Site icon Vistara News

Suspend | ಯುವತಿಯ ಜತೆ ಅನುಚಿತ ವರ್ತನೆ; ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಅಮಾನತು

Suspend

ಬೆಂಗಳೂರು: ಯುವತಿಯ ಜತೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಕೆ.ಪಿ.ಅಗ್ರಹಾರ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಅನ್ನು ಅಮಾನತು (Suspend) ಮಾಡಲಾಗಿದೆ.

ಗೋಪಾಲಕೃಷ್ಣ ಗೌಡ ಅಮಾನತುಗೊಂಡ ಪೊಲೀಸ್‌ ಇನ್‌ಸ್ಪೆಕ್ಟರ್‌. ಜೀವನ್ ಭೀಮಾನಗರದಲ್ಲಿ ಹೊಟೇಲ್ ಒಂದಕ್ಕೆ ತೆರಳಿದ ಪೊಲೀಸ್ ಇನ್‌ಸ್ಪೆಕ್ಟರ್, ಕಂಠಪೂರ್ತಿ ಕುಡಿದು ಅಲ್ಲಿದ್ದ ಯುವತಿಯ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ ಅಸಭ್ಯ ಪದಬಳಕೆ ಮಾಡಿ ಆಕೆಯ ತೇಜೋವಧೆ ಮಾಡಿದ್ದಾರೆ.

ನಂತರ ಅಲ್ಲಿಂದ ತೆರಳಿದ ಯುವತಿ ನೇರವಾಗಿ ಜೀವನ್‌ ಭೀಮಾ ನಗರ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ದೂರು ದಾಖಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ತನಿಖೆ ನಡೆಸಿ ಸಿಸಿಟಿವಿಯನ್ನೂ ಪರಿಶೀಲನೆ ನಡೆಸಿದ್ದಾರೆ. ನಂತರ ಯುವತಿಯ ಅನುಮತಿ ಪಡೆದು ಎನ್‌ಸಿಆರ್ ದಾಖಲಿಸಿದ್ದಾರೆ. ಈ ಘಟನೆಯಿಂದ ಪೊಲೀಸ್ ಇಲಾಖೆಗೆ ಮುಜುಗರವಾದ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಕೈಗೊಂಡಿರುವ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಅವರು, ಕೆ.ಪಿ.ಅಗ್ರಹಾರ ಪೊಲೀಸ್ ಇನ್‌ಸ್ಪೆಕ್ಟರ್ ಗೋಪಾಲಕೃಷ್ಣ ಗೌಡನನ್ನು ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಇದನ್ನೂ ಓದಿ | Chain Snatch | ಚಿನ್ನದ ಸರ ಕದ್ದು ಪರಾರಿಯಾಗುತ್ತಿದ್ದ ಮಹಿಳೆಯನ್ನು ಸೆರೆ ಹಿಡಿದ ಗ್ರಾಮಸ್ಥರು

Exit mobile version