆ. ನಾವೆಲ್ಲ ಇಡ್ಲಿ, ವಡೆ, ಸಾಂಬಾರು, ದೋಸೆ ಎಂದು ಬಗೆ ಬಗೆಯ ತಿಂಡಿಗಳನ್ನು ತಿನ್ನುತ್ತಿರುತ್ತೇವೆ. ಪಾಪ ಅವರು ಗೆಡ್ಡೆ, ಗೆಣಸು ತಿಂದು ಜೀವನ ಸಾಗಿಸುತ್ತಾರೆ. ನಾವು ೨೧ನೇ ಶತಮಾನ ದಾಟಿದ್ದೇವೆ. ಆದರೂ ಅವರ ಕಡೆ ಗಮನ ಹರಿಸಿರಲಿಲ್ಲ. ನಾನು ಆ ಕಡೆ ಭೇಟಿ ಮಾಡಿ, ಅವರಿಗೆ ನ್ಯಾಯ ಕೊಡಿಸಬೇಕು. ಅವರ ಉಳುಮೆ ಮಾಡುವ ಜಮೀನು ಅವರಿಗೆ ಸಿಗಬೇಕು. ಜತೆಗೆ ಎಲ್ಲ ಸರ್ಕಾರಿ ಸವಲತ್ತುಗಳು ಅವರಿಗೆ ಸಿಗಬೇಕು ಎಂದು ಆದೇಶ ಮಾಡಿದ್ದೇನೆ. ಈ ಎಲ್ಲ ಆದೇಶ ಆಗಲು ಕಾರಣ ನನ್ನ ಗ್ರಾಮ ವಾಸ್ತವ್ಯ ಎಂದು ಅಶೋಕ್‌ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

Lok Sabha Election 2024: ಹೊಸಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ನಗರಸಭೆ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಗುರುವಾರ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು.

VISTARANEWS.COM


on

Voting Awareness for Passengers at Hosapete Railway Station
Koo

ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ನಗರಸಭೆ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಗುರುವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ (Lok Sabha Election 2024) ಜರುಗಿತು. ನಗರಸಭೆಯ ಪೌರಾಯುಕ್ತ ಚಂದ್ರಪ್ಪ ಮತದಾನದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೇ 07ರಂದು ನಡೆಯುವ ಲೋಕಸಭಾ ಚುನಾವಣೆಗೆ ಎಲ್ಲ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

ಹೊಸಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಮಾತನಾಡಿ, ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ವಿಜಯನಗರ ಜಿಲ್ಲೆಯ ಶೇಕಡಾವಾರು ಮತದಾನ ಪ್ರಮಾಣವು ಹೆಚ್ಚಳವಾಗಬೇಕು. ಈ ನಿಟ್ಟಿನಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರಿಗೂ ಪ್ರೇರೇಪಣೆಯಾಗಬೇಕು ಎಂದು ಸ್ವೀಪ್ ಕಾರ್ಯಕ್ರಮಗಳನ್ನು ರೂಪಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾ ಅಧಿಕಾರಿ ಜೆ.ಎಂ. ಅನ್ನದಾನಸ್ವಾಮಿ, ಎಲ್ಲರಿಗೂ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ, ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.

ಆಟೋ ಚಾಲಕರಿಗೂ ಜಾಗೃತಿ

ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಸಂದರ್ಭದಲ್ಲಿ ಅಲ್ಲಿನ ಆಟೋ ಚಾಲಕರಿಗೂ ಸಹ ಮತದಾನ ಜಾಗೃತಿ ಮೂಡಿಸಲಾಯಿತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ಅಂದಾಜು ಮೌಲ್ಯಮಾಪನಾ ಅಧಿಕಾರಿ ಪತ್ರಿಬಸಪ್ಪ ಎನ್.ಕೆ., ಅಧೀಕ್ಷಕ ಲೋಕೇಶ್ ಬಾಬು, ಜಿಲ್ಲಾ ಐಇಸಿ ಫಾಜಿಲ್, ತಾಲೂಕು ಐಇಸಿ ನಾಗರಾಜ, ನಗರಸಭೆ ಅಭಿಯಂತರರಾದ ಆರತಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Continue Reading

ರಾಜಕೀಯ

Lok Sabha Election 2024: ಕೇಂದ್ರದ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಿ: ವಿ. ಸುನೀಲ್ ಕುಮಾರ್

Lok Sabha Election 2024: ಸ್ಥಳೀಯ ಬಿಜೆಪಿ ಶಾಸಕರು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ. ಪಕ್ಷ ಅವರಿಗೆ ಎಲ್ಲ ರೀತಿಯ ಸಹಕಾರ ನೀಡಿದೆ. ಪಕ್ಷದಿಂದ ಎಲ್ಲ ರೀತಿಯ ಲಾಭ ಪಡೆದುಕೊಂಡಿದ್ದಾರೆ. ಆದರೆ ಪಕ್ಷದಿಂದ ದೂರವಾಗಲು ಯಾವುದೇ ಕಾರಣವಿಲ್ಲ. ಯಾಕೆ ದೂರವಾಗುತ್ತಿದ್ದಾರೆ ಎಂಬುದನ್ನು ಶಾಸಕರು ಸ್ಪಷ್ಟಪಡಿಸಬೇಕಾಗಿದ್ದು, ತಮ್ಮ ಸ್ಥಾನಕ್ಕೆ ಶಾಸಕರು ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

VISTARANEWS.COM


on

BJP workers meeting in Banavasi
Koo

ಬನವಾಸಿ: ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಪಕ್ಷದ ಕಾರ್ಯಕರ್ತರು ಮನೆ ಮನೆಗೂ ತಲುಪಿಸಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ (Lok Sabha Election 2024) ಹೇಳಿದರು.

ಬನವಾಸಿಯಲ್ಲಿ ಗುರುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಉಜ್ವಲ್ ಯೋಜನೆ, ಆಯುಷ್ಮಾನ್ ಭಾರತ್, ಮುದ್ರಾ ಯೋಜನೆ, ಜನಧನ ಖಾತೆ, ಪ್ರಧಾನಮಂತ್ರಿ ಬೆಳೆ ವಿಮೆ ಸೇರಿದಂತೆ ಇನ್ನಿತರ ಅನೇಕ ಯೋಜನೆಗಳನ್ನು ತಿಳಿಸಬೇಕು. ಅಲ್ಲದೇ ನರೇಂದ್ರ ಮೋದಿ ಅವರು ಮೂರನೇ ಬಾರಿ ಯಾಕೆ ಪ್ರಧಾನಮಂತ್ರಿಯಾಗಬೇಕು ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು. ಮನೆ ಮನೆಯನ್ನು ಸಂಪರ್ಕ ಮಾಡಿ, ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿಗೆ ಮತ ನೀಡುವಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಪ್ರಧಾನಿ ಮೋದಿಯವರ ಅಭಿವೃದ್ಧಿ ಯೋಜನೆಗಳನ್ನು ಮತದಾರರ ಬಂಧುಗಳಿಗೆ ಮನದಟ್ಟು ಮಾಡಿಕೊಡಬೇಕು ಎಂದ ಅವರು, ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಮಲದ ಗುರುತಿಗೆ ಮತ ಹಾಕುವುದರ ಮೂಲಕ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿ, 3ನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.‌

ಇದನ್ನೂ ಓದಿ: Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ನಾಯ್ಕ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ್ ಕುಮಾರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ನಾಯ್ಕ್, ಬನವಾಸಿ ಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಶೇಖರ ಗೌಡ, ಮುಖಂಡರಾದ ಶಿವಕುಮಾರ್ ದೇಸಾಯಿ ಗೌಡ, ಮೃತ್ಯುಂಜಯ ಚೌದರಿ ಹಾಗೂ ಪಕ್ಷದ ಜಿಲ್ಲಾ, ತಾಲೂಕು ಪದಾಧಿಕಾರಿಗಳು, ಶಕ್ತಿ ಕೇಂದ್ರದ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಉತ್ತರ ಕನ್ನಡ

Lok Sabha Election 2024: ಉ.ಕ. ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಯಕ್ಷಗಾನ

Lok Sabha Election 2024: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಸಂಜೆ 5.30ಕ್ಕೆ “ಸ್ವೀಪ್ ಯಕ್ಷಗಾನ ಪ್ರದರ್ಶನ” ಕಾರ್ಯಕ್ರಮವನ್ನು ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Yakshagana performance for voting awareness in Uttara Kannada district on May 4
Koo

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 (Lok Sabha Election 2024) ಹಿನ್ನೆಲೆಯಲ್ಲಿ ಮತದಾನ ಜಾಗೃತಿ ನಿಮಿತ್ತ ಪ್ರಖ್ಯಾತ ಯಕ್ಷಗಾನ ಕಲಾವಿದರು ಹಾಗೂ ಜಿಲ್ಲಾ ಸ್ವೀಪ್ ರಾಯಭಾರಿ ಶಂಕರ ಹೆಗಡೆ ನೀಲ್ಕೋಡು ತಂಡದವರಿಂದ “ಸ್ವೀಪ್ ಯಕ್ಷಗಾನ ಪ್ರದರ್ಶನ” ಕಾರ್ಯಕ್ರಮವನ್ನು ಮೇ 4 ರಂದು ಸಂಜೆ 5:30ಕ್ಕೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಇದನ್ನೂ ಓದಿ: Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಹಮ್ಮಿಕೊಂಡಿರುವ “ಸ್ವೀಪ್ ಯಕ್ಷಗಾನ ಪ್ರದರ್ಶನ” ಕಾರ್ಯಕ್ರಮದಲ್ಲಿ ಯಕ್ಷಗಾನದ ಹಿಮ್ಮೇಳದಲ್ಲಿ ಭಾಗವತರಾಗಿ ಸರ್ವೇಶ್ವರ ಮುರೂರು, ಪರಮೇಶ್ವರ ಬಂಡಾರಿ ಮೃದಂಗ ಮತ್ತು ಗಣೇಶ ಕನಕನಳ್ಳಿ ಚಂಡೆ ಭಾರಿಸಲಿದ್ದಾರೆ. ಮುಮ್ಮೇಳದಲ್ಲಿ ಪ್ರಖ್ಯಾತ ಕಲಾವಿದರಾದ ಶಂಕರ ಹೆಗಡೆ ನೀಲ್ಕೋಡ, ನಾಗರಾಜ ಕುಂಕಿಪಾಲ, ಸನ್ಮಯ ಭಟ್ಟ ಮಲವಳ್ಳಿ ಸೇರಿದಂತೆ ಇನ್ನಿತರೆ ಕಲಾವಿದರು ಪ್ರೇಕ್ಷಕರನ್ನು ರಂಜಿಸುವ ಜತೆಗೆ ಕಡ್ಡಾಯ ಮತದಾನದ ಕುರಿತು ಸಂದೇಶ ನೀಡಲಿದ್ದಾರೆ.‌

ಇದನ್ನೂ ಓದಿ: Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

ಕಾರ್ಯಕ್ರಮಕ್ಕೆ ಕಲಾ ಆಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Lok Sabha Election 2024

Lok Sabha Election 2024: ಜೈ ಶ್ರೀರಾಮ್ ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ; ಚುನಾವಣಾ ಆಯೋಗದಿಂದ ನೋಟಿಸ್‌!

Lok Sabha Election 2024: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಬಿಟ್ಟು ರಾಮಮಂದಿರ ನಿರ್ಮಾಣ ಮಾಡುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ರಾಜು ಕಾಗೆ, ಕೇವಲ ಗುಡಿಗಳನ್ನು ಕಟ್ಟುವುದರಿಂದ ಸವರ್ಣೀಯರಾಗುತ್ತೇವೆಂದರೆ ನಾವು ಕೂಡ ನಿರಂತರವಾಗಿ ಗುಡಿಗಳನ್ನು ಕಟ್ಟುತ್ತೇವೆ. ನಾವು ನಮ್ಮಲ್ಲಿರುವ ವ್ಯವಸ್ಥೆಗಳ ಬಗ್ಗೆ ವಿಚಾರ ಮಾಡಬೇಕು. ಅದೆಲ್ಲವನ್ನು ಬಿಟ್ಟು ಬಿಜೆಪಿಯವರು ಬಂದ ತಕ್ಷಣ ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಕೂಗುವುದಲ್ಲ ಎಂದು ರಾಜು ಕಾಗೆ ಕಿಡಿಕಾರಿದ್ದಾರೆ.

VISTARANEWS.COM


on

Lok Sabha Election 2024 Raju Kage calls those chanting Jai Shri Ram are beggars
Koo

ಬೆಳಗಾವಿ: ಬಿಜೆಪಿ ಸಮಾವೇಶದಲ್ಲಿ ಕೂಗಲಾಗುವ “ಜೈ ಶ್ರೀರಾಮ್‌” ಘೋಷಣೆ (Jai Shri Ram slogan) ಬಗ್ಗೆ ಲೋಕಸಭಾ ಚುನಾವಣಾ (Lok Sabha Election 2024) ಪ್ರಚಾರ ಭಾಷಣದಲ್ಲಿ ಕಾಂಗ್ರೆಸ್ ಶಾಸಕ ರಾಜು ಕಾಗೆ (Raju Kage) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೀಗೆ ಘೋಷಣೆ ಕೂಗುವವರು ಭಿಕಾರಿಗಳು ಎಂದು ಕಿಡಿಕಾರಿದ್ದಾರೆ. ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ, ಈ ಹಿಂದೆ ಕಾಗವಾಡ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರಚಾರ ಮಾಡುವ ವೇಳೆ ಕಡಿಮೆ ಲೀಡ್‌ ಕೊಟ್ಟರೆ ಕರೆಂಟ್‌ ಕಟ್‌ ಎಂಬ ಹೇಳಿಕೆಗೆ ಚುನಾವಣಾ ಆಯೋಗ ನೋಟಿಸ್‌ ನೀಡಿದೆ.

ಬೆಳಗಾವಿಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ರಾಜು ಕಾಗೆ, ಬಿಜೆಪಿಯವರು ಪ್ರತಿ ಸಮಾವೇಶ, ರೋಡ್ ಶೋಗಳಲ್ಲಿ ‘ಜೈ ಶ್ರೀರಾಮ್, ಜೈ ಶ್ರೀರಾಮ್’ ಎಂದು ಘೋಷಣೆ ಕೂಗುತ್ತಾರೆ. ಇಂಥದ್ದನ್ನೆಲ್ಲ 40 ವರ್ಷಗಳ ಹಿಂದೆಯೇ ನಾನು ಮಾಡಿ ಬಿಟ್ಟಿದ್ದೇನೆ. ಜೈ ಶ್ರೀರಾಮ್‌ ಘೋಷಣೆ ಕೂಗುವವರಿಗೆ ನಾನು ಸಮರ್ಥವಾಗಿ ಉತ್ತರ ಕೊಡುತ್ತೇನೆ. ಅವರು ಗತಿ ಇಲ್ಲದ ಭಿಕಾರ್ ಛೋಟ್ (ಗತಿ ಇಲ್ಲದ ಭಿಕಾರಿಗಳು) ಇದ್ದಾರೆ ಎಂದು ನಾವು ಆ ಲೆವೆಲ್‌ಗೆ ಇಳಿಯುವುದಕ್ಕೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಆಕ್ಷೇಪ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಬಿಟ್ಟು ರಾಮಮಂದಿರ ನಿರ್ಮಾಣ ಮಾಡುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ರಾಜು ಕಾಗೆ, ಕೇವಲ ಗುಡಿಗಳನ್ನು ಕಟ್ಟುವುದರಿಂದ ಸವರ್ಣೀಯರಾಗುತ್ತೇವೆಂದರೆ ನಾವು ಕೂಡ ನಿರಂತರವಾಗಿ ಗುಡಿಗಳನ್ನು ಕಟ್ಟುತ್ತೇವೆ. ನಾವು ನಮ್ಮಲ್ಲಿರುವ ವ್ಯವಸ್ಥೆಗಳ ಬಗ್ಗೆ ವಿಚಾರ ಮಾಡಬೇಕು. ಅದೆಲ್ಲವನ್ನು ಬಿಟ್ಟು ಬಿಜೆಪಿಯವರು ಬಂದ ತಕ್ಷಣ ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಕೂಗುವುದಲ್ಲ ಎಂದು ಕಿಡಿಕಾರಿದ್ದಾರೆ.

ಜೈ ಶ್ರೀರಾಮ್ ಘೋಷಣೆ ಕೂಗುವವರಿಗೆ ನಾನು ಉತ್ತರ ಕೊಡಬಹುದು. ಆದರೆ, ಅಂಥ ಲೆವೆಲ್‌ಗೆ ಇಳಿಯಲು ನನ್ನಿಂದ ಆಗುವುದಿಲ್ಲ. ಇದಕ್ಕೆಲ್ಲ ಈಗ ಮತದಾರರೇ ತಕ್ಕ ಉತ್ತರ ನೀಡಬೇಕು ಎಂದು ರಾಜು ಕಾಗೆ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

ಕರೆಂಟ್‌ ಕಟ್‌ ಹೇಳಿಕೆಗೆ ಚುನಾವಣಾ ಆಯೋಗ ನೋಟಿಸ್‌

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಗುರುವಾರ ಮತಯಾಚನೆ ಮಾಡಿದ್ದ ರಾಜು ಕಾಗೆ, “ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ್ ಕಟ್” ಮಾಡುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ನೋಟಿಸ್ ನೀಡಿದ್ದು, 24 ಗಂಟೆಯೊಳಗಾಗಿ ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ.

Continue Reading
Advertisement
Voting Awareness for Passengers at Hosapete Railway Station
ವಿಜಯನಗರ43 seconds ago

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

BJP workers meeting in Banavasi
ರಾಜಕೀಯ2 mins ago

Lok Sabha Election 2024: ಕೇಂದ್ರದ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಿ: ವಿ. ಸುನೀಲ್ ಕುಮಾರ್

Yakshagana performance for voting awareness in Uttara Kannada district on May 4
ಉತ್ತರ ಕನ್ನಡ3 mins ago

Lok Sabha Election 2024: ಉ.ಕ. ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಯಕ್ಷಗಾನ

Reliance Retail Tira Beauty launch new brand Nails Our Way
ದೇಶ4 mins ago

Reliance Retail: ರಿಲಯನ್ಸ್ ರಿಟೇಲ್‌ನ ಟಿರಾ ಬ್ಯೂಟಿಯಿಂದ ಹೊಸ ಬ್ರ್ಯಾಂಡ್ ‘ನೈಲ್ಸ್ ಅವರ್ ವೇ’ ಅನಾವರಣ

M S Dhoni
ಪ್ರಮುಖ ಸುದ್ದಿ8 mins ago

M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

Rahul Gandhi
ದೇಶ24 mins ago

Rahul Gandhi: ಅಮೇಥಿಯಿಂದ ರಾಹುಲ್‌ ಗಾಂಧಿ, ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ; ಯಾರಿಗೆ ಮಣೆ?

Virat kohli
ಕ್ರೀಡೆ50 mins ago

Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

Religious Freedom
ದೇಶ54 mins ago

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

Lok Sabha Election 2024 Raju Kage calls those chanting Jai Shri Ram are beggars
Lok Sabha Election 202455 mins ago

Lok Sabha Election 2024: ಜೈ ಶ್ರೀರಾಮ್ ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ; ಚುನಾವಣಾ ಆಯೋಗದಿಂದ ನೋಟಿಸ್‌!

Prajwal Revanna Case Revanna denied anticipatory bail today Court allows SIT to file objections
ಕ್ರೈಂ2 hours ago

Prajwal Revanna Case: ರೇವಣ್ಣಗೆ ಇಂದು ಸಿಗಲಿಲ್ಲ ನಿರೀಕ್ಷಣಾ ಜಾಮೀನು; ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿದ ಕೋರ್ಟ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ16 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌